Author: Author AIN

ಅಬುದಾಬಿ: ಅಬುದಾಬಿಯಲ್ಲಿ ಇಂದು ಆಯೋಜಿಸಿರುವ ಅಹ್ಲಾನ್ ಮೋದಿ’ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಆತ್ಮೀಯವಾಗಿ ಸ್ವಾಗತಿಸಿದರು. ಸುದ್ದಿ ಸಂಸ್ಥೆ ಹಂಚಿಕೊಂಡ ವೀಡಿಯೊದಲ್ಲಿ ಉಭಯ ನಾಯಕರು ಪರಸ್ಪರ ತಬ್ಬಿಕೊಂಡು ಉಭಯ ಕುಶಲೋಪಚರಿ ವಿಚಾರಿಸಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿಯವರು ಆಗಮಿಸಿದಾಗ ಗಾರ್ಡ್ ಆಫ್ ಹಾನರ್ ಸ್ವೀಕರಿಸಿದ್ದರು. ಪ್ರಧಾನಿ ಮೋದಿ 2015 ರಿಂದ ಏಳನೇ ಬಾರಿಗೆ ಮತ್ತು ಕಳೆದ ಎಂಟು ತಿಂಗಳಲ್ಲಿ ಮೂರನೇ ಬಾರಿಗೆ ಯುಎಇಗೆ ಭೇಟಿ ನೀಡಿದ್ದಾರೆ. ಯುಎಇಗೆ ಆಗಮಿಸಿದ ಪ್ರಧಾನಿ ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾಗಿದ್ದಾರೆ.

Read More

ಉಪೇಂದ್ರ ನಟನೆಯ ಸಿನಿಮಾಗಳ ಸುದ್ದಿ ಕೇಳೋಕೆ ಅಭಿಮಾನಿಗಳು ಕಾಯ್ತಿರ್ತಾರೆ. ಸದಾ ವಿಭೀನ್ನವಾಗಿ ತೆರೆ ಮೇಲೆ ಕಾಣಿಸಿಕೊಳ್ಳುವ ಉಪೇಂದ್ರ ಇದೀಗ ಪ್ರೇಮಿಗಳ ದಿನದಂದು ಯುಐ ಚಿತ್ರದ ಫಸ್ಟ್ ಸಿಂಗಲ್ ಪ್ರೊಮೋ ರಿಲೀಸ್ ಮಾಡಲು ರೆಡಿಯಾಗಿದ್ದಾರೆ. ನಾಳೆ (ಫೆ.14) ಬೆಳಗ್ಗೆ 10 ಗಂಟೆಗೆ ಫಸ್ಟ್ ಸಿಂಗಲ್ ‍ಪ್ರೊಮೋ ರಿಲೀಸ್ ಆಗಲಿದೆ. ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಯುಐ ಚಿತ್ರದ ಡಬ್ಬಿಂಗ್ ಕೆಲಸದಲ್ಲಿ ಉಪೇಂದ್ರ ತೊಡಗಿಕೊಂಡಿದ್ದಾರೆ ಎಂದು ನಿರ್ಮಾಪಕರಲ್ಲಿ ಒಬ್ಬರಾದ ಕೆ.ಪಿ ಶ್ರೀಕಾಂತ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಜೊತೆಗೆ ಉಪೇಂದ್ರ ಅವರು ಡಬ್ಬಿಂಗ್ ಮಾಡುತ್ತಿರುವ ವಿಡಿಯೋವನ್ನು ಅವರು ಶೇರ್ ಮಾಡಿದ್ದಾರೆ. ಈ ಹಿಂದೆ ಯುಐ ಸಿನಿಮಾದ ಟೀಸರ್  ರಿಲೀಸ್ ಆಗಿತ್ತು. ಅದಕ್ಕೆ  ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ 23 ಮಿಲಿಯನ್ ವೀಕ್ಷಣೆ ಪಡೆದುಕೊಂಡಿತ್ತು. ಈ ಖುಷಿಯಲ್ಲಿ ಉಪ್ಪಿ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ವೀಕ್ಷಣೆಗೆ ಧನ್ಯವಾದ ತಿಳಿಸಿದ್ದರು.

Read More

ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಸಾಕಷ್ಟು ಮಂದಿ ಬೇರೆ ಬೇರೆ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ‘ಬಿಗ್ ಬಾಸ್ ಸೀಸನ್ 6’ರ ರನ್ನರ್ ಅಪ್ ನವೀನ್ ಸಜ್ಜು ನಟನೆಯತ್ತ ಮುಖ ಮಾಡಿದ್ದಾರೆ. ತಮ್ಮ ಗಾಯನದ ಮೂಲಕ ಜನರ ಮನಗೆದ್ದ ನವೀನ್ ಈಗ ಕಿರುತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ‘ಚುಕ್ಕಿತಾರೆ’ ಎಂಬ ಹೊಸ ಧಾರವಾಹಿಯಲ್ಲಿ ಕಥೆ ಹೇಳಲು ಮುಂದಾಗಿದ್ದಾರೆ. ಬಿಗ್ ಬಾಸ್ ಶೋ ಮುಗಿದ ಬಳಿಕ ಸಾಲು ಸಾಲು ಧಾರಾವಾಹಿಗಳು ಪ್ರಸಾರವಾಗುತ್ತಿವೆ. ‘ಚುಕ್ಕಿತಾರೆ’ ಹೆಸರಿನ ಭಿನ್ನ ಕಥೆ ತೋರಿಸಲು ವಾಹಿನಿ ಸಜ್ಜಾಗಿದ್ದು, ಸದ್ಯ ಧಾರವಾಹಿ ಪ್ರೋಮೋ ನೋಡುಗರ ಗಮನ ಸೆಳೆಯುತ್ತಿದೆ. ಸದ್ಯ ರಿವೀಲ್ ಆಗಿರುವ ಪ್ರೋಮೋದಲ್ಲಿ ಹಳೆಯ ಕಾರಿನ ಮುಂದೆ ಇಬ್ಬರು ಹುಡುಗಿಯರು ನಿಂತು, ತಮ್ಮಿಷ್ಟದ ಹೆಸರುಗಳನ್ನು ಬರೆದಿದ್ದಾರೆ. ಅದೇ ಸಮಯಕ್ಕೆ ನವೀನ್ ಸಜ್ಜು ಕಲರ್‌ಫುಲ್ ಬಲೂನ್‌ಗಳನ್ನು ತಂದಿದ್ದಾರೆ. ಬಳಿಕ ಕಾರಿನ ಮೇಲೆ ‘ಚುಕ್ಕಿತಾರೆ’ ಎಂದು ಬರೆದು ನಗುತ್ತಲೇ ಮುಂದೆ ಸಾಗಿದ್ದಾರೆ. ನವೀನ್ ಸಜ್ಜು ಅವರು ಶರ್ಟ್ ಮತ್ತು ಪಂಚೆ ಧರಿಸಿ ಹಳ್ಳಿ ಹುಡುಗನ ಗೆಟಪ್‌ನಲ್ಲಿ…

Read More

ಬಾಲಿವುಡ್ ನಟಿ, ವಿರಾಟ್ ಕೋಹ್ಲಿ ಪತ್ನಿ ನಟಿ ಅನುಷ್ಕಾ ಶರ್ಮಾ ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ವಿಚಾರದಿಂದ ಪದೇ ಪದೇ ಸುದ್ದಿಯಲ್ಲಿದ್ದಾರೆ. ಅನುಷ್ಕಾ ಎರಡನೇ ಬಾರಿಗೆ ಪ್ರೆಗ್ನೆಂಟ್ ಆದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ಕ್ರಿಕೆಟ್ ಪಂದ್ಯಗಳಿಂದ ದೂರ ಉಳಿದಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ದಂಪತಿ ಯಾವುದೇ ಮಾಹಿತ ಹಂಚಿಕೊಂಡಿಲ್ಲ. ಆದರೆ ಇದೀಗ ಅನುಷ್ಕಾ ಶರ್ಮಾ ಆರೋಗ್ಯದ ಕುರಿತು ಸುದ್ದಿಯೊಂದು ಹರಿದಾಡುತ್ತದೆ. ಅನುಷ್ಕಾ ಆರೋಗ್ಯದ ಕುರಿತು ಪರ್ತಕರ್ತ ಅಭಿಷೇಕ್ ತ್ರಿಪಾಠಿ ಹಾಕಿರುವ ಪೋಸ್ಟ್ ಇದೀಗ ಸುದ್ದಿಯಾಗಿದೆ. ಅದರಲ್ಲಿ ಅನುಷ್ಕಾ ಮತ್ತು ವಿರಾಟ್ ಹೆಸರನ್ನು ಉಲ್ಲೇಖಿಸಿದ್ದಾರೆ. ‘ನಾಲ್ಕು ವಿಷಯಗಳು: ಒಂದು: ಡಿವಿಲಿಯರ್ಸ್ ಹೇಳಿದ್ದು ಸರಿ. ಎರಡು: ಕೆಲವು ಸಮಸ್ಯೆಗಳ ಕಾರಣ ವಿದೇಶದಲ್ಲಿ ವೈದ್ಯರ ಬಳಿ ಚಿಕಿತ್ಸೆ ಪಡೆಯಲು ಮತ್ತು ಕುಟುಂಬದೊಂದಿಗೆ ಇರಲು ವಿರಾಟ್ ನಿರ್ಧರಿಸಿದ್ದಾರೆ. ಮೂರು: ಬಿಸಿಸಿಐ ಅನುಮತಿಯೊಂದಿಗೆ ಈ ಸಮಯದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರಲು ನಿರ್ಧರಿಸಿದ್ದಾರೆ. ನಾಲ್ಕು: ನಾವು ಅವರ ಸಂತೋಷದ…

Read More

ರೆಡ್ಮಿ ತನ್ನ ಹೊಸ ಬಜೆಟ್‌ ಫ್ರೆಂಡ್ಲಿ ಸ್ಮಾರ್ಟ್‌ಫೋನ್‌ ಎ3ಯನ್ನು ಭಾರತದಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಪ್ರೇಮಿಗಳ ದಿನದಂದು ಅಂದರೆ ಫೆಬ್ರವರಿ 14ರಂದು ರೆಡ್ಮಿ ಎ 3 ಭಾರತದಲ್ಲಿ ಖರೀದಿಗೆ ಲಭ್ಯವಾಗಲಿದೆ. ರೆಡ್ಮಿ ಎ3 ಬಿಡುಗಡೆ ಆದ ಬಳಿಕ ಗ್ರಾಹಕರು ಇದನ್ನು ಫ್ಲಿಪ್‌ಕಾರ್ಟ್‌ ಇಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಖರೀದಿಸಬಹುದಾಗಿದೆ. ರೆಡ್ಮಿ ಎ3 ಹ್ಯಾಲೊ ಡಿಸೈನ್‌ ಅನ್ನು ಹೊಂದಿದೆ. ಇದು ದೊಡ್ಡ ಹಿಂಬದಿಯ ಕ್ಯಾಮೆರಾ ಮಾಡ್ಯೂಲ್‌ ಹೊಂದಿದ್ದು, 5,000mAh ಬ್ಯಾಟರಿ ಸಾಮರ್ಥ್ಯ ಹೊಂದಿದೆ. ಇನ್ನೊಂದು ವಿಶೇಷತೆ ಎಂದರೆ 6GB RAM ಕಾನ್ಫಿಗರೇಷನ್‌ ಜತೆಗೆ, 6GB RAM ವರ್ಚುಯಲ್ ಸಪೋರ್ಟ್‌ ಮಾಡುವ ಫೀಚರ್‌ ಇದರಲ್ಲಿದೆ. ರೆಡ್ಮಿ ಎ3 ಮೊಬೈಲ್ 6.71 ಇಂಚಿನ ಹೆಚ್‌ಡಿ+ ಎಲ್‌ಸಿಡಿ ಸ್ಕ್ರೀನ್, ಮಿಡಿಯಾಟೆಕ್ ಹೀಲಿಯೊ ಜಿ36 SoC. AI ಚಾಲಿತ 13MP ಡ್ಯುಯಲ್ ಹಿಂಬದಿ ಕ್ಯಾಮೆರಾಗಳು, 8MP ಸೆಲ್ಫಿ ಕ್ಯಾಮೆರಾ.ಡ್ಯುಯಲ್ ಸಿಮ್ ಅಳವಡಿಕೆಯ ವೈಶಿಷ್ಟ್ಯ, ಆಂಡ್ರಾಯ್ಡ್‌ 13 ಆಪರೇಟಿಂಗ್ ಸಿಸ್ಟಮ್, ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ರೆಡ್ಮಿ ಎ3 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ…

Read More

ಜೊತೆ ಜೊತೆಯಲ್ಲಿ ಧಾರಾವಾಹಿಯ ಅನು ಸಿರಿಮನೆ ಪಾತ್ರದಲ್ಲಿ ಕಾಣಿಸಿಕೊಂಡು ಪ್ರೇಕ್ಷಕರ ಮನ ಗೆದ್ದಿದ್ದ ನಟಿ ಮೇಘಾ ಶೆಟ್ಟಿ ಸದ್ಯ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಸಿನಿಮಾದ ಕೆಲಸಗಳಲ್ಲಿ ಸಖತ್ ಬ್ಯುಸಿಯಾಗಿರುವ ನಟಿ ಆಗಾಗ ತಮ್ಮ ಅದ್ಭುತ ಫೋಟೋ ಶೂಟ್ ಮೂಲಕ ಅಭಿಮಾನಿಗಳ ಮನಸ್ಸು ಕದಿಯುತ್ತಿದ್ದಾರೆ. ಇದೀಗ ನಟಿ ಮೇಘಾ ಶೆಟ್ಟಿ ಬಳುಕುವ ಬಳ್ಳಿಯಂತಾಗಿದ್ದು ಸಖತ್ ಸ್ಟೈಲಿಶ್ ಆಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಅವುಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಮೇಘಾ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಲೇಟೆಸ್ಟ್​ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಮೇಘಾ ಚಂದನವನ ಪ್ರವೇಶಿಸಿದರು. ನಂತರ ಡಾರ್ಲಿಂಗ್ ಕೃಷ್ಣ ಜೊತೆ ದಿಲ್ ಪಸಂದ್ ಚಿತ್ರದಲ್ಲಿ ನಟಿಸಿದರು. ಇತ್ತೀಚಿಗಷ್ಟೇ ಕೈವ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ, ಸದ್ಯ ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನೀಲಿ ಬಣ್ಣದ ಡ್ರೆಸ್‌ನಲ್ಲಿ…

Read More

ದರ್ಶನ್ ನಟನೆಯ ಕಾಟೇರ ಸಿನಿಮಾ ಸೂಪರ್ ಹಿಟ್ ಆಗಿದೆ. ಇದೇ ಖುಷಿಯಲ್ಲಿರೋ ಅಭಿಮಾನಿಗಳು ದಾಸನ ಮುಂದಿನ ಸಿನಿಮಾದ ಅಪ್ ಡೇಟ್ ಗಾಗಿ ಕಾಯ್ತಿದ್ದಾರೆ. ಇದೀಗ ದರ್ಶನ್ ಇದೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗೆ ಹೊಸ ಸಿನಿಮಾದ ಮಾಹಿತಿಯನ್ನು ಸೋಷಿಯಲ್ ಮೀಡಿಯಾದ ಮೂಲಕ ತಿಳಿಸಿದ್ದಾರೆ. ತಮ್ಮ ಹುಟ್ಟು ಹಬ್ಬದ ಮುನ್ನಾ ದಿನ ಡೆವಿಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡುತ್ತಿರುವುದಾಗಿ ಬರೆದುಕೊಂಡಿದ್ದಾರೆ. ಮಧ್ಯೆ ವೈಷ್ಣೋ ಸ್ಟುಡಿಯೋಸ್ ಲಾಂಛನದಲ್ಲಿ ಜೆ.ಜಯಮ್ಮ ನಿರ್ಮಿಸುತ್ತಿರುವ ಡೆವಿಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗುತ್ತಿದೆ. ಪ್ರಕಾಶ್ ವೀರ್ ನಿರ್ದೇಶನದ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ‘ಡೆವಿಲ್’ ಚಿತ್ರದ  ಫಸ್ಟ್ ಲುಕ್ ಟೀಸರ್ ಫೆಬ್ರವರಿ 15ರ‌ ರಾತ್ರಿ 11.59ಕ್ಕೆ ಬಿಡುಗಡೆಯಾಗಲಿದೆ. ಎರಡು ತಿಂಗಳ ಹಿಂದೆ ಸರಳವಾಗಿ ಸ್ಕ್ರಿಪ್ಟ್ ಪೂಜೆ ನೆರವೇರಿದ್ದು ಮಿಲನ ಚಿತ್ರದ ಖ್ಯಾತಿಯ  ಪ್ರಕಾಶ್ ವೀರ್ ಆಕ್ಷನ್ ಕಟ್ ಹೇಳ್ತಿದ್ದಾರೆ.  ಚಿತ್ರದಲ್ಲಿ ದರ್ಶನ್ ನಾಯಕ ಅನ್ನೋದೆ ಬಿಟ್ಟರೆ ಉಳಿದ ಯಾವುದೇ ಮಾಹಿತಿಯನ್ನು ಚಿತ್ರತಂಡ…

Read More

ಒಟ್ಟಾವ: ಕೆನಡಾದ ಒಂಟಾರಿಯೊ ಪ್ರಾಂತದಲ್ಲಿ ಭಾರತೀಯ ಮೂಲದ ವ್ಯಕ್ತಿಯೋರ್ವನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭಾರತೀಯ ಮೂಲದ ಕುಲ್ದೀಪ್ ಸಿಂಗ್  ಎಂಬವರನ್ನು  ಹತ್ಯೆ ಮಾಡಲಾಗಿದೆ. ಆತನ ಪುತ್ರನೇ ಈ ಕೃತ್ಯ ಎಸಗಿರುವ ಶಂಕೆಯಿದೆ ಎಂದು ಪೊಲೀಸರು ಮಾಹಿತಿ ನಿಡಿದ್ದಾರೆ. ಹ್ಯಾಮಿಲ್ಟನ್ ನಗರದ ಮನೆಯೊಂದರಲ್ಲಿ ಗುಂಡಿನ ಸದ್ದು ಕೇಳಿಬಂದಿರುವುದಾಗಿ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ.ಈ ವೇಳೆ ಮನೆಯ ಮಾಲಕ 56 ವರ್ಷದ ಕುಲ್ದೀಪ್ ಸಿಂಗ್ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುಲ್ದೀಪ್ ಹಾಗೂ ಅವರ ಪುತ್ರ 26 ವರ್ಷದ ಸುಖಾಜ್ ಸಿಂಗ್ ಚೀಮಾ ನಡುವೆ ಜಗಳವಾಗಿದ್ದು ಚೀಮಾ ತನ್ನ ತಂದೆಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವುದಾಗಿ ಸಿಸಿಟಿವಿ ದೃಶ್ಯದಲ್ಲಿ ದಾಖಲಾಗಿದೆ. ಚೀಮಾನ ಭಾವಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅಧಿಕಾರಿಗಳು ಆತನ ಸುಳಿವು ಸಿಕ್ಕರೆ  ಮಾಹಿತಿ ನೀಡುವಂತೆ ಸ್ಥಳೀಯರಿಗೆ ಸೂಚಿಸಿದ್ದಾರೆ.

Read More

ನ್ಯೂಯಾರ್ಕ್ : ಬ್ರಾಂಕ್ಸ್ ಬರೋದಲ್ಲಿನ ಸುರಂಗಮಾರ್ಗದಲ್ಲಿ ಬಂದೂಕುಧಾರಿಯೊರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು ಇತರ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನ್ಯೂಯಾರ್ಕ್ ನಲ್ಲಿ ನಡೆದಿದೆ. ಘಟನೆಯಲ್ಲಿ 25 ವರ್ಷದ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಯಗೊಂಡವರಲ್ಲಿ ಪುರುಷರು ಮಹಿಳೆಯರು ಸೇರಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಘಟನೆ ನಡೆಯಲು ಕಾರಣ ತಿಳಿದುಬಂದಿಲ್ಲ ಪೊಲೀಸರ ಮಾಹಿತಿ ಪ್ರಕಾರ ಇಬ್ಬರು ಬಂದೂಕುಧಾರಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾಗಿ ಹೇಳಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

Read More

ಕೊಲಂಬೋ: ಭಾರತದ ಯುಪಿಐ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆಗೆ ಅಭೂತ ಪೂರ್ವ ರೆಸ್ಪಾನ್ಸ್ ಸಿಕ್ಕ ಬಳಿಕ ಇದೀಗ ಶ್ರೀಲಂಕಾ ಮತ್ತು ಮಾರಿಷಸ್ ನಲ್ಲೂ ತನ್ನ ಸೇವೆ ಆರಂಭಿಸಿದೆ. ಭಾರತದ ಯುಪಿಐ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆಗೆ ನೆರೆಯ ಶ್ರೀಲಂಕಾ ಮತ್ತು ಮಾರಿಷಸ್‌ನಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಿದರು. ಯುಪಿಐ ಮಾತ್ರವಲ್ಲದೆ ಭಾರತದ ರುಪೇ ಕಾರ್ಡ್‌ ಅನ್ನು ಕೂಡ ಮಾರಿಷಸ್‌ನಲ್ಲಿ ಬಳಸಬಹುದಾಗಿದೆ ಕಾರ್ಯಕ್ರಮಕ್ಕೆ ವರ್ಚುವಲ್‌ ಮೂಲಕ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ‘ಆಧುನಿಕ ಡಿಜಿಟಲ್ ತಂತ್ರಜ್ಞಾನದೊಂದಿಗೆ ಐತಿಹಾಸಿಕ ಸಂಬಂಧಗಳನ್ನು ಜೋಡಿಸಲಾಗಿದೆ’ ಎಂದರು. ಯುಪಿಐ ಭಾರತದೊಂದಿಗೆ ಪಾಲುದಾರರನ್ನು ಒಗ್ಗೂಡಿಸುವ ಹೊಸ ಜವಾಬ್ದಾರಿಯನ್ನು ಕಾರ್ಯಗತಗೊಳಿಸುತ್ತಿದೆ. ಡಿಜಿಟಲ್ ಪಾವತಿಯು ಭಾರತದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತಂದಿದೆ. ನೈಸರ್ಗಿಕ ವಿಪತ್ತು, ಆರೋಗ್ಯ ಸಂಬಂಧಿತ, ಆರ್ಥಿಕ ಅಥವಾ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಮೊದಲು ಪ್ರತಿಸ್ಪಂದಿಸುವ ರಾಷ್ಟ್ರ ಎಂದರೆ ಭಾರತ. ಅದು ಹೀಗೆಯೇ ಮುಂದುವರಿಯುತ್ತದೆ. ಇದರಿಂದಾಗಿ ಭಾರತೀಯರು ಮಾರಿಷಸ್‌ ಮತ್ತು ಶ್ರೀಲಂಕಾಕ್ಕೆ ಪ್ರಯಾಣಿಸಿದರೆ ಅಥವಾ ಅವೆರಡೂ ದೇಶದವರು ಭಾರತಕ್ಕೆ ಬಂದಾಗ ಹಣ ಪಾವತಿ ಇನ್ನಷ್ಟು ಸುಲಭವಾಗಲಿದೆ…

Read More