Author: Author AIN

ನಟ, ನಟಿಯರು ಅಂದ್ರೆ ಪ್ರತಿಯೊಬ್ಬರಿಗೂ ಅವರ ಬಗ್ಗೆ ಸಾಕಷ್ಟು ಕುತೂಹಲ ಇದ್ದೆ ಇರುತ್ತೆ. ಅವರು ಕುಡಿಯೋ ನೀರಿನಿಂದ ಹಿಡಿದು ಅವರ ಬ್ಯಾಂಕ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿದುಕೊಳ್ಳುವ ಕ್ಯೂರಿಯಾಸಿಟಿ ಸಾಕಷ್ಟು ಮಂದಿಯದ್ದು. ಜೊತೆಗೆ ಅವರನ್ನು ಫಾಲೋ ಮಾಡುವವರ ಸಂಖ್ಯೆ ಕೂಡ ಸಾಕಷ್ಟು ಇರುತ್ತೆ. ಇದೇ ಕಾರಣಕ್ಕೆ ನಟಿಯರು ಆಗಾಗ ಸುಳ್ಳು ಹೇಳಿ ಸಿಕ್ಕಿ ಬಿಳೋದು ಇದೆ. ಇದೀಗ ಬಾಲಿವುಡ್ ಬ್ಯೂಟಿ ನಟಿ ಮಲೈಕಾ ಅರೋರಾ ಸುಳ್ಳು ಹೇಳಿ ಸರಿಯಾಗಿಯೇ ನೆಟ್ಟಿಗರ ಕೈಗೆ ತಗಲಾಕಿಕೊಂಡಿದ್ದಾರೆ. ಸಾಕಷ್ಟು ನಟಿಯರು ತಾವು ಪ್ರಾಣಿಗಳಿಗೆ ಹಿಂಸೆ ನೀಡಬಾರದು ಎಂಬ ಕಾರಣಕ್ಕೆ ಮಾಂಸಹಾರ ತ್ಯಜಿಸಿ ಸಸ್ಯಹಾರಿಗಳಾಗಿದ್ದಾರೆ. ಹಲವು ಸಿನಿಮಾ ನಟ ನಟಿಯರು ತಾವು ಈಗ ವೆಜಿಟೇರಿಯನ್ ಆಗಿದ್ದೇವೆ ಎಂದು ಹೇಳಿದ್ದಾರೆ. ಅಲ್ಲದೇ, ಪ್ರಾಣಿಗಳಿಗೆ ಹಿಂಸೆ ಕೊಡುವುದು ತಪ್ಪು ಅನ್ನೋ ಕಾರಣಕ್ಕಾಗಿ ನಾವು ಶಾಖಾಹಾರಿಯಾಗಿದ್ದೇವೆ ಎಂದಿದ್ದಾರೆ. ಕೆಲವರು ನಿಜವಾಗಿಯೂ ವೆಜಿಟೇರಿಯನ್ ಆಗಿದ್ದಾರೆ. ಆದರೆ ನಟಿ ಮಲೈಕಾ ಅರೋರಾ ತಾವು ವೆಜಿಟೇರಿಯನ್ ಎಂದು ವೀಡಿಯೋ ಮುಂದೆ ಹೇಳಿಕೊಂಡು, ಸೆಟ್ನಲ್ಲಿ ನಾನ್‌ವೆಜ್ ಊಟ…

Read More

ನಟಿ ರಶ್ಮಿಕಾ ಮಂದಣ್ಣ ಸಖತ್ ಬ್ಯುಸಿಯಾಗಿದ್ದಾರೆ. ಈಕೆ ನಿರ್ದೇಶಕರ ಪಾಲಿನ ಅದೃಷ್ಟದ ದೇವತೆಯೇ ಹೌದು. ಈಕೆ ನಟಿಸಿದ ಸಿನಿಮಾಗಳೆಲ್ಲಾ ಸೂಪರ್ ಹಿಟ್ ಆಗ್ತಿದೆ. ಅದಕ್ಕಾಗಿಯೇ ನಿರ್ಮಾಪಕರು ಆಕೆಯ ಮನೆ ಬಾಗಿಲಿಗೆ ಅಲೆದಾಡ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ನಟರ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರುವ ರಶ್ಮಿಕಾ ಇದೀಗ ತಮಿಳಿನ ಸ್ಟಾರ್ ನಟನೆಗೆ ಜೋಡಿಯಾಗುವ ಮೂಲಕ ಮತ್ತೊಮ್ಮೆ ಬಂಪರ್ ಆಫರ್ ಗಿಟ್ಟಿಸಿಕೊಂಡಿದ್ದಾರೆ. ಧನುಷ್ ನಟನೆಯ 51ನೇ ಸಿನಿಮಾಗೆ ನಟಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಸದ್ಯ ಶೂಟಿಂಗ್‌ನಲ್ಲಿ ರಶ್ಮಿಕಾ ಭಾಗಿಯಾಗಿರುವ ವಿಡಿಯೋ ಲೀಕ್‌ ಆಗಿದೆ. ಧನುಷ್ ಕೈ ಹಿಡಿದು ರಶ್ಮಿಕಾ ಕರೆದೊಯ್ಯುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋನಲ್ಲಿ ರಶ್ಮಿಕಾ ಬಿಳಿ ಬಣ್ಣದ ಚೂಡಿದಾರ್ ಧರಿಸಿದ್ದಾರೆ.  ಈ ಚಿತ್ರವು ರಾಜಕೀಯ ವಸ್ತುವುಳ್ಳ ಕತೆಯಾಗಿದ್ದು, ರಾಜಕೀಯ ಕುತಂತ್ರಗಳನ್ನು ಸಾಮಾನ್ಯ ವ್ಯಕ್ತಿಯೊಬ್ಬ ಹೇಗೆ ಎದುರಿಸುತ್ತಾನೆ, ರಾಜಕೀಯದ ದೌರ್ಜನ್ಯಕ್ಕೆ ಹೇಗೆ ತುತ್ತಾಗುತ್ತಾನೆ ಅದರಿಂದ ಹೊರಗೆ ಹೇಗೆ ಬರುತ್ತಾನೆ ಎಂಬುದು ಚಿತ್ರದ ಕಥೆಯಾಗಿದೆ. ರಶ್ಮಿಕಾ, ಧನುಷ್ ನಟನೆಯ ಚಿತ್ರವನ್ನು ‘ಲವ್‌ಸ್ಟೋರಿ’…

Read More

ನಟಿ ಪ್ರಿಯಾಂಕಾ ಚೋಪ್ರಾ ಸಹೋದರಿ ಮೀರಾ ಚೋಪ್ರಾ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದೇ ಮಾರ್ಚ್‌ನಲ್ಲಿ ಅದ್ಧೂರಿಯಾಗಿ ಮದುವೆಯಾಗಲು ಮೀರಾ ಚೋಪ್ರಾ ರೆಡಿಯಾಗಿದ್ದಾರೆ. ಮೀರಾಗೆ ಚೋಪ್ರಾ ಮದುವೆ ಇದೇ ಮಾರ್ಚ್ 11 ಮತ್ತು 12ರಂದು ನಡೆಯಲಿದೆ. ಜೈಪುರ ಮತ್ತು ದೆಹಲಿ ಹೆದ್ದಾರಿ ಬಳಿಯಿರುವ ಐಷಾರಾಮಿ ರೆಸಾರ್ಟ್‌ವೊಂದರಲ್ಲಿ ಮೀರಾ ಮದುವೆ ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ನಡೆಯುತ್ತಿದೆ. ಮೀರಾ ಮದುವೆ ಆಗುತ್ತಿರುವ ವರನ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ. ಉದ್ಯಮಿಯ ಜೊತೆ ಮೀರಾ ಮದುವೆ ಎಂಬ ಸುದ್ದಿ ಹರಿದಾಡುತ್ತಿದೆ. ಅಂದ ಹಾಗೆ ಮೀರಾ ದರ್ಶನ್ ನಟನೆಯ ಅರ್ಜುನ್ ಸಿನಿಮಾದಲ್ಲಿ ನಟಿಸುವ ಮೂಲಕ ಗಾಂಧಿನಗರದಲ್ಲೂ ಸದ್ದು ಮಾಡಿದ್ದರು.

Read More

ತಮಿಳು ಚಿತ್ರ ರಂಗದ ಖ್ಯಾತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ವಿಜೇತ ಬಾಲಾ ತಮ್ಮ ಸಿನಿಮಾದ ನಟಿಯೊಬ್ಬರ ಮೇಲೆ ಕೈ ಮಾಡಿದ್ದಾರಂತೆ. ಈ ವಿಷಯವನ್ನು ಸ್ವತಃ ನಟಿಯೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ತನ್ನ ಮೇಲೆ ಕೈ ಮಾಡಿದ ಕಾರಣಕ್ಕಾಗಿ ಆ ಸಿನಿಮಾದಿಂದ ತಾನು ಹೊರ ಬಂದಿದ್ದಾಗಿ ನಟಿ ಹೇಳಿಕೊಂಡಿದ್ದಾರೆ. ಬಾಲಾ ನಿರ್ದೇಶನದ ವಾನಂಗನ್ ಸಿನಿಮಾದಲ್ಲಿ ಮಲಯಾಳಂ ಮೂಲದ ನಟಿ ಮಮತಾ ಬಿಜು ನಟಿಸುತ್ತಿದ್ದರು. ಈ ಸಿನಿಮಾದಲ್ಲಿ ವಿಲ್ಲಡಿಚ್ಚಾಂಪಾಟನ್ ಕಲಾವಿದೆಯಂತೆ ವಾದ್ಯ ನುಡಿಸುತ್ತಾ ಡಾನ್ಸ್ ಮಾಡಬೇಕಿತ್ತಂತೆ. ನುರಿತ ಕಲಾವಿದರ ಜೊತೆ ಸಡನ್ನಾಗಿ ಬೆರೆಯೋದು ಕಷ್ಟವಾಯಿತು. ಹಾಗಾಗಿ ಮೂರು ಟೇಕ್ ತೆಗೆದುಕೊಂಡೆ. ಈ ಕಾರಣಕ್ಕಾಗಿ ನಿರ್ದೇಶಕರು ನನ್ನ ಮೇಲೆ ಹೊಡದೇ ಬಿಟ್ಟರು ಎಂದು ಮಮಿತಾ ಆರೋಪಿಸಿದ್ದಾರೆ. ಸೆಟ್ ನಲ್ಲಿ ನಾನು ಕೋಪಿಷ್ಠ. ಬೈದರೆ ಮನಸ್ಸಿಗೆ ತಗೋಬೇಡಿ ಎಂದು ಬಾಲಾ ಅವರು ಮೊದಲೇ ಹೇಳಿದ್ದರೂ, ಅವರು ಬೈದಾಗೊಮ್ಮೆ ಕಿರಿಕಿರಿ ಅನಿಸೋದು. ಆದರೆ, ಅವರು ನನಗೆ ಹೊಡೆದ ಮೇಲೆ ಕೆಲಸ ಮಾಡಲು ಮನಸ್ಸಾಗಲಿಲ್ಲ. ಹಾಗಾಗಿ ಸಿನಿಮಾದಿಂದ ಹೊರ ನಡೆದೆ ಎಂದಿದ್ದಾರೆ.…

Read More

ಅಕ್ಟೋಬರ್‌ನಲ್ಲಿ ಆರಂಭವಾದ ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದಿಂದ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಯುದ್ಧದಿಂದ ಇದುವರೆಗೂ 30 ಸಾವಿರಕ್ಕೂ ಅಧಿಕ ಪ್ಯಾಲೆಸ್ಟೀನ್‌ ಜನರ ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯತಿಳಿಸಿದೆ. ಹಮಾಸ್ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ಸೇನೆಯು ಆರಂಭಿಸಿದ ದಾಳಿಯ ಮೊದಲ ಗುರಿ ಆಗಿದ್ದು ಗಾಜಾ ನಗರ ಹಾಗೂ ಗಾಜಾ ಪಟ್ಟಿಯ ಉತ್ತರ ಭಾಗ. ಈ ಪ್ರದೇಶದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿದೆ, ಇದು ಗಾಜಾ ಪಟ್ಟಿಯ ಇತರ ಪ್ರದೇಶಗಳ ಜೊತೆಗಿನ ಸಂಪರ್ಕವನ್ನು ಬಹುತೇಕ ಕಡಿದುಕೊಂಡಿದೆ. ಅಪೌಷ್ಟಿಕತೆ, ನಿರ್ಜಲೀಕರಣ ಹಾಗೂ ಆಹಾರ ಕೊರತೆಯ ಕಾರಣದಿಂದಾಗಿ ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯಲ್ಲಿ ಮಕ್ಕಳು ಮೃತ‍ಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇಂತಹ ಸಾವುಗಳು ಇನ್ನಷ್ಟು ಆಗುವುದನ್ನು ತಡೆಯಲು ಅಂತರರಾಷ್ಟ್ರೀಯ ಸಂಘಟನೆಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಸಚಿವಾಲಯದ ವಕ್ತಾರ ಅಶ್ರಫ್ ಅಲ್-ಕುದ್ರಾ ಮನವಿ ಮಾಡಿದ್ದಾರೆ. ಗಾಜಾ ಪಟ್ಟಿಯಲ್ಲಿ ಬುಧವಾರ ರಾತ್ರಿ ನಡೆದ ದಾಳಿಗಳಲ್ಲಿ ಕನಿಷ್ಠ 79…

Read More

ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನಿಗಮ ಮಂಡಳಿಗೆ 44 ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದು, ಅದರಲ್ಲಿ ಚಲನಚಿತ್ರ ಅಕಾಡೆಮಿಯು ಸೇರಿದೆ. ಹಲವು ದಿನಗಳಿಂದ ಅಧ್ಯಕ್ಷ ಸ್ಥಾನಕ್ಕೆ ಹಲವಾರು ಹೆಸರುಗಳು ಕೇಳಿ ಬಂದಿದ್ದವು, ಅದರಲ್ಲಿ ಸಾಧು ಕೋಕಿಲಾ ಹೆಸರೂ ಸಹ ಸೇರಿಕೊಂಡಿತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಮತ್ತು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಸಾಧು ಕೋಕಿಲಾ ಅವರನ್ನೇ ಅಧ್ಯಕ್ಷರನ್ನಾಗಿ ಮಾಡುತ್ತಾರೆ ಎನ್ನುವ ಮಾತೂ ಕೇಳಿ ಬಂದಿತ್ತು. ಅದೀಗ ನಿಜವಾಗಿದ್ದು ಸಾಧು ಕೋಕಿಲಾ ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Read More

ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಕಮ್ ಐಎಎಸ್ ಅಧಿಕಾರಿ ಕೆ.ಶಿವರಾಮ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಾಳೆ ಅಂದರೆ ಮಾರ್ಚ್ 1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕೆ.ಶಿವರಾಮ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಸಂಜೆ 4:18ಕ್ಕೆ ಕೆ.ಶಿವರಾಮ್ ನಿಧನರಾಗಿದ್ದು, ಶುಕ್ರವಾರ (ಮಾ.1) ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 3ರವರೆಗೆ ಅಭಿಮಾನಿಗಳಿಗೆ, ಆಪ್ತರಿಗೆ ಅಂತಿಮ ದರ್ಶನ ಅವಕಾಶವಿದೆ ಎಂದು ಅಳಿಯ ಪ್ರದೀಪ್‌ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.  ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಭಾರಿಗೆ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಶಿವರಾಮ್ ಆ ಬಳಿಕ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ನಿನ್ನೆಯಷ್ಟೇ ಶಿವರಾಮ್ ಅನಾರೋಗ್ಯದಿಂದಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು, ಅಳಿಯ ಪ್ರದೀಪ್ ನಿನ್ನೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದರು. ಅವರ ಕಂಡೀಷನ್ ಕ್ರಿಟಿಕಲ್ ಆಗಿದೆ ಎಂದಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕನ್ನಡದಲ್ಲೇ ಐಎಎಸ್ ಬರೆದು, ನಂತರ ಬೆಂಗಳೂರು, ವಿಜಯಪುರ, ಕೊಪ್ಪಳ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಕೆಲಸ ಮಾಡಿ ಎಲ್ಲಾ ಕಡೆಯೂ ಸೈ…

Read More

ಸಿನಿಮಾ ನಟ, ನಿವೃತ್ತ ಐಎಎಸ್​ ಅಧಿಕಾರಿ ಕೆ. ಶಿವರಾಮ್​ ನಿಧನಕ್ಕೆ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸರ್ಕಾರಿ ಅಧಿಕಾರಿಯಾಗಿ ಹಲವಾರು ಜನಪರ ಕಾರ್ಯಗಳನ್ನು ಮಾಡಿದ್ದ ಶಿವರಾಮ್​ ಚಿತ್ರರಂಗದಲ್ಲೂ ಸಕ್ರಿಯರಾಗಿದ್ದರು. 1993ರಲ್ಲಿ ತೆರೆಕಂಡ ‘ಬಾ ನಲ್ಲೆ ಮಧುಚಂದ್ರಕೆ’ ಚಿತ್ರದ ಮೂಲಕ ಸಿನಿ ಜರ್ನಿ ಆರಂಭಿಸಿದ್ದ ಶಿವರಾಮ್ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇಂದಿಗೂ ಶಿವರಾಮ್ ನಟಿಸಿದ್ದ ಸಿನಿಮಾಗಳ ಹಾಡುಗಳು ಎವರ್ ಗ್ರೀನ್ ಹಾಡುಗಳಾಗಿ ಜನಮಾನಸದಲ್ಲಿ ಅಚ್ಚಳಿದಿವೆ. ಬಡ ಕುಟುಂಬದಿಂದ ಬಂದ ಶಿವರಾಮ್ ಕೆಎಎಸ್​ ಹಾಗೂ ಐಎಎಸ್​ ಅಧಿಕಾರಿಯಾಗಿ ಸಾಧನೆ ಮಾಡಿದ್ದಾರೆ. ನಟ ಆಗಬೇಕು ಎಂಬ ಆಸೆ ಅವರಿಗೆ ಮೊದಲಿನಿಂದಲೂ ಇರಲಿಲ್ಲ. ಸ್ನೇಹಿತರೊಬ್ಬರ ಜೊತೆ ಸುಮ್ಮನೇ ಮಾತನಾಡುವಾಗ ಸಿನಿಮಾ ಮಾಡಬೇಕು ಎಂಬ ಹಂಬಲ ಅವರಿಗೆ ಚಿಗುರಿತು. ಅದನ್ನು ಈಡೇರಿಸಿಕೊಳ್ಳಲು ಅವರು ಚಿತ್ರರಂಗಕ್ಕೆ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಚಿತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಆ ಮೂಲಕ ಸಿನಿಮಾ ಹೀರೋ ಆದ ಮೊದಲ ಐಎಎಸ್​ ಅಧಿಕಾರಿ ಎಂಬ ಖ್ಯಾತಿ ಸಿಕ್ಕಿತ್ತು. ಅಧಿಕಾರಿಯಾಗಿಯೂ ಜೊತೆಗೆ…

Read More

ವ್ಯಕ್ತಿಯೋರ್ವ ತನ್ನ ವಿಮೆ ಹಣ ಪಡೆಯಲು ತನ್ನ ಎರಡು ಕಾಲುಗಳನ್ನು ಕತ್ತರಿಸಿಕೊಂಡ ಘಟನೆ ಅಮೆರಿಕದ ಮಿಸೌರಿಯಲ್ಲಿ ನಡೆದಿದೆ. 60 ವರ್ಷದ ವ್ಯಕ್ತಿ ಆರೋಗ್ಯ ವಿಮೆ ಹಣವನ್ನು ಪಡೆಯಲು ತನ್ನ ಎರಡು ಕಾಲುಗಳನ್ನು ಕತ್ತರಿಸಿದ್ದಾರೆ. ಇತಿಹಾಸದಲ್ಲೇ ಇದೊಂದು ವಿಚಿತ್ರ ಪ್ರಕರಣ ಎಂದು ಪ್ರಕರಣದ ತನಿಖಾಧಿಕಾರಿ ಹೊವೆಲ್ ಕೌಂಟಿ ಶೆರಿಫ್ ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ಈತ ತನ್ನ ಎರಡೂ ಕಾಲುಗಳನ್ನು ಕತ್ತರಿಸಿದ್ದ. ಇದಲ್ಲದೇ ವಿಮೆ ಹಣ ಪಡೆಯಲು ಟ್ರ್ಯಾಕ್ಟರ್‌ನ ಹಿಂಬದಿಯಲ್ಲಿ ಅಳವಡಿಸಿದ್ದ ಮೊವರ್‌ನಿಂದ ಕಾಲು ತುಂಡಾಗಿದೆ ಎಂದು ಹೇಳಿದ್ದರು. ಆದರೆ, ಈ ಅಪಘಾತದ ನಂತರ ಅವರ ಕಾಲು ಎಲ್ಲಿಯೂ ಪತ್ತೆಯಾಗಿರಲ್ಲಿಲ್ಲ. ಇದಲ್ಲದೇ ಕಾಲಿನ ಗಾಯ ಮೊವರ್‌ನಿಂದ ಕಾಲು ಕತ್ತರಿಸಿದಂತೆ ಕಾಣಿಸುತ್ತಿರಲಿಲ್ಲ. ಇದರಿಂದ ಪೊಲೀಸರಲ್ಲಿ ಅನುಮಾನ ಹುಟ್ಟಿಕೊಂಡಿದೆ. ತನಿಖೆಯ ವೇಳೆ ವ್ಯಕ್ತಿ ಪಾರ್ಶ್ವವಾಯುವಿನಿಂದ ತನ್ನ ಎರಡು ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ ಎಂದು ತಿಳಿದುಬಂದಿದೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ವ್ಯಕ್ತಿ ಟ್ರ್ಯಾಕ್ಟರ್ ಹೇಗೆ ಚಲಾಯಿಸಿದ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಈ ವೇಳೆ ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಸತ್ಯಾಂಶ ತಿಳಿದು…

Read More

ವಿಶ್ವ ಬ್ಯಾಂಕ್ ನ ಜಾಗತಿಕ ಪರಿಸರ ಸೌಲಭ್ಯದ ಸ್ವತಂತ್ರ ಮೌಲ್ಯಮಾಪನ ಕಚೇರಿಯ ನಿರ್ದೇಶಕಿಯಾಗಿ ಭಾರತ ಮೂಲದ ಅರ್ಥಶಾಸ್ತ್ರಜ್ಞೆ ಗೀತಾ ಬತ್ರಾ ನೇಮಕಗೊಂಡಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರದಿಂದ ಈ ಪ್ರತಿಷ್ಠಿತ ಸ್ಥಾನವನ್ನು ಹೊಂದಿರುವ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಗೀತಾ ಅವರದ್ದು. ವಿಶ್ವ ಬ್ಯಾಂಕ್‌ನೊಂದಿಗೆ ಸಂಯೋಜಿತವಾಗಿರುವ GEF ನ ಸ್ವತಂತ್ರ ಮೌಲ್ಯಮಾಪನ ಕಚೇರಿಯಲ್ಲಿ ಮೌಲ್ಯಮಾಪನಕ್ಕಾಗಿ ಮುಖ್ಯ ಮೌಲ್ಯಮಾಪಕ ಮತ್ತು ಉಪ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಫೆಬ್ರವರಿ 9 ರಂದು ವಾಷಿಂಗ್ಟನ್‌ನಲ್ಲಿ ನಡೆದ 66 ನೇ GEF ಕೌನ್ಸಿಲ್ ಸಭೆಯಲ್ಲಿ ಪಾತ್ರಕ್ಕಾಗಿ ಬತ್ರಾ ಅವರ ನಾಮನಿರ್ದೇಶನವು ಸರ್ವಾನುಮತದ ಅನುಮೋದನೆಯನ್ನು ಪಡೆಯಿತು. 57ರ ಹರೆಯದ ಗೀತಾ ಬತ್ರಾ, GEF ನ ಫಲಿತಾಂಶಗಳು ಮತ್ತು ಕಾರ್ಯಕ್ಷಮತೆಯ ಮೇಲೆ ಗಟ್ಟಿಯಾದ ಮೌಲ್ಯಮಾಪನದ ಪುರಾವೆಗಳ ವಿತರಣೆ, ಪರಿಸರ ಮೌಲ್ಯಮಾಪನದಲ್ಲಿ GEF IEO ಅನ್ನು ಮುಂಚೂಣಿಯಲ್ಲಿಡಲು ನಾಯಕತ್ವ ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ IEO ತಂಡಗಳ ಬಲವರ್ಧನೆಗೆ ಒತ್ತು ನೀಡುತ್ತಾ ತಮ್ಮ ಪ್ರಮುಖ ಆದ್ಯತೆಗಳನ್ನು ವಿವರಿಸಿದರು. ಹೊಸದಿಲ್ಲಿಯಲ್ಲಿ ಜನಿಸಿದ ಬತ್ರಾ ಅವರು ಮುಂಬೈ…

Read More