ಬೇಸಿಗೆಯಲ್ಲಿ ಬೆವರು ಎಲ್ಲರಲ್ಲೂ ಸಾಮಾನ್ಯ. ಜೊತೆಗೆ ಮೈ ಮೇಲಿನ ಧೂಳು, ಕೊಳಕು ಮತ್ತು ಇತರ ಅಂಶಗಳಿಂದ ಹೊರ ಬರುವ ಬೆವರಿನ ದುರ್ಗಂಧ. ಇದು ಕೇವಲ ನಮ್ಮ ಅಕ್ಕಪಕ್ಕದವರಿಗೆ ಮಾತ್ರವಲ್ಲದೆ ಸ್ವತಃ ನಮಗೇ ಕಿರಿಕಿರಿ ಉಂಟು ಮಾಡುತ್ತದೆ. ಬೆಳಗ್ಗೆ ಅಚ್ಚುಕಟ್ಟಾಗಿ ಸ್ನಾನ ಮಾಡಿ ಶುಚಿಯಾಗಿದ್ದರೂ ಸಹ ಬೆವರಿನ ದುರ್ಗಂಧಕ್ಕೆ ಕಡಿವಾಣ ಹಾಕಲು ಸಾಧ್ಯವಾಗುವುದಿಲ್ಲ. ನೂರಾರು ರೂಗಳನ್ನು ಖರ್ಚು ಮಾಡಿ ಇಷ್ಟ ಪಟ್ಟು ತೆಗೆದುಕೊಂಡ ಸೆಂಟ್ ಮತ್ತು ಪರ್ಫ್ಯೂಮ್ ಗಳು ಬಿಸಿಲು ಹೆಚ್ಚಾದಂತೆ ತಮ್ಮ ಶಕ್ತಿ ಕಳೆದುಕೊಳ್ಳುತ್ತವೆ. ಬೆವರು ದುರ್ವಾಸನೆ ಬೀರಲು ಹಲವು ಕಾರಣಗಳಿವೆ. ನಿಮ್ಮ ದೇಹದ ಕೆಲವು ಭಾಗಗಳಲ್ಲಿ ನೀವು ಬ್ಯಾಕ್ಟೀರಿಯಾದ ಸೋಂಕನ್ನು ಹೊಂದಿರಬಹುದು. ನೀವು ತುಂಬಾ ಬೆವರಲು ಆರಂಭಿಸಿದರೆ ಇದರಿಂದ ದುರ್ವಾಸನೆ ಬರಲು ಪ್ರಾರಂಭವಾಗುತ್ತದೆ. ವರುವ ವಾಸನೆಯನ್ನು ತೊಡೆದುಹಾಕಲು ಸ್ನಾನ ಮಾಡುವಾಗ ಸಾಬೂನಿನಿಂದ ಚೆನ್ನಾಗಿ ತೊಳೆಯಿರಿ. ರಾತ್ರಿ ಮಲಗುವ ಮುನ್ನ ಕೂಡ ಸ್ನಾನ ಮಾಡಿ. ಬೇಕಿದ್ದರೆ ವೈದ್ಯರ ಸಲಹೆಯ ಸಾಬೂನನ್ನು ಸಹ ಬಳಸಬಹುದು. ಬೆವರುವ ಪ್ರದೇಶಗಳನ್ನು ಕೂದಲಿನಿಂದ ಮುಕ್ತವಾಗಿಡಿ. ತೂಕ ಇಳಿಕೆಯತ್ತ…
Author: Author AIN
ಮೋದಿ ಸರ್ಕಾರ ಮಹಿಳೆಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಅದರ ಹೆಸರು ಎಲ್ಐಸಿ ಬಿಮಾ ಸಖಿ ಯೋಜನೆ. ಈ ಯೋಜನೆಗೆ ಸೇರುವ ಮಹಿಳೆಯರು ಎಲ್ಐಸಿ ಪಾಲಿಸಿಗಳನ್ನು ತೆಗೆದುಕೊಳ್ಳಬೇಕು. ಸರ್ಕಾರ ನೀಡಿದ ಗುರಿಗಳನ್ನು ನೀವು ಪೂರ್ಣಗೊಳಿಸಬಹುದು ಮತ್ತು ಪ್ರತಿ ತಿಂಗಳು 7 ಸಾವಿರ ರೂ. ಸಂಬಳ ಪಡೆಯಬಹುದು. ಇದರ ಜೊತೆಗೆ, ಪ್ರತಿ ಎಲ್ಐಸಿ ಪಾಲಿಸಿಯ ಮೇಲೆ ಕಮಿಷನ್ ಸಹ ಲಭ್ಯವಿದೆ. ಮಹಿಳೆಯರು ಸ್ವ ಉದ್ಯೋಗಿಗಳಾಗಲು ಸಹಾಯ ಮಾಡಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ಪರಿಚಯಿಸಿದೆ. ಇದು ಒಂದು ಉದ್ಯೋಗದಂತಿರುವ ಸ್ವ-ಉದ್ಯೋಗ ಯೋಜನೆಯಾಗಿದೆ. ಇದರಲ್ಲಿ ಸೇರುವ ಮಹಿಳೆಯರು ಪೂರ್ಣಾವಧಿ ಎಲ್ಐಸಿ ಪಾಲಿಸಿಗಳನ್ನು ತೆಗೆದುಕೊಳ್ಳಬಹುದು. ಅಥವಾ ಅವರು ತಮ್ಮ ಸ್ವಂತ ಕೆಲಸಗಳನ್ನು ಮತ್ತು ಮನೆಕೆಲಸಗಳನ್ನು ನೋಡಿಕೊಳ್ಳುತ್ತಾ ಅರೆಕಾಲಿಕ ಕೆಲಸ ಮಾಡಬಹುದು. ಎಲ್ಐಸಿ ಬಿಮಾ ಸಖಿ ಯೋಜನೆಯ ಮುಖ್ಯ ಉದ್ದೇಶವೆಂದರೆ ಗ್ರಾಮೀಣ ಮತ್ತು ನಗರ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು, ಅವರ ಕುಟುಂಬಗಳಿಗೆ ಬೆಂಬಲ ನೀಡಲು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡುವುದು. ಈ ಯೋಜನೆಗೆ…
ಭಾರತೀಯ ಸಂಸ್ಕೃತಿಯಲ್ಲಿ ಕಾಲಿನ ಗೆಜ್ಜೆ ಪ್ರಧಾನ ಪ್ರಾಮುಖ್ಯತೆಯನ್ನು ಹೊಂದಿದೆ. ಈಜಿಪ್ಟ್ ಮತ್ತು ಮಧ್ಯಪ್ರಾಚ್ಯದ ಪ್ರಾಚೀನ ಸಂಸ್ಕೃತಿಗಳಲ್ಲಿ ಆಭರಣವು ಪ್ರಮುಖ ಸ್ಥಾನವನ್ನು ಪಡೆಯುತ್ತದೆ. ಏಕೆಂದರೆ ಇದು ಆರೋಗ್ಯ ಮತ್ತು ಒಟ್ಟಾರೆ ಯೋಗಕ್ಷೇಮದ ಅಂಶಗಳಲ್ಲಿ ಸೌಂದರ್ಯ ಮತ್ತು ಹಲವು ಪ್ರಯೋಜನಗಳನ್ನು ಹೊಂದಿದೆ. ಬೆಳ್ಳಿ ಕಾಲ್ಗೆಜ್ಜೆಯನ್ನು ಧರಿಸುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳು: ಹಾರ್ಮೋನು ಸಮತೋಲನದಲ್ಲಿರುತ್ತದೆ: ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಆಹಾರ ಮತ್ತು ಜೀವನಶೈಲಿಯ ಕಾರಣ, ಹೆಚ್ಚಿನ ಮಹಿಳೆಯರು ಹಾರ್ಮೋನು ಅಸಮತೋಲನ ಸಮಸ್ಯೆಗಳಿಂದ ತೊಂದರೆಗೊಳಗಾಗುತ್ತಿದ್ದಾರೆ. ಈ ಕಾರಣದಿಂದ ಬಂಜೆತನ ಮತ್ತು ಮುಟ್ಟಿನ ಸಮಸ್ಯೆಗಳು ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳು ಮಹಿಳೆಯರನ್ನು ಕಾಡುತ್ತಿದೆ. ಬೆಳ್ಳಿ ಕಾಲ್ಗೆಜ್ಜೆಯನ್ನು ಧರಿಸುವುದರಿಂದ ಈ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಹೌದು ಬೆಳ್ಳಿ ಕಾಲ್ಗೆಜ್ಜೆಯನ್ನು ಧರಿಸುವುದರಿಂದ ಹಾರ್ಮೋನು ಸಮತೋಲನದಲ್ಲಿರುತ್ತದೆ ಮತ್ತು ನೀವು ಆರೋಗ್ಯಕರವಾಗಿರುತ್ತೀರಿ. ಕಾಲು ನೋವಿಗೆ ಪರಿಹಾರ ನೀಡುತ್ತದೆ: ಬಿಡುವಿಲ್ಲದ ಕೆಲಸದ ಕಾರಣದಿಂದಾಗಿ ಮಹಿಳೆಯರು ಸಾಮಾನ್ಯವಾಗಿ ಕಾಲುನೋವಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಂತಹ ಸಂದರ್ಭದಲ್ಲಿ ಕಾಲ್ಗೆಜ್ಜೆಯನ್ನು ಧರಿಸುವುದರಿಂದ ಈ ಸಮಸ್ಯೆಯಿಂದ ಮುಕ್ತಿಯನ್ನು ಪಡೆಯಬಹುದು. ಅಲ್ಲದೆ ಇದು ದೈಹಿಕ…
ಸೂರ್ಯೋದಯ – 6:44 AM ಸೂರ್ಯಾಸ್ತ – 6:15 PM ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಶಿಶಿರ ಋತು, ಮಾಘ ಮಾಸ, ತಿಥಿ – ಷಷ್ಠಿ ನಕ್ಷತ್ರ – ಸ್ವಾತಿ ಯೋಗ – ವೃದ್ಢಿ ಕರಣ – ವಣಿಜ ರಾಹು ಕಾಲ – 12:00 ದಿಂದ 01:30 ವರೆಗೆ ಯಮಗಂಡ – 07:30 ದಿಂದ 09:00 ವರೆಗೆ ಗುಳಿಕ ಕಾಲ – 10:30 ದಿಂದ 12:00 ವರೆಗೆ ಬ್ರಹ್ಮ ಮುಹೂರ್ತ – 5:08 ಬೆ ದಿಂದ 5:56 ಬೆ ವರೆಗೆ ಅಮೃತ ಕಾಲ – 3:38 ಬೆ ದಿಂದ 5:26 ಬೆ ವರೆಗೆ ಅಭಿಜಿತ್ ಮುಹುರ್ತ – ಯಾವುದೂ ಇಲ್ಲ ಮೇಷ ರಾಶಿ ( ಅಶ್ವಿನಿ ಭರಣಿ ಕೃತಿಕ 1) ವಿದೇಶ ಭಾಗ್ಯ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಜಯ, ಎಣ್ಣೆ,, ನೀರು, ಮಾರಾಟಗಾರರಿಗೆ ಧನ ಲಾಭ, ಸ್ಯಾರಿ ಸೆಂಟರ್ ಪ್ರಾರಂಭಿಸುವ ಚಿಂತನೆ, ಸಂಗಾತಿಗೆ ನೆನೆದು…
ಚಾಂಪಿಯನ್ಸ್ ಟ್ರೋಫಿಯ ಸಮಯದಲ್ಲಿ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ತಮ್ಮ ಪತ್ನಿಯರು ಅಥವಾ ಕುಟುಂಬ ಸದಸ್ಯರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅನುಮತಿ ನೀಡಿದೆ. ಆದಾಗ್ಯೂ, ಇದಕ್ಕೆ ಒಂದು ಷರತ್ತು ವಿಧಿಸಲಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟ್ರೋಫಿ ಸೋಲಿನ ನಂತರ ಪ್ರವಾಸಗಳಿಗೆ ಕುಟುಂಬ ಸದಸ್ಯರನ್ನು ಆಟಗಾರರೊಂದಿಗೆ ಕರೆದೊಯ್ಯುವ ಬಗ್ಗೆ ಮಂಡಳಿಯು ಈಗಾಗಲೇ ಹೊಸ ನಿಯಮಗಳನ್ನು ಹೊರಡಿಸಿದೆ. ಈ ನಿಯಮಗಳ ಪ್ರಕಾರ, ದುಬೈನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸಮಯದಲ್ಲಿ ಮಾತ್ರ ಆಟಗಾರರೊಂದಿಗೆ ಕುಟುಂಬ ಸದಸ್ಯರು ಹೋಗಲು ಬಿಸಿಸಿಐ ಅವಕಾಶ ನೀಡಿದೆ. ಆದಾಗ್ಯೂ, ಇದನ್ನು ಒಂದು ಪಂದ್ಯಕ್ಕೆ ಮಾತ್ರ ಅನುಮತಿಸಲಾಯಿತು. ಆಟಗಾರರು ತಮ್ಮ ಕುಟುಂಬ ಸದಸ್ಯರನ್ನು ಕರೆತರುವಂತೆ ಬಿಸಿಸಿಐಗೆ ವಿನಂತಿಸಬಹುದು, ನಂತರ ಮಂಡಳಿಯು ವ್ಯವಸ್ಥೆಗಳನ್ನು ಮಾಡುತ್ತದೆ. https://ainlivenews.com/do-you-know-how-to-detect-fake-numbers-on-whatsapp-here-is-the-complete-information/ ಹಿಂದಿನ ನಿರ್ಧಾರಗಳಲ್ಲಿ, 45 ದಿನಗಳಿಗಿಂತ ಹೆಚ್ಚಿನ ವಿದೇಶ ಪ್ರವಾಸಗಳಲ್ಲಿ ಕುಟುಂಬ ಸದಸ್ಯರು ಆಟಗಾರರೊಂದಿಗೆ ಇರಲು ಕೇವಲ ಎರಡು ವಾರಗಳ ಕಾಲ ಮಾತ್ರ ಮಂಡಳಿ ಅವಕಾಶ ನೀಡಿತ್ತು. ಇದು ವೈಯಕ್ತಿಕ…
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಅಭಿವೃದ್ಧಿಶೂನ್ಯತೆ ಮತ್ತು ಒಳಜಗಳ- ಕಚ್ಚಾಟಗಳ ಕಾರಣಕ್ಕೆ ಪ್ರಚಾರದಲ್ಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರ ಈ ಒಳ್ಳೆಯ ಕೆಲಸ ಮಾಡಿದೆ ಎಂದು ಮಾತನಾಡಬೇಕಿತ್ತು. ಪರಿಸ್ಥಿತಿ ಬದಲಾಗಿದೆ. ರಾಜ್ಯದ ಅನುಭವಿ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು ಅಸಹಾಯಕರಾಗಿದ್ದಾರೆ. ಸರಕಾರ ಗ್ಯಾರಂಟಿ ಹಣ ಕೊಟ್ಟಿಲ್ಲ; ಅಕ್ಕಿ ಸಿಕ್ಕಿಲ್ಲ; 2 ಸಾವಿರ ರೂ. ಆರು ತಿಂಗಳಿನಿಂದ ಬಂದಿಲ್ಲ. ಆರು ತಿಂಗಳಿನಿಂದ ವಂಚನೆ ಆಗಿದೆ ಎಂದು ಮಾತನಾಡುವ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು. https://ainlivenews.com/do-you-know-how-to-detect-fake-numbers-on-whatsapp-here-is-the-complete-information/ ಅಧಿಕಾರಕ್ಕಾಗಿ, ಮುಖ್ಯಮಂತ್ರಿ ಯಾರಾಗಬೇಕೆಂಬ ಕಚ್ಚಾಟ, ಕಿತ್ತಾಟ ಮುಂದುವರೆದಿದೆ. ಅದರಲ್ಲೂ ಇನ್ನೊಂದು ರೀತಿಯ ಪ್ರಚಾರದಲ್ಲಿ ಈ ಸರಕಾರ ಇದೆ ಎಂದು ಅವರು ಆಕ್ಷೇಪಿಸಿದರು. ಬೆಟ್ಟಿಂಗ್ ದಂಧೆಯಲ್ಲಿ ಇವತ್ತು 3 ಜನರ ಪ್ರಾಣತ್ಯಾಗ ಆಗಿದೆ. ಆನ್ಲೈನ್ ಬೆಟ್ಟಿಂಗ್ ದಂಧೆ ಅವ್ಯಾಹತವಾಗಿ ರಾಜ್ಯದಲ್ಲಿ ನಡೆಯುತ್ತಿದೆ ಎಂದು ದೂರಿದರು. ಇದರ ಕಡೆ…
ಮಂಡ್ಯ :- ಸದಸ್ಯರಲ್ಲದವರಿಗೆ ಪ್ರವೇಶ ನೀಡಿ ಅಕ್ರಮವಾಗಿ ಜೂಜಾಟ ಆಡಿಸುತ್ತಿದ್ದ ಮದ್ದೂರು ಪೋಲೀಸ್ ಠಾಣಾ ವ್ಯಾಪ್ತಿಯ ಕ್ಲಬ್ ಮೇಲೆ ಮಳವಳ್ಳಿ ಗ್ರಾಮಾಂತರ ಪೊಲೀಸರು ದಾಳಿ ಮಾಡಿದ್ದು, 71 ಮಂದಿಯನ್ನು ವಶಕ್ಕೆ ಪಡೆದು 99.970 ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಶ್ರೀ ವರದರಾಜ ರೀ ಕ್ರಿಯೇಷನ್ ಕ್ಲಬ್ ( ಕುಳ್ಳರಾಜ ಕ್ಲಬ್ ) ಮೇಲೆ ಭಾನುವಾರ ದಾಳಿ ಮಾಡಿರುವ ಮಳವಳ್ಳಿ ಗ್ರಾಮಾಂತರ ವೃತ್ತ ನಿರೀಕ್ಷಕ ಪಿ.ಜಿ.ಮಹೇಶ್ ಹಾಗೂ ಸಿಬ್ಬಂದಿಗಳು ರಾಮನಗರ, ತುಮಕೂರು ಹಾಗೂ ಮಂಡ್ಯ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿ ಕ್ಲಬ್ ಸದಸ್ಯರಲ್ಲದವರು ಜೂಜಾಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಅವರಿಂದ 99 ಸಾವಿರದ 970 ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. https://ainlivenews.com/good-news-for-upi-users-from-now-on-you-dont-have-to-worry-about-payment-failures/ ಜೂಜಾಟದಲ್ಲಿ ತೊಡಗಿದ್ದ 71 ಮಂದಿಯನ್ನು ವಶಕ್ಕೆ ಪಡೆದು, ಅವರಿಂದ 99.970 ರೂಪಾಯಿ ಹಣವನ್ನು ಜಪ್ತಿ ಮಾಡಲಾಗಿದೆ. ಬಹುತೇಕರು, ಕ್ಲಬ್ ಸದಸ್ಯರಲ್ಲ. ಅಕ್ರಮವಾಗಿ ಕ್ಲಬ್ಗೆ ಬಂದು ಜೂಜಾಟದಲ್ಲಿ ತೊಡಗಿದ್ದರು. ಕ್ಲಬ್ ಆಡಳಿತ…
ಬೆಳಗಾವಿ, ಫೆ.18 – ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರು ಎಲ್ಲರೂ ಸೇರಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ರಚನೆ ಮಾಡಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ಸೇರಿದ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ವರದಿಗಾರರು ಸರ್ವಸಮ್ಮತವಾಗಿ ಈ ಬಗ್ಗೆ ತೀರ್ಮಾನ ಕೈಗೊಂಡರು. ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ಗೌರವ ಅಧ್ಯಕ್ಷರಾಗಿ ನ್ಯೂಸ್ ಫಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಕಡ್ಡಿ, ಅಧ್ಯಕ್ಷ ಸ್ಥಾನಕ್ಕೆ ಪವರ್ ಟಿವಿ ಜಿಲ್ಲಾ ವರದಿಗಾರ ಮಂಜುನಾಥ ಪಾಟೀಲ್, ಉಪಾಧ್ಯಕ್ಷರಾಗಿ ಪ್ರಜಾ ಟಿವಿ ಜಿಲ್ಲಾ ವರದಿಗಾರ ಚಂದ್ರು ಶ್ರೀರಾಮುಡು, ಪ್ರಧಾನ ಕಾರ್ಯದರ್ಶಿಯಾಗಿ ನ್ಯೂಸ್18 ಕನ್ನಡ ಜಿಲ್ಲಾ ವರದಿಗಾರ ಚಂದ್ರಕಾಂತ ಸುಗಂಧಿ, ಸಹ ಕಾರ್ಯದರ್ಶಿಯಾಗಿ ಟಿವಿ9 ವಿಡಿಯೋ ಜರ್ನಲಿಸ್ಟ್ ಪ್ರವೀಣ ಶಿಂಧೆ ಹಾಗೂ ಖಜಾಂಚಿಯಾಗಿ ಸುವರ್ಣನ್ಯೂಸ್ ಜಿಲ್ಲಾ ವರದಿಗಾರ ಅನಿಲ್ ಕಾಜಗಾರ್ರನ್ನಾಗಿ ಆಯ್ಕೆ ಮಾಡಲಾಯಿತು https://ainlivenews.com/good-news-for-upi-users-from-now-on-you-dont-have-to-worry-about-payment-failures/ ಸಭೆಯಲ್ಲಿ ಕಸ್ತೂರಿ ಟಿವಿ ಜಿಲ್ಲಾ ವರದಿಗಾರ ಸಂತೋಷ ಶ್ರೀರಾಮುಡು, ಟಿವಿ5 ಕನ್ನಡ ಜಿಲ್ಲಾ ವರದಿಗಾರ ಶ್ರೀಧರ ಕೊಟಾರಗಸ್ತಿ, ಪಿಟಿಐ(ವಿಡಿಯೋ)…
ಗದಗ,ಫೆ.18: ಬಾಲಕಾರ್ಮಿಕ ಪದ್ಧತಿಯನ್ನು ಬುಡದಿಂದಲೇ ಕಿತ್ತೊಗೆಯಬೇಕು.ಕಾರ್ಮಿಕರ ಸ್ನೇಹಿ ಇಲಾಖೆ ಆಗಿದ್ದು, ಯಾವುದೇ ಕಾರಣಕ್ಕೂ ಶಾಲಾಪುಸ್ತಕ ಕೈಹಿಡಿಯುವುದನ್ನು ಬಿಟ್ಟು ಮಕ್ಕಳಕೈ ದುಡಿಮೆಗೆ ಇಳಿಯದಂತೆ ನೋಡಿಕೊಳ್ಳುವುದು ಕಾರ್ಮಿಕ ಇಲಾಖೆಯ ಕರ್ತವ್ಯ ಎಂದು ಕಾರ್ಮಿಕ ಸಚಿವ ಸಂತೋಷ್ಲಾಡ್ ಸೂಚಿಸಿದರು. ಗದಗ ಜಿಲ್ಲಾಸಭಾಂಗಣದಲ್ಲಿ ಇಲಾಖೆಯ ಪ್ರಗತಿಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳು ಬಾಲಕಾರ್ಮಿಕರ ಮೇಲೆ ತಮ್ಮತಮ್ಮ ವ್ಯಾಪ್ತಿಯಲ್ಲಿ ನಿಗಾವಹಿಸುತ್ತಿರಬೇಕು.ಇನ್ನು ಕಾರ್ಮಿಕರ ಕಲ್ಯಾಣಾಭಿವೃದ್ಧಿ ಕಡೆಗೂ ಗಮನ ನೀಡುತ್ತಿರಬೇಕು.ಕಾರ್ಮಿಕರಿಗೆ ಸರಿಯಾಗಿ ಅವರು ಕೆಲಸ ಮಾಡುವ ಸಂಸ್ಥೆ,ಕಚೇರಿಗಳು ಸರಿಯಾದ ಸಮಯಕ್ಕೆ ಪಿಎಫ್ ಹಣ ನೀಡುತ್ತಿವೆಯೋ ಇಲ್ಲವೋ ಎಂಬುದನ್ನು ಗಮನಿಸಬೇಕು.ಪಿಎಫ್ ನೀಡದ ಕಂಪೆನಿ ಸಂಸ್ಥೆಗಳ ಮೇಲೆ ಕ್ರಮಜರುಗಿಸುವಂತೆ ಸಂತೋಷ್ ಖಡಕ್ ಸೂಚನೆ ನೀಡಿದರು. https://ainlivenews.com/do-you-know-how-to-detect-fake-numbers-on-whatsapp-here-is-the-complete-information/ ಬಾಲಕಾರ್ಮಿಕರನ್ನಿಟ್ಟುಕೊಂಡು ಲಾಭ ಮಾಡಿಕೊಳ್ಳುತ್ತಿರುವವರ ಮೇಲೆ ಗಮನವಿರಬೇಕು.ಇಲಾಖಾಧಿಕಾರಿಗಳ ಗಮನಕ್ಕೆ ಕಾರ್ಮಿಕರ ಸಮಸ್ಯೆಗಳು ಕಂಡುಬಂದಲ್ಲಿ ಆದಷ್ಟುಬೇಗ ಸ್ಥಳದಲ್ಲಿಯೇ ಪರಿಹರಿಸುವಂತೆ ನೋಡಿಕೊಳ್ಳಬೇಕು.ಕಾರ್ಮಿಕರ ಹಿತಾರಕ್ಷಣೆಗೆ ಕಾರ್ಮಿಕರ ಇಲಾಖೆ ಇದೆ ಎಂಬುದನ್ನು ಮನದಟ್ಟು ಮಾಡಿಕೊಡಬೇಕು.ಗಂಭೀರ ತುರ್ತು ಸಮಸ್ಯೆಗಳಿದ್ದರೆ ತಮ್ಮ ಗಮನಕ್ಕೆ ಕಡ್ಡಾಯವಾಗಿ ತರಲೇಬೇಕು.ಕಾರ್ಮಿಕರ ಸ್ನೇಹಿಯಾಗಿ ಇಲಾಖೆ ಇರಬೇಕೆಂದರು. ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸಂತೋಷ್…
ಶಿವಮೊಗ್ಗ: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ಮುಳುಗುವುದರಿಂದ ಬಡತನ ನಿರ್ಮೂಲನೆ ಆಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿಗೆ ಖಂಡನಾರ್ಹ, ಅವರು ಕೂಡಲೆ ಈ ಕುರಿತು ದೇಶದ ಜನರಲ್ಲಿ ಕ್ಷಮೆ ಕೇಳಬೇಕು ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಆಗ್ರಹಿಸಿದರು. ಇದು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಈ ಹಿಂದೆ ಮಹಾತ್ಮ ಗಾಂಧಿಯವರು ಗೋವುಗಳನ್ನು, ಮಹಿಳೆಯರನ್ನು ಹಾಗೂ ಗಂಗೆಯನ್ನು ನಾವು ದೇವರ ರೂಪದಲ್ಲಿ ಕಾಣಬೇಕು ಎಂದಿದ್ದರು. ಆದರೆ ಮಲ್ಲಿಕಾರ್ಜುನ್ ಖರ್ಗೆ ಇಂತಹ ಹೇಳಿಕೆಯನ್ನು ನೀಡಿ ಗಾಂಧೀಜಿ ಯವರಿಗೆ ಅಪಮಾನ ಮಾಡಿದ್ದಾರೆ. https://ainlivenews.com/do-you-know-how-to-detect-fake-numbers-on-whatsapp-here-is-the-complete-information/ ಖರ್ಗೆಯವರೆ ಡಿ ಕೆ ಶಿವಕುಮಾರ್ ಸೇರಿದಂತೆ ನಿಮ್ಮ ಪಕ್ಷದ ಅನೇಕ ಜನ ನಾಯಕರು ಪ್ರಯಾಗ್ರಾಜ್ನ ಕುಂಭಮೇಳಕ್ಕೆ ಹೋಗಿ ಮಿಂದೆದ್ದಿದ್ದಾರೆ. ಅವರ ವಿರುದ್ದ ನೀವು ಯಾವು ರೀತಿಯ ಕೈಗೊಳ್ಳುತ್ತೀರಾ ಎಂದು ಪ್ರಶ್ನಿಸಿದರು. ಖರ್ಗೆಯವರೆ ನೀವು ಈ ರೀತಿಯ ಹೇಳಿಕೆಯನ್ನು ಕೊಡುವುದು ತಪ್ಪು. ಈ ಹಿನ್ನಲೆ ದೇಶದ ಜನರಲ್ಲಿ ಕ್ಷಮೆ ಕೇಳಬೇಕೆಂದು ಕೆಎಸ್ ಈ ಶ್ವರಪ್ಪ ಆಗ್ರಹಿಸಿದರು