ವಾಷಿಂಗ್ಟನ್: ಎರಡು ದಿನಗಳ ಕಾಲ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನೂತನ ಅಧ್ಯಕ್ಷ ಟ್ರಂಪ್ ಜೊತೆ ಹಲವು ಮಹತ್ವದ ಚರ್ಚೆಗಳನ್ನು ನಡೆಸಿದ್ದಾರೆ. ಮೋದಿ ಅಮೆರಿಕಾ ಭೇಟಿ ಭಾರತ-ಅಮೆರಿಕ ಸಂಬಂಧಗಳಲ್ಲಿ ನಿರ್ಣಾಯಕ ಕ್ಷಣವಾಗಿದ್ದು, ವಾಷಿಂಗ್ಟನ್ನಲ್ಲಿ ಪ್ರಮುಖ ಸಭೆಗಳನ್ನು ಆಯೋಜಿಸಲಾಗಿದೆ. ಇದರಲ್ಲಿ ಟೆಸ್ಲಾ ಸಿಇಒ ಎಲೋನ್ ಮಸ್ಕ್ ಹಾಗೂ ಸುಂಕ ವಿಧಿಸುವ ಕುರಿತು ಟ್ರಂಪ್ ಅವರೊಂದಿಗಿನ ಚರ್ಚೆ ಪ್ರಮುಖವಾಗಿದೆ. ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವುದಕ್ಕೂ ಮುನ್ನವೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರಸ್ಪರ ಸುಂಕ ಪರಿಚಯಿಸಲು ಯೋಜಿಸಿದ್ದಾರೆ. ಇಂದು ಮಧ್ಯಾಹ್ನ 1:30ರ ವೇಳೆಗೆ (ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 11:30ಕ್ಕೆ) ಸುಂಕ ಕ್ರಮಗಳನ್ನು ಪರಿಚಯಿಸಲು ನಿರ್ಧರಿಸಿರುವುದಾಗಿ ಟ್ರಂಪ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆದ್ರೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ. ಹೀಗಾಗಿ ಕೊನೇ ಕ್ಷಣದಲ್ಲಿ ಮೋದಿ-ಟ್ರಂಪ್ ಭೇಟಿ ಕೊನೇ ಕ್ಷಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಜ.20 ರಂದು ಅಧಿಕಾರ ಸ್ವೀಕರಿಸಿದ ಟ್ರಂಪ್ ನೀರಿಕ್ಷೆಯಂತೆ ಕೆನಡಾ, ಮೆಕ್ಸಿಕೊ ಹಾಗೂ ಚೀನಾ ದೇಶಗಳ ಮೇಲೆ…
Author: Author AIN
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆಗೂ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಟೆಸ್ಲಾ ಸಂಸ್ಥಾಪಕ, ಟ್ವಿಟರ್ ಮಾಲಿಕ, ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ವಾಷಿಂಗ್ಟನ್ನಲ್ಲಿರುವ ಬ್ಲೇರ್ ಹೌಸ್ನಲ್ಲಿ ಎಲೋನ್ ಮಸ್ಕ್ ಕುಟುಂಬ ಸಮೇತ ಮೋದಿ ಅವರನ್ನ ಭೇಟಿಯಾಗಿದ್ದಾರೆ. ಇದೇ ವೇಳೆ ಮೋದಿ ಅವರಿಗೆ ವಿಶೇಷ ಉಡುಗೊರೆಯನ್ನೂ ನೀಡಿ ಸ್ವಾಗತ ಕೋರಿದ್ದಾರೆ. ಬಳಿಕ ಬ್ಲೇರ್ ಹೌಸ್ನಲ್ಲೇ ಮಹತ್ವದ ವಿಚಾರಗಳ ಕುರಿತು ಕೆಲ ಹೊತ್ತು ಚರ್ಚಿಸಿದ್ದಾರೆ. 2 ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಭಾರತಕ್ಕೆ ಆಗಮಿಸಲಿದ್ದಾರೆ. ಟ್ರಂಪ್ 2ನೇ ಬಾರಿಗೆ ಅಮೆರಿಕ ಅಧ್ಯಕ್ಷರಾದ ಬಳಿಕ ಇದು ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ. ಆಮದು ಸುಂಕಗಳ ಮೇಲಿನ ಕ್ರಮಗಳ ನಡುವೆ ಟ್ರಂಪ್ ಅವರ ಭೇಟಿಗಾಗಿ ಮೋದಿ ಅಮೆರಿಕಕ್ಕೆ ತೆರಳಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು…
ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಬಣ್ಣದ ಬದುಕಿನಿಂದ ದೂರವಾಗಿ ಹಲವು ವರ್ಷಗಳೆ ಕಳೆದಿದೆ. ಆದರೆ ಇಂದಿಗೂ ಕೋಟ್ಯಾಂತರ ಅಭಿಮಾನಿಗಳು ಆಕೆಯನ್ನು ಮತ್ತೆ ಸ್ಕ್ರೀನ್ ಮೇಲೆ ನೋಡ್ಬೇಕು ಎಂದು ಕಾಯ್ತಿದ್ದಾರೆ. ಈ ಮಧ್ಯೆ ರಮ್ಯಾ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ದರ್ಶನ್ ಬಗ್ಗೆ ಕೇಳ್ತಿದ್ದಂತೆ ಉತ್ತರಿಸಲು ನಿರಾಕರಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ನಲ್ಲಿರುವ ದರ್ಶನ್ ಬಗ್ಗೆ ಎದುರಾದ ಪ್ರಶ್ನೆಗೆ ರಮ್ಯಾ, ಆ ಬಗ್ಗೆ ಮಾತನಾಡುವುದಿಲ್ಲ ಎಂದು ನಿರಾಕರಿಸಿದ್ದಾರೆ. ದರ್ಶನ್ ಕೇಸ್ ಹೆಸರು ಹೇಳ್ತಿದ್ದಂತೆ ನೋ ಎಂದಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಜೈಲು ಸೇರಿದ್ದ ವೇಳೆ ಪ್ರತಿಕ್ರಿಯೆ ನೀಡಿದ್ದ ರಮ್ಯಾ, ನಟರಾಗಿ ಜವಾಬ್ದಾರಿಯುತ ಸ್ಥಾನದಲ್ಲಿ ಸಮಾಜಕ್ಕೆ ಒಳ್ಳೆಯದನ್ನು ನೀಡಬೇಕು. ಅಭಿಮಾನಿಗಳನ್ನು ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? ಇಂತಹದ್ದನ್ನು ಸಮರ್ಥಿಸಿಕೊಂಡರೆ ಸಮಾಜಕ್ಕೆ ನಾವು ಕೊಡುವ ಸಂದೇಶ ಏನು? ಕಾನೂನಿಗಿಂತ ಯಾರೂ ದೊಡ್ಡವರಿಲ್ಲ ಎಂದಿದ್ದರು.
ನಟ ಡಾಲಿ ಧನಂಜಯ ಮದುವೆಗೆ ಗಂಟೆಗಳು ಮಾತ್ರವೇ ಭಾಕಿ ಇದೆ. ಈಗಾಗಲೇ ವಧು, ವರರ ಮನೆಯಲ್ಲಿ ಮದುವೆ ಶಾಸ್ತ್ರಗಳು ಆರಂಭಗೊಂಡಿದ್ದು ಅಭಿಮಾನಿಗಳು ಕೂಡ ನೆಚ್ಚಿನ ಜೋಡಿಯ ಮದುವೆ ಕಣ್ತುಂಬಿಕೊಳ್ಳಲು ಕಾಯ್ತಿದ್ದಾರೆ. ಈ ಮಧ್ಯೆ ಡಾಲಿ ಜೋಡಿಗೆ ಅಂಚೆ ಇಲಾಖೆ ವಿಶೇಷ ಉಡುಗೊರೆಯೊಂದನ್ನು ನೀಡಿದೆ. ಅಂಚೆ ಇಲಾಖೆ ನೀಡಿದ ವಿಶೇಷ ಉಡುಗೊರೆ ನೋಡಿ ದಿಲ್ ಖುಷ್ ಆದ ಡಾಲಿ ಧನಂಜಯ್ ಆ ಉಡುಗೊರೆಯನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಡಾಕ್ಟರ್ ಧನ್ಯತಾ ಜೊತೆ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ವಿಶೇಷ ಏನೆಂದರೆ, ಅವರ ಮದುವೆಯ ಆಮಂತ್ರಣ ಪತ್ರಿಕೆ ವಿನ್ಯಾಸಕ್ಕೆ ಭಾರತೀಯ ಅಂಚೆ ಇಲಾಖೆ ಕೂಡ ಫಿದಾ ಆಗಿದೆ. ಇನ್ಲ್ಯಾಂಡ್ ಲೆಟರ್ ಮಾದರಿಯಲ್ಲಿ ಸಿದ್ಧವಾದ ಆಹ್ವಾನ ಪತ್ರಿಕೆಗೆ ಅಂಚೆ ಇಲಾಖೆ ಕಡೆಯಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಮೈಸೂರು ಅಂಚೆ ವಿಭಾಗದ ಅಧಿಕಾರಿಗಳು ಧನಂಜಯ ಅವರಿಗೆ ವಿಶೇಷವಾದ ಸ್ಟ್ಯಾಂಪ್ ಉಡುಗೊರೆ ನೀಡಿದ್ದಾರೆ. ಸ್ಟ್ಯಾಂಪ್ ನೀಡಿ ಶುಭಾಶಯ ತಿಳಿಸಲಾಗಿದೆ. ಧನಂಜಯ ಮತ್ತು ಧನ್ಯತಾ ಅವರ…
ಇಂದಿಗೆ ಸರಿಯಾಗಿ 2019ರ ಫೆಬ್ರವರಿ 14ರಂದು ಸಂಜೆ ವೇಳೆಗೆ ಜಮ್ಮು ಮತ್ತು ಕಾಶ್ಮೀರದಿಂದ ಸಿಡಿಲಬ್ಬರದ ಸುದ್ದಿಯೊಂದು ದೇಶವಾಸಿಗಳ ಕಿವಿಗಪ್ಪಳಿಸಿತು. ಅದು ಉಗ್ರರ ಅಟ್ಟಹಾಸಕ್ಕೆ ಭಾರತೀಯ ಸೈನಿಕರನ್ನು ಪ್ರಾಣತೆತ್ತಿದ್ದರು. ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನ 20 ವರ್ಷದ ಆತ್ಮಹತ್ಯಾ ಬಾಂಬರ್ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಬೆಂಗಾವಲು ಪಡೆಗೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆದು 40 ಯೋಧರನ್ನು ಹತ್ಯೆಗೈದಿದ್ದನು. ವರದಿಗಳ ಪ್ರಕಾರ, ವಾಹನವನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳ ಬೆಂಗಾವಲು ಪಡೆಯಲ್ಲಿ 70 ಕ್ಕೂ ಹೆಚ್ಚು ವಾಹನಗಳು ಇದ್ದವು. ಈ ವಾಹನವನ್ನು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಓಡಿಸುತ್ತಿದ್ದರು, ನಂತರ ಅವರನ್ನು ಆದಿಲ್ ಅಹ್ಮದ್ ದಾರ್ ಎಂದು ಗುರುತಿಸಲಾಯಿತು, ಈ ವಾಹನವು ಸುಮಾರು 80 ಕಿಲೋಗ್ರಾಂಗಳಷ್ಟು ಆರ್ಡಿಎಕ್ಸ್ ಸ್ಫೋಟಕವನ್ನು ಹೊಂದಿತ್ತು, ಇದನ್ನು ಈ ಆತ್ಮಾಹುತಿ ದಾಳಿಯಲ್ಲಿ ಬಳಸಲಾಯಿತು. ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಈ ಘಟನೆ ನಡೆದಾಗ ಬೆಂಗಾವಲು ಪಡೆಯಲ್ಲಿ 2,500ಕ್ಕೂ ಹೆಚ್ಚು ಸಿಆರ್ಪಿಎಫ್ ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ.…
ಸಮರ್ಥ ಅಭ್ಯರ್ಥಿಗಳಿಂದ ಆಯಿಲ್ ಇಂಡಿಯಾ ಲಿಮಿಟೆಡ್ (ಒಐಎಲ್) ಅರ್ಜಿಗಳನ್ನು ಆಹ್ವಾನ ಮಾಡಿದೆ. ಅಖಿಲ ಭಾರತಾದ್ಯಂತ ಈ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಫೆಬ್ರವರಿ 3 ರಿಂದ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಕಂಪನಿಯ ಅಧಿಕೃತ ವೆಬ್ಸೈಟ್ iocl.com ಗೆ ಭೇಟಿ ನೀಡುವ ಮೂಲಕ ಫೆಬ್ರವರಿ 23 ರ ಒಳಗೆ ಅರ್ಜಿ ಸಲ್ಲಿಸಬಹುದು. ಕಂಪನಿಯು ಒಟ್ಟು 246 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ 215 ಜೂನಿಯರ್ ಆಪರೇಟರ್ ಹುದ್ದೆಗಳು, 23 ಜೂನಿಯರ್ ಅಟೆಂಡೆಂಟ್ ಹುದ್ದೆಗಳು ಮತ್ತು 8 ಜೂನಿಯರ್ ಬಿಸಿನೆಸ್ ಅಸಿಸ್ಟೆಂಟ್ ಹುದ್ದೆಗಳು ಸೇರಿವೆ. ಯಾವ ಹುದ್ದೆಗಳಿಗೆ ಯಾವ ಅರ್ಹತೆಗಳು ಬೇಕಾಗುತ್ತವೆ ಮತ್ತು ಆಯ್ಕೆ ಹೇಗೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಯಾವ ಹುದ್ದೆಗಳಿಗೆ ಅರ್ಹತೆಗಳೇನು? ಜೂನಿಯರ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಸಂಬಂಧಿತ ವ್ಯಾಪಾರದಲ್ಲಿ ಐಟಿಐ ಪದವಿ ಹೊಂದಿರಬೇಕು. ಅದೇ ಸಮಯದಲ್ಲಿ, ಜೂನಿಯರ್ ಅಟೆಂಡೆಂಟ್ ಹುದ್ದೆಗೆ ಅರ್ಜಿದಾರರು 12 ನೇ ತರಗತಿ ಉತ್ತೀರ್ಣರಾಗಿರಬೇಕು.…
ಸೂರ್ಯೋದಯ – 6:46 AM ಸೂರ್ಯಾಸ್ತ – 6:13 PM ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ಉತ್ತರ ಅಯಣ, ಶುಕ್ಲ ಪಕ್ಷ, ಶಿಶಿರ ಋತು, ಮಾಘ ಮಾಸ, ತಿಥಿ – ಬಿದಿಗೆ ನಕ್ಷತ್ರ – ಪುಬ್ಬೆ ಯೋಗ – ಅತಿಗಂಡ ಕರಣ – ತೈತಲೆ ರಾಹು ಕಾಲ – 10:30 ದಿಂದ 12:00 ವರೆಗೆ ಯಮಗಂಡ – 03:00 ದಿಂದ 04:30 ವರೆಗೆ ಗುಳಿಕ ಕಾಲ – 07:30 ದಿಂದ 09:00 ವರೆಗೆ ಬ್ರಹ್ಮ ಮುಹೂರ್ತ – 5:10 ಬೆ.ದಿಂದ 5:58 ಬೆ.ವರೆಗೆ ಅಮೃತ ಕಾಲ – 4:24 ಸಂಜೆ.ದಿಂದ 6:08 ಸಂಜೆ.ವರೆಗೆ ಅಭಿಜಿತ್ ಮುಹುರ್ತ – 12:07 ಮ.ದಿಂದ 12:53 ಮ.ವರೆಗೆ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ ರಾಶಿ: ಹೈನುಗಾರಿಕೆ ,ಕೋಳಿ ಸಾಕಾಣಿಕೆ, ಕುರಿ ಸಾಕಾಣಿಕೆ ಫಾರ್ಮ್ ಹೌಸ್ ಪ್ರಾರಂಭಿಸಬಹುದು.…
ಪ್ರೇಮಿಗಳ ದಿನಾಚರಣೆ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಸೂಪರ್ ಹಿಟ್ ನಮ್ಮ ಪ್ರೀತಿಯ ರಾಮು ಚಿತ್ರ ರೀರಿಲೀಸ್ ಆಗುತ್ತಿದೆ. 2003ರಲ್ಲಿ ಬಿಡುಗಡೆಯಾಗಿದ್ದ ‘ನಮ್ಮ ಪ್ರೀತಿಯ ರಾಮು’ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಹೇಳಿಕೊಳ್ಳುವ ಹೆಸರು ಮಾಡಿರಲಿಲ್ಲ. ಆದರೆ ದರ್ಶನ್ ನಟನೆಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್ ಆಗಿದ್ದರು. ಇದೀಗ ಮತ್ತೆ ಥಿಯೇಟರ್ ನಲ್ಲಿ ಬಿಡುಗಡೆ ಆಗುತ್ತಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಮರು ಬಿಡುಗಡೆಯಾಗುತ್ತಿರುವ ದರ್ಶನ್ ಅವರ ಪ್ರಥಮ ಚಿತ್ರ ಇದಾಗಿದೆ. ಸಂಜಯ್-ವಿಜಯ್ ಜೋಡಿ ನಿರ್ದೇಶಿಸಿದ್ದ ಹಾಗೂ 1999ರಲ್ಲಿ ಬಿಡುಗಡೆಯಾಗಿದ್ದ ತಮಿಳು ಚಿತ್ರ ‘ವಸಂತಿಯುಮಂ ಲಕ್ಷ್ಮಿಯುಂ ಪಿನ್ನೆ ನಿಜಾನುಂ’ ರೀಮೇಕ್ ಆಗಿದ್ದ ‘ನಮ್ಮ ಪ್ರೀತಿಯ ರಾಮು’ ಚಿತ್ರವನ್ನು ಕನ್ನಡದಲ್ಲೂ ಅದೇ ಜೋಡಿ ನಿರ್ದೇಶಿಸಿತ್ತು. ದರ್ಶನ್ ತಮ್ಮ ವೃತ್ತಿ ಜೀವನದಲ್ಲಿ ಅತ್ಯುತ್ತಮ ಅಭಿನಯ ತೋರಿದ ಚಿತ್ರ ಎಂಬ ಹಿರಿಮೆಗೆ ಈ ಚಿತ್ರ ಭಾಜನವಾದರೂ, ಗಲ್ಲಾಪೆಟ್ಟಿಯಲ್ಲಿ ಮಾತ್ರ ಮುಗ್ಗರಿಸಿತ್ತು. ಇನ್ನೂ ದರ್ಶನ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಬೇಕು ಎಂದುಕೊಂಡವರಿಗೆ ಬೇಸರವಾಗಿದೆ. ದರ್ಶನ್…
ವಾಷಿಂಗ್ಟನ್: ಕಳೆದ ವರ್ಷದ ಜೂನ್ ನಿಂದ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಕ್ಕಿಬಿದ್ದಿರುವ ಅಮೆರಿಕದ ಇಬ್ಬರು ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ನಿರೀಕ್ಷೆಗಿಂತಲೂ ಮೊದಲೇ ಭೂಮಿಗೆ ವಾಪಸಾಗುವ ಸಾಧ್ಯತೆಯಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ತಿಳಿಸಿದೆ. ಅಮೆರಿಕದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಶೀಘ್ರದಲ್ಲೇ ಭೂಮಿಗೆ ಮರಳಲಿದ್ದಾರೆ. ಮಾರ್ಚ್ ಮಧ್ಯದಲ್ಲಿ ಭೂಮಿಗೆ ಮರಳಬಹುದು ಎಂದು ನಾಸಾ ಅಧಿಕೃತವಾಗಿ ತಿಳಿಸಿದೆ. ಇಬ್ಬರೂ ಗಗನಯಾತ್ರಿಗಳು ಕಳೆದ 8 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದಾರೆ. ನಾಸಾ ಮತ್ತು ಸ್ಪೇಸ್ಎಕ್ಸ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಮತ್ತು ಅಲ್ಲಿಂದ ಮುಂಬರುವ ಕ್ರೂ ರೊಟೇಶನ್ ಮಿಷನ್ ಟಾರ್ಗೆಟ್ ಲಾಂಚ್ ಮತ್ತು ರಿಟರ್ನ್ ಡೇಟ್ಸ್ ವೇಗಗೊಳಿಸುತ್ತಿವೆ. ಇದು ಬಾಹ್ಯಾಕಾಶದಲ್ಲಿ ಸಿಕ್ಕಿಬಿದ್ದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ನಾಸಾ ವಾಪಸ್ ಭೂಮಿಗೆ ಕರೆತರಲಿದೆ.
ವಾಷಿಂಗ್ಟನ್ ಡಿ.ಸಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾ ಪ್ರವಾಸದಲ್ಲಿದ್ದಾರೆ. ಇದೇ ವೇಳೆ ಮೋದಿಯನ್ನು ಟ್ರಂಪ್ ಭೇಟಿ ಮಾಡಲಿದ್ದು, ಭೇಟಿಗೂ ಮುನ್ನ ನನ್ನ ಆತ್ಮೀಯ ಸ್ನೇಹಿತ ಎಂದು ಮೋದಿಯನ್ನು ಕರೆದಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣವಾದ ಟ್ರೂತ್ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ನನ್ನ ಎರಡನೇ ಅವಧಿಯ ಮೂರು ಶ್ರೇಷ್ಠ ವಾರಗಳ ಸಂದರ್ಭದಲ್ಲಿ ನನ್ನ ಅತ್ಯುತ್ತಮ ವಾರವನನ್ನು ನೋಡುತ್ತಿದ್ದೇನೆ. ಆದರಂತೆ ನನ್ನ ಆತ್ಮೀಯ ಸ್ನೇಹಿತನ್ನು ಭೇಟಿಯಾಗುತ್ತಿದ್ದೇನೆ ಎಂದಿದ್ದಾರೆ. ಎರಡು ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರನ್ನು ಇಂದು, ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾದ ತುಳಸಿ ಗಬ್ಬಾರ್ಡ್ ಅವರನ್ನು ವಾಷಿಂಗ್ಟನ್ ಡಿಸಿಯಲ್ಲಿ ಭೇಟಿಯಾದರು. ಇದೇ ವೇಳೆ ಭಾರತ-ಯುಎಸ್ಎ ಸ್ನೇಹದ ವಿವಿಧ ಅಂಶಗಳನ್ನು ಚರ್ಚಿಸಿದರು ಎನ್ನಲಾಗಿದೆ. ಇದರೊಂದಿಗೆ ನಾಳೆ ಮುಂಜಾನೆ 2.35 ಕ್ಕೆ ಇಬ್ಬರು ನಾಯಕರು ಭೇಟಿಯಾಗಲಿದ್ದಾರೆ. ನಂತರ ಬೆ. 3.40 ಕ್ಕೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.