Author: Author AIN

ಶಿವಮೊಗ್ಗ: ಶಿವಮೊಗ್ಗದ ತುಂಗಾ ನದಿಯ ಹಿನ್ನೀರಿನಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದೆ. ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಶವ ಪತ್ತೆಯಾಗಿದ್ದು ಸ್ಥಳಕ್ಕೆ ತುಂಗಾನಗರ ಪೊಲೀಸ್‌ ಠಾಣೆಯ ಪೊಲೀಸರು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. https://ainlivenews.com/a-fire-started-due-to-an-electrical-short-circuit/ ಸಕ್ರೆಬೈಲ್‌ ಆನೆ ಬಿಡಾರದ ಸಮೀಪ 10 ನೇ ಮೈಲಿಕಲ್ಲಿನ ಬಳಿಯಲ್ಲಿ, ಅರಣ್ಯ ಪ್ರದೇಶದಿಂದ ಒಳಕ್ಕೆ ತೆರಳಿದಾಗ ಸಿಗುವ ತುಂಗಾ ಬ್ಯಾಕ್‌ ವಾಟರ್‌ ದಡದಲ್ಲಿ ಮೂವರು ಮೃತದೇಹ  ಪತ್ತೆಯಾಗಿದೆ. ಮೇಲ್ನೋಟಕ್ಕೆ ಮೃತದೇಹಗಳು ಕೊಳೆತು ಹೋಗಿರುವ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಇಬ್ಬರು ಪುರುಷರು ಹಾಗೂ ಮೃತ ಮಹಿಳೆ ಯಾರು ಎಂಬುದು ಗೊತ್ತಾಗಿಲ್ಲ. ಈ ಬಗ್ಗೆ ಇನ್ನಷ್ಟೆ ಮಾಹಿತಿ ಸಿಗಬೇಕಿದೆ.

Read More

ಹಾಸನ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಹಾಸನ ತಾಲೂಕಿನ ದೇವಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ರೈತ ದಿನೇಶ್ ಎಂಬುವವರಿಗೆ ಸೇರಿದ ಮನೆಯ ಮೇಲೆ ವಿದ್ಯುತ್‌ ತಂತಿ ಹಾದು ಹೋಗಿದ್ದು, ಶಾರ್ಟ್‌ ಸರ್ಕ್ಯೂಟ್‌ನಿಂ ಬೆಂಕಿ ಹೊತ್ತು ಉರಿದಿದೆ. ಈ ವೇಳೆ ದಿನೇಶ್ ಹಾಗೂ ಪತ್ನಿ ಜಮೀನು ಕೆಲಸಕ್ಕೆ ತೆರಳಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬಬ್ಬಂದಿ, ಬೆಂಕಿ ನಂದಿಸಿ ಭರ್ತಿಯಾಗಿದ್ದ ಸಿಲಿಂಡರ್ ಹೊರಗೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಶಾಂತಿಗ್ರಾಮ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. https://ainlivenews.com/conductor-attacked-for-speaking-kannada-be-the-bully-of-the-marathi-youth/ ಇನ್ನೊಂದೆಡೆ ಅರಕಲಗೂಡು ತಾಲೂಕು ಕಚೇರಿ ಹಿಂಭಾಗದಲ್ಲಿರುವ ಮನೆಯೊಂದರಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದೆ. ಸಿಲಿಂಡರ್ ಸ್ಪೋಟಕ್ಕೆ ಮನೆಯಲ್ಲಿ ಇದ್ದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

Read More

ಭಾರತದ ಸ್ಟಾರ್‌ ಕ್ರಿಕೆಟಿಗ ಯಜುವೇಂದ್ರ ಚಹಲ್, ನಟಿ ಧನುಶ್ರೀ ದಾಂಪತ್ಯ ಜೀವನ ಕೊನೆಗೂ ಮುರಿದು ಬಿದ್ದಿದೆ. ಹಲವು ದಿನಗಳ ವದಂತಿ ಬಳಿಕ ಇಬ್ಬರು ಬಾಂದ್ರಾ ಫ್ಯಾಮಿಲಿ ಕೋರ್ಟ್‌ನಲ್ಲಿ ವಿಚ್ಛೇದನ ಪಡೆದಿದ್ದಾರೆ. ಡಿವೋರ್ಸ್‌ ಬೆನ್ನಲ್ಲೇ ಯಜುವೇಂದ್ರ ಚಹಲ್‌ಗೆ ಧನುಶ್ರೀ ಜೀವನಾಂಶದ ಬಿಗ್ ಶಾಕ್‌ ನೀಡಿದ್ದಾರೆ. ಯಜುವೇಂದ್ರ ಚಹಲ್ ಹಾಗೂ ಧನುಶ್ರೀ ದೂರ ದೂರವಾಗುತ್ತಿರುವ ಸುದ್ದಿ ಸದ್ದು ಮಾಡುತ್ತಿದ್ದಂತೆ ವಿಚ್ಛೇದನದ ಕುರಿತು ಸಾಕಷ್ಟು ಸುದ್ದಿಗಳು ಕೇಳಿ ಬಂದಿತ್ತು. ವಿಚ್ಛೇದನದ ಬಳಿಕ ಧನಶ್ರೀಗೆ ಚಹಲ್ ಅವರು ಬರೋಬ್ಬರಿ 60 ಕೋಟಿ ರೂಪಾಯಿ ಜೀವನಾಂಶ ನೀಡಬೇಕು ಅನ್ನೋ ಬಗ್ಗೆ ವರದಿಯಾಗಿದೆ. ನಿನ್ನೆಯಷ್ಟೇ ಯಜುವೇಂದ್ರ ಚಹಲ್ ಹಾಗೂ ಧನಶ್ರೀ ವಿಚ್ಛೇದನ ಫ್ಯಾಮಿಲಿ ಕೋರ್ಟ್‌ನಲ್ಲಿ ಅಧಿಕೃತವಾಗಿದೆ. ಕೆಲವು ಮೂಲಗಳ ಪ್ರಕಾರ ಯಜುವೇಂದ್ರ ಚಹಲ್ ಹಾಗೂ ಧನಶ್ರೀ ಪರಸ್ಪರ ಹೊಂದಾಣಿಕೆಯ ಮೂಲಕ ಅಧಿಕೃತವಾಗಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಒಪ್ಪಂದದ ಪ್ರಕಾರ ಯಜುವೇಂದ್ರ ಚಹಲ್ ಅವರು 60 ಕೋಟಿ ರೂಪಾಯಿ ಜೀವನಾಂಶ ಕೊಟ್ಟರೆ ಒಪ್ಪಂದ ಅಂತ್ಯಗೊಳ್ಳಲಿದೆ. ಆದರೆ ಹಣಕಾಸಿನ ಒಪ್ಪಂದಗಳ ಬಗ್ಗೆ ಯಾವುದೇ ಅಧಿಕೃತ…

Read More

ನವದೆಹಲಿ: ಒಂದು ಮದುವೆ ಮುರಿದರೆ, ಅದು ಸ್ತ್ರೀ ಪುರುಷ ಜೀವನಕ್ಕೆ ಅಂತ್ಯವಾಗುವುದಿಲ್ಲ, ಆ ಜೋಡಿ ಮುಂದೆ ಹೋಗಬೇಕೆಂದು ಸುಪ್ರೀಂ.. ಒಂದು ಜೋಡಿ ವಿವಾಹವನ್ನು ರದ್ದುಗೊಳಿಸುವುದು ಹೇಳಿಕೆ ನೀಡಿದೆ. ನ್ಯಾಯ ಅಭಯ್ ಓಕಾ ನ್ಯಾಯಾಲಯದ ಧರ್ಮಾಸನ ಮೇ 2020 ರಲ್ಲಿ ನಡೆದ ವಿವಾಹವನ್ನು ರದ್ದುಗೊಳಿಸಿ, ಆ ಜೋಡಿ ಒಂದರಿಪೈ ಒಂದು ಸಲ್ಲಿಸಿದ 17 ಪ್ರಕರಣಗಳನ್ನು ಕೂಡ ಮುಕ್ತಾಯಗೊಳಿಸಿ, ಮುಂದೆ ಸಾಗಬೇಕೆಂದು ಸೂಚಿಸಿದೆ. “ಇದ್ದರೂ.. ಹುಡುಗಿ, ಹುಡುಗ. ಇಬ್ಬರೂ ತಮ್ಮ ಭವಿಷ್ಯದ ಕಡೆಗೆ ನೋಡುತ್ತಾರೆ. ಮದುವೆ ವಿಫಲಮಯವಾದರೆ, ಅದು ಜೀವನದ ಅಂತ್ಯವಲ್ಲ. ಅವರು ಮುಂದೆ ನೋಡಿ. ಹೊಸ ಪ್ರಾರಂಭಿಸಬೇಕು” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆ ಜೋಡಿ ಈಗ ಪ್ರಶಾಂತವಾಗಿ ಬದುಕಿ ಜೀವನದಲ್ಲಿ ಮುಂದೆ ಸಾಗಬೇಕೆಂದು ಕೋರುವಂತೆ ನ್ಯಾಯಾಲಯದ ಪ್ರದರ್ಶನ. ಪತಿ, ಅತ್ತಮಾಮಗಳು ನಿರಂತರವಾಗಿ ವೇಧನೆಗಳಿಗೆ ಗುರಿಯಾಗುತ್ತಿದ್ದಾರೆ ಎಂದು ಆರೋಪಿಸುತ್ತಾರೆ, ಮದುವೆಯಾದ ಒಂದು ವರ್ಷದ ಲೋಪು ಪತ್ನಿ ತನ್ನ ವೈವಾಹಿಕ ಜೀವನವನ್ನು ಬಿಟ್ಟು ಹೋಗಬೇಕು ಬಂದ ದುರದೃಷ್ಟಕರ ಪ್ರಕರಣಗಳಲ್ಲಿ ಇದು ಒಂದು ಎಂದು ನ್ಯಾಯಾಲಯ ಅಭಿವರ್ಣಿಸಿತು.…

Read More

ಬೆಳಗಾವಿ : ಬೆಳಗಾವಿಯಲ್ಲಿ ಮರಾಠಿ ಯುವಕರು ಗೂಂಡಾಗಿರಿ ನಡೆಸಿದ್ದು, ಕನ್ನಡ ಮಾತಾಡು ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಬಾಳೇಕುಂದ್ರಿ ಗ್ರಾಮ ಮಧ್ಯೆ ಗಲಾಟೆ ನಡೆದಿದೆ. ಬಸ್ ಕಂಡಕ್ಟರ್ ಮಹದೇವ್ ಮೇಲೆ ಮರಾಠಿ ಯುವಕರ ಗುಂಪಿನಿಂದ ಹಲ್ಲೆ ನಡೆದಿದೆ. https://ainlivenews.com/will-yatnal-set-another-record-against-vijayendra/ ಬಸ್ ನಲ್ಲಿದ್ದ ಯುವತಿ ಕಂಡಕ್ಟರ್ ಮಹದೇವಗೆ ಟಿಕೆಟ್ ಕೊಡುವಂತೆ ಮರಾಠಿಯಲ್ಲಿ ಹೇಳಿದ್ದಾಳೆ. ಯುವತಿಯೊಂದಿಗ್ಗೆ ಯುವಕನೊಬ್ಬ ಪ್ರಯಾಣ ಮಾಡುತ್ತಿದ್ದರಿಂದ ಎರಡು ಟಿಕೆಟ್ ಕೇಳಿದ್ದಾಳೆ. ಮರಾಠಿ ಬರುವುದಿಲ್ಲ ನನಗೆ ಕನ್ನಡದಲ್ಲಿ ಹೇಳುವಂತೆ ಕಂಡಕ್ಟರ್ ಹೇಳಿದ್ದಾನೆ. ಇಷ್ಟಕ್ಕೆ ಜನರನ್ನ ಕರೆಸಿ ಚಲಿಸುತ್ತಿರುವ ಬಸ್ ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಒಳಗಾದ ಕಂಡಕ್ಟರ್ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಿದ್ದಾರೆ. ಹಲ್ಲೆಗೊಳಗಾದ ಕಂಡಕ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ.

Read More

ಕೊಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ನಾರಾಯಣ ಹೆಲ್ತ್ ಸಂಸ್ಥೆಯು ಕೊಲ್ಕತ್ತಾದ ನ್ಯೂ ಟೌನ್‌ನಲ್ಲಿ ತನ್ನ ಅತಿದೊಡ್ಡ ಘಟಕವಾದ ನಾರಾಯಣ ಹೆಲ್ತ್ ಸಿಟಿಗೆ ಶಂಕುಸ್ಥಾಪನೆ ನೆರವೇರಿಸಿದೆ ಎಂದು ನಾರಾಯಣ ಹೆಲ್ತ್‌ ನ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಗ್ರೂಪ್ ಸಿಇಓ ಡಾ. ಇಮ್ಯಾನ್ಯುಯೆಲ್ ರೂಪರ್ಟ್ ಮಾಹಿತಿ ನೀಡಿದ್ದಾರೆ. ಈ ಘಟಕವು ನಾರಾಯಣ ಹೆಲ್ತ್ ನ 21ನೇ ಘಟಕವಾಗಿದ್ದು, ಪೂರ್ವ ಭಾರತದಲ್ಲಿನ ಅತಿದೊಡ್ಡ ಖಾಸಗಿ ಆಸ್ಪತ್ರೆ ಘಟಕ ಎಂಬ ಹೆಗ್ಗಳಿಕೆಯನ್ನು ಪಡೆಯಲಿದೆ. ಈ ಘಟಕವು ಅತ್ಯಾಧುನಿಕ ತಂತ್ರಜ್ಞಾನಗಳುಳ್ಳ ಮಲ್ಟಿ ಸ್ಪೆಷಾಲಿಟಿ ಘಟಕವಾಗಲಿದ್ದು, 10 ಲಕ್ಷ ಚದರ ಅಡಿಯಷ್ಟು ವಿಶಾಲವಾಗಿದೆ. ಆಂಕಾಲಜಿ, ಕಾರ್ಡಿಯಾಕ್ ಸೈನ್ಸಸ್, ಆರ್ಗನ್ ಟ್ರಾನ್ಸ್‌ ಪ್ಲ್ಯಾಂಟ್‌, ಆರ್ಥೋಪೆಡಿಕ್ಸ್ ಮತ್ತು ಅಡ್ವಾನ್ಸ್ಡ್ ಟ್ರಾಮಾ ಕೇರ್, ನ್ಯೂರಾಲಜಿ, ಗ್ಯಾಸ್ಟ್ರೋಎಂಟರಾಲಜಿ, ರೀನಲ್ ಸೈನ್ಸಸ್ ಮತ್ತು ಕ್ರಿಟಿಕಲ್ ಕೇರ್‌ ಸೇರಿದಂತೆ ಹಲವಾರು ವೈದ್ಯಕೀಯ ವಿಭಾಗಗಳಲ್ಲಿ ಅತ್ಯಾಧುನಿಕ ಚಿಕಿತ್ಸೆ ನೀಡಲಿದೆ. https://ainlivenews.com/reduce-the-minimum-marks-for-sslc-passing-from-35-to-33-private-schools-urge-the-government/ ನ್ಯೂ ಟೌನ್‌ ನಲ್ಲಿರುವ ನಾರಾಯಣ ಹೆಲ್ತ್ ಸಿಟಿ ಯೋಜನೆಯು…

Read More

ಬೆಂಗಳೂರು: ಮಹಿಳೆಯರಿಗೆ ಸಮಾಜದಲ್ಲಿ ಸೂಕ್ತ ಸ್ಥಾನಮಾನಗಳಿದ್ದರೂ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಏರುತ್ತಲೇ ಇವೆ. ಇದೀಗ  ಸಿಲಕಾನ್ ಸಿಟಿ ಬೆಂಗಳೂರಿನಲ್ಲಿ ಪರಿಚಯಸ್ಥ ಮಹಿಳೆ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮಧ್ಯರಾತ್ರಿ ವೇಳೆ ಕಾಮುಕರು ಮಹಿಳೆಯೋರ್ವಳನ್ನು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಅಜಿತ್ , ವಿಶ್ವಾಸ್, ಶಿವು ಪೊಲೀಸರ ವಶಕ್ಕೆ ಪಡೆದಿದ್ದು, https://ainlivenews.com/do-you-need-a-loan-if-so-just-show-your-pan-card-and-you-will-get-rs-5000/ ಬೆಂಗಳೂರಿನ ಕೋರಮಂಗಲ ಸಮೀಪ ಇರುವ ಖಾಸಗಿ ಕಾಲೇಜು ಬಳಿ ಮಹಿಳೆಯೋರ್ವಳು ಬರುತ್ತಿದ್ದಾಗ, ಅಲ್ಲೇ ಹೋಟೆಲ್ ನಲ್ಲಿ ಕೆಲಸ ಮಾಡುವ ನಾಲ್ವರು ಸಿಬ್ಬಂದಿಗಳು ಮಹಿಳೆಯನ್ನು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಸುಮಾರು ಮಧ್ಯರಾತ್ರಿ 12:30 ಗಂಟೆಗೆ ನಡೆದಿದೆ ಎನ್ನಲಾಗಿದ್ದು, ಮದ್ಯಪಾನ ಮಾಡಿ ಖಾಸಗಿ ರೂಮಿಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಮಹಿಳೆಯನ್ನ ಅತ್ಯಾಚಾರ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ತಕ್ಷಣ 112 ಕರೆ ಮಾಡಿ ದೂರು ನೀಡಿದ್ದಾಳೆ ಎನ್ನಲಾಗಿದೆ. ಸದ್ಯ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ…

Read More

ಟೀಮ್ ಇಂಡಿಯಾ ಆಟಗಾರ ಶಿಖರ್ ಧವನ್ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರು ತಮ್ಮ ನಡವಳಿಕೆಯಿಂದ ಅಭಿಮಾನಿಗಳನ್ನು ರಂಜಿಸುತ್ತಲೇ ಇರುತ್ತಾರೆ. ಅಭಿಮಾನಿಗಳು ಕೂಡ ಅವರನ್ನು ನೋಡಲು ಇಷ್ಟಪಡುತ್ತಾರೆ. ಶಿಖರ್ ಧವನ್ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದರೊಂದಿಗೆ, ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗನ ತಮಾಷೆಯ ರೀಲ್‌ಗಳಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ, ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯ ಗುರುವಾರ ನಡೆದಿರುವುದು ತಿಳಿದುಬಂದಿದೆ. https://ainlivenews.com/do-you-need-a-loan-if-so-just-show-your-pan-card-and-you-will-get-rs-5000/ ಶಿಖರ್ ಧವನ್ ದುಬೈನಲ್ಲಿ ಸದ್ದು ಮಾಡಿದರು.. ಅಲ್ಲಿ ಅವರು ತಮ್ಮ ಹಳೆಯ ಸ್ನೇಹಿತರೊಂದಿಗೆ ತುಂಬಾ ಮಜಾ ಮಾಡಿದರು. ಎರಡನೇ ಪಂದ್ಯದಲ್ಲಿ, ಗಬ್ಬರ್ ಜೊತೆ ಸ್ಟ್ಯಾಂಡ್‌ನಲ್ಲಿ ಒಬ್ಬ ನಿಗೂಢ ಹುಡುಗಿ ಕೂಡ ಕಾಣಿಸಿಕೊಂಡಳು. ಆಕೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಶಿಖರ್ ಧವನ್ ಮತ್ತು ನಿಗೂಢ ಹುಡುಗಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಭಾರತ-ಬಾಂಗ್ಲಾದೇಶ ಪಂದ್ಯದ ವೇಳೆ ಕಂಡುಬಂದ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ…

Read More

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಮಂಡನೆಗೆ ದಿನಗಣನೆ ಆರಂಭವಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ ಮಂಡಿಸಿಲಿದ್ದು, ಇಂದು ಬಜೆಟ್‌ ಪೂರ್ವಭಾವಿ ಸಭೆ ನಡೆಸಲಾಯಿತು. 2025ರ ಆಯವ್ಯಯ ಪೂರ್ವಭಾವಿ ಚರ್ಚೆಯಲ್ಲಿ ಪರಿಷತ್‌ ಶಾಸಕರಾದ ಟಿ.ಎ.ಶರವಣ ಅವರು ಭಾಗಿಯಾಗಿದ್ದು, ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆಯಲ್ಲಿ ಭಾಗಿಯಾದ ಕರ್ನಾಟಕ ಜ್ಯುವೆಲರಿ ಅಸೋಸಿಯೇಶನ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರು, ಕರ್ನಾಟಕ ಆಭರಣ ವ್ಯಾಪಾರಿಗಳ ಸಂಘದ ಪರವಾಗಿ ಬಹಳ ದಿನಗಳಿಂದ ಬಾಕಿ ಉಳಿದಿರುವ ಕರ್ನಾಟಕ ಮೆಗಾ ಜ್ಯುವೆಲ್ಲರಿ ಪಾರ್ಕ್ ಯೋಜನೆ ಅನುಷ್ಠಾನ ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. https://ainlivenews.com/parishad-mla-ta-sharavana-takes-holy-bath-at-mahakumbh-mela-avadhoot-vinay-guruji-participates/ ಸಭೆಯಲ್ಲಿ ಮಾತನಾಡಿದ ಅವರು ಹಿಂದಿನ ಬಜೆಟ್‌ನಲ್ಲಿ 200 ಕೋಟಿ ವೆಚ್ಚದಲ್ಲಿ ಕರ್ನಾಟಕ ಮೆಗಾ ಜ್ಯುವೆಲ್ಲರಿ ಪಾರ್ಕ್‌ ನಿರ್ಮಾಣದ ಘೋಷಣೆ ಮಾಡಿತ್ತು. ಆದರೆ ಮೂರು ವರ್ಷಗಳಾದರೂ ಆಗಿಲ್ಲ. ಕರ್ನಾಟಕ ಜ್ಯುವೆಲ್ಲರಿ ಮ್ಯಾನುಫ್ಯಾಕ್ಚರಿಂಗ್‌ನಲ್ಲಿ ಪ್ರಖ್ಯಾತಿ…

Read More

ನವದೆಹಲಿ: ನಾವು ಜಾಗತಿಕ ಚಿಂತನೆ ಮತ್ತು ಸ್ಥಳೀಯ ಪಾಲನೆಯೊಂದಿಗೆ ಮುಂದುವರಿಯಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ಭಾರತ್ ಮಂಟಪದಲ್ಲಿ ಆಯೋಜಿಸಿದ್ದ ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್‌ಶಿಪ್ (ಸೋಲ್) ಲೀಡರ್‌ಶಿಪ್ ಕಾನ್ಕ್ಲೇವ್‌ನ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಭಾರತದ ಪ್ರಭಾವವು ಎಲ್ಲಾ ವಲಯಗಳಲ್ಲಿ ಹಲವು ಪಟ್ಟು ಹೆಚ್ಚಾಗುತ್ತದೆ. https://ainlivenews.com/do-you-need-a-loan-if-so-just-show-your-pan-card-and-you-will-get-rs-5000/ ಒಂದು ರೀತಿಯಲ್ಲಿ ಭಾರತದ ಸಂಪೂರ್ಣ ದೃಷ್ಟಿಕೋನ ಮತ್ತು ಭವಿಷ್ಯವು ಬಲವಾದ ನಾಯಕತ್ವ ಪೀಳಿಗೆಯ ಮೇಲೆ ಅವಲಂಬಿತವಾಗಿರುತ್ತದೆ, ಆದ್ದರಿಂದ ನಾವು ಜಾಗತಿಕ ಚಿಂತನೆ ಮತ್ತು ಸ್ಥಳೀಯ ಪಾಲನೆಯೊಂದಿಗೆ ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟರು. ಭೂತಾನಿನ ಪ್ರಧಾನಿ ದಾಸೋ ತ್ಸೆರಿಂಗ್ ಟೋಗ್ಬೇ ಮಾತನಾಡಿ, ಈ ಎರಡು ದಿನಗಳ ಸಮ್ಮೇಳನದಲ್ಲಿ ರಾಜಕೀಯ, ಕ್ರೀಡೆ, ಕಲೆ, ಮಾಧ್ಯಮ, ಆಧ್ಯಾತ್ಮಿಕತೆ, ಸಾರ್ವಜನಿಕ ನೀತಿ, ವ್ಯವಹಾರ ಮತ್ತು ಸಾಮಾಜಿಕ ಕ್ಷೇತ್ರದ ವ್ಯಕ್ತಿಗಳು ತಮ್ಮ ಯಶೋಗಾಥೆಗಳನ್ನು ಹಂಚಿಕೊಳ್ಳಲಿದ್ದಾರೆ ಎಂದರು.

Read More