ನ್ಯಾಶನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಸಿನಿಮಾಗಳ ಜೊತೆಗೆ ವೈಯಕ್ತಿಕ ವಿಚಾರವಾಗಿಯೂ ಸದಾ ಸುದ್ದಿಯಲ್ಲಿರುತ್ತಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ರಶ್ಮಿಕಾ ಸೋಶಿಯಲ್ ಮೀಡಿಯಾದಲ್ಲೂ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ. ಇದೀಗ ರಶ್ಮಿಕಾ ಹಂಚಿಕೊಂಡಿರುವ ಸ್ಪೆಷನ್ ಪೋಸ್ಟ್ ಒಂದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲೂ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿರುವ ನಟಿ ರಶ್ಮಿಕಾ ಮಂದಣ್ಣ, ಇನ್ಸ್ಟಾದಲ್ಲಿ ಸ್ಟೋರಿ ಒಂದನ್ನು ಪೋಸ್ಟ್ ಮಾಡಿದ್ದಾರೆ. ಸ್ಟೋರಿಯಲ್ಲಿ ಹೂಗುಚ್ಛದ ಫೋಟೋವನ್ನ ಶೇರ್ ಮಾಡಿರುವ ನಟಿ, ಕುತೂಹಲ ಮೂಡಿಸುವಂತೆ ಕ್ಯಾಪ್ಷನ್ ನೀಡಿದ್ದಾರೆ. ನನ್ನ ಮುಖದ ಮೇಲೆ ನಗು ಮೂಡಿಸುವುದು ಹೇಗೆ ಅನ್ನೋದು ನಿನಗೆ ಯಾವಾಗಲೂ ಗೊತ್ತು ಎಂದು ನಟಿ ರಶ್ಮಿಕಾ ಮಂದಣ್ಣ ಬರೆದಿದ್ದಾರೆ. ಆದ್ರೆ ಈ ರೆಡ್ ರೋಸ್ ಹೂಗುಚ್ಛ ನೀಡಿದ ವ್ಯಕ್ತಿ ಯಾರು ಅನ್ನೋದನ್ನು ಮಾತ್ರ ನಟಿ ತಿಳಿಸಿಲ್ಲ. ರಶ್ಮಿಕಾ ಮಂದಣ್ಣ ಫೋಟೋ ವೈರಲ್ ಆಗಿದ್ದು, ಹೂ ಗುಚ್ಛ ನೀಡಿದವನು ಹೈದರಾಬಾದ್ ಹುಡುಗನೇನಾ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ನಟ ವಿಜಯ್ ದೇವರಕೊಂಡ ಹಾಗೂ ನಟಿ…
Author: Author AIN
ಶಿವಮೊಗ್ಗ : ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ, ಭಾರತಾಂಬೆಯ ಹೆಸರನ್ನಿಟ್ಟುಕೊಂಡು ಬಿಜೆಪಿಯವರು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಬಿಜೆಪಿಯವರು ಈ ಹಿಂದೆ ಭಾರತ್ ಅಕ್ಕಿಯನ್ನು ಕೊಡುವ ಕೆಲಸ ಮಾಡಿದ್ದರು. ಅದು ಇದುವರೆಗೆ ಎಷ್ಟು ಮನೆಗೆ ತಲುಪಿದೆ ಎಂಬುದು ತಿಳಿದಿದಲ್ಲ. ಸಂಸದರ ಚುನಾವಣೆ ಸಂದರ್ಭದಲ್ಲಿ ಜನರಿಗೆ ಮೋಸ ಮಾಡಲು ಬಿಜೆಪಿ ಭಾರತ್ ಅಕ್ಕಿಯನ್ನು ಘೋಷಣೆ ಮಾಡಿತು. ಆದರೆ ಅದನ್ನು ಮನೆಮನೆಗೆ ತಲುಪಿಸಲು ಬಿಜೆಪಿ ಸರ್ಕಾರ ವಿಫಲವಾಗಿದೆ. ನಾವು ಗ್ಯಾರಂಟಿ ಯೋಜನೆಗಳನ್ನು ಮನೆ, https://ainlivenews.com/if-you-eat-watermelon-seeds-like-this-your-blood-sugar-will-be-immediately-controlled/ ಮನೆಗೆ ತಲುಪಿಸಿರುವ ತೃಪ್ತಿ ನಮಗಿದೆ ಎಂದರು. ಸಚಿವ ರಾಜಣ್ಣ ಬಗ್ಗೆ ನನ್ನ ಬಳಿ ಕೇಳಬೇಡಿ ಎಂದರು. ಇನ್ನು ಭದ್ರಾವತಿ ಪ್ರಕರಣದ ಬಗ್ಗೆ ಮಾತನಾಡಿ ಭದ್ರಾವತಿ ಪ್ರಕರಣದ ಬಗ್ಗೆ ಕ್ರಮ ತಗೆದುಕೊಳ್ಳಿ ಅಂತಾ ಅಧಿಕಾರಿಗಳಿಗೆ ಹೇಳಿದ್ದೀನಿ, ಈಗಾಗಲೇ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ, ಕಾನೂನು ಸುವ್ಯವಸ್ಥೆ ಕಾಪಾಡಬೇಕು ಅಷ್ಟೇ, ಆ ಹಿನ್ನೆಲೆ ತೆಗೆದುಕೊಳ್ಳುತ್ತೇವೆ…
ವರದಕ್ಷಿಣೆ, ಭಾರತದ ದೊಡ್ಡ ಪಿಡುಗಿನಲ್ಲಿ ಒಂದು. ಈಗ್ಲೂ ಇದನ್ನು ನಿಯಂತ್ರಿಸಲು ಸಾಧ್ಯವಾಗ್ತಿಲ್ಲ. ಕಾನೂನಿನಲ್ಲಿ ಕಠಿಣ ಶಿಕ್ಷೆ ಜಾರಿಯಲ್ಲಿದ್ರೂ ನೋವು ನುಂಗಿಕೊಳ್ಳುವ ಜನರು ವರದಕ್ಷಿಣೆ ಹಿಂಸೆ ಅನುಭವಿಸ್ತಾರೆ. ಭಾರತದ ಮೂಲೆ ಮೂಲೆಯಲ್ಲಿ ಈಗ್ಲೂ ವರದಕ್ಷಿಣೆ ಪದ್ಧತಿ ಜಾರಿಯಲ್ಲಿದೆ. ಹೆಣ್ಣು ಹೆತ್ತವರು ವರದಕ್ಷಿಣೆ ನೀಡಲು ಪರದಾಡ್ತಿದ್ದಾರೆ. ವರದಕ್ಷಿಣೆ ನೀಡುವಂತೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಸುವ, ವರದಕ್ಷಿಣೆ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳು ಈಗ್ಲೂ ವರದಿಯಾಗ್ತಿವೆ. ಇದೀಗ ಹೆಚ್ಚಿನ ವರದಕ್ಷಿಣೆ ತರದಿದ್ದಕ್ಕೆ ಕೋಪಗೊಂಡು, ಗಂಡನ ಮನೆಯವರೆಲ್ಲಾ ಸೇರಿ 30 ವರ್ಷದ ಸೊಸೆಗೆ ಎಚ್ಐವಿ ಸೋಂಕಿತ ಸಿರಿಂಜ್ನಿಂದ ಇಂಜೆಕ್ಷನ್ ನೀಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಕುರಿತು ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಗೆ ಕೋರ್ಟ್ ಆದೇಶಿಸಿದೆ. https://ainlivenews.com/do-you-want-wealth-to-come-looking-for-you-then-you-shouldnt-buy-a-broom-these-days/ ಸಹರಾನ್ಪುರ ಮೂಲದ ಸಂತ್ರಸ್ತೆಯ ಪೋಷಕರು 2023ರಲ್ಲಿ ತಮ್ಮ ಮಗಳನ್ನು ಆರೋಪಿ ಕುಟುಂಬಕ್ಕೆ ಮದುವೆ ಮಾಡಿಕೊಟ್ಟಿದ್ದರು. ಈ ವೇಳೆ 15 ಲಕ್ಷ ರು. ನಗದು ಮತ್ತು ಒಂದು ಕಾರನ್ನು…
ಕೋಲಾರ : ರೈತರಿಗೆ ಭೂಮಿ ಮಂಜೂರಾತಿಗೆ ಸಲ್ಲಿಸಿದ ಅರ್ಜಿಗಳನ್ನು ಅಧಿಕಾರಿಗಳು ಸರಿಯಾಗಿ ಪರಿಶೀಲನೆ ಮಾಡಿ ಪರಿಹಾರ ಸೇರಿದಂತೆ ರೈತರ ವಿವಿಧ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ ಜಿಲ್ಲೆಯ ರೈತರು ಶ್ರಮಜೀವಿಗಳು, ಜಿಲ್ಲೆಯಲ್ಲಿ ಮಳೆಯು ಪ್ರತಿ ವರ್ಷ ಕಡಿಮೆಯಾಗುತ್ತಿದೆ ಅಲ್ಪಸ್ವಲ್ಪವಾಗಿಯೇ ಸಿಗುವ ಅಂತರ್ಜಲವನ್ನು ಬಳಸಿಕೊಂಡು ಕೃಷಿ ಮಾಡಿ ಜೀವನ ನಡೆಸುವ ಸಂದರ್ಭ ಬಂದಿದೆ ರೈತರು ಕೃಷಿ ಮಾಡುತ್ತಿರುವ ಸರ್ಕಾರಿ ಗೋಮಾಳವನ್ನು ಉಳುವವನೇ ಭೂಮಿ ಒಡೆಯ ಯೋಜನೆಯಲ್ಲಿ ಜಿಲ್ಲೆಯ ಸಾವಿರಾರು ರೈತರಿಗೆ ಭೂಮಿ ಮಂಜೂರು ಮಾಡಲಾಗಿದೆ ರೈತರು ಇನ್ನಷ್ಟು ಭೂಮಿ ಮಂಜೂರು ಮಾಡಲು ಸಾವಿರಾರು ಅರ್ಜಿಗಳನ್ನು ಹಾಕಿದ್ದಾರೆ ಸರ್ಕಾರ ಭೂಮಿ ಮಂಜೂರಾತಿ ಸಮಿತಿಗಳನ್ನು ಆಯ್ಕೆ ಮಾಡಿದ್ದರೂ ಸಹ ರೈತರ ಅರ್ಜಿಗಳನ್ನು ಸರಿಯಾಗಿ ಪರಿಶೀಲನೆ ಮಾಡದೆ ವಜಾ ಮಾಡಲಾಗುತ್ತಿದೆ. ಯಾವ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಗೆ ನಗರದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಜನರು ರಸ್ತೆಗಿಳಿದು ಪ್ರತಿಭಟನೆ ಮಾಡಿದ್ದರು. ಬಳಿಕ ದರ ಪರಿಷ್ಕರಣೆ ಮಾಡಿದ್ದೇವೆ ಅಂತಾ ಹೇಳಿದ್ದ ನಮ್ಮ ಮೆಟ್ರೋಗೆ ಪ್ರಯಾಣಿಕರ ದಿಢೀರ್ ಇಳಿಕೆಯ ಬಿಸಿ ತಟ್ಟಿತ್ತು. ಇದೀಗ ಈ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ್ದು, ಮೆಟ್ರೋ ದರ ನಿಗದಿ ಮಾಡುವ ಕಮಿಟಿಯನ್ನ ನೇಮಕ ಮಾಡೋದು ಕೇಂದ್ರ ಸರ್ಕಾರ. ಆ ಕಮಿಟಿಯಲ್ಲಿ ಇಬ್ಬರು ಕೇಂದ್ರ ಸರ್ಕಾರದ ಪ್ರತಿನಿಧಿ, ಒಬ್ಬರು ರಾಜ್ಯ ಸರ್ಕಾರದವರು ಇರುತ್ತಾರೆ. ಮೆಟ್ರೋ ಸ್ವಾಯತ್ತ ಸಂಸ್ಥೆ ಆದರೂ ಮೆಟ್ರೋವನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಸೇರಿ ನಡೆಸುತ್ತವೆ ಎಂದರು. https://ainlivenews.com/do-you-want-wealth-to-come-looking-for-you-then-you-shouldnt-buy-a-broom-these-days/ ಬೆಲೆ ನಿಗದಿ ಮಾಡಿ, ಏರಿಕೆ ಮಾಡಿ ಅಂತ ನಾವು ಪ್ರಪೋಸಲ್ ಕೊಡುತ್ತೇವೆ. ಆದರೆ ಬೆಲೆ ನಿಗದಿ ಮಾಡೋದು ಕಮಿಟಿ ಅವರು. ಆ ಕಮಿಟಿಯ ಅಧ್ಯಕ್ಷರನ್ನು ಆಯ್ಕೆ ಮಾಡೋದು ಕೇಂದ್ರ ಸರ್ಕಾರದವರು ಅನ್ನೋ ಮೂಲಕ ಕೇಂದ್ರ ಸರ್ಕಾರವೇ ಮೆಟ್ರೋ ದರ ಏರಿಕೆ ಮಾಡಿರೋದು ಎಂದು ಪರೋಕ್ಷವಾಗಿ ಆರೋಪ ಮಾಡಿದರು.
ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಗೆ ಮದ್ದು ಎರೆದಿದ್ದೇ ಮೆಟ್ರೋ. ಬೇಗ ಬೇಗ ಆಫೀಸ್, ಕಾಲೇಜಿಗೆ ಹೋಗಬೇಕೆಂದವರು ಮೆಟ್ರೋ ಹತ್ತಿದ್ರು. ಮಳೆ, ಚಳಿ, ಬಿಸಿಲು ಹಾಗೂ ಟ್ರಾಫಿಕ್ ಕಿರಿಕಿರಿ ಇಲ್ಲದೇ ನಮ್ಮ ಮೆಟ್ರೋನಲ್ಲಿ ಆರಾಮದಾಯಕ ಪ್ರಯಾಣ ಮಾಡುತ್ತಿದ್ದರು. ಆದ್ರೆ, ದರ ಏರಿಕೆ ಬರೆ ಎಳೆದುಬಿಟ್ಟಿದೆ. ಇದರ ನಡುವೆ ರಾಜ್ಯ ರಾಜಧಾನಿಯ ನಾಗರಿಕರಿಗೆ ಶುಭ ಸುದ್ದಿಯೊಂದು ಹೊರಬಿದ್ದಿದೆ. ಹೌದು ನಗರದ ಬಹು ನಿರೀಕ್ಷಿತ ಪಿಂಕ್ ಮೆಟ್ರೋ ಈ ವರ್ಷ ಅಥವಾ ಬರೋ ವರ್ಷ ಓಪನ್ ಆಗಲಿದೆ. ಪಿಂಕ್ ಮಾರ್ಗದ ಗೊಟ್ಟಿಗೆರೆ ಟು ನಾಗವಾರ 21 ಕಿಮೀ ವಿಸ್ತೀರ್ಣದಲ್ಲಿರುವ ಮಾರ್ಗ. ಅಂಡರ್ ಗ್ರೌಂಡ್ನಲ್ಲಿ 13 ಕಿಮೀ ಒಳಗೆ ಮೆಟ್ರೋ ರೈಲು ಸಂಚಾರ ಮಾಡಲಿದ್ದು, ಈ ಮಾರ್ಗದಲ್ಲಿ ಒಟ್ಟು-18 ಮೆಟ್ರೋ ಸ್ಟೇಷನ್ಗಳಿವೆ. https://ainlivenews.com/if-you-eat-watermelon-seeds-like-this-your-blood-sugar-will-be-immediately-controlled/ 13ರಲ್ಲಿ 12 ಅಂಡರ್ ಗ್ರೌಂಡ್ ಸ್ಟೇಷನ್, 6 ಎಲಿವೇಟೆಡ್ ಮೆಟ್ರೋ ಸ್ಟೇಷನ್ಗಳಿವೆ. ಅಂದಾಜು 12 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಾರ್ಗದಲ್ಲಿ 5 ಸಾವಿರ ಕೋಟಿಯಷ್ಟು ವೆಚ್ಚದಲ್ಲಿ ಅಂಡರ್ ಗ್ರೌಂಡ್ ಕಾಮಗಾರಿ ನಡೆಯುತ್ತಿದೆ. ಅಂಡರ್ ಗ್ರೌಂಡ್ ಮೆಟ್ರೋ…
ಕನ್ನಡದ ನಟ ಡಾಲಿ ಧನಂಜಯ್ ಮೈಸೂರಿನಲ್ಲಿ ಅದ್ಧೂರಿಯಾಗಿ ಚಿತ್ರದುರ್ಗ ಮೂಲದ ಡಾ.ಧನ್ಯತಾ ಅವರನ್ನು ಮದುವೆಯಾಗಿದ್ದಾರೆ. ಗುರು ಹಿರಿಯರು, ಗಣ್ಯರು ಅಭಿಮಾನಿಗಳ ಸಮ್ಮುಖದಲ್ಲಿ ತಾಳಿ ಕಟ್ಟಿ ಹೊಸ ಜೀವನ ಆರಂಭಿಸಿದ್ದಾರೆ. ಮೊನ್ನೆ ಅದ್ದೂರಿಯಾಗಿ ಆರತಕ್ಷತೆ, ನಿನ್ನೆ ಮಾಂಗಲ್ಯ ಧಾರಣೆ ನೆರವೇರಿದೆ. ಮೈಸೂರಿನ ವಸ್ತು ಪ್ರದರ್ಶನ ವೇದಿಕೆಯಲ್ಲಿ ಧನಂಜಯ್ ಹಾಗೂ ಧನ್ಯತಾ ಸತಿ, ಪತಿಗಳಾಗಿದ್ದಾರೆ.ಇದೀಗ ಧನ್ಯತಾರನ್ನು ಧನಂಜಯ್ ಕುಟುಂಬಸ್ಥರು ಅದ್ದೂರಿಯಾಗಿ ಮನೆ ತುಂಬಿಸಿಕೊಂಡಿದ್ದಾರೆ. ಅರಸೀಕೆರೆಯ ಕಾಳೇನಹಳ್ಳಿ ನಿವಾಸಕ್ಕೆ ಬಂದ ನವಜೋಡಿಯನ್ನು ಕುಟುಂಬಸ್ಥರು ಸಂಭ್ರಮದಿಂದ ಮನೆ ತುಂಬಿಸಿಕೊಂಡಿದ್ದಾರೆ. ನೆನ್ನೆ ಸಂಜೆಯೇ ಮುದ್ದಿನ ಸೊಸೆಯನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆದಿದ್ದು, ಸುಮಾರು 7 ಗಂಟೆಗೆ ಮನೆ ತುಂಬಿಸಿಕೊಳ್ಳಲಾಗಿದೆ. ಈ ವೇಳೆ ವೇಳೆ ಧನ್ಯತಾ ಹಾಗೂ ಡಾಲಿ ಕುಟುಂಬಸ್ಥರು ಹಾಜರಿದ್ದರು.
ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಗರಾಜ್ ಮಹಾ ಕುಂಭಕ್ಕೆ ಹೋಗಲು ವಿವಿಧ ರೈಲುಗಳನ್ನು ಹತ್ತಲು ಭಾರಿ ಜನಸಮೂಹ ಪ್ರಯತ್ನಿಸುತ್ತಿದ್ದಾಗ ಕಾಲ್ತುಳಿತ ಸಂಭವಿಸಿದೆ. ಈ ಅಪಘಾತದಲ್ಲಿ 18 ಜನರು ಸಾವನ್ನಪ್ಪಿದರು ಮತ್ತು ಡಜನ್ಗಟ್ಟಲೆ ಜನರು ಗಾಯಗೊಂಡರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಎಲ್ಎನ್ಜೆಪಿ ಮತ್ತು ಲೇಡಿ ಹಾರ್ಡಿಂಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲಾ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ. ಘಟನೆಯ ನಂತರ ರೈಲು ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ನಿಲ್ದಾಣದ ಆವರಣದಲ್ಲಿ ಭದ್ರತಾ ಪಡೆಗಳ ಒಂದು ಕಂಪನಿಯನ್ನು ನಿಯೋಜಿಸಲಾಗಿದೆ. ಮೆಟ್ರೋ ಭದ್ರತೆಯಲ್ಲಿ ತೊಡಗಿರುವ ಸಿಐಎಸ್ಎಫ್ ಕಂಪನಿಯನ್ನು ರೈಲ್ವೇ ಭದ್ರತೆಗಾಗಿ ನಿಯೋಜಿಸಲಾಗಿದೆ. ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತ ವಿಜಯ್ ಸಿಂಗ್ ಮಾತನಾಡಿ, ದೆಹಲಿ ರೈಲು ನಿಲ್ದಾಣದ ಭದ್ರತೆಗಾಗಿ ಎಂಟು ಕಂಪನಿಗಳ ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ. ಜೊತೆಗೆ 80 ಸಿಬ್ಬಂದಿಯನ್ನು ಒಳಗೊಂಡ ಮೆಟ್ರೋ ಪೊಲೀಸ್ ಕಂಪನಿಯನ್ನು ನಿಯೋಜಿಸಲಾಗಿದೆ. ಇದಲ್ಲದೆ, ಮೆಟ್ರೋದಿಂದ ಮೂವರು ಇನ್ಸ್ಪೆಕ್ಟರ್ಗಳು ಮತ್ತು ಒಬ್ಬ ಎಸಿಪಿಯನ್ನು ನಿಯೋಜಿಸಲಾಗಿದೆ. ರೈಲ್ವೇ ಪೊಲೀಸ್ ಮತ್ತು ಜಿಆರ್ಪಿಯ ಪ್ರತ್ಯೇಕ…
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ತಾಯಿಯೊಬ್ಬಳು ತನ್ನ 5 ವರ್ಷದ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹೌದು ಗಂಡನ ಅನೈತಿಕ ಸಂಬಂಧಕ್ಕೆ ಬೇಸತ್ತು ಅಧ್ಯಕ್ಷೆಯೂ ಆಗಿರುವ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ. ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ವರ್ಷದ ಮಗಳು ರೋಷಿಣಿಯನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಟವಾಡಲು ಹೊರಹೋಗಿದ್ದ ಪುತ್ರ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆಗೆ ಮುನ್ನ ಶ್ರುತಿ ಡೆತ್ನೋಟ್ ಬರೆದಿಟ್ಟಿದ್ದು, ಡೆತ್ನೋಟ್ನಲ್ಲಿ ಗಂಡ ಪರಸ್ತ್ರಿಯೊಂದಿಗಿನ ಅನೈತಿಕ ಸಂಬಂಧದ ಹೊಂದಿರುವ ಬಗ್ಗೆ ಉಲ್ಲೇಖಿಸಿದ್ದಾರೆ. https://ainlivenews.com/do-you-want-wealth-to-come-looking-for-you-then-you-shouldnt-buy-a-broom-these-days/ 10 ವರ್ಷದ ಹಿಂದೆ ಶ್ರುತಿ ಚಾರ್ಟರ್ಡ್ ಅಕೌಂಟೆಂಟ್ ಜತೆ ಮದುವೆಯಾಗಿದ್ದರು. ಅಲ್ಲದೇ ಶ್ರುತಿ ಗ್ರಾಮ ಪಂಚಾಯಿತಿ ಒಂದರ ಅಧ್ಯಕ್ಷೆಯಾಗಿದ್ದು, ಒಂದು ಹೆಣ್ನು ಒಂದು ಗಂಡು ಮಗು ಸಹ ಇದೆ. ಆದ್ರೆ, ಗಂಡನ ಅನೈತಿಕ…
ಬೆಂಗಳೂರು: ಮೆಟ್ರೋ ದರ ಏರಿಕೆ ಆಗಿರುವುದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದರ ಏರಿಕೆ ಜನಕ್ಕೆ ಹೊರೆ ಆಗುತ್ತದೆ. ಅದಕ್ಕಾಗಿ ನಾನು ಕೇಂದ್ರ ಸರ್ಕಾರಕ್ಕೆ ಸಬ್ಸಿಡಿ ಕೊಡಲಿ ಎಂದು ಹೇಳುತ್ತೇನೆ. ಮೆಟ್ರೋ ದರ ಏರಿಕೆ ಆಗಿರುವುದಕ್ಕೆ ಕೇಂದ್ರ ಸರ್ಕಾರವೇ ಕಾರಣ. ಮೋದಿ ಅವರನ್ನು ಪ್ರಶ್ನಿಸಲು ನಮ್ಮ ಸಂಸದರಿಗೆ ಧೈರ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು. ರೈಲ್ವೆ ವಿಷಯ ಬಂದ ಕೂಡಲೇ ಪಿಸಿ ಮೋಹನ್, ತೇಜಸ್ವಿಸೂರ್ಯ ನಾವೇ ಮೆಟ್ರೋ ತಂದಿದ್ದು ಎನ್ನುವ ರೀತಿ ಮಾತಾಡ್ತಾರೆ. https://ainlivenews.com/do-you-want-wealth-to-come-looking-for-you-then-you-shouldnt-buy-a-broom-these-days/ ಮನಮೋಹನ್ ಸಿಂಗ್ ನೇತೃತ್ವದಲ್ಲಿ ಮೆಟ್ರೋ ಬಂದಿದೆ. ಕೆಲವರು ಫೋಸ್ ಕೊಡೋ ಕೆಲಸ ಮಾಡುತ್ತಾರೆ. ಪ್ರಹ್ಲಾದ್ ಜೋಶಿ ಕೂಡಾ ಸುಳ್ಳು ಹೇಳ್ತಾರೆ. ಬೊಮ್ಮಾಯಿ, ಶೆಟ್ಟರ್ ಕೂಡಾ ಮೆಟ್ರೋ ದರ ರಾಜ್ಯ ಏರಿಕೆ ಮಾಡಿದ್ದು ಅಂತಾರೆ.ಮಾಜಿ ಸಿಎಂ ಆದವರು ಹೀಗೆ ಹಸಿಸುಳ್ಳು ಹೇಳ್ತಾರೆ. ಇವರಿಗೆ ಸಿಎಂ ಆಗಲಿ ಅರ್ಹತೆ ಇರಲಿಲ್ಲ. ಅಂತವರನ್ನ ಬಿಜೆಪಿ ಸಿಎಂ ಮಾಡಿತ್ತು ಎಂದು ಸಿಟ್ಟು ಹೊರ ಹಾಕಿದರು.