Author: Author AIN

ಬೆಂಗಳೂರು: ಮಹಿಳೆಯರಿಗೆ ಸಮಾಜದಲ್ಲಿ ಸೂಕ್ತ ಸ್ಥಾನಮಾನಗಳಿದ್ದರೂ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಏರುತ್ತಲೇ ಇವೆ. ಇದೀಗ  ಸಿಲಕಾನ್ ಸಿಟಿ ಬೆಂಗಳೂರಿನಲ್ಲಿ ಪರಿಚಯಸ್ಥ ಮಹಿಳೆ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮಧ್ಯರಾತ್ರಿ ವೇಳೆ ಕಾಮುಕರು ಮಹಿಳೆಯೋರ್ವಳನ್ನು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಅಜಿತ್ , ವಿಶ್ವಾಸ್, ಶಿವು ಪೊಲೀಸರ ವಶಕ್ಕೆ ಪಡೆದಿದ್ದು, https://ainlivenews.com/do-you-need-a-loan-if-so-just-show-your-pan-card-and-you-will-get-rs-5000/ ಬೆಂಗಳೂರಿನ ಕೋರಮಂಗಲ ಸಮೀಪ ಇರುವ ಖಾಸಗಿ ಕಾಲೇಜು ಬಳಿ ಮಹಿಳೆಯೋರ್ವಳು ಬರುತ್ತಿದ್ದಾಗ, ಅಲ್ಲೇ ಹೋಟೆಲ್ ನಲ್ಲಿ ಕೆಲಸ ಮಾಡುವ ನಾಲ್ವರು ಸಿಬ್ಬಂದಿಗಳು ಮಹಿಳೆಯನ್ನು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಸುಮಾರು ಮಧ್ಯರಾತ್ರಿ 12:30 ಗಂಟೆಗೆ ನಡೆದಿದೆ ಎನ್ನಲಾಗಿದ್ದು, ಮದ್ಯಪಾನ ಮಾಡಿ ಖಾಸಗಿ ರೂಮಿಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಮಹಿಳೆಯನ್ನ ಅತ್ಯಾಚಾರ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದು, ತಕ್ಷಣ 112 ಕರೆ ಮಾಡಿ ದೂರು ನೀಡಿದ್ದಾಳೆ ಎನ್ನಲಾಗಿದೆ. ಸದ್ಯ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ…

Read More

ಟೀಮ್ ಇಂಡಿಯಾ ಆಟಗಾರ ಶಿಖರ್ ಧವನ್ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಅವರು ತಮ್ಮ ನಡವಳಿಕೆಯಿಂದ ಅಭಿಮಾನಿಗಳನ್ನು ರಂಜಿಸುತ್ತಲೇ ಇರುತ್ತಾರೆ. ಅಭಿಮಾನಿಗಳು ಕೂಡ ಅವರನ್ನು ನೋಡಲು ಇಷ್ಟಪಡುತ್ತಾರೆ. ಶಿಖರ್ ಧವನ್ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದರೊಂದಿಗೆ, ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗನ ತಮಾಷೆಯ ರೀಲ್‌ಗಳಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ, ಭಾರತ ಮತ್ತು ಬಾಂಗ್ಲಾದೇಶ ನಡುವಿನ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯ ಗುರುವಾರ ನಡೆದಿರುವುದು ತಿಳಿದುಬಂದಿದೆ. https://ainlivenews.com/do-you-need-a-loan-if-so-just-show-your-pan-card-and-you-will-get-rs-5000/ ಶಿಖರ್ ಧವನ್ ದುಬೈನಲ್ಲಿ ಸದ್ದು ಮಾಡಿದರು.. ಅಲ್ಲಿ ಅವರು ತಮ್ಮ ಹಳೆಯ ಸ್ನೇಹಿತರೊಂದಿಗೆ ತುಂಬಾ ಮಜಾ ಮಾಡಿದರು. ಎರಡನೇ ಪಂದ್ಯದಲ್ಲಿ, ಗಬ್ಬರ್ ಜೊತೆ ಸ್ಟ್ಯಾಂಡ್‌ನಲ್ಲಿ ಒಬ್ಬ ನಿಗೂಢ ಹುಡುಗಿ ಕೂಡ ಕಾಣಿಸಿಕೊಂಡಳು. ಆಕೆಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಶಿಖರ್ ಧವನ್ ಮತ್ತು ನಿಗೂಢ ಹುಡುಗಿಯ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಭಾರತ-ಬಾಂಗ್ಲಾದೇಶ ಪಂದ್ಯದ ವೇಳೆ ಕಂಡುಬಂದ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ…

Read More

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಮಂಡನೆಗೆ ದಿನಗಣನೆ ಆರಂಭವಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ ಮಂಡಿಸಿಲಿದ್ದು, ಇಂದು ಬಜೆಟ್‌ ಪೂರ್ವಭಾವಿ ಸಭೆ ನಡೆಸಲಾಯಿತು. 2025ರ ಆಯವ್ಯಯ ಪೂರ್ವಭಾವಿ ಚರ್ಚೆಯಲ್ಲಿ ಪರಿಷತ್‌ ಶಾಸಕರಾದ ಟಿ.ಎ.ಶರವಣ ಅವರು ಭಾಗಿಯಾಗಿದ್ದು, ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಚರ್ಚೆಯಲ್ಲಿ ಭಾಗಿಯಾದ ಕರ್ನಾಟಕ ಜ್ಯುವೆಲರಿ ಅಸೋಸಿಯೇಶನ್ ಅಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರು, ಕರ್ನಾಟಕ ಆಭರಣ ವ್ಯಾಪಾರಿಗಳ ಸಂಘದ ಪರವಾಗಿ ಬಹಳ ದಿನಗಳಿಂದ ಬಾಕಿ ಉಳಿದಿರುವ ಕರ್ನಾಟಕ ಮೆಗಾ ಜ್ಯುವೆಲ್ಲರಿ ಪಾರ್ಕ್ ಯೋಜನೆ ಅನುಷ್ಠಾನ ಸೇರಿದಂತೆ ಹಲವು ಬೇಡಿಕೆಗಳನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. https://ainlivenews.com/parishad-mla-ta-sharavana-takes-holy-bath-at-mahakumbh-mela-avadhoot-vinay-guruji-participates/ ಸಭೆಯಲ್ಲಿ ಮಾತನಾಡಿದ ಅವರು ಹಿಂದಿನ ಬಜೆಟ್‌ನಲ್ಲಿ 200 ಕೋಟಿ ವೆಚ್ಚದಲ್ಲಿ ಕರ್ನಾಟಕ ಮೆಗಾ ಜ್ಯುವೆಲ್ಲರಿ ಪಾರ್ಕ್‌ ನಿರ್ಮಾಣದ ಘೋಷಣೆ ಮಾಡಿತ್ತು. ಆದರೆ ಮೂರು ವರ್ಷಗಳಾದರೂ ಆಗಿಲ್ಲ. ಕರ್ನಾಟಕ ಜ್ಯುವೆಲ್ಲರಿ ಮ್ಯಾನುಫ್ಯಾಕ್ಚರಿಂಗ್‌ನಲ್ಲಿ ಪ್ರಖ್ಯಾತಿ…

Read More

ನವದೆಹಲಿ: ನಾವು ಜಾಗತಿಕ ಚಿಂತನೆ ಮತ್ತು ಸ್ಥಳೀಯ ಪಾಲನೆಯೊಂದಿಗೆ ಮುಂದುವರಿಯಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ಭಾರತ್ ಮಂಟಪದಲ್ಲಿ ಆಯೋಜಿಸಿದ್ದ ಸ್ಕೂಲ್ ಆಫ್ ಅಲ್ಟಿಮೇಟ್ ಲೀಡರ್‌ಶಿಪ್ (ಸೋಲ್) ಲೀಡರ್‌ಶಿಪ್ ಕಾನ್ಕ್ಲೇವ್‌ನ ಮೊದಲ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಭಾರತದ ಪ್ರಭಾವವು ಎಲ್ಲಾ ವಲಯಗಳಲ್ಲಿ ಹಲವು ಪಟ್ಟು ಹೆಚ್ಚಾಗುತ್ತದೆ. https://ainlivenews.com/do-you-need-a-loan-if-so-just-show-your-pan-card-and-you-will-get-rs-5000/ ಒಂದು ರೀತಿಯಲ್ಲಿ ಭಾರತದ ಸಂಪೂರ್ಣ ದೃಷ್ಟಿಕೋನ ಮತ್ತು ಭವಿಷ್ಯವು ಬಲವಾದ ನಾಯಕತ್ವ ಪೀಳಿಗೆಯ ಮೇಲೆ ಅವಲಂಬಿತವಾಗಿರುತ್ತದೆ, ಆದ್ದರಿಂದ ನಾವು ಜಾಗತಿಕ ಚಿಂತನೆ ಮತ್ತು ಸ್ಥಳೀಯ ಪಾಲನೆಯೊಂದಿಗೆ ಮುಂದುವರಿಯಬೇಕು ಎಂದು ಅಭಿಪ್ರಾಯಪಟ್ಟರು. ಭೂತಾನಿನ ಪ್ರಧಾನಿ ದಾಸೋ ತ್ಸೆರಿಂಗ್ ಟೋಗ್ಬೇ ಮಾತನಾಡಿ, ಈ ಎರಡು ದಿನಗಳ ಸಮ್ಮೇಳನದಲ್ಲಿ ರಾಜಕೀಯ, ಕ್ರೀಡೆ, ಕಲೆ, ಮಾಧ್ಯಮ, ಆಧ್ಯಾತ್ಮಿಕತೆ, ಸಾರ್ವಜನಿಕ ನೀತಿ, ವ್ಯವಹಾರ ಮತ್ತು ಸಾಮಾಜಿಕ ಕ್ಷೇತ್ರದ ವ್ಯಕ್ತಿಗಳು ತಮ್ಮ ಯಶೋಗಾಥೆಗಳನ್ನು ಹಂಚಿಕೊಳ್ಳಲಿದ್ದಾರೆ ಎಂದರು.

Read More

ಬೀದರ್‌ : ಪ್ರಯಾಗ್ ರಾಜ್ ಕುಂಭಮೇಳಕ್ಕೆ ತೆರಳಿದ್ದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ಜಿಲ್ಲೆಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. https://ainlivenews.com/six-people-from-bidar-who-had-gone-to-mahakumbha-died/ ಬೀದರ‌ ನಗರದ ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿಯೊಂದರ ನಡುವೆ ಇಂದು ಬೆಳಗಿನ ಜಾವ ಡಿಕ್ಕಿಯಾಗಿ ೫ ಜನರು ಮೃತಪಟ್ಟು, ಇತರ ಏಳು ಜನರು ಗಾಯಗೊಂಡಿದ್ದಾರೆ. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥೀವ ಶರೀರವನ್ನು ಬೀದರ್ ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿರುವುದಾಗಿ ಈಶ್ವರ ಖಂಡ್ರೆ ಮಾಹಿತಿ ನೀಡಿದರು. ಈ ಸಂಕಷ್ಟದ ಸಮಯದಲ್ಲಿ ಕುಟುಂಬಸ್ಥರ ರೊಂದಿಗೆ ನಿಲ್ಲುತ್ತದೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಹಾರೈಸಿದರು.

Read More

ಮೈಸೂರು : ತಮಗೆ ಪಕ್ಷದಿಂದ ಬಂದಿರುವ ನೋಟಿಸ್‌ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉತ್ತರ ನೀಡಿದ್ದಾರೆ. ಇದೀಗ ಹೈಕಮಾಂಡ್‌ ಗೆ ಉತ್ತರ ಕೊಟ್ಟಿರೋ ಫೈಲ್‌ ಪ್ರತಿಯನ್ನು ಚಾಮುಂಡಿ ಸನ್ನಿಧಿಯಲ್ಲಿಟ್ಟು ಪೂಜೆ ಮಾಡಿದ್ದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. https://www.youtube.com/watch?v=tJ0TwbXO6Jg ಇಂದು ಯತ್ನಾಳ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ಈ ವೇಳೆ ಹೈಕಮಾಂಡ್‌ ನೋಟಿಸ್ ಗೆ ಉತ್ತರ ಕೊಟ್ಟ ಪ್ರತಿಗೆ ಪೂಜೆ  ಸಲ್ಲಿಸಿದ್ದಾರೆ, ವಿಜಯೇಂದ್ರ ವಿರುದ್ಧ ಮತ್ತಷ್ಟು ದಾಖಲೆ ಇಟ್ಟು ಪೂಜೆ ಮಾಡಿಸಿದ್ದರಾ ಅನ್ನೋ ಅನುಮಾನವೂ ಶುರುವಾಗಿದೆ. https://www.youtube.com/watch?v=NoxmVNPFRdc ಇನ್ನೂ ಚಾಮುಂಡಿ ಬೆಟ್ಟದಲ್ಲಿ ಯತ್ನಾಳ್ ಎದುರು ವಿಜಯೇಂದ್ರ ಪರ ಅಭಿಮಾನಿಗಳು  ಜೈ ವಿಜಯೇಂದ್ರ , ಜೈ ಬಿಎಸ್ ವೈ ಎಂದು ಘೋಷಣೆ ಕೂಗಿದ್ದಾರೆ. ಜೈ ವಿಜಯೇಂದ್ರ ಎನ್ನುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಯತ್ನಾಳ್‌ ಅಲ್ಲಿಂದ ಹೊರಟು ಹೋಗಿದ್ದಾರೆ.  

Read More

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್​ವುಡ್​ನ ಹಿರಿಯ ನಿರ್ದೇಶಕಎಸ್. ಉಮೇಶ್ ಅವರು ನಿಧನ ಹೊಂದಿದ್ದಾರೆ. ಬನಶಂಕರಿಯ ಚಿತಾಗಾರದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ. ದಿವಂಗತ ನಟ ಕಾಶಿನಾಥ್ ಹಾಗೂ ಭವ್ಯ ಅವರು ಅಭಿನಯ ಮಾಡಿದ್ದ ಅವಳೇ ನನ್ನ ಹೆಂಡತಿ ಸಿನಿಮಾವನ್ನು ನಿರ್ಮಾಪಕ ಕೆ.ಪ್ರಭಾಕರ್ ಜೊತೆ ಸೇರಿ ಎಸ್​.ಉಮೇಶ್ ಅವರು ನಿರ್ದೇಶನ ಮಾಡಿದ್ದರು. ಈ ಸಿನಿಮಾದ ಮೂಲಕವೇ ಇವರು ಹೆಚ್ಚು ಪ್ರಖ್ಯಾತಿ ಗಳಿಸಿದರು. ಈ ಸಿನಿಮಾ ದೊಡ್ಡ ಹಿಟ್ ಆಗಿದ್ದಲ್ಲದೆ, ತಮಿಳು, ತೆಲುಗು, ಹಿಂದಿಗೂ ರಿಮೇಕ್ ಆಗಿತ್ತು. ಇದಾದ ಮೇಲೆ ಪ್ರೇಮ ಪರೀಕ್ಷೆ, ಬನ್ನಿ ಒಂದ್ಸಲ ನೋಡಿ, ಸಿಡಿದೆದ್ದ ಗಂಡು, ದಾಯಾದಿ, ತುಂಬಿದ ಮನೆ ಹೀಗೆ ಕನ್ನಡ ಸಿನಿಮಾ ಇಂಡಸ್ಟ್ರಿಗೆ 24 ಚಿತ್ರಗಳನ್ನು ನೀಡಿದ್ದಾರೆ. https://ainlivenews.com/just-eat-papaya-on-an-empty-stomach-and-sugar-indigestion-and-acidity-problems-will-disappear/ ಕನ್ನಡ ಮಾತ್ರವಲ್ಲದೆ, ತಮಿಳಲ್ಲೂ ಫೇಮಸ್ ಆಗಿದ್ದ ಉಮೇಶ್‌ ಅವರು, ವೃತ್ತಿ ಜೀವನದಲ್ಲಿ ಅನೇಕ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಆದರೆ, ಈಚೆಗೆ ಅವರಿಗೆ ಆರೋಗ್ಯ ಕೈ ಕೊಟ್ಟಿತ್ತು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.

Read More

ಕೋಲಾರ : ಚುಚ್ಚು ಮದ್ದು ನೀಡಿದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಂದಲ್ಲಿ ಘಟನೆ ನಡೆದಿದೆ. ವಿನೋದ್ ( 23 ) ಮೃತ ಯುವಕ. https://ainlivenews.com/a-young-man-is-stabbed-with-a-knife-for-a-trivial-reason-the-assailants-were-tied-to-a-pole-and-beaten/ ಜ್ವರದಿಂದ ಬಳಲುತ್ತಿದ್ದ ವಿನೋದ್‌ ಕ್ಲಿನಿಕ್‌ಗೆ ಹೋಗಿ ಚಿಕಿತ್ಸೆ ಪಡೆದಿದ್ದ. ವಕ್ಕಲೇರಿಯಲ್ಲಿರುವ ಸನ್ ರೈಸ್ ಕ್ಲಿನಿಕ್ ನ ವೈದ್ಯ ಡಾ. ರಫೀಕ್ ನೀಡಿದ್ದ ಇಂಜೆಕ್ಷನ್‌ ನೀಡಿದ್ದರು. ಆದರೆ ಇಂಜೆಕ್ಷನ್‌ ಪಡೆದ ಕೆಲವೇ ಗಂಟೆಗಳಲ್ಲಿ ಯುವಕ ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಾಗಿ ಯುವಕ ಮೃತಪಟ್ಟಿರುವುದಾಗಿ ಪೋಷಕರು ಆರೋಪಿಸಿದ್ದಾರೆ. ವೈದ್ಯರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಪಟ್ಟಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರಿಪೋರ್ಟ್ ಬಂದ ಬಳಿಕವಷ್ಟೇ ಅಸಲಿ ಸತ್ಯಾಂಶ ತಿಳಿದು ಬರಬೇಕಿದೆ https://www.youtube.com/watch?v=PYVBgMRCmdM

Read More

ಬೆಂಗಳೂರು: ಶಿವಕುಮಾರ್ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋದರೆ ತಪ್ಪೇನಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ನನ್ನ ನೇತೃತ್ವದಲ್ಲೇ ಚುನಾವಣೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ವಿಚಾರವಾಗಿ ಮಾತನಾಡಿ, ಅದರಲ್ಲಿ ತಪ್ಪೇನಿದೆ? ಎಂದಷ್ಟೇ ಹೇಳಿದರು. ರಂಜಾನ್ ಇಫ್ತಾರ್‌ಗೆ ರಾಜ್ಯದ ಮುಸ್ಲಿಮ್ ನೌಕರರಿಗೆ ಸಮಯ ವಿನಾಯಿತಿ ನೀಡುವ ವಿಚಾರವಾಗಿ ಮಾತನಾಡಿ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಸರ್ಕಾರ ಅದನ್ನ ತೀರ್ಮಾನ ಮಾಡಲಿದೆ ಎಂದರು. https://ainlivenews.com/just-eat-papaya-on-an-empty-stomach-and-sugar-indigestion-and-acidity-problems-will-disappear/ ಇನ್ನು ಇದೇ ಸಂದರ್ಭದಲ್ಲಿ ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿ, ಅದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರವಾಗಿದೆ. ಪುನಾರಚನೆ ಮಾಡೋದಾದ್ರೆ ಅವರಿಗೆ ಬಿಟ್ಟಿದ್ದು. ಇದರ ಬಗ್ಗೆ ನಾನೇನು ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ತಿಳಿಸಿದರು.

Read More

ಇತ್ತೀಚೆಗೆ ಮೋದಿ ಅಮೆರಿಕಾ ಪ್ರವಾಸ ಕೈಗೊಂಡಿದ್ದು ಈ ವೇಳೆ ಟೆಸ್ಲಾ ಅಧ್ಯಕ್ಷ ಎಲೋನ್‌ ಮಸ್ಕ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದೀಗ ಭಾರತದಲ್ಲಿ ಟೆಸ್ಲಾ ವಿದ್ಯುತ್‌ಚಾಲಿತ ಕಾರು ತಯಾರಿಕಾ ಘಟಕ ಸ್ಥಾಪನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅಪಸ್ವರ ಎತ್ತಿದ್ದು, ‘ಇದು ತುಂಬಾ ಅನ್ಯಾಯ’ ಎಂದಿದ್ದಾರೆ. ಭಾರತ ವಿಧಿಸುವ ಸುಂಕಗಳನ್ನು ತಪ್ಪಿಸಲು ಭಾರತದಲ್ಲಿ ಟೆಸ್ಲಾ ಘಟಕ ನಿರ್ಮಿಸುವ ಇವಿ ತಯಾರಕರ ಯಾವುದೇ ಸಂಭಾವ್ಯ ಯೋಜನೆಗಳು ‘ತುಂಬಾ ಅನ್ಯಾಯ’ ಎಂದು ಟ್ರಂಪ್ ಹೇಳಿದ್ದಾರೆ.  ‘ವಿಶ್ವದ ಎಲ್ಲಾ ರಾಷ್ಟ್ರಗಳೂ ಅಮೆರಿಕದಿಂದ ಪ್ರಯೋಜನ ಪಡೆಯುತ್ತಿವೆ. ಆದರೂ ನಮ್ಮ ಸರಕುಗಳ ಮೇಲೆ ದುಬಾರಿ ಸುಂಕ ವಿಧಿಸಲಾಗುತ್ತಿದೆ. ಭಾರತ ಕೂಡ ಇದರಿಂದ ಹೊರತಾಗಿಲ್ಲ. ಹೆಚ್ಚು ಸುಂಕ ವಿಧಿಸುವ ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪಿಸಿ ಕಾರುಗಳನ್ನು ಮಾರಾಟ ಮಾಡಲು ಸಾಧ್ಯವೇ’ ಎಂದು ಟ್ರಂಪ್‌ ಫಾಕ್ಸ್‌ ನ್ಯೂಸ್‌ಗೆ ಎಲಾನ್‌ ಮಸ್ಕ್‌ ಜೊತೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಭಾರತ ಅತಿಹೆಚ್ಚು ಪ್ರಮಾಣದಲ್ಲಿ ಸುಂಕ ವಿಧಿಸುತ್ತಿದೆ. ಹೀಗಾಗಿ, ನಾವು ಕೂಡ ಪ್ರತಿಯಾಗಿ ಅಷ್ಟೇ ಸುಂಕವನ್ನು ವಿಧಿಸುತ್ತೇವೆ…

Read More