ಕೊಲಂಬೋ: ಭಾರತದ ಯುಪಿಐ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆಗೆ ಅಭೂತ ಪೂರ್ವ ರೆಸ್ಪಾನ್ಸ್ ಸಿಕ್ಕ ಬಳಿಕ ಇದೀಗ ಶ್ರೀಲಂಕಾ ಮತ್ತು ಮಾರಿಷಸ್ ನಲ್ಲೂ ತನ್ನ ಸೇವೆ ಆರಂಭಿಸಿದೆ. ಭಾರತದ ಯುಪಿಐ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆಗೆ ನೆರೆಯ ಶ್ರೀಲಂಕಾ ಮತ್ತು ಮಾರಿಷಸ್ನಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಿದರು. ಯುಪಿಐ ಮಾತ್ರವಲ್ಲದೆ ಭಾರತದ ರುಪೇ ಕಾರ್ಡ್ ಅನ್ನು ಕೂಡ ಮಾರಿಷಸ್ನಲ್ಲಿ ಬಳಸಬಹುದಾಗಿದೆ ಕಾರ್ಯಕ್ರಮಕ್ಕೆ ವರ್ಚುವಲ್ ಮೂಲಕ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ‘ಆಧುನಿಕ ಡಿಜಿಟಲ್ ತಂತ್ರಜ್ಞಾನದೊಂದಿಗೆ ಐತಿಹಾಸಿಕ ಸಂಬಂಧಗಳನ್ನು ಜೋಡಿಸಲಾಗಿದೆ’ ಎಂದರು. ಯುಪಿಐ ಭಾರತದೊಂದಿಗೆ ಪಾಲುದಾರರನ್ನು ಒಗ್ಗೂಡಿಸುವ ಹೊಸ ಜವಾಬ್ದಾರಿಯನ್ನು ಕಾರ್ಯಗತಗೊಳಿಸುತ್ತಿದೆ. ಡಿಜಿಟಲ್ ಪಾವತಿಯು ಭಾರತದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತಂದಿದೆ. ನೈಸರ್ಗಿಕ ವಿಪತ್ತು, ಆರೋಗ್ಯ ಸಂಬಂಧಿತ, ಆರ್ಥಿಕ ಅಥವಾ ಅಂತರರಾಷ್ಟ್ರೀಯ ವೇದಿಕೆಯಲ್ಲಿ ಮೊದಲು ಪ್ರತಿಸ್ಪಂದಿಸುವ ರಾಷ್ಟ್ರ ಎಂದರೆ ಭಾರತ. ಅದು ಹೀಗೆಯೇ ಮುಂದುವರಿಯುತ್ತದೆ. ಇದರಿಂದಾಗಿ ಭಾರತೀಯರು ಮಾರಿಷಸ್ ಮತ್ತು ಶ್ರೀಲಂಕಾಕ್ಕೆ ಪ್ರಯಾಣಿಸಿದರೆ ಅಥವಾ ಅವೆರಡೂ ದೇಶದವರು ಭಾರತಕ್ಕೆ ಬಂದಾಗ ಹಣ ಪಾವತಿ ಇನ್ನಷ್ಟು ಸುಲಭವಾಗಲಿದೆ…
Author: Author AIN
ಅಬುದಾಬಿ: ಅಬುದಾಬಿಯಲ್ಲಿ ಇಂದು ಆಯೋಜಿಸಲಾಗಿರುವ ಅಹ್ಲಾನ್ ಮೋದಿ’ ಕಾರ್ಯಕ್ರಮಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ಕಂಡುಬರುತ್ತಿದ್ದು, ಇದುವರೆಗೂ ಸುಮಾರು 65, 000ಕ್ಕೂ ಹೆಚ್ಚು ಜನರ ನೋಂದಣಿಯನ್ನು ಸ್ವೀಕರಿಸಲಾಗಿದೆ. ಇದೊಂದು ವಿಶಿಷ್ಟ ಕಾರ್ಯಕ್ರಮವಾಗಿದೆ. ಏಕೆಂದರೆ ಯಾವುದೇ ಒಂದು ಸಂಘಟನೆ ಈ ಕಾರ್ಯಕ್ರಮವನ್ನು ಆಯೋಜಿಸಿಲ್ಲ. ಇಡೀ ಸಮುದಾಯವೇ ಕಾರ್ಯಕ್ರಮ ಆಯೋಜಿಸಿದ್ದು, ಪ್ರಧಾನಿ ಮೋದಿ ಹೆಸರು ಬರುತ್ತಿದ್ದಂತೆಯೇ ಹೆಚ್ಚಿನ ಸಂಖ್ಯೆಯ ಜನರು ಸೇರುವ ಸಾಧ್ಯತೆಯಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಪ್ರೀತಿ ಎಂದು ಅಹ್ಲಾನ್ ಮೋದಿ ಕಾರ್ಯಕ್ರಮದ ಸಂಘಟಕ ಹಾಗೂ ಇಂಡಿಯನ್ ಪೀಪಲ್ ಫೋರಂ ಅಧ್ಯಕ್ಷ ಜಿತೇಂದ್ರ ವೈದ್ಯ ಪ್ರತಿಕ್ರಿಯಿಸಿದ್ದಾರೆ. ಅಬುದಾಬಿಯಲ್ಲಿರುವ ಭಾರತೀಯ ಸಮುದಾಯ ಸಾಮೂಹಿಕ ಪ್ರಯತ್ನದಿಂದ ಕಾರ್ಯಕ್ರಮ ಆಯೋಜಿಸಿದ್ದು, ನೋಂದಣಿ ಸಂಖ್ಯೆ 65,000 ದಾಟಿದೆ. ಅಬುದಾಬಿಯಲ್ಲಿರುವ ಅನಿವಾಸಿ ಭಾರತೀಯರಿಂದ ಅಭೂತಪೂರ್ವ ಪ್ರತಿಕ್ರಿಯೆ ಕಂಡುಬಂದಿದ್ದು,ದೇಶದ ಜನಸಂಖ್ಯೆಯ ಶೇ.35 ರಷ್ಟು ಭಾರತೀಯರಿದ್ದಾರೆ ಎಂದಿದ್ದಾರೆ. 700 ಸಾಂಸ್ಕೃತಿಕ ಕಲಾವಿದರಿಂದ ಭಾರತೀಯ ಕಲೆ, ವಿವಿಧತೆ ಪ್ರತಿಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳ ಇರಲಿದ್ದು, 150 ಕ್ಕೂ ಭಾರತೀಯ ಸಮುದಾಯದ ಗುಂಪುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ. ಪ್ರಧಾನಿ ಮೋದಿ…
ಬಾಲಿವುಡ್ ಸ್ಟಾರ್ ನಟ ಆಮೀರ್ ಖಾನ್ ಪುತ್ರ ಜುನೈದ್ ಖಾನ್ ಜೊತೆ ಜಪಾನ್ನಲ್ಲಿ ನಟಿ ಸಾಯಿ ಪಲ್ಲವಿ ಕಾಣಿಸಿಕೊಂಡಿದ್ದಾರೆ. ಜುನೈದ್ ಹಾಗೂ ಸಾಯಿ ಪಲ್ಲವಿ ಜೊತೆಗಿರುವ ಫೋಟೋಗಳ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಜುನೈದ್ ಜೊತೆ ಸಾಯಿ ಪಲ್ಲವಿ ಕಾಣಿಸಿಕೊಂಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹೊಸ ಸಿನಿಮಾವೊಂದರ ಚಿತ್ರೀಕರಣಕ್ಕಾಗಿ ಜಪಾನ್ನಲ್ಲಿ ಸಾಯಿ ಪಲ್ಲವಿ ಟೀಮ್ ಬೀಡು ಬಿಟ್ಟಿದೆ. ಆಮೀರ್ ಖಾನ್ ಅವರ ಪುತ್ರ ಜುನೈದ್ ಖಾನ್ ಸೂಪರ್ ಮ್ಯಾನ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಇದು ಸಿನಿಮಾಗಾಗಿದ್ದು ಸಾಯಿ ಪಲ್ಲವಿ ಬಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕೆಲವು ತಿಂಗಳುಗಳಿಂದ ಆಮೀರ್ ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. ಈ ಹಿಂದೆಯೇ ಆಮೀರ್ ಪುತ್ರನಿಗೆ ಸಾಯಿ ಪಲ್ಲವಿ ನಾಯಕಿ ಎಂದು ಸುದ್ದಿಯಾಗಿತ್ತು. ಇದೀಗ ವೈರಲ್ ಆಗಿರುವ ಫೋಟೋ ಗಾಳಿ ಸುದ್ದಿಗೆ ಬ್ರೇಕ್ ನೀಡಿದೆ.
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ, ಐಶ್ವರ್ಯ ರಜನಿಕಾಂತ್ ನಿರ್ದೇಶನದ ಲಾಲ್ ಸಲಾಂ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ. ಇದರಿಂದ ಬೇಸರಗೊಂಡಿರುವ ತಲೈವ ಖ್ಯಾತ ನಿರ್ದೇಶಕ ಲೋಕೇಶ್ ಕನಕರಾಜ್ ಗೆ ವಾರ್ನಿಂಗ್ ಮಾಡಿದ್ದಾರೆ. ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಲೋಕೇಶ್ ಕನಕರಾಜ್ ಇದೀಗ ರಜನಿಕಾಂತ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಮುಂದಿನ ತಿಂಗಳಿನಿಂದ ಶೂಟಿಂಗ್ ಆರಂಭವಾಗಲಿದ್ದು ಈ ಮಧ್ಯೆ ಕತೆ ಬದಲಾವಣೆ ಮಾಡಲು ರಜನಿಕಾಂತ್ ಹೇಳಿದ್ದಾರೆ ಎನ್ನಲಾಗುತ್ತಿದೆ. ಫೆ.9ರಂದು ‘ಲಾಲ್ ಸಲಾಂ’ ಚಿತ್ರ ಬಿಡುಗಡೆ ಆಗಿದ್ದು ಬಾಕ್ಸ್ ಆಫೀಸ್ ನಲ್ಲಿ ಸೈಲೆಂಟ್ ಆಗಿದೆ. ಚಿತ್ರದಲ್ಲಿ ರಜನಿಕಾಂತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಸೈಲೆಂಟ್ ಆಗಿದ್ರಿಂದ ಮುಂದಿನ ಸಿನಿಮಾದಲ್ಲಿ ಕೆಲ ಬದಲಾವಣೆ ಮಾಡಲು ಹೇಳಿದ್ದಾರೆ ಎನ್ನಲಾಗುತ್ತಿದೆ. ಮೊದಲಿದ್ದ ಕತೆಯಲ್ಲಿ ಸಿಕ್ಕಾಪಟ್ಟೆ ಹಿಂಸಾತ್ಮಕ ದೃಶ್ಯ ಮತ್ತು ರಕ್ತಪಾತ ಇದ್ದು ಅದನ್ನು ಕಮ್ಮಿ ಮಾಡಿ ಎಂದು ನಿರ್ದೇಶಕರಿಗೆ ತಲೈವಾ ಸಲಹೆ ನೀಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಭರ್ಜರಿಯಾಗಿಯೇ ತಯಾರಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ವೈಷ್ಣೋ ಸ್ಟುಡಿಯೋಸ್ ಲಾಂಛನದಲ್ಲಿ ಜೆ.ಜಯಮ್ಮ ನಿರ್ಮಿಸುತ್ತಿರುವ ಡೆವಿಲ್ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಗುತ್ತಿದೆ. ಪ್ರಕಾಶ್ ವೀರ್ ನಿರ್ದೇಶನದ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ಟೀಸರ್ ಫೆಬ್ರವರಿ 15ರ ರಾತ್ರಿ 11.59ಕ್ಕೆ ಬಿಡುಗಡೆಯಾಗಲಿದೆ. ಎರಡು ತಿಂಗಳ ಹಿಂದೆ ಸರಳವಾಗಿ ಸ್ಕ್ರಿಪ್ಟ್ ಪೂಜೆ ನೆರವೇರಿದ್ದು ಮಿಲನ ಚಿತ್ರದ ಖ್ಯಾತಿಯ ಪ್ರಕಾಶ್ ವೀರ್ ಆಕ್ಷನ್ ಕಟ್ ಹೇಳ್ತಿದ್ದಾರೆ. ಚಿತ್ರದಲ್ಲಿ ದರ್ಶನ್ ನಾಯಕ ಅನ್ನೋದೆ ಬಿಟ್ಟರೆ ಉಳಿದ ಯಾವುದೇ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ಡೆವಿಲ್ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ಹೇಳಿದ್ದಾರೆ. ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಲಿದ್ದಾರೆ.
ಡಾಲಿ ಧನಂಜಯ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಡಾಲಿ ಎಂಡ್ ಟೀಂನಿಂದ ಹೊಸ ಸುದ್ದಿಯೊಂದು ಕೇಳಿ ಬಂದಿದೆ. ಯೆಸ್ ಡಾಲಿ ಧನಂಜಯ ನಿರ್ಮಾಣದ ‘ಡಾಲಿ ಪಿಕ್ಚರ್ಸ್’ನ ಐದನೇ ಸಿನಿಮಾ ಸೆಟ್ಟೇರುತ್ತಿದೆ. ‘ಟಗರು ಪಲ್ಯ’ ಸಕ್ಸಸ್ ನಲ್ಲಿರುವ ‘ಡಾಲಿ ಪಿಚ್ಚರ್’ ಇದೀಗ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದೆ. ಈ ಬಗ್ಗೆ ಡಾಲಿ ಪಿಚ್ಚರ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದೆ. ಆದರೆ ಯಾವ ಸಿನಿಮಾ, ನಾಯಕ ಯಾರು ಎನ್ನುವ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ. ತಮ್ಮ ಪ್ರೊಡಕ್ಷನ್ ಮೂಲಕ ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಡಾಲಿ ಧನಂಜಯ್ ಈ ಭಾರಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ. ಧನಂಜಯ ಅವರ ಪ್ರೊಡಕ್ಷನ್ ನಿಂದ ಯಾವ ಹೀರೋ, ನಿರ್ದೇಶಕ ಮತ್ತು ನಾಯಕಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಕುತೂಹಲ ಶುರುವಾಗಿದೆ. ಡಾಲಿ ಪಿಕ್ಚರ್ಸ್ ಇದೇ ತಿಂಗಳು ಫೆಬ್ರವರಿ 14ಕ್ಕೆ ಸಿನಿಮಾದ ಟೈಟಲ್…
ರಾಕಿಂಗ್ ಸ್ಟಾರ್ ಯಶ್ ಸದ್ಯ ಟಾಕ್ಸಿಕ್ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಬಿಡುವು ಮಾಡಿಕೊಂಡಿರುವ ನಟ ಯಶ್ ಆಪ್ತ ಸಹಾಯಕನ ಮನೆಗೆ ಪತ್ನಿ ರಾಧಿಕಾ ಜೊತೆ ಸರ್ಪ್ರೈಸ್ ವಿಸೀಟ್ ನೀಡಿದ್ದಾರೆ. ಚೇತನ್ ಎಂಬುವವರು ಕಳೆದ 10 ವರ್ಷಗಳಿಂದ ಯಶ್ಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಚೇತನ್ ತಂದೆಯಾಗಿದ್ದು, ಇದೇ ಕಾರಣಕ್ಕೆ ಪತ್ನಿಯ ಜೊತೆ ಸಹಾಯಕನ ಮನೆಗೆ ಆಗಮಿಸಿ ಶುಭಹಾರೈಸಿದ್ದಾರೆ. ದೀಡಿರ್ ಆಗಿ ಯಶ್ ಮನೆಗೆ ಭೇಟಿ ನೀಡಿದ್ದು ನೋಡಿ ಚೇತನ್ ಫುಲ್ ಖುಷಿಯಾಗಿದ್ದಾರೆ. ಈ ವೇಳ ಯಶ್ ಮಗುವನ್ನು ತೊಡೆಯ ಮೇಲೆ ಮಲಗಿಸಿಕೊಂಡಿದ್ದು ಮಗುವಿಗೆ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದ್ದಾರೆ.
ಕನ್ನಡ ಕಿರುತೆರೆಯಲ್ಲಿ ಮಿಂಚಿ ಸದ್ಯ ತೆಲುಗು ಪ್ರೇಕ್ಷಕರ ಮನ ಗೆದ್ದಿರುವ ನಟಿ ಜ್ಯೋತಿ ರೈ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿದ್ದಾರೆ. ತಮ್ಮ ಹಾಟ್ ಹಾಟ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸುದ್ದಿಯಾಗ್ತಿರುವ ನಟಿ ಇದೀಗ ತಮ್ಮ ಎರಡನೆ ಮದುವೆಯ ಕುರಿತು ಮೌನ ಮುರಿದಿದ್ದಾರೆ. ತೆಲುಗು ಧಾರಾವಾಹಿಗಳ ಜೊತೆಗೆ ವೆಬ್ ಸೀರಿಸ್ ಹಾಗೂ ಸಿನಿಮಾಗಳಲ್ಲಿಯೂ ಜ್ಯೋತಿ ರೈ ತೊಡಗಿಕೊಂಡಿದ್ದಾರೆ. ಸದ್ಯ ‘ಪ್ರೆಟಿ ಗರ್ಲ್’ ಎನ್ನುವ ವೆಬ್ ಸೀರಿಸ್ನಲ್ಲಿ ಬಣ್ಣ ಹಚ್ಚಿದ್ದು ಸಾಮಾಜಿಕ ಜಾಲಾ ತಾಣದಲ್ಲಿ ಸದಾ ಸಖತ್ ಆಕ್ಟೀವ್ ಆಗಿರುತ್ತಾರೆ. ನಿರ್ದೇಶಕ ಸುಕು ಪೂರ್ವಜ್ ಜೊತೆ ಕೆಲ ದಿನಗಳಿಂದ ಜ್ಯೋತಿ ರೈ ರಿಲೇಷನ್ಶಿಪ್ನಲ್ಲಿ ಇದ್ದರು. ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಆತನ ಹೆಸರನ್ನು ತಮ್ಮ ಹೆಸರಿನ ಜೊತೆ ಸೇರಿಸಿಕೊಂಡಿದ್ದರು. ಸುಕು ಪೂರ್ವಜ್ ಜೊತೆ ಆತ್ಮೀಯವಾಗಿರುವ ಫೋಟೊ, ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಮದುವೆ ಬಗ್ಗೆ ಮಾಹಿತಿ ನೀಡಿರಲಿಲ್ಲ. ಕೆಲ ದಿನಗಳ ಹಿಂದೆ ಎಂಗೇಜ್ಮೆಂಟ್ ಆಗಿದೆ ಎನ್ನುವ ಅರ್ಥದಲ್ಲಿ ಪೋಸ್ಟ್ ಮಾಡಿದ್ದರು. ಆದರೆ ಇದೀಗ ಅಧಿಕೃತಪಡಿಸಿದ್ದಾರೆ. 2ನೇ…
ವಾಷಿಂಗ್ಟನ್: ತನ್ನ ಐದು ವರ್ಷದ ಮಗಳನ್ನು ಕೊಂದುಆಕೆಯ ದೇಹದ ಭಾಗಗಳನ್ನು ತುಂಡು ತುಂಡಾಗಿ ಕತ್ತರಿಸಿ, ತಾನು ಕೆಲಸ ಮಾಡುವ ರೆಸ್ಟೋರೆಂಟ್ಗೆ ಕೊಂಡೊಯ್ದ ಘಟನೆ ಅಮೆರಿಕದಲ್ಲಿ ನಡೆದಿದೆ. 34 ವರ್ಷದ ಆರೋಪಿ ತಂದೆ ಆಡಮ್ ತನ್ನ 5 ವರ್ಷದ ಮಗಳು ಹಾರ್ಮೊನಿಯನ್ನು ಹೊಡೆದು ಕೊಂದಿದ್ದಾನೆ. ಆರೋಪಿಯು ತನ್ನ ಕೆಲಸದ ಸ್ಥಳಕ್ಕೆ ಕೊಂಡೊಯ್ಯುವ ಚೀಲದಲ್ಲಿ ಮಗಳ ಕೊಳೆತ ದೇಹದ ಭಾಗಗಳನ್ನು ತುಂಬಿಸಿ, ‘ಹಳೆಯ ಕಸ’ ಎಂಬಂತೆ ಎಸೆದಿದ್ದ. ಆಕೆಯ ದೇಹದ ಭಾಗಗಳು ಇನ್ನೂ ಪತ್ತೆಯಾಗಿಲ್ಲ ಎಂದು ಪ್ರಾಸಿಕ್ಯೂಟರ್ ತಿಳಿಸಿದ್ದಾರೆ. ಆರೋಪಿಯು ರೆಸ್ಟೋರೆಂಟ್ನಲ್ಲಿ ಅಡುಗೆ ಹಾಗೂ ಪಾತ್ರೆ ತೊಳೆಯುವ ಕೆಲಸ ಮಾಡುತ್ತಿದ್ದು, ತನ್ನ ಕೆಲಸದ ಪಾಳಿಯ ವೇಳೆ ಫ್ರೀಜರ್ನಲ್ಲಿ ಆಹಾರ ಪದಾರ್ಥಗಳ ಪಕ್ಕದಲ್ಲಿ ಮಗಳ ಅಂಗಾಂಗಗಳನ್ನು ಇರಿಸಿದ್ದ ಎಂದು ವರದಿಯಾಗಿದೆ. “ಆತ ಯಾವಾಗಲೂ ಕೆಲಸಕ್ಕೆ ಬರುವಾಗ ಬ್ಯಾಗ್ ತರುತ್ತಿದ್ದ. ಈಗಲೂ ಚೀಲವನ್ನು ತಂದು ಫ್ರೀಜರ್ನಲ್ಲಿ ಇರಿಸುತ್ತಿದ್ದ. ಫ್ರೀಜರ್ನಲ್ಲಿ ಆಹಾರ ಮತ್ತು ಪದಾರ್ಥಗಳನ್ನು ಇಡಲಾಗುತ್ತದೆ. ಆತ ಚೀಲವನ್ನು ಒಳಗೆ ತರುವುದು ಹಾಗೂ ಹೊರಗೆ ಕೊಂಡೊಯ್ಯುವುದನ್ನು ಜನರು ನೋಡಿದ್ದರು.…
ಕೋಲ್ಕತ್ತಾ: ಬಾಲಿವುಡ್ ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 73 ವರ್ಷದ ಚಕ್ರವರ್ತಿ ಅವರಿಗೆ ಶನಿವಾರ ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ನಟ ಅರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿದ್ದು ಇದೀಗ ಮಿಥುನ್ ಚಕ್ರವರ್ತಿ ಉತ್ತಮ ರೀತಿಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಸಂಪೂರ್ಣವಾಗಿ ಜ್ಞಾನ ಹೊಂದಿದ್ದು, ಮೃದುವಾದ ಆಹಾರವನ್ನು ಸೇವಿಸಿದ್ದಾರೆ. ಅವರನ್ನು ಡಿಸ್ಚಾರ್ಜ್ ಮಾಡುವ ಮೊದಲು ಕೆಲವು ಪರೀಕ್ಷೆಗಳಿಗೆ ಒಳಗಾಗುತ್ತಾರೆ ಎಂದು ವೈದ್ಯಕೀಯ ಸೌಲಭ್ಯ ನೀಡುತ್ತಿರುವ ಅಧಿಕಾರಿ ತಿಳಿಸಿದ್ದಾರೆ. ಮಿಥುನ್ ಅವರನ್ನು ಫೆ.10ರ ಬೆಳಿಗ್ಗೆ 9.40 ಕ್ಕೆ ಕೋಲ್ಕತ್ತಾದ ಅಪೋಲೋ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಯಿತು. ಮೆದುಳಿನ ಎಂಆರ್ಐ ಮತ್ತು ರೇಡಿಯಾಲಜಿ ಪರೀಕ್ಷೆ ಸೇರಿದಂತೆ ಇತರ ಪ್ರಮುಖ ಪರೀಕ್ಷೆಗಳನ್ನು ಸಹ ಮಾಡಲಾಗಿದೆ.ಸದ್ಯ ನಟನ ಆರೋಗ್ಯ ಸುಧಾರಿಸಿದ್ದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.