Author: Author AIN

ಬಾಲಿವುಡ್ ನಟಿ ಕಂಗನಾ ರಣಾವತ್ ಇತ್ತೀಚೆಗೆ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಆ ಬಳಿಕ ಕಾಂಗ್ರೆಸ್ ಪಕ್ಷದ ವಿರುದ್ಧ ಪದೇ ಪದೇ ಗುಡುಗಲು ಆರಂಭಿಸಿದ್ದಾರೆ. ಇಷ್ಟು ದಿನ ಬಾಲಿವುಡ್ ನಟ,ನಟಿಯರನ್ನು ಟೀಕಿಸುತ್ತಿದ್ದ ನಟಿ ಇದೀಗ ಕಾಂಗ್ರೆಸ್ ಪಕ್ಷದವರ ಹಿಂದೆ ಬಿದ್ದಿದ್ದಾರೆ. ಕಂಗನಾ ರಣಾವತ್​ ಅವರಿಗೆ ನೆಪೋಟಿಸಂ ಎಂದರೆ ಆಗುವುದಿಲ್ಲ. ಅವಕಾಶಗಳು ಕೇವಲ ವಂಶ ಪಾರಂಪರ್ಯವಾಗಿ ಸಿಗುವುದನ್ನು ಅವರು ವಿರೋಧಿಸುತ್ತಾ ಬಂದಿದ್ದಾರೆ. ಈಗ ಅವರು ರಾಹುಲ್​ ಗಾಂಧಿ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ರಾಹುಲ್​ ಗಾಂಧಿಯನ್ನು ನೆಪೋಟಿಸಂ ಮಗು ಎಂದು ಕಂಗನಾ ಟೀಕಿಸಿದ್ದಾರೆ. ಸಂದರ್ಶನದಲ್ಲಿ ಭಾಗಿಯಾಗಿದ್ದ ಕಂಗನಾ ರಣಾವತ್​ ಈ ವಿಚಾರ ಮಾತನಾಡಿದ್ದಾರೆ. ‘ನನ್ನ ಪಾಲಿಗೆ ಕಾಂಗ್ರೆಸ್​ ಯಾವಾಗಲೂ ಕೆಟ್ಟ ಪಕ್ಷ ಆಗಿತ್ತು. ಆ ಪಕ್ಷದಲ್ಲಿ ಇರುವ ನೆಪೋಟಿಸಂ ನನಗೆ ಬಹಳ ತೊಂದರೆ ಎನಿಸುತ್ತಿತ್ತು. ಯಾಕೆಂದರೆ ಚಿತ್ರರಂಗದಲ್ಲಿ ನೆಪೋಟಿಸಂ ಕಾರಣದಿಂದಲೇ ನಾನು ಟಾರ್ಗೆಟ್​ ಆಗಿದ್ದೆ. ಅದನ್ನು ನಾನು ನೇರವಾಗಿಯೇ ವಿರೋಧಿಸಿದೆ. ಅದು ನನ್ನನ್ನು ಶೋಷಣೆ ಮಾಡುತ್ತಿತ್ತು. ನೆಪೋಟಿಸಂ, ಗುಂಪುಗಾರಿಕೆ, ವಂಶ ಪಾರಂಪರ್ಯ ರಾಜಕೀಯ. ಈ ಕಾರಣದಿಂದಲೇ ನಾನು…

Read More

ಡಾಲಿ ಧನಂಜಯ್ ನಟನೆಯ ಉತ್ತರಕಾಂಡ ಚಿತ್ರದ ಚಿತ್ರೀಕರಣ ಮುಂದಿನ ವಾರದಲ್ಲಿ ಆರಂಭಗೊಳ್ಳಲಿದೆ. ಅದಕ್ಕೂ ಮೊದಲು ನಟ ಡಾಲಿ‌ ಧನಂಜಯ್, ನಿರ್ದೇಶಕ ರೋಹಿತ್ ಪದಕಿ ಹಾಗೂ ನಿರ್ಮಾಪಕ ಕಾರ್ತಿಕ್ ಗೌಡ ಧಾರವಾಡದ ನುಗ್ಗೇಕೇರಿಯ ಶ್ರೀ ಹನುಮಂತ ದೇವಾಲಯಕ್ಕೆ ಭೇಟಿ ನೀಡಿ ದೇವರ  ಆಶೀರ್ವಾದ ಪಡೆದಿದ್ದಾರೆ. ನುಗ್ಗೇಕೇರಿ‌ ಶ್ರೀ ಹನುಮಂತ ದೇವಾಲಯ ಧಾರವಾಡದ ಪುರಾತನ ಮತ್ತು ಪ್ರಖ್ಯಾತ ದೇವಾಲಯವಾಗಿದೆ‌. ಉತ್ತರಕಾಂಡ ಒಂದು ಆಕ್ಷನ್ ಡ್ರಾಮಾ ಚಿತ್ರವಾಗಿದ್ದು ಚಿತ್ರದಲ್ಲಿ   ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಡಾಲಿ ಧನಂಜಯ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಹಾಗೂ ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಮೂಡಿ‌‌ ಬರಲಿದೆ. ಉತ್ತರಕಾಂಡ ಸಿನಿಮಾದ ಮೂಲಕ ನಟಿ ರಮ್ಯಾ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇತ್ತೀಚೆಗೆ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಹೇಳುವ ಮೂಲಕ ರಮ್ಯಾ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು. ಡೇಟ್ಸ್ ಹೊಂದಾಣಿಕೆ ಆಗದ ಕಾರಣ, ನಾನು ಉತ್ತರಕಾಂಡ ಸಿನಿಮಾದಲ್ಲಿ ನಟಿಸುತ್ತಿಲ್ಲ. ನನ್ನ ಸಿನಿಮಾ ಮತ್ತು ರಾಜಕೀಯ ಕೆಲಸಗಳನ್ನು ಸದ್ಯ ಕಾಯ್ದಿರಿಸಿದ್ದೇನೆ.…

Read More

ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಸಿನಿಮಾ ರಂಗದ ನಟ, ನಟಿಯರು ಕೆಲವು ಪಕ್ಷಕ್ಕೆ ಎಂಟ್ರಿಕೊಡ್ತಿದ್ದಾರೆ. ಅಂತೆಯೇ ಇದೀಗ ಬಾಲಿವುಡ್ ನಟ ಗೋವಿಂದ್ ಶಿಂಧೆ ಪಕ್ಷ ಸೇರಿಕೊಂಡಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಕೆಲ ವರ್ಷಗಳಿಂದ ದೂರವಿದ್ದ ಬಾಲಿವುಡ್ ನಟ ಗೋವಿಂದ್ ಮತ್ತೆ ರಾಜಕಾರಣಕ್ಕೆ ವಾಪಸ್ಸಾಗಿದ್ದಾರೆ. ಲೋಕಸಮರಕ್ಕೆ ಇಳಿಯುವುದಕ್ಕಾಗಿಯೇ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕೆಲವು ದಿನಗಳ ಹಿಂದೆಯೇ ಗೋವಿಂದ್ ಶಿವಸೇನೆ ಸೇರಲಿದ್ದಾರೆ ಎನ್ನುವ ಸುದ್ದಿ ಕೇಳಿ ಬಂದಿತ್ತು. ಏಕನಾಥ ಶಿಂಧೆ ಅವರನ್ನೂ ಗೋವಿಂದ್ ಭೇಟಿ ಮಾಡಿದ್ದರು. ವಾಯವ್ಯ ಕ್ಷೇತ್ರದಿಂದ ಲೋಕಸಭೆ ಸ್ಪರ್ಧೆಗೆ ಇಳಿಯುವ ಕುರಿತು ಚರ್ಚೆ ಮಾಡಿದ್ದರು. ಆದರೆ ಈಗ ಅದು ಅಧಿಕೃತವಾಗಿದೆ. ಶಿವಸೇನೆ ಸೇರ್ಪಡೆಗೊಂಡನಂತರ ಚುನಾವಣೆಗೆ ಸ್ಪರ್ಧಿಸುವುದು ಖಚಿತವಾಗಿದೆ. 2004ರಲ್ಲಿ ಉತ್ತರ ಮುಂಬೈ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಗೋವಿಂದ್ ಬಿಜೆಪಿಯ ಅಭ್ಯರ್ಥಿ ರಾಮ್ ನಾಯ್ಕ್ ಅವರನ್ನು ಸಾಕಷ್ಟು ಅಂತರದಿಂದ…

Read More

ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಹಾಗೂ ಕಾಲಿವುಡ್ ನಟ ಸಿದ್ಧಾರ್ಥ್  ಸದ್ದಿಲ್ಲದೇ ಹಸೆಮಣೆ ಏರಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿರುವ ಶ್ರೀರಂಗಪುರಂನಲ್ಲಿರುವ ಶ್ರೀ ರಂಗನಾಯಕ ಸ್ವಾಮಿ ದೇವಸ್ಥಾನದಲ್ಲಿ ಸಿಂಪಲ್ ಆಗಿ ಈ ಜೋಡಿ ಮದುವೆಯಾಗಿದೆ ಎಂದು ಹೇಳಲಾಗಿತ್ತು. ಇದೀಗ ಮದುವೆಗೆ ಸುದ್ದಿಗೆ ನಟಿ ಸ್ಪಷ್ಟನೆ ನೀಡಿದ್ದಾರೆ. ಅಮಿರ್ ಖಾನ್ ಪುತ್ರಿ ಇರಾ ಖಾನ್ ಮದುವೆಯಲ್ಲಿ ಕಾಣಿಸಿಕೊಂಡಿದ್ದ ಅದಿತಿ ಮತ್ತು ಸಿದ್ಧಾರ್ಥ ಅವರ ಫೋಟೋವನ್ನೇ ಮದುವೆ ಫೋಟೋ ಎಂದು ವೈರಲ್ ಮಾಡಲಾಗಿತ್ತು. ಶೂಟಿಂಗ್ ಎಂದು ಸುಳ್ಳು ಹೇಳಿ ಇಬ್ಬರೂ ಮದುವೆ ಆಗಿದ್ದಾರೆ ಎಂದು ಆರೋಪಿಸಲಾಗಿತ್ತು. ಎಲ್ಲದಕ್ಕೂ ಅದಿತಿ ಉತ್ತರ ನೀಡಿದ್ದಾರೆ. ಸಿದ್ದಾರ್ಥ್ ಜೊತೆಗಿನ ಫೋಟೋ ಹಂಚಿಕೊಂಡ ನಟಿ ಎಂಗೇಜ್ಮೆಂಟ್ ಮಾಡಿಕೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಎಂಗೇಜ್ ಮೆಂಟ್ ನಲ್ಲಿ ತೊಡಿಸಿರುವ ಉಂಗುರವನ್ನು ಫೋಟೋದಲ್ಲಿ ಹೈಲೈಟ್ ಮಾಡಲಾಗಿದೆ. ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು, ಈ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ ಸಿದ್ಧಾರ್ಥ್ ಜೊತೆಗಿನ ಖಾಸಗಿ ಫೋಟೋ ಹಂಚಿಕೊಂಡು ಹೊಸ…

Read More

ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಟಿ ಮೇಘಾ ಶೆಟ್ಟಿ ಕನ್ನಡ ಚಿತ್ರರಂಗದ ಭರವಸೆಯ ನಾಯಕಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ಇದೀಗ ಮಸ್ತ್​ ಫೋಟೋಶೂಟ್ ಮೂಲಕ ಮಿಂಚುತ್ತಿದ್ದಾರೆ. ಜೊತೆ ಜೊತೆಯಲಿ ಅನು ಸಿರಿಮನೆ ಎಂದೇ ಖ್ಯಾತಿ ಪಡೆದಿರುವ ಮೇಘಾ ಶೆಟ್ಟಿ ಹೊಸ ಫೋಟೋಶೂಟ್‌ ಮಾಡಿಸಿದ್ದು, ಆ ಫೋಟೋ‌ಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಮೇಘಾ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ. ಆಗಾಗ ಲೇಟೆಸ್ಟ್​ ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ಬ್ಲ್ಯಾಕ್ ಡ್ರಸ್ ನಲ್ಲಿ ಮೇಘಾ ಫೋಟೋ ಶೂಟ್ ಮಾಡಿಸಿದ್ದಾರೆ. ಕನ್ನಡದ ಮುದ್ದು ಮುಖದ ಚೆಲುವೆ ಮೇಘಾ ಶೆಟ್ಟಿ, ಸಿನಿಮಾಗಳಲ್ಲಿ ಬ್ಯುಸಿ ಆಗಿದ್ರು. ಜಾಹೀರಾತಿನಲ್ಲೂ ಆಗಾಗ ಮಿಂಚುತ್ತಿರುತ್ತಾರೆ. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಮೇಘಾ ಚಂದನವನ ಪ್ರವೇಶಿಸಿದರು. ನಂತರ ಡಾರ್ಲಿಂಗ್ ಕೃಷ್ಣ ಜೊತೆ ದಿಲ್ ಪಸಂದ್ ಚಿತ್ರದಲ್ಲಿ ನಟಿಸಿದರು. ಇತ್ತೀಚಿಗಷ್ಟೇ ಕೈವ ಸಿನಿಮಾ ಮೂಲಕ…

Read More

ನವದೆಹಲಿ:- ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ನನ್ನ ಸಿಲುಕಿಸುವುದೇ ಇಡಿಯ ಏಕೈಕ ಉದ್ದೇಶ ಎಂದು ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ. ಹೊಸ ಅಬಕಾರಿ ನೀತಿ ಹಗರಣದಲ್ಲಿ  ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರ ಇಡಿ  ಕಸ್ಟಡಿಯನ್ನು ನಾಲ್ಕು ದಿನಗಳಿಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ನೀಡಿದೆ. ಇದಕ್ಕೂ ಮುನ್ನ ಕಸ್ಟಡಿ ಅಂತ್ಯವಾದ ಹಿನ್ನಲೆ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಲಯದ (Court) ಮುಂದೆ ಹಾಜರುಪಡಿಸಲಾಯಿತು. ಕೋರ್ಟ್ ಪ್ರವೇಶ ಮಾಡುವ ವೇಳೆ “ಉದ್ದೇಶಪೂರ್ವಕವಾಗಿ ಸಿಕ್ಕಿಹಾಕಿಸುವ ಪ್ರಯತ್ನ ಮಾಡಲಾಗುತ್ತಿದೆ ಜನರು ಇದಕ್ಕೆ ಉತ್ತರಿಸಲಿದ್ದಾರೆ” ಎಂದು ಅಲ್ಲಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ವಿಚಾರಣೆ ಆರಂಭವಾಗುತ್ತಿದ್ದಂತೆ ತಮ್ಮ ಪರವಾಗಿ ತಾವೇ ವಾದ ಮಂಡಿಸಿದ ಅರವಿಂದ್ ಕೇಜ್ರಿವಾಲ್, ನನ್ನನ್ನು ಸಿಕ್ಕಿ ಹಾಕಿಸುವುದು ಇಡಿಯ ಏಕೈಕ ಉದ್ದೇಶವಾಗಿದೆ ಎಂದು ಆರೋಪಿಸಿದರು. ನಾನು ರಿಮಾಂಡ್ ಅನ್ನು ವಿರೋಧಿಸುತ್ತಿಲ್ಲ ಇಡಿ ಅವರು ಎಲ್ಲಿಯವರೆಗೆ ನನ್ನನ್ನು ಕಸ್ಟಡಿಯಲ್ಲಿ ಇರಿಸಬಹುದು? ಆದರೆ ಇಡಿ ತನಿಖೆಯ ಹೆಸರಿನಲ್ಲಿ ಸುಲಿಗೆ ದಂಧೆ ನಡೆಸುತ್ತಿರುವುದು ನಿಜವಾದ ಹಗರಣ ಎಂದು ವಾದಿಸಿದರು. ಕೆಲವು ಆರೋಪಿಗಳು…

Read More

ಹಲವು ವರ್ಷಗಳ ಕಾಲ ಪ್ರೀತಿ ಮದುವೆಯಾದ ಕೆಲವೇ ವರ್ಷಗಳಲ್ಲಿ ಡಿವೋರ್ಸ್ ಪಡೆದುಕೊಂಡ ನಾಗ ಚೈತನ್ಯ ಹಾಗೂ ಸಮಂತಾ ಸದ್ಯ ತಮ್ಮ ಕೆರಿಯರ್ ಮೇಲೆ ಗಮನ ಹರಿಸಿದ್ದಾರೆ. ಈ ಜೋಡಿ ದೂರವಾಗಲು ಕಾರಣವೇನು ಎಂಬುದು ಮಾತ್ರ ನಿಗೂಡವಾಗಿಯೇ ಉಳಿದಿತ್ತು. ಇದೀಗ ಈ ಜೋಡಿ ದೂರವಾದ ನಾಲ್ಕು ವರ್ಷಗಳ ಬಳಿಕ ಸಮಂತಾ ಹಾಗೂ ನಾಗಚೈತನ್ಯ ಡಿವೋರ್ಸ್ ಗೆ ಕಾರಣವೇನು ಎಂಬುದು ತಿಳಿದು ಬಂದಿದೆ. ನಾಗ ಚೈತನ್ಯ ಮತ್ತು ಸಮಂತಾ ವಿಚ್ಛೇದನದ ಕಾರಣವನ್ನು ಬಹಿರಂಗಪಡಿಸದೆ ಅಧಿಕೃತವಾಗಿ ವಿಚ್ಛೇದನವನ್ನು ಘೋಷಿಸಿದ್ದರು. ಅಂದಿನಿಂದ ಅವರು ಪ್ರತ್ಯೇಕವಾಗಿದ್ದು ತಮ್ಮ ತಮ್ಮ ವೃತ್ತಿಯನ್ನು ಮುಂದುವರೆಸಿದ್ದಾರೆ. ಹೀಗಾಗಿ ಸಮಂತಾ ಮತ್ತು ನಾಗ ಚೈತನ್ಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಲವು ವದಂತಿಗಳಿಗೆ ತೆರೆ ಬಿದ್ದಿತ್ತು.. ಸದ್ಯ ಸುದ್ದಿಯಲ್ಲಿರೋ ಫೋನ್ ಕದ್ದಾಲಿಕೆ ವಿಚಾರ ದೇಶವನ್ನೇ ನಡುಗಿಸಿದೆ. ಇದರಲ್ಲಿ ನಾಗ ಚೈತನ್ಯ ಹಾಗೂ ಸಮಂತಾ ಹೆಸರುಗಳು ಮುನ್ನೆಲೆಗೆ ಬಂದಿದೆ. ಟೆಲಿಫೋನ್ ಕದ್ದಾಲಿಕೆಯಲ್ಲಿ ತೊಡಗಿದ್ದ ತೆಲಂಗಾಣ ಸರ್ಕಾರಿ ಅಧಿಕಾರಿ ಪ್ರಣೀತ್ ರಾವ್ ಅವರನ್ನು ಬಂಧಿಸಿ ತನಿಖೆ ನಡೆಸಿದ…

Read More

ಬಿಗ್ ಬಾಸ್ ಸ್ಪರ್ಧಿ, ನಟಿ ಅಂಕಿತಾ ಲೋಖಂಡೆ ದುಡ್ಡು ತಗೆದುಕೊಳ್ಳದೇ ಯಾವುದೇ ಕೆಲಸ ಮಾಡುವುದಿಲ್ಲ ಎನ್ನುವ ಸುದ್ದಿ ಕೇಳಿ ಬಂದಿತ್ತು. ಆದರೆ ಸಾವರ್ಕರ್ ಸಿನಿಮಾದಲ್ಲಿ ಆ ಸುದ್ದಿಯನ್ನು ನಟಿ ಸುಳ್ಳು ಮಾಡಿದ್ದಾರೆ. ವೀರ ಸಾವರ್ಕರ್ ಸಿನಿಮಾದಲ್ಲಿ ನಟಿಸಲು ಅಂಕಿತಾ ಯಾವುದೇ ಸಂಭಾವನೆ ಪಡೆದುಕೊಂಡಿಲ್ಲ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಸಾವರ್ಕರ್ ಪತ್ನಿಯ ಪಾತ್ರದಲ್ಲಿ ನಟಿಸುವಂತೆ ಕೇಳಿದಾಗ ಅಂಕಿತಾ ಕಂಡಷನ್ ಒಂದನ್ನ ಹಾಕಿದ್ದರಂತೆ. ಆ ಕಂಡೀಷನ್ ಗೆ ಒಪ್ಪಿದರೆ ಮಾತ್ರವೇ ಚಿತ್ರದಲ್ಲಿ ನಟಿಸೋದಾಗಿ ಹೇಳಿದ್ದರಂತೆ. ನಟಿ ಇಟ್ಟ ಬೇಡಿಕೆ ಏನಿರಬಹುದು ಎನ್ನುವ ಗೊಂದಲ ನಿರ್ಮಾಪಕರಿಗೆ ಆಗಿತ್ತಂತೆ. ಆದರೆ, ಈ ಸಿನಿಮಾಗಾಗಿ ನಾನು ಯಾವುದೇ ಸಂಭಾವನೆ ಪಡೆಯುವುದಿಲ್ಲ. ಉಚಿತವಾಗಿ ನಟಿಸುತ್ತೇನೆ. ಅದಕ್ಕೆ ಒಪ್ಪಿದರೆ ಮಾತ್ರ ಪಾತ್ರ ಮಾಡುತ್ತೇನೆ ಅಂದರಂತೆ ಅಂಕಿತಾ. ಇದು ನಟಿ ಬದ್ಧತೆ ಎಂದು ನಿರ್ಮಾಪಕರು ಹೇಳಿದ್ದಾರೆ. ಸಾಕಷ್ಟು ಕಾರಣಗಳಿಂದ ನಿರೀಕ್ಷೆ ಮೂಡಿಸಿದ್ದ ‘ಸ್ವಾತಂತ್ರ ವೀರ್ ಸಾವರ್ಕರ್’ ಸಿನಿಮಾ ಇತ್ತೀಚೆಷ್ಟೇ ಬಿಡುಗಡೆ ಆಗಿದ್ದು ಅಂದುಕೊಂಡಷ್ಟು ಚಿತ್ರಕ್ಕೆ ಪ್ರತಿಕ್ರಿಯೆ ಸಿಕ್ಕಿಲ್ಲ. ಮೊದಲ ದಿನದ ಕಲೆಕ್ಷನ್ 1.15…

Read More

ತೆಲುಗು ಸಿನಿಮಾ ರಂಗದಲ್ಲಿ ಪೋಷಕ ನಟಿಯಾಗಿ ಖ್ಯಾತಿ ಘಳಿಸಿರುವ ನಟಿ ಸುರೇಖಾ ವಾಣಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿರುತ್ತಾರೆ. ಮಗಳು ಸುಪ್ರೀತಾ ಜೊತೆ ಇನ್‌ಸ್ಟಾ, ಯೂಟ್ಯೂಬ್‌ನಲ್ಲಿ ವಿಡಿಯೋ ಪೋಸ್ಟ್ ಮಾಡುತ್ತಿರುವ ನಟಿ ಇತ್ತೀಚೆಗೆ ನಟನೆಯಿಂದ ದೂರ ಉಳಿದಿದ್ದಾರೆ. ಇದೀಗ ಮಗಳು ಸುಪ್ರೀತಾ ತಾಯಿಗೆ ಮತ್ತೆ ಮದುವೆ ಮಾಡಲು ನಿರ್ಧರಿಸಿದ್ದಾರೆ. ಕಿರುತೆರೆ ನಿರ್ದೇಶಕ ಸುರೇಶ್ ತೇಜಾ ಜೊತೆ ಸುರೇಖಾ ವಾಣಿ ಮದುವೆ ಆಗಿದ್ದರು. ದಂಪತಿಗೆ ಮಗಳು ಇದ್ದಾಳೆ. ಆದರೆ 2019ರಲ್ಲಿ ಅನಾರೋಗ್ಯ ಸಮಸ್ಯೆಯಿಂದ ಸುರೇಶ್ ತೇಜಾ ಕೊನೆಯುಸಿರೆಳೆದರು. ಬಳಿಕ ತಾಯಿ- ಮಗಳು ಜೀವನ ಸಾಗಿಸುತ್ತಿದ್ದಾರೆ. ಸಾಕಷ್ಟು ಬಾರಿ ನಮ್ಮ ತಾಯಿಗೆ ಮತ್ತೊಂದು ಮದುವೆ ಮಾಡಬೇಕು ಎಂದು ಸುಪ್ರೀತಾ ಯೋಚಿಸಿದ್ದಾರೆ. ತೆಲುಗು ಚಿತ್ರರಂಗಕ್ಕೆ ಆಕ್ಟೀವ್ ಆಗಿರುವ ಸುಪ್ರೀತ ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಾಯಿಗೆ ಮತ್ತೊಂದು ಮದುವೆ ಮಾಡುವ ಬಗ್ಗೆ ಮಾತನಾಡಿದ್ದಾರೆ. ಈಗ ಹುಡುಗರು ನಮ್ಮ ತಾಯಿಯನ್ನು ಮದುವೆ ಆಗಲು ಒಪ್ಪಲ್ಲ, ಅಂಕಲ್ ಆಗಿದ್ದರೂ ಸರಿ. ಅವರನ್ನು ಚೆನ್ನಾಗಿ ನೋಡಿಕೊಳ್ಳುವವರು ಸಿಕ್ಕರೆ ಮದುವೆ ಮಾಡಿಸಲು ಅಭ್ಯಂತರವಿಲ್ಲ…

Read More

ದೊಡ್ಡ ಸರಕು ಹಡಗು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್‌ನ ಅತಿ ಉದ್ದದ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿದು ಬಿದ್ದಿದೆ. ಡಿಕ್ಕಿ ಹೊಡೆದ ಕಂಟೇನರ್ ಹಡಗಿನಲ್ಲಿ 22 ಸಿಬ್ಬಂದಿ ಭಾರತೀಯರಿದ್ದು ಎಲ್ಲರು ಸುರಕ್ಷಿತವಾಗಿದ್ದಾರೆ. ಇದೀಗ ಅಮೆರಿಕ ಅಧ್ಯಕ್ಷ ಹಡಗಿನಲ್ಲಿದ್ದ ಭಾರತೀಯರಿಗೆ ಧನ್ಯವಾದ ಹೇಳಿದ್ದಾರೆ. ಅಪಘಾತಕ್ಕೀಡಾದ ಹಡಗು ಡಾಲಿ ಹೆಸರಿನ ಕಂಟೈನರ್ ಹಡಗಾಗಿದ್ದು, ಬಾಲ್ಟಿಮೋರ್‌ನಿಂದ ಶ್ರೀಲಂಕಾದ ರಾಜಧಾನಿ ಕೊಲಂಬೊಗೆ ಹೋಗುತ್ತಿತ್ತು. ಮಂಗಳವಾರ ಮುಂಜಾನೆ 1:30ರ ಸುಮಾರಿಗೆ ಹಡಗು ಸೇತುವೆಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ಇದರ ನಂತರ ಹಡಗು ನೀರಿನಲ್ಲಿ ಮುಳುಗಿದ್ದು, ಸೇತುವೆಯೂ ಮುರಿದು ನದಿಗೆ ಬಿದ್ದಿದೆ. ಕಂಟೈನರ್ ಹಡಗು ಸುಮಾರು ಎಂಟು ಗಂಟುಗಳ ತುಲನಾತ್ಮಕವಾಗಿ ವೇಗದಲ್ಲಿ ಚಲಿಸುತ್ತಿತ್ತು ಮತ್ತು ಸೇತುವೆಯನ್ನು ಅಪ್ಪಳಿಸುವ ಮೊದಲು ಕ್ಷಣಗಳಲ್ಲಿ ವಿದ್ಯುತ್ ಕಳೆದುಕೊಂಡಿತು. ತಕ್ಷಣವೇ ಎಚ್ಚೆತ್ತುಕೊಂಡ ಹಡಿಗಿನಲ್ಲಿದ್ದ ಸಿಬ್ಬಂದಿ ಅಧಿಕಾರಿಗಳಿಗೆ ಸುದ್ದಿ ಮುಟ್ಟಿಸಿ ಸೇತುವೆಯನ್ನು ಮುಚ್ಚಿಸಿದ್ದಾರೆ. ಈ ಮೂಲಕ ನಡೆಯಬಹುದಾಗಿ ಸಾಕಷ್ಟು ಸಾವು ನೋವುಗಳನ್ನು ತಪ್ಪಿಸಿದ್ದಾರೆ. ಮೇ ಡೇ ಕರೆಗೆ ಯುಎಸ್ ಕೋಸ್ಟ್ ಗಾರ್ಡ್ ತ್ವರಿತವಾಗಿ…

Read More