ವಾಷಿಂಗ್ಟನ್ ಡಿ.ಸಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾ ಪ್ರವಾಸದಲ್ಲಿದ್ದಾರೆ. ಇದೇ ವೇಳೆ ಮೋದಿಯನ್ನು ಟ್ರಂಪ್ ಭೇಟಿ ಮಾಡಲಿದ್ದು, ಭೇಟಿಗೂ ಮುನ್ನ ನನ್ನ ಆತ್ಮೀಯ ಸ್ನೇಹಿತ ಎಂದು ಮೋದಿಯನ್ನು ಕರೆದಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣವಾದ ಟ್ರೂತ್ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ನನ್ನ ಎರಡನೇ ಅವಧಿಯ ಮೂರು ಶ್ರೇಷ್ಠ ವಾರಗಳ ಸಂದರ್ಭದಲ್ಲಿ ನನ್ನ ಅತ್ಯುತ್ತಮ ವಾರವನನ್ನು ನೋಡುತ್ತಿದ್ದೇನೆ. ಆದರಂತೆ ನನ್ನ ಆತ್ಮೀಯ ಸ್ನೇಹಿತನ್ನು ಭೇಟಿಯಾಗುತ್ತಿದ್ದೇನೆ ಎಂದಿದ್ದಾರೆ. ಎರಡು ದಿನಗಳ ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರನ್ನು ಇಂದು, ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರಾದ ತುಳಸಿ ಗಬ್ಬಾರ್ಡ್ ಅವರನ್ನು ವಾಷಿಂಗ್ಟನ್ ಡಿಸಿಯಲ್ಲಿ ಭೇಟಿಯಾದರು. ಇದೇ ವೇಳೆ ಭಾರತ-ಯುಎಸ್ಎ ಸ್ನೇಹದ ವಿವಿಧ ಅಂಶಗಳನ್ನು ಚರ್ಚಿಸಿದರು ಎನ್ನಲಾಗಿದೆ. ಇದರೊಂದಿಗೆ ನಾಳೆ ಮುಂಜಾನೆ 2.35 ಕ್ಕೆ ಇಬ್ಬರು ನಾಯಕರು ಭೇಟಿಯಾಗಲಿದ್ದಾರೆ. ನಂತರ ಬೆ. 3.40 ಕ್ಕೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Author: Author AIN
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈಗಾಗಲೇ ಮದುವೆ ಮುನ್ನ ದಿನದ ಕಾರ್ಯಕ್ರಮಗಳು ಆರಂಭವಾಗಿದೆ. ಇದೀಗ ಧನಂಜಯ್ ಮದುವೆ ಆಮಂತ್ರಣ ಪತ್ರಿಕೆ ಮೆಚ್ಚಿ ಧನಂಜಯ್-ಧನ್ಯತಾಗೆ ಅಂಚೆ ಇಲಾಖೆ ಸ್ಪೆಷಲ್ ಉಡುಗೊರೆ ನೀಡಿದ್ದಾರೆ. ಫೆಬ್ರವರಿ 15 ಮತ್ತು 16 ರಂದು ಮೈಸೂರಿನಲ್ಲಿ ಧನಂಜಯ್ – ಧನ್ಯತಾ ಮದುವೆ ಅದ್ಧೂರಿಯಾಗಿ ನಡೆಯಲಿದೆ. ಈಗಾಗಲೇ ಡಾಲಿ ಹಾಗೂ ಧನ್ಯತಾ ಮನೆಯಲ್ಲಿ ಮದುವೆ ಸಂಭ್ರಮ ಶುರುವಾಗಿದೆ. ಮದುವೆಗೆ ರಾಜಕೀಯ ಗಣ್ಯರು, ಚಿತ್ರರಂಗದವರು ಸ್ನೇಹಿತರು ಸೇರಿದಂತೆ ಹಲವರು ಭಾಗವಹಿಸುವ ನಿರೀಕ್ಷೆ ಇದೆ. ಮದುವೆ ಸಂಭ್ರಮದಲ್ಲಿರುವ ಡಾಲಿ ಹಾಗೂ ಧನ್ಯತಾಗೆ ಅಂಚೆ ಇಲಾಖೆ ಸ್ಪೆಷಲ್ ಗಿಫ್ಟ್ ನೀಡಿದೆ. ಧನಂಜಯ್ – ಧನ್ಯತಾ ಮದುವೆ ಆಮಂತ್ರಣ ಪತ್ರಿಕೆ ಎಲ್ಲರ ಗಮನ ಸೆಳೆದಿತ್ತು. ಇನ್ ಲ್ಯಾಂಡ್ ಲೆಟರ್ ಮಾದರಿಯಲ್ಲಿತ್ತು. ಸಿಂಪಲ್ ಮದುವೆ ಪತ್ರಿಕೆ ನೋಡಿದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ರು. ಧನಂಜಯ್ ಮದುವೆ ಆಮಂತ್ರಣಕ್ಕೆ ಭಾರತೀಯ ಅಂಚೆ ಇಲಾಖೆ ಕೂಡ ಮನಸೋತಿದೆ. ಧನಂಜಯ್-ಧನ್ಯತಾ ಮದುವೆಗೆ ವಿಶೇಷ ಸ್ಟ್ಯಾಂಪ್ ನೀಡಿ ಶುಭಾಶಯ ತಿಳಿಸಿದೆ.…
ಹುಬ್ಬಳ್ಳಿ : ಅಜ್ಜಿಯ ಮನೆಗೆ ಹೋದ ಯುವತಿ ಏಕಾಏಕಿ ನಾಪತ್ತೆಯಾಗಿರುವ ಘಟನೆ ನಡೆದಿದೆ . 18 ವರ್ಷದ ಯುವತಿಯ ನಾಪತ್ತೆಯಿಂದೆ ಒಂದು ಲವ್ ಸ್ಟೋರಿ ಇದೆ ಎನ್ನಲಾಗುತ್ತಿದೆ. ಹುಬ್ಬಳ್ಳಿ ಚಾಲುಕ್ಯ ನಗರದ ದೀಪಕ್ ಹಾಗೂ ಶೀತಲ ದಂಪತಿಯ ಪುತ್ರಿ ಕರೀಷ್ಮಾ ಹುಬ್ಬಳ್ಳಿ ಮಹಿಳಾ ಪದವಿ ಕಾಲೇಜಿನಲ್ಲಿ ಓದಿತ್ತಿದ್ದಳು. ಮಹಾರಾಷ್ಟ್ರ ಕೊಲ್ಲಾಪುರದ ತನ್ನ ಅಜ್ಜಿಯ ಮನೆ ಹೋದವಳು, ಇದೇ ಜ. 3 ರಂದು ಏಕಾಏಕಿ ಕಾಣೆಯಾಗಿದ್ದು, ಅಂದಿನ ಇಂದಿನವರೆಗೂ ಪತ್ತೆಯಾಗಿಲ್ಲ ಅಂತಾ ತಂದೆ-ತಾಯಿ ಹುಡುಕುತ್ತಿದ್ದಾರೆ. https://ainlivenews.com/strike-of-village-administrative-officers-demanding-fulfillment-of-various-demands/ 18 ವರ್ಷ ಕರಿಷ್ಮಾ 50 ವರ್ಷದ ಪ್ರಕಾಶ್ ಜೊತೆಗೆ ಓಡಿಹೋಗಿರುವ ಅನುಮಾನ ಮೂಡಿದೆ. ಪ್ರಕಾಶ್ ಚಾಲುಕ್ಯ ನಗರದ ನಿವಾಸಿಯಾಗಿದ್ದು, ಈಗಾಗಲೇ ಮದುವೆಯಾಗಿ, ಎರಡು ಮಕ್ಕಳು ಸಹ ಇವೆ. ಹೀಗಿದ್ದರೂ ಕರಿಷ್ಮಾಗೆ ಅದೇನು ಮೋಡಿ ಮಾಡಿದ್ದಾನೋ ಗೊತ್ತಿಲ್ಲ. ಅವಳ ಜೊತೆಗೆ ಸಲುಗೆ ಬೆಳಸಿ, ಅವಳನ್ನು ಪುಸಲಾಯಿಸಿ ಅವಳ ಜೊತೆಗೆ ಹಗಲು ರಾತ್ರಿ ಫೋನ್ ನಲ್ಲಿ ಮಾತನಾಡುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ.. https://www.youtube.com/watch?v=H6cS4XugLMI ಈ ಕುರಿತು ಕೊಲ್ಲಾಪುರ…
ಚಿತ್ರದುರ್ಗ: ದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಹಿರಿಯೂರು ನಗರದ ಐತಿಹಾಸಿಕ ಶ್ರೀತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ಸಂಪನ್ನಗೊಂಡಿತು. ತಾಲೂಕಿನ ಬೀರೇನಹಳ್ಳಿ ಮಜುರೆ ಕರಿಯಣ್ಣನಹಟ್ಟಿ ಗ್ರಾಮದ ವೀರಕರಿಯಣ್ಣ ದೇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ನಂತರ ದೇವಸ್ಥಾನದಲ್ಲಿದ್ದ ಶಿವಧನಸ್ಸನ್ನು ಹೊರತೆಗೆದು ಸಮೀಪದ ವೇದಾವತಿ ನದಿಗೆ ತೆಗೆದುಕೊಂಡು ಹೋಗಿ, ಅಭಿಷೇಕ ಮಾಡಿ ದೇವಾಲಯಕ್ಕೆ ತರಲಾಯಿತು. ಅನಂತರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಮಲ್ಲಿಗೆ, ಕಾಕಡಾ, ಕನಕಾಂಬರ, ಸೇವಂತಿಗೆ ಸೇರಿದಂತೆ ವಿವಿಧ ರೀತೀಯ ಹೂವುಗಳು ಹಾಗೂ ಬಣ್ಣಬಣ್ಣದ ಅಂಲಕೃತವಾದ ಬಟ್ಟೆಗಳಿಂದ ಸಿಂಗರಿಸಿ ಅಲಂಕಾರಗೊಂಡ ಬ್ರಹ್ಮರಥದಲ್ಲಿ ದೇವರನ್ನು ಕೂರಿಸಿದ ಬಳಿಕ ಪೂಜೆ ಸಲ್ಲಿಸಲಾಯಿತು. https://ainlivenews.com/sri-prasanna-venkataramanaswamy-brahmarathotsava-held-with-grandeur/ ನಂತರ ಭಕ್ತರ ಸಮ್ಮುಖದಲ್ಲಿ ಮುಕ್ತಿ ಬಾವುಟದ ಹರಾಜು ಪ್ರಕ್ರಿಯೆ ನಡೆಯಿತು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ದೇವರಿಗೆ ಪೂಜೆ ಸಲ್ಲಿಸಿ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು. ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ವಾದ್ಯಗಳು ಹಾಗೂ ಸಾವಿರಾರು ಭಕ್ತರ ಘೋಷಣೆಗಳೊಂದಿಗೆ…
ನವದೆಹಲಿ: ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆ ಮಾಡಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಯತ್ನಾಳ್ ಬಣದ ಹೋರಾಟದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ನಾನು ನನಗೆ ಲಕ್ಷ್ಮಣ ರೇಖೆ ಹಾಕಿಕೊಂಡಿದ್ದೇನೆ. ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹಿರಂಗ ಚರ್ಚೆ ಮಾಡಲ್ಲ ಎಂದರು. https://ainlivenews.com/eating-these-foods-will-boost-your-immune-system/ ಉದಯಗಿರಿ ಕೋಮುಗಲಭೆ ವಿಚಾರವಾಗಿ ಮಾತನಾಡಿದ ಅವರು, ಗಲಭೆಕೋರರು ಆರ್ಎಸ್ಎಸ್ನವರು ಎಂದು ಆರೋಪ ಮಾಡಿದ್ದಾರೆ. ಈಗ ಪ್ರಕರಣದಲ್ಲಿ ಯಾರು ಬಂಧಿತರು? ಅವರಿಗೆ ಬದ್ಧತೆ ಇದ್ರೆ, ನೈತಿಕತೆ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಕ್ಷಮೆಯಾಚನೆ ಮಾಡದೆ ಇದ್ದರೆ ಲಕ್ಷ್ಮಣ್ ಅವರನ್ನು ಕಾಂಗ್ರೆಸ್ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಬಿಬಿಎಂಪಿ ಅಗ್ನಿ ಅವಘಡ, ಅತ್ತಿ ಬೆಲೆ ಪಟಾಕಿ ದುರಂತ, ವೀರಭದ್ರ ನಗರದಲ್ಲಿ ಅಗ್ನಿಯ ವೀರಾವೇಷ. ಹೀಗೆ ಸಾಲು ಸಾಲು ಅಗ್ನಿ ಅವಘಡಗಳಿಂದ ಸಿಲಿಕಾನ್ ಮಂದಿ ಆಘಾತಕ್ಕೀಡಾಗಿದ್ದಾರೆ. ನಗರದಲ್ಲಿ ವರ್ಷದಿಂದ ವರ್ಷಕ್ಕೆ ಅಗ್ನಿ ಅವಘಡಗಳು ಹೆಚ್ಚಾಗ್ತಿವೆ. ಇದೀಗ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ಲಾಸ್ಟಿಕ್ ಕವರ್ ಗೋಡೌನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. https://ainlivenews.com/eating-these-foods-will-boost-your-immune-system/ ಹೌದು ಬೆಂಗಳೂರಿನ ಬ್ಯಾಡರಹಳ್ಳಿ ಸಮೀಪ ಪ್ಲಾಸ್ಟಿಕ್ ಗೋಡೌನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇನ್ನು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೂರು ಅಗ್ನಿ ಶಾಮಕ ವಾಹನ ಸಿಬ್ಬಂದಿಗಳಿಂದ ಬೆಂಕಿ ನಂದಿಸಲಾಗಿದ್ದು, ಬ್ಯಾಡರಹಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಗ್ರಾಮ ಆಡಳಿತ ಅಧಿಕಾರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸಿದರು. ಕಳೆದ ನಾಲ್ಕು ದಿನಗಳಿಂದಲೂ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. https://ainlivenews.com/sri-prasanna-venkataramanaswamy-brahmarathotsava-held-with-grandeur/ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ , ಅಲ್ಮೇರಾ ಈಗಿನ ತಂತ್ರಜ್ಞಾನಕ್ಕೆ ತಕ್ಕಂತೆ ಮೊಬೈಲ್ ಫೋನ್ , ಸಿಯುಜಿ ಸಿಮ್ ಮತ್ತು ಡೇಟಾ ಗೂಗಲ್ ಕ್ರೋಮ್ ಬುಕ್ ಲ್ಯಾಪ್ ಟಾಪ್ ಪ್ರಿಂಟರ್ ಹಾಗೂ ಸ್ಕ್ಯಾನರ್ಗಳನ್ನ ಒದಗಿಸಿ ಕೊಡಿ ಎಂದು ಮನವಿ ಮಾಡದಿರು. ಇದ್ಯಾವುದನ್ನು ಸಹ ಕೊಡದೆ ಕೆಲಸ ಮಾಡುವ ಎಂದರೆ ಹೇಗೆ ಮಾಡಲು ಸಾಧ್ಯ ಕೂಡಲೆ ಸರ್ಕಾರ ಮನ ಗಂಡು ನಮಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಿ ಮತ್ತು ಮೊಬೈಲ್ ತಂತ್ರಾಂಶಗಳ ಕೆಲಸ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಎಂದು ಆಗ್ರಿಹಿಸಿದರು. https://www.youtube.com/watch?v=FZawusXIh3I ಗ್ರಾಮ ಆಡಳಿತ ಅಧಿಕಾರಿಗಳು…
ಬೆಂಗಳೂರು: ವಸಂತಪುರ ಬಡಾವಣೆಯಲ್ಲಿರುವ ವಸಂತ ವಲ್ಲಭಸ್ವಾಮಿ ದೇವಾಲಯ ಬೆಂಗಳೂರಿನ ಪ್ರಾಚೀನ ದೇವಾಲಯಗಳಲ್ಲಿ ಒಂದು. ಈ ದೇವಾಲಯ ವಿಜಯನಗರ ಕಾಲದ ವಾಸ್ತುವಾಗಿದೆ. ಇನ್ನೂ ಈ ದೇವಸ್ಥಾನದಲ್ಲಿ ಇಂದು ಬ್ರಹ್ಮರಥೋತ್ಸವದ ಸಂಭ್ರಮವಾಗಿದ್ದು, ಮುಜರಾಯಿ ಇಲಾಖೆ ಆಶ್ರಯದಲ್ಲಿ ನಡೆದ ಶ್ರೀ ವಸಂತವಲ್ಲಭರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಪರಿಷತ್ ಶಾಸಕ ಟಿಎ ಶರವಣ ಅವರು ಭಾಗಿಯಾಗಿದ್ದರು. ಪ್ರತಿ ವರ್ಷದಂತೆ ರಥ ಮತ್ತು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿತು. https://ainlivenews.com/eating-these-foods-will-boost-your-immune-system/ ಭಕ್ತರು ರಥಕ್ಕೆ ಬಾಳೆ ಹಣ್ಣು ಸಮರ್ಪಿಸಿ ಇಷ್ಟಾರ್ಥ ಸಿದ್ಧಿಯನ್ನು ಕೋರಿಕೊಂಡರು. ಅದರಂತೆ ಪರಿಷತ್ ಶಾಸಕ ಟಿಎ ಶರವಣ ಅವರು ಕೂಡ ನಾಡಿನ ಒಳಿತಿಗಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಸಂಸದರಾದ ಡಾ. ಮಂಜುನಾಥ್ ಮತ್ತು ಬೆಂಗಳೂರು ದಕ್ಷಿಣ ಶಾಸಕರಾದ ಕೃಷ್ಣಪ್ಪ ಅವರು ಪರಿಷತ್ ಶಾಸಕ ಟಿಎ ಶರವಣ ಅವರಿಗೆ ಸಾಥ್ ನೀಡಿದರು.
ಅಹಮದಾಬಾದ್ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು 142 ರನ್ಗಳಿಂದ ಸೋಲಿಸಿ 3-0 ರಿಂದ ಸರಣಿಯನ್ನು ಗೆದ್ದುಕೊಂಡಿದೆ. ಶುಭ್ಮನ್ ಗಿಲ್ (112), ವಿರಾಟ್ ಕೊಹ್ಲಿ (52) ಮತ್ತು ಶ್ರೇಯಸ್ ಅಯ್ಯರ್ (78) ಅವರ ಅದ್ಭುತ ಬ್ಯಾಟಿಂಗ್ನಿಂದ ಭಾರತ 356 ರನ್ ಗಳಿಸಿತು. https://ainlivenews.com/eating-these-foods-will-boost-your-immune-system/ ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 214 ರನ್ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ ಭಾರತ 14 ವರ್ಷಗಳ ನಂತರ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಇನ್ನೂ ಈ ಗೆಲುವಿನ ಬಳಿಕ ಐಸಿಸಿ ಅಧ್ಯಕ್ಷ ಜಯ್ ಶಾ ಅವರ ಕೈಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟ್ರೋಫಿ ಸ್ವೀಕರಿಸಿದರು. ಆ ಬಳಿಕ ನಡೆದ ಫೋಟೋಶೂಟ್ ವೇಳೆ ಭಾರತೀಯ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು. ಆದರೆ ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲದಂತೆ ವಿರಾಟ್ ಕೊಹ್ಲಿ ಮಾತ್ರ ಫೋನ್ನಲ್ಲೇ ಮೈಮರೆತಿದ್ದರು. https://x.com/_Zsports/status/1889875801895739535?ref_src=twsrc%5Etfw%7Ctwcamp%5Etweetembed%7Ctwterm%5E1889875801895739535%7Ctwgr%5Ec816cb38c17b2ba69eac91918deb1cb6031cc634%7Ctwcon%5Es1_&ref_url=https%3A%2F%2Ftv9kannada.com%2Fsports%2Fcricket-news%2Fvirat-kohli-on-the-phone-call-during-the-trophy-celebration-zp-977818.html ಇದೀಗ ಟೀಮ್ ಇಂಡಿಯಾ ಸಂಭ್ರಮಿಸುತ್ತಿದ್ದರೂ, ಕೊಹ್ಲಿ ಫೋನ್ನಲ್ಲಿ ಮಾತನಾಡುತ್ತಿರುವ…
ದೊಡ್ಡಬಳ್ಳಾಪುರ ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು. ಗುರುವಾರ ಮಧ್ಯಾಹ್ನ 2:10ಕ್ಕೆ ಸರಿಯಾಗಿ ಸಲ್ಲುವ ಶುಭ ಅಭಿಜನ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಲಾಯಿತು. https://ainlivenews.com/historical-mylara-karnika-good-news-for-the-people-of-karnataka-what-is-the-prophecy/ ಪ್ರತಿ ವರ್ಷದಂತೆ ರಥ ಮತ್ತು ದೇವಸ್ಥಾನದ ಸುತ್ತ ಗರುಡವೂ ಪ್ರದಕ್ಷಿಣೆ ಹಾಕಿದ್ದು ವಿಶೇಷ. ಭಕ್ತರು ರಥಕ್ಕೆ ಬಾಳೆ ಹಣ್ಣು-ಜಾವನ ಸಮರ್ಪಿಸಿ ಇಷ್ಟಾರ್ಥ ಸಿದ್ಧಿಯನ್ನು ಕೋರಿಕೊಂಡರು. ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ, ತೀರ್ಥ ಪ್ರಸಾದಗಳನ್ನು ಸ್ವೀಕರಿಸಿ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದ ವೇಳೆ ಶಾಸಕ ಧೀರಜ್ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ನಗರಸಭಾ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.