Author: Author AIN

ಆಮ್‌ಸ್ಟರ್‌ಡಾಂ: ನೆದರ್‌ಲ್ಯಾಂಡ್ಸ್‌ ನ ಮಾಜಿ ಪ್ರಧಾನಿ ಡ್ರೀಸ್ ವಾನ್ ಆಗ್ಟ್ ಹಾಗೂ ಅವರ ಪತ್ನಿ ಯುಜೀನ್ ಒಟ್ಟಿಗೆ ದಯಾಮರಣದ ಮೂಲಕ ಜೀವನ ಅಂತ್ಯಗೊಳಿಸುವ ಆಯ್ಕೆ ಅನುಸರಿಸಿದ್ದಾರೆ. 93 ವರ್ಷದ ದಂಪತಿ ತಮ್ಮ ಹುಟ್ಟೂರು ನಿಜ್ಮೆಗೆನ್‌ನಲ್ಲಿ ಕೈ ಕೈ ಹಿಡಿದುಕೊಂಡು ‘ಸುಖಮರಣ’ ಅಪ್ಪಿದ್ದಾರೆ. 1977 ರಿಂದ 1982ರ ಅವಧಿಯಲ್ಲಿ ಡ್ರೀಸ್ ವಾನ್ ಆಗ್ಟ್ ಅವರು ನೆದರ್‌ಲ್ಯಾಂಡ್ಸ್ ಪ್ರಧಾನಿಯಾಗಿದ್ದರು. ಕ್ರಿಶ್ಚಿಯನ್ ಡೆಮಾಕ್ರಟಿಕ್ ಅಪೀಲ್ ಪಕ್ಷದ ಮುಂಚೂಣಿ ನಾಯಕರಾಗಿದ್ದರು. ಅವರ ರಾಜಕೀಯ ಜೀವನ ಪಯಣ ತತ್ವಾದರ್ಶ ಹಾಗೂ ಮೌಲ್ಯಗಳಿಂದ ಕೂಡಿತ್ತು ಎನ್ನಲಾಗಿದೆ. ತಮ್ಮ ರಾಜಕೀಯ ಜೀವನ ಮುಗಿದ ಬಳಿಕವೂ ಅವರು ಅವುಗಳಿಗೆ ಬದ್ಧರಾಗಿದ್ದು, 2009ರಲ್ಲಿ ಪ್ಯಾಲೆಸ್ತೀನಿಯನ್ನರ ಹಕ್ಕುಗಳ ಪರವಾಗಿ ಧ್ವನಿ ಎತ್ತುವ ದಿ ರೈಟ್ಸ್ ಫೋರಮ್ ಅನ್ನು ಸ್ಥಾಪಿಸಿದ್ದರು. ನೆದರ್‌ಲ್ಯಾಂಡ್ಸ್‌ನಲ್ಲಿ ಜನತೆ ತಮಗೆ ಬದುಕುವ ಇಚ್ಛೆ ಇಲ್ಲದಿರುವಾಗ ದಯಾಮರಣ ವ್ಯವಸ್ಥೆಯನ್ನು ಅನುಸರಿಸುವ  ಅವಕಾಶವಿದೆ. ಅದರಂತೆ ಈ ದಂಪತಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದು ದಿ ರೈಟ್ಸ್ ಫೋರಂ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಗಂಡ ಹೆಂಡತಿ ಇಬ್ಬರೂ…

Read More

ವಾಷಿಂಗ್ಟನ್: ಭಾರತೀಯರು ಮತ್ತು ಭಾರತೀಯ ಅಮೆರಿಕನ್ ವಿದ್ಯಾರ್ಥಿಗಳ ಮೇಲಿನ ದಾಳಿಗಳನ್ನು ತಡೆಯಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಅವರ ಆಡಳಿತವು ಶ್ರಮಿಸುತ್ತಿದೆ ಎಂದು ಶ್ವೇತಭವನ ತಿಳಿಸಿದೆ. ದೇಶದ ವಿವಿಧ ಭಾಗಗಳಲ್ಲಿ ಭಾರತೀಯರು ಮತ್ತು ಭಾರತೀಯ ಅಮೆರಿಕನ್ ವಿದ್ಯಾರ್ಥಿಗಳ ಮೇಲೆ ನಡೆದಿರುವ ದಾಳಿಗಳ ನಡುವೆಯೇ ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ಕಾರ್ಯತಂತ್ರದ ಸಂವಹನಗಳ ಸಂಯೋಜಕ ಜಾನ್ ಕಿರ್ಬಿ ಈ ಹೇಳಿಕೆ ನೀಡಿದ್ದಾರೆ. ‘ಹಿಂಸಾಚಾರಿಗಳಿಗೆ ಯಾವುದೇ ಕ್ಷಮೆ ರೀತಿಯ ಇಲ್ಲ. ಅದರಲ್ಲೂ ಜನಾಂಗ, ಲಿಂಗ, ಧರ್ಮ ಅಥವಾ ಯಾವುದೇ ಇತರ ಅಂಶಗಳ ಆಧಾರದ ಮೇಲೆ ನಡೆಯುವ ಹಿಂಸಾಚಾರಗಳನ್ನು ನಾವು ಸಹಿಸಲ್ಲ. ಇಂತಹ ಘಟನೆಗಳು ಅಮೆರಿಕದಲ್ಲಿ ಸ್ವೀಕಾರಾರ್ಹವಲ್ಲ ಎಂದಿದ್ದಾರೆ. ‘ಅಧ್ಯಕ್ಷ ಜೋ ಬೈಡನ್ ಮತ್ತು ನಮ್ಮ ಆಡಳಿತವು ಆ ರೀತಿಯ ದಾಳಿಗಳನ್ನು ತಡೆಯಲು ಶ್ರಮಿಸುತ್ತಿದೆ. ಈ ಸಂಬಂಧ ರಾಜ್ಯ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ’ ಎಂದು ಹೇಳಿದ್ದಾರೆ.

Read More

ಪಾಕಿಸ್ತಾನ ಮಾಜಿ ಪ್ರಧಾನಿ, ಕ್ರಿಕೆಟಿಗ ಇಮ್ರಾನ್ ಖಾನ್ ಪತ್ನಿ ಜೈಲಿನಲ್ಲಿ ಅಸ್ವಸ್ಥರಾಗಿದ್ದಾರೆ ಎಂದು ಆಕೆಯ ಸಹೋದರಿ ದೂರು ನೀಡಿದ್ದಾರೆ. ನನ್ನ ಸಹೋದರಿಗೆ ಜೈಲಿನಲ್ಲಿ ವಿಷಾಹಾರ ನೀಡಲಾಗುತ್ತಿದೆ. ಇದೇ ಕಾರಣಕ್ಕೆ ಆಕೆ ಅಸ್ವಸ್ಥಳಾಗಿದ್ದಾಳೆ ಎಂದು ದೂರಿದ್ದಾರೆ. ಅಧಿಕಾರಿಗಳು ನಮ್ಮ ಅಳಲು ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಆಕೆಯನ್ನು ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಸಹೋದರಿ ಮರ್ಯಮ್ ರಿಯಾಝ್ ಆರೋಪಿಸಿದ್ದಾರೆ. ಇಮ್ರಾನ್ ಅವರ ಮೂರನೇ ಪತ್ನಿ ಬುಶ್ರಾ ಬೀಬಿಗೆ ಅಕ್ರಮ ವಿವಾಹಕ್ಕಾಗಿ 14 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಸಂಬಂಧ ಅವರು ಅಡಿಯಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಜೈಲಿನಲ್ಲಿ ಆಕೆಗೆ ಸಮರ್ಪಕವಲ್ಲದ ಆಹಾರ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ನನ್ನ ಸಹೋದರಿಗೆ ಸಮರ್ಪಕವಲ್ಲದ ಆಹಾರ ನೀಡಲಾಗುತ್ತಿದೆ. ಆಕೆ ಕೆಲವು ದಿನಗಳಿಂದ ನೋವಿನಲ್ಲಿದ್ದಾಳೆ. ಕಳೆದ ಆರು ದಿನಗಳಿಂದ ಏನೂ ತಿನ್ನಲಾಗದ ಸ್ಥಿತಿಯಲ್ಲಿದ್ದಾಳೆ. ಆಕೆಗೆ ಮನೆ ಆಹಾರ ನೀಡಲೂ ನಿರಾಕರಿಸಲಾಗುತ್ತಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಮರ್ಯಮ್ ಆಗ್ರಹಿಸಿದ್ದಾರೆ. ನನ್ನ ಸಹೋದರಿ ಯಾವತ್ತೂ ಖಾನ್ ಸಾಹಿಬ್ (ಇಮ್ರಾನ್ ಖಾನ್)…

Read More

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ – ಪಾಲಕ್ಕಾಡ್ ಸಂಶೋಧಕರು ಮಾನವ ಮೂತ್ರದಿಂದ ವಿದ್ಯುತ್ ಉತ್ಪಾದಿಸುವ ಹೊಸ ವಿಧಾನವನ್ನು ಕಂಡುಹಿಡಿದಿದ್ದಾರೆ. ವಿಶ್ವಾದ್ಯಂತ ಇಂಧನ ಹೆಚ್ಚುತ್ತಿರುವ ಬೇಡಿಕೆಗೆ ಉತ್ತವಾಗಿ ಐಐಟಿ ತಂಡ ಈ ಹೊಸ ಆವಿಷ್ಕಾರವನ್ನು ಕಂಡು ಹಿಡಿದಿದೆ. ಇದರ ಭಾಗವಾಗಿ, ಎಲೆಕ್ಟ್ರೋಕೆಮಿಕಲ್ ರಿಸೋರ್ಸ್ ರಿಕವರಿ ರಿಯಾಕ್ಟರ್ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ವಿಧಾನದಲ್ಲಿ ವಿದ್ಯುತ್ ಜೊತೆಗೆ ಜೈವಿಕ ಗೊಬ್ಬರವನ್ನು ಉತ್ಪಾದಿಸಲಿದೆ. ಈ ಹೊಸ ತಂತ್ರಜ್ಞಾನದೊಂದಿಗೆ ಮೂತ್ರದ ಅಯಾನಿಕ್ ಬಲವನ್ನು ಬಳಸಲಾಗುತ್ತದೆ. ವಿದ್ಯುತ್ ಉತ್ಪಾದಿಸಲು ಎಲೆಕ್ಟ್ರೋಕೆಮಿಕಲ್ ಪ್ರತಿಕ್ರಿಯೆಗಳನ್ನು ಉತ್ತೇಜಿಸುತ್ತದೆ. ಅಲ್ಲದೆ ಸಾರಜನಕ, ರಂಜಕ ಮತ್ತು ಮೆಗ್ನೀಸಿಯಮ್ ಜೈವಿಕ ಗೊಬ್ಬರವನ್ನು ತಯಾರಿಸಲು ಉಪಯುಕ್ತವಾಗಿದೆ. ಈ ಸಂಯೋಜಿತ ತಂತ್ರಜ್ಞಾನವು ಎಲೆಕ್ಟ್ರೋಕೆಮಿಕಲ್ ರಿಯಾಕ್ಟರ್, ಅಮೋನಿಯಾ ಆಡ್ಸೋರ್ಪ್ಶನ್ ಕಾಲಮ್, ಡಿಕಲೋರೈಸೇಶನ್, ಕ್ಲೋರಿನೇಶನ್ ಚೇಂಬರ್, ಪ್ಲಂಬಿಂಗ್, ಎಲೆಕ್ಟ್ರಿಕಲ್ ಮ್ಯಾನಿಫೋಲ್ಡ್​​ಗಳನ್ನು ಒಳಗೊಂಡಿದೆ. ಮೂತ್ರವನ್ನು ಇಆರ್ ಆರ್ ಗೆ ನೀಡಲಾಗುತ್ತದೆ ಇವು ಎಲೆಕ್ಟ್ರೋಕೆಮಿಕಲ್ ಪ್ರತಿಕ್ರಿಯೆಗಳನ್ನು ಉತ್ತೇಜಿಸುತ್ತದೆ. ಅದು ಏಕಕಾಲದಲ್ಲಿ ವಿದ್ಯುತ್ ಮತ್ತು ಜೈವಿಕ ಗೊಬ್ಬರವನ್ನು ಉತ್ಪಾದಿಸುತ್ತದೆ. ಇದರಿಂದ ವಿದ್ಯುತ್ ಜತೆಗೆ ಜೈವಿಕ ಗೊಬ್ಬರ ಉತ್ಪಾದನೆಯಾಗುತ್ತದೆ. ಇದು…

Read More

ಮಲಯಾಳಂ ಚಿತ್ರಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟ ನಟಿ ಅನುಪಮಾ ಪರಮೇಶ್ವರನ್ ಇದೀಗ ಬಹುಭಾಷಾ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ನವಿನ್ ಪೌಲಿ ನಟನೆಯ ಪ್ರೇಮಂ ಚಿತ್ರದ ಮೂಲಕ ನಟನೆ ಆರಂಭಿಸಿದ ನಟಿಗೆ ಈ ಸಿನಿಮಾ ಸಖತ್ ಜಯಪ್ರಿಯತೆ ನೀಡಿತು. ನಟಿ ಅನುಪಮಾ ಪರಮೇಶ್ವರನ್ ತೆರೆಮೇಲೆ ಕಿಸ್ ಮಾಡುವ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದು ಕಡಿಮೆ. ಇದೇ ಮೊದಲ ಬಾರಿಗೆ ಲಿಪ್ ಕಿಸ್ ಮಾಡುವ ಪಾತ್ರದಲ್ಲಿ ನಟಿಸು ಮೂಲಕ ಸಖತ್ ಸದ್ದು ಮಾಡ್ತಿದ್ದಾರೆ. ಸದ್ಯ ಅನುಪಮಾ ಪರಮೇಶ್ವರನ್ ನಟನೆಯ ‘ಟಿಲ್ಲು ಸ್ಕ್ವೇರ್’ ಸಿನಿಮಾ ಟ್ರೇಲರ್ ರಿಲೀಸ್ ಆಗಿದ್ದು ಟ್ರೈಲರ್ ನಲ್ಲಿ ನಟಿ ಸಖತ್ ಹಾಟ್ ಅಗಿ ಕಾಣಿಸಿಕೊಂಡಿದ್ದಾರೆ. ‘ಡಿಜೆ ಟಿಲ್ಲು’ ಚಿತ್ರದ ಸೀಕ್ವೆಲ್​ ‘ಟಿಲ್ಲು ಸ್ಕ್ವೇರ್’. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಸಿದ್ದು ಜೊನ್ನಲಗಡ್ಡ ಅವರು ‘ಟಿಲ್ಲು ಸ್ಕ್ವೇರ್’ ಚಿತ್ರಕ್ಕೆ ಹೀರೋ. ಅನುಪಮಾ ಅವರು ಪಕ್ಕದ ಮನೆ ಹುಡುಗಿ ರೀತಿಯ ಪಾತ್ರಗ ಮೂಲಕ ಹೆಚ್ಚು ಗಮನ ಸೆಳೆದರು. ಇತ್ತೀಚೆಗೆ ಅವರು…

Read More

ಕಠ್ಮಂಡು: ಅಮೆರಿಕಕ್ಕೆ ತೆರಳಲು ನೆರವು ನೀಡುವುದಾಗಿ ಭರವಸೆ ನೀಡಿ ಕಳೆದ ಎರಡು ವಾರಗಳಿಂದ ಗೃಹಬಂಧನದಲ್ಲಿ ಇರಿಸಲಾಗಿದ್ದ ಭಾರತದ 11 ಮಂದಿಯನ್ನು ನೇಪಾಳದಲ್ಲಿ ರಕ್ಷಿಸಲಾಗಿದೆ. ಮಾನವ ಕಳ್ಳಸಾಗಣೆ ಜಾಲವನ್ನು ಭೇದಿಸಿರುವ ನೇಪಾಳ ಪೊಲೀಸರು, ಈ ಜಾಲದಲ್ಲಿ ಶಾಮೀಲಾಗಿದ್ದ ಒರ್ವ ನೇಪಾಳಿ ಹಾಗೂ ಎಂಟು ಮಂದಿ ಭಾರತೀಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣವು ಬಾಲಿವುಡ್‌ ನಟ ಶಾರುಕ್ ಖಾನ್‌ ನಟನೆಯ ‘ಡಂಕಿ’ ಸಿನಿಮಾ ಕಥೆಗೆ ಹೋಲಿಕೆಯಾಗುತ್ತಿದ್ದ ಕಾರಣ, ನೇಪಾಳ ಪೊಲೀಸರು ಕಾರ್ಯಾಚರಣೆಯನ್ನು ‘ಆಪರೇಷನ್ ಡಂಕಿ’ ಎಂದು ಹೆಸರಿಸಿದ್ದಾರೆ. ಸಂತ್ರಸ್ತರು ಮತ್ತು ಮಾಫಿಯಾದಲ್ಲಿ ಸಕ್ರಿಯವಾಗಿದ್ದ ಆರೋಪಿಗಳು ಭಾರತದ ಪಂಜಾಬ್‌ ಮತ್ತು ಹರಿಯಾಣ ರಾಜ್ಯದವರಾಗಿರಬಹುದು ಎನ್ನಲಾಗಿದೆ. ಮೆಕ್ಸಿಕೊ ಮಾರ್ಗವಾಗಿ ಅಮೆರಿಕಕ್ಕೆ ಕಳುಹಿಸಿಕೊಡುವುದಾಗಿ ಆಮಿಷವೊಡ್ಡಿ ಸಂತ್ರಸ್ತರನ್ನು ಕಠ್ಮಂಡು ಹೊರವಲಯದ ಬಾಡಿಗೆ ಮನೆಯೊಂದರಲ್ಲಿ ಎರಡು ವಾರಗಳಿಗೂ ಹೆಚ್ಚು ಸಮಯದಿಂದ ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕಠ್ಮಂಡು ಜಿಲ್ಲಾ ಪೊಲೀಸ್‌ ತಂಡ, ಧೋಬಿಖೊಲಾ ಕಾರಿಡಾರ್‌ನಲ್ಲಿರುವ ರಾತೊಪುಲ್‌ನಲ್ಲಿ ಬುಧವಾರ ರಾತ್ರಿ ಆರಂಭಿಸಿದ ಕಾರ್ಯಾಚರಣೆಯು ಗುರುವಾರ ನಸುಕಿನವರೆಗೂ ನಡೆಯಿತು. ‌ಅಮೆರಿಕಕ್ಕೆ ಕಳುಹಿಸುವುದಾಗಿ ಸುಳ್ಳು ಭರವಸೆ…

Read More

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬರ್ತಡೇ ಸಂಭ್ರಮ. ಮಧ್ಯರಾತ್ರಿಯಿಂದಲೇ ದಾಸನ ಹುಟ್ಟುಹಬ್ಬದ ಸೆಲೆಬ್ರೇಷನ್ ಜೋರಾಗಿದ್ದು ಸಿನಿಮಾ ತಂಡದವರು ಅಭಿಮಾನಿಗಳಿಗೆ ಭರ್ಜರಿ ಉಡುಗೊರೆಯನ್ನೇ ನೀಡಿದ್ದಾರೆ.  ಸಾಮಾನ್ಯವಾಗಿ ದರ್ಶನ್ ಒಂದು ಸಿನಿಮಾ ಆದ ಬಳಿಕವೇ ಮತ್ತೊಂದು ಸಿನಿಮಾ ಒಪ್ಪಿಕೊಳ್ಳುವುದು ವಾಡಿಕೆ. ಸಿನಿಮಾ ಅನೌನ್ಸ್ ಕೂಡ ಹಾಗೆಯೇ ಆಗುತ್ತವೆ. ಆದರೆ, ಈ ಬಾರಿ ಆ ನಿಯಮವನ್ನು ದರ್ಶನ್ ಮುರಿದಿದ್ದಾರೆ. ದರ್ಶನ್ ಸಿನಿಮಾ ರಂಗಕ್ಕೆ ಬಂದು 25 ವರ್ಷಗಳು ಸಂದಿರುವ ಸಂದರ್ಭದಲ್ಲಿ ಹಾಗೂ ಹುಟ್ಟುಹಬ್ಬದ ಪ್ರಯುಕ್ತ ಒಟ್ಟು ಒಂಬತ್ತು ಸಿನಿಮಾಗಳನ್ನು ಘೋಷಣೆ ಮಾಡಲಾಗಿದೆ. ಸದ್ಯ ದರ್ಶನ್ ಡೆವಿಲ್ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾವನ್ನು ಸೇರಿಸಿದರೆ ಒಟ್ಟು 10 ಚಿತ್ರದಲ್ಲಿ ದಾಸನ ಕೈಯಲ್ಲಿವೆ. ಡೆವಿಲ್ ಸಿನಿಮಾವನ್ನು ಮಿಲನ ಚಿತ್ರ ಖ್ಯಾತಿಯ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದರೆ, ಇನ್ನೆರಡು ಚಿತ್ರಗಳನ್ನು ತರುಣ್ ಸುಧೀರ್ ನಿರ್ದೇಶನ ಮಾಡುತ್ತಿದ್ದಾರೆ. ರಮೇಶ್ ಪಿಳ್ಳೈ, ಶೈಲಜಾ ನಾಗ್ ಮತ್ತು ಬಿ.ಸುರೇಶ, ಮೋಹನ್ ನಟರಾಜನ್, ಸೂರಪ್ಪ ಬಾಬು, ಸಚ್ಚಿದಾನಂದ ಇಂಡುವಾಳ, ಕೆ.ಮಂಜುನಾಥ್, ರಘುನಾಥ್ ಸೋಗಿ, ಮಹೇಶ್…

Read More

ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ನಟಿ ರಶ್ಮಿಕಾ ಮಂದಣ್ಣ ಸಖತ್ ಸದ್ದು ಮಾಡ್ತಿದ್ದಾರೆ. ಪರಭಾಷೆಯಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ ಟಾಲಿವುಡ್​ನ ಟಾಪ್ ನಟಿ ಎನಿಸಿಕೊಂಡು ಈಗ ಬಾಲಿವುಡ್​ನಲ್ಲಿಯೂ ಹವಾ ಎಬ್ಬಿಸಿದ್ದಾರೆ. ಬಾಲಿವುಡ್​ನ ಸ್ಟಾರ್ ನಟರುಗಳೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದೆಲ್ಲದರ ನಡುವೆ ಗೌರವವೊಂದಕ್ಕೆ ರಶ್ಮಿಕಾ ಮಂದಣ್ಣ ಪಾತ್ರರಾಗಿದ್ದಾರೆ. ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಹೆಸರು ಸೇರ್ಪಡೆಗೊಂಡಿದೆ. ಅಂತರಾಷ್ಟ್ರೀಯ ಮನ್ನಣೆಯುಳ್ಳ ಫೋರ್ಬ್ಸ್ ಪ್ರತಿವರ್ಷದಂತೆ ಈ ವರ್ಷವೂ ಭಾರತದ ಸಾಧಕರ ಪಟ್ಟಿ ಬಿಡುಗಡೆ ಮಾಡಿದೆ. ಆ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಸ್ಥಾನ ಪಡೆದುಕೊಂಡಿದ್ದಾರೆ. ಫೋರ್ಬ್ಸ್ ಇಂಡಿಯಾ ಕಳೆದ ವರ್ಷ ಭಾರತದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 30 ವರ್ಷದ ಒಳಗಿನ 30 ಜನರ ಪಟ್ಟಿಯನ್ನು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮನೊರಂಜನಾ ಕ್ಷೇತ್ರದಲ್ಲಿ ರಶ್ಮಿಕಾ ಮಂದಣ್ಣರ ಹೆಸರಿದೆ. 27 ವರ್ಷದ ರಶ್ಮಿಕಾ ಮಂದಣ್ಣ ಮನೊರಂಜನಾ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆ ಗುರುತಿಸಿ ಫೋರ್ಬ್ಸ್ ಇಂಡಿಯಾ ಭಾರತದ 30ರ…

Read More

ಬಿಗ್ ಬಾಸ್ ಸ್ಪರ್ಧಿಗಳು ಮನೆಯಿಂದ ಆಚೆ ಬಂದ ಬಳಿಕವೂ ತಮ್ಮ ಸ್ನೇಹ ಮುಂದುವರೆಸಿದ್ದಾರೆ. ಇದೀಗ ಬಿಗ್ ಬಾಸ್ ಸ್ಪರ್ಧಿ ತನಿಷಾ ಕುಪ್ಪಂಡ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ತಂಗಿಯ ಮನೆಗೆ ಆಗಮಿಸಿ ಕಾರ್ತಿಕ್ ತಂಗಿಯ ಮಗುವಿಗೆ ಉಡುಗೊರೆ ನೀಡಿದ್ದಾರೆ. ಕಾರ್ತಿಕ್ ಅವರ ತಂಗಿಯ ಮನೆಗೆ ಭೇಟಿ ನೀಡಿರುವ ತನಿಷಾ ಕುಪ್ಪಂಡ ಮಗುವಿಗೆ ಚಿನ್ನದ ಉಂಗುರುವನ್ನು ಉಡುಗೊರೆಯಾಗಿ ನೀಡಿದ್ದಾರೆ. ಕೆಲ ಸಮಯ ಮಗುವಿನೊಂದಿಗೆ ಕಳೆದಿದ್ದು ಅದರ ಸುಂದರ ಕ್ಷಣವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ, ಕಾರ್ತಿಕ್ ಅವರ ಸಹಾಯವನ್ನೂ ಗುಣಗಾನ ಮಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಕಾರ್ತಿಕ್ ಅವರಿಗೆ ತನಿಷಾ ಮತ್ತು ತನಿಷಾಗೆ ಕಾರ್ತಿಕ್ ಸಪೋರ್ಟ್ ಮಾಡಿಕೊಂಡು ಆಟವಾಡಿದ್ದಾರೆ. ಟಾಸ್ಕ್ ವಿಚಾರದಲ್ಲಿ ಜಗಳ ಕೂಡ ಮಾಡಿದ್ದಾರೆ. ಆದರೆ ಅದೇನೆ ಇದ್ದರೂ ಮನೆಯಿಂದ ಹೊರ ಬಂದ ಬಳಿಕ ಸ್ನೇಹವನ್ನು ಮುಂದುವರೆಸಿದ್ದಾರೆ.

Read More

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಸಲಾರ್ ಸಿನಿಮಾ ಹಿಟ್ ಆದ ಖುಷಿಯಲ್ಲಿದ್ದಾರೆ. ಸದ್ಯ ನಟ ಹೊಸ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿದ್ದು ಈ ಮಧ್ಯೆ ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಪ್ರಭಾಸ್ ಜೀವನದಲ್ಲಿ ಸಮಸ್ಯೆ ಬರಲಿದೆ ಎಂದಿದ್ದಾರೆ. ಸದ್ಯ ನಟ ಪ್ರಭಾಸ್ ಯುರೋಪ್‌ ಪ್ರವಾಸದಲ್ಲಿದ್ದಾರೆ. ಹಿಂದೊಮ್ಮೆ ಮಂಡಿ ನೋವಿನ ಆಪರೇಶನ್ ಯುರೋಪ್‌ ಗೆ ತೆರಳಿದ್ದ ಪ್ರಭಾಸ್ ಇದೀಗ ಮತ್ತೆ ಅದೇ ದೇಶಕ್ಕೆ ಹೋಗಿದ್ದಾರೆ. ಇದೇ ಸಮಯದಲ್ಲಿ ಖ್ಯಾತ ಜ್ಯೋತಿಷಿ ವೇಣುಸ್ವಾಮಿ ಭವಿಷ್ಯ ನುಡಿದಿದ್ದಾರೆ. ಇದನ್ನ ಕೇಳಿ ಫ್ಯಾನ್ಸ್ ಶಾಕ್ ಆಗಿದ್ದಾರೆ. ‘ಸಲಾರ್’ ಸಿನಿಮಾವನ್ನು ಬರೀ ಅವರ ಅಭಿಮಾನಿಗಳು ಮಾತ್ರ ನೋಡುತ್ತಾರೆ ಎಂದು ಹೇಳಿದ್ದೆ. ಅದು ನಿಜವಾಗಿದೆ. ಈಗ ಇನ್ನೊಂದು ಸತ್ಯ ಇದೆ. ಅದೇ ಪ್ರಭಾಸ್ ಆರೋಗ್ಯ. ಅವರ ಆರೋಗ್ಯದಲ್ಲಿ ಏರುಪೇರಾಗಲಿದೆ. ಜೊತೆಗೆ ವೈಯಕ್ತಿಕ ಬದುಕಿನಲ್ಲಿ ಅನೇಕ ಅಡೆತಡೆ ಬರಲಿವೆ. ಇದು ಸತ್ಯವಾಗಲಿದೆ ಎಂದಿದ್ದಾರೆ. ಮೂರು ವರ್ಷಗಳ ಹಿಂದೆಯೇ ವೇಣುಸ್ವಾಮಿ ಇದೇ ರೀತಿ ಪ್ರಭಾಸ್ ಹಿಂದೆ ಬಿದ್ದಿದ್ದರು. ಮೂರು ಸಿನಿಮಾ ಸೋಲಲಿದೆ. ಸಲಾರ್ ಗೆದ್ದರೂ ಅದನ್ನು…

Read More