ನವದೆಹಲಿ : ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಮಹಾಕುಂಭ ಸಾವಿರಾರು ಭಕ್ತರು ಪ್ರಯಾಗರಾಜ್ಗೆ ತೆರಳುತ್ತಿದ್ದರಿಂದ ಜನಸಂದಣಿಯುಂಟಾದ ಪರಿಣಾಮ ಈ ದುರಂತ ಸಂಭವಿಸಿದೆ. ನಾನು ಈವರೆಗೂ ಇಂತ ಜನದಟ್ಟಣೆ ನೋಡೇ ಇಲ್ಲ ಎಂದು ಅಲ್ಲಿನ ಅಧಿಕಾರಿ ಪ್ರತಿಕ್ರಿಯಿಸಿದ್ದಾರೆ, ಈ ಘಟನೆಯ ಕುರಿತು ಮಾತನಾಡಿರುವ ಪ್ರತ್ಯಕ್ಷದರ್ಶಿ ಐಎಎಫ್ ಸಿಬ್ಬಂದಿ ಪ್ರಯಾಣಿಕರ ಮನವೊಲಿಸುವ ಪ್ರಯತ್ನಗಳು ನಡೆದರೂ, ಸಹ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದನ್ನು ತಡೆಯಲಾಗಲಿಲ್ಲ. ಜನದಟ್ಟಣೆ ನಿಯಂತ್ರಿಸಲು ಎಷ್ಟು ಪ್ರಯತ್ನಿಸಿದರೂ, ಜನರು ಮಾತೇ ಕೇಳುವ ಸ್ಥಿತಿಯಲ್ಲಿರಲಿಲ್ಲ ಎಂದಿದ್ದಾರೆ. ರೈಲ್ವೇ ನಿಲ್ದಾಣದಲ್ಲಿ ತ್ರಿಸೇವಾ ಕಚೇರಿ ಇದೆ. ನನ್ನ ಕರ್ತವ್ಯ ಮುಗಿಸಿ ಹಿಂತಿರುಗುತ್ತಿದ್ದಾಗ ಭಾರೀ ಜನಸಂದಣಿಯನ್ನು ನೋಡಿದೆ. ಈ ವೇಳೆ ಜನರ ಮನವೊಲಿಸಲು ಪ್ರಯತ್ನಿಸಿದ್ದು, ಅನೌನ್ಸ್ ಕೂಡ ಮಾಡಿದೆ. ಆದರೆ ಜನರು ಅದನ್ನು ಕೇಳಲೇ ಇಲ್ಲ ಎಂದಿದ್ದಾರೆ. https://ainlivenews.com/stampede-at-delhi-railway-station-18-people-died/ ಆದರೆ ಈ ಬಗ್ಗೆ ಮತ್ತೋರ್ವ ಪ್ರತ್ಯಕ್ಷದರ್ಶಿ ಪ್ರಯಾಣಿಕರು ಪ್ರತಿಕ್ರಿಯಿಸಿದ್ದು, ಮಿತಿ ಮೀರಿದ ಜನ ಸೇರಿದ್ದರು. ಸೇತುವೆಯ ಮೇಲೆ ಜನ ಜಮಾಯಿಸಿದ್ದರು. ಇಷ್ಟೊಂದು…
Author: Author AIN
ನವದೆಹಲಿಯ ರೈಲ್ವೇ ನಿಲ್ದಾಣದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, 18 ಮಂದಿ ಮೃತರಾಗಿದ್ದಾರೆ. ದೆಹಲಿಯಿಂದ ಪ್ರಯಾಜ್ ರಾಜ್ಗೆ ಹೊರಡಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ದ ಹಿನ್ನೆಲೆ ಜನಸಂದಣಿ ಹೆಚ್ಚಾಗಿ, ಕಾಲ್ತುಳಿತ ಸಂಭವಿಸಿದೆ. ಮಹಾಕುಂಭಮೇಳಕ್ಕೆ ಹೊರಟ್ಟಿದ್ದ ನಾಲ್ವರು ಮಕ್ಕಳು, 11 ಮಹಿಳೆಯರು ಸೇರಿದಂತೆ 18 ಮಂದಿ ಸಾವನ್ನಪ್ಪಿದ್ದಾರೆ. https://ainlivenews.com/horrific-accident-a-man-from-raichur-who-was-returning-from-the-kumbh-mela-died/ ಪ್ರಯಾಗ್ ರಾಜ್ಗೆ ಹೊರಟಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಕಾರಣ ಇಡೀ ರೈಲು ನಿಲ್ದಾಣ ತುಂಬಿ ಹೋಗಿತ್ತು. ನವದೆಹಲಿಯಿಂದ ಪ್ರಯಾಗ್ ರಾಜ್ಗೆ ಎರಡು ವಿಶೇಷ ರೈಲುಗಳ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇದಕ್ಕೂ ಮುನ್ನ ಹೊರಡಬೇಕಿದ್ದ ಭುವನೇಶ್ವರಕ್ಕೆ ತೆರಳಬೇಕಿದ್ದ ರಾಜಧಾನಿ ಮತ್ತು ಸ್ವತಂತ್ರ್ಯ ಸೇನಾನಿ ಎಕ್ಸಪ್ರೆಸ್ ರೈಲುಗಳು ತಡವಾದ ಕಾರಣ, ಎಲ್ಲಾ ಪ್ರಯಾಣಿಕರು ಸೇರಿ ಜನಸಂದಣಿಯಾಗಿದ್ದು, ನೂಕು ನುಗ್ಗಲು ಏರ್ಪಟ್ಟಿದೆ. ಕಾಲ್ತುಳಿದಲ್ಲಿ ಈವರೆಗೂ 18 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಹಾವೇರಿ: ದನದ ಕೊಟ್ಟಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು, ಹಸು-ಕರುಗಳು ಸಜೀವದಹನವಾಗಿವೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾ,ಮದಲ್ಲಿ ಘಟನೆ ನಡೆದಿದೆ. https://ainlivenews.com/horrific-accident-a-man-from-raichur-who-was-returning-from-the-kumbh-mela-died/ ರೈತ ನಾಗಪ್ಪ ಅಸುಂಡಿ, ಹನುಮಂತಪ್ಪ ಅಸುಂಡಿ ಎಂಬುವರಿಗೆ ಸೇರಿದ ದನದ ಕೊಟ್ಟಿಗೆ ಬೆಂಕಿಗಾಹುತಿಯಾತಿದೆ. ಪರಿಣಾಮವಾಗಿ 6 ಹಸು, 2 ಕರುಗಳು ಸ್ಥಳದಲ್ಲಿಯೇ ಸಜೀವ ದಹನಗೊಂಡಿವೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸೂರ್ಯೋದಯ – 6:45 ಬೆ. ಸೂರ್ಯಾಸ್ತ – 6:14 ಸಂಜೆ. ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಶಿಶಿರ ಋತು, ಮಾಘ ಮಾಸ, ತಿಥಿ – ಚೌತಿ ನಕ್ಷತ್ರ – ಹಸ್ತ ಯೋಗ – ಧೃತಿ ಕರಣ – ಬವ ರಾಹು ಕಾಲ – 04:30 ದಿಂದ 06:00 ವರೆಗೆ ಯಮಗಂಡ – 12:00 ದಿಂದ 01:30 ವರೆಗೆ ಗುಳಿಕ ಕಾಲ – 03:00 ದಿಂದ 04:30 ವರೆಗೆ ಬ್ರಹ್ಮ ಮುಹೂರ್ತ – 5:09 ಬೆ.ದಿಂದ 5:57 ಬೆ.ವರೆಗೆ ಅಮೃತ ಕಾಲ – 9:47 ರಾ.ದಿಂದ 11:34 ರಾ.ವರೆಗೆ ಅಭಿಜಿತ್ ಮುಹುರ್ತ – 12:07 ಮ. ದಿಂದ 12:53 ಮ.ವರೆಗೆ ಮೇಷ ರಾಶಿ: ಸ್ಟಾಕ್ ಷೇರಿನ ವ್ಯಾಹಾರದಲ್ಲಿ ಸಾಕಷ್ಟು ಲಾಭ ಗಳಿಸುವಿರಿ,ಜ್ಯೂಸು ಅಂಗಡಿ ಮಾರಾಟಗಾರರಿಗೆ ಲಾಭ, ರಂಗಭೂಮಿ ಕಲಾವಿದರಿಗೆ ಶುಭದಾಯಕ, ಪಾಲುದಾರಿಕೆ ವ್ಯಾಪಾರ ಬೇಡವೇ ಬೇಡ, ರಾಜಕೀಯ ಮುಖಂಡರಿಗೆ ಸೂಕ್ತ ಸಮಯವಲ್ಲ, ಗೃಹ ನಿರ್ಮಾಣ…
ನಾಳೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕಾಮನ್ ಡಿಪಿ ಬಿಡುಗಡೆ ಮಾಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಈ ಬಾರಿಯ ಹುಟ್ಟುಹಬ್ಬವನ್ನು ಸಾಕಷ್ಟು ಸರಳವಾಗಿ ಆಚರಿಸಿಕೊಳ್ಳಲು ದರ್ಶನ್ ಮುಂದಾಗಿದ್ದಾರೆ. ಈ ವರ್ಷದ ಹುಟ್ಟುಹಬ್ಬ ದರ್ಶನ್ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಕಳೆದ ಏಳೆಂಟು ತಿಂಗಳಲ್ಲಿ ದರ್ಶನ್ ಜೀವನ ಸಾಕಷ್ಟು ಏರಿಳಿತಗಳನ್ನು ಕಂಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಾಗಿದೆ. ಜೈಲಿನಿಂದ ಹೊರಬಂದ ಬಳಿಕ ಎದುರು ಬಂದಿರುವ ಮೊದಲ ಹುಟ್ಟುಹಬ್ಬ ಇದಾಗಿದೆ. ಹಾಗಾಗಿ ಈ ಹುಟ್ಟುಹಬ್ಬ ದರ್ಶನ್ ಪಾಲಿಗೆ ಅವರ ಕುಟುಂಬದವರ ಪಾಲಿಗೆ ಅತ್ಯಂತ ಪ್ರಮುಖವಾದುದ್ದಾಗಿದೆ. ದರ್ಶನ್ ಅವರ ಹುಟ್ಟುಹಬ್ಬದ ಕಾಮನ್ ಡಿಪಿಯನ್ನು ಅವರ ಪತ್ನಿ ವಿಜಯಲಕ್ಷ್ಮಿ ಬಿಡುಗಡೆ ಮಾಡಿದ್ದಾರೆ. ಇದು ಮೊದಲನೇ ಬಾರಿಗೆ ವಿಜಯಲಕ್ಷ್ಮಿ ಅವರು ದರ್ಶನ್ ಹುಟ್ಟುಹಬ್ಬದ ಕಾಮನ್ ಡಿಪಿ ಬಿಡುಗಡೆ ಮಾಡುತ್ತಿದ್ದಾರೆ. ಸದ್ಯ ಬಿಡುಗಡೆ ಮಾಡಲಾಗಿರುವ ಡಿಪಿಯಲ್ಲಿ, ದರ್ಶನ್ರ ದೊಡ್ಡ ಕಟೌಟ್ನ ಚಿತ್ರವಿದ್ದು, ಚಿತ್ರದಲ್ಲಿ ಅಭಿಮಾನಿಗಳೆಡೆಗೆ ದರ್ಶನ್ ಕೈಬೀಸುತ್ತಿದ್ದಾರೆ. ಹಿನ್ನೆಲೆಯಲ್ಲಿ ಹಲವು…
ಸಮಯ್ ರೈನಾ ಅವರ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದಲ್ಲಿ ‘ಪೋಷಕರ ಲೈಂಗಿಕತೆ’ ಬಗ್ಗೆ ಹೇಳಿಕೆ ನೀಡಿ ರಣವೀರ್ ಅಲ್ಲಾಬಾಡಿಯಾ ಸಾಕಷ್ಟು ವಿವಾದಕ್ಕೆ ಸೃಷ್ಟಿಸಿದ್ದಾರೆ. ಈಗಾಗಲೇ ಸಮಯ್ ಹಾಗೂ ರಣವೀರ್ ವಿರುದ್ಧ ದೂರುಗಳು ದಾಖಲಾಗಿವೆ. ಪೋಷಕರ ಬಗ್ಗೆ ನನ್ನ ಹೇಳಿಕೆಯು ಅಸೂಕ್ಷ್ಮ ಮತ್ತು ಅಗೌರವದಿಂದ ಕೂಡಿತ್ತು. ಉತ್ತಮವಾಗಿ ಕಾರ್ಯನಿರ್ವಹಿಸುವುದು ನನ್ನ ನೈತಿಕ ಜವಾಬ್ದಾರಿ. ಅದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ ಎಂದು ರಣವೀರ್ ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ. ರಣವೀರ್ ಅಲ್ಲಾಹಬಾಡಿಯಾ ಒಬ್ಬ ಯೂಟ್ಯೂಬರ್ ಆಗಿದ್ದು, ಜನಪ್ರಿಯ ವ್ಯಕ್ತಿಗಳೊಂದಿಗೆ ಪಾಡ್ಕ್ಯಾಸ್ಟ್ ಶೋಗಳನ್ನು ಮಾಡುವುದರಲ್ಲಿ ಹೆಸರುವಾಸಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಅಪಾರ ಅನುಯಾಯಿಗಳನ್ನು ಹೊಂದಿರುವ ಯೂಟ್ಯೂಬರ್ ದಿನದಿಂದ ದಿನಕ್ಕೆ ಜನಪ್ರಿಯರಾಗುತ್ತಿದ್ದರು. ಆದರೆ, ಸಮಯ್ ರೈನಾ ಅವರ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಶೋನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ನಂತರ, ಅವರ ಜೀವನವು ಅಸ್ತವ್ಯಸ್ತವಾಗಿದೆ. ಯೂಟ್ಯೂಬರ್ ರಾಷ್ಟ್ರವ್ಯಾಪಿ ಮಟ್ಟದಲ್ಲಿ ಹಲವಾರು ಎಫ್ಐಆರ್ಗಳು ಮತ್ತು ಆನ್ಲೈನ್ ಪ್ರತಿಕ್ರಿಯೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ಮತ್ತೊಂದು ಕ್ಷಮೆಯಾಚನೆಯ ವಿಡಿಯೋ ಮಾಡಿರುವ ಯೂಟ್ಯೂಬರ್ ರಣವೀರ್ ಅಧಿಕಾರಿಗಳೊಂದಿಗೆ ಸಹಕರಿಸುವುದಾಗಿ ಮತ್ತು ಸೂಕ್ತ…
1990 ರಲ್ಲಿ “ಕಳ್ಳ ಬಂದ ಕಳ್ಳ” ಸಿನಿಮಾ ಮೂಲಕ ಸಿನಿಜರ್ನಿ ಆರಂಭಿಸಿದ ನಿರ್ದೇಶಕ ಸೆಬಾಸ್ಟಿಯನ್ ಡೇವಿಡ್ ಈವರೆಗೂ “ಅನಿಶ್ಚಿತ”, ” ಜ್ಯೋತಿ ಅಲಿಯಾಸ್ ಕೋತಿರಾಜ್”, “ಮಾನ”, ” ಧ್ವನಿ” “ಬೇಲಿ ಹೂ” ಹಾಗೂ ಪ್ರಸ್ತುತ ತನಿಷಾ ಕುಪ್ಪಂಡ ಹಾಗೂ ಮಾಲಾಶ್ರೀ ಅವರು ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ಪೆನ್ ಡ್ರೈವ್” ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಸೆಬಾಸ್ಟಿಯನ್ ಡೇವಿಡ್ ಅವರ ನಿರ್ದೇಶನದ ಎಲ್ಲಾ ಚಿತ್ರಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ವೆಂಕಟೇಶ್ ಎಸ್ ನಿರ್ಮಿಸಿ, ಸೆಬಾಸ್ಟಿಯನ್ ಡೇವಿಡ್ ಅವರು ನಿರ್ದೇಶಿಸಿರುವ ಹಾಗೂ ಸಂಪತ್ ಮೈತ್ರೇಯ, ಶ್ವೇತ ಶ್ರೀವಾಸ್ತವ್, ಲಯನ್ ವೆಂಕಟೇಶ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಬೇಲಿ ಹೂ” ಚಿತ್ರ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಇಂಡಿಯಾ ಸಿನಿಮಾ ಹಾಗೂ ಕನ್ನಡ ಸಿನಿಮಾ ಎರಡು ವಿಭಾಗಗಳಿಗೆ ಆಯ್ಕೆಯಾಗಿದೆ. ಅದರಲ್ಲೂ ಇಂಡಿಯಾ ಸಿನಿಮಾ ವಿಭಾಗದಲ್ಲಿ ಆಯ್ಕೆಯಾಗಿರುವ ಏಕೈಕ ಕನ್ನಡ ಸಿನಿಮಾ “ಬೇಲಿ ಹೂ”. ಇದು ನಿಜಕ್ಕೂ ನಮ್ಮೆಲ್ಲರಿಗೂ ಹೆಮ್ಮೆಯ ಹಾಗೂ ಸಂತೋಷದ ಸಂಗತಿ. ಇದೊಂದು…
ಜಗತ್ತಿನ ಶ್ರೀಮಂತ ವ್ಯಕ್ತಿ, ಟ್ವಿಟ್ಟರ್ ಸಂಸ್ಥೆ ಮಾಲಿಕ ಎಲಾನ್ ಮಸ್ಕ್ ನನಗೆ ಹಲವಾರು ದೇಶದಲ್ಲಿ ಹಲವಾರು ಜೈವಿಕ ಮಕ್ಕಳು ಇದ್ದಾರೆ ಅಂತ ಹೇಳಿಕೊಂಡಿದ್ದಾರೆ. ವಿರ್ಯದಾನದ ಮೂಲಕ ನಾನು ಹಲವು ಮಕ್ಕಳಿಗೆ ಜನ್ಮ ನೀಡಿದ್ದೇನೆ ಎಂದು ಸ್ವತಃ ಮಸ್ಕ್ ಹೇಳಿದ್ದರು. ಈಗ ಖ್ಯಾತ ಇನ್ಫ್ಲೂಯೆನ್ಸರ್ ಹಾಗೂ ಅಂಕಣಕಾರ್ತಿ ಆಶ್ಲೇಯ್ ಎಸ್ಟಿ ಕ್ಲೇರ್, ನಾನು ಎಲಾನ್ ಮಸ್ಕ್ನ 13ನೇ ಮಗುವಿಗೆ ಜನ್ಮ ನೀಡಿದ್ದೇನೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ರಿವೀಲ್ ಮಾಡಿರುವ ಆಶ್ಲೇಯ್ ಎಸ್ಟಿ ಕ್ಲೇರ್, ನಾನು ಇತ್ತೀಚೆಗೆ ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದೇನೆ ಅದರ ತಂದೆ ಎಲಾನ್ ಮಸ್ಕ್ ಎಂದು ಹೇಳಿದ್ದಾರೆ. ಐದು ತಿಂಗಳುಗಳ ಹಿಂದೆ ನಾನು ಮಗುವಿಗೆ ಜನ್ಮ ನೀಡಿದ್ದೆ ಮಗುವಿನ ಜನ್ಮದ ಖಾಸಗಿತನ ಹಾಗೂ ರಕ್ಷಣೆಗಾಗಿ ನಾನು ಇಲ್ಲಿಯವರೆಗೂ ಏನೂ ಹೇಳಿರಲಿಲ್ಲ. ಈಗ ಹೇಳಬೇಕಾದ ಸಂದರ್ಭ ಬಂದಿದ್ದರಿಂದ ಹೇಳಿದ್ದೇನೆ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.ಎಲಾನ್ ಮಸ್ಕ್ ಈ ಮಗುವಿನ ತಂದೆ. ನಾನು…
ಸ್ಯಾಂಡಲ್ವುಡ್ನ ನಟ ಧನಂಜಯ ಡಾಕ್ಟರ್ ಧನ್ಯತಾ ಜೊತೆ ಹಸೆಮಣೆ ಏರಲಿದ್ದಾರೆ. ಈಗಾಗಲೇ ಅದ್ದೂರಿಯಾಗಿ ಮದುವೆ ಮುನ್ನ ಕಾರ್ಯಕ್ರಮಗಳು ನಡೆಯುತ್ತಿದ್ದು ಹಲವರು ಆಗಮಿಸಿ ನವ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಅರಮನೆಗಳ ನಗರಿ ಮೈಸೂರು ವಸ್ತು ಸಂಗ್ರಹಾಲಯ ಮೈದಾನದಲ್ಲಿ ಇಂದು ಸಂಜೆ ಧನಂಜಯ ಹಾಗೂ ಧನ್ಯತಾ ಅವರ ಆರತಕ್ಷತೆ ಸಡಗರ ನಡೆಯಲಿದ್ದು ಇದಕ್ಕಾಗಿ ತೆಲುಗಿನ ಪುಷ್ಪ ಸಿನಿಮಾದ ನಿರ್ದೇಶಕರು ಆಗಮಿಸಿದ್ದಾರೆ. ಡಾಲಿ ಧನಂಜಯ ಅವರು ಕೇವಲ ಕನ್ನಡ ಸಿನಿಮಾಗಳಲ್ಲಿ ಮಾತ್ರವಲ್ಲದೇ ತೆಲುಗು, ತಮಿಳು ಸಿನಿಮಾಗಳಲ್ಲೂ ಅಭಿನಯ ಮಾಡಿದ್ದಾರೆ. ಹೀಗಾಗಿ ಧನಂಜಯ್ ಮದುವೆಗೆ ಕನ್ನಡದ ಜೊತೆಗೆ ಪರಭಾಷೆಯ ಮಂದಿಯೂ ಆಗಮಿಸುವ ನಿರೀಕ್ಷೆ ಇದೆ. ಇದೀಗ ಪುಷ್ಪ ಸಿನಿಮಾ ನಿರ್ದೇಶಕ ಸುಕುಮಾರ್ ಅವರು ಮೈಸೂರಿಗೆ ಆಗಮಿಸಿದ್ದಾರೆ. ಈ ವೇಳೆ ಮದುವೆ ಬ್ಯುಸಿಯಲ್ಲಿರುವ ಧನಂಜಯ ಅವಸರದಲ್ಲೇ ನಿರ್ದೇಶಕ ಸುಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ತೆಲುಗು ನಿರ್ದೇಶಕ ಸುಕುಮಾರ್ ಅವರು ಡಾಲಿ ಧನಂಜಯ ಅವರಿಗೆ ಪುಷ್ಪ ಸಿನಿಮಾ ಭಾಗ-1 ರಲ್ಲಿ ಜಾಲಿ ರೆಡ್ಡಿ ಎನ್ನುವ ಪಾತ್ರವನ್ನು ನೀಡಿದ್ದರು. ಈ ಪಾತ್ರವನ್ನು…
ವಾಶಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗಿನ ಮಾತುಕತೆಯಲ್ಲಿ ಮೋದಿ ಅವರು ನೆರೆಯ ರಾಷ್ಟ್ರವಾದ ಬಾಂಗ್ಲಾದಲ್ಲಿನ ಬೆಳವಣಿಗೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಟ್ರಂಪ್ ಅವರು ಬಾಂಗ್ಲಾದ ರಾಜಕೀಯ ವಿದ್ಯಮಾನಗಳಲ್ಲಿ ಅಮೆರಿಕವು ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ನಡೆಸಿಲ್ಲವೆಂದು ಸ್ಪಷ್ಟಪಡಿಸಿದರು. ಬಾಂಗ್ಲಾದ ಸಮಸ್ಯೆಯನ್ನು ನಿಭಾಯಿಸುವ ಹೊಣೆಯನ್ನು ಮೋದಿ ಅವರಿಗೇ ವಹಿಸಿದ್ದೇನೆ ಎಂದು ಹೇಳಿದರು. ಆಗಸ್ಟ್ 5, 2024 ರಂದು ಶೇಖ್ ಹಸೀನಾ ನೇತೃತ್ವದ ಸರ್ಕಾರವು ಪತನವಾದಾಗಿನಿಂದ ಢಾಕಾದಲ್ಲಿ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನಸ್ ಹೆಸರಿನ ಮಧ್ಯಂತರ ಸರ್ಕಾರವು ಉಸ್ತುವಾರಿ ವಹಿಸಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಚರ್ಚೆಯ ನಂತರ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮಿಸ್ರಿ, ಢಾಕಾದಲ್ಲಿನ ಮಧ್ಯಂತರ ಸರ್ಕಾರದೊಂದಿಗೆ ಭಾರತವು “ರಚನಾತ್ಮಕ” ಸಂಬಂಧವನ್ನು ಆಶಿಸುತ್ತಿದೆ ಎಂದು ಹೇಳಿದರು, ಇದು ಶ್ರೀಮತಿ ಹಸೀನಾಗೆ ಆತಿಥ್ಯ ವಹಿಸುವುದನ್ನು ಒಳಗೊಂಡಂತೆ ಹಲವಾರು ಅಂಶಗಳಲ್ಲಿ ನವದೆಹಲಿಯನ್ನು ಟೀಕಿಸಿದೆ.