Author: Author AIN

ಬೆಂಗಳೂರು: ರಾಜ್ಯದಲ್ಲಿ ಇನ್ನೆಲ್ಲೂ ಅನಧಿಕೃತ ಬಡಾವಣೆಗಳು, ರೆವಿನ್ಯೂ ಬಡಾವಣೆಗಳು ತಲೆ ಎತ್ತಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಮಹಾನಗರಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳೊಂದಿಗೆ ಮಂಗಳವಾರ (ಫೆ.18) ವಿಡಿಯೊ ಸಂವಾದ ನಡೆಸಿದರು. ಕಾಯ್ದೆ ಮೂಲಕ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡಬೇಕು. ಅಧಿಕಾರಿಗಳು ಸ್ಪಷ್ಟವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಿ. ಕಂದಾಯ ಕಟ್ಟದಿರುವುದರಿಂದ ಇಷ್ಟೆಲ್ಲಾ ಸಮಸ್ಯೆಗಳಾಗಿವೆ. ಇದೊಂದು ಸಲ ಮಾತ್ರ ಬಿ ಖಾತಾ ಕೊಟ್ಟು, ನಂತರ ಅಂತ್ಯ ಹಾಡಬೇಕು. ನಿಮಗೆ (ಅಧಿಕಾರಿಗಳು) ಮೂರು ತಿಂಗಳು ಮಾತ್ರ ಸಮಯ ನೀಡುತ್ತೇನೆ, ಅಷ್ಟರೊಳಗೆ ಅಭಿಯಾನ ನಡೆಸಿ ಪೂರ್ಣಗೊಳಿಸಿ. ಯಾವುದೇ ರಾಜಿ ಇಲ್ಲ. ಅಧಿಕಾರಿಗಳು ರಾಜಿ ಮಾಡಿಕೊಂಡರೆ ಸಹಿಸಲ್ಲ ಎಂದರು. https://ainlivenews.com/be-careful-there-are-foods-that-weaken-the-immune-system/ ಅನಧಿಕೃತ ಬಡಾವಣೆಗಳು ಮತ್ತೆ ತಲೆ ಎತ್ತಿದರೇ ಜಿಲ್ಲಾಧಿಕಾರಿ, ಮುಖ್ಯ ಅಧಿಕಾರಿ, ನಗರ ಯೋಜನಾ ಅಧಿಕಾರಿಗಳು…

Read More

ನವದೆಹಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದು, ನಿರ್ಗಮಿತ ಆಯುಕ್ತ ರಾಜೀವ್ ಕುಮಾರ್ ಅವರ ಸ್ಥಾನವನ್ನು ತುಂಬಲಿದ್ದಾರೆ. ಹಾಲಿ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಅವರಿಗೆ ಮಂಗಳವಾರ 65 ವರ್ಷ ಪೂರ್ಣಗೊಳ್ಳಲಿವೆ.ರಾಜೀವ್ ಕುಮಾರ್ ಇಂದು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿಯು ಹೆಸರು ಅಂತಿಮಗೊಳಿಸಲು ಸೋಮವಾರ ಸಭೆ ನಡೆಸಿತ್ತು. https://ainlivenews.com/be-careful-there-are-foods-that-weaken-the-immune-system/ ಈ ಸಭೆಯಲ್ಲಿ ಕೇದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಭಾಗಿಯಾಗಿದ್ದರು. ಸಿಇಸಿ ಹಾಗೂ ಚುನಾವಣಾ ಆಯುಕ್ತರ ನೇಮಕ ಕುರಿತ ಹೊಸ ನೇಮಕಾತಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕೆಲವೇ ದಿನಗಳಲ್ಲಿ ವಿಚಾರಣೆ ನಡೆಸಲಿದ್ದು, ಫೆಬ್ರವರಿ…

Read More

ಕೆಜಿಎಫ್ – ಮನೆಯ ಮುಂದಿನ ರಸ್ತೆಯ ವಿಚಾರಕ್ಕೆ ವ್ಯಕ್ತಿಯ ಮೇಲೆ ಹಾರೆಯಿಂದ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ನಡೆದಿದೆ. ಮನೆಯ ಮುಂದಿನ ರಸ್ತೆ ವಿಚಾರಕ್ಕೆ ವ್ಯಕ್ತಿ ಒಬ್ಬನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.‌ ಹಾರೆಯಿಂದ ಹೊಡೆದು ಮಂಜುನಾಥ್ (38) ಎನ್ನುವ ವ್ಯಕ್ತಿಯೊಬ್ಬರ ಹತ್ಯೆಯಾಗಿದೆ. ಕಣ್ಣೂರು ಗ್ರಾಮದ ಮುನಿವೆಂಕಟಪ್ಪ ಹಾಗೂ ರಾಜೇಶ್ ಎಂಬುವವರು ಮಂಜುನಾಥ್ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. https://ainlivenews.com/be-careful-there-are-foods-that-weaken-the-immune-system/ ಮಂಜುನಾಥ್ ಹಾಗೂ ಮುನಿ ವೆಂಕಟಪ್ಪ ಕುಟುಂಬದ ನಡುವೆ ಈ ಒಂದು ಗಲಾಟೆ ನಡೆದಿದೆ.ರಸ್ತೆ ವಿವಾದ ವಿಚಾರಕ್ಕೆ ಹಾರೆಯಿಂದ ಹೊಡೆದು ಮಂಜುನಾಥನನ್ನು ಕೊಲೆ ಮಾಡಿದ್ದಾರೆ. ಕ್ಯಾಸಂಬಳ್ಳಿ ಠಾಣೆ ಪೋಲಿಸರಿಂದ ಮುನಿ ವೆಂಕಟಪ್ಪ ಹಾಗೂ ರಾಜೇಶನ್ನು ಬಂಧಿಸಿಲಾಗಿದೆ.

Read More

2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಇದು ಬಾಂಗ್ಲಾದೇಶಕ್ಕೂ ಆರಂಭಿಕ ಪಂದ್ಯವಾಗಲಿದೆ. ಇದರ ನಂತರ, ಫೆಬ್ರವರಿ 23 ರಂದು ಪಾಕಿಸ್ತಾನ ವಿರುದ್ಧ ಹಾಗೂ ಮಾರ್ಚ್ 2 ರಂದು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಹೀಗಾಗಿ ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯವನ್ನು ಗೆಲ್ಲುವುದರೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡುವ ಇರಾದೆಯಲ್ಲಿ ರೋಹಿತ್ ಪಡೆ ಪದೆ. ಇತ್ತ ಟೀಂ ಇಂಡಿಯಾಕ್ಕೆ ಆಗಾಗ್ಗೆ ಆಘಾತ ನೀಡುವುದರಲ್ಲಿ ಹೆಸರುವಾಸಿಯಾಗಿರುವ ಬಾಂಗ್ಲಾದೇಶ ಕೂಡ ಬಲಿಷ್ಠ ಭಾರತ ತಂಡಕ್ಕೆ ಮತ್ತೊಂದು ಸೋಲಿನ ಶಾಕ್ ನೀಡುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ. https://ainlivenews.com/be-careful-there-are-foods-that-weaken-the-immune-system/ ಇದರ ಮದ್ಯೆ ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಭಾರತೀಯ ಕ್ರಿಕೆಟ್ ತಂಡದ ನ್ಯೂ ಜರ್ಸಿ ಅನಾವರಣಗೊಂಡಿದೆ. ಸೋಮವಾರ ಅಂದ್ರೆ ಫೆಬ್ರವರಿ 17 ರಂದು ತಂಡದ ನಾಯಕ ರೋಹಿತ್ ಶರ್ಮಾ, ರವೀಂದ್ರ ಜಡೇಜಾ ಹಾರ್ದಿಕ್ ಪಾಂಡ್ಯ ಮತ್ತು ಅರ್ಶದೀಪ್ ಸಿಂಗ್, ವಿರಾಟ್​ ಕೊಹ್ಲಿ ​ ಹೊಸ ಜರ್ಸಿ ತೊಟ್ಟು ಕಲರಫುಲ್ ಫೋಟೋಗಾಗಿ…

Read More

ಮೈಸೂರು: ಬೆಟ್ಟಿಂಗ್‌ ಅನ್ನೋ ಮಾಯಾಜಾಲ ಯಾರನ್ನೂ ಬಿಟ್ಟಿಲ್ಲ. ಇದು ಕೇವಲ ಕರ್ನಾಟಕದ ಟ್ರೆಂಡ್ ಅಲ್ಲ. ಭಾರತ ದೇಶದ ಪ್ರತಿ ಹಳ್ಳಿಯಲ್ಲೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆಟ್ಟಿಂಗ್ ದಂಧೆ ನಡೀತಿದೆ. ಅದರಲ್ಲೂ ಐಪಿಎಲ್ ಟೈಮಲ್ಲಿ 2 ತಿಂಗಳ ಕಾಲ ಬೆಟ್ಟಿಂಗ್ ಭರಾಟೆ ಜೋರಾಗಿರುತ್ತೆ. ಹಳ್ಳಿ ಹಳ್ಳಿಗಳಲ್ಲೂ ಯುವಕರು ಐಪಿಎಲ್‌ ಬೆಟ್ಟಿಂಗ್‌ ಮೋಹಕ್ಕೆ ಒಳಗಾಗಿದ್ದಾರೆ. ಬೆಟ್ಟಿಂಗ್ ಕಟ್ಟಲು ಸಾಲ ಮಾಡ್ತಿದ್ದಾರೆ. ಕಡಿಮೆ ಟೈಂಗೆ ಹೆಚ್ಚು ಹಣ ಮಾಡಬಹುದು ಅನ್ನೋ ದುರಾಸೆಯಿಂದ ಇದ್ದ ಹಣವನ್ನೂ ಕಳೆದುಕೊಂಡು ಸಾಲದ ಸುಳಿಗೆ ಸಿಲುಕ್ತಿದ್ದಾರೆ. ಆಗಾಗ ಗೆಲ್ಲೋದೂ ಉಂಟು.. ಗೆದ್ದ ಹಣದಲ್ಲಿ ಮೋಜು – ಮಸ್ತಿ ಮಾಡಿ ಸಂಭ್ರಮಿಸುವ ಯುವಕರು, ಸೋತಾಗ ಮಾತ್ರ ಊರು ಬಿಟ್ಟು ಓಡಿ ಹೋದ ಉದಾಹರಣೆಗಳೂ ಇವೆ. ಕೆಲವರು ಆತ್ಮಹತ್ಯೆಯಂಥ ದಾರಿಯನ್ನೂ ಹಿಡಿದಿದ್ದಾರೆ. https://ainlivenews.com/be-careful-there-are-foods-that-weaken-the-immune-system/ ಇದೀಗ ಮೈಸೂರು ತಾಲ್ಲೂಕಿನ ಹಂಚ್ಯಾ ಗ್ರಾಮದಲ್ಲಿ ಐಪಿಎಲ್ ಮತ್ತು ಆನ್‌ಲೈನ್ ಬೆಟ್ಟಿಂಗ್‌ನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ನಡೆದಿದೆ. ಜೋಶಿ ಆಂಥೋನಿ, ಜೋಬಿ ಆಂಥೋನಿ ಮತ್ತು ಶರ್ಮಿಳಾ…

Read More

ಚಿತ್ರದುರ್ಗ: ಕೃಷಿ ಚಟುವಟಿಕೆಗಳನ್ನು ಸ್ವಲ್ಪ ಕಡಿಮೆ ಮಾಡಿ ತೋಟಗಾರಿಕೆ ಬೆಳೆಗಳಾದ ಹೂವು, ಹಣ್ಣು, ತರಕಾರಿ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕವಾಗಿ ಸಬಲರಾಗಲು ವಿಫುಲ ಅವಕಾಶಗಳಿವೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು. ನಗರದ ವಿ.ಪಿ.ಬಡಾವಣೆಯಲ್ಲಿರುವ ತೋಟಗಾರಿಕೆ ಇಲಾಖೆ ಆವರಣದಲ್ಲ ಆಯೋಜಿಸಿದ್ದ,32ನೇ ಫಲ-ಪುಷ್ಪ ಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ತೋಟಗಾರಿಕೆ ಬೆಳೆಗಳಲ್ಲಿ ರಾಜ್ಯದಲ್ಲಿ ಕೋಲಾರ ಜಿಲ್ಲೆಯ ಪ್ರಥಮ ಸ್ಥಾನದಲ್ಲಿದ್ದು, ಉತ್ತಮ ಆದಾಯಗಳಿಸುತ್ತಿದೆ. ಹಾಗಾಗಿ ಕೋಲಾರ ಜಿಲ್ಲೆಯ ಮಾದರಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ ಎಂದರು. ಜಿಲ್ಲೆಯ ಮಳೆ ವರದಿ ಅವಲೋಕಿಸಿದಾಗ 10 ವರ್ಷದಲ್ಲಿ 3 ವರ್ಷ ಮಾತ್ರ ಉತ್ತಮಳೆಯಾಗಲಿದೆ. ಇನ್ನೂ 7 ವರ್ಷ ಮಳೆ ಕಡಿಮೆಯಾಗಿದೆ. ಇದನ್ನು ಮನಗಂಡು ಜಿಲ್ಲೆಯ ರೈತರು ಹೆಚ್ಚು ತೋಟಗಾರಿಕೆ ಬೆಳೆಗಳಾದ ಹೂವು, ಹಣ್ಣು-ತರಕಾರಿ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮಾತನಾಡಿ, 32ನೇ ಫಲ-ಪುಷ್ಪ ಪ್ರದರ್ಶನದಲ್ಲಿ ಹೆಣ್ಣಿಗೆ ಗೌರವ…

Read More

ಪೋಷಕರ ಲೈಂಗಿಕ ಕ್ರಿಯೆಯ ಬಗ್ಗೆ ಮಾತನಾಡಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಯೂಟ್ಯೂಬರ್ ರಣ್ವೀರ್ ಅಲ್ಹಾಬಾದಿಯಾ, ಸಮಯ್ ರೈನಾ ಇದೀಗ ಕೊಂಚ ನಿರಾಳರಾಗಿದ್ದಾರೆ. ರಣ್ವೀರ್ ಅಲ್ಹಾಬಾದಿಯಾಗೆ ಬಂಧನದ ಭೀತಿ ಎದುರಾಗಿತ್ತು. ಆದರೆ ಸುಪ್ರೀಂಕೋರ್ಟ್ ರಣ್ವೀರ್​ಗೆ ಬಂಧನ ಭೀತಿಯಿಂದ ನಿರಾಳತೆ ಒದಗಿಸಿದೆ. ಕಳೆದ ವಾರ ‘ಇಂಡಿಯಾ ಗಾಟ್ ಲೇಟೆಂಟ್’ ಶೋನಲ್ಲಿ ನೀಡಿದ್ದ ಅಶ್ಲೀಲ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ. ಪೋಷಕರು ಮತ್ತು ಲೈಂಗಿಕತೆ ಬಗ್ಗೆ ರಣ್ವೀರ್ ಅಲ್ಹಾಬಾದಿಯಾ ಆ ಶೋನಲ್ಲಿ ಮಾತನಾಡಿದ್ದರು. ಇದರಿಂದಾಗಿ ರಣ್ವೀರ್, ಸಮಯ್ ರೈನಾ ಸೇರಿದಂತೆ ಆ ಶೋನ ಅಂದಿನ ಪ್ಯಾನಲ್​ನಲ್ಲಿ ಇದ್ದ ಹಲವರ ಮೇಲೆ ದೂರು ದಾಖಲಾಗಿತ್ತು. ರಣ್ವೀರ್ ಅಲ್ಹಾಬಾದಿಯಾರ ವಕೀಲರ ವಾದ ಆಲಿಸಿದ ಸುಪ್ರೀಂಕೋರ್ಟ್​, ರಣ್ವೀರ್​ ಅನ್ನು ಬಂಧಿಸದಿರುವಂತೆ ಸೂಚಿಸಿದೆ. ಆದರೆ ರಣ್ವೀರ್, ಪೊಲೀಸರ ತನಿಖೆಗೆ ಸೂಕ್ತವಾಗಿ ಸಹಕರಿಸಿದರೆ ಮಾತ್ರವೇ ಅವರನ್ನು ಬಂಧಿಸುವಂತಿಲ್ಲ ಎಂದಿದೆ. ಅಸ್ಸಾಂ, ಮುಂಬೈ ಪೊಲೀಸರು ರಣ್ವೀರ್ ಅನ್ನು ಬಂಧಿಸುವಂತಿಲ್ಲ ಎಂದಿರುವ ಸುಪ್ರೀಂ ನ್ಯಾಯಮೂರ್ತಿಗಳು, ಒಂದೊಮ್ಮೆ ಇದೇ ವಿಷಯದ ಮೇಲೆ ಇನ್ನೊಂದು ಪ್ರಕರಣ ದಾಖಲಾದರೂ ಸಹ…

Read More

8 ಬಲಿಷ್ಠ ತಂಡಗಳ ನಡುವೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ 2025 ನಾಳೆ, ಫೆಬ್ರವರಿ 19 ರಂದು ಪ್ರಾರಂಭವಾಗಲಿದೆ. ಈ ಪಂದ್ಯಾವಳಿಗೆ ಪಾಕಿಸ್ತಾನ ಆತಿಥೇಯ ರಾಷ್ಟ್ರ ಎಂದು ತಿಳಿದಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿವೆ. ಈ ತಿಂಗಳ 20 ರಂದು ಬಾಂಗ್ಲಾದೇಶ ವಿರುದ್ಧ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಆದರೆ, ಟೂರ್ನಿ ಆರಂಭವಾಗುವ ಕೆಲವೇ ಗಂಟೆಗಳು ಹಾಗೂ ಟೀಮ್ ಇಂಡಿಯಾದ ಮೊದಲ ಪಂದ್ಯಕ್ಕೂ ಎರಡು ದಿನಗಳ ಮೊದಲು ಭಾರತ ತಂಡಕ್ಕೆ ಶಾಕ್‌ ಎದುರಾಗಿದೆ.. ಟೀಮ್ ಇಂಡಿಯಾದ ಮುಖ್ಯ ಬೌಲಿಂಗ್ ಕೋಚ್ ಆಗಿದ್ದ ಮೋರ್ನೆ ಮೋರ್ಕೆಲ್ ತಂಡವನ್ನು ತೊರೆದು ತಮ್ಮ ತವರು ದೇಶವಾದ ದಕ್ಷಿಣ ಆಫ್ರಿಕಾಕ್ಕೆ ಮರಳಿದ್ದಾರೆ. ಹೌದು ತಂದೆ ನಿಧನವಾದ್ದರಿಂದ ಮಾರ್ಕೆಲ್ ಟೀಮ್ ಇಂಡಿಯಾವನ್ನು ತೊರೆಯಬೇಕಾಗಿರುವ ಪರಿಸ್ಥೀತಿ ನಿರ್ಮಾಣವಾಗಿದೆ. https://ainlivenews.com/here-there-is-a-physical-relationship-between-siblings-mother-son-and-father-daughter/ 2025 ರ ಚಾಂಪಿಯನ್ಸ್ ಟ್ರೋಫಿಗಾಗಿ ಟೀಮ್ ಇಂಡಿಯಾದೊಂದಿಗೆ ದುಬೈಗೆ ಪ್ರಯಾಣ ಬೆಳೆಸಿದ್ದ ಮಾರ್ಕೆಲ್ ಭಾನುವಾರ ಅಭ್ಯಾಸ ಅವಧಿಯಲ್ಲಿ ಭಾಗವಹಿಸಿದ್ದರು. ಆದರೆ, ಸೋಮವಾರ ಅವರು ತಂಡದೊಂದಿಗೆ ಕಾಣಿಸಿಕೊಂಡಿಲ್ಲ.…

Read More

ಗದಗ,ಫೆ.18: ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು‌ ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ‌ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ ಮಾಡಿದರು. ಗದಗ ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ‌ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇಲ್ಲಿವರೆಗೆ ಸುಮಾರು 20ಕ್ಕೂ ಹೆಚ್ಚಿನ‌‌ ಜಿಲ್ಲೆಗಳಿಗೆ ತಾವು ಪ್ರವಾಸ ಮಾಡಿದ್ದು, ಕಾರ್ಮಿಕ‌ ಇಲಾಖೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲು‌ ಪ್ರಗತಿಪರಿಶೀಲನಾ ಸಭೆ ನಡೆಸಿದ್ದೇನೆ. ಅದರಂತೆ ಗದಗಿಗೂ ಬಂದು‌ ಸಭೆ ನಡೆಸಲಾಗಿದೆ. https://ainlivenews.com/here-there-is-a-physical-relationship-between-siblings-mother-son-and-father-daughter/ ರಾಜ್ಯದ ದೇಶದ ಸಮಸ್ಯೆಗಳ ವಿಷಯಗಳಿಗೆ ಹೆಚ್ಚು ಆದ್ಯತೆ ಕೊಡಬೇಕೇ‌ ವಿನಃ ಸಚಿವ ಸಂಪುಟ‌ ಸರ್ಜರಿ‌ ಅದು-ಇದು ಎನ್ನುವ ವಿಷಯಕ್ಕೆ ಮಹತ್ವ ನೀಡಬಾರದು.ಜನರ ಸಮಸ್ಯೆಗಳಿಗಿಂತ‌‌ ಅಭಿವೃದ್ಧಿಗಿಂತ ಸಚಿವ ಸಂಪುಟದ ವಿಷಯವೇನಷ್ಟೂ ಮಹತ್ವದ್ದಲ್ಲ.ಮಹತ್ವದ ಜನರ ವಿಚಾರಗಳಿಗೆ ಗಮನ‌ ನೀಡಬೇಕು ಎಂದರು. ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜಣ್ಣ ವಿಚಾರ…

Read More

ಕೋಲಾರ : ನಗರದ ಇಟಿಸಿಎಂ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ ಲ್ಯಾಂಪ್ ಲೈಟಿಂಗ್ ಸಮಾರಂಭ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆ ಮುಖ್ಯಸ್ಥ ಅರುಣ್ ಸ್ಯಾಮ್ಯುಯಲ್ ಅವರು,೧೩೦ ವರ್ಷದ ಐತಿಹಾಸಿಕ ಮತ್ತು ಪುರಾತನ ಇಟಿಸಿಎಂ ವೈದ್ಯಕೀಯ ಸಂಸ್ಥೆ ಆರೋಗ್ಯ, ಶೈಕ್ಷಣಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಇಲ್ಲಿ ಅಧ್ಯಯನ ಮಾಡಿರುವ ಸಾವಿರಾರು ಮಂದಿ ವಿದೇಶಗಳಲ್ಲಿ ಉದ್ಯೋಗಿಗಳಾಗಿದ್ದು ಭಾರತದಲ್ಲಿ ಲಕ್ಷಾಂತರ ಮಂದಿ ಬದುಕು ಕಟ್ಟಿಕೊಂಡಿದ್ದಾರೆ. https://ainlivenews.com/here-there-is-a-physical-relationship-between-siblings-mother-son-and-father-daughter/ ಬಿಎಸ್ಸಿ ನರ್ಸಿಂಗ್‌ನಲ್ಲಿ ೧೧೩ನೇ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಲ್ಯಾಂಪ್ ಲೈಟಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಇವರೆಲ್ಲರೂ ನೈಟಿಂಗೇಲ್ ಮಾದರಿಯಲ್ಲಿ ರೋಗಿಗಳ ಸೇವೆ ಮಾಡುವ ಮೂಲಕ ಜೀವನವನ್ನು ಸಾರ್ಥಕ್ಯಪಡಿಸಿಕೊಳ್ಳಬೇಕು. ರೋಗಿಗೆ ತಾಯಿ ಪ್ರೇಮವನ್ನು ನೆನಪಿಸುವ ನಿಟ್ಟಿನಲ್ಲಿ ಪ್ರೀತಿ-ವಾತ್ಸಲ್ಯದಿಂದ ಶ್ರದ್ಧೆಯಾಗಿ ಚಿಕಿತ್ಸೆ ನೀಡಬೇಕೆಂದು ಅರುಣ್ ತಿಳಿಸಿದರು. ಸಂಸ್ಥೆಯ ಅಧಿಕಾರಿ ಹರೀಶ್, ತಾರಾ ಇದ್ದರು.

Read More