Author: Author AIN

ಬೀದರ್‌ : ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳಿದ್ದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ಜಿಲ್ಲೆಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. https://ainlivenews.com/six-people-from-bidar-who-had-gone-to-mahakumbha-died/ ಬೀದರ‌ ನಗರದ ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿಯೊಂದರ ನಡುವೆ ಇಂದು ಬೆಳಗಿನ ಜಾವ ಡಿಕ್ಕಿಯಾಗಿ ೫ ಜನರು ಮೃತಪಟ್ಟು, ಇತರ ಏಳು ಜನರು ಗಾಯಗೊಂಡಿದ್ದಾರೆ. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥೀವ ಶರೀರವನ್ನು ಬೀದರ್ ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ಈಶ್ವರ ಖಂಡ್ರೆ ಮಾಹಿತಿ ನೀಡಿದರು. ಈ ಸಂಕಷ್ಟದ ಸಮಯದಲ್ಲಿ ಕುಟುಂಬಸ್ಥರ ರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿದರು.

Read More

ಮೈಸೂರು : ತಮಗೆ ಪಕ್ಷದಿಂದ ಬಂದಿರುವ ನೋಟಿಸ್‌ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉತ್ತರ ನೀಡಿದ್ದಾರೆ. ಇದೀಗ ಹೈಕಮಾಂಡ್‌ ಗೆ ಉತ್ತರ ಕೊಟ್ಟಿರೋ ಫೈಲ್‌ ಪ್ರತಿಯನ್ನು ಚಾಮುಂಡಿ ಸನ್ನಿಧಿಯಲ್ಲಿಟ್ಟು ಪೂಜೆ ಮಾಡಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. https://www.youtube.com/watch?v=tJ0TwbXO6Jg ಇಂದು ಯತ್ನಾಳ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಈ ವೇಳೆ ಹೈಕಮಾಂಡ್‌ ನೋಟಿಸ್ ಗೆ ಉತ್ತರ ಕೊಟ್ಟ ಪ್ರತಿಗೆ ಪೂಜೆ  ಸಲ್ಲಿಸಿದ್ದಾರೆ, ವಿಜಯೇಂದ್ರ ವಿರುದ್ಧ ಮತ್ತಷ್ಟು ದಾಖಲೆ ಇಟ್ಟು ಪೂಜೆ ಮಾಡಿಸಿದ್ದರಾ ಅನ್ನೋ ಅನುಮಾನವೂ ಶುರುವಾಗಿದೆ. https://www.youtube.com/watch?v=NoxmVNPFRdc ಇನ್ನೂ ಚಾಮುಂಡಿ ಬೆಟ್ಟದಲ್ಲಿ ಯತ್ನಾಳ್ ಎದುರು ವಿಜಯೇಂದ್ರ ಪರ ಅಭಿಮಾನಿಗಳು  ಜೈ ವಿಜಯೇಂದ್ರ , ಜೈ ಬಿಎಸ್ ವೈ ಎಂದು ಘೋಷಣೆ ಕೂಗಿದ್ದಾರೆ. ಜೈ ವಿಜಯೇಂದ್ರ ಎನ್ನುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಯತ್ನಾಳ್‌ ಅಲ್ಲಿಂದ ಹೊರಟು ಹೋಗಿದ್ದಾರೆ.  

Read More

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್​ವುಡ್​ನ ಹಿರಿಯ ನಿರ್ದೇಶಕಎಸ್. ಉಮೇಶ್ ಅವರು ನಿಧನ ಹೊಂದಿದ್ದಾರೆ. ಬನಶಂಕರಿಯ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ. ದಿವಂಗತ ನಟ ಕಾಶಿನಾಥ್ ಹಾಗೂ ಭವ್ಯ ಅವರು ಅಭಿನಯ ಮಾಡಿದ್ದ ಅವಳೇ ನನ್ನ ಹೆಂಡತಿ ಸಿನಿಮಾವನ್ನು ನಿರ್ಮಾಪಕ ಕೆ.ಪ್ರಭಾಕರ್ ಜೊತೆ ಸೇರಿ ಎಸ್​.ಉಮೇಶ್ ಅವರು ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಮೂಲಕವೇ ಇವರು ಹೆಚ್ಚು ಪ್ರಖ್ಯಾತಿ ಗಳಿಸಿದರು. ಈ ಸಿನಿಮಾ ದೊಡ್ಡ ಹಿಟ್ ಆಗಿದ್ದಲ್ಲದೆ, ತಮಿಳು, ತೆಲುಗು, ಹಿಂದಿಗೂ ರಿಮೇಕ್ ಆಗಿತ್ತು. ಇದಾದ ಮೇಲೆ ಪ್ರೇಮ ಪರೀಕ್ಷೆ, ಬನ್ನಿ ಒಂದ್ಸಲ ನೋಡಿ, ಸಿಡಿದೆದ್ದ ಗಂಡು, ದಾಯಾದಿ, ತುಂಬಿದ ಮನೆ ಹೀಗೆ ಕನ್ನಡ ಸಿನಿಮಾ ಇಂಡಸ್ಟ್ರಿಗೆ 24 ಚಿತ್ರಗಳನ್ನು ನೀಡಿದ್ದಾರೆ. https://ainlivenews.com/just-eat-papaya-on-an-empty-stomach-and-sugar-indigestion-and-acidity-problems-will-disappear/ ಕನ್ನಡ ಮಾತ್ರವಲ್ಲದೆ, ತಮಿಳಲ್ಲೂ ಫೇಮಸ್ ಆಗಿದ್ದ ಉಮೇಶ್‌ ಅವರು, ವೃತ್ತಿ ಜೀವನದಲ್ಲಿ ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಆದರೆ, ಈಚೆಗೆ ಅವರಿಗೆ ಆರೋಗ್ಯ ಕೈ ಕೊಟ್ಟಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

Read More

ಕೋಲಾರ : ಚುಚ್ಚು ಮದ್ದು ನೀಡಿದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಂದಲ್ಲಿ ಘಟನೆ ನಡೆದಿದೆ. ವಿನೋದ್ ( 23 ) ಮೃತ ಯುವಕ. https://ainlivenews.com/a-young-man-is-stabbed-with-a-knife-for-a-trivial-reason-the-assailants-were-tied-to-a-pole-and-beaten/ ಜ್ವರದಿಂದ ಬಳಲುತ್ತಿದ್ದ ವಿನೋದ್‌ ಕ್ಲಿನಿಕ್‌ಗೆ ಹೋಗಿ ಚಿಕಿತ್ಸೆ ಪಡೆದಿದ್ದ. ವಕ್ಕಲೇರಿಯಲ್ಲಿರುವ ಸನ್ ರೈಸ್ ಕ್ಲಿನಿಕ್ ನ ವೈದ್ಯ ಡಾ. ರಫೀಕ್ ನೀಡಿದ್ದ ಇಂಜೆಕ್ಷನ್‌ ನೀಡಿದ್ದರು. ಆದರೆ ಇಂಜೆಕ್ಷನ್‌ ಪಡೆದ ಕೆಲವೇ ಗಂಟೆಗಳಲ್ಲಿ ಯುವಕ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಾಗಿ ಯುವಕ ಮೃತಪಟ್ಟಿರುವುದಾಗಿ ಪೋಷಕರು ಆರೋಪಿಸಿದ್ದಾರೆ. ವೈದ್ಯರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಪಟ್ಟಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರಿಪೋರ್ಟ್ ಬಂದ ಬಳಿಕವಷ್ಟೇ ಅಸಲಿ ಸತ್ಯಾಂಶ ತಿಳಿದು ಬರಬೇಕಿದೆ https://www.youtube.com/watch?v=PYVBgMRCmdM

Read More

ಬೆಂಗಳೂರು: ಶಿವಕುಮಾರ್ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋದರೆ ತಪ್ಪೇನಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ನನ್ನ ನೇತೃತ್ವದಲ್ಲೇ ಚುನಾವಣೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ವಿಚಾರವಾಗಿ ಮಾತನಾಡಿ, ಅದರಲ್ಲಿ ತಪ್ಪೇನಿದೆ? ಎಂದಷ್ಟೇ ಹೇಳಿದರು. ರಂಜಾನ್ ಇಫ್ತಾರ್‌ಗೆ ರಾಜ್ಯದ ಮುಸ್ಲಿಮ್ ನೌಕರರಿಗೆ ಸಮಯ ವಿನಾಯಿತಿ ನೀಡುವ ವಿಚಾರವಾಗಿ ಮಾತನಾಡಿ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಸರ್ಕಾರ ಅದನ್ನ ತೀರ್ಮಾನ ಮಾಡಲಿದೆ ಎಂದರು. https://ainlivenews.com/just-eat-papaya-on-an-empty-stomach-and-sugar-indigestion-and-acidity-problems-will-disappear/ ಇನ್ನು ಇದೇ ಸಂದರ್ಭದಲ್ಲಿ ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿ, ಅದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರವಾಗಿದೆ. ಪುನಾರಚನೆ ಮಾಡೋದಾದ್ರೆ ಅವರಿಗೆ ಬಿಟ್ಟಿದ್ದು. ಇದರ ಬಗ್ಗೆ ನಾನೇನು ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ತಿಳಿಸಿದರು.

Read More

ಇತ್ತೀಚೆಗೆ ಮೋದಿ ಅಮೆರಿಕಾ ಪ್ರವಾಸ ಕೈಗೊಂಡಿದ್ದು ಈ ವೇಳೆ ಟೆಸ್ಲಾ ಅಧ್ಯಕ್ಷ ಎಲೋನ್‌ ಮಸ್ಕ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದೀಗ ಭಾರತದಲ್ಲಿ ಟೆಸ್ಲಾ ವಿದ್ಯುತ್‌ಚಾಲಿತ ಕಾರು ತಯಾರಿಕಾ ಘಟಕ ಸ್ಥಾಪನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಪಸ್ವರ ಎತ್ತಿದ್ದು, ‘ಇದು ತುಂಬಾ ಅನ್ಯಾಯ’ ಎಂದಿದ್ದಾರೆ. ಭಾರತ ವಿಧಿಸುವ ಸುಂಕಗಳನ್ನು ತಪ್ಪಿಸಲು ಭಾರತದಲ್ಲಿ ಟೆಸ್ಲಾ ಘಟಕ ನಿರ್ಮಿಸುವ ಇವಿ ತಯಾರಕರ ಯಾವುದೇ ಸಂಭಾವ್ಯ ಯೋಜನೆಗಳು ‘ತುಂಬಾ ಅನ್ಯಾಯ’ ಎಂದು ಟ್ರಂಪ್ ಹೇಳಿದ್ದಾರೆ.  ‘ವಿಶ್ವದ ಎಲ್ಲಾ ರಾಷ್ಟ್ರಗಳೂ ಅಮೆರಿಕದಿಂದ ಪ್ರಯೋಜನ ಪಡೆಯುತ್ತಿವೆ. ಆದರೂ ನಮ್ಮ ಸರಕುಗಳ ಮೇಲೆ ದುಬಾರಿ ಸುಂಕ ವಿಧಿಸಲಾಗುತ್ತಿದೆ. ಭಾರತ ಕೂಡ ಇದರಿಂದ ಹೊರತಾಗಿಲ್ಲ. ಹೆಚ್ಚು ಸುಂಕ ವಿಧಿಸುವ ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪಿಸಿ ಕಾರುಗಳನ್ನು ಮಾರಾಟ ಮಾಡಲು ಸಾಧ್ಯವೇ’ ಎಂದು ಟ್ರಂಪ್‌ ಫಾಕ್ಸ್‌ ನ್ಯೂಸ್‌ಗೆ ಎಲಾನ್‌ ಮಸ್ಕ್‌ ಜೊತೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಭಾರತ ಅತಿಹೆಚ್ಚು ಪ್ರಮಾಣದಲ್ಲಿ ಸುಂಕ ವಿಧಿಸುತ್ತಿದೆ. ಹೀಗಾಗಿ, ನಾವು ಕೂಡ ಪ್ರತಿಯಾಗಿ ಅಷ್ಟೇ ಸುಂಕವನ್ನು ವಿಧಿಸುತ್ತೇವೆ…

Read More

ಬೆಂಗಳೂರು: ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಕ್ಕೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಬಾರಿಯ ಎಸ್‌ಎಸ್‌ಎಲ್‌ಸಿ  ಉತ್ತೀರ್ಣಕ್ಕೆ ಕನಿಷ್ಠ 35 ಅಂಕದ ಬದಲು 33ಕ್ಕೆ ಇಳಿಸಿ ಎಂದು ಸರ್ಕಾರಕ್ಕೆ ಖಾಸಗಿ ಶಾಲೆಗಳು ಒತ್ತಾಯ ಮಾಡಿವೆ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಖಾಸಗಿ ಶಾಲೆಗಳ ಒಕ್ಕೂಟ ಕನಿಷ್ಠ 35 ಅಂಕಗಳ ಬದಲಾಗಿ ಈ ವರ್ಷದಿಂದಲೇ ಪಾಸ್‌ ಮಾನದಂಡವನ್ನು 33 ಅಂಕಗಳಿಗೆ ಬದಲಾವಣೆ ಮಾಡುವಂತೆ ಒತ್ತಾಯಿಸಿದೆ. https://ainlivenews.com/just-eat-papaya-on-an-empty-stomach-and-sugar-indigestion-and-acidity-problems-will-disappear/ ಸಿಬಿಎಸ್‌ಸಿ, ಐಸಿಎಸ್‌ಸಿ ಪಠ್ಯಕ್ರಮದಲ್ಲಿ ಪಾಸ್ ಅಂಕ 33 ಇದೆ. ಇದೇ ಮಾದರಿಯಲ್ಲಿ ರಾಜ್ಯ ಪಠ್ಯಕ್ರಮ ಮತ್ತು ಕನ್ನಡ ಮಾಧ್ಯಮ ಶಾಲೆಗಳಲ್ಲಿ 33 ಅಂಕಗಳಿಗೆ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು ಎಂದು ಹೇಳಿದೆ. ಈಗಾಗಲೇ 33 ಅಂಕದ ಮಾದರಿ ಜಾರಿಗೆ ಶಿಕ್ಷಣ ಇಲಾಖೆಯ ಜೊತೆ ಖಾಸಗಿ ಶಾಲೆಗಳು ಸಭೆ ಮಾಡಿದ್ದವು. ಆದರೆ ಈವರೆಗೂ ಶಿಕ್ಷಣ ಇಲಾಖೆ ಈ ಪ್ರಸ್ತಾಪವನ್ನು ಪರಿಗಣನೆ ಮಾಡಿರಲಿಲ್ಲ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಮನವಿ ಮಾಡಿದೆ.…

Read More

ಬೆಂಗಳೂರು: ನನ್ನ ಬಗ್ಗೆ ಮಾತನಾಡಿದರೆ ನಾನೇ ಉತ್ತರ ಕೊಡುತ್ತೇನೆ ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈಗ ಪಕ್ಷದಲ್ಲಿ ಕೆಲಸ ಇದೆ. ಪ್ರತಿ ದಿನ ಇದರ ಬಗ್ಗೆಯೇ ಮಾತನಾಡಲು ಆಗಲ್ಲ. ನನ್ನ ಬಗ್ಗೆ ಮಾತನಾಡಿದರೆ ನಾನೇ ಉತ್ತರ ಕೊಡುತ್ತೇನೆ ಎಂದರು. https://ainlivenews.com/just-eat-papaya-on-an-empty-stomach-and-sugar-indigestion-and-acidity-problems-will-disappear/ ಬಸನಗೌಡ ಪಾಟೀಲ್ ಯತ್ನಾಳ್ ಏಕವಚನ ಬಳಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಹಿರಿಯರು ಇದ್ದಾರೆ. ಏಕವಚನದಲ್ಲಿ ಮಾತನಾಡಿದ್ದಾರೋ, ಇನ್ನೊಂದು ಭಾಷೆಯಲ್ಲಿ ಮಾತನಾಡಿದ್ದಾರೋ ತಲೆ ಕೆಡಿಸಿಕೊಳ್ಳಲ್ಲ. ನಮಗೆ ಪಕ್ಷದಲ್ಲಿ ಕೆಲಸ ಮಾಡಲು ಸಾಕಷ್ಟು ಇದೆ ಎಂದು ಹೇಳಿದರು. 

Read More

ಧಾರವಾಡ : ಸಾಮಾಜಿಕ ಅಸಮಾನತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಅದನ್ನು ಸಂಪೂರ್ಣವಾಗಿ ತೊಲಗಿಸಲು ಪ್ರತಿ ವರ್ಷ ಫೆ.೨೦ರಂದು ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಆಚರಿಸಲಾಗುತ್ತದೆ ಎಂದು ಹಿರಿಯ ನ್ಯಾಯಾಧೀಶರಾದ ರವೀಂದ್ರ ಹೋನಲೆ ಹೇಳಿದರು. ಪಟ್ಟಣದ ನೌಕರರ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಹಾಗೂ ತಾಲೂಕ ಸಮಾಜ ಕಲ್ಯಾಣ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಸಾಮಾಜಿಕ ನ್ಯಾಯ ದಿನ ಮತ್ತು ಅಸ್ಪೃಶ್ಯತಾ ನಿವಾರಣ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಭಾರತದಲ್ಲಿ ಸಾಮಾಜಿಕ ನ್ಯಾಯ ಎಂಬ ಕಲ್ಪನೆ ಮತ್ತು ಹೋರಾಟ ಬಾಬಾಸಾಹೇಬ ಅಂಬೇಡ್ಕರ್ ಅವರಿಂದ ಆರಂಭವಾಯಿತು ಎಂದು ಹೇಳಿದರೂ ಅದು ರಾಜಕೀಯ ಮತ್ತು ಕಾನೂನಾತ್ಮಕ ನೆಲೆಯಲ್ಲಿ ನಡೆದಂತಹದು. ಆದರೆ, ೧೨ನೇ ಶತಮಾನದಲ್ಲಿಯೇ ಬಸವೇಶ್ವರರು ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗಾಗಿ ಕ್ರಾಂತಿಯನ್ನೇ ಮಾಡಿದರು ಎಂದರು. ನ್ಯಾಯಾಧೀಶರಾದ ಗಣೇಶ್ ಎನ್ ಮಾತನಾಡಿ ಅಸ್ಪೃಶ್ಯತೆ ಆಚರಣೆ ಕಾನೂನುಬಾಹಿರ ಹಾಗೂ ಸಂವಿಧಾನ ವಿರೋಧಿ ಕೃತ್ಯ. ಕಾನೂನು ರೀತಿಯಿಂದ ಶಿಕ್ಷಾರ್ಹ ಅಪರಾಧ.…

Read More

ಮಂಡ್ಯ : ಯುವಕನಿಗೆ ಚಾಕುವಿನಿಂದ ಇರಿದ ಮೂವರನ್ನ ಜನರೇ ಹಿಡಿದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಂಡ್ಯದ ನಾಗಮಂಗಲದ ಸಾಮ್ಕಳ್ಳಿ ಗ್ರಾಮದಲ್ಲಿ ನಡೆದಿದೆ. ಬಚ್ಚಿಕೊಪ್ಪಲು ಗ್ರಾಮದ ಕುಮಾರ್ ಎಂಬ ಯುವಕನಿಗೆ ಇರಿಯಲಾಗಿದೆ. ಈ ಕೃತ್ಯ ಎಸಗಿದ ಪಾಂಡವಪುರದ ಕಾಳೇನಹಳ್ಳಿಯ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಕಂಬಕ್ಕೆ ಕಟ್ಟಿ, ಥಳಿಸಿದ್ದಾರೆ. https://www.youtube.com/watch?v=IKnpGlEhocg ಮೃತ ಕುಮಾರ್‌ ಮತ್ತು ಹಲ್ಲೆ ನಡೆಸಿದ್ದ ಎಲ್ಲರೂ ಸಹ ಗೂಡ್ಸ್ ಆಟೋ ಚಾಲಕರಾಗಿದ್ದು, ಗೂಡ್ಸ್ ಆಟೋ ಓವರ್‌ ಟೇಕ್ ಮಾಡಿದ ವಿಚಾರಕ್ಕೆ ಜಗಳವುಂಟಾಗಿದೆ. ಈ ವೆಳೇ ಕುಮಾರ್‌ ಗೆ ಚಾಕುವಿನಿಂದ ಇರಿಯಲಾಗಿದೆ. ನಾಲ್ಕೈದು ಕಡೆ ಚುಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಕುಮಾರ್ರನ್ನು ಬಿಜಿಎಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕುಮಾರ್‌ ಸಾವನ್ನಪ್ಪಿದ್ದಾನೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More