Author: Author AIN

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ, ಐಶ್ವರ್ಯ ರಜನಿಕಾಂತ್ ನಿರ್ದೇಶನದ ಲಾಲ್ ಸಲಾಂ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಇದರಿಂದ ಬೇಸರಗೊಂಡಿರುವ ತಲೈವ ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ ಗೆ ವಾರ್ನಿಂಗ್ ಮಾಡಿದ್ದಾರೆ. ಸಾಕಷ್ಟು ಸೂಪರ್  ಹಿಟ್ ಸಿನಿಮಾಗಳನ್ನು ನೀಡಿರುವ ಲೋಕೇಶ್ ಕನಕರಾಜ್ ಇದೀಗ ರಜನಿಕಾಂತ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಮುಂದಿನ ತಿಂಗಳಿನಿಂದ ಶೂಟಿಂಗ್ ಆರಂಭವಾಗಲಿದ್ದು ಈ ಮಧ್ಯೆ ಕತೆ ಬದಲಾವಣೆ ಮಾಡಲು ರಜನಿಕಾಂತ್ ಹೇಳಿದ್ದಾರೆ ಎನ್ನಲಾಗುತ್ತಿದೆ. ಫೆ.9ರಂದು ‘ಲಾಲ್ ಸಲಾಂ’ ಚಿತ್ರ ಬಿಡುಗಡೆ ಆಗಿದ್ದು ಬಾಕ್ಸ್ ಆಫೀಸ್ ನಲ್ಲಿ ಸೈಲೆಂಟ್ ಆಗಿದೆ. ಚಿತ್ರದಲ್ಲಿ ರಜನಿಕಾಂತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಸೈಲೆಂಟ್ ಆಗಿದ್ರಿಂದ ಮುಂದಿನ ಸಿನಿಮಾದಲ್ಲಿ ಕೆಲ ಬದಲಾವಣೆ ಮಾಡಲು ಹೇಳಿದ್ದಾರೆ ಎನ್ನಲಾಗುತ್ತಿದೆ. ಮೊದಲಿದ್ದ ಕತೆಯಲ್ಲಿ ಸಿಕ್ಕಾಪಟ್ಟೆ ಹಿಂಸಾತ್ಮಕ ದೃಶ್ಯ ಮತ್ತು ರಕ್ತಪಾತ ಇದ್ದು ಅದನ್ನು ಕಮ್ಮಿ ಮಾಡಿ ಎಂದು ನಿರ್ದೇಶಕರಿಗೆ ತಲೈವಾ ಸಲಹೆ ನೀಡಿದ್ದಾರೆ.

Read More

ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಭರ್ಜರಿಯಾಗಿಯೇ ತಯಾರಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ವೈಷ್ಣೋ ಸ್ಟುಡಿಯೋಸ್ ಲಾಂಛನದಲ್ಲಿ ಜೆ.ಜಯಮ್ಮ ನಿರ್ಮಿಸುತ್ತಿರುವ ಡೆವಿಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗುತ್ತಿದೆ. ಪ್ರಕಾಶ್ ವೀರ್ ನಿರ್ದೇಶನದ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ‘ಡೆವಿಲ್’ ಚಿತ್ರದ  ಫಸ್ಟ್ ಲುಕ್ ಟೀಸರ್ ಫೆಬ್ರವರಿ 15ರ‌ ರಾತ್ರಿ 11.59ಕ್ಕೆ ಬಿಡುಗಡೆಯಾಗಲಿದೆ. ಎರಡು ತಿಂಗಳ ಹಿಂದೆ ಸರಳವಾಗಿ ಸ್ಕ್ರಿಪ್ಟ್ ಪೂಜೆ ನೆರವೇರಿದ್ದು ಮಿಲನ ಚಿತ್ರದ ಖ್ಯಾತಿಯ  ಪ್ರಕಾಶ್ ವೀರ್ ಆಕ್ಷನ್ ಕಟ್ ಹೇಳ್ತಿದ್ದಾರೆ.  ಚಿತ್ರದಲ್ಲಿ ದರ್ಶನ್ ನಾಯಕ ಅನ್ನೋದೆ ಬಿಟ್ಟರೆ ಉಳಿದ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ಡೆವಿಲ್ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ‌. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ಹೇಳಿದ್ದಾರೆ. ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಲಿದ್ದಾರೆ.

Read More

ಡಾಲಿ ಧನಂಜಯ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಡಾಲಿ ಎಂಡ್ ಟೀಂನಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಯೆಸ್ ಡಾಲಿ ಧನಂಜಯ ನಿರ್ಮಾಣದ ‘ಡಾಲಿ ಪಿಕ್ಚರ್ಸ್’ನ ಐದನೇ ಸಿನಿಮಾ ಸೆಟ್ಟೇರುತ್ತಿದೆ. ‘ಟಗರು ಪಲ್ಯ’ ಸಕ್ಸಸ್ ನಲ್ಲಿರುವ ‘ಡಾಲಿ ಪಿಚ್ಚರ್’ ಇದೀಗ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದೆ. ಈ ಬಗ್ಗೆ ಡಾಲಿ ಪಿಚ್ಚರ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದೆ. ಆದರೆ ಯಾವ ಸಿನಿಮಾ, ನಾಯಕ ಯಾರು ಎನ್ನುವ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ. ತಮ್ಮ ಪ್ರೊಡಕ್ಷನ್ ಮೂಲಕ ಅನೇಕ   ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಡಾಲಿ ಧನಂಜಯ್ ಈ ಭಾರಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ. ಧನಂಜಯ ಅವರ ಪ್ರೊಡಕ್ಷನ್ ನಿಂದ ಯಾವ ಹೀರೋ, ನಿರ್ದೇಶಕ ಮತ್ತು ನಾಯಕಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಕುತೂಹಲ ಶುರುವಾಗಿದೆ. ಡಾಲಿ ಪಿಕ್ಚರ್ಸ್ ಇದೇ ತಿಂಗಳು ಫೆಬ್ರವರಿ 14ಕ್ಕೆ ಸಿನಿಮಾದ ಟೈಟಲ್…

Read More

ರಾಕಿಂಗ್ ಸ್ಟಾರ್ ಯಶ್ ಸದ್ಯ ಟಾಕ್ಸಿಕ್ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಬಿಡುವು ಮಾಡಿಕೊಂಡಿರುವ ನಟ ಯಶ್ ಆಪ್ತ ಸಹಾಯಕನ ಮನೆಗೆ ಪತ್ನಿ ರಾಧಿಕಾ ಜೊತೆ ಸರ್ಪ್ರೈಸ್ ವಿಸೀಟ್ ನೀಡಿದ್ದಾರೆ. ಚೇತನ್ ಎಂಬುವವರು ಕಳೆದ 10 ವರ್ಷಗಳಿಂದ ಯಶ್‌ಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಚೇತನ್ ತಂದೆಯಾಗಿದ್ದು, ಇದೇ ಕಾರಣಕ್ಕೆ ಪತ್ನಿಯ ಜೊತೆ ಸಹಾಯಕನ ಮನೆಗೆ ಆಗಮಿಸಿ ಶುಭಹಾರೈಸಿದ್ದಾರೆ. ದೀಡಿರ್ ಆಗಿ ಯಶ್ ಮನೆಗೆ ಭೇಟಿ ನೀಡಿದ್ದು ನೋಡಿ ಚೇತನ್ ಫುಲ್ ಖುಷಿಯಾಗಿದ್ದಾರೆ. ಈ ವೇಳ ಯಶ್ ಮಗುವನ್ನು ತೊಡೆಯ ಮೇಲೆ ಮಲಗಿಸಿಕೊಂಡಿದ್ದು ಮಗುವಿಗೆ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದ್ದಾರೆ.

Read More

ಕನ್ನಡ ಕಿರುತೆರೆಯಲ್ಲಿ ಮಿಂಚಿ ಸದ್ಯ ತೆಲುಗು ಪ್ರೇಕ್ಷಕರ ಮನ ಗೆದ್ದಿರುವ ನಟಿ ಜ್ಯೋತಿ ರೈ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿದ್ದಾರೆ. ತಮ್ಮ ಹಾಟ್ ಹಾಟ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸುದ್ದಿಯಾಗ್ತಿರುವ ನಟಿ ಇದೀಗ ತಮ್ಮ ಎರಡನೆ ಮದುವೆಯ ಕುರಿತು ಮೌನ ಮುರಿದಿದ್ದಾರೆ. ತೆಲುಗು ಧಾರಾವಾಹಿಗಳ ಜೊತೆಗೆ ವೆಬ್‌ ಸೀರಿಸ್ ಹಾಗೂ ಸಿನಿಮಾಗಳಲ್ಲಿಯೂ ಜ್ಯೋತಿ ರೈ ತೊಡಗಿಕೊಂಡಿದ್ದಾರೆ. ಸದ್ಯ ‘ಪ್ರೆಟಿ ಗರ್ಲ್’ ಎನ್ನುವ ವೆಬ್‌ ಸೀರಿಸ್‌ನಲ್ಲಿ ಬಣ್ಣ ಹಚ್ಚಿದ್ದು ಸಾಮಾಜಿಕ ಜಾಲಾ ತಾಣದಲ್ಲಿ ಸದಾ ಸಖತ್ ಆಕ್ಟೀವ್ ಆಗಿರುತ್ತಾರೆ. ನಿರ್ದೇಶಕ ಸುಕು ಪೂರ್ವಜ್ ಜೊತೆ ಕೆಲ ದಿನಗಳಿಂದ ಜ್ಯೋತಿ ರೈ ರಿಲೇಷನ್‌ಶಿಪ್‌ನಲ್ಲಿ ಇದ್ದರು. ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಆತನ ಹೆಸರನ್ನು ತಮ್ಮ ಹೆಸರಿನ ಜೊತೆ ಸೇರಿಸಿಕೊಂಡಿದ್ದರು. ಸುಕು ಪೂರ್ವಜ್ ಜೊತೆ ಆತ್ಮೀಯವಾಗಿರುವ ಫೋಟೊ, ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಮದುವೆ ಬಗ್ಗೆ ಮಾಹಿತಿ ನೀಡಿರಲಿಲ್ಲ. ಕೆಲ ದಿನಗಳ ಹಿಂದೆ ಎಂಗೇಜ್‌ಮೆಂಟ್ ಆಗಿದೆ ಎನ್ನುವ ಅರ್ಥದಲ್ಲಿ ಪೋಸ್ಟ್ ಮಾಡಿದ್ದರು. ಆದರೆ ಇದೀಗ ಅಧಿಕೃತಪಡಿಸಿದ್ದಾರೆ. 2ನೇ…

Read More

ವಾಷಿಂಗ್ಟನ್: ತನ್ನ ಐದು ವರ್ಷದ ಮಗಳನ್ನು ಕೊಂದುಆಕೆಯ ದೇಹದ ಭಾಗಗಳನ್ನು ತುಂಡು ತುಂಡಾಗಿ ಕತ್ತರಿಸಿ, ತಾನು ಕೆಲಸ ಮಾಡುವ ರೆಸ್ಟೋರೆಂಟ್‌ಗೆ ಕೊಂಡೊಯ್ದ ಘಟನೆ ಅಮೆರಿಕದಲ್ಲಿ ನಡೆದಿದೆ. 34 ವರ್ಷದ ಆರೋಪಿ ತಂದೆ ಆಡಮ್ ತನ್ನ 5 ವರ್ಷದ ಮಗಳು ಹಾರ್ಮೊನಿಯನ್ನು ಹೊಡೆದು ಕೊಂದಿದ್ದಾನೆ. ಆರೋಪಿಯು ತನ್ನ ಕೆಲಸದ ಸ್ಥಳಕ್ಕೆ ಕೊಂಡೊಯ್ಯುವ ಚೀಲದಲ್ಲಿ ಮಗಳ ಕೊಳೆತ ದೇಹದ ಭಾಗಗಳನ್ನು ತುಂಬಿಸಿ, ‘ಹಳೆಯ ಕಸ’ ಎಂಬಂತೆ ಎಸೆದಿದ್ದ. ಆಕೆಯ ದೇಹದ ಭಾಗಗಳು ಇನ್ನೂ ಪತ್ತೆಯಾಗಿಲ್ಲ ಎಂದು ಪ್ರಾಸಿಕ್ಯೂಟರ್ ತಿಳಿಸಿದ್ದಾರೆ. ಆರೋಪಿಯು ರೆಸ್ಟೋರೆಂಟ್‌ನಲ್ಲಿ ಅಡುಗೆ ಹಾಗೂ ಪಾತ್ರೆ ತೊಳೆಯುವ ಕೆಲಸ ಮಾಡುತ್ತಿದ್ದು, ತನ್ನ ಕೆಲಸದ ಪಾಳಿಯ ವೇಳೆ ಫ್ರೀಜರ್‌ನಲ್ಲಿ ಆಹಾರ ಪದಾರ್ಥಗಳ ಪಕ್ಕದಲ್ಲಿ ಮಗಳ ಅಂಗಾಂಗಗಳನ್ನು ಇರಿಸಿದ್ದ ಎಂದು ವರದಿಯಾಗಿದೆ. “ಆತ ಯಾವಾಗಲೂ ಕೆಲಸಕ್ಕೆ ಬರುವಾಗ ಬ್ಯಾಗ್ ತರುತ್ತಿದ್ದ. ಈಗಲೂ ಚೀಲವನ್ನು ತಂದು ಫ್ರೀಜರ್‌ನಲ್ಲಿ ಇರಿಸುತ್ತಿದ್ದ. ಫ್ರೀಜರ್‌ನಲ್ಲಿ ಆಹಾರ ಮತ್ತು ಪದಾರ್ಥಗಳನ್ನು ಇಡಲಾಗುತ್ತದೆ. ಆತ ಚೀಲವನ್ನು ಒಳಗೆ ತರುವುದು ಹಾಗೂ ಹೊರಗೆ ಕೊಂಡೊಯ್ಯುವುದನ್ನು ಜನರು ನೋಡಿದ್ದರು.…

Read More

ಕೋಲ್ಕತ್ತಾ: ಬಾಲಿವುಡ್ ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 73 ವರ್ಷದ ಚಕ್ರವರ್ತಿ ಅವರಿಗೆ ಶನಿವಾರ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ನಟ ಅರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿದ್ದು ಇದೀಗ ಮಿಥುನ್ ಚಕ್ರವರ್ತಿ ಉತ್ತಮ ರೀತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಸಂಪೂರ್ಣವಾಗಿ ಜ್ಞಾನ ಹೊಂದಿದ್ದು, ಮೃದುವಾದ ಆಹಾರವನ್ನು ಸೇವಿಸಿದ್ದಾರೆ. ಅವರನ್ನು ಡಿಸ್ಚಾರ್ಜ್ ಮಾಡುವ ಮೊದಲು ಕೆಲವು ಪರೀಕ್ಷೆಗಳಿಗೆ ಒಳಗಾಗುತ್ತಾರೆ ಎಂದು ವೈದ್ಯಕೀಯ ಸೌಲಭ್ಯ ನೀಡುತ್ತಿರುವ ಅಧಿಕಾರಿ ತಿಳಿಸಿದ್ದಾರೆ. ಮಿಥುನ್ ಅವರನ್ನು ಫೆ.10ರ ಬೆಳಿಗ್ಗೆ 9.40 ಕ್ಕೆ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಯಿತು. ಮೆದುಳಿನ ಎಂಆರ್‌ಐ ಮತ್ತು ರೇಡಿಯಾಲಜಿ ಪರೀಕ್ಷೆ ಸೇರಿದಂತೆ ಇತರ ಪ್ರಮುಖ ಪರೀಕ್ಷೆಗಳನ್ನು ಸಹ ಮಾಡಲಾಗಿದೆ.ಸದ್ಯ ನಟನ ಆರೋಗ್ಯ ಸುಧಾರಿಸಿದ್ದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

Read More

ಪ್ರೇಮಿಗಳ ದಿನಕ್ಕೆ ಇನ್ನೆರಡು ದಿನ ಮಾತ್ರವೇ ಬಾಕಿ ಇದೆ. ಮನಮೆಚ್ಚಿನ ಪ್ರೇಮಿಗೆ ಏನಪ್ಪಾ ಉಡುಗೊರೆ ಕೊಡೋದು ಅಂದುಕೊಂಡವ್ರಿಗೆ ಇಲ್ಲಿದೆ ಕಡಿಮೆ ಬೆಲೆಯ ಉತ್ತಮ ಫೀಚರ್ಸ್ ಗಳಿರುವ ಸ್ಮಾರ್ಟ್ ಫೋನ್. ರಿಯಲ್ ಮಿ ನಾರ್ಜೊ N53 ಸ್ಮಾರ್ಟ್‌ಫೋನ್ 8GB RAM ಮತ್ತು 128GB ಸ್ಟೋರೇಜ್ ರೂಪಾಂತರದಲ್ಲಿ ಇದ್ದು ಇದರ ಬೆಲೆ ಕೇವಲ 8,999 ರೂ. ಆಗಿದೆ. 33 ವ್ಯಾಟ್‌ಗಳ ಸೂಪರ್‌ವುಕ್ ಚಾರ್ಜಿಂಗ್ ಬೆಂಬಲದೊಂದಿಗೆ 5000 mAh ಬ್ಯಾಟರಿಯನ್ನು ನೀಡಲಾಗಿದೆ. 50 ಮೆಗಾಪಿಕ್ಸೆಲ್‌ಗಳ AI ಹಿಂಬದಿಯ ಕ್ಯಾಮೆರಾ ಹೊಂದಿದೆ. ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಹೊಂದಿರುವ ರೆಡ್ಮಿ A2 10,000 ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿದೆ. ಇದರಲ್ಲಿ ಮೀಡಿಯಾಟೆಕ್ ಹಿಲಿಯೊ G36 ಪ್ರೊಸೆಸರ್‌ನಿಂದ ಚಾಲಿತವಾಗಿದ್ದು 6.5 ಇಂಚಿನ HD+ ಡಿಸ್ಪ್ಲೇ ಹೊಂದಿದೆ. 5000 mAh ಬ್ಯಾಟರಿ ಮತ್ತು 8 ಮೆಗಾಪಿಕ್ಸೆಲ್‌ಗಳ ಹಿಂಭಾಗದ ಕ್ಯಾಮೆರಾವನ್ನು ಹೊಂದಿದೆ. 10 ಸಾವಿರದ ಒಳಗಿರುವ ಫೋನ್ ಗಳಲ್ಲಿ ಮತ್ತೊಂದು ಉತ್ತಮ ಸ್ಮಾರ್ಟ್ ಫೋನ್ ರೆಡ್ಮಿ 13C ಆಗಿದೆ ಇದು ಫೋನ್ 6.74-ಇಂಚಿನ…

Read More

ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಭರ್ತಿ 25 ವರ್ಷಗಳಾಗಿವೆ. ಇದೇ ಶುಭ ಸಂದರ್ಭದಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅರ್ಥಪೂರ್ಣವಾದ ಸಮಾರಂಭವೊಂದನ್ನು ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮವು ಶ್ರೀ ಆದಿಚುಂಚನಗಿರಿ ಶ್ರೀಗಳು, ಶ್ರೀ ಸುತ್ತೂರು ಶ್ರೀಗಳು, ಬೇಬಿ ಮಠ  ಶ್ರೀಗಳ ಸಾನಿಧ್ಯದಲ್ಲಿ ಹಾಗೂ ಸಂಸದೆ, ಚಿತ್ರನಟಿ ಸುಮಲತಾ ಅಂಬರೀಶ್ ಅವರ ಉಪಸ್ಥಿತಿಯಲ್ಲಿ ನೆರವೇರಲಿದೆ. ಫೆಬ್ರವರಿ 17ರ ಶನಿವಾರ ಸಂಜೆ 5 ಗಂಟೆಗೆ ಬೆಳ್ಳಿ ಪರ್ವ ಡಿ-25 ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ರೀರಂಗಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಮೈದಾನದಲ್ಲಿ ನಡೆಯಲಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಈ ಸಮಾರಂಭ ನಡೆಯಲಿದ್ದು, ಕನ್ನಡ ಚಿತ್ರರಂಗದಲ್ಲಿ 25 ವರ್ಷ ಪೂರೈಸಿರುವ ದರ್ಶನ್ ಅವರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜೊತೆಗೆ ವಿ.ಹರಿಕೃಷ್ಣ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ. ವಿನೋದ್ ರಾಜ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ಧನ್ವೀರ್, ಚಿಕ್ಕಣ್ಣ, ಝೈದ್ ಖಾನ್, ಶಿವರಾಜ್…

Read More

ಕೀನ್ಯಾ: ವಿಶ್ವ ಮ್ಯಾರಥಾನ್ ರೆಕಾರ್ಡ್ ಹೋಲ್ಡರ್ ಕೆಲ್ವಿನ್ ಕಿಪ್ಟಮ್ ಹಾಗೂ ಅವರ ತರಬೇತುದಾರ ಗೆರ್ವೈಸ್ ಹಕಿಜಿಮಾನಾ ಅವರು ಪಶ್ಚಿಮ ಕೀನ್ಯಾದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಪಘಾತದ ವೇಳೆ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು ಓರ್ವ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾನುವಾರ ರಾತ್ರಿ  ಗಂಟೆಗೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು, ಒಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಇಬ್ಬರು ಕಿಪ್ಟಮ್ ಮತ್ತು ಅವರ ತರಬೇತುದಾರರು” ಎಂದು ಎಲ್ಜಿಯೊ ಮರಕ್ವೆಟ್ ಕೌಂಟಿಯ ಪೊಲೀಸ್ ಕಮಾಂಡರ್ ಪೀಟರ್ ಮುಲಿಂಗೆ ಹೇಳಿದರು. “ಎಲ್ಲಾ ವಿಶ್ವ ಅಥ್ಲೆಟಿಕ್ಸ್ ಪರವಾಗಿ, ನಾವು ಅವರ ಕುಟುಂಬಗಳು, ಸ್ನೇಹಿತರು, ಸಹ ಆಟಗಾರರು ಮತ್ತು ಕೀನ್ಯಾ ರಾಷ್ಟ್ರಕ್ಕೆ ನಮ್ಮ ಆಳವಾದ ಸಂತಾಪವನ್ನು ಕಳುಹಿಸುತ್ತೇವೆ.ನಂಬಲಾಗದ ಪರಂಪರೆಯನ್ನು ತೊರೆದ ಅದ್ಭುತ ಕ್ರೀಡಾಪಟು ಎಂದಿದ್ದಾರೆ ಕಿಪ್ಟಮ್ ಅಕ್ಟೋಬರ್‌ನಲ್ಲಿ ನಡೆದ ಚಿಕಾಗೋ ಮ್ಯಾರಥಾನ್‌ನಲ್ಲಿ 2:00:35 ರಲ್ಲಿ ತಲುಪಿ ವಿಶ್ವ ದಾಖಲೆಮಾಡಿದರು.

Read More