Author: Author AIN

ಪಾಕಿಸ್ತಾನದ ಇಸ್ಲಮಾಬಾದ್‍ನಿಂದ ಕೆನಡಾದ ಟೊರಂಟೊಗೆ ಆಗಮಿಸಿದ ಪಾಕಿಸ್ತಾನ್ ಇಂಟರ್‍ನ್ಯಾಷನಲ್ ಏರ್‍ಲೈನ್ಸ್(ಪಿಐಎ)ನ ಗಗನಸಖಿ ಟೊರಂಟೊದಲ್ಲಿ ನಾಪತ್ತೆಯಾಗಿರುವ ಕುರಿತು ಸ್ಥಳೀಯ ಮಾದ್ಯಮಗಳು ವರದಿ ಮಾಡಿವೆ. ಟೊರಂಟೊದಲ್ಲಿ ತನ್ನ ಹೋಟೆಲ್ ಕೋಣೆಯಲ್ಲಿ `ಧನ್ಯವಾದಗಳು ಪಿಐಎ’ ಎಂಬ ಚೀಟಿಯ ಜತೆಗೆ ತನ್ನ ಸಮವಸ್ತ್ರವನ್ನು ಇಟ್ಟು ಗಗನಸಖಿ ಮರ್ಯಾಮ್ ರಝಾ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ `ಡಾನ್’ ವರದಿ ಮಾಡಿದೆ. ಪಾಕಿಸ್ತಾನ್ ಇಂಟರ್‍ನ್ಯಾಷನಲ್ ಏರ್‍ಲೈನ್ಸ್ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಪಾಕಿಸ್ತಾನದಲ್ಲಿ ತಮ್ಮ ಭವಿಷ್ಯದ ಕುರಿತ ಅನಿಶ್ಚಿತತೆಯ ಕಾರಣ ವೃತ್ತಿಪರರು ವಿದೇಶದಲ್ಲಿ ಆಶ್ರಯ ಪಡೆಯುವ ಪ್ರಮಾಣ ಹೆಚ್ಚಿದೆ. ಕಳೆದ ತಿಂಗಳು ಪಿಐಎ ಫ್ಲೈಟ್ ಅಟೆಂಡೆಂಟ್ ಫೈಝಾ ಮುಖ್ತಾರ್ ಕರಾಚಿಯಿಂದ ಕೆನಡಾಕ್ಕೆ ಆಗಮಿಸಿದ ಬಳಿಕ ನಾಪತ್ತೆಯಾಗಿದ್ದರು ಎಂದು ಪಿಐಎ ವಕ್ತಾರ ಅಬ್ದುಲ್ಲಾ ಹಫೀಝ್ ಖಾನ್ ತಿಳಿಸಿದ್ದಾರೆ. ಕಳೆದ ವರ್ಷ ಪಿಐಎ ಸಂಸ್ಥೆಯ ಕನಿಷ್ಠ 7 ಸಿಬಂದಿಗಳು ಕೆನಡಾದಲ್ಲಿ ನಾಪತ್ತೆಯಾಗಿದ್ದಾರೆ. ಕೆನಡಾದಲ್ಲಿ `ಆಶ್ರಯ ನಿಯಮ’ ಸರಳಗೊಳಿಸಿರುವುದು ಪಾಕಿಸ್ತಾನದ ವೃತ್ತಿಪರರು ಕೆನಡಾದಲ್ಲಿ ಆಶ್ರಯ ಕೋರಲು ಪ್ರಮುಖ ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.

Read More

ಪುನೀತ್ ರಾಜ್ ಕುಮಾರ್ ನಟನೆಯ ನಿನ್ನೆಂದಲೇ ಚಿತ್ರದಲ್ಲಿ ನಟಿಸಿ ಕನ್ನಡಿಗರ ಮನ ಗೆದ್ದಿದ್ದ ನಟಿ ಎರಿಕಾ ಫರ್ನಾಂಡಿಸ್ ಬೀಚ್ ನಲ್ಲಿ ಬಿಕಿನಿ ತೊಟ್ಟು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬೀಚ್‌ನಲ್ಲಿ ಬಿಕಿನಿ ತೊಟ್ಟು ಕ್ಯಾಮಾರಾಗೆ ಸಖತ್ ಪೋಸ್ ಕೊಟ್ಟಿದ್ದಾರೆ. ಕನ್ನಡದ ನಿನ್ನಿಂದಲೇ ಮತ್ತು ಬುಗುರಿ ಚಿತ್ರದಲ್ಲಿ ಎರಿಕಾ ಫರ್ನಾಂಡಿಸ್ ಅಭಿನಯಿಸಿದ್ದರು. 2015ರಲ್ಲಿ ಬುಗುರಿ ಸಿನಿಮಾದಲ್ಲಿ ನಟಿಸಿದ ಬಳಿಕ ಎರಿಕಾ ಸ್ಯಾಂಡಲ್ ವುಡ್ ಗೆ ಮರಳಿ ಎಂಟ್ರಿಕೊಡಲಿಲ್ಲ. ಸದ್ಯ ಎರಿಕಾ ಬಾಲಿವುಡ್‌ನಲ್ಲಿ ವೆಬ್ ಸಿರೀಸ್ ಮತ್ತು ಸೀರಿಯಲ್ ನಲ್ಲಿ ಬ್ಯುಸಿಯಾಗಿದ್ದಾರೆ. ಎರಿಕಾ ಫರ್ನಾಂಡಿಸ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ಪ್ರತಿ ಚಟುವಟಿಕೆಗಳನ್ನೂ ತಮ್ಮ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಳ್ಳುತ್ತಾರೆ. ಅದರಂತೆ ಇದೀಗ ಬೀಚ್‌ನಲ್ಲಿ ಪೋಸ್ ಕೊಟ್ಟಿರೋ ಫೋಟೋಗಳನ್ನು ಶೇರ್ ಮಾಡಿದ್ದು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾರೆ. ಬೀಚ್ ನಲ್ಲಿ ಮಸ್ತ್ ಎಂಜಾಯ್ ಮಾಡಿರುವ ಎರಿಕಾ ಅಲ್ಲಿನ ಫೋಟೋಗಳನ್ನು ಹಂಚಿಕೊಂಡು, Beach time where you’re shore to have a…

Read More

ಜಗತ್ತನ್ನು ಕಾಡುತ್ತಿರುವ ಮಾರಕ ರೋಗಗಳಲ್ಲಿ ಕ್ಯಾನ್ಸರ್ ಅತ್ಯಂತ ಭಯಾನಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಇದರ ಹೆಸರು ಕೇಳಿದ್ರೆನೆ ಎದೆಯಲ್ಲಿ ನಡುಕ ಹುಟ್ಟಿಕೊಳ್ಳುತ್ತೆ. ಆರೋಗ್ಯ ವಂತರು ಕೂಡ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಕೆಲವೇ ದಿನಗಳಲ್ಲಿ ಕೊನೆಯುಸಿರೆಳೆಯುತ್ತಿದ್ದಾರೆ. ಕ್ಯಾನ್ಸರ್ ಆರಂಭದಲ್ಲಿ ಚಿಕಿತ್ಸೆ ಇದ್ದರೂ, ವಿವಿಧ ರೀತಿಯ ಕ್ಯಾನ್ಸರ್‌ಗಳಿಗೆ ಇಂದಿಗೂ ಚಿಕಿತ್ಸೆ ಇಲ್ಲದೆ ರೋಗಿಗಳು ಸಾವಿನ ಕದ ತಟ್ಟುತ್ತಾರೆ. ಆದರೆ ಕ್ಯಾನ್ಸರ್‌ಗೆ ಔಷಧಿ ಕಂಡುಹಿಡಿಯುವ ಕಾರ್ಯ ದಶಕಗಳಿಂದಲೂ ನಡೆಯುತ್ತಿದೆ. ಈ ನಡುವೆ ರಷ್ಯಾ ಕ್ಯಾನ್ಸರ್‌ನ ಒಂದು ವಿಧಕ್ಕೆ ಚುಚ್ಚು ಮದ್ದು ಕಂಡುಹಿಡಿದಿರುವುದಾಗಿ ಹೇಳಿತ್ತು, ಆದರೆ ಆ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ವರದಿಯಾಗಿಲ್ಲ. ಆದರೆ ಇದೀಗ ಭಾರತದಲ್ಲಿ ಕ್ಯಾನ್ಸರ್‌ಗೆ ಔಷಧಿ ಕಂಡು ಹಿಡಿದಿರುವ ಕುರಿತು ಸುದ್ದಿ ಹೊರ ಬಿದ್ದಿದ್ದು ಇದು ಕೋಟ್ಯಾಂತರ ರೋಗಿಗಳ ಮುಖದಲ್ಲಿ ಆಶ ಕಿರಣ ಮುಡಿಸಿದೆ. ಟಾಟಾ ಮೆಮೋರಿಯಲ್ ಸೆಂಟರ್‌ನ ಸಂಶೋದಕರು ಕ್ಯಾನ್ಸರ್‌ ಮಾತ್ರೆ ಕಂಡುಕೊಂಡಿದಿದ್ದು ಈ ಬಗ್ಗೆ ಟಾಟಾ ಮೆಮೋರಿಯಲ್ ಸೆಂಟರ್‌ನ ನಿರ್ದೇಶಕ ಡಾ. ರಾಜೇಂದ್ರ ಬಡ್ವೆ ಟಿವಿ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.…

Read More

ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಸಿನಿಮಾಗಳ ಜೊತೆ ಜೊತೆಗೆ ರಾಜಕೀಯ ಜೀವನವನ್ನು ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಈ ಮಧ್ಯೆ ಜಗ್ಗೇಶ್ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಕೆಲವು ಸುದ್ದಿ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುವ ಕೆಲಸ ಆಗುತ್ತಿದೆ. ಇಂಥವರ ವಿರುದ್ಧ ಜಗ್ಗೇಶ್ ಕೋರ್ಟ್ ಮೊರೆ ಹೋಗಿದ್ದು, ತಮ್ಮ ವಿರುದ್ಧ ಅವಹೇಳನಾಕಾರಿ ಸುದ್ದಿ ಪ್ರಕಟ ಮಾಡದಂತೆ ತಡೆಯಾಜ್ಞೆ ತಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಜಗ್ಗೇಶ್ ಅಭಿಮಾನಿಗಳ ಜೊತೆ ಸದಾ ಟಚ್ ನಲ್ಲಿದ್ದಾರೆ. ಜೊತೆಗೆ ತಮ್ಮ ಸಿನಿಮಾಗಳ ಬಗ್ಗೆ, ರಾಜಕೀಯ ವಿಚಾರಗಳ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುತ್ತಾ ಇರುತ್ತಾರೆ. ಇದೇ ಸೋಶಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಬಗ್ಗೆ ಕೆಲವರು ಅಪಪ್ರಚಾರ ಮಾಡಿದ್ದಿದೆ. ಕೆಲವು ಸುದ್ದಿ ಮಾಧ್ಯಮಗಳು ಜಗ್ಗೇಶ್​ ಅವರನ್ನು ಟೀಕಿಸಿದ್ದು, ಇದಕ್ಕೆ ಜಗ್ಗೇಶ್ ಅವರು ತಮ್ಮದೇ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದಾರೆ. ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ, ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ. ಇದು ತಾತ್ಕಾಲಿಕ ಆದೇಶವಾಗಿದೆ.…

Read More

ಕನ್ನಡದ ಹುಡುಗಿ, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ನಟ ರಣವೀರ್​ ಸಿಂಗ್​ ಮೊದಲ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ. ಈ ವರ್ಷ ಅಂದರೆ 2024ರ ಸೆಪ್ಟೆಂಬರ್​ನಲ್ಲಿ ದೀಪಿಕಾ ಮಗುವಿಗೆ ಜನ್ಮ ನೀಡdಲಿದ್ದಾರೆ ಎಂದು ರಣವೀರ್ ಸಿಂಗ್ ತಿಳಿಸಿದ್ದಾರೆ. ಈ ವಿಷಯವನ್ನು ರಣವೀರ್ ಸಿಂಗ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಮಗುವಿಗೆ ಸಂಬಂಧಿಸಿದ ಬಟ್ಟೆ, ಶೂ, ಆಟಿಕೆ, ಟೋಪಿ ಮುಂತಾದ ವಸ್ತುಗಳಿರುವ ಚಿತ್ರವನ್ನು ಶೇರ್ ಮಾಡುವ ಮೂಲಕ ದೀಪಿಕಾ ಹಾಗೂ ರಣವೀರ್ ಮಗುವಿನ ನಿರೀಕ್ಷೆಯಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ‘ಸೆಪ್ಟೆಂಬರ್​ 2024 ’ ಎಂದು ಇದರಲ್ಲಿ ಬರೆಯಲಾಗಿದೆ. 2018ರಲ್ಲಿ ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಪ್ರೀತಿಸಿ ಮದುವೆ ಆಗಿದ್ದಾರೆ. ಮದುವೆಯಾಗಿ ಆರು ವರ್ಷಗಳ ಬಳಿಕ ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದು ಸದ್ಯ ದೀಪಿಕಾ ಎರಡು ತಿಂಗಳ ಗರ್ಭಿಣಿ. ಇದೇ ವರ್ಷ ಸೆಪ್ಟೆಂಬರ್​ನಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ. ದೀಪಿಕಾ ಪಡುಕೋಣೆ ಅವರು ಪ್ರೆಗ್ನೆಂಟ್​ ಆಗಿರಬಹುದು ಎಂಬ ಗಾಸಿಪ್​ ಹಲವು ದಿನಗಳಿಂದ…

Read More

ಗಾಜಾಪಟ್ಟಿಯಲ್ಲಿ ಹಮಾಸ್ ಉಗ್ರರ ವಿರುದ್ಧ ಇಸ್ರೇಲ್ ಸೇನೆ ನಡೆಸುತ್ತಿರುವ ಯುದ್ಧದಲ್ಲಿ ಭಾರತ ಮೂಲದ 19 ವರ್ಷದ ಯೋಧನೋರ್ವ ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೃತ ಯೋಧನನ್ನು 19 ವರ್ಷದ ಸಾರ್ಜೆಂಟ್ ಓಜ್ ಡೇನಿಯಲ್ ಎಂದು ಗುರುತಿಸಲಾಗಿದೆ. ಹಮಾಸ್ ಜೊತೆಗಿನ ಇಸ್ರೇಲಿ ಯೋಧರ ಸಂಘರ್ಷ 143ನೇ ದಿನಕ್ಕೆ ಕಾಲಿಟ್ಟಿದ್ದು, ಈ ವೇಳೆ ಭಾರತೀಯ ಮೂಲದ 19 ವರ್ಷದ ಇಸ್ರೇಲಿ ಯೋಧ ಮೃತಪಟ್ಟಿರುವುದಾಗಿ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಘೋಷಿಸಿದೆ. “ಭಾರತೀಯ ಮೂಲದವರು ಮತ್ತು ಅಕ್ಟೋಬರ್ 7 ರಂದು ಗಾಜಾಕ್ಕೆ ಅಪಹರಿಸಲ್ಪಟ್ಟ ಸಾರ್ಜೆಂಟ್ ಓಜ್ ಡೇನಿಯಲ್ ಅವರು ಸತ್ತಿದ್ದಾರೆ ಎಂದು ಘೋಷಿಸಲಾಗಿದೆ” ಎಂದು ಭಾರತದಲ್ಲಿನ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ತಿಳಿಸಿದ್ದಾರೆ. ಅಕ್ಟೋಬರ್ 7, 2023 ರಂದು ಹಮಾಸ್ ಅಪಹರಿಸಿದ 253 ಒತ್ತೆಯಾಳುಗಳಲ್ಲಿ ಡೇನಿಯಲ್ ರನ್ನೂ ಕೂಡ ಪಟ್ಟಿಮಾಡಲಾಗಿತ್ತು. ಗುಪ್ತಚರ ವರದಿಗಳ ಆಧಾರದ ಮೇಲೆ ಸೇನೆಯ ಮುಖ್ಯ ರಬ್ಬಿ ಡೇನಿಯಲ್ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ವರದಿಗಳ ಪ್ರಕಾರ ಡೇನಿಯಲ್ ದೇಹ ಇನ್ನೂ…

Read More

ಪಾಕಿಸ್ತಾನದ ಖ್ಯಾತ ಗಾಯಕಿ ಶಾಜಿಯಾ ಮಂಜೂರ್ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಹನಿಮೂನ್ ಬಗ್ಗೆ ಪ್ರಶ್ನೆ ಮಾಡಿದ ಹಾಸ್ಯ ಕಲಾವಿದನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಹಾಸ್ಯಕಲಾವಿದ ಶೆರ್ರಿ ನನ್ಹಾಗೆ ಗಾಯಕಿ ಶಾಜಿಯಾ ಮಂಜೂರ್ ಕಪಾಳ ಮೋಕ್ಷ ಮಾಡಿದ್ದು, ಇಬ್ಬರ ನಡುವೆ ವಾಗ್ವಾದ ಉಂಟಾಗಿದೆ. “ಸಾರ್ವಜನಿಕ ಬೇಡಿಕೆ” ಯ ಹಿನ್ನೆಲೆಯಲ್ಲಿ ಗಾಯಕಿ ಶಾಜಿಯಾ ಅತಿಥಿಯಾಗಿ ಕಾಣಿಸಿಕೊಂಡಿದ್ದರು. ಆದರೆ ಹಾಸ್ಯ ಕಲಾವಿದ ಕೇಳಿದ ಪ್ರಶ್ನೆಯಿಂದ ಆಕ್ರೋಶಗೊಂಡ ಗಾಯಕ ಲೈವ್ ನಲ್ಲೇ ಕಪಾಳಮೋಕ್ಷ ಮಾಡಿದ್ದಾರೆ.ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. “ನಾವು ಮದುವೆಯಾದ ನಂತರ, ಶಾಜಿಯಾ, ನಾನು ತಕ್ಷಣ ನಿನ್ನನ್ನು ನಮ್ಮ ಹನಿಮೂನ್‌ಗೆ ಮಾಂಟೆ ಕಾರ್ಲೋಗೆ ಕರೆದುಕೊಂಡು ಹೋಗುತ್ತೇನೆ. ನೀವು ಯಾವ ವಿಮಾನದ ವಿಭಾಗದಲ್ಲಿ (ಕ್ಲಾಸ್ ನಲ್ಲಿ) ಸಂಚರಿಸಲು ಬಯಸುತ್ತೀರಿ ಎಂದು ನನಗೆ ತಿಳಿಸುವಿರಾ?, ಎಂದು ಶೆರ್ರಿ ನನ್ಹಾ ತಮಾಷೆಯಾಗಿ ಕೇಳಿದ್ದಕ್ಕೆ ಮಂಜೂರ್ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ. ಈ ಪ್ರಶ್ನೆ ಕೇಳಿದ ಹಾಸ್ಯಕಲಾವಿದನನ್ನು ಮೂರನೇ ದರ್ಜೆಯ ವ್ಯಕ್ತಿ ಎಂದು ಗಾಯಕಿ ನಿಂದಿಸಿದ್ದಾರೆ. ಮಹಿಳೆಯರೊಂದಿಗೆ ಮಾತನಾಡುವ ರೀತಿ ಇದೇನಾ?…

Read More

ಬಾಲಿವುಡ್ ಬ್ಯೂಟಿ ನಟಿ ತಾಪ್ಸಿ ಪನ್ನು ಮದುವೆಯ ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ತಾಪ್ಸಿ ಬಹುಕಾಲದ ಗೆಳೆಯನನ್ನು ವರಿಸಲಿದ್ದು ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ, ಈ ಬಗ್ಗೆ ನಟಿ ತಾಪ್ಸಿ ಪ್ರತಿಕ್ರಿಯೆ ನೀಡಿದ್ದಾರೆ. ತಾಪ್ಸಿ ಪನ್ನು ಅವರು ಬ್ಯಾಡ್ಮಿಂಟನ್​ ಆಟಗಾರ ಮಥಾಯಸ್​ ಬೋ ಜೊತೆ 10 ವರ್ಷದಿಂದ ಪ್ರೀತಿಯಲ್ಲಿದ್ದಾರೆ. ಈ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇವರು ಶೀಘ್ರವೇ ಹಸೆಮಣೆ ಏರಲಿದ್ದಾರೆ ಎನ್ನಲಾಗಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ತಾಪ್ಸಿ ಪನ್ನು,  ‘ನನ್ನ ವೈಯಕ್ತಿಕ ವಿಚಾರದಲ್ಲಿ ನಾನು ಎಂದಿಗೂ ಸ್ಪಷ್ಟನೆ ನೀಡಲ್ಲ’ ಎಂದಿದ್ದಾರೆ. ತಾಪ್ಸಿ ಪನ್ನು ಅವರು ಈ ವರ್ಷ ಮಾರ್ಚ್ ತಿಂಗಳಲ್ಲಿ ಮಥಾಯಸ್​ ಬೋ ಅವರನ್ನು ಮದುವೆ ಆಗಲಿದ್ದಾರೆ ಎಂದು ವರದಿ ಆಗಿತ್ತು. ಅಷ್ಟೇ ಅಲ್ಲ, ಸಿಖ್ ಹಾಗೂ ಕ್ರೈಸ್ತ ಸಮುದಾಯದ ಸಂಪ್ರದಾಯದಂತೆ ಈ ವಿವಾಹ ನೆರವೇರಲಿದೆ ಎಂದು ವರದಿ ಆಗಿತ್ತು. ಈ ಜೋಡಿಯ ಮದುವೆ ಉದಯಪುರದಲ್ಲಿ ನಡೆಯಲಿದ್ದು ಕೇವಲ ಎರಡು ಕುಟುಂಬದವರನ್ನು ಮಾತ್ರವೇ ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ. ಈ ವಿಚಾರವನ್ನು…

Read More

ಪಂಜಾಬಿಯ ಖ್ಯಾತ ಸಂಗೀತ ಸಂಯೋಜಕ, ಗಾಯಕ ಬಂಟಿ ಬೈನ್ಸ್ ಮೇಲೆ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಬಂಟಿ ಮೊಹಾಲಿ ರೆಸ್ಟೋರೆಂಟ್ ನಲ್ಲಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯಿಂದ ಅದೃಷ್ಟವಶಾತ್‍ ಬಂಟಿಗೆ ಯಾವುದೇ ಅಪಾಯವಾಗಿಲ್ಲ. ಅವರಿಗೆ ಯಾವುದೇ ಗುಂಡು ತಗುಲಿಲ್ಲ ಎಂದು ಹೇಳಲಾಗುತ್ತಿದೆ. ವ್ಯಕ್ತಿಯೊರ್ವ ಬಂಟಿಯ ಬಳಿ ಒಂದು ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಿದ್ದನಂತೆ. ಆದರೆ ಬಂಟಿ ದುಡ್ಡನ್ನು ಕೊಡಲು ನಿರಾಕರಿಸಿದ ಕಾರಣಕ್ಕಾಗಿ ಈ ಶೂಟೌಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಗ್ಯಾಂಗ್ ಸ್ಟರ್ ಲಕ್ಕಿ ಪಾಟಿಯಲ್ ಹೆಸರಿನಲ್ಲಿ ಈ ಕೊಲೆ ಬೆದರಿಕೆ ಬಂದಿದ್ದು, ಕೆನಡಾದಿಂದ ಅವನು ಕಾರ್ಯನಿರ್ವಹಿಸುತ್ತಿದ್ದಾನೆಂದು ಎಂದು ಪಂಜಾಬ್ ನ ಸ್ಥಳೀಯ ಮಾದ್ಯಮಗಳು ವರದಿ ಮಾಡಿವೆ. ಜೊತೆಗೆ ಕುಖ್ಯಾತಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೊತೆಗೆ ಈತನ ಸಂಪರ್ಕವಿದೆ ಎಂದು ಹೇಳಲಾಗುತ್ತಿದೆ.

Read More

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಸಿದ ಪದವೊಂದು ಅವರನ್ನು ಸಾಕಷ್ಟು ಸಂಕಷ್ಟಕ್ಕೆ ಎಡೆ ಮಾಡಿಕೊಟ್ಟಿದೆ. ನಿರ್ಮಾಪಕ ಉಮಾಪತಿ ಹಾಗೂ ದರ್ಶನ್ ನಡುವೆ ನಡೆಯುತ್ತಿರುವ ವಾಕ್ ಸಮರ ದಿನದಿಂದ ದಿನಕ್ಕೆ ನಾನಾ ತಿರುವು ಪಡೆದುಕೊಳ್ಳುತ್ತಿದೆ. ಈ ಮಧ್ಯೆ ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ದರ್ಶನ್ ವಿರುದ್ಧ ಮಹಿಳೆಯೊಬ್ಬರು ಖಾಸಗಿ ದೂರು ದಾಖಲಿಸಿದ್ದಾರೆ. ಬೆಂಗಳೂರಿನ 37ನೇ ಎಸಿಎಂಎಂ ಕೋರ್ಟ್‌ನಲ್ಲಿ ರೇಣುಕಮ್ಮ ಎಂಬುವವರು ದರ್ಶನ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಹಿಳೆಯರ ಬಗ್ಗೆ ಅಗೌರವವಾಗಿ ದರ್ಶನ್ ಮಾತನಾಡಿದ್ದಾರೆ ಎಂದು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ರೇಣುಕಮ್ಮ ದೂರು ದಾಖಲಿಸಿದ್ದರು. ಐಪಿಸಿ ಸೆಕ್ಷನ್ 295(ಎ) (ಮಹಿಳೆಯರಿಗೆ ಅವಮಾನ), 509 (ಮಹಿಳೆಯ ಮಾನಕ್ಕೆ ಅಡ್ಡಿ ಮಾಡುವ ಉದ್ದೇಶದಿಂದ ಬಳಸಿದ ಭಾಷೆ), 298 (ಧಾರ್ಮಿಕ ಭಾವನೆಗಳಿಗೆ ಧಕ್ಕೆ), 504 (ಶಾಂತಿ ಭಂಗಕ್ಕೆ ಪ್ರಚೋದನೆ) ಅಡಿ ಕೇಸ್ ದಾಖಲಿಸುವಂತೆ ರೇಣುಕಮ್ಮ ಖಾಸಗಿ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸದ ಕಾರಣ ರೇಣುಕಮ್ಮ ಈಗ ಕೋರ್ಟ್ ಮೊರೆ ಹೋಗಿ…

Read More