Author: Author AIN

ಜೀವನದ ಕೊನೆಯವರೆಗೂ ಜೊತೆಯಾಗಿ ಇರುತ್ತೇವೆ ಎಂದು ಕೈ ಹಿಡಿದ ಜೋಡಿಗಳು ಮದುವೆಯಾದ ಕೆಲವೇ ವರ್ಷಗಳಲ್ಲಿ ದೂರ ದೂರವಾಗುತ್ತಾರೆ. ಇಂದು ಸಣ್ಣ ಪುಟ್ಟ ಕಾರಣಗಳಿಗೂ ದಂಪತಿಗಳು ದೂರ ದೂರವಾಗುತ್ತಿದ್ದಾರೆ. ಇಲ್ಲೋರ್ವ ಮಹಿಳೆ ಪತಿಯಿಂದ ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಳು. ಇದರಿಂದ ಕೋಪಗೊಂಡ ಪತಿ ತಾನು ಹಿಂದೆ ನೀಡಿದ್ದ ಕಿಡ್ನಿಯನ್ನು ವಾಪಸ್ ನೀಡುವಂತೆ ಕೇಳಿದ್ದಾನೆ. ಆತನ ಹೆಸರು ಡಾ. ರಿಚರ್ಡ್ ಬಟಿಸ್ಟಾ. ವಿಚ್ಛೇದನ ದ ವೇಳೆ ಈತ ತನ್ನ ಪತ್ನಿಯಿಂದ ಕಿಡ್ನಿ ವಾಪಸ್ ಕೇಳಿದ್ದಾನೆ. ಕಿಡ್ನಿ ವಾಪಸ್ ನೀಡಿಲ್ಲವೆಂದ್ರೆ  1.2 ಮಿಲಿಯನ್ ಪೌಂಡ್‌ ನೀಡುವಂತೆ ಬೇಡಿಕೆ ಇಟ್ಟಿದ್ದ. 1990 ರಲ್ಲಿ ಡೊನ್ನೆಲ್ ಮತ್ತು ರಿಚರ್ಡ್ ಬಟಿಸ್ಟಾಗೆ ಮದುವೆ ಆಗಿತ್ತು. ಇಬ್ಬರಿಗೆ ಮೂರು ಮಕ್ಕಳಿದ್ದು, ಡೊನ್ನೆಲ್ ಗೆ ಆರೋಗ್ಯ ಸಮಸ್ಯೆ ಇರುವ ಕಾರಣ ಸಂಬಂಧದಲ್ಲಿ ಬಿರುಕು ಮೂಡಿತ್ತು. 2001 ರಲ್ಲಿ ಡೊನ್ನೆಲ್ ಸ್ಥಿತಿ ಮತ್ತಷ್ಟು ಗಂಭೀರವಾಗಿತ್ತು. ಆಕೆಯ ಎರಡೂ ಕಿಡ್ನಿ ಫೇಲ್ ಆಗಿತ್ತು. ಈ ಸಂದರ್ಭದಲ್ಲಿ ಪತ್ನಿ ಜೀವ ಹಾಗೂ ವೈವಾಹಿಕ ಸಂಬಂಧ ಮುಖ್ಯ ಎಂಬ…

Read More

ನೀಲಿ ಚಿತ್ರಗಳ ಖ್ಯಾತ ನಟಿ, ಅಂಸಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಕೆನಿ ಲಿನ್ ಕಾರ್ಟರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೆಚ್ಚಿನ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಅಭಿಮಾನಿಗಳು ಕಂಗಾಲಾಗಿದ್ದಾರೆ. ಮೃತ ಕೆನಿ ಹಲವು ವರ್ಷಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದ್ದು ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. 36ರ ವಯಸ್ಸಿನ ಕೆನಿ ಲಿನ್ ಕಾರ್ಟರ್ ಯನೈಟೆಡ್ ಸ್ಟೇಟ್ಸ್ ನ ಪಾರ್ಮಾದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಆಪ್ತ ವಲಯ ಖಚಿತ ಪಡಿಸಿದೆ. ಕೆನಿ ಲಿನ್ ಕಾರ್ಟರ್ ಕೇವಲ ನೀಲಿತಾರೆ ಮಾತ್ರ ಆಗಿರಲಿಲ್ಲ. ನೃತ್ಯಗಾರ್ತಿ ಹಾಗೂ ಗಾಯಕಿಯಾಗಿಯೂ ಖ್ಯಾತಿ ಘಳಿಸಿದ್ದರು. 2000 ಇಸವಿಯಲ್ಲಿ ವಯಸ್ಕರ ಸಿನಿಮಾಗಳ ಕ್ಷೇತ್ರಕ್ಕೆ ಎಂಟ್ರಿಕೊಟ್ಟಿದ್ದ ಕೆನಿ ಬರೋಬ್ಬರಿ 20 ವರ್ಷಗಳ ಕಾಲ ಅದೇ ರಂಗದಲ್ಲೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಆನಂತರ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ನಡುವೆ ತಮ್ಮದೇ ಸ್ಟುಡಿಯೋ ಶುರು ಮಾಡಿ, ಪೋಲ್ ಡಾನ್ಸಿಂಗ್ ನಲ್ಲೂ ಸಕ್ರೀಯರಾಗಿದ್ದರು. ಕೆನಿ…

Read More

ಲಾಹೋರ್:ಪಾಕಿಸ್ತಾನದ ಎರಡು ಪ್ರಮುಖ ಪಕ್ಷಗಳಾದ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಮತ್ತು ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) ಅಂತಿಮವಾಗಿ ಸಮ್ಮಿಶ್ರ ಸರ್ಕಾರವನ್ನು ರಚಿಸಲು ಒಪ್ಪಂದಕ್ಕೆ ನೀಡಿವೆ. ಫೆ.8ರಂದು ನಡೆದ ಸಾರ್ವರ್ತಿಕ ಚುನಾವಣೆಯಲ್ಲಿ ಯಾವುದೇ ಪಕ್ಷವು ಸರಳವಾಗಿ ಬಹುಮತ ಪಡೆಯದ ಕಾರಣ ರಾಷ್ಟ್ರೀಯ ಚುನಾವಣೆಯ ನಂತರ ದಿನಗಳ ಮಾತುಕತೆಗಳನ್ನು ಕೊನೆಗೊಳಿಸಿದೆ. ಇದೀಗ ಸಮ್ಮಿಶ್ರ ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೆಚ್ಚಿನ ಅನಿಶ್ಚಿತತೆಯ ಮತದಾನದ ನಂತರ, PPP ಮತ್ತು PML-N ನ ಉನ್ನತ ನಾಯಕರು ಮತ್ತೊಮ್ಮೆ “ರಾಷ್ಟ್ರದ ಹಿತದೃಷ್ಟಿಯಿಂದ” ಸರ್ಕಾರವನ್ನು ರಚಿಸಲು ಪಡೆಗಳನ್ನು ಸೇರುತ್ತಿದ್ದಾರೆ ಎಂದು ದೃಢಪಡಿಸಿದರು. ಶೆಹಬಾಜ್ ಷರೀಫ್ ಅವರು ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಲಿದ್ದು, ಆಸಿಫ್ ಅಲಿ ಜರ್ದಾರಿ ದೇಶದ ಅಧ್ಯಕ್ಷರ ಜಂಟಿ ಅಭ್ಯರ್ಥಿಯಾಗಲಿದ್ದಾರೆ ಎಂದು ಬಿಲಾವಲ್ ಖಚಿತಪಡಿಸಿದರು. “ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮತ್ತು ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಈಗ ಸಂಪೂರ್ಣ ಸಂಖ್ಯಾಬಲವನ್ನು ಹೊಂದಿದ್ದು, ನಾವು ಮುಂದಿನ ಸರ್ಕಾರವನ್ನು ರಚಿಸುವ ಸ್ಥಿತಿಯಲ್ಲಿರುತ್ತೇವೆ” ಎಂದು ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ-ಜರ್ದಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.…

Read More

ಸೀತಾ ರಾಮಂ ಚಿತ್ರದ ಬಳಿಕ ನಟಿ ಮೃಣಾಲ್ ಠಾಕೂರ್ ಸ್ಟಾರ್ ನಟಿಯಾಗಿ ಮಿಂಚುತ್ತಿದ್ದಾರೆ. ಬಾಲಿವುಡ್ ಚಿತ್ರರಂಗದ ಜೊತೆಗೆ ದಕ್ಷಿಣ ಭಾರತದ ಸಿನಿಮಾ ರಂಗದಲ್ಲೂ ಮೃಣಾಲ್ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಮೃಣಾಲ್ ಬಾಲಿವುಡ್ ಕ್ವೀನ್ ಕಂಗನಾ ರಾಣವತ್ ಅವರ ಆಸ್ತಿ ಖರೀದಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಮೃಣಾಲ್ ಸ್ಟಾರ್ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಂತೆ ಅವರ ಸಂಭಾವನೆ ಕೂಡ ಹೆಚ್ಚುತ್ತಿದೆ. ಇದೇ ಕಾರಣಕ್ಕೆ ಆಕೆಯ ಲೈಫ್ ಸ್ಟೈಲ್ ಕೂಡ ಬದಲಾವಣೆ ಆಗಿದೆ. ಸದ್ಯ ಮೃಣಾಲ್ ದುಬೈನ ದುಬಾರಿ ಏರಿಯಾದಲ್ಲಿರುವ ನಟಿ ಕಂಗನಾ ಅವರ ಪ್ಲ್ಯಾಟ್ ಖರೀದಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಮುಂಬೈನ ಅಂದೇರಿಯಲ್ಲಿ ಕಂಗನಾ ರಣಾವತ್​ ಅವರ ತಂದೆ ಅಮರ್​ದೀಪ್​ ರಣಾವತ್​ ಒಡೆತನದಲ್ಲಿ ಇದ್ದ ಎರಡು ಫ್ಲಾಟ್​ಗಳನ್ನು ಮೃಣಾಲ್​ ಠಾಕೂರ್​ ಖರೀದಿ ಮಾಡಿದ್ದಾರೆ. ಇದರ ಬೆಲೆ ಅಂದಾಜು 10 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ. ಮೃಣಾಲ್​ ಠಾಕೂರ್​ ಅವರು ಶೀಘ್ರದಲ್ಲೇ ಈ ಅಪಾರ್ಟ್​ಮೆಂಟ್​ಗೆ ಶಿಫ್ಟ್​ ಆಗಲಿದ್ದು, ಇಂಟೀರಿಯರ್​ ಡಿಸೈನ್​ ಕೆಲಸಗಳು ನಡೆಯುತ್ತಿವೆ ಎಂದು…

Read More

ಬಿಗ್ ಬಾಸ್ ಕನ್ನಡ ಸೀಸನ್ 10ರ ರನ್ನರ್ ಅಪ್ ಡ್ರೋನ್ ಪ್ರತಾಪ್ ಇದೀಗ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಬಿಗ್​ ಬಿಗ್​ಬಾಸ್​ ವೇದಿಕೆ ಮೇಲೆ ಮಾತನಾಡಿದ್ದ ಪ್ರತಾಪ್ ತಾನು ಬಿಗ್​ಬಾಸ್​ ಗೆದ್ದರೆ ಬರುವ ಹಣ ಇನ್ನಿತರೆಗಳನ್ನು ದಾನ ಮಾಡುವುದಾಗಿ ಹೇಳಿದ್ದರು. ಅಂತೆಯೇ ಬಿಗ್​ಬಾಸ್​ ರನ್ನರ್ ಅಪ್ ಆಗಿದ್ದ ಪ್ರತಾಪ್​ಗೆ 10 ಲಕ್ಷ ಬಹುಮಾನದ ಮೊತ್ತ ಹಾಗೂ ಒಂದು ಎಲೆಕ್ಟ್ರಿಕ್ ಬೈಕ್ ಉಡುಗೊರೆಯಾಗಿ ನೀಡಲಾಗಿತ್ತು. ಇದೀಗ ಎಲೆಕ್ಟ್ರಿಕ್ ಬೈಕ್ ಅನ್ನು ಪ್ರತಾಪ್ ಅಗತ್ಯವಿರುವ ಯುವಕನೊಬ್ಬನಿಗೆ ದಾನ ಮಾಡಿದ್ದಾರೆ. ಈ ಮಾಹಿತಿಯನ್ನು ಪ್ರತಾಪ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯುವಕನೊಬ್ಬನಿಗೆ ಬೈಕ್ ಅನ್ನು ನೀಡುತ್ತಿರುವ ಚಿತ್ರ ಹಂಚಿಕೊಂಡಿರುವ ಡ್ರೋನ್ ಪ್ರತಾಪ್, ‘ಬಿಗ್‌ಬಾಸ್ ನಲ್ಲಿ ಬಹುಮಾನವಾಗಿ ಬಂದ ಬೈಕ್ ಅನ್ನು ಹೇಳಿದ ಹಾಗೆ ಯಾರಿಗೆ ನೀಡಿದೆ ಅನ್ನುವುದಕ್ಕೆ ಉತ್ತರ ಇಲ್ಲಿದೆ. ಇವರು ರಾಜು ಅಂತ ಮಧ್ಯಾಹ್ನದಿಂದ ಸಂಜೆ ವರೆಗೂ ಹೋಟಲ್ ನಲ್ಲಿ ಕೆಲಸ ಮಾಡಿ‌ ಹಾಗೂ ಸಂಜೆಯ ಮೇಲೆ ಫುಡ್ ಡೆಲಿವರಿ ಕೆಲಸ ಮಾಡುತ್ತಾರೆ ಮತ್ತು ಇವರು ತಮ್ಮ…

Read More

ಕನ್ನಡದ ಗೂಗ್ಲಿ ಹುಡುಗಿ ನಟಿ ಕೃತಿ ಕರಬಂಧ ಹಸೆಮಣೆ ಏರಲು ಸಜ್ಜಾಗಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಪುಲ್ಕಿತ್ ಸಾಮ್ರಾಟ್ ಜೊತೆ ಹಸೆಮಣೆ ಏರಲು ಕೃತಿ ಸಜ್ಜಾಗಿದ್ದಾರೆ. ತೆಲುಗಿನ ಬೋನಿ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟು ಸದ್ಯ ಬಾಲಿವುಡ್ ನಲ್ಲಿ ಮಿಂಚುತ್ತಿರುವ ಕೃತಿ ಇದೇ ಮಾರ್ಚ್ 13ಕ್ಕೆ ದಾಂಪತ್ಯ ಜೀವನಕ್ಕೆ ಕೃತಿ ಕಾಲಿಡಲಿದ್ದಾರೆ. ಈ ಬಗ್ಗೆ ನಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇತ್ತೀಚೆಗೆ ನಟಿ ಕೃತಿ ಹಾಗೂ ಪುಲ್ಕಿತ್ ಗುಟ್ಟಾಗಿ ಎಂಗೇಜ್‌ಮೆಂಟ್ ಆಗಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಬೆನ್ನಲ್ಲೇ ಮದುವೆ ಬಗ್ಗೆ ನಟಿ ಅಧಿಕೃತ ಅಪ್‌ಡೇಟ್ ನೀಡಿದ್ದಾರೆ. ಬಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಬಳಿಕ ಪುಲ್ಕಿತ್ ಪರಿಚಯವಾಗಿ ಆ ಬಳಿಕ ಪ್ರೀತಿಸಲು ಆರಂಭಿಸಿದ್ದಾರೆ. ಪುಲ್ಕಿತ್‌ ಜೊತೆ 5 ವರ್ಷಗಳ ಕಾಲ ಡೇಟಿಂಗ್ ಮಾಡಿದ್ದ ಕೃತಿ ಇದೀಗ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇತ್ತೀಚೆಗೆ ಕೃತಿ ಅವರು ಪುಲ್ಕಿಟ್ ಸಾಮ್ರಾಟ್ ಜೊತೆ ಇರುವ ಫೋಟೋ ಹಂಚಿಕೊಂಡು, ‘ಕೈಜೋಡಿಸಿ ಒಟ್ಟಾಗಿ ಸಾಗೋಣ’ ಎಂದು ಬರೆದುಕೊಂಡಿದ್ದರು. ಅವರು ಬೇಕಂತಲೇ…

Read More

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಟೇರ ಸಿನಿಮಾದ ಖುಷಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಚಿತ್ರರಂಗಕ್ಕೆ ಎಂಟ್ರಿಕೊಟ್ಟು 25 ವರ್ಷ ಪೂರೈಸಿರೋ ದರ್ಶನ್ ಇದೀಗ ಕಾಟೇರ ಸಕ್ಸಸ್ ಸಂಭ್ರಮದಲ್ಲಿದ್ದಾರೆ. ‘ಕಾಟೇರ’ ಚಿತ್ರ 50 ದಿನಗಳನ್ನು ಪೂರೈಸಿದ ಸಕ್ಸಸ್ ಸಂಭ್ರಮದಲ್ಲಿ ದರ್ಶನ್ ನಿರ್ಮಾಪಕ ಉಮಾಪತಿಗೆ ಟಾಂಗ್ ನೀಡಿದ್ದಾರೆ. ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಸಿನಿಮಾ 50 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ಈ ವೇಳೆ, ಹಿರಿಯ ಶ್ರುತಿ, ನಾಯಕಿ ಆರಾಧನಾ ಸೇರಿದಂತೆ ತಂಡದ ಹಲವರಿಗೆ ಪ್ರಶಸ್ತಿ ನೀಡಿ ಚಿತ್ರತಂಡ ಗೌರವಿಸಿದೆ. ಈ ವೇಳೆ, ಕಾಟೇರ ಟೈಟಲ್ ಕೊಟ್ಟಿದ್ದು ನಾನೇ ಎಂದ ನಿರ್ಮಾಪಕ ಉಮಾಪತಿಗೆ ದರ್ಶನ್ ಟಾಂಗ್ ಕೊಟ್ಟಿದ್ದಾರೆ. ಅಯ್ಯೋ ತಗಡೆ ಅಂದು ‘ರಾಬರ್ಟ್’ ಕತೆ ಕೊಟ್ಟಿದ್ದೆ ನಾವು. ಆದರೂ ಬುದ್ಧಿ ಕಲಿತ್ತಿಲ್ಲ ಅಂದರೆ ಏನು ಹೇಳೋಣ. ಕಾಟೇರ ಎಂತಹ ಒಳ್ಳೆಯ ಕಥೆಯ ಸಿನಿಮಾ ಯಾಕೆ ಬಿಟ್ಟೆ ಎಂದು ದರ್ಶನ್ ಪ್ರಶ್ನಿಸಿದ್ದಾರೆ. ಬಳಿಕ ‘ಕಾಟೇರ’ ಟೈಟಲ್ ಹೇಳಿದ್ದು ಕೂಡ ನಾನು ಎಂದು ದರ್ಶನ್ ಮಾತನಾಡಿದ್ದಾರೆ. ಅಂದು ಚಿತ್ರದ ಟೈಟಲ್ ರಿಜಿಸ್ಟರ್ ಮಾಡಿಸುವಂತೆ…

Read More

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ50 ದಿನಗಳನ್ನು ಪೂರೈಸಿದೆ. ಈ ಸಕ್ಸಸ್ ಸಂದರ್ಭದಲ್ಲಿ ನಟ ದರ್ಶನ್ ನೀಡಿರುವ ಹೇಳಿಕೆ ಇದೀಗ ಸಖತ್ ಸದ್ದು ಮಾಡ್ತಿದೆ. ಅಯ್ಯೋ ತಗಡೇ ಎಂದು ದರ್ಶನ್ ನಿರ್ಮಾಪಕ ಉಮಾಪತಿಗೆ ಟಾಂಗ್ ನೀಡಿದ್ದು ಇದಕ್ಕೆ ಉಮಾಪತಿ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಮಾತಿಗೆ ಪ್ರತಿಕ್ರಿಯಿಸಿದ ನಿರ್ಮಾಪಕ ಉಮಾಪತಿ, ಎಷ್ಟು ವರ್ಷ ಇಲ್ಲಿ ಗೂಟ ಹೊಡ್ಕೊಂಡು ಇರುತ್ತಾರೆ ನೋಡ್ತೀನಿ ಎಂದಿದ್ದಾರೆ. ‘ಕಾಟೇರ’ ಟೈಟಲ್ ಕೊಟ್ಟಿದ್ದು ನಾನೇ ಎಂದು ಉಮಾಪತಿ ನೀಡಿರುವ ಹೇಳಿಕೆಯಿಂದ ಇಬ್ಬರ ನಡುವೆ ವಾಕ್ಸಮರ ಶುರುವಾಗಿದೆ. ದರ್ಶನ್ ಟಾಂಗ್‌ಗೆ ನಿರ್ಮಾಪಕ ಉಮಾಪತಿ ಉತ್ತರ ನೀಡಿದ್ದಾರೆ. ನಮ್ಮ ಜಗಳವನ್ನು ಕುಟುಂಬವು ಕೂಡ ನೋಡುತ್ತದೆ. ಫ್ಯಾಮಿಲಿಗೆ ಯಾವ ರೀತಿ ಎಫೆಕ್ಟ್ ಆಗುತ್ತೆ ಎಂಬುದರ ಬಗ್ಗೆ ಉಮಾಪತಿ ಮಾತನಾಡಿದ್ದಾರೆ. ನಾನು ತಗಡು ವ್ಯಕ್ತಿ ಇರಬಹುದು ಆದರೆ ಅವರ ಲೈಫ್‌ಗೆ ನಾನು ವಾಚ್‌ಮ್ಯಾನ್ ಅಲ್ಲ. ಪದಗಳನ್ನು ಬಳಸುವಾಗ ಗಮನ ಇರಬೇಕು. ಸಾಯುವವರೆಗೂ ಯಾರು ನೋಡದೇ ಇರುವ ಸಕ್ಸಸ್ ಏನಲ್ಲ ಇದು. ಎಲ್ಲರೂ ನಾಳೆ ಮಣ್ಣಿಗೆ ಹೋಗಬೇಕು. ಎಷ್ಟು…

Read More

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾ ಆಟಗಾರ ವಿರಾಟ್ ಕೋಹ್ಲಿ ಗಂಡು ಮಗುವಿನ ಪೋಷಕರಾಗಿದ್ದಾರೆ. ನಟಿ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದು ಈ ಖುಷಿಯ ಸುದ್ದಿಯನ್ನು ಇನ್​ಸ್ಟಾಗ್ರಾಂನಲ್ಲಿ ವಿರಾಟ್ ಕೊಹ್ಲಿ ಬರೆದುಕೊಂಡಿದ್ದಾರೆ. ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಈಗಾಗಲೇ ಒಂದು ಹೆಣ್ಣು ಮಗುವಿದ್ದು, ಇದೀಗ ಗಂಡು ಮಗುವನ್ನು ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ಫೆಬ್ರವರಿ 15ರಂದೇ ಅನುಷ್ಕಾ ಶರ್ಮಾ ಗಂಡು ಮಗುವಿಗೆ ಜನ್ಮ ನೀಡಿದ್ದು ಇದೀಗ ವಿರಾಟ್ ಸಿಹಿ ಸುದ್ದಿಯನ್ನು ತಿಳಿಸಿದ್ದಾರೆ. ವಮಿಕಾಳ ತಮ್ಮನನ್ನು ಈ ಜಗತ್ತಿಗೆ ಸ್ವಾಗತಿಸಿದ್ದೇವೆ ಎಂದು ಎಲ್ಲರಿಗೂ ತಿಳಿಸಲು ಸಂತೋಷವಾಗುತ್ತಿದೆ.  ಈ ಸಂತಸದ ಸಮಯದಲ್ಲಿ ನಿಮ್ಮ ಆಶೀರ್ವಾದ ಮತ್ತು ಶುಭಹಾರೈಕೆಗಳನ್ನು ಬಯಸುತ್ತೇವೆ. ಈ ಸಮಯದಲ್ಲಿ ನಮ್ಮ ಗೌಪತ್ಯೆಯನ್ನು ಗೌರವಿಸಲು ವಿನಂತಿಸುತ್ತೇನೆ  ಎಂದು ನಟಿ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಮಗುವಿಗೆ ಈಗಾಗಲೇ ‘ಅಕಾಯ್‌’ ಎಂದು ಹೆಸರಿಟ್ಟಿದ್ದು, ವಿರುಷ್ಕಾ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. 2017ರಲ್ಲಿ ವಿವಾಹವಾದ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ 2021ರಲ್ಲಿ ಮೊದಲ…

Read More

ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್  ಅವರು ದುಭಾರಿ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಕಿಮ್ ಜಾಂಗ್ ಅವರ ವೈಯಕ್ತಿಕ ಬಳಕೆಗಾಗಿ ಈ ಕಾರು ನೀಡಲಾಗಿದೆಯಂತೆ. ಉಡುಗೊರೆ ನೀಡಿರುವುದಕ್ಕೆ ಕಿಮ್ ಸಹೋದರಿ ಪುಟಿನ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಜೊತೆಗೆ ಉಡುಗೊರೆಯು ಇಬ್ಬರು ಉನ್ನತ ನಾಯಕರ ನಡುವಿನ ವೈಯಕ್ತಿಕ ಸಂಬಂಧವನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ. ಈ ಉಡುಗೊರೆ ವಿಶ್ವಸಂಸ್ಥೆಯ ನಿಯಮಗಳ ಉಲ್ಲಂಘನೆಯಾಗಿರಬಹುದು ಎಂದು ಹೇಳಲಾಗುತ್ತಿದೆ. ಯಾಕೆಂದರೆ ವಿಶ್ವಸಂಸ್ಥೆಯು ರಷ್ಯಾ ಮತ್ತು ಉತ್ತರ ಕೊರಿಯಾ ನಡುವಿನ ವಹಿವಾಟುಗಳನ್ನು ನಿಷೇಧಿಸಿದೆ. ರಷ್ಯಾ ನಿರ್ಮಿತ ಕಾರನ್ನು ಫೆಬ್ರವರಿ 18 ರಂದು ಕಿಮ್‌ನ ಉನ್ನತ ಸಹಾಯಕರಿಗೆ ಹಸ್ತಾಂತರಿಸಲಾಗಿದೆ ಸುದ್ದಿ ಸಂಸ್ಥೆಯೊಂದು ವರಿ ಮಾಡಿದ್ದು, ಆದರೆ ಈ ಕಾರನ್ನು ರಷ್ಯಾದಿಂದ ಕಳುಹಿಸಲಾಗಿದೆ ಎಂಬುದನ್ನು ಉಲ್ಲೇಖಿಸಿಲ್ಲ. ಐಷಾರಾಮಿ ಕಾರುಗಳ ಮೇಲಿನ ಕಿಮ್‌ ಒಲವನ್ನು ಪರಿಗಣಿಸಿ ಪುಟಿನ್ ಈ ವಿಶೇಷ ಉಡುಗೊರೆಯನ್ನು ಕಳುಹಿಸಿದ್ದಾರೆ.

Read More