Author: Author AIN

ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ದಂಪತಿ ಸದ್ಯ ಮುದ್ದು ಮಗನ ಆಗಮನದ ಖುಷಿಯಲ್ಲಿದ್ದಾರೆ. ಲಂಡನ್​ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಅನುಷ್ಕಾ ಸದ್ಯ ಲಂಡನ್ ನಲ್ಲಿ ಮಗಳ ಜೊತೆ ಎಂಜಾಯ್ ಮಾಡ್ತಿದ್ದಾರೆ. ವಿರಾಟ್ ಹಾಗೂ ವಮಿಕಾ ಹೋಟೆಲ್​ನಲ್ಲಿರೋ ಫೋಟೋ ಒಂದು ವೈರಲ್ ಆಗಿದ್ದು, ಈ ಫೋಟೋಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಅನುಷ್ಕಾ ಶರ್ಮಾ ಗಂಡುಮಗು ಜನ್ಮ ನೀಡಿರುವ ಕುರಿತು ದಂಪತಿ ಸೋಷಿಯಲ್ ಮೀಡಿಯಾ ಮೂಲಕ ರಿವೀಲ್ ಮಾಡಿದ್ದಾರೆ. ಮಗುವಿಗೆ ಅಕಾಯ್ ಎಂದು ಹೆಸರು ಇಡಲಾಗಿದೆ. ಮಗು ಜನಿಸುವ ವರೆಗೂ ವಿಷಯವನ್ನು ನಟಿ ಗುಟ್ಟಾಗಿಯೇ ಇಟ್ಟಿದ್ದರು. ಮಗು ಜನಿಸಿದ ನಂತರ ಅವರು ಈ ವಿಚಾರದ ಬಗ್ಗೆ ಹೇಳಿಕೊಂಡಿದ್ದಾರೆ. ಸದ್ಯ ಈ ದಂಪತಿ ಲಂಡನ್​ನಲ್ಲೇ ಇದ್ದಾರೆ. ಲಂಡನ್​ನ ಹೋಟೆಲ್ ಒಂದಕ್ಕೆ ವಿರಾಟ್ ಹಾಗೂ ವಮಿಕಾ ತೆರಳಿದ್ದಾರೆ. ಈ ಸಂದರ್ಭದ ಫೋಟೋನ ಕೆಲವರು ಕ್ಲಿಕ್ಕಿಸಿ ವೈರಲ್ ಮಾಡಿದ್ದಾರೆ. ಇದರಲ್ಲಿ ವಮಿಕಾಳ ಮುಖ ಕಾಣಿಸಿಲ್ಲ. ವಿರಾಟ್ ಅವರು ತಲೆಗೆ ಹ್ಯಾಟ್ ಧರಿಸಿದ್ದು, ಅಪ್ಪನ  ಎದುರು…

Read More

ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಪಕ್ಷದ ಹಿರಿಯ ನಾಯಕಿ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಪುತ್ರಿ ಮರ್ಯಮ್ ನವಾಜ್ ಪಂಜಾಬ್ ಪ್ರಾಂತ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಕ್ಷದ ಬೆಂಬಲಿತ ಸುನ್ನಿ ಇತ್ತೆಹಾದ್ ಕೌನ್ಸಿಲ್ ಸಂಸದರ ಸಭಾತ್ಯಾಗದ ನಡುವೆ ಪಿಎಂಎಲ್-ಎನ್ನ 50 ವರ್ಷದ ಹಿರಿಯ ಉಪಾಧ್ಯಕ್ಷರು ಮುಖ್ಯಮಂತ್ರಿ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. 120 ಮಿಲಿಯನ್ ಜನರಿಗೆ ನೆಲೆಯಾಗಿರುವ ರಾಜಕೀಯವಾಗಿ ನಿರ್ಣಾಯಕ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಚುನಾವಣೆಯಲ್ಲಿ ಮರ್ಯಮ್ ನವಾಜ್ ಪಿಟಿಐ ಬೆಂಬಲಿತ ಎಸ್‌ಐಸಿಯ ರಾಣಾ ಅಫ್ತಾಬ್ ಅವರನ್ನ ಸೋಲಿಸಿ ಗೆಲುವು ಸಾಧಿಸಿದ್ದಾರೆ.

Read More

ಬಹುಭಾಷಾ ನಟಿ ಪ್ರಿಯಾಮಣಿ ಕುಟುಂಬದ ಜೊತೆಗೆ ಸಿನಿಮಾ ರಂಗವನ್ನು ಮ್ಯಾನೇಜ್ ಮಾಡುತ್ತಿದ್ದಾರೆ. ತನ್ನ ಅಭಿನಯದಿಂದಲೇ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಪ್ರಿಯಾಮಣಿ, ಸದ್ಯಕ್ಕೆ ಪ್ರಿಯಾಮಣಿಗೆ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುವ ಅವಕಾಶಗಳಿಲ್ಲದಿದ್ರೂ. ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.  ಸಿನಿಮಾ ಹಾಗೂ ವೆಬ್ ಸೀರಿಸ್​ ನಲ್ಲಿ ನಟಿಸಲು ಉತ್ತಮ ಸಂಭಾವನೆ ಪಡೆಯುವ ಪ್ರಿಯಾಮಣಿ, ಇತ್ತೀಚೆಗಷ್ಟೆ ಐಶಾರಾಮಿ ಕಾರೊಂದನ್ನು ಖರೀದಿ ಮಾಡಿದ್ದಾರೆ. ಅಂದ ಹಾಗೆ ಇದರ ಬೆಲೆ ಎಷ್ಟು ಅಂತ ಗೊತ್ತಾದ್ರೆ ನೀವು ಅಚ್ಚರಿ ಪಡ್ತೀರಾ. ಪ್ರಿಯಾಮಣಿ ಖರೀದಿ ಮರ್ಸಿಡೀಸ್ ಬೆಂಜ್ ನ ಜಿಎಲ್​ಸಿ ಕಾರು ಖರೀದಿಸಿದ್ದು ಇದರ ಬೆಲೆ 90.15 ಲಕ್ಷದಿಂದ 1 ಕೋಟಿ ಇದೆ. ಪ್ರಿಯಾಮಣಿ ಕಾರು ಖರೀದಿ ಮಾಡಿರುವ ಚಿತ್ರಗಳನ್ನು ಮರ್ಸಿಡೀಜ್ ಬೆಂಜ್ ಇಂಡಿಯಾ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಐಷಾರಾಮಿ ಕಾರು ಖರೀದಿಸಿದ ಪ್ರಿಯಾಮಣಿ, ಶೋ ರೂಮ್​ನಲ್ಲೇ ಕಾರಿಗೆ ಅರಿಶಿನ -ಕುಂಕುಮವಿಟ್ಟು, ಹಾರ ಹಾಕಿ ಕಾರಿಗೆ ಪೂಜೆ ಮಾಡಿ ಕಾರನ್ನು ಮನೆಗೆ ಕೊಂಡೊಯ್ದಿದ್ದಾರೆ. ಪ್ರಿಯಾಮಣಿ ಅವರು ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು…

Read More

ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ‘ಗೌರಿ’ ಚಿತ್ರದ ಮೂಲಕ ಗಾಂಧಿನಗರಕ್ಕೆ ಎಂಟ್ರಿಕೊಟ್ಟಿದ್ದಾರೆ. ಸದ್ಯ ಸಮರ್ಜಿತ್ ಹಾಗೂ ಸಾನ್ಯ ಐಯ್ಯರ್ ನಟನೆಯ ಗೌರಿ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು ಈ ಮಧ್ಯೆ ಸಮರ್ಜಿತ್ ತಾನ್ಯ ಜೊತೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ್ದಾರೆ. ಮಾರ್ಚ್ 17,  ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ. ಪುನೀತ್ ಅವರ ಹುಟ್ಟುಹಬ್ಬಕ್ಕೆ ‘ಗೌರಿ’ ತಂಡದಿಂದ ವಿಶೇಷ ಗೀತೆಯೊಂದು ಬರಲಿದೆ. ಈ ವಿಶೇಷ ಗೀತೆಗೆ ಸಮರ್ಜಿತ್ ಲಂಕೇಶ್ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ತಾನ್ಯ ಹೋಪ್ ಹೆಜ್ಜೆ ಹಾಕಲಿದ್ದಾರೆ. ಮೋಹನ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಪುನೀತ್ ಅವರ ಡ್ಯಾನ್ಸ್ ನನಗೆ ಸ್ಪೂರ್ತಿ. ಹಾಗಾಗಿ ಅವರ ಹುಟ್ಟುಹಬ್ಬದಂದು ಗೌರಿ ಚಿತ್ರತಂಡದಿಂದ ಈ ಹಾಡನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ನಮನ ಸಲ್ಲಿಸುತ್ತಿದ್ದೇವೆ ಎಂದು ಸಮರ್ಜಿತ್ ಹೇಳಿದ್ದಾರೆ.

Read More

ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಕಳೆದ 13 ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಛತ್ತೀಸ್‍ಗಢದ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಮನೋಜ್ ರಜಪೂತ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿದ್ದ ರಜಪೂತ್ 2011 ರಿಂದ ತನ್ನನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾನೆ ಎಂದು 29 ವರ್ಷದ ಸಂತ್ರಸ್ತೆ ಆರೋಪಿಸಿದ್ದಾಳೆ. ಈ ಬಗ್ಗೆ ಫೆ.22 ರಂದು ಓಲ್ಡ್ ಭಿಲಾಯ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ ನಟನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಯ ವಿರುದ್ಧ ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಬೆದರಿಕೆ ಪ್ರಕರಣಗಳು ದಾಖಲಾಗಿದೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯ ಅಡಿಯಲ್ಲಿ ಸಹ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಿದಾಗ ನ್ಯಾಯಾಲಯ ಪೋಕ್ಸೊ ಪ್ರಕರಣವನ್ನು ರದ್ದುಪಡಿಸಿದೆ.

Read More

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಟೇರ ಸಿನಿಮಾದ ಸಕ್ಸಸ್ ಖುಷಿಯಲ್ಲಿದ್ದಾರೆ. ಈ ಮಧ್ಯೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರಿಗೆ ಹೇಳಿದ ಮಾತು ವಿವಾದಕ್ಕೆ ಕಾರಣವಾಗಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರಿಗೆ ದರ್ಶನ್ ತಗಡು ಎಂಬ ಪದ ಬಳಸಿದ್ದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ದರ್ಶನ್ ವಿರುದ್ಧ ದೂರು ದಾಖಲಾಗಿದೆ. ಆದರೆ ಇದ್ಯಾವುದರ ಬಗ್ಗೆ ತಲೆಕೆಡಿಸಿಕೊಳ್ಳದ ನಟ ದರ್ಶನ್ ಆರಾಮವಾಗಿ ಪತ್ನಿ ಹಾಗೂ ಆಪ್ತ ಸ್ನೇಹಿತರೊಂದಿಗೆ ಪಾರ್ಟಿ ಎಂಜಾಯ್ ಮಾಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಜೊತೆಗೆ ಡ್ಯಾನ್ಸ್ ಫ್ಲೋರ್​ ನಲ್ಲಿ ದರ್ಶನ್ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ವಿಜಯಲಕ್ಷ್ಮಿ ಸಹ ಪತಿಯೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದಾರೆ. ದರ್ಶನ್​ರ ಹಲವು ಗೆಳೆಯರು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ದರ್ಶನ್​ ವಿರುದ್ಧ ಮಹಿಳಾಪರ ಸಂಘಟನೆ ಹಾಗೂ ಇತರೆ ಕೆಲವು ಸಂಘಟನೆಗಳು ದೂರುಗಳನ್ನು ದಾಖಲಿಸಿವೆ. ಆದರೆ ಅದ್ಯಾವುದನ್ನೂ ಗಮನಕ್ಕೆ ತೆಗೆದುಕೊಳ್ಳದೆ ಆರಾಮವಾಗಿ ಪಾರ್ಟಿ ಮಾಡಿದ್ದಾರೆ. ಪತ್ನಿಯೊಂದಿಗೆ ಪಾರ್ಟಿ ಮಾಡುವ ಮೂಲಕ ಕೆಲವು ದಿನಗಳ ಹಿಂದೆ ಪವಿತ್ರಾ ಗೌಡ ಹಾಗೂ ವಿಜಯಲಕ್ಷ್ಮಿ…

Read More

ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವೆ ನಡೆಯುತ್ತಿರುವ ವಾಕ್ ಸಮರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ  5 ದಿನಗಳಿಂದ ದರ್ಶನ್ ಆಡಿದ ಮಾತು ವಿವಾದ ಹುಟ್ಟುಹಾಕುತ್ತಿದ್ದು ಇದೀಗ ಈ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪ್ರತಿಕ್ರಿಯಿಸಿದ್ದಾರೆ. ಕಾಟೇರ ಸಿನಿಮಾ ಯಶಸ್ವಿಯಾಗಿದೆ. ಬಹಳಷ್ಟು ವರ್ಷಗಳ ಬಳಿಕ ದರ್ಶನ್‌ಗೆ ಒಂದು ಸಕ್ಸಸ್ ಸಿಕ್ಕಿದೆ. `ಕಾಟೇರ’ ಸಿನಿಮಾ ನೋಡಿ ಜನ ಮೆಚ್ಚಿಕೊಂಡಿದ್ದಾರೆ. ಈ ಟೈಮ್‌ನಲ್ಲಿ ಈ ರೀತಿ ಮಾಡಿಕೊಳ್ಳಬಾರದಿತ್ತು. ಇಬ್ಬರ ಜಗಳ ಚಿತ್ರರಂಗದ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ನನ್ನ ಪ್ರೀತಿಯ ರಾಮು, `ಸಂಗೊಳ್ಳಿ ರಾಯಣ್ಣ’ ಬಳಿಕ ದರ್ಶನ್ ಕಾಟೇರದಲ್ಲಿ ಅದ್ಭುತವಾಗಿ ನಟಿಸಿದ್ದಾರೆ. ಸಿನಿಮಾ ಹಿಟ್ ಆಗಿದೆ. ಇಂತಹ ಸಮಯದಲ್ಲಿ ಅವರುಗಳೇ ಕುಳಿತು ಇದನ್ನು ಸರಿಮಾಡಿಕೊಳ್ಳಬೇಕು. ಇದು ಇಂಡಸ್ಟ್ರಿಗೆ ಶೋಭೆ ತರುವಂತಹ ವಿಚಾರವಲ್ಲ. ಈ ವಿಚಾರದ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಮುಂದೆ ಅದು ಕೆಟ್ಟ ಬೆಳವಣಿಗೆ ಆಗುತ್ತೆ ಎಂದಿದ್ದಾರೆ. ಸೋಷಿಯಲ್ ಮೀಡಿಯಾ ಒಂದು ಅದ್ಬುತ ಜಗತ್ತು. ಆದರೆ ಕೆಲವು…

Read More

ಸಾಕಷ್ಟು ಸದ್ದು ಮಾಡಿದ್ದ ಕಾಂತಾರ ಸಿನಿಮಾದ ಫಾರ್ಟ್ 2 ಯಾವಾಗ ಶುರುವಾಗುತ್ತೆ ಎಂದು ಕಾದು ಕೂತಿದ್ದ ಅಭಿಮಾನಿಗಳಿಗೆ ಶೆಟ್ರ ತಂಡದಿಂದ ಗುಡ್ ನ್ಯೂಸ್ ಸಿಕ್ಕಿದೆ. ನಟ ರಿಷಬ್ ಶೆಟ್ಟಿ ಸದ್ದಿಲ್ಲದೆ ಕಾಂತಾರ 2 ಚಿತ್ರದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಕುಂದಾಪುರದಲ್ಲಿ ಹಾಕಿರುವ ಸೆಟ್ ನಲ್ಲೇ ಚಿತ್ರೀಕರಣ ನಡೆಯುತ್ತಿದ್ದು, ಈ ಸಿನಿಮಾದಲ್ಲಿ ರಾಜನ ಪಾತ್ರವನ್ನು ಮಾಡುತ್ತಿರುವ ವಿನಯ್ ಬಿದ್ದಪ್ಪ ದೈವದ ಸನ್ನಿಧಿಗೆ ಹೋಗಿದ್ದಾರೆ. ಸಿನಿಮಾ ಕುರಿತಂತೆ ದೈವ ಅವರಿಗೆ ಅಭಯ ನೀಡಿದೆ. ಇತ್ತೀಚೆಗಷ್ಟೇ ಪುತ್ತೂರಿನ ಪನಡ್ಕದಲ್ಲಿ ನಡೆದ ದೈವದ ನೇಮದಲ್ಲಿ ಕಲ್ಲುರ್ಟಿ ದೈವದ ಬಳಿ ಕಾಂತಾರದಲ್ಲಿ ರಾಜನ ಪಾತ್ರವನ್ನು ನಿರ್ವಹಿಸುತ್ತಿರುವ ವಿನಯ್ ಬಿದ್ದಪ್ಪ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಧರ್ಮಕ್ಕೆ ಅಪಚಾರ ಆಗದಂತೆ ಸಿನಿಮಾ ಮಾಡಿ ಎಂದು ದೈವ ಅಭಯ ನೀಡಿದೆ. ಕಾಂತಾರ ಚಿತ್ರಕ್ಕಾಗಿಯೇ ಬೃಹತ್ ಸೆಟ್ ಗಳನ್ನು ಹಾಕಲಾಗಿದ್ದು, ಸದ್ಯ ಅದೇ ಸೆಟ್ ನಲ್ಲೇ ಚಿತ್ರೀಕರಣ ನಡೆಯುತ್ತಿದೆ. ಸಿನಿಮಾ ಟೀಮ್ ಬಿಟ್ಟರೆ ಬೇರೆಯವರಿಗೆ ಅಲ್ಲಿ ಅವಕಾಶವಿಲ್ಲದಂತೆ ಕಾಳಜಿ ವಹಿಸಲಾಗಿದೆ. ಸಾಕಷ್ಟು ಮುತುವರ್ಜಿಯಿಂದ ಸಿನಿಮಾದ…

Read More

ಅಮೆರಿಕದ ಮಿಸ್ಸೋರಿಯಲ್ಲಿ ಫೆಬ್ರವರಿ 20ರಂದು ಮನೆಗೆ ಬೆಂಕಿ ಬಿದ್ದು 5 ಮಂದಿ ಜೀವಂತ ದಹನಗೊಂಡ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಘಟನೆಯಲ್ಲಿ ಮೃತಪಟ್ಟ ಮಹಿಳೆಯೇ ಮನೆಗೆ ಬೆಂಕಿ ಹಚ್ಚಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಶಿಕ್ಷಕಿಯಾಗಿರುವ ಬೆರ್ನಾಡಿನ್ ಪ್ರುಸ್ನರ್ (39 ವರ್ಷ) ಉದ್ದೇಶಪೂರ್ವಕವಾಗಿ ಹಾಸಿಗೆಗೆ ಅಗ್ನಿಸ್ಪರ್ಷ ಮಾಡಿದ್ದು ಬೆಂಕಿ ತಕ್ಷಣ ಸಂಪೂರ್ಣ ಮನೆಗೆ ವ್ಯಾಪಿಸಿದೆ. ಈ ವೇಳೆ ಮನೆಯಲ್ಲಿದ್ದ 5 ಮಂದಿ ಅಗ್ನಿಯ ಕೆನ್ನಾಲಿಗೆಗೆ ಆಹುತಿಯಾಗಿದ್ದಾರೆ. 9 ವರ್ಷದ ಅವಳಿ ಮಕ್ಕಳಾದ ಎಲೀ ಮತ್ತು ಐವಿ, 6 ವರ್ಷದ ಜಾಕ್ಸನ್ ಹಾಗೂ 2 ವರ್ಷದ ಮಿಲೀ ಬೆಂಕಿಯಲ್ಲಿ ದಹನಗೊಂಡಿದ್ದರು. ಬೆಂಕಿ ಹಚ್ಚಿದ್ದ ಪ್ರುಸ್ನರ್ ಕೂಡಾ ಮೃತಪಟ್ಟಿದ್ದಳು. ಆರಂಭದಲ್ಲಿ ಇದು ಅಕಸ್ಮಾತ್ ಆದ ದುರಂತ ಎಂದು ಪೊಲೀಸರು ಶಂಕಿಸಿದ್ದರು. ಆದರೆ ದುರ್ಘಟನೆ ನಡೆಯುವ ಒಂದು ದಿನ ಮೊದಲು ಪ್ರುಸ್ನರ್ ಸಾಮಾಜಿಕ ಮಾಧ್ಯಮದಲ್ಲಿ `ನಾವು ಪ್ರಪಂಚದ ವಿರುದ್ಧ. ನಿಮ್ಮ ತಾಯಿಯಾಗಿರುವುದು ನನ್ನ ಸೌಭಾಗ್ಯ’ ಎಂದು ಮಕ್ಕಳನ್ನು ಉದ್ದೇಶಿಸಿ ಪೋಸ್ಟ್ ಮಾಡಿದ್ದರು. 2017ರಲ್ಲಿ ಪುಸ್ನರ್  ಪತಿ ಡೇವಿಡ್…

Read More

ಕ್ಷುಲಕ ಕಾರಣಕ್ಕೆ ನಡೆದ ಗಲಾಟೆಯಿಂದ ಕೋಪಗೊಂಡ ಪತಿ ಪತ್ನಿಯನ್ನು ಇರಿದು ಹತ್ಯೆ ಮಾಡಿದ ಪ್ರಕರಣದಲ್ಲಿ ಭಾರತ ಮೂಲದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಘಟನೆ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತದಲ್ಲಿ ನಡೆದಿದೆ. 40 ವರ್ಷದ ಭಾರತೀಯ ಮೂಲದ ವ್ಯಕ್ತಿ ನವೀಂದರ್ ಗಿಲ್‍ ಗೆ ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತದ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. 2022ರಲ್ಲಿ ನವೀಂದರ್ ಗಿಲ್ ತನ್ನ ಪತ್ನಿ ಹರ್‍ಪ್ರೀತ್ ಕೌರ್ ರನ್ನು ಇರಿದು ಹತ್ಯೆ ಮಾಡಿದ್ದ. ದಂಪತಿಗೆ 10 ವರ್ಷದ ಒಳಗಿನ 3 ಮಕ್ಕಳಿದ್ದಾರೆ. 2022ರ ಡಿಸೆಂಬರ್ 7ರಂದು ಸರ್ರೆ ನಗರದ ನಿವಾಸದಲ್ಲಿ ದಂಪತಿಯ ನಡುವೆ ಜಗಳವಾಗಿದ್ದು ನವೀಂದರ್ ಗಿಲ್ ತನ್ನ ಪತ್ನಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಹರ್‍ಪ್ರೀತ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನವೀಂದರ್ ದೋಷಿ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ಘೋಷಿಸಿದ್ದು 10 ವರ್ಷ ಪೆರೋಲ್ ನೀಡಬಾರದು ಎಂದು ಆದೇಶಿಸಿದೆ.

Read More