ಬೆಂಗಳೂರು: ವಸಂತಪುರ ಬಡಾವಣೆಯಲ್ಲಿರುವ ವಸಂತ ವಲ್ಲಭಸ್ವಾಮಿ ದೇವಾಲಯ ಬೆಂಗಳೂರಿನ ಪ್ರಾಚೀನ ದೇವಾಲಯಗಳಲ್ಲಿ ಒಂದು. ಈ ದೇವಾಲಯ ವಿಜಯನಗರ ಕಾಲದ ವಾಸ್ತುವಾಗಿದೆ. ಇನ್ನೂ ಈ ದೇವಸ್ಥಾನದಲ್ಲಿ ಇಂದು ಬ್ರಹ್ಮರಥೋತ್ಸವದ ಸಂಭ್ರಮವಾಗಿದ್ದು, ಮುಜರಾಯಿ ಇಲಾಖೆ ಆಶ್ರಯದಲ್ಲಿ ನಡೆದ ಶ್ರೀ ವಸಂತವಲ್ಲಭರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಪರಿಷತ್ ಶಾಸಕ ಟಿಎ ಶರವಣ ಅವರು ಭಾಗಿಯಾಗಿದ್ದರು. ಪ್ರತಿ ವರ್ಷದಂತೆ ರಥ ಮತ್ತು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿತು. https://ainlivenews.com/eating-these-foods-will-boost-your-immune-system/ ಭಕ್ತರು ರಥಕ್ಕೆ ಬಾಳೆ ಹಣ್ಣು ಸಮರ್ಪಿಸಿ ಇಷ್ಟಾರ್ಥ ಸಿದ್ಧಿಯನ್ನು ಕೋರಿಕೊಂಡರು. ಅದರಂತೆ ಪರಿಷತ್ ಶಾಸಕ ಟಿಎ ಶರವಣ ಅವರು ಕೂಡ ನಾಡಿನ ಒಳಿತಿಗಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಸಂಸದರಾದ ಡಾ. ಮಂಜುನಾಥ್ ಮತ್ತು ಬೆಂಗಳೂರು ದಕ್ಷಿಣ ಶಾಸಕರಾದ ಕೃಷ್ಣಪ್ಪ ಅವರು ಪರಿಷತ್ ಶಾಸಕ ಟಿಎ ಶರವಣ ಅವರಿಗೆ ಸಾಥ್ ನೀಡಿದರು.
Author: Author AIN
ಅಹಮದಾಬಾದ್ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು 142 ರನ್ಗಳಿಂದ ಸೋಲಿಸಿ 3-0 ರಿಂದ ಸರಣಿಯನ್ನು ಗೆದ್ದುಕೊಂಡಿದೆ. ಶುಭ್ಮನ್ ಗಿಲ್ (112), ವಿರಾಟ್ ಕೊಹ್ಲಿ (52) ಮತ್ತು ಶ್ರೇಯಸ್ ಅಯ್ಯರ್ (78) ಅವರ ಅದ್ಭುತ ಬ್ಯಾಟಿಂಗ್ನಿಂದ ಭಾರತ 356 ರನ್ ಗಳಿಸಿತು. https://ainlivenews.com/eating-these-foods-will-boost-your-immune-system/ ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 214 ರನ್ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ ಭಾರತ 14 ವರ್ಷಗಳ ನಂತರ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಇನ್ನೂ ಈ ಗೆಲುವಿನ ಬಳಿಕ ಐಸಿಸಿ ಅಧ್ಯಕ್ಷ ಜಯ್ ಶಾ ಅವರ ಕೈಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟ್ರೋಫಿ ಸ್ವೀಕರಿಸಿದರು. ಆ ಬಳಿಕ ನಡೆದ ಫೋಟೋಶೂಟ್ ವೇಳೆ ಭಾರತೀಯ ಆಟಗಾರರ ಸಂಭ್ರಮ ಮುಗಿಲು ಮುಟ್ಟಿತ್ತು. ಆದರೆ ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲದಂತೆ ವಿರಾಟ್ ಕೊಹ್ಲಿ ಮಾತ್ರ ಫೋನ್ನಲ್ಲೇ ಮೈಮರೆತಿದ್ದರು. https://x.com/_Zsports/status/1889875801895739535?ref_src=twsrc%5Etfw%7Ctwcamp%5Etweetembed%7Ctwterm%5E1889875801895739535%7Ctwgr%5Ec816cb38c17b2ba69eac91918deb1cb6031cc634%7Ctwcon%5Es1_&ref_url=https%3A%2F%2Ftv9kannada.com%2Fsports%2Fcricket-news%2Fvirat-kohli-on-the-phone-call-during-the-trophy-celebration-zp-977818.html ಇದೀಗ ಟೀಮ್ ಇಂಡಿಯಾ ಸಂಭ್ರಮಿಸುತ್ತಿದ್ದರೂ, ಕೊಹ್ಲಿ ಫೋನ್ನಲ್ಲಿ ಮಾತನಾಡುತ್ತಿರುವ…
ದೊಡ್ಡಬಳ್ಳಾಪುರ ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು. ಗುರುವಾರ ಮಧ್ಯಾಹ್ನ 2:10ಕ್ಕೆ ಸರಿಯಾಗಿ ಸಲ್ಲುವ ಶುಭ ಅಭಿಜನ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಲಾಯಿತು. https://ainlivenews.com/historical-mylara-karnika-good-news-for-the-people-of-karnataka-what-is-the-prophecy/ ಪ್ರತಿ ವರ್ಷದಂತೆ ರಥ ಮತ್ತು ದೇವಸ್ಥಾನದ ಸುತ್ತ ಗರುಡವೂ ಪ್ರದಕ್ಷಿಣೆ ಹಾಕಿದ್ದು ವಿಶೇಷ. ಭಕ್ತರು ರಥಕ್ಕೆ ಬಾಳೆ ಹಣ್ಣು-ಜಾವನ ಸಮರ್ಪಿಸಿ ಇಷ್ಟಾರ್ಥ ಸಿದ್ಧಿಯನ್ನು ಕೋರಿಕೊಂಡರು. ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ, ತೀರ್ಥ ಪ್ರಸಾದಗಳನ್ನು ಸ್ವೀಕರಿಸಿ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದ ವೇಳೆ ಶಾಸಕ ಧೀರಜ್ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ನಗರಸಭಾ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಚಿಕ್ಕಮಗಳೂರು : ಸರ್ಕಾರಿ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಘಟನೆ ನಡೆದಿದೆ. ಗುಬ್ಬಿ ಮೂಲದ ಶಿವಕುಮಾರ್ (45) ಮೂಡಿಗೆರೆ ಸರ್ವೇ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೊತೆಗೆ ಚಿಕ್ಕಮಗಳೂರು ನೌಕರರ ಸಂಘದ ನಿರ್ದೇಶಕರಾಗಿದ್ದರು. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಇರುವ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆದರೆ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. https://ainlivenews.com/women-who-fought-in-the-middle-of-the-street/ ಕಳೆದ 10 ವರ್ಷಗಳಿಂದ ಬಳಸುತ್ತಿದ್ದ ಸಿಮ್ ಚೇಂಜ್ ಮಾಡಿದ್ದ ಶಿವಕುಮಾರ್ ನಿನ್ನೆಯಷ್ಟೇ ಹೊಸ ಸಿಮ್ ಖರೀದಿಸಿದ್ದರು. ಹೀಗಾಗಿ ಅವರ ಆತ್ಮಹತ್ಯೆಯ ಸುತ್ತ ಹಲವು ಅನುಮಾನಗಳು ಮೂಡಿವೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. https://www.youtube.com/watch?v=H6cS4XugLMI
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿ ಬಿಎಂಆರ್ಸಿಎಲ್ ಪ್ರಯಾಣಿಕರ ಮೇಲೆ ಗದಾ ಪ್ರಹಾರ ಮಾಡಿದೆ. ದರ ಏರಿಕೆಯಿಂದ ಕಂಗೆಟ್ಟಿರೋ ಪ್ರಯಾಣಿಕರು ಬಿಎಂಆರ್ಸಿಎಲ್ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮತ್ತೊಂದೆಡೆ, ಮೆಟ್ರೋ ಪ್ರಯಾಣ ದರ ಏರಿಕೆ ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಇದೀಗ ಮೆಟ್ರೋ ದರ ಇಳಿಕೆ ಸಂಬಂಧ ಸ್ವಲ್ಪ ಬದಲಾವಣೆ ಮಾಡಲಾಗುತ್ತದೆ. ಶೀಘ್ರದಲ್ಲೇ ಪರಿಷ್ಕೃತ ದರ ಪ್ರಕಟಿಸಲಾಗುವುದು ಎಂದು ಬಿಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ತಿಳಿಸಿದ್ದಾರೆ. ಹೌದು ಬಿಎಂಆರ್ಸಿಎಲ್ ಎಂಡಿ ಮಹೇಶ್ವರ್ ರಾವ್ ಪತ್ರಿಕಾಗೋಷ್ಠಿ ನಡೆಸಿ ಮಹತ್ವದ ಮಾಹಿತಿ ನೀಡಿದ್ದಾರೆ. ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡುವುದಕ್ಕೆ ಒಂದು ವಿಧಾನ ಇದೆ. ಅದರಂತೆಯೇ ದರ ನಿಗದಿ ಸಮಿತಿ ಅಧ್ಯಯನ ನಡೆಸಿ ಮಾಡಿದ ಶಿಫಾರಸಿನ ಮೇರೆಗೆ ದರ ಹೆಚ್ಚಳ ಮಾಡಲಾಗಿದೆ. ದರ ಏರಿಕೆಗೆ ಪ್ರಯಾಣಿಕರ ವಿರೋಧ ಹಿನ್ನೆಲೆಯಲ್ಲಿ ಸಭೆ ಮಾಡಲಾಗಿದೆ. https://ainlivenews.com/eating-these-foods-will-boost-your-immune-system/ ಕಳೆದ 3 ದಿನಗಳಿಂದ ಬೋರ್ಡ್ ಜೊತೆ ಸಭೆ ನಡೆಸಿದ್ದೇವೆ. ಸಿಎಂ ಹಾಗೂ ಡಿಸಿಎಂ ಸೂಚನೆ ಮೇರೆಗೆ ಸಭೆ…
ಹಾಸನ : ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನ ಬೆಳ್ಳಾವರ ಗ್ರಾಮದಲ್ಲಿ ನಡೆದಿದೆ. ಕನಗುಪ್ಪೆ ಗ್ರಾಮದ ದ್ಯಾವಮ್ಮ ಮೃತ ಮಹಿಳೆ.. ದ್ಯಾವಮ್ಮ ಜಾನುವಾರುಗಳನ್ನು ಹೋಗಿದ್ದಾಗ ಕಾಡಾನೆ ದಾಳಿ ಮಾಡಿದೆ. https://ainlivenews.com/the-youth-who-was-injured-in-the-accident-died-of-cardiac-arrest/ ಜಾನುವಾರಗಳನ್ನು ಹುಡುಕಲು ಹೋಗಿದ್ದ ದ್ಯಾವಮ್ಮ ಮನೆಗೆ ಬರದಿದ್ದಾಗ, ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಆಗ ಮುಳ್ಳಿನ ಪೊದೆಯಲ್ಲಿ ಶವ ಪತ್ತೆಯಾಗಿದೆ. ಮಹಿಳೆ ದೇಹದ ಮೇಲಿನ ಗಾಯದ ಗುರುತು ಮತ್ತು ಸ್ಥಳದಲ್ಲಿ ಆನೆಯ ಹೆಜ್ಜೆ ಗುರುತು ಪತ್ತೆಯಾಗಿದ್ದು, ಕಾಡಾ. ಕಾಡಾನೆ ದಾಳಿಯಿಂದಲೇ ದ್ಯಾವಮ್ಮ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸ್ಥಳಕ್ಕೆ ಅರೇಹಳ್ಳಿ ಠಾಣೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. https://www.youtube.com/watch?v=H6cS4XugLMI
ಶಿವಮೊಗ್ಗ: ಭದ್ರಾವತಿಯಲ್ಲಿ ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ ಸಂಬಂಧ ಇದೀಗ ಅಧಿಕಾರಿ ಪರವಾಗಿ ಪ್ರಣವಾನಂದ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಇಂದು ಅಧಿಕಾರಿಯನ್ನು ಭೇಟಿ ಮಾಡಿ ಮಾತನಾಡಿದ ಅವರು, ಈಡಿಗೆ ಸಮುದಾಯಕ್ಕೆ ಸೇರಿದ ಜ್ಯೋತಿಯವರು ನಿಷ್ಠಾವಂತ ಅಧಿಕಾರಿ. ವ್ಯಕ್ತಿಯೊಬ್ಬ ಅಚಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮರಳಿನ ಗಾಡಿ ಕೂಡ ಹತ್ತಿಸುವ ಪ್ರಯತ್ನ ಮಾಡಿದ್ದಾರೆ. ಸಮಾಜದ ಗುರುವಾಗಿ ಅವರಿಗೆ ನೈತಿಕ ಬೆಂಬಲ ಕೊಡಲು ಇಲ್ಲಿಗೆ ಬಂದಿದ್ದೇನೆ. ಅವರಿಗೆ ಧೈರ್ಯ ತುಂಬಲು ಬಂದಿದ್ದೇನೆ. ಹಿಂದುಳಿದ ವರ್ಗದ ಮಹಿಳೆ ಅಪಮಾನ ಆಗಿದೆ. ಸಂಗಮೇಶ್ ಮಗನನ್ನ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. https://ainlivenews.com/ramesh-jarakiholi-visited-the-mahakumbah-mela-with-his-friends/ ಸಿ.ಟಿ.ರವಿ ಎಷ್ಟು ಬೇಗಾ ಬಂಧಿಸಿದ್ರಿ, ಯಾರು ಕಾಲ್ ಮಾಡಿದ್ದಾರೆ ಎಲ್ಲವೂ ಗೊತ್ತಿದೆ. ಈಡಿಗ ಸಮುದಾಯದ ಮೂಲೆ ಗುಂಪು ಮಾಡಿದ್ದಾರೆ . ಈಡಿಗ ಸಮುದಾಯ ಮುಳುಗಿಸುವ ಕೆಲಸ ಸರ್ಕಾರಕ್ಕೆ ಮಾಡುತ್ತಿದೆ. ನೈತಿಕ ಹೊಣೆ ಹೊತ್ತು ಸಂಗಮೇಶ್ ಎಂಎಲ್ಎ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಸಂಗಮೇಶ್ ನನ್ನು ನಿಗಮ ಮಂಡಳಿ ಸ್ಥಾನದಿಂದ ಕಿತ್ತು ಹಾಕಬೇಕು. ಸಿಎಂ ನಮ್ಮಸಮಾಜಕ್ಕೆ ಗೌರವ ಕೊಡುವುದಾದರೇ ಕೂಡಲೇ…
ಬೆಂಗಳೂರು: ಮುಖ್ಯಮಂತ್ರಿಗಳು ದೀರ್ಘಾವಧಿಯ ಸಿಎಂ ಆಗಲೆಂದು ನಾನು ಹಾರೈಸ್ತೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ದೀರ್ಘಾವಧಿಯ ಸಿಎಂ ಎಂಬ ದಾಖಲೆ ಮಾಡುವ ಸಿದ್ದರಾಮಯ್ಯ ಅವರ ಇಚ್ಛೆ ವಿಚಾರವಾಗಿ ಪ್ರತಿಕ್ರಿಯೇ ನೀಡಿದ ಅವರು, ಮುಖ್ಯಮಂತ್ರಿಗಳು ದೀರ್ಘಾವಧಿಯ ಸಿಎಂ ಆಗಲೆಂದು ನಾನು ಹಾರೈಸ್ತೇನೆ. ಸಿದ್ದರಾಮಯ್ಯ ದಾಖಲೆ ಮಾಡಲಿ ಅಂತ ನಾನೂ ಹಾರೈಸ್ತೇನೆ. ಅವರು ಈ ಐದು ವರ್ಷ ಆಡಳಿತ ಪೂರ್ಣಗೊಳಿಸಿದರೆ ಸಹಜವಾಗಿ ಅದು ದಾಖಲೆ ಆಗಲಿದೆ. ಶಾಸಕರು ಸಿಎಲ್ಪಿ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದ್ರು. ಆ ಸಂದರ್ಭದಲ್ಲಿ ನಮಗೆ ಹೈಕಮಾಂಡ್ನವ್ರು ಎರಡೂವರೆ ವರ್ಷ ಅಧಿಕಾರ ಅಂತೇನೂ ಹೇಳಿರಲಿಲ್ಲ. ಹಾಗಾಗಿ ನಾವೆಲ್ಲ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರ್ತಾರೆ ಅಂತಾನೇ ಭಾವಿಸಿದ್ದೇವೆ ಎಂದರು. https://ainlivenews.com/vivo-phone-to-be-launched-at-an-affordable-price-its-features-are-guaranteed-to-shock-you/ ಉದಯಗಿರಿ ಗಲಭೆ ಪ್ರಕರಣವಾಗಿ ಮಾತನಾಡಿ, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಹತ್ತು ಆರೋಪಿಗಳ ಬಂಧನ ಆಗಿದೆ. ಸಿಸಿಟಿವಿಯಲ್ಲಿ ಪರಿಶೀಲಿಸಿ ಕಲ್ಲು ಹೊಡೆದವರು ಯಾರು ಅಂತ ಪತ್ತೆ ಹಚ್ಚಿ ಬಂಧಿಸ್ತಾರೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ…
ನಟ ಡಾಲಿ ಧನಂಜಯ್ ಮದುವೆಗೆ ಇನ್ನೂ ಕೆಲ ದಿನಗಳು ಮಾತ್ರವೇ ಭಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮದುವೆ ಶಾಸ್ತ್ರಗಳು ಆರಂಭವಾಗಿದ್ದು ಒಂದೊಂದೆ ಕಾರ್ಯಗಳನ್ನು ಮಾಡಲಾಗುತ್ತಿದೆ. ಸಂಪ್ರದಾಯದಂತೆ ಡಾಲಿ ಧನಂಜಯ ಅವರು ಜೇನುಕಲ್ಲು ಸಿದ್ದೇಶ್ವರ ದೇವರ ಕೊಂಡ ತುಳಿದಿದ್ದಾರೆ. ಡಾಲಿ ಧನಂಜಯ ಅವರ ಹುಟ್ಟೂರಾದ ಕಾಳೇನಹಳ್ಳಿಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಅರಸಿಕೆರೆಯ ಪ್ರಸಿದ್ಧ ಜೇನುಕಲ್ಲು ಸಿದ್ದೇಶ್ವರ ದೇವರ ಕೊಂಡವನ್ನು ಡಾಲಿ ಧನಂಜಯ ತುಳಿದಿದ್ದಾರೆ. ಶರ್ಟ್, ಪಂಚೆ ಧರಿಸಿದ್ದ ಧನಂಜಯ ಅವರು ಬೆಂಕಿಯ ಕೆಂಡಗಳಲ್ಲಿ ಬರಿಗಾಲಿನಲ್ಲೇ ಓಡಿದ್ದಾರೆ. ಕೊಂಡ ತುಳಿದ ನಂತರ ಜೇನುಕಲ್ಲು ಸಿದ್ದೇಶ್ವರ ದೇವರ ದರ್ಶನ ಪಡೆದುಕೊಂಡ ಡಾಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದಾದ ಮೇಲೆ ಮನೆಯಲ್ಲಿ ಮನೆ ದೇವರ ಪೂಜೆಯನ್ನು ಭಕ್ತಿಭಾವದಿಂದ ಮಾಡಿದ್ದಾರೆ. ಇದೇ ಶನಿವಾರ ಹಾಗೂ ಭಾನುವಾರ ಅಂದರೆ ಫೆ. 15, 16 ರಂದು ಮೈಸೂರಿನಲ್ಲಿ ಡಾಲಿ ಹಾಗೂ ಧನ್ಯತಾ ಮದುವೆ ನಡೆಯಲಿದೆ. ಮದುವೆಗೆ ಸ್ಯಾಂಡಲ್ವುಡ್ ಸ್ಟಾರ್ಸ್, ರಾಜಕಾರಣಿಗಳು, ಗಣ್ಯರು…
ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ `ಕಾವೇರಿ’ಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಉಪಸ್ಥಿತಿಯಲ್ಲಿ ಈ ಪ್ರಕ್ರಿಯೆ ನೆರವೇರಿತು. ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೊ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದರು. ಇಲ್ಲಿನ ಅರಮನೆ ಆವರಣದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿರುವ ವೊಲ್ವೊ ಸಂಸ್ಥೆ, ಅದರ ಭಾಗವಾಗಿ ಈ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, `ವೋಲ್ವೋ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು, ಬಂಡವಾಳ ಹೂಡಿ, ಬದಲಾವಣೆಗೆ ನಾಂದಿ…