ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಸುಮಾರು ೭ ತಿಂಗಳ ಕಾಲ ಜೈಲಿನಲ್ಲಿದ್ದ ನಟಿ ಪವಿತ್ರಾ ಗೌಡ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಸದ್ಯ ನೋವನ್ನೆಲ್ಲಾ ಮರೆತಿರೋ ಪವಿತ್ರಾ ಗೌಡ ಮತ್ತೆ ಹೊಸ ಜೀವನ ಶುರು ಮಾಡೋಕೆ ಮುಂದಾಗಿದ್ದಾರೆ. ಅವರು ‘ರೆಡ್ ಕಾರ್ಪೆಟ್ ಸ್ಟುಡಿಯೋ’ ಲಾಂಚ್ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಫೆಬ್ರವರಿ ೧೪ ಅಂದರೆ ಪ್ರೇಮಿಗಳ ದಿನದಂದು ರೀ ಲಾಂಚ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಪವಿತ್ರಾ ಗೌಡ ಅವರು ಈ ಮೊದಲೇ ‘ರೆಡ್ ಕಾರ್ಪೆಟ್’ ಸ್ಟುಡಿಯೋನ ಹೊಂದಿದ್ದರು. ಆದರೆ, ಕಾರಣಾಂತರಗಳಿಂದ ಇದು ಸರಿಯಾಗಿ ಕಾರ್ಯ ನಿರ್ವಹಿಸಿರಲಿಲ್ಲ. ಪವಿತ್ರಾ ಜೈಲಿನಲ್ಲಿ ಇದ್ದಾಗ ಇದನ್ನು ಸರಿಯಾಗಿ ನೋಡಿಕೊಳ್ಳುವವರು ಇರಲಿಲ್ಲ ಎನ್ನಲಾಗಿದೆ. ಈಗ ಫೆಬ್ರವರಿ 14ರಂದು ಇದನ್ನು ಅವರು ರೀಲಾಂಚ್ ಮಾಡುತ್ತಿದ್ದಾರೆ. ಫೆಬ್ರವರಿ 14 ಎಂದರೆ ಪ್ರೇಮಿಗಳ ದಿನ. ಈ ವಿಶೇಷ ದಿನವೇ ಈ ಸ್ಟುಡಿಯೋ ರೀ ಲಾಂಚ್ ಮಾಡಲಿದ್ದಾರೆ. ರೆಡ್ ಥೀಮ್ನಲ್ಲಿ ‘ರೆಡ್ ಕಾರ್ಪೆಟ್ ಸ್ಟುಡಿಯೋ’ ರೀ ಲಾಂಚ್ ಮಾಡಲಾಗುತ್ತಿದೆ ಅನ್ನೋದು ವಿಶೇಷ. ಈಗಾಗಲೇ ಇದರ…
Author: Author AIN
ಆಸ್ಟ್ರೇಲಿಯಾದ ದಂತಕಥೆಯಾಗಿರುವ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವುದಿಲ್ಲ. ಈ ಸುದ್ದಿಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಇಂದು ಬೆಳಿಗ್ಗೆ ದೃಢಪಡಿಸಿದೆ. 35 ವರ್ಷದ ಎಡಗೈ ವೇಗಿ, ಕಳೆದ ವಾರ ತಂಡದಿಂದ ಹೊರಗುಳಿದಿದ್ದ ಪ್ಯಾಟ್ ಕಮ್ಮಿನ್ಸ್ ಮತ್ತು ಜೋಶ್ ಹ್ಯಾಜಲ್ವುಡ್ ಅನುಪಸ್ಥಿತಿಯಲ್ಲಿ ಪಾಕಿಸ್ತಾನದಲ್ಲಿ 2006 ಮತ್ತು 2009 ರ ಚಾಂಪಿಯನ್ಸ್ ಟ್ರೋಫಿ ವಿಜೇತರ ಬೌಲಿಂಗ್ ದಾಳಿಯನ್ನು ಮುನ್ನಡೆಸುವ ನಿರೀಕ್ಷೆಯಿತ್ತು, ಆದರೆ ಈಗ ಅವರು ಕೂಡ ಅವರೊಂದಿಗೆ ಸೇರಿಕೊಂಡಿದ್ದಾರೆ. https://ainlivenews.com/great-job-opportunity-in-the-postal-department-for-10th-puc-passers-apply-today/ 2025ರ ಚಾಂಪಿಯನ್ಸ್ ಟ್ರೋಫಿಟೂರ್ನಿಗೆ 7 ದಿನಗಳು ಬಾಕಿಯಿದೆ. ಈಗಾಗಲೇ ನಾಯಕ ಪ್ಯಾಟ್ ಕಮ್ಮಿನ್ಸ್, ವೇಗಿ ಜೋಶ್ ಹ್ಯಾಜಲ್ವುಡ್, ಮಿಚೆಲ್ ಮಾರ್ಷ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದಾರೆ. ಅಲ್ಲದೇ ಏಕದಿನ ಕ್ರಿಕೆಟ್ಗೆ ಮಾರ್ಕಸ್ ಸ್ಟೋಯ್ನಿಸ್ ಏಕದಿನ ಕ್ರಿಕೆಟ್ಗೆ ಗುಡ್ಬೈ ಹೇಳಿದ್ದಾರೆ. ಈ ಬೆನ್ನಲ್ಲೇ ಮಿಚೆಲ್ ಸ್ಟಾರ್ಕ್ ವೈಯಕ್ತಿಕ ಕಾರಣಗಳಿಂದ ಹೊರಗುಳಿದಿದ್ದಾರೆ. ಇದು ಅಸ್ಟ್ರೇಲಿಯಾ ತಂಡಕ್ಕೆ ನುಂಗಲಾರದ ತುತ್ತಾಗಿದೆ. ಪ್ಯಾಟ್ ಕಮ್ಮಿನ್ಸ್ ಹೊರಬಿದ್ದ ಬೆನ್ನಲ್ಲೇ ಸ್ಟೀವ್ ಸ್ಮಿತ್ಗೆ ಚಾಂಪಿಯನ್ಸ್ ಟ್ರೋಫಿ ನಾಯಕತ್ವ…
ಶಿವಮೊಗ್ಗ : ಸಮಾಜ ತಲೆತಗ್ಗಿಸುವ ಘಟನೆ ಭದ್ರಾವತಿಯಲ್ಲಿ ನಡೆದಿದ್ದು ಎಂಎಲ್ಎ ಮಕ್ಕಳು ಮಹಿಳಾ ಅಧಿಕಾರಿ ಮೇಲೆ ದರ್ಪ ಮೆರೆದಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಆರ್. ಪ್ರಸನ್ನ ಕುಮಾರ್ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು ರಿಪಬ್ಲಿಕ್ ಭದ್ರಾವತಿ ಆಗಲು ಬಿಡಲ್ಲ ಎಂದು ಜಿಲ್ಲಾ ಮಂತ್ರಿ ಹೇಳಿದ್ದರು, ಮಾಧ್ಯಮದಲ್ಲಿ ಒತ್ತಡ ಬಂದ ಮೇಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಯಾರನ್ನ ಬಂಧಿಸಬೇಕೋ ಅವರನ್ನು ಬಂಧಿಸಿಲ್ಲ ಅವರ ವಿರುದ್ದ ಪ್ರಕರಣ ದಾಖಲು ಮಾಡಿಲ್ಲ, ಯಾರೋ ಟೈಪ್ ಮಾಡಿ ತಂದ ಲೇಟರ್ ಅನ್ನ ಮಹಿಳಾ ಅಧಿಕಾರಿ ಪೊಲೀಸರಿಗೆ ಕೊಟ್ಟಿದ್ದಾರೆ, ಭದ್ರಾವತಿಯ ಘಟನೆಯಲ್ಲಿ ಜೆಡಿಎಸ್ ತೀವ್ರವಾಗಿ ಖಂಡಿಸುತ್ತದೆ ಎಂದರು. ಇನ್ನು ಭದ್ರಾವತಿಯಲ್ಲಿ ಅಧಿಕಾರಿಗಳು ಭಯದ ವಾತಾವರಣದಲ್ಲಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ, ಡಿಸಿ, ಎಸ್ಪಿ ಅವರು ಜಿಲ್ಲೆಯಲ್ಲಿ ಏನು ಮಾಡುತ್ತಿದ್ದಾರೆ, ಕೆಲಸ ಮಾಡುವ ಅಧಿಕಾರಿಗಳಿಗೆ ಈ ರೀತಿಯ ತೊಂದರೆ ನೀಡುತ್ತಿದ್ರು ಅಧಿಕಾರಿಗಳು ಸುಮ್ಮನಿದ್ದಾರೆ ಎಂದರು. https://ainlivenews.com/great-job-opportunity-in-the-postal-department-for-10th-puc-passers-apply-today/ ಮಹಿಳಾ ಅಧಿಕಾರಿಗೆ ನೋವಿಗೆ ಸ್ಪಂಧಿಸುವ ಕೆಲಸ ಸರ್ಕಾರದಿಂದ ಆಗಬೇಕು, ಭದ್ರಾವತಿ ಘಟನೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ ಮತ್ತು ಅಮೆರಿಕಕ್ಕೆ ಅಧಿಕೃತ ವಿದೇಶ ಭೇಟಿ ನೀಡುತ್ತಿರುವ ಮುನ್ನ ಅವರ ವಿಮಾನದ ಮೇಲೆ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಮುಂಬೈ ಪೊಲೀಸರು ಬುಧವಾರ ತಿಳಿಸಿದ್ದಾರೆ. ಫೆಬ್ರವರಿ 11 ರಂದು ಪೊಲೀಸರಿಗೆ ಬೆದರಿಕೆ ಕರೆ ಬಂದಿದ್ದು, ನಂತರ ಅವರು ಇತರ ಸಂಸ್ಥೆಗಳಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದರು. ಫೆಬ್ರವರಿ 11 ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದ್ದು, ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂದು ಎಚ್ಚರಿಸಲಾಗಿದೆ. ಮಾಹಿತಿಯ ಗಂಭೀರ ಸ್ವರೂಪವನ್ನು ಪರಿಗಣಿಸಿ, ಪೊಲೀಸರು ಇತರ ಸಂಸ್ಥೆಗಳಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದ್ದರು ಎಂದು ಎಎನ್ಐ ವರದಿ ಮಾಡಿದೆ. https://ainlivenews.com/great-job-opportunity-in-the-postal-department-for-10th-puc-passers-apply-today/ ಪ್ರಧಾನಿ ಮೋದಿ ಅವರ ವಿಮಾನದ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಬಂದ ನಂತರ, ಭದ್ರತಾ ಪಡೆಗಳ ತಂಡಗಳು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪ್ರಾರಂಭಿಸಿದವು. ಕರೆ…
ಬೆಂಗಳೂರು: ಕರ್ನಾಟಕದಲ್ಲಿ 135 ಸ್ಥಾನ ಗೆದ್ದು ಭರ್ಜರಿ ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ಅಧ್ಯಕ್ಷ ಸ್ಥಾನದಲ್ಲಿ ಕೂರಲು ಕಾಂಗ್ರೆಸ್ನಲ್ಲೇ ಸದ್ದಿಲ್ಲದೆ ಪೈಪೋಟಿ ಶುರುವಾಗಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಸುಳಿವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೀಡಿದ್ದಾರೆ. ಹೌದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಓಡಿಶಾದಲ್ಲಿ ಅಧ್ಯಕ್ಷರ ಬದಲಾವಣೆ ಮಾಡಿ ಬಂದಿದ್ದಿನಿ. ಅಲ್ಲಿ ಹಿಂದುಳಿದ ವರ್ಗದವರು ಅಧ್ಯಕ್ಷರಾಗಿದ್ದಾರೆ. ಬಾಕಿ ಉಳಿದ ರಾಜ್ಯಗಳಲ್ಲೂ ಕೆಲವೇ ದಿನಗಳಲ್ಲಿ ಬದಲಾವಣೆ ಆಗುತ್ತವೆ. ಈ ಬಗ್ಗೆ ನಿರ್ಧಿಷ್ಟವಾಗಿ ನಾನು ಹೇಳುವುದಕ್ಕೆ ಆಗುವುದಿಲ್ಲ. ನಾವು ಒಂದೊಂದು ರಾಜ್ಯಗಳಲ್ಲಿ ಬದಲಾವಣೆ ಮಾಡುತ್ತಿದ್ದೇವೆ. ಇನ್ನೂ ಒಂದು ಎರಡು ದಿನದಲ್ಲಿ ಮತ್ತೆ ಒಂದೆರಡು ರಾಜ್ಯಗಳಲ್ಲಿ ಮಾಡುತ್ತೇವೆ ಎಂಟು ದಿನದಲ್ಲಿ ಎಲ್ಲಾ ಬದಲಾವಣೆ ಮುಗಿಯುತ್ತದೆ ಎಂದು ಖರ್ಗೆ ಹೇಳಿದರು. https://ainlivenews.com/great-job-opportunity-in-the-postal-department-for-10th-puc-passers-apply-today/ ಇನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಬಗ್ಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಭೇಟಿ ದೊಡ್ಡ ಮಾತಾ? ಎಂದು ಪ್ರಶ್ನೆ ಮಾಡಿದರು. ನಾನು…
ಗದಗ ಜಿಲ್ಲೆಯ ಮುಂಡರಗಿಯ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ 155 ನೇ ಜಾತ್ರಾ ಮಹೋತ್ಸವ ಹಿನ್ನೆಲೆ, ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರೀ ಅನ್ನದಾನೀಶ್ವರ ಮಹಾರಥೋತ್ಸವ ಸಕಲ ವಾದ್ಯ ವೈಭವಗಳೊಂದಿಗೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಮನಿಪ್ರ ನಾಡೋಜ.ಡಾ.ಅನ್ನದಾನೀಶ್ವರ ಮಹಾಸ್ವಾಮಿಜಿ ಸಾನಿಧ್ಯ ವಹಿಸಿದ್ದರು. ಹಾಗೂ ಶ್ರೀಮಠದ ಉತ್ತರಾಧಿಕಾರಿಗಳಾದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿ, ಲಿಂಗನಾಕನಹಳ್ಳಿ, https://ainlivenews.com/great-job-opportunity-in-the-postal-department-for-10th-puc-passers-apply-today/ ಕನಕಗಿರಿ, ಹೂವಿನಶಿಗ್ಲಿ, ಹೊಳಲು, ಕುಕನೂರ, ಸೇರಿದಂತೆ ನಾಡಿನ ಹಲವಾರು ಮಠಾಧೀಶರು ಪಾಲ್ಗೊಂಡಿದ್ದರು. ಶಾಸಕ ಡಾ.ಚಂದ್ರು ಲಮಾಣಿ ಸೇರಿದಂತೆ ಅನೇಕ ಗಣ್ಯರು ಈ ವೇಳೆ ಭಾಗವಹಿಸಿದ್ದರು. ಸಹಸ್ರಾರು ಭಕ್ತರು ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ತಮ್ಮ ಇಷ್ಟಾರ್ಥಗಳನ್ನ ಬೇಡಿಕೊಂಡರು.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಅಹಮದಾಬಾದ್ನಲ್ಲಿ ನಡೆಯುತ್ತಿದೆ. ಇದಕ್ಕೂ ಮುನ್ನ ನಡೆದಿದ್ದ 2 ಪಂದ್ಯಗಳಲ್ಲಿ ರೋಹಿತ್ ಸೈನ್ಯ ಜಯಭೇರಿ ಭಾರಿಸಿ ಒಂದು ಪಂದ್ಯಕ್ಕೂ ಮುಂಚಿತವಾಗಿಯೇ ಸರಣಿ ಕೈವಶ ಮಾಡಿಕೊಂಡಿದೆ. ಇದೀಗ ಮೂರನೇ ಪಂದ್ಯದಲ್ಲೂ ಭಾರತ ಗೆದ್ದು ಇಂಗ್ಲೆಂಡ್ ಅನ್ನು ವೈಟ್ವಾಶ್ ಮಾಡಲು ಯೋಜನೆ ರೂಪಿಸಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. https://ainlivenews.com/great-job-opportunity-in-the-postal-department-for-10th-puc-passers-apply-today/ ಟಾಸ್ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಹೊರಬಿದ್ದಿದ್ದು, ಇಂಗ್ಲೆಂಡ್ ತಂಡದಲ್ಲಿ 1 ಬದಲಾವಣೆ ಮಾಡಲಾಗಿದ್ದು, ಭಾರತ 3 ಬದಲಾವಣೆಗಳನ್ನು ಮಾಡಿದೆ. ಭಾರತ ತಂಡದಲ್ಲಿ 3 ಬದಲಾವಣೆ ಭಾರತ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ ರವೀಂದ್ರ ಜಡೇಜ ಬದಲಿಗೆ ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ ಬದಲಿಗೆ ವಾಷಿಂಗ್ಟನ್ ಸುಂದರ್ ಮತ್ತು ಶಮಿ ಬದಲಿಗೆ ಅರ್ಶ್ದೀಪ್ ಸಿಂಗ್ ಅವರಿಗೆ ಅವಕಾಶ ಸಿಕ್ಕಿದೆ. ಭಾರತ ತಂಡ ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್…
ಹುಬ್ಬಳ್ಳಿ: ಎಸ್ ಎಂ ಎಫ್ ಜಿ ಇಂಡಿಯಾ ಕ್ರೆಡಿಟ್ ಕರ್ನಾಟಕದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿ ಎಸ್ ಆರ್) ಯೋಜನೆಗಳ ಆಯೋಜನೆಯನ್ನು ಮುಂದುವರೆಸಿದ್ದು, ಆ ಮೂಲಕ ಕರ್ನಾಟಕದ ಸಾವಿರಾರು ಕುಟುಂಬಗಳಿಗೆ ಒಳಿತು ಮಾಡಲು ಉದ್ದೇಶಿಸಿದೆ. ಪ್ರಾಥಮಿಕ ಆರೋಗ್ಯ, ಕಣ್ಣಿನ ಆರೈಕೆ, ಕೌಶಲ್ಯ ಅಭಿವೃದ್ಧಿ, ಜಾನುವಾರು ಆರೈಕೆ ಮುಂತಾದ ಯೋಜನೆಗಳ ಮೂಲಕ ಜನ ಜೀವನದ ಮೇಲೆ ಧನಾತ್ಮಕ ಪರಿಣಾಮ ಬೀರುವ ಕೆಲಸ ಮಾಡಲಿದೆ ಎಂದು ಎಸ್ ಎಂ ಎಫ್ ಜಿ ಇಂಡಿಯಾ ಕ್ರೆಡಿಟ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಮಿನಾಥನ್ ಸುಬ್ರಮಣಿಯನ್ ಹೇಳಿದರು. ಈ ಕುರಿತು ಮಾಹಿತಿ ಕೊಟ್ಟ ಅವರುಕಳೆದ ಕೆಲವು ವರ್ಷಗಳಲ್ಲಿ ಕಂಪನಿಯು ಕರ್ನಾಟಕದಲ್ಲಿ ಹಲವಾರು ಪ್ರಮುಖ ಯೋಜನೆಗಳನ್ನು ಪರಿಚಯಿಸಿದೆ. , ಪ್ರಾಥಮಿಕ ಆರೋಗ್ಯ ಸೇವಾ ಯೋಜನೆಯಾದ ನಿರ್ಮಯ ಅಡಿಯಲ್ಲಿ, ಎಸ್ ಎಂ ಎಫ್ ಜಿ ಇಂಡಿಯಾ ಕ್ರೆಡಿಟ್ ಸಂಸ್ಥೆಯು ರಾಯಚೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ 2 ಮೊಬೈಲ್ ಹೆಲ್ತ್ ವ್ಯಾನ್ಗಳನ್ನು (ಎಂ ಎಚ್ ವಿ) ಒದಗಿಸಿದ್ದು, https://ainlivenews.com/great-job-opportunity-in-the-postal-department-for-10th-puc-passers-apply-today/ ಆ ಮೂಲಕ ಅಲ್ಲಿನ…
ಕೆಲವರಿಗೆ ಯಾವಾಗಲೂ ಸುಳ್ಳು ಹೇಳುವುದು ಒಂದು ರೀತಿಯ ಕಾಯಿಲೆ. ಏನೋ ಒಂದು ಸನ್ನಿವೇಶವನ್ನು ಹೇಳಿ ತಪ್ಪಿಸಿಕೊಳ್ಳಲು ಹೋಗಿ ಮತ್ತೆಮತ್ತೆ ಸುಳ್ಳು ಹೇಳಿ ಸಮಸ್ಯೆಗೆ ಸಿಕ್ಕಿಕೊಳ್ಳುತ್ತಾರೆ. ಹಾಗಿದ್ದರೆ ಸುಳ್ಳು ಹೇಳಲೇಬಾರದು ಎಂಬುದಲ್ಲ. ಕೆಲವು ಸಂದರ್ಭದಲ್ಲಿ ತಮಾಷೆಯಾಗಿಯೋ ಅಥವಾ ಒಂದು ಅನಾಹುತವನ್ನು ತಪ್ಪಿಸುವ ಸಂದರ್ಭದಲ್ಲಿ ಸುಳ್ಳು ಹೇಳಿದರೆ ಅದು ತಪ್ಪಿಲ್ಲ, ಆದ್ದರಿಂದಲೇ ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಅನ್ನುತ್ತಾರೆ. ಆದ್ರೆ ಕೆಲ ವ್ಯಕ್ತಿಗಳು ಸಹಾನುಭೂತಿ ಪಡೆಯಲು ಸುಳ್ಳು ಹೇಳುವುದನ್ನೇ ಅಭ್ಯಾಸ ಮಾಡಿಕೊಂಡಿರುತ್ತಾರೆ. ಒಬ್ಬ ವ್ಯಕ್ತಿಯು ಸತ್ಯವನ್ನು ಹೇಳುತ್ತಿದ್ದಾನೋ ಅಥವಾ ಸುಳ್ಳನ್ನು ಹೇಳುತ್ತಿದ್ದಾನೋ ಎಂದು ನಾವು ತಿಳಿದುಕೊಳ್ಳಬಹುದು. ಹೇಗೆ ಎನ್ನುವ ಮಾಹಿತಿ ಇಲ್ಲಿದೆ ನೋಡಿ.. ಮಾತನಾಡುವ ಧ್ವನಿಯಲ್ಲಿ ಏರಿಳಿತ : ಸಾಮಾನ್ಯವಾಗಿ ಸುಳ್ಳು ಹೇಳುವ ಜನರು ಜೋರಾಗಿ ಮಾತನಾಡುತ್ತಾರೆ ಇಲ್ಲವಾದರೆ ತುಂಬಾ ಮೃದುವಾಗಿ ಮಾತನಾಡುತ್ತಾರೆ. ಎದುರಿಗಿರುವ ಜನರೊಂದಿಗೆ ಮಾತನಾಡುವಾಗಲೆಲ್ಲಾ ಧ್ವನಿಯೂ ಸಹಜವಾಗಿ ಕೇಳಿಸುವುದಿಲ್ಲ. ಯಾರಿಗೂ ಏನನ್ನೂ ಹೇಳಲು ಬಯಸುವುದಿಲ್ಲ ಎಂಬಂತೆ ಯಾವಾಗಲೂ ನಿಮ್ಮೊಂದಿಗೆ ಮಾತನಾಡಬಹುದು. ಅಸಂಬದ್ಧ ಮಾತುಗಳು : ಈ ವ್ಯಕ್ತಿಗಳ ಬಾಯಲ್ಲಿ ಸತ್ಯದ ಬದಲು…
ತುಮಕೂರು: ವಸತಿ ನಿಲಯದಲ್ಲಿ ಉಪಹಾರ ಸೇವಿಸಿದ ಬಳಿಕ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಲಕ್ಕನಹಳ್ಳಿ ಗ್ರಾಮದ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. https://ainlivenews.com/great-job-opportunity-in-the-postal-department-for-10th-puc-passers-apply-today/ ಸುಮಾರು 15-20 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅಸ್ವಸ್ಥ ವಿದ್ಯಾರ್ಥಿಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.