ಕಳೆದ ಸಾಕಷ್ಟು ಸಮಯದಿಂದ ರಷ್ಯಾದಲ್ಲಿ ಯುದ್ಧ ನಡೆಯುತ್ತಿದೆ. ಈ ಯುದ್ಧದ ಮಧ್ಯೆಯೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಉಕ್ರೇನ್ ಸೇನಾ ಮುಖ್ಯಸ್ಥ ವ್ಯಾಲೆರಿ ಜಲುಜ್ನಿ ಅವರನ್ನು ತೆಗೆದುಹಾಕಿದ್ದಾರೆ. ಇದೀಗ ವ್ಯಾಲೆರಿ ಸ್ಥಾನಕ್ಕೆ ಗ್ರೌಂಡ್ ಫೋರ್ಸ್ ಕಮಾಂಡರ್ ಒಲೆಕ್ಸಾಂಡರ್ ಸಿರ್ಸ್ಕಿಯನ್ನು ನೇಮಿಸಿದ್ದಾರೆ. ಸುಮಾರು ಎರಡು ವರ್ಷಗಳ ಯುದ್ಧದ ನಂತರ ಉಕ್ರೇನ್ನ ಸೇನಾ ನಾಯಕತ್ವದಲ್ಲಿ ಇದು ಪ್ರಮುಖ ಬದಲಾವಣೆಯಾಗಿದೆ. ಇಂದಿನಿಂದ ಹೊಸ ನಿರ್ವಹಣಾ ತಂಡವು ಉಕ್ರೇನ್ ಸಶಸ್ತ್ರ ಪಡೆಗಳ ನಾಯಕತ್ವವನ್ನು ವಹಿಸಿಕೊಳ್ಳಲಿದೆ. ನಾನು ಕರ್ನಲ್-ಜನರಲ್ ಸಿರ್ಸ್ಕಿಯನ್ನು ಉಕ್ರೇನ್ ಸಶಸ್ತ್ರ ಪಡೆಗಳ ಕಮಾಂಡರ್-ಇನ್-ಚೀಫ್ ಆಗಿ ನೇಮಿಸಿದ್ದೇನೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ. ಉಕ್ರೇನ್ ಸಶಸ್ತ್ರ ಪಡೆಗಳಿಗೆ ಯಾವ ರೀತಿಯ ನವೀಕರಣದ ಅಗತ್ಯವಿದೆ ಎಂದು ನಾವು ಚರ್ಚಿಸಿದ್ದೇವೆ. ಉಕ್ರೇನ್ ಸಶಸ್ತ್ರ ಪಡೆಗಳ ಹೊಸ ನಾಯಕತ್ವದಲ್ಲಿ ಯಾರು ಇರಬಹುದೆಂದು ನಾವು ಚರ್ಚಿಸಿದ್ದೇವು. ಈಗ ನವೀಕರಣದ ಸಮಯ ಬಂದಿದೆ ಎಂದಿದ್ದದಾರೆ.
Author: Author AIN
ಪುಷ್ಪ ಸಿನಿಮಾದ ಬಳಿಕ ನಟಿ ರಶ್ಮಿಕಾ ಮಂದಣ್ಣ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಕೊಡಗಿನ ನಟಿ ಇದೀಗ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಸದ್ಯ ರಶ್ಮಿಕಾ ಹಾಗೂ ರಣಬೀರ್ ಕಪೂರ್ ನಟನೆಯ ಅನಿಮಲ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಇದೇ ಕಾರಣಕ್ಕೆ ರಶ್ಮಿಕಾ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಆಕೆ ಕೋಟಿ ಕೋಟಿ ಕೇಳುತ್ತಿದ್ದರು ನಿರ್ಮಾಪಕರು ಮಾತ್ರ ಆಕೆಯ ಹಿಂದೆಯೇ ಬಿದ್ದಿದ್ದಾರೆ. ಸದ್ಯ ರಶ್ಮಿಕಾ ಡಾರ್ಲಿಂಗ್ ಪ್ರಭಾಸ್ ಗೆ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ‘ಅನಿಮಲ್’ ಸಿನಿಮಾದಿಂದ ಸಂದೀಪ್ ಹಾಗೂ ರಶ್ಮಿಕಾ ಒಂದಾಗಿದ್ದಾರೆ. ಹೀಗಾಗಿಯೇ ಸಂದೀಪ್ ಹೊಸ ಚಿತ್ರಕ್ಕೆ ಕನ್ನಡದ ನಟಿ ರಶ್ಮಿಕಾ ನಾಯಕಿ ಎಂದೇ ಹೇಳಲಾಗುತ್ತಿದೆ. ರಶ್ಮಿಕಾ ನಟನೆಯ ಫಿದಾ ಆಗಿರುವ ಸಂದೀಪ್ ರೆಡ್ಡಿ ವಂಗಾ ಮತ್ತೊಮ್ಮೆ ಆಕೆಯ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸೂಪರ್ ಸ್ಟಾರ್ ನಟರಿಗೆ ಜೋಡಿಯಾಗುತ್ತಿರುವ ರಶ್ಮಿಕಾ ಇದೇ ಮೊದಲ ಭಾರಿಗೆ…
ಬಿಗ್ ಬಾಸ್ 10ರ ರನರ್ ಅಪ್ ಡ್ರೋಣ್ ಪ್ರತಾಪ್ ಮತ್ತೆ ಸಂಕಷ್ಟುಕ್ಕೆ ಸಿಲುಕಿಕೊಂಡಿದ್ದಾರೆ. ದಿನದಿಂದ ದಿನಕ್ಕೆ ಪ್ರತಾಪ್ ವಿರುದ್ಧ ದಾಖಲಾಗುತ್ತಿರುವ ದೂರುಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಡಿಜಿಸಿಎ ಹೆಸರಲ್ಲಿ ಪ್ರತಾಪ್ ಮೋಸ ಮಾಡಿ ಡ್ರೋಣ್ ಮಾರಾಟ ಮಾಡ್ತಾ ಇದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಡ್ರೋಣ್ ತಯಾರಿ ಮಾಡಲಿಕ್ಕಾಗಲಿ ಅಥವಾ ಡ್ರೋಣ್ ಮಾರಾಟ ಮಾಡೋದಕ್ಕೆ ಆಗಲಿ ಡಿಜಿಸಿಎ ಅನುಮತಿ ಪರವಾನಿಗೆ ಪಡೆಯಬೇಕು. ಆದರೆ, ಪ್ರತಾಪ್ ಆ ಪರವಾನಿಗೆ ಪಡೆದಿಲ್ಲ ಎಂದು ಪರಮೇಶ್ ಎಂಬುವವರು ದೂರು ನೀಡಿದ್ದರು. ಈಗ ದೂರಿನ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಪೊಲೀಸರು ದೂರಿನ ಮಾಹಿತಿಯನ್ನು ಡಿಜಿಸಿಎ ಗೆ ಕಳುಹಿಸಿದ್ದಾರೆ. ಈಗಾಗಲೇ ಡ್ರೋನ್ ಪ್ರತಾಪ್ ಮೇಲೆ ಮೂರು ದೂರುಗಳು ದಾಖಲಾಗಿದೆ. ಆದರೆ ಯಾವುದೇ ಎಫ್.ಐ.ಆರ್ ದಾಖಲಾಗಿಲ್ಲ ಎಂದು ಸುದ್ದಿಕೇಳಿ ಬಂದಿದೆ.
ಒಡಿಶಾ ನಟ ಹಾಗೂ ಸಂಸದ ಅನುಭವ್ ಮೊಹಂತಿ ಪತ್ನಿ ವರ್ಷಾ ಪ್ರಿಯಾದರ್ಶಿನಿ ಅವರಿಂದ ದೂರವಾಗಿದ್ದಾರೆ. ಈ ಮೂಲಕ ತಮ್ಮ 10 ವರ್ಷಗಳ ಸಾಂಸಾರಿಕ ಜೀವನವನ್ನು ಕೊನೆಗೊಳಿಸಿದ್ದಾರೆ. ಸದ್ಯ ಜೋಡಿಗೆ ಡಿವೋರ್ಸ್ ಸಿಕ್ಕಿದ್ದು ಈ ಬಗ್ಗೆ ಅನುಭವ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನನಗಾಗಿ ಮತ್ತು ನನ್ನ ಕುಟುಂಬದ ಶಾಂತಿ, ನೆಮ್ಮದಿಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು. 10 ವರ್ಷ ಪೂರ್ಣಗೊಳ್ಳುವ ಒಂದು ದಿನ ಮುಂಚಿತವಾಗಿ ನಿಷ್ಪ್ರಯೋಜಕ, ಅರ್ಥಹೀನ, ಹೃದಯಹೀನ, ನೋವಿನ ಮತ್ತು ಸುಳ್ಳಿನಿಂದ ಕೂಡಿದ ಈ ದಾಂಪತ್ಯ ಜೀವನಕ್ಕೆ ಅಂತ್ಯ ಸಿಕ್ಕಿದೆ. ವಿಚ್ಛೇದನದ ತೀರ್ಪು ಸಿಕ್ಕಿತು. ನಾನು ಅವಳ ಸಂತೋಷಕ್ಕಾಗಿ ಪ್ರಾರ್ಥಿಸುತ್ತೇನೆ. ಇದರಲ್ಲಿ ಯಾವುದೇ ಅಪರಾಧವಿಲ್ಲ. ಹ್ಯಾಪಿ ರೋಸ್ ಡೇ ಎಂದು ಅನುಭವ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ರಾಜಕೀಯ ಜೀವನ ಆರಂಭಕ್ಕೂ ಮುನ್ನು ಸಿನಿಮಾರಂಗದಲ್ಲಿ ಅನುಭವ್ ಸಾಕಷ್ಟು ಹೆಸರು ಮಾಡಿದ್ದರು. 2013ರಲ್ಲಿ ರಾಜಕೀಯಕ್ಕೆ ಎಂಟ್ರಿಕೊಟ್ಟ ಮೊಹಂತಿ 2014ರಲ್ಲಿ ರಾಜ್ಯಸಭಾ ಸಂಸದರಾದರು. 2019ರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರಪಾರ ಲೋಕಸಭಾ ಕ್ಷೇತ್ರದಿಂದ ಬೈಜಯಂತ್ ಪಾಂಡಾ ವಿರುದ್ಧ…
ವಾಷಿಂಗ್ಟನ್: ಭಾರತವು ಅಮೆರಿಕದ ಜೊತೆ ಪಾಲುದಾರರಾಗಲು ಬಯಸಿದೆ. ಆದರೆ ಸದ್ಯಕ್ಕೆ ಅವರು ಅಮೆರಿಕನ್ನರು ದೇಶವನ್ನು ಮುನ್ನಡೆಸುತ್ತಾರೆ ಎಂಬುದನ್ನು ನಂಬುವುದಿಲ್ಲ ಎಂದು ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹ್ಯಾಲೆ ಹೇಳಿದ್ದಾರೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ನವದೆಹಲಿಯು ಚುರುಕಾಗಿ ವರ್ತಿಸುತ್ತಿದೆ ಮತ್ತು ರಷ್ಯಾದೊಂದಿಗೆ ನಿಕಟವಾಗಿದೆ ಎಂದು ಭಾರತೀಯ-ಅಮೆರಿಕನ್ ಮೂಲದ ಹ್ಯಾಲೆ ಹೇಳಿದ್ದಾರೆ. ಸಂದರ್ಶನದಲ್ಲಿ ಮಾತನಾಡಿದ ಹ್ಯಾಲೆ, ಪ್ರಸ್ತುತ ಭಾರತವು ಯುನೈಟೆಡ್ ಸ್ಟೇಟ್ಸ ಅನ್ನು ದುರ್ಬಲವಾಗಿ ನೋಡುತ್ತಿದೆ. “ನಾನು ಭಾರತದ ಜತೆ ಕೂಡ ವ್ಯವಹರಿಸಿದ್ದೇನೆ. ನಾನು ಮೋದಿ ಜತೆ ಮಾತನಾಡಿದ್ದೇನೆ. ಭಾರತವು ನಮ್ಮ ಜತೆ ಪಾಲುದಾರನಾಗಲು ಬಯಸಿದೆ. ಅವರು ರಷ್ಯಾ ಜತೆ ಪಾಲುದಾರಕೆ ಹೊಂದಲು ಬಯಸಿಲ್ಲ. ಆದರೆ ಸಮಸ್ಯೆ ಏನೆಂದರೆ ಗೆಲ್ಲಲು ಭಾರತ ನಮ್ಮನ್ನು ನಂಬುವುದಿಲ್ಲ. ನಮ್ಮ ನಾಯಕತ್ವದಲ್ಲಿ ಅವರಿಗೆ ವಿಶ್ವಾಸ ಇಲ್ಲ. ಅವರು ಈಗ ನಮ್ಮನ್ನು ದುರ್ಲಬರು ಎಂಬಂತೆ ನೋಡುತ್ತಿದ್ದಾರೆ. ಭಾರತ ಯಾವಾಗಲೂ ಜಾಣ್ಮೆಯಿಂದ ಆಟವಾಡುತ್ತಿದೆ. ಈ ಚತುರ ಆಟದೊಂದಿಗೆ ರಷ್ಯಾ ಜತೆ ಆಪ್ತವಾಗಿ ಉಳಿದುಕೊಂಡಿದೆ. ಈ ಕಾರಣದಿಂದಾಗಿ ಅವರು ತಮ್ಮ ಸಾಕಷ್ಟು ಸೇನಾ…
ಬಿಗ್ಬಾಸ್ ಸೀಸನ್ 10ರಲ್ಲಿ ಸ್ಪರ್ಧಿಸಿದ್ದ ನಟಿ ತನಿಷಾಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ತನಿಷಾ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿತ್ತು. ಸದ್ಯ ಈ ಕೇಸ್ ನಲ್ಲಿ ತನಿಷಾಗೆ ಕ್ಲೀನ್ಚಿಟ್ ಸಿಕ್ಕಿದ್ದು ಬೆಂಕಿ ತನಿಷಾ ನಿಟ್ಟುಸಿರು ಬಿಟ್ಟಿದ್ದಾರೆ. ಬಿಗ್ ಬಾಸ್ ನಲ್ಲಿದ್ದ ವೇಳೆ ತನಿಷಾ ಕುಪ್ಪಂಡ ಭೋವಿ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅವರ ಮೇಲೆ ಭೋವಿ ಸಮಾಜದ ಮಹಿಳಾ ಘಟಕ ರಾಜ್ಯಾಧ್ಯಕ್ಷೆ ಪದ್ಮ ಕುಂಬಳುಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಕುಂಬಳಗೋಡು ಪೊಲೀಸರು ಜಾತಿನಿಂದನೆ ಆರೋಪದಡಿ ತನಿಷಾ ಕುಪ್ಪಂಡ ವಿರುದ್ಧ ಎಫ್ಐಆರ್ ದಾಖಲಾಸಿದ್ದರು. ಈ ಪ್ರಕರಣದಲ್ಲಿ ತನಿಷಾ ಮೇಲೆ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಒತ್ತಡ ಹೇರಲಾಗಿತ್ತು. ಈ ಕುರಿತಂತೆ ತನಿಷಾ ತಾನು ಆ ರೀತಿ ಮಾತನಾಡಿಲ್ಲ ಎಂದು ಹೇಳಿಕೆ ಕೊಟ್ಟಿದ್ದರು. ಆದರೂ, ಕ್ರಮಕ್ಕೆ ಒತ್ತಾಯ ಮಾಡಲಾಗಿತ್ತು. ಸದ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ದೂರಿನ ಜೊತೆ ತನಿಷಾ ಬಿಗ್…
ಅಬುಧಾಬಿ: ಅಬುಧಾಬಿಯಲ್ಲಿ ನಿರ್ಮಾಣವಾದ ಮೊದಲ ಹಿಂದು ದೇವಾಲಯವನ್ನು ಫೆಬ್ರುವರಿ 14 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಸ್ವಾಮಿನಾರಾಯಣ ಸಂಸ್ಥೆ ತಮ್ಮ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಅಬುಧಾಬಿಯಲ್ಲಿ ನಿರ್ಮಾಣವಾದ ಮೊದಲ ಹಿಂದು ದೇವಾಲಯವನ್ನು ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ನಿರ್ಮಿಸಿದ್ದು, ಇದು ಯುಎಇಯ ಮೊದಲ ಸಾಂಪ್ರದಾಯಿಕ ಕಲ್ಲಿನ ಹಿಂದೂ ದೇವಾಲಯವಾಗಿದೆ. ಈ ದೇವಸ್ಥಾನವನ್ನು ಅಬುಧಾಬಿಯ ಮುರೇಖಾ ಜಿಲ್ಲೆಯಲ್ಲಿ 27 ಎಕರೆ ಜಾಗದಲ್ಲಿ ನಿರ್ಮಿಸಲಾಗಿದೆ. ಉದ್ಘಾಟನೆ ಹಿನ್ನೆಲೆ ಬಿಎಪಿಎಸ್ನ ಆಧ್ಯಾತ್ಮಿಕ ಗುರು ಸ್ವಾಮಿ ಮಹಂತ್ ಸ್ವಾಮಿ ಮಹಾರಾಜ್ ಅವರು ಯುಎಇಗೆ ಆಗಮಿಸಿದ್ದಾರೆ. ಮಂದಿರದ ಉದ್ಘಾಟನೆಯನ್ನು ‘ಸೌಹಾರ್ದತೆಯ ಹಬ್ಬ’ದಂತೆ ಆಚರಿಸಲಾಗುತ್ತದೆ. ನಂಬಿಕೆಯನ್ನು ಬಲಪಡಿಸುವುದು, ಎಲ್ಲಾ ತಲೆಮಾರುಗಳು ಮತ್ತು ಹಿನ್ನೆಲೆಗಳುಳ್ಳ ಜನರ ನಡುವೆ ಸಾಮರಸ್ಯವನ್ನು ಬೆಳೆಸುವುದು ಈ ಉದ್ಘಾಟನಾ ಕಾರ್ಯಕ್ರಮದ ಧ್ಯೇಯವಾಗಿದೆ ಎಂದು ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಈ ಭೇಟಿ ಭಾರತ ಮತ್ತು ಯುಎಇ ನಡುವಿನ ನಿಕಟ ಸಂಬಂಧವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ವಿಶ್ಲೇಷಿಸಲಾಗಿದೆ.
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಐಶ್ವರ್ಯ ರಜನಿಕಾಂತ್ ನಿರ್ದೇಶನದ ಬಹು ನಿರೀಕ್ಷಿತ ಲಾಲ್ ಸಲಾಂ ಸಿನಿಮಾ ಇಂದು ರಿಲೀಸ್ ಆಗುತ್ತಿದೆ. ಚಿತ್ರದಲ್ಲಿ ರಜನಿಕಾಂತ್ ಮೊಯಿದೀನ್ ಭಾಯ್ ಹೊಸರಿನ ಮುಸ್ಲಿಂ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಚಿತ್ರದ ಕುರಿತಾಗಿ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಲಾಲ್ ಸಲಾಂ ಸಿನಿಮಾದಲ್ಲಿ ರಜನಿಕಾಂತ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು ಸಾಕಷ್ಟು ತೂಕವಾದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅಂದ ಹಾಗೆ ರಜನಿ ಪಾತ್ರ ಕನ್ನಡದ ನಟ ಸಾಯಿಕುಮಾರ್ ಧ್ವನಿಯಾಗಿದ್ದಾರೆ. ‘ಲಾಲ್ ಸಲಾಂ’ ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಈ ಚಿತ್ರದ ತೆಲುಗು ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿದೆ. ತೆಲುಗು ವರ್ಷನ್ನಲ್ಲಿ ರಜನಿಕಾಂತ್ ಪಾತ್ರಕ್ಕೆ ಸಾಯಿಕುಮಾರ್ ಧ್ವನಿ ನೀಡಿದ್ದಾರೆ. ತಮಿಳಿನ ಜೊತೆಗೆ ತೆಲುಗು ವರ್ಷನ್ ಲಾಲ್ ಸಲಾಂ ಕೂಡ ಇಂದೇ ರಿಲೀಸ್ ಆಗುತ್ತಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಇರುವ ಕೆಲವು ರಜನಿಕಾಂತ್ ಫ್ಯಾನ್ಸ್ಗೆ ತಂಡದ ನಿರ್ಧಾರ ಬೇಸರ ಮೂಡಿಸಿದೆ. ತೆಲುಗು ಭಾಗದಲ್ಲಿ ತಂಡ ಯಾವುದೇ ಪ್ರಚಾರ ಮಾಡಿಲ್ಲ.…
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಸಾಕಷ್ಟು ಬಿಗಿ ಭದ್ರತೆ ನಿಯೋಜಿಸಲಾಗಿದೆ. ಸದ್ಯ ಪಾಕ್ ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸೇರಿದಂತೆ ಇತರ ಪ್ರಮುಖ ಬಂಧಿತ ರಾಜಕೀಯ ವ್ಯಕ್ತಿಗಳು ಅಂಚೆ ಮತಪತ್ರದ ಮೂಲಕ ಜೈಲಿನಿಂದಲೇ ಮತ ಚಲಾಯಿಸಿದ್ದಾರೆ ಎನ್ನಲಾಗುತ್ತಿದೆ. ಮಾಜಿ ವಿದೇಶಾಂಗ ಸಚಿವ ಶಾ ಮಹಮ್ಮದ್ ಖುರೇಷಿ, ಪಂಜಾಬ್ ಮಾಜಿ ಮುಖ್ಯಮಂತ್ರಿ ಚೌಧರಿ ಪರ್ವೇಜ್ ಇಲಾಹಿ, ಅವಾಮಿ ಮುಸ್ಲಿಂ ಲೀಗ್ ಮುಖ್ಯಸ್ಥ ಶೇಖ್ ರಶೀದ್ ಮತ್ತು ಮಾಜಿ ಸಚಿವ ಫವಾದ್ ಚೌಧರಿ ಅಂತೆ ಮೂಲಕ ಮತ ಚಲಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಣಕೀಕೃತ ರಾಷ್ಟ್ರೀಯ ಗುರುತಿನ ಚೀಟಿ(ಸಿಎನ್ಐಸಿ) ಹೊಂದದೆ ಇರುವ ಕಾರಣ ಅಡಿಯಾಲಾ ಜೈಲಿನಲ್ಲಿರುವ 7 ಸಾವಿರ ಕೈದಿಗಳಲ್ಲಿ 100ಕ್ಕಿಂತಲೂ ಕಡಿಮೆ ಕೈದಿಗಳು ಮತ ಚಲಾಯಿಸಲು ಅರ್ಹತೆ ಪಡೆದಿದ್ದರು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದಲ್ಲಿ ಒಟ್ಟು 90,675 ಮತಗಟ್ಟೆಗಳಿರುತ್ತವೆ. ಈ ಕೇಂದ್ರಗಳಲ್ಲಿ 2,76,402 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪಾಕಿಸ್ತಾನದ ಚುನಾವಣಾ ಆಯೋಗದ ಪ್ರಕಾರ, 12.85 ಕೋಟಿಗೂ ಹೆಚ್ಚು…
ಟಾಲಿವುಡ್ ಬ್ಯೂಟಿ ಅನುಷ್ಕಾ ಶೆಟ್ಟಿ ಸದ್ಯ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಆದರೂ ಹೆಚ್ಚಾಗಿ ಹೊರಗೆಲ್ಲೂ ಕಾಣಿಸಿಕೊಳ್ಳದ ನಟಿ ಆಗಾಗ ಅಭಿಮಾನಿಗಳ ಕಣ್ಣಿಗೆ ಬೀಳುತ್ತಿರುತ್ತಾರೆ. ಹಾಗಾಗಿ ಬಹಿರಂಗವಾಗಿ ಅನುಷ್ಕಾ ಕಾಣಿಸಿಕೊಂಡಾಗ ಅಭಿಮಾನಿಗಳು ಮುತ್ತಿಕ್ಕಿಕೊಳ್ಳೋದು ಸಹಜವಾಗಿದೆ. ಸದ್ಯ ಅನುಷ್ಕಾ ತಮ್ಮ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಪಾಲ್ಗೊಳ್ಳೋದಕ್ಕಾಗಿ ಒಡಿಶಾಗೆ ತೆರಳಿದ್ದಾರೆ. ಅನುಷ್ಕಾ ಒಡಿಶಾಗೆ ಬಂದಿದ್ದಾರೆ ಎನ್ನುವ ಸುದ್ದಿ ತಿಳಿದ ತಕ್ಷಣ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದಾರೆ. ಅಭಿಮಾನಿಗಳನ್ನು ಕಂಡು ಅನುಷ್ಕಾ, ಕಾರಿನಿಂದ ಇಳಿದು ಓಡಿದ್ದಾರೆ. ಒಡಿಶಾದ ಜೇಪೋರ್ ನಲ್ಲಿ ಅನುಷ್ಕಾ ನಟನೆಯ ಹೊಸ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ರಮ್ಯಾಕೃಷ್ಣ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಕ್ರಿಶ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಚಿತ್ರಕ್ಕೆ ಶೀರ್ಷಿಕೆ ಇನ್ನೂ ಘೋಷಣೆ ಆಗಿಲ್ಲ.