Author: Author AIN

ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಪ್ರಾಯೋಜಿತ ಸಮೀಕ್ಷಾ ವರದಿಯಲ್ಲಿ ಫಿನ್ಲೆಂಡ್‌ ವಿಶ್ವದ ಅತ್ಯಂತ ಸಂತೋಷಭರಿತ ದೇಶ ಎನಿಸಿಕೊಂಡಿದೆ. ಫಿನ್ಲೆಂಡ್‌ ಸತತವಾಗಿ ಏಳನೇ ಬಾರಿಯೂ ಮೊದಲನೇ ಸ್ಥಾನದಲ್ಲಿದ್ದು, ಅಫ್ಗಾನಿಸ್ತಾನ ಅತೃಪ್ತಿಕರ ರಾಷ್ಟ್ರವೆಂದು ದಾಖಲಾಗಿದೆ. 143 ದೇಶಗಳ ಪಟ್ಟಿಯಲ್ಲಿ ಭಾರತ 126ನೇ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ ಭಾರತ ಸಹ ಇದೇ ಸ್ಥಾನದಲ್ಲಿತ್ತು. ವಿಶೇಷವೆಂದರೆ ಯುದ್ಧ ಪೀಡಿತ ಪ್ಯಾಲೆಸ್ಟೇನ್‌ 103ನೇ ಸ್ಥಾನ ಪಡೆದಿದೆ. ಯುರೋಪಿಯನ್‌ ರಾಷ್ಟ್ರಗಳು ಸಂತೋಷ ಸೂಚ್ಯಂಕದಲ್ಲಿ ಅಗ್ರ ಸ್ಥಾನಗಳಲ್ಲಿ ಮುಂದುವರಿದಿವೆ. ಫಿನ್ಲೆಂಡ್‌, ಡೆನ್ಮಾರ್ಕ್, ಐಸ್‍ಲ್ಯಾಂಡ್, ಸ್ವೀಡನ್ ಮತ್ತು ಇಸ್ರೇಲ್ ಅಗ್ರ 5 ಸ್ಥಾನ ಪಡೆದಿವೆ. 10 ವರ್ಷದಲ್ಲಿ ಇದೇ ಮೊದಲ ಬಾರಿಗೆ ಅಮೆರಿಕ ಮತ್ತು ಜರ್ಮನಿ ಅಗ್ರ 20ರ ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ. ಅಮೆರಿಕ 23 ಮತ್ತು ಜರ್ಮನಿ 24ನೇ ಸ್ಥಾನಕ್ಕೆ ಕುಸಿದಿದೆ. ಪೂರ್ವ ಯುರೋಪಿಯನ್ ದೇಶಗಳಾದ ಸರ್ಬಿಯಾ, ಬಲ್ಗೇರಿಯಾ ದೇಶಗಳು ತಮ್ಮ ಶ್ರೇಯಾಂಕವನ್ನು ಸುಧಾರಿಸಿಕೊಂಡರೆ ಅಫ್ಘಾನಿಸ್ತಾನ, ಲೆಬನಾನ್ ಮತ್ತು ಜೋರ್ಡಾನ್ ದೇಶಗಳ ಶ್ರೇಯಾಂಕ ತೀವ್ರ ಕುಸಿದಿದೆ

Read More

ಈ ತಿಂಗಳ ಆರಂಭದಿಂದ ಕಾಣೆಯಾಗಿರುವ ಕ್ಲೀವ್ಲ್ಯಾಂಡ್ನಲ್ಲಿ 25 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಹುಡುಕಲು ನ್ಯೂಯಾರ್ಕ್ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ಸ್ಥಳೀಯ ಕಾನೂನು ಜಾರಿ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ. ಹೈದರಾಬಾದ್ ನ ನಾಚಾರಂ ಮೂಲದ ಮೊಹಮ್ಮದ್ ಅಬ್ದುಲ್ ಅರ್ಫಾತ್ ಕ್ಲೀವ್ಲ್ಯಾಂಡ್ ವಿಶ್ವವಿದ್ಯಾಲಯದಿಂದ ಐಟಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಕಳೆದ ವರ್ಷ ಮೇ ತಿಂಗಳಲ್ಲಿ ಅಮೆರಿಕಕ್ಕೆ ಆಗಮಿಸಿದ್ದರು. ಕಳೆದ ಮಾರ್ಚ್ 7 ರಂದು ಅರ್ಫಾತ್ ತನ್ನೊಂದಿಗೆ ಕೊನೆಯದಾಗಿ ಮಾತನಾಡಿದ್ದ ಎಂದು ಆತನ ತಂದೆ ಮೊಹಮ್ಮದ್ ಸಲೀಂ ಹೇಳಿದ್ದಾರೆ. ಅಂದಿನಿಂದ ಅವರು ತಮ್ಮ ಕುಟುಂಬದೊಂದಿಗೆ ಸಂಪರ್ಕದಲ್ಲಿಲ್ಲ ಮತ್ತು ಅವರ ಮೊಬೈಲ್ -ಫೋನ್ ಸ್ವಿಚ್ ಆಫ್ ಆಗಿದೆ.ಭಾರತೀಯ ದೂತಾವಾಸವು ಅರ್ಫಾತ್ ಅವರ ಕುಟುಂಬ ಮತ್ತು ಯುಎಸ್ ನಲ್ಲಿರುವ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಎಕ್ಸ್ ಪೊಸ್ಟ್ನಲ್ಲಿ ತಿಳಿಸಿದೆ. ಆತನನ್ನು ಆದಷ್ಟು ಬೇಗ ಹುಡುಕಲು ನಾವು ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದ್ದೇವೆ. ಯುಎಸ್ನಲ್ಲಿರುವ ಅರ್ಫಾತ್ ನ ರೂಮ್ಮೇಟ್ಗಳು ಅವರ ತಂದೆಗೆ ಅವರು ಕ್ಲೀವ್ಲ್ಯಾಂಡ್ ಪೊಲೀಸರಿಗೆ ಕಾಣೆಯಾದವರ ದೂರನ್ನು…

Read More

ಬಾಲಿವುಡ್ ಕ್ವೀನ್ ನಟಿ ಕಂಗನಾ ರಣಾವತ್ ಆಧ್ಯತ್ಮದ ಬಗ್ಗೆ, ಆಧ್ಯಾತ್ಮಿಕ ಆಲೋಚನೆಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಕಂಗನಾಗೆ ಆಧ್ಯಾತ್ಮ ಗುರು ಜಗ್ಗಿ ವಾಸುದೇವ ಅವರ ಬಗ್ಗೆ ವಿಶೇಷ ಗೌರವ ಇದೆ. ಮಿದುಳಿನಲ್ಲಿ ರಕ್ತಸಾವ್ರ ಉಂಟಾಗಿದ್ದರಿಂದ ಸದ್ಗುರು ಇತ್ತೀಚೆಗೆ ಮಿದುಳಿನ ಸರ್ಜರಿಗೆ ಒಳಗಾದರು. ಈ ಸುದ್ದಿ ತಿಳಿದ ಕಂಗನಾ ಕುಗ್ಗಿ ಹೋದರಂತೆ. ತಾವು ಒಂದು ಕ್ಷಣ ಮಂಕಾಗಿದ್ದಾಗಿ ನಟಿ ಹೇಳಿಕೊಂಡಿದ್ದಾರೆ. ‘ಇಂದು ನಾನು ಸದ್ಗುರು ಅವರನ್ನು ಐಸಿಯು ಬೆಡ್ ಮೇಲೆ ಮಲಗಿರುವುದನ್ನು ನೋಡಿದೆ. ಈ ಮೊದಲು ಅವರು ನಮ್ಮಂತೆ ಮೂಳೆಗಳು, ರಕ್ತ, ಮಾಂಸ ಹೊಂದಿದ್ದಾರೆ ಎಂದು ನನಗೆ ಎಂದಿಗೂ ಅನಿಸಿರಲಿಲ್ಲ. ದೇವರೆ ಕುಸಿದಂತೆ ಭಾಸವಾಯಿತು. ಭೂಮಿ ಪಲ್ಲಟಗೊಂಡಿತೇನೋ ಅನಿಸಿತು. ಆಕಾಶವು ನನ್ನನ್ನು ಕೈಬಿಟ್ಟಿದೆ ಎಂದು ಭಾಸವಾಯಿತು. ನನ್ನ ತಲೆ ತಿರುಗುತ್ತಿದೆ ಎಂದು ನನಗೆ ಅನಿಸಿತು. ನಾನು ಈ ವಾಸ್ತವವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ ಎನಿಸಿತು. ಇದನ್ನು ನಂಬಬಾರದು ಎಂದುಕೊಂಡೆ. ನಂತರ ಕಣ್ಣೀರು ಬಂತು’ ಎಂದಿದ್ದಾರೆ ಕಂಗನಾ. ‘ನನ್ನ ನೋವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಬಯಸುತ್ತೇನೆ.…

Read More

ತಮಿಳು ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಮದುವೆಯಾದ ಬಳಿಕವು ಸಖತ್ ಡಿಮ್ಯಾಂಡ್ ಕ್ರಿಯೇಟ್ ಮಾಡಿದ್ದಾರೆ. ಸಂಸಾರ ಹಾಗೂ ಸಿನಿಮಾ ರಂಗವನ್ನು ಸರಿದೂಗಿಸಿಕೊಂಡು ಹೋಗುತ್ತಿರುವ ನಟಿ ಬಾಲಿವುಡ್ ಚಿತ್ರರಂಗದಲ್ಲೂ ಕಮಾಲ್ ಮಾಡಿದ್ದಾರೆ. ಇದೀಗ  ಜಸ್ಟ್ 50 ಸೆಕೆಂಡ್ ಜಾಹೀರಾತಿನಲ್ಲಿ ನಟಿಸಿದ್ದಕ್ಕೆ ದುಬಾರಿ ಸಂಭಾವನೆ ಪಡೆಯುವ ಮೂಲಕ ಸುದ್ದಿಯಾಗಿದ್ದಾರೆ. ಸಿನಿಮಾ ರಂಗ ಹಾಗೂ ಜಾಹೀರಾತು ಕ್ಷೇತ್ರದಲ್ಲೂ ನಯನತಾರಾಗೆ ಭಾರೀ ಬೇಡಿಕೆ ಇದೆ. ಶಾರುಖ್ ಖಾನ್ ಜೊತೆ ನಟಿಸಿದ್ದು ಆ ಸಿನಿಮಾ ಸೂಪರ್ ಹಿಟ್ ಆಗಿದೆ. ಆ ಬಳಿಕ ನಯನತಾರಾ ಬೇಡಿಕೆ ಮತ್ತಷ್ಟು ಜಾಸ್ತಿಯಾಗಿದ್ದು ಹಾಗಾಗಿ ಸಂಭಾವನೆ ಕೂಡ ಜಾಸ್ತಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಜಾಹೀರಾತಿನಲ್ಲಿ ನಯನತಾರಾ ನಟಿಸಿದ್ದಾರೆ. ಕೇವಲ 50 ಸೆಕೆಂಡ್ ಕಾಣಿಸಿಕೊಂಡಿದ್ದಕ್ಕೆ 5 ಕೋಟಿ ರೂ. ನಟಿ ಪಡೆದಿದ್ದಾರೆ ಎನ್ನಲಾಗಿದೆ. ಪ್ರತಿಷ್ಠಿತ ಸಂಸ್ಥೆ ಜಾಹೀರಾತಿನಲ್ಲಿ ನಟಿ ಕಾಣಿಸಿಕೊಂಡಿದ್ದು, 2 ದಿನಗಳ ಕಾಲ ಶೂಟಿಂಗ್ ನಡೆದಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ಚಿತ್ರೀಕರಣ ಮಾಡಲಾಗಿದೆ. ಅದಕ್ಕೆ 5 ಕೋಟಿ ಸಂಭಾವನೆ ಪಡೆಯುವ ಮೂಲಕ ಬೇಡಿಕೆ…

Read More

ಹಾಲಿವುಡ್ ಸಿನಿಮಾ ರಂಗದಲ್ಲಿ ಸೆಟಲ್ ಆಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್ ಜೋನಸ್ ಹಾಗೂ ಮಗಳು ಮಾಲ್ತಿ ಮೇರಿಯೊಂದಿಗೆ ಭಾರತಕ್ಕೆ ಆಗಮಿಸಿದ್ದಾರೆ. ಬಲ್ಗರಿ ಬ್ರ್ಯಾಂಡ್ ಅಂಬಾಸಿಡರ್ ಆಗಿರುವ ಪ್ರಿಯಾಂಕಾ ಚೋಪ್ರಾ ಅದೇ ಕಂಪನಿಯ ಇವೆಂಟ್​ನಲ್ಲಿ ಭಾಗಿಯಾಗಲು ಭಾರತಕ್ಕೆ ಬಂದಿದ್ದಾರೆ. ಇದೇ ವೇಳೆ ಅಯೋಧ್ಯೆಗೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ಪಾಪ್‌ಸ್ಟಾರ್ ನಿಕ್ ಜೋನಾಸ್ ಅವರು ಮಗಳು ಮಾಲ್ತಿ ಮೇರಿಯೊಂದಿಗೆ ಅಯೋಧ್ಯೆಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜನವರಿಯಲ್ಲಿ ನಡೆದ ಶ್ರೀರಾಮ ಲಲ್ಲಾ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಬಾಲಿವುಡ್​ನ ಖ್ಯಾತ ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ಪ್ರಿಯಾಂಕಾ ಜನವರಿಯಲ್ಲಿ ಭಾರತದಲ್ಲಿ ಇರಲಿಲ್ಲ. ಇತ್ತೀಚೆಗೆ ಇಶಾ ಅಂಬಾನಿ ಅವರು ಆಯೋಜಿಸಿದ್ದ ಹೋಳಿ ಪಾರ್ಟಿಯಲ್ಲಿ ಪ್ರಿಯಾಂಕಾ ಭಾಗವಹಿಸಿದ್ದು, ಪಾರ್ಟಿಯಲ್ಲಿ ದೇಸಿ ಗರ್ಲ್ ಎಲ್ಲರ ಗಮನ ಸೆಳೆದಿದ್ದಾರೆ. ಅಂದ ಹಾಗೆ ಸದ್ಯ ಬಾಲಿವುಡ್​ ತೊರೆದಿರುವ ನಟಿ ಹಾಲಿವುಡ್ ಸಿನಿಮಾದಲ್ಲಿ ಬಿಜಿಯಾಗಿದ್ದಾರೆ.  ಸದ್ಯ ಬಾಲಿವುಡ್​ಗೆ ಬೈ ಬೈ…

Read More

ಭಾರತದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರ ಜೀವನ ಆಧಾರಿತ ಸಿನಿಮಾ ತೆರೆಗೆ ಬರ್ತಿದ್ದು ಚಿತ್ರದಲ್ಲಿ ಇಳಯರಾಜನ ಪಾತ್ರದಲ್ಲಿ ನಟ ಧನುಷ್ ಕಾಣಿಸಿಕೊಳ್ತಿದ್ದಾರೆ. ಸದ್ಯ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿದ್ದು ಧನುಷ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡಿದ್ದಾರೆ.   ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಧನುಷ್‌, ಗೌರವಾನ್ವಿತ ಇಳಯರಾಜ ಸರ್‌ ಎಂದು ಬರೆದುಕೊಂಡಿದ್ದಾರೆ. ಧನುಷ್‌ ಅಭಿಯನದ ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಅರುಣ್ ಮಾಥೇಶ್ವರನ್ ಅವರೇ ಈ ಚಿತ್ರವನ್ನೂ ನಿರ್ದೇಶಿಸುತ್ತಿದ್ದಾರೆ. ಇಳಯರಾಜ ಅವರ ಜೀವನ ಹಾಗೂ ಅವರು ಸಾಗಿ ಬಂದ ಹಾದಿ, ಸಂಗೀತ ಕ್ಷೇತ್ರದಲ್ಲಿನ ಅವರ ಸಾಧನೆ ಸೇರಿದಂತೆ ಇನ್ನಿತರೆ ವಿಷಯಗಳ ಸುತ್ತ ಈ ಚಿತ್ರ ಹೆಣೆಯಲಾಗಿದೆ.  ಐದು ದಶಕಗಳ ಕಾಲ ಸುಮಾರು 7,000ಕ್ಕೂ ಅಧಿಕ ಹಾಡುಗಳನ್ನು ರಚಿಸಿರುವ ಇಳಯರಾಜ ಅವರು ತಮ್ಮ ವೃತ್ತಿ ಜೀವನದಲ್ಲಿ 20,000ಕ್ಕೂ ಅಧಿಕ ವೇದಿಕೆ ಕಾರ್ಯಕ್ರಮಗಳಲ್ಲಿ ಹಾಡುಗಳನ್ನು ಪ್ರಸ್ತುತಪಡಿಸಿದ್ದಾರೆ. ಅವರಿಗೆ ಪದ್ಮ ಭೂಷಣ ಹಾಗೂ ಪದ್ಮವಿಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ.…

Read More

ಶರಣ್, ಆಶಿಕಾ ರಂಗನಾಥ್ ಕಾಂಬಿನೇಷನ್ ನ ಅವತಾರ ಪುರುಷ ಸಿನಿಮಾದ ರಿಲೀಸ್ ಡೇಟ್ ಮುಂದೂಡಲಾಗಿದೆ. ಐಪಿಎಲ್ ಕ್ರಿಕೆಟ್ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರದ ರಿಲೀಸ್ ಡೇಟ್ ಮುಂದೂಡಲಾಗಿದ್ದು, ಹೊಸ ರಿಲೀಸ್‌ ಡೇಟ್‌ ಅನ್ನು ಚಿತ್ರತಂಡ ಅನೌನ್ಸ್‌ ಮಾಡಿದೆ.  ‘ಅವತಾರ ಪುರುಷ’ 2ನೇ ಭಾಗ ಇದೇ ಮಾರ್ಚ್ 22ರಂದು ರಾಜ್ಯಾದ್ಯಂತ ತೆರೆಗೆ ಬರಲು ರೆಡಿಯಾಗಿತ್ತು. ಆದರೆ ಮಾರ್ಚ್ 22ರಿಂದ ಐಪಿಎಲ್ ಪಂದ್ಯ ಪ್ರಾರಂಭವಾಗುತ್ತಿದೆ. ಈ ವೇಳೆ ಸಿನಿಮಾ ರಿಲೀಸ್ ಮಾಡಿದರೆ ಹೊಡೆತ ಬೀಳಲಿದೆ ಎಂಬ ಕಾರಣಕ್ಕೆ ಇದೀಗ ಚಿತ್ರತಂಡ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಿದೆ. ಸದ್ಯ ಚಿತ್ರ ಏಪ್ರಿಲ್ 5ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ನಟ ಶರಣ್- ನಟಿ ಆಶಿಕಾ ರಂಗನಾಥ್ ಜೋಡಿ, ಮತ್ತೆ ಶ್ರೀನಗರ ಕಿಟ್ಟಿಯ ಮಂತ್ರವಾದಿಯ ಪಾತ್ರ ಈ ಚಿತ್ರದಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ಶ್ರೀನಗರ ಕಿಟ್ಟಿ ಪಾತ್ರ ಮೊದಲ ಭಾಗಕ್ಕಿಂತ ಅವತಾರ ಪುರುಷ ಎರಡನೇ ಭಾಗದಲ್ಲಿ ಇನ್ನಷ್ಟು ಭಯಂಕರವಾಗಿಯೇ ಮೂಡಿ ಬಂದಿದೆ. ಈ ಸಿನಿಮಾದ ಹಾಡುಗಳು ಈಗಾಗಲೇ ಪ್ರೇಕ್ಷಕರ…

Read More

ಟಾಲಿವುಡ್‌ ಮೆಗಾಸ್ಟಾರ್‌ ಪುತ್ರ ರಾಮ್ ಚರಣ್ ಫ್ಯಾಮಿಲಿ ಜೊತೆ ಎಂಜಾಯ್ ಮಾಡ್ತಿದ್ದಾರೆ. ಸಿನಿಮಾಗಳ ಕೆಲಸಗಳ ಮಧ್ಯೆಯೇ ಬಿಡುವು ಮಾಡಿಕೊಂಡು ಕುಟುಂಬದ ಜೊತೆ ಕೆಲ ಸಮಯ ಕಳೆದಿದ್ದಾರೆ. ಬ್ಯುಸಿ ಶೆಡ್ಯೂಲ್‌ ಮಧ್ಯೆಯೇ ಕಡಲ ತೀರದ ಬಳಿ ಪತ್ನಿ ಉಪಾಸನಾ ಮತ್ತು ಮಗಳು ಕ್ಲಿಂಕಾರರೊಂದಿಗೆ ಎಂಜಾಯ್ ಮಾಡಿದ್ದಾರೆ. ರಾಮ್‌ ಚರಣ್‌ ತಮ್ಮ ಮುದ್ದಾದ ಕುಟುಂಬದ ಜೊತೆಗೆ ಬೀಚ್‌ ನ್ಲಿ ಮೋಜು-ಮಸ್ತಿ ಮಾಡಿದ್ದಾರೆ. ನಟ ರಾಮ್‌ಚರಣ್‌ ಹಾಗೂ ಉಪಾಸನಾ ಜೋಡಿ ಮದುವೆಯಾದ 11 ವರ್ಷಗಳ ನಂತರ ಪೋಷಕರಾಗಿದ್ದಾರೆ. ಕಳೆದ ವರ್ಷ ಈ ಜೋಡಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮಗುವಿಗೆ ಕ್ಲಿಂಕಾರ ಎಂದು ಹೆಸರಿಟ್ಟಿದ್ದಾರೆ. ಈ ದಂಪತಿ ತಮ್ಮ ಪುಟ್ಟ ಮಗಳ ಜೊತೆಗೆ ವೈಜಾಗ್‌ನ ಬೀಚ್‌ ಗೆ ತೆರೆಳಿ ಸಮಯ ಕಳೆದಿದ್ದಾರೆ. ಇದೇ ವೇಳೆ ರಾಮ್ ಚರಣ್ ಮಗಳಿಗೆ ನೀರಿನ ಅಲೆಗಳನ್ನು ತೋರಿಸಿ ಆಕೆಯ ಪಾದಗಳನ್ನು ನೀರಿನಲ್ಲಿ ಒದ್ದೆ ಮಾಡಿಸಿದ್ದಾರೆ.

Read More

ಟೀಂ ಇಂಡಿಯಾ ಕ್ರಿಕೆಟಿಗ, ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಪತ್ನಿ ಅಥಿಯಾ ಶೆಟ್ಟಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ಮಗಳು ಎಂದು ಎಲ್ಲರಿಗೂ ಗೊತ್ತು. ಅಳಿಯನ್ನು ಮಗ ಎಂದೇ ಭಾವಿಸಿರುವ ಸುನಿಲ್ ಶೆಟ್ಟಿ ಇದೀಗ ಏಕಾಏಕಿ ನೀನು ನನ್ನ ಮಗನೇ ಅಲ್ಲ ಎಂದಿದ್ದಾರೆ. ಕೆಎಲ್ ರಾಹುಲ್ ಅಳಿಯನಾದರೂ ಸುನಿಲ್ ಶೆಟ್ಟಿ ಜೊತೆಗೆ ತಂದೆ-ಮಗನಷ್ಟೇ ಉತ್ತಮ ಬಾಂಧವ್ಯವಿದೆ. ಸುನಿಲ್ ಶೆಟ್ಟಿ ಕೂಡಾ ರಾಹುಲ್ ನನ್ನ ಇನ್ನೊಬ್ಬ ಮಗ ಎಂದೇ ಹೇಳುತ್ತಾರೆ. ಆದರೆ ಇದೀಗ ಸುನಿಲ್ ಶೆಟ್ಟಿ ತಮ್ಮ ವರಸೆ ಬದಲಿಸಿದ್ದು, ಸದ್ಯಕ್ಕೆ ನೀನು ನನ್ನ ಮಗನಲ್ಲ ಎಂದು ಗರಂ ಆಗಿದ್ದಾರೆ. ಅಷ್ಟಕ್ಕೂ ಈ ರೀತಿ ಎಚ್ಚರಿಕೆ ಕೊಟ್ಟಿದ್ದು ಜಾಹೀರಾತೊಂದಕ್ಕಾಗಿ. ಐಪಿಎಲ್ ನಲ್ಲಿ ಸುನಿಲ್ ಶೆಟ್ಟಿ ಮುಂಬೈ ಇಂಡಿಯನ್ಸ್ ತಂಡವನ್ನು ಬೆಂಬಲಿಸುತ್ತಿದ್ದಾರೆ. ಆದರೆ ಅಳಿಯ ರಾಹುಲ್ ಲಕ್ನೋ ತಂಡದ ನಾಯಕ. ಹೀಗಾಗಿ ಮುಂಬೈ ಆಟಗಾರ ರೋಹಿತ್ ಶರ್ಮಾ ಸೇರಿದಂತೆ ತಮಾಷೆಯ ಜಾಹೀರಾತೊಂದನ್ನು ಹೊರತರಲಾಗಿದೆ. ಈ ಜಾಹೀರಾತಿನಲ್ಲಿ ರೆಸ್ಟೋರೆಂಟ್ ನಲ್ಲಿ ಸುನಿಲ್ ಶೆಟ್ಟಿ…

Read More

ರಿಷಬ್‌ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ-ಒಂದು ದಂತಕಥೆ’ಯ ಮೊದಲ ಅಧ್ಯಾಯ ರಿಲೀಸ್ ಗೂ ಮೊದಲೇ ಭರ್ಜರಿ ಕಲೆಕ್ಷನ್ ಮಾಡಿದೆ. ದೊಡ್ಡ ಮೊತ್ತಕ್ಕೆ ಪ್ರೈಂ ವಿಡಿಯೊ ಈ ಸಿನಿಮಾವನ್ನು ಖರೀದಿಸಿದೆ. ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾನು ಖರೀದಿಸಿದ 29 ಸಿನಿಮಾಗಳ ಶೀರ್ಷಿಕೆಯನ್ನು ಪ್ರೈಂ ಘೋಷಿಸಿತು. ರಿಷಬ್‌ ಶೆಟ್ಟಿ ಹಾಗೂ ಚಿತ್ರದ ನಿರ್ಮಾಪಕ ವಿಜಯ್‌ ಕಿರಗಂದೂರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವರಾಹ ರೂಪಂ ಹಾಡಿಗೆ ಯಕ್ಷಗಾನ ಕಲಾವಿದರು ಪ್ರದರ್ಶನ ನೀಡಿದ ಬಳಿಕ, ಪ್ರೈಂ ತಂಡವು ‘ಕಾಂತಾರ-ಒಂದು ದಂತಕಥೆ’ ಅಧ್ಯಾಯ 1ರ ಬಿಡುಗಡೆಯನ್ನು ಘೋಷಿಸಿತು. ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಹೊಸ ಸಿನಿಮಾ ‘ಕಾಂತಾರ-ಒಂದು ದಂತಕಥೆ’ಯ ಪ್ರೀಕ್ವೆಲ್‌ ಆಗಿದ್ದು, ಕದಂಬರ ಕಾಲದಲ್ಲಿ ನಡೆಯುವ ಕಥೆಯನ್ನು ಹೊಂದಿದೆ. ಬಲ್ಲ ಮಾಹಿತಿಗಳ ಪ್ರಕಾರ ‘ಕಾಂತಾರ’: ಚಾಪ್ಟರ್- 1 ಓಟಿಟಿ ರೈಟ್ಸ್ ಅಂದಾಜು 150 ಕೋಟಿ ರೂ.ಗೆ ಮಾರಾಟವಾಗಿದೆ ಎನ್ನಲಾಗುತ್ತಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇದು ದಾಖಲೆ ಎನ್ನಬಹುದು. ಪ್ರೈ ವೀಡಿಯೋ ‘ಕಾಂತಾರ’ ಪ್ರೀಕ್ವೆಲ್ 5 ಭಾಷೆಗಳ ಸ್ಟ್ರೀಮಿಂಗ್ ರೈಟ್ಸ್‌…

Read More