Author: Author AIN

ಬೆಂಗಳೂರು: ಸಿದ್ದರಾಮಯ್ಯ, ಡಿಕೆಶಿ ಸೇರಿ ಎಲ್ಲರ ಜೊತೆ ನಾನು ನೀರಾವರಿ ವಿಚಾರವಾಗಿ ಮಾತಾಡೋಕೆ ಸಿದ್ಧ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗೋದಾವರಿ-ಕೃಷ್ಣ-ಕಾವೇರಿ ಯೋಜನೆ ವಿಚಾರವಾಗಿ ನೀರು ಹೆಚ್ಚಳ ಮಾಡುವಂತೆ ನಾನು ಪ್ರಧಾನಿಗಳು, ನೀರಾವರಿ ಸಚಿವರಿಗೆ 2022 ಮತ್ತು 2024 ರಲ್ಲಿ ಪತ್ರ ಬರೆದಿದ್ದೆ. ಸದ್ಯ ನಮಗೆ 15.891 TMC ನೀರು ಹಂಚಿಕೆ ಮಾಡಲಾಗಿದೆ. ಆದರೆ, ಈ ಪ್ರಮಾಣವನ್ನು 25 TMC ಗೆ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದ್ದಾರೆ. https://ainlivenews.com/women-benefit-more-from-eating-poppy-seeds-than-men-youll-be-shocked-to-hear/ ಸಂಸತ್‌ನಲ್ಲಿ ಈ ಬಗ್ಗೆ ನಾನು ಮಾತಾಡಿದ್ದೇನೆ. ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ ಅವರು ಪ್ರಧಾನಿ ಮೋದಿ ಅವರ ಬಳಿ ಮಾತಾಡ್ತಾರೆ. ಮೋದಿ ಅವರು ನಮಗೆ ಹತ್ತಿರ ಇರೋದ್ರಿಂದ ಈ ಯೋಜನೆ ಅನುಷ್ಠಾನಕ್ಕೆ ಪ್ರಯತ್ನ ಮಾಡ್ತೀನಿ. ನೀರಾವರಿ ವಿಚಾರವಾಗಿ ನಮ್ಮಲ್ಲಿ ಯಾವುದೇ ರಾಜಕೀಯ ಇಲ್ಲ. ಸಿದ್ದರಾಮಯ್ಯ, ಡಿಕೆಶಿವಕುಮಾರ್, ಕಾಂಗ್ರೆಸ್ ಸಂಸದರು ಎಲ್ಲರ ಜೊತೆ ನಾನು ನೀರಾವರಿ ವಿಚಾರವಾಗಿ ಮಾತಾಡೋಕೆ ಸಿದ್ಧ. ನಮಗೆ ಸಮಸ್ಯೆ ಪರಿಹಾರ ಆಗಬೇಕು. ಇದಕ್ಕೆ…

Read More

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (WPL) ನ ಮೂರನೇ ಸೀಸನ್ ಆರಂಭವಾಗಿದ್ದರೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಈಗಾಗಲೇ ಹಿನ್ನಡೆಯನ್ನು ಎದುರಿಸುತ್ತಿದೆ, ಏಕೆಂದರೆ ಕ್ರಿಕೆಟ್ ನೆಕ್ಸ್ಟ್ ನ ಮೂಲಗಳು ಆಫ್-ಸ್ಪಿನ್ನರ್ ಶ್ರೇಯಾಂಕ ಪಾಟೀಲ್ ಇತ್ತೀಚಿನ ಗಾಯದಿಂದಾಗಿ ಇಡೀ ಸೀಸನ್ ಗೆ ಹೊರಗುಳಿಯುವ ಸಾಧ್ಯತೆಯಿದೆ ಎಂದು ಹೇಳಿವೆ. ಕನ್ನಡತಿ ಶ್ರೇಯಾಂಕಾ ಪಾಟೀಲ್‌ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣಕ್ಕಾಗಿ ವೆಸ್ಟ್‌ ಇಂಡೀಸ್‌ ಹಾಗೂ ಐರ್ಲೆಂಡ್‌ ವಿರುದ್ಧದ ಟೂರ್ನಿಗೂ ಅಲಭ್ಯರಾಗಿದ್ದರು. ಮಹಿಳಾ ಪ್ರೀಮಿಯರ್‌ ಲೀಗ್‌ ಶುರುವಾಗುವ ಹೊತ್ತಿಗೆ ಶ್ರೇಯಾಂಕ ಫಿಟ್‌ ಆಗಲಿದ್ದಾರೆ ಎಂದು ಹೇಳಲಾಗ್ತಿತ್ತು. https://ainlivenews.com/women-benefit-more-from-eating-poppy-seeds-than-men-youll-be-shocked-to-hear/ ಆದ್ರೆ ಗುಜರಾತ್‌ ಜೈಂಟ್ಸ್‌ ವಿರುದ್ಧ ನಡೆದ ಉದ್ಘಾಟನಾ ಪಂದ್ಯಕ್ಕೆ ಅಲಭ್ಯರಾಗುವ ಮೂಲಕ ಅವರು ಸಂಪೂರ್ಣ ಫಿಟ್ ಆಗಿಲ್ಲ ಎಂಬುದು ಗೊತ್ತಾಗಿದೆ. ಹೀಗಾಗಿ ಶ್ರೇಯಾಂಕಾ ಪಾಟೀಲ್‌ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ ಎನ್ನಲಾಗುತ್ತಿದೆ. ಶ್ರೇಯಾಂಕ ಬದಲಿಗೆ ಸ್ನೇಹ್‌ ರಾಣಾ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Read More

ಹುಬ್ಬಳ್ಳಿ; ಧಾರವಾಡ ಜಿಲ್ಲೆಯ ಕುಂದಗೋಳ ಕೃಷಿ ಜಮೀನಿನಲ್ಲಿಮಿತ್ರ ಬೆಳೆ ಅಳವಡಿಸಿಕೊಳ್ಳಿ ಎಂದು ಕುಂದಗೋಳ ಸಹಾಯಕ ಕೃಷಿ ನಿರ್ದೇಶಕ ಭಾರತಿ ಮೆಣಸಿನಕಾಯಿ ಹೇಳಿದರು ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಯೋಜಿಸಿದ ಕಡಲೆ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು ನಮ್ಮ ಇಲಾಖೆಯಲ್ಲಿ ಈಗಾಗಲೇ ಕೃಷಿ ಭಾಗ್ಯ ಯೋಜನೆ ಎಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಬಹುದು. ರೈತರಿಗೆ ನೀರಾವರಿ ಮಾಡಿಕೊಳ್ಳಲು ಪೈಪು ಹಾಗೂ ಇನ್ನಿತರ ಎತ್ರೋಪಕರಣಗಳು ಇದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಸಹಾಯಕ ಅಧಿಕಾರಿ ಅಂಬಿಕಾ ಮಹೇಂದ್ರ ಕರ್ ಮಾತನಾಡಿ ನಮ್ಮ ಇಲಾಖೆಯಿಂದ ವಿವಿಧ ತಳಿಗಳ ಕಡಲೆ ಹಾಗೂ ಜೋಳ ಬೀಜಗಳನ್ನು ಬಿತ್ತನೆ ಮಾಡಿ ಕಟಾವು ಮಾಡುತ್ತಿದ್ದೀರಿ ಯಾವ ತಳಿ ಹೆಚ್ಚು ಇಳುವರಿ ಕಾಣುತ್ತದೆ ಮುಂದಿನ ವರ್ಷಗಳಲ್ಲಿ ಹೆಚ್ಚು ಇಳುವರಿ ಬಂದ ಬೀಜಗಳನ್ನು ನಮ್ಮ ಇಲಾಖೆಯಲ್ಲಿ ತರುವಂತ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು. https://ainlivenews.com/women-benefit-more-from-eating-poppy-seeds-than-men-youll-be-shocked-to-hear/ ಈ ಸಂದರ್ಭದಲ್ಲಿ ರತ್ನ ಭಾರತ…

Read More

ಬೀದರ್‌ : ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆ,  ವತಿಯಿಂದ ಸಂತ ಸೇವಾಲಾಲ ಜಯಂತಿಯ ಅಂಗವಾಗಿ ಇಂದು ಬೀದರ್ ನಗರದಲ್ಲಿ ಭವ್ಯ ಮೆರವಣಿಗೆ ಜರುಗಿತು. https://www.youtube.com/watch?v=FwzWZ2srkLU ಸೇವಾಲಾಲ ಮಹಾರಾಜರ ಭಾವಚಿತ್ರಕ್ಕೆ ಅಲಂಕಾರ  ಬೆಳ್ಳಿ ರಥದಲ್ಲಿ ಇರಿಸಿ. ಜಿಲ್ಲಾಧಿಕಾರಿಗಳ ಕಚೇರಿಯಿಂದ ಶಿವಾಜಿ ವೃತ್ತ, ಹರಳಯ್ಯ ವೃತ್ತ, ರೋಟರಿ ಕನ್ನಡಾಂಬೆ ವೃತ್ತದ ಮಾರ್ಗವಾಗಿ ಪೂಜ್ಯ ಡಾ. ಚನ್ನಬಸವ ಪಟ್ಟದ್ದೇವರ ರಂಗಮಂದಿರದವರೆಗೆ ಭವ್ಯ ಮೆರವಣಿಗೆಯನ್ನು ಜರುಗಿತ್ತು. ಲಮಾಣಿ ನೃತ್ಯ ನೋಡುಗರ ಗಮನ ಸೆಳೆಯಿತು. ಭವ್ಯ ಮೆರವಣಿಗೆಗಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗಿಯಾಗಿದ್ದವು. ರಾಜಕೀಯ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಶಿವಮೊಗ್ಗ: ಭದ್ರಾವತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರ ಮೇಲೆ ಶಾಸಕ ಸಂಗಮೇಶ್‌ ಪುತ್ರ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆಂಬ ವಿಡಿಯೋ ವೈರಲ್‌ ಆಗಿತ್ತು. ಶಾಸಕನ ಪುತ್ರನ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಆಗ್ರಹ ಕೇಳಿ ಬಂದಿದ್ದು, ಜೆಡಿಎಸ್‌ ಕೂಡ ಪ್ರತಿಭಟನೆ ನಡೆಸಿತ್ತು. ಇದೀಗ ಈ ಬಗ್ಗೆ ಸಂಗಮೇಶ್‌ ಪುತ್ರ ಬಸವೇಶ್‌ ಪ್ರತಿಕ್ರಿಯಿಸಿದ್ದು, ನಾನೇನು ತಪ್ಪು ಮಾಡಿಲ್ಲ ಎಂದಿದ್ದಾರೆ. https://ainlivenews.com/big-reward-for-information-on-bidar-atm-robbery/ ನಾನು ಯಾವುದೇ ತಪ್ಪು ಮಾಡಿಲ್ಲ, ಪೊಲೀಸರು ಕರೆದರೆ ಅವರಿಗೆ ಸಹಕರಿಸುತ್ತೇನೆ ಎಂದು ಬಸವೇಶ್ ಹೇಳಿದ್ದಾರೆ. ಭದ್ರಾವತಿ ಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದ ಅವರು ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ, ಇದರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ. ಪೊಲೀಸರು ನನಗೆ ಕರೆದರೆ ಪೊಲೀಸ್ ವಿಚಾರಣೆಗೆ ಹಾಜರಾಗುತ್ತೇನೆ. ಇದುವರೆಗೆ ಪೊಲೀಸರು ನನಗೆ ಕರೆದಿಲ್ಲ, ಇಲ್ಲ‌ ಹೆಚ್ಚಾಗಿ ಎಫ್ ಐಆರ್ ನಲ್ಲಿ ನನ್ನ ಹೆಸರೇ ಇಲ್ಲ,  ನನ್ನ ಜೀವನದಲ್ಲಿ ನಾನು ಹಾಗೇ ಮಾತನಾಡುವುದಿಲ್ಲ ಎಂದರು. ನನಗೂ ಈ ಕೇಸ್ ಗೂ ಸಂಬಂಧ ಇಲ್ಲ ಎಂದರು. https://www.youtube.com/watch?v=fGzNs6EQWq0

Read More

ಬೀದ‌ರ್ : ನಗರದ ಎಸ ಬಿ ಐ ಬ್ಯಾಂಕ್ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ  ಮಾಡಿದ ಖದೀಮರ ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದು, ದರೋಡೆಕೋರರ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. https://ainlivenews.com/former-goa-mla-killed-in-belgaum-accused-arrested/ ಕಳೆದ ಜ.16ರಂದು ಬ್ಯಾಂಕಿನಿಂದ ಎಟಿಎಂಗೆ ಜಮೆ ಮಾಡಲು ಹಣ ಕೊಂಡೊಯ್ಯುತ್ತಿದ್ದ ಎಸ್‌ಬಿಐ ನ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ, ₹83 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ದರೋಡೆಕೋರ ಗುಂಡೇಟಿಗೆ ಸಿಎಂಎಸ್ ಕಂಪನಿಯ ಸಿಬ್ಬಂದಿ ಗಿರಿ ವೆಂಕಟೇಶ್‌ ಸ್ಥಳದಲ್ಲೇ ಮೃತಪಟಿದ್ದರೆ, ಶಿವಕುಮಾರ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. https://www.youtube.com/watch?v=fGzNs6EQWq0 ಸದ್ಯ ₹83 ಲಕ್ಣ ಹಣವಿದ್ದ ಟ್ರಂಕ್‌ನೊಂದಿಗೆ ಬೈಕ್ ನಲ್ಲಿ ಪರಾರಿಯಾಗಿದ್ದ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚುವಲ್ಲಿ ಬೀದ‌ರ್ ಜಿಲ್ಲಾ ಪೊಲೀಸರು ಯಶಸ್ವಯಾಗಿದ್ದಾರೆ. ಬಿಹಾರ ರಾಜ್ಯದ ವೈಶಾಲಿ ಜಿಲ್ಲೆಯ ಫತೇಪುರ ಫುಲ್‌ವರಿಯಾ ನಿವಾಸಿ ಅಮನ್ ಕುಮಾರ್ ರಾಜಕಿಶೋರ್ ಸಿಂಗ್ ಹಾಗೂ ಅದೇ ಜಿಲ್ಲೆಯ ಮಹಿಸೋ‌ರ್ ನಿವಾಸಿ ಅಲೋಕ್…

Read More

ಮಹಾರಾಷ್ಟ್ರ: ದೇಶದಲ್ಲಿ ಮತ್ತೆ ಮತಾಂತರದ ಗುಮ್ಮ ಸದ್ದು ಮಾಡುತ್ತಿದೆ. ಆದ್ದರಿಂದ ಮಹಾರಾಷ್ಟ್ರ ಸರ್ಕಾರವು ರಾಜ್ಯದಲ್ಲಿ ‘ಲವ್ ಜಿಹಾದ್’ ಪ್ರಕರಣಗಳ ವಿರುದ್ಧ ಹೊಸ ಕಾನೂನನ್ನು ತರಲು ಸಜ್ಜಾಗಿದೆ. ಪೊಲೀಸ್ ಮಹಾನಿರ್ದೇಶಕರ ಅಡಿಯಲ್ಲಿ ಶಾಸನವನ್ನು ನಿರ್ಣಯಿಸಲು ಏಳು ಸದಸ್ಯರ ಸಮಿತಿಯನ್ನು ಸಹ ರಚಿಸಲಾಗಿದೆ. ಲವ್ ಜಿಹಾದ್‌ಗೆ ಸಂಬಂಧಿಸಿದ ವಿವಿಧ ಪ್ರಕರಣಗಳನ್ನು ಸಮಿತಿಯು ತನಿಖೆ ಮಾಡಿ ವರದಿಯನ್ನು ಸಿದ್ಧಪಡಿಸುತ್ತದೆ, ಅದು ಪೂರ್ಣಗೊಂಡ ನಂತರ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ವರದಿಯನ್ನು ಪಡೆದ ನಂತರ ರಾಜ್ಯ ಸರ್ಕಾರವು ಅಗತ್ಯಕ್ಕೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳುತ್ತದೆ. ಸಮಿತಿಯ ಇತರ ಸದಸ್ಯರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಲ್ಪಸಂಖ್ಯಾತರ ಅಭಿವೃದ್ಧಿ, ಸಾಮಾಜಿಕ ನ್ಯಾಯ, ಕಾನೂನು ಮತ್ತು ನ್ಯಾಯಾಂಗ ಮತ್ತು ವಿಶೇಷ ನೆರವು ಮತ್ತು ಗೃಹ ಇಲಾಖೆಗಳ ಕಾರ್ಯದರ್ಶಿಗಳು ಸೇರಿದ್ದಾರೆ. https://ainlivenews.com/women-benefit-more-from-eating-poppy-seeds-than-men-youll-be-shocked-to-hear/ ‘ಲವ್ ಜಿಹಾದ್’ ವಿರುದ್ಧ ಕಾನೂನನ್ನು ಜಾರಿಗೆ ತರುವ ಭರವಸೆಯನ್ನು ರಾಜ್ಯದ ಮಹಾಯುತಿ ಸರ್ಕಾರವು ಬಹಳ ಹಿಂದಿನಿಂದಲೂ ನೀಡುತ್ತಾ ಬಂದಿದೆ ಎಂಬುದನ್ನು ಗಮನಿಸಬಹುದು. ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು…

Read More

ನವದೆಹಲಿ: ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್, ಆಸಕ್ತಿದಾಯಕ ಹೇಳಿಕೆಗಳನ್ನು ನೀಡಿದೆ. ಇದರ ಭಾಗವಾಗಿ… ಪತ್ನಿಯು ತನ್ನ ಪತಿಯನ್ನು ಹೊರತುಪಡಿಸಿ ಬೇರೆಯವರೊಂದಿಗೆ ಯಾವುದೇ ದೈಹಿಕ ಸಂಬಂಧವಿಲ್ಲದೆ ಕೇವಲ ಪ್ರೀತಿ ಮತ್ತು ವಾತ್ಸಲ್ಯವನ್ನು ಹೊಂದಿದ್ದರೆ, ಅದನ್ನು ಅಕ್ರಮ ಸಂಬಂಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಹೌದು… ಇತ್ತೀಚೆಗೆ ಒಬ್ಬ ಗಂಡ ತನ್ನ ಹೆಂಡತಿ ಬೇರೆ ಪುರುಷನನ್ನು ಪ್ರೀತಿಸುತ್ತಾಳೆ ಎಂಬ ಕಾರಣಕ್ಕೆ ಜೀವನಾಂಶ ಪಡೆಯಲು ಅರ್ಹಳಲ್ಲ ಎಂದು ವಾದಿಸಿದ. ಅಕ್ರಮ ಸಂಭೋಗವು ಲೈಂಗಿಕ ಕ್ರಿಯೆ ಎಂದು ಹೈಕೋರ್ಟ್ ಹೇಳಿದೆ, ಮತ್ತು ಹೆಂಡತಿಗೆ ದೈಹಿಕ ಸಂಪರ್ಕವಿಲ್ಲದೆ ಇನ್ನೊಬ್ಬ ವ್ಯಕ್ತಿಯ ಮೇಲೆ ಪ್ರೀತಿ ಮತ್ತು ವಾತ್ಸಲ್ಯವಿದ್ದರೂ ಸಹ, ಅವಳು ಅಕ್ರಮ ಸಂಭೋಗ ಹೊಂದಿದ್ದಾಳೆಂದು ಅರ್ಥವಲ್ಲ ಎಂದು ಬಾರ್ ಮತ್ತು ಬೆಂಚ್ ಬಹಿರಂಗಪಡಿಸಿದೆ. https://ainlivenews.com/women-benefit-more-from-eating-poppy-seeds-than-men-youll-be-shocked-to-hear/ ಅದೇ ಸಮಯದಲ್ಲಿ… ಬಿ.ಎನ್.ಎಸ್.ಎಸ್. ಅಪರಾಧ ದಂಡ ಸಂಹಿತೆಯ ಸೆಕ್ಷನ್ 144 (5) ಮತ್ತು ಅಪರಾಧ ದಂಡ ಸಂಹಿತೆಯ ಸೆಕ್ಷನ್ 125 (4) ರ ಅಡಿಯಲ್ಲಿ,…

Read More

ಬೆಳಗಾವಿ : ಗಡಿನಾಡು ಬೆಳಗಾವಿಯಲ್ಲಿ ಗೋವಾ ಮಾಜಿ‌ ಶಾಸಕನ ಕೊಲೆಯಾಗಿದೆ. ಬೆಳಗಾವಿಯ ಖಡೇಬಜಾರ್ ನಲ್ಲಿರುವ ಶ್ರೀನಿವಾಸ ಲಾಡ್ಜ್ ಎದುರು ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಮೇಲೆ ಆಟೋ ಚಾಲಕನೋರ್ವ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್‌ (69)ಮೃತಪಟ್ಟಿದ್ದಾರೆ. ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೋ ಮಾಮಲೇದಾರ್ ಅವರು ಕಾರು ಆಟೋಗೆ ಡಿಕ್ಕಿಯಾಗಿದೆ. ಇದೇ ವಿಚಾರಕ್ಕೆ ಖಡೇಬಜಾರ್‌ನ ಲಾಡ್ಜ್‌ ಎದುರು ಆಟೋ ಚಾಲಕ ಮತ್ತು ಮಾಮಲೇದಾರ್‌ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಮಾಜಿ ಶಾಸಕನ ಮೇಲೆ ಆಟೋ ಚಾಲಕ ಹಲ್ಲೆ ನಡೆಸಿದ್ದು, ಲಾಡ್ಜ್ ಮೆಟ್ಟಿಲು ಹತ್ತುವಾಗಲೇ ಕುಸಿದು ಬಿದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆ ಕೊಂಡೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಈ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. https://ainlivenews.com/signature-of-vsk-university-vice-chancellor-is-forged-suspension-of-dgroup-employees/ ಇನ್ನೂ ಹಲ್ಲೆ ನಡೆಸಿದ್ದ ಆಟೋ ಚಾಲಕ ಮುಜಾಹಿದ್ ಶಕೀಲ್ ಸನದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್…

Read More

ಬೆಂಗಳೂರು: ಚುನಾವಣೆಗೆ ನಿಲ್ಲದಿದ್ದರೂ, ರಾಜಕೀಯ ನಿವೃತ್ತಿಯಾದರೂ ಸಿದ್ದರಾಮಯ್ಯನವ್ರು ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವ್ರು ನಮಗೆ ಬೇಕೆ ಬೇಕು. ಹಿಂದೆಯೂ ಇದನ್ನ ಹೇಳಿದ್ದೆ, ಈಗಲೂ ಹೇಳ್ತೇನೆ. ಚುನಾವಣೆಗೆ ನಿಲ್ಲದಿದ್ದರೂ, ರಾಜಕೀಯ ನಿವೃತ್ತಿಯಾದರೂ ಅವರು ಬೇಕು. ಮುಂದಿನ ನಾಯಕತ್ವ ಬೆಳೆಸೋವರೆಗೂ ರಾಜಕಾರಣದಲ್ಲಿ ಇರಬೇಕು ಎಂದು ಆಶಯ ವ್ಯಕ್ತಪಡಿಸಿದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ. ಈ ಬಗ್ಗೆ ಖರ್ಗೆ ಅವರು ತೀರ್ಮಾನ ಮಾಡ್ತಾರೆ. ಕರ್ನಾಟಕ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಬೇರೆ ರಾಜ್ಯಗಳ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ಚರ್ಚೆ ಬಂದಾಗ ಅಭಿಪ್ರಾಯ ಹೇಳುತ್ತೇವೆ ಎಂದರು. https://ainlivenews.com/women-benefit-more-from-eating-poppy-seeds-than-men-youll-be-shocked-to-hear/ ನಮ್ಮ ಆಶಯ ಕೂಡ ಅದೇ ಇದೆ. ಚುನಾವಣೆಯಿಂದ ನಿವೃತ್ತಿ ಆದರೂ, ಸಕ್ರಿಯ ರಾಜಕೀಯದಲ್ಲಿ ಸಿದ್ದರಾಮಯ್ಯ ಇರಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ, ಸಿದ್ದರಾಮಯ್ಯ ಬೇಕು. ಚುನಾವಣೆ ಗೆಲ್ಲಲು ಅನಕೂಲ ಆಗುತ್ತೆ. ಇನ್ನೊಂದು ಅವಧಿಯ ವರೆಗೆ ರಾಜಕೀಯದಲ್ಲಿ ಅವರು ಇರಬೇಕು ಎಂದು…

Read More