Author: Author AIN

ಕನ್ನಡದ ಖ್ಯಾತ ನಟ ರಂಗಾಯಣ ರಘು ಅವರಿಗೆ ಶಾಖಾಹಾರಿ ಚಿತ್ರತಂಡ ಹೊಸ ಬಿರುದು ನೀಡಿ ಗೌರವಿಸಿದ್ದಾರೆ. ಸಿನಿಮಾದ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸುಕ್ಕ ಸೂರಿ ವಿಶೇಷ ಅಥಿಯಾಗಿ ಆಗಮಿಸಿ ರಂಗಾಯಣ ರಘು ಅವರಿಗೆ ಅಭಿನಯಾಸುರು ಎಂಬ ಬಿರುದು ನೀಡಿ ಗೌರವಿಸಿದರು. ಇದೇ ವೇಳೆ ಮಾತನಾಡಿದ ನಿರ್ದೇಶಕ ದುನಿಯಾ ಸೂರಿ ಮಾತನಾಡಿ, ನಾನು ಈ ರೀತಿ ಮೈಕ್ ಹಿಡಿದು ಮಾತನಾಡುತ್ತಿದ್ದೇನೆ. ನನ್ನ ನಿರ್ದೇಶಕ ಅಂತಾ ಕರೆಯುತ್ತಾರೆ ಎಂದರೆ. ಈ ಹಿಂದೆ ನಾವು ಯೋಗರಾಜ್ ಮಣಿ ಅಂತಾ ಸಿನಿಮಾ ಮಾಡಬೇಕಾದರೆ ರಘು ಸರ್ ಸಿಕ್ತಾರೆ. ನಮಗೆ ಅಲ್ಲಿಂದ ದೊಡ್ಮನೆ ಹುಡುಗ ಸಿನಿಮಾದವರೆಗೂ ಜೊತೆಯಲಿ ಇದ್ದರು. ಈ ನಡುವೆ ಅಣ್ಣ ಮಾಡುವ ಪಾತ್ರ ಇಲ್ಲ ಎಂದು ಬಿಟ್ಟುಕೊಡುತ್ತೇವೆ. ನಾನು ಒಂದು ವಿಷಯ ತೆಗೆದುಕೊಂಡು ಹೋದರೆ ಅದಕ್ಕೊಂದು ಹಿನ್ನೆಲೆ ಹೇಳಿ ಗಟ್ಟಿ ಮಾಡುತ್ತಾರೆ. ಯೋಗರಾಜ್, ಸರ್ ನಮಗೆ ಗುರು. ಅನುಭವ ಹೇಳ್ತಾರೆ, ಹೆದರಬೇಡ ಅಂತಾರೇ. ನಾನು ಆಕ್ಷನ್ ಕಟ್ ಹೇಳಬಹುದು. ನಾನು…

Read More

ಟಾಲಿವುಡ್ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ ಜೋಡಿಗಳಲ್ಲಿ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಕೂಡ ಒಂದು. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಮೆಚ್ಚುಗೆ ಗಳಿಸಿದ್ದ ಜೋಡಿ ಬಳಿಕ ರಿಯಲ್ ಲೈಫ್ ನಲ್ಲೂ ಒಂದಾಗ್ತಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಇದೀಗ ಮತ್ತೆ ಸಿನಿಮಾಗಾಗಿ ಒಂದಾಗುವ ಮೂಲಕ ಅನುಷ್ಕಾ ಹಾಗೂ ಪ್ರಭಸ್ ಅಭಿಮಾನಿಗಳಿಗೆ ಜೋಡಿ ಸಿಹಿ ಸುದ್ದಿ ನೀಡಿದೆ. 6 ವರ್ಷಗಳ ಬಳಿಕ ಡಾರ್ಲಿಂಗ್ ಪ್ರಭಾಸ್ ಮತ್ತು ಸ್ವೀಟಿ ಅನುಷ್ಕಾ ತೆರೆ ಮೇಲೆ ಮತ್ತೆ ಮೋಡಿ ಮಾಡಲಿದ್ದಾರೆ. ಸದ್ದಿಲ್ಲದೇ ಪ್ರಭಾಸ್ ಸಿನಿಮಾದಲ್ಲಿ ಅನುಷ್ಕಾ ನಟಿಸುತ್ತಿದ್ದು ಚಿತ್ರಕ್ಕೆ ಇನ್ನೂ ಟೈಟಲ್ ಫಿಕ್ಸ್ ಆಗಿಲ್ಲ. ಒಡಿಶಾದಲ್ಲಿ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ನಟಿ ರಮ್ಯಾಕೃಷ್ಣ ಕೂಡ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಪ್ರಭಾಸ್ ಹೋಂ ಬ್ಯಾನರ್ ಯುವಿ ಕ್ರಿಯೇಷನ್ಸ್ ಸಂಸ್ಥೆ ನಿರ್ಮಾಣ ಮಾಡ್ತಿದೆ ಎನ್ನಲಾಗಿದೆ. ಶೀಘ್ರದಲ್ಲೇ ಈ ಸಿನಿಮಾ ಅಧಿಕೃತವಾಗಿ ಘೋಷಣೆ ಆಗಲಿದೆ. ಇನ್ನೂ 10 ದಿನಗಳ ಕಾಲ ಅನುಷ್ಕಾ ಶೆಟ್ಟಿ ಹಾಗೂ ರಮ್ಯಾಕೃಷ್ಣ ಭಾಗದ ಚಿತ್ರೀಕರಣ ಒಡಿಶಾದಲ್ಲಿ…

Read More

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನದ ಕಾಟೇರ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಸಿನಿಮಾ ರಿಲೀಸ್ ಆಗಿ ತಿಂಗಳು ಕಳೆದಿದ್ರು ಇಂದಿಗೂ ಕಾಟೇರನ ಕ್ರೇಜ್ ಹಾಗೆಯೇ ಇದೆ. ಇದೇ ಖುಷಿಯಲ್ಲಿ ಚಿತ್ರತಂಡ ಟೆಂಪಲ್ ರನ್ ಮಾಡುತ್ತಿದೆ. ಇತ್ತೀಚೆಗೆ ನಿರ್ದೇಶನ ತರುಣ್ ಸುಧೀರ್ ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು. ಜೊತೆಗೆ ಧರ್ಮಸ್ಥಳಕ್ಕೂ ತೆರಳಿ ಮಂಜುನಾಥನ ಆಶೀರ್ವಾದ ಬೇಡಿದ್ದರು. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಿರುಪತಿಗೆ ತೆರಳಿದ್ದಾರೆ. ಮುಂದಿನ ವಾರದ ದರ್ಶನ್ ಅವರ ಹುಟ್ಟು ಹಬ್ಬ. ಅದಕ್ಕೂ ಮುನ್ನ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಹುಟ್ಟು ಹಬ್ಬ ಮತ್ತು ಕಾಟೇರ ಸಿನಿಮಾದ ಸಕ್ಸಸ್ ಪ್ರಯುಕ್ತವಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಎಂದಿನಂತೆ ಈ ಭಾರಿಯೂ ದರ್ಶನ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದಾರೆ. ತಮ್ಮ ಹುಟ್ಟುಹಬ್ಬಕ್ಕೆ ಯಾರು ಕೇಕ್, ಹಾರು, ತುರಾಯಿ ತರಬೇಡಿ. ಬದಲಾಗಿ ದವಸ ಧಾನ್ಯಗಳನ್ನು ನೀಡುವಂತೆ ಕೇಳಿದ್ದಾರೆ. ಅನಾಥಾಶ್ರಮಗಳಿಗೆ ಅಕ್ಕಿ, ಬೆಳೆ,…

Read More

ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಇಂದು ರಾಮ ಜನ್ಮ ಭೂಮಿ ಅಯೋಧ್ಯೆಗೆ ಭೇಟಿ ನೀಡಿ ಬಾಲರಾಮನ ದೇವರ ದರ್ಶನ ಪಡೆಡಿದ್ದಾರೆ. ಸದ್ಯ ಅಮಿತಾಬ್ ಬಚ್ಚನ್ ಅಯೋಧ್ಯೆಗೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಯೋಧ್ಯೆಯಲ್ಲಿ ಬಾಲರಾಮ ನೆಲೆ ನಿಂತ ಬಳಿಕ ನಿತ್ಯ ಸಾವಿರಾರು ಭಕ್ತರು ರಾಮನ ದರ್ಶನ ಪಡೆಯಲು ಆಗಮಿಸುತ್ತಿದ್ದಾರೆ. ಇದೀಗ ಅಮಿತಾಭ್ ಬಚ್ಚನ್, ಬಾಲರಾಮ ದೇವರ ದರ್ಶನ ಪಡೆದಿದ್ದಾರೆ. ಸಿಐಎಸ್‌ಎಫ್ ಬಿಗಿ ಭದ್ರತೆಯಲ್ಲಿ ಆಗಮಿಸಿದ್ದ ಬಿಗ್ ಬಿ ಗರ್ಭಗುಡಿ ಮುಂಭಾಗದಲ್ಲಿ ನಿಂತು ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಬಳಿಕ ರಾಮ ಮಂದಿರದಲ್ಲಿ ಧ್ಯಾನ ಮಾಡಿ ತೆರಳಿದ್ದಾರೆ. ಬಿಗ್ ಬಿ ಅವರು ಅಯೋಧ್ಯೆಯಲ್ಲಿ 14.50 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಖರೀದಿಸಿದ್ದಾರೆ.

Read More

ಸಿಂಗಪುರ: ಸಿಂಗಪುರದಲ್ಲಿ ಚೀನಾದ ಜನತೆ ಹೊಸವರ್ಷ ‘ಡ್ರ್ಯಾಗನ್‌’ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಈ ವರ್ಷದಲ್ಲಿ ಮಕ್ಕಳು ಹುಟ್ಟಿದರೆ ಮಂಗಳಕರ ಎನ್ನುವ ನಂಬಿಕೆ ಅಲ್ಲಿನ ಜನಗಳಲ್ಲಿ ಇದೆ. ಈ ಕಾರಣಕ್ಕೆ ಪ್ರಧಾನ ಮಂತ್ರಿ ಲೀ ಸಿಯೆನ್‌ ಲೂಂಗ್‌ ಈ ವರ್ಷ ಮಕ್ಕಳನ್ನು ಪಡೆಯುವಂತೆ ಸಿಂಗಪುರದ ದಂಪತಿಗಳಿಗೆ ಸಲಹೆ ನೀಡಿದ್ದಾರೆ. ಚೀನಾ ಹೊಸ ವರ್ಷದ ವಾರ್ಷಿಕ ಸಂದೇಶ ನೀಡುವ ವೇಳೆ ಮಾತನಾಡಿದ ಲೀ, ‘ಡ್ರ್ಯಾಗನ್‌ ವರ್ಷ ಎನ್ನುವುದು ಶಕ್ತಿ ಮತ್ತು ಅದೃಷ್ಟದ ಸಂಕೇತ. ಹಾಗಾಗಿ ಯುವ ಜೋಡಿಗಳು ನಿಮ್ಮ ಕುಟುಂಬಕ್ಕೆ ‘ಪುಟ್ಟ ಡ್ರ್ಯಾಗನ್’ ಅನ್ನು ಸೇರಿಸಿಕೊಳ್ಳಲು ಇದು ಉತ್ತಮ ಸಮಯವಾಗಿದೆ. ಕುಟುಂಬಕ್ಕೆ ನಮ್ಮ ಸರ್ಕಾರ ಬೆಂಬಲವಿದೆ’ ಎಂದಿದ್ದಾರೆ. ನಾವು ‘ಸಿಂಗಪುರ್ ಮೇಡ್ ಫಾರ್ ಫ್ಯಾಮಿಲಿಸ್’ ಅನ್ನು ನಿರ್ಮಿಸುತ್ತೇವೆ. ಮುಂದೆಯೂ ನಿಮ್ಮ ಮದುವೆ ಮತ್ತು ಪೋಷಕತ್ವದ ಆಕಾಂಕ್ಷೆಗಳನ್ನು ಬೆಂಬಲಿಸುತ್ತೇವೆ ಎಂದು ಲೀ ಹೇಳಿದ್ದಾರೆ. ಸಾಕಷ್ಟು ದಂಪತಿ ತಮ್ಮದೇ ಆದ ಕಾರಣಗಳಿಗಾಗಿ ಮಕ್ಕಳನ್ನು ಯಾವಾಗ ಪಡೆಯಬೇಕು ಎಂದು ನಿರ್ಧರಿಸುತ್ತಾರೆ. ಆದರೆ ಹೆಚ್ಚಿನವರು ತಂದೆಯಾಗುವ ಅನುಭವವನ್ನು ಬೇಗ ಪಡೆಯಲಿ ಎಂದು ಆಶಿಸುತ್ತೇನೆ…

Read More

ಒಂದೇ ಒಂದು ಸಿನಿಮಾದ ಮೂಲಕ ರಾತ್ರೋ ರಾತ್ರಿ ಸಖತ್ ಫೇಮಸ್ ಆದ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ದೂಳೆಬ್ಬಿಸ್ತಿದ್ದಾರೆ. ಆಗಾಗ ಸಖತ್ ಬೋಲ್ಡ್ ಆಗಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ನಟಿ ಅಭಿಮಾನಿಗಳ ನಿದ್ದೆ ಕದ್ದಿದ್ದಾರೆ. ಇದೀಗ ಪ್ರಿಯಾ ನೀರಿಗಿಳಿದು ಸಖತ್ತಾಗೆ ಫೋಸ್ ನೀಡಿದ್ದಾರೆ. ನಟಿಯ ಬ್ಯೂಟಿಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಕೇರಳ ಶೈಲಿಯ ಸೀರೆ ಧರಿಸಿ ನೀರಿಗಿಳಿದ ಪ್ರಿಯಾ ಕ್ಯಾಮೆರಾಗೆ ಸಖತ್ತಾಗೆ ಫೋಸ್ ನೀಡಿದ್ದಾರೆ. ಸೀರೆಯುಟ್ಟು ನದಿಗೆ ಇಳಿದಿರುವ ಪ್ರಿಯಾ ಮಾದಕವಾಗಿ ಫೋಸ್ ನೀಡಿದ್ದಾರೆ. ನಟಿಯ ಫೋಟೋಗಳು ಸಾಮಾಜಿಕ ಜಾಲಾ ತಾಣದಲ್ಲಿ ವೈರಲ್ ಆಗಿದೆ. ಪ್ರಿಯಾ ಪ್ರಕಾಶ್ ವಾರಿಯರ್ ಮಲಯಾಳಂ ಚಿತ್ರರಂಗದ ನಟಿ. ಮಲಯಾಳಂನ `ಒರು ಅದಾರ್ ಲವ್’ ಚಿತ್ರದಿಂದ ಸಿನಿಜೀವನ ಆರಂಭಿಸಿದ ಈಕೆ ಒಂದು ಕಣ್ಸನ್ನೆ ದೃಶ್ಯದಿಂದ ಸಖತ್ ಪ್ರಸಿದ್ಧಿಯಾದರು. ಕಣ್ಸನೆ ಮೂಲಕ ಫೇಮಸ್ ಆಗಿರುವ ನಟಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಇದ್ದಾರೆ. 7.5 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಪ್ರಿಯಾ ಇಲ್ಲಿಯವರಗೆ 524 ಪೋಸ್ಟ್…

Read More

ತಮಿಳು ಚಿತ್ರರಂಗದ ಸ್ಟಾರ್ , ರಜನಿಕಾಂತ್ ಮಾಜಿ ಅಳಿಯ ಧನುಷ್ ಪತ್ನಿ ಐಶ್ವರ್ಯ ರಿಂದ ದೂರವಾಗಿ ಕೆಲ ವರ್ಷಗಳೆ ಕಳೆದಿದೆ. ಇಬ್ಬರು ದೂರ ದೂರವಾಗಿ ಜೀವನ ನಡೆಸುತ್ತಿದ್ದಾರೆ. ಈ ಮಧ್ಯೆ ಐಶ್ವರ್ಯ ರಜನಿಕಾಂತ್ ನಿರ್ದೇಶದ ರಜನಿಕಾಂತ್ ನಟನೆಯ ಲಾಲ್ ಸಿನಿಮಾ ಇಂದು ರಿಲೀಸ್ ಆಗಿದ್ದು ಧನುಷ್ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಐಶ್ವರ್ಯಾ ರಜನೀಕಾಂತ್ ನಿರ್ದೇಶನದ ‘ಲಾಲ್ ಸಲಾಂ’ ಸಿನಿಮಾ ಇಂದು ಬಿಡುಗಡೆ ಆಗಿದೆ. ಚಿತ್ರದಲ್ಲಿ ರಜನಿಕಾಂತ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಸುಮಾರು 40 ನಿಮಿಷಗಳ ಕಾಲ ರಜನಿಕಾಂತ್ ತೆರೆಮೇಲೆ ಕಾಣಿಸಿಕೊಂಡಿದ್ದು ಚಿತ್ರಕ್ಕೆ ಬರೋಬ್ಬರಿ ಸಂಭಾವನೆಯನ್ನೇ ಪಡೆದುಕೊಂಡಿದ್ದಾರೆ. ಮಾಜಿ ಮಾವನ ಚಿತ್ರ ಎನ್ನುವ ಕಾರಣಕ್ಕೆ ಈ ಚಿತ್ರಕ್ಕೆ ಧನುಷ್ ಶುಭಾಶಯ ತಿಳಿಸಿದ್ದಾರೆ. ರಜನಿಕಾಂತ್ ಅವರನ್ನು ಕಂಡರೆ ಧನುಷ್​ಗೆ ಅಪಾರ ಗೌರವ ಇದೆ. ಐಶ್ವರ್ಯಾ ಜೊತೆ ವಿಚ್ಛೇದನ ಪಡೆದರೂ ಅವರು ರಜನಿಕಾಂತ್ ಜೊತೆ ಇರುವ ಬಾಂಧವ್ಯವನ್ನು ಕಡಿದುಕೊಂಡಿಲ್ಲ. ಈ ಕಾರಣದಿಂದ ಅವರು ರಜನಿಕಾಂತ್ ಚಿತ್ರಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಆದರೆ, ಎಲ್ಲಿಯೂ ಅವರು ಪತ್ನಿ…

Read More

ಉತ್ತಮ ಗುಣಮಟ್ಟದ ಲ್ಯಾಪ್ ಟಾಪ್ ಖರೀದಿಸಬೇಕು ಅನ್ನೋದು ಪ್ರತಿಯೊಬ್ಬರ ಕನಸಾಗಿರುತ್ತೆ. ಆದರೆ ಅದೆಷ್ಟೋ ಜನರಿಗೆ  ಅದು ಸಾಧ್ಯವಾಗಿರೋದಿಲ್ಲ. ಆದರೆ ಇದೀಗ ಜನಪ್ರಿಯ ಲ್ಯಾಪ್‌ಟಾಪ್‌ ತಯಾರಕ ಕಂಪೆನಿಗಳಲ್ಲಿ ಒಂದಾದ ಆಸುಸ್‌ ಭಾರತದಲ್ಲಿ ಹೊಸ ಕ್ರೋಮ್‌ಬುಕ್‌ ಲ್ಯಾಪ್‌ಟಾಪ್‌ ಬಿಡುಗಡೆ ಮಾಡಿದೆ ಇದು ನಿಮ್ಮ ಬಜೆಟ್ ಫ್ರೆಂಡ್ಲಿ ಆಗಿರಲಿದೆ. ಆಸುಸ್ ಬಿಡುಗಡೆ ಮಾಡಿರುವ ಈ ಲ್ಯಾಪ್ ಟಾಪ್ ಗೆ ಸುಸ್‌ ಕ್ರೋಮ್‌ಬುಕ್‌ CM14 ಎಂದು ಹೆಸರಿಸಲಾಗಿದೆ. ಇನ್ನು ಈ ಲ್ಯಾಪ್‌ಟಾಪ್ MediaTek Kompanio ಪ್ರೊಸೆಸರ್‌ ಮೂಲಕ ಕಾರ್ಯನಿರ್ವಹಿಸಲಿದೆ. ಸುಸ್‌ ಕ್ರೋಮ್‌ಬುಕ್‌ CM14 ಲ್ಯಾಪ್‌ಟಾಪ್‌ ಮಿಲಿಟರಿ ದರ್ಜೆಯ ರಕ್ಷಣೆಯೊಂದಿಗೆ ಬರುತ್ತದೆ ಎಂದು ಹೇಳಲಾಗಿದೆ. ಇದು ಮೆಟಾಲಿಕ್ ಚಾಸಿಸ್ 180-ಡಿಗ್ರಿ ‘ಲೇ-ಫ್ಲಾಟ್’ ಹಿಂಗ್ಡ್ ಡಿಸ್‌ಪ್ಲೇಯನ್ನು ಹೊಂದಿದೆ. ಬಳಕೆದಾರರಿಗೆ ಸ್ನೇಹಿತರು ಮತ್ತು ಗೆಳೆಯರೊಂದಿಗೆ ಸುಲಭವಾದ ವಿಷಯ ಮತ್ತು ಕಲ್ಪನೆಯನ್ನು ಹಂಚಿಕೊಳ್ಳುವ ಅವಕಾಶಗಳನ್ನು ನೀಡುತ್ತದೆ. ಆಸುಸ್‌ ಕ್ರೋಮ್‌ಬುಕ್‌ CM14 ಲ್ಯಾಪ್‌ಟಾಪ್‌ 14 ಇಂಚಿನ ಫುಲ್‌ ಹೆಚ್‌ಡಿ ಆಂಟಿ-ಗ್ಲೇರ್ ನಾನ್-ಟಚ್ LCD ಸ್ಕ್ರೀನ್ ಹೊಂದಿದೆ. ಈ ಡಿಸ್‌ಪ್ಲೇಯು 1,920 x 1,080 ಪಿಕ್ಸೆಲ್‌…

Read More

ನಟನೆಯ ಜೊತೆಗೆ ನಿರ್ದೇಶಕನಾಗಿಯೂ ಗುರುತಿಸಿಕೊಂಡಿರುವ ಯುವ ನಟ ಕಂ ನಿರ್ದೇಶಕ ಅಭೀಷೇಕ್ ಶೆಟ್ಟಿ ಇದೀಗ ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದಾರೆ. ಅಭೀಷೇಕ್  ನಮ್ ಗಣಿ ಬಿಕಾಂ ಪಾಸ್, ಗಜಾನನ & ಗ್ಯಾಂಗ್ ಚಿತ್ರದಲ್ಲಿ ನಿರ್ದೇಶನದ ಜೊತೆಗೆ ನಟನಾಗಿಯೂ ಕಾಣಿಸಿಕೊಂಡಿದ್ದಾರೆ. ಅಭಿಷೇಕ್ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ಇತ್ತೀಚೆಗಷ್ಟೇ ಕುಂದಾಪುರದಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಸಾಕ್ಷಾ ಶೆಟ್ಟಿ ಎಂಬುವವರ  ಜೊತೆ ಅಭಿಷೇಕ್ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ. ಸಾಕ್ಷಾ ಶೆಟ್ಟಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಫೈನಾನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್ 8ರಂದು ಕುಂದಾಪುರದಲ್ಲಿ ಅಭಿಷೇಕ್ ಹಾಗೂ ಸಾಕ್ಷಾ ಹಸೆಮಣೆ ಏರಲಿದ್ದಾರೆ. ಹೊಸ ಬಾಳಿಗೆ ಕಾಲಿಡಲು ಸಜ್ಜಾಗಿರುವ ನವ ಜೋಡಿಗೆ ಚಿತ್ರರಂಗದವರು ಹಾಗೂ ಸ್ನೇಹಿತರು ಶುಭ ಹಾರೈಸಿದ್ದಾರೆ.

Read More

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಿನ್ನೆ ಅಂದರೆ ಗುರುವಾರ ಸಾರ್ವತ್ರಿಕ ಚುನಾವಣೆ ನಡೆದಿದೆ. ಈ ವೇಳೆ ಭಯೋತ್ಪಾದಕರು ದಾಳಿ ನಡೆಸಿದ್ದು ದಾಳಿಯಲ್ಲಿ 10 ಭದ್ರತಾ ಸಿಬ್ಬಂದಿ ಸೇರಿದಂತೆ ಕನಿಷ್ಠ 12 ಜನರು ನಿಧನರಾಗಿದ್ದಾರೆ. ಆದರೆ ಮತದಾನಕ್ಕೆ ಅಡ್ಡಿಪಡಿಸುವ ಭಯೋತ್ಪಾದಕರ 51 ದಾಳಿಗಳನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಈ ದಾಳಿಗಳಲ್ಲಿ ಹೆಚ್ಚಿನವು ಖೈಬರ್-ಪಖ್ತುಂಖ್ವಾ ಮತ್ತು ಬಲೂಚಿಸ್ತಾನ್ ಪ್ರಾಂತ್ಯಗಳಲ್ಲಿ ನಡೆದಿವೆ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರೂ ಹತರಾಗಿದ್ದಾರೆ ಎಂದು ಸೇನೆ ಹೇಳಿಕೆ ಬಿಡುಗಡೆ ಮಾಡಿದೆ. ದಾಳಿಯಲ್ಲಿ ಭದ್ರತಾ ಪಡೆಗಳು ಮತ್ತು ಕಾನೂನು ಜಾರಿ ಸಂಸ್ಥೆಗಳ 10 ಸಿಬ್ಬಂದಿ ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಮತ್ತು 39 ಮಂದಿ ಗಾಯಗೊಂಡಿದ್ದಾರೆ ಎಂದು ಸೇನೆ ಮಾಹಿತಿ ಹಂಚಿಕೊಂಡಿದೆ.

Read More