ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮೇಲಿಂದ ಮೇಲೆ ಹೊಡೆತಗಳು ಬೀಳುತ್ತಿವೆ. ಅವರ ರಿಯಲ್ ಎಸ್ಟೇಟ್ ಸಾಮ್ರಾಜ್ಯವನ್ನು ನಾಶಪಡಿಸಿದ ಸಿವಿಲ್ ಪ್ರಕರಣದಲ್ಲಿ ಯುಎಸ್ ಎ ಮಾಜಿ ಅಧ್ಯಕ್ಷರು ಮತ್ತೊಂದು ಕಾನೂನು ಹಿನ್ನಡೆ ಅನುಭವಿಸಿದ್ದಾರೆ. ಟ್ರಂಪ್ತಮ್ಮ ಆಸ್ತಿ ಮೌಲ್ಯವನ್ನು ಕೃತ್ರಿಮವಾಗಿ ಹೆಚ್ಚಿಸಿದ್ದಕ್ಕಾಗಿ 3 ಸಾವಿರ ಕೋಟಿ ರೂ ದಂಡವನ್ನು ಪಾವತಿಸಬೇಕು ಎಂದು ನ್ಯೂಯಾರ್ಕ್ ಕೋರ್ಟ್ ತೀರ್ಪು ಪ್ರಕಟಿಸಿದೆ. ಮೂರು ತಿಂಗಳ ವಿವಾದಾಸ್ಪದ ವಿಚಾರಣೆಯ ನಂತರ, ನ್ಯಾಯಮೂರ್ತಿ ಆರ್ಥರ್ ಎಂಗೊರಾನ್ ತಮ್ಮ ತೀರ್ಪನ್ನು ಪ್ರಕಟಿಸಿದರು. ಈ ವರ್ಷ ಅಧ್ಯಕ್ಷ ಸ್ಥಾನವನ್ನು ಮರಳಿ ಪಡೆಯಲು ಹವಣಿಸುತ್ತಿರುವ ಟ್ರಂಪ್, ಮೂರು ವರ್ಷಗಳ ಕಾಲ ಯಾವುದೇ ನ್ಯೂಯಾರ್ಕ್ ಕಾರ್ಪೊರೇಷನ್ ಅಧಿಕಾರಿ ಅಥವಾ ನಿರ್ದೇಶಕರಾಗಿ ಸೇವೆ ಸಲ್ಲಿಸುವುದನ್ನು ಸಹ ನಿಷೇಧಿಸಲಾಗಿದೆ. ಈ ಬೆಳವಣಿಗೆಗಳ ಮಧ್ಯೆ, ಟ್ರಂಪ್ ಅವರ ವಕೀಲರಾದ ಅಲೀನಾ ಹಬ್ಬಾ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ. ನ್ಯಾಯಾಲಯವು ಈ ಹಿಂದೆ ಸೆಪ್ಟೆಂಬರ್ನಲ್ಲಿ ತಾನು ನೀಡಿದ್ದ ತೀರ್ಪನ್ನು ರದ್ದುಗೊಳಿಸುತ್ತಾ ಟ್ರಂಪ್ರ ರಿಯಲ್ ಎಸ್ಟೇಟ್ ಸಾಮ್ರಾಜ್ಯವನ್ನು ನಿಯಂತ್ರಿಸುವ ಆಧಾರ ಕಂಪನಿಗಳನ್ನು ಮುಚ್ಚುವಂತೆ…
Author: Author AIN
ಫೆ.8ರಂದು ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕರೆ ನೀಡಿದ್ದಾರೆ. ಈ ಬೆನ್ನಲ್ಲೇ ಚುನಾವಣೆಯ ಫಲಿತಾಂಶಗಳನ್ನು ತಿರುಚಲಾಗಿದೆ ಎಂದು ಆರೋಪಿಸಿ ರಾವಲ್ಪಿಂಡಿ ಕಮಿಷನರ್ ಲಿಯಾಖತ್ ಅಲಿ ಚಟ್ಟಾ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ನಾವು ಸೋತವರನ್ನು 50,000 ಮತಗಳ ಅಂತರದಿಂದ ವಿಜೇತರನ್ನಾಗಿ ಪರಿವರ್ತಿಸುತ್ತೇವೆ. ನಾನು ರಾವಲ್ಪಿಂಡಿ ವಿಭಾಗದ ಜನರಿಗೆ ಅನ್ಯಾಯ ಮಾಡಿದ್ದೇನೆ ಎಂದು ಚಟ್ಟಾ ಪೊಲೀಸರಿಗೆ ಶರಣಾಗಿದ್ದಾರೆ. ಒತ್ತಡಕ್ಕೆ ಒಳಗಾಗಬೇಕಾಗಿ ಬಂತು ಎಂದು ರಾವಲ್ಪಿಂಡಿ ಕಮಿಷನರ್ ಹೇಳಿದ್ದಾರೆ. ನನ್ನ ವಿಭಾಗದ ಚುನಾವಣಾಧಿಕಾರಿಗಳಲ್ಲಿ ಕ್ಷಮೆಯಾಚಿಸುತ್ತೇನೆ. ಈ ಎಲ್ಲಾ ರಾಜಕಾರಣಿಗಳು ಯಾವುದೇ ತಪ್ಪು ಮಾಡಬಾರದು ಎಂದು ಇಡೀ ಅಧಿಕಾರಿಗಳಲ್ಲಿ ನನ್ನ ವಿನಂತಿಯಾಗಿದೆ ಎಂದು ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಾತನಾಡಿದ ಚಟ್ಟಾ ಹೇಳಿದ್ದಾರೆ.
ಬಿಗ್ ಬಾಸ್ ಸೀಸನ್ 10ರಲ್ಲಿ ಸ್ಪರ್ಧಿಸಿದ್ದ ವರ್ತೂರು ಸಂತೋಷ್ ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದು ಸಾಕಷ್ಟು ಸುದ್ದಿಯಾಗಿತ್ತು. ಹುಲಿ ಉಗುರಿನ ಪೆಂಡೆಂಟ್ ಧರಿಸೋದು ಕಾನೂನು ಅಡಿಯಲ್ಲಿ ಶಿಕ್ಷಾರ್ಹಪರಾಧ ಎಂದು ಗೊತ್ತಿದ್ದರೂ ಪೆಂಡೆಂಟ್ ಹಾಕಿಕೊಂಡಿದ್ದು ದೊಡ್ಡ ಚರ್ಚೆಯನ್ನೇ ಹುಟ್ಟು ಹಾಕಿದ್ದರು. ವರ್ತೂರು ಜೈಲಿಗೆ ಹೋಗುತ್ತಿದ್ದಂತೆಯೇ ಸಾಕಷ್ಟು ಸೆಲೆಬ್ರಿಟಿಗಳು ಕೂಡ ಈ ಹುಲಿ ಉಗುರಿನ ಚೈನು ಧರಿಸಿರೋದು ಬೆಳಕಿಗೆ ಬಂದಿದ್ದು, ಅದರಲ್ಲಿ ಜಗ್ಗೇಶ್ ಕೂಡ ಸೇರಿಕೊಂಡಿದ್ದರು. ನಟ ಜಗ್ಗೇಶ್, ನಿಖಿಲ್ ಕುಮಾರಸ್ವಾಮಿ, ದರ್ಶನ್, ಆರ್ಯವರ್ಧನ್ ಗುರೂಜಿ, ನಟಿ ಅಮೂಲ್ಯ ಮಕ್ಕಳು ಹೀಗೆ ಅನೇಕರು ಹುಲಿ ಉಗುರಿನ ಪೆಂಡೆಂಟ್ ಧರಿಸಿ ಸಂಕಷ್ಟಕ್ಕೆ ಸಿಲುಕಿದ್ದರು. ಅದರಲ್ಲೂ ಜಗ್ಗೇಶ್ ಈ ಪ್ರಕರಣದಲ್ಲಿ ಇನ್ನೇನು ಬಂಧನವಾಗುತ್ತಾರೆ ಅಂತೆಲ್ಲ ಸುದ್ದಿ ಹರಿದಾಡಿತ್ತು. ಇಂತಹ ಸುದ್ದಿಯಿಂದ ಬೇಸತ್ತಿದ್ದ ಜಗ್ಗೇಶ್, ಮಾಧ್ಯಮಗಳಲ್ಲಿ ಸುದ್ದಿ ಬಾರದಂತೆ ತಡೆಗಟ್ಟುವುದಾಗಿ ಕೋರ್ಟ್ ಮೆಟ್ಟಿಲು ಏರಿದ್ದರು. ಇದಕ್ಕೆ ಸಹಾಯ ಮಾಡಿದ್ದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಂದು ಜಗೇಶ್ ಇದೀಗ ತಿಳಿಸಿದ್ದಾರೆ. ರಂಗನಾಯಕ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಈ…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟು 25 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ D-25 ಕಾರ್ಯಕ್ರಮ ಆಯೋಜಿಸಿದ್ದು ಈ ವೇಳೆ ಸಾಕಷ್ಟು ಮಂದಿ ಹಾಜರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಪೂರೈಸಿದ ದರ್ಶನ್ಗೆ ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಸುತ್ತೂರು ಶ್ರೀಗಳು ಅಭಿನಂದಿಸಿದರು. ಚಾಮುಂಡೇಶ್ವರಿ ವಿಗ್ರಹ ನೀಡಿ ಶುಭ ಹಾರೈಸಿ, ರಜತ ಮಹೋತ್ಸವದಂತೆ ಸುವರ್ಣ ಮಹೋತ್ಸವ ಪೂರೈಸಲಿ ಎಂದು ಹಾರೈಸಿದರು ಡಿ-25 ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಮಾತನಾಡಿ, ಕಲಾಕ್ಷೇತ್ರಕ್ಕೆ ಕಲಾವಿದರ ಕೊಡುಗೆ ಅಪಾರ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಮನೆ ಮಾತಾಗಿದ್ದರು. ಮೇರು ಕಲಾವಿದ ದರ್ಶನ್ ಮೈಸೂರಿನಲ್ಲಿ ಹುಟ್ಟಿ ಬೆಳೆದಿದ್ದಾರೆ. ಅದು ಸಂತೋಷ ತಂದಿದೆ. ಸುವರ್ಣ ಮಹೋತ್ಸವ ಕೂಡ ಆಚರಿಸಿ ದರ್ಶನ್. ಭಗವಂತನ ಆಶೀರ್ವಾದ ಅವರ ಮೇಲೆ ಇರಲಿ ಎಂದು ಹರಸಿದರು. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಮಾತನಾಡಿ, ಇದೊಂದು ಅರ್ಥಪೂರ್ಣ ಕಾರ್ಯಕ್ರಮ. ಕಲೆಗೆ ಸಾಕಷ್ಟು…
ದರ್ಶನ್ ನನ್ನ ಪ್ರೀತಿಯ ಹಿರಿಯ ಮಗ. ಅಂಬರೀಶ್ ಗೆ ಇದ್ದ ಆ ಒಂದು ಗುಣ ದರ್ಶನ್ ನಲ್ಲೂ ಇದೆ ಎಂದು ಸಂಸದೆ ಸುಮಲತಾ ಅಂಬರೀಶ್ ಮೆಚ್ಚುಗೆ ಸೂಚಿಸಿದ್ದಾರೆ. ದರ್ಶನ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟು 25 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಡಿ-25 ಸಮಾರಂಭದಲ್ಲಿ ಸುಮಲತಾ ಅಂಬರೀಶ್ ಪಾಲ್ಗೊಂಡು ಮಾತನಾಡಿದ್ದಾರೆ. ‘ನನ್ನ ಪ್ರೀತಿಯ ಹಿರಿಯ ಮಗ ದರ್ಶನ್, ನಿನ್ನೆಯಷ್ಟೇ ಹುಟ್ಟು ಆಚರಿಸಿಕೊಂಡಿದ್ದಾರೆ, ಕಾಟೇರ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಮಂಡ್ಯದಲ್ಲಿ ಮಾಡಿದ್ದೆವು. ಆಗಲೇ ಹೇಳಿದ್ದೆ ಈ ಸಿನೆಮಾ ದೊಡ್ಡ ಹಿಟ್ ಆಗುತ್ತೆ ಎಂದು, ಅದರ ಸಂಭ್ರಮವೂ ಮಂಡ್ಯದಲ್ಲೇ ಮಾಡ್ತೀವಿ ಅಂದಿದ್ದೆ. ‘ಕಾಟೇರ’ ಸಿನಿಮಾ ಈಗ ದೊಡ್ಡ ಹಿಟ್ ಆಗಿದೆ. ‘ಕಾಟೇರ’ ದರ್ಶನ್ ಅವರನ್ನು ಎಲ್ಲಗೋ ಕರೆದುಕೊಂಡು ಹೋಗಿ ಕೂರಿಸಿದೆ. ಅವರು ಚಿತ್ರರಂಗದಲ್ಲಿ 25 ವರ್ಷ ಕಳೆದಿದ್ದಾರೆ. ಅದು ಸಣ್ಣ ಸಾಧನೆಯಲ್ಲ’ ಎಂದು ಮೆಚ್ಚುಗೆ ಸೂಚಿಸಿದರು. ‘25 ವರ್ಷಗಳ ಹಿಂದೆ ದರ್ಶನ್ ಮೊದಲ ಸಿನಿಮಾ ‘ಮೆಜೆಸ್ಟಿಕ್’ ಮುಹೂರ್ತಕ್ಕೆ ನಾನು ಹಾಗೂ…
ಬಾಲಿವುಡ್ ಚಿತ್ರರಂಗದ ಹಾಟ್ ಬ್ಯೂಟಿ, ಪಡ್ಡೆ ಹುಡುಗರ ನೆಚ್ಚಿನ ನಟಿ ಸನ್ನಿಲಿಯೋನ್ ಒಂದಲ್ಲ ಒಂದು ಕಾರಣಕ್ಕೆ ಸುದ್ದ ಮಾಡುತ್ತಲೆ ಇರುತ್ತದೆ. ಇದೀಗ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್ ಫೋಟೋ ಕಂಡುಬಂದಿದ್ದು ನೆಚ್ಚಿನ ನಟಿಯ ಫೋಟೋ ನೋಡಿ ಅಭಿಮಾನಿಗಳು ದಿಲ್ ಖುಷ್ ಆಗಿದ್ದಾರೆ. ಉತ್ತರ ಪ್ರದೇಶ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರದಲ್ಲಿ ಸನ್ನಿ ಫೋಟೋ ಕಾಣಿಸಿಕೊಂಡಿದೆ. ಸದ್ಯ ಪತ್ರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಫೇ. 17 ರಂದು ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮತ್ತು ಪ್ರಚಾರ ಮಂಡಳಿ ಯು ರಾಜ್ಯದ 2,385 ಪರೀಕ್ಷಾ ಕೇಂದ್ರಗಳೊಂದಿಗೆ 75 ಜಿಲ್ಲೆಗಳಲ್ಲಿ ಪರೀಕ್ಷೆಗಳನ್ನು ನಡೆಸಿತು. ಇದರಲ್ಲಿ ಕನೌಜ್ನ ತಿರ್ವಾ ತಹಸಿಲ್ನಲ್ಲಿರುವ ಶ್ರೀಮತಿ ಸೋನೆಶ್ರೀ ಸ್ಮಾರಕ ಬಾಲಕಿಯರ ಕಾಲೇಜು ಕೂಡ ಒಂದು ಪರೀಕ್ಷಾ ಕೇಂದ್ರವಾಗಿತ್ತು. ಇಲ್ಲಿ ಸನ್ನಿಲಿಯೋನ್ ಅವರ ಫೋಟೋದೊಂದಿಗೆ ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮತ್ತು ಪ್ರಚಾರ ಮಂಡಳಿಯ ವೆಬ್ಸೈಟ್ನಲ್ಲಿ ನೋಂದಣಿ ಮಾಡಲಾಗಿದೆ.
ಬಾಲಿವುಡ್ ನ ಖ್ಯಾತ ನಟ ಆಮೀರ್ ಖಾನ್ ನಟನೆಯ ದಂಗಲ್ ಸಿನಿಮಾದಲ್ಲಿ ಬಬಿತಾ ಪೋಗಟ್ ಪಾತ್ರದಲ್ಲಿ ಕಾಣಿಸಿಕೊಂಡು ನೋಡುಗರ ಹೃದಯ ಕದ್ದಿದ್ದ 17ನೇ ವಯಸ್ಸಿನ ನಟಿ ಸುಹಾನಿ ಭಟ್ನಾಗರ್ ಹಠಾತ್ ನಿಧನರಾಗಿದ್ದಾರೆ. ಅತೀ ಸಣ್ಣ ವಯಸ್ಸಿನ ಈ ನಟಿಯ ಸಾವಿಗೆ ಬಾಲಿವುಡ್ ಕಂಬನಿ ಮಿಡಿದಿದೆ. ಆಪ್ತರ ಪ್ರಕಾರ ಸುಹಾನಿ ತಮ್ಮ ಕಾಲಿನ ಮೂಳೆ ಮುರಿತದ ಸಲುವಾಗಿ ಚಿಕಿತ್ಸೆ ಪಡೆದುಕೊಂಡು, ಅದಕ್ಕೆ ಸಂಬಂಧಿಸಿದ ಔಷಧಿ ಸೇವಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ಔಷಧಿಯ ಅಡ್ಡ ಪರಿಣಾಮದಿಂದಾಗಿ ಸಾವುಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಸುಹಾನಿ ತೆಗೆದುಕೊಳ್ಳುತ್ತಿದ್ದ ಔಷಧಿಯೇ ಅವರ ಸಾವಿಗೆ ಕಾರಣವಾಗಿರೋದು ನಿಜಕ್ಕೂ ದುರಾದೃಷ್ಟಕರ. ಸಾವಿನ ಕುರಿತಂತೆ ನಾನಾ ಸುದ್ದಿಗಳು ಹರಡಿದ್ದು, ಸಾವಿನ ಬಗ್ಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ. ಆಕೆ ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನುವ ಮಾಹಿತಿ ಕೇಳಿ ಬಂದಿದೆ.
ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ತಮ್ಮ ಕೈಲಿರೋ ಫೋನ್ ಬೇಸರವಾಗಿ ಹೊಸ ಹೊಸ ಫೀಚರ್ ಗಳು ಬಂದಾಗ ಆ ಮೊಬೈಲ್ ಗಳು ಕೊಳ್ಳಬೇಕು ಅನಿಸುತ್ತೆ. ಆದರೆ ಕೈಲಿರೋ ಮೊಬೈಲ್ ಏನ್ ಮಾಡೋದಪ್ಪ ಅನಿಸುತ್ತೆ. ಅದಕ್ಕೆ ಇದೀಗ ಒನ್ಪ್ಲಸ್ನ ಹೊಸ ಸ್ಮಾರ್ಟ್ಫೋನ್ ಬಳಕೆದಾರರಿಗೆ ಭರ್ಜರಿ ಆಫರ್ ನೀಡಲಾಗಿದೆ. ಯೆಸ್. ನೀವೇನಾದ್ರು 256GB ಇಂಟರ್ ಸ್ಟೋರೇಜ್ ಆಯ್ಕೆಯ ಈ ಒನ್ಪ್ಲಸ್ ಫೋನ್ ಖರೀದಿ ಮಾಡಿದ್ದು, ಈ ವಿಷಯದಲ್ಲಿ ನಿಮಗೆ ಇಷ್ಟ ಇಲ್ಲ ಎನಿಸಿದ್ರೆ ನಿಮ್ಮ ಹಣವನ್ನು ಹಿಂತಿರುಗಿಸಲು ಒನ್ಪ್ಲಸ್ ಮುಂದಾಗಿದೆ ಒನ್ಪ್ಲಸ್ 12 ಜೊತೆಗೆ ಕಳೆದ ತಿಂಗಳು ಬಿಡುಗಡೆಯಾದ ಹೊಸ ಒನ್ಪ್ಲಸ್ 12R ಈಗ ಮತ್ತೇ ಮುನ್ನೆಲೆಗೆ ಬಂದಿದೆ. ಕಾರಣ ಅದರ 256GB ವೇರಿಯಂಟ್. ಈ ಮೂಲಕ ಯಾರೆಲ್ಲಾ 256GB ವೇರಿಯಂಟ್ ಫೋನ್ ಅನ್ನು ಖರೀದಿ ಮಾಡುತ್ತಾರೋ ಅವರ ಹಣವನ್ನು ಹಿಂತಿರುಗಿಸಲು ಕಂಪೆನಿ ಮುಂದಾಗಿದೆ. ಒನ್ಪ್ಲಸ್ 12R ಫೋನ್ ಅನ್ನು ಲಾಂಚ್ ಮಾಡುವಾಗ, ಕಂಪೆನಿಯು UFS 4.0 ಸ್ಟೋರೇಜ್ ಪ್ರಕಾರವನ್ನು ನೀಡಲಾಗುತ್ತದೆ ಎಂದು ಹೇಳಿತ್ತು. ಹಾಗೆಯೇ UFS…
ವಿಚಿತ್ರ ಉಡುಪು ಧರಿಸಿ ಪ್ರೀಮಿಯರ್ ಶೋಗೆ ಬಂದ ‘ಸ್ಪೈಡರ್ ಮ್ಯಾನ್’ ನಟಿ ಜೆಂಡೆಯಾ ಇಂಗ್ಲಿಷ್ ನ ‘ಸ್ಪೈಡರ್ಮ್ಯಾನ್’ ಸಿನಿಮಾದಿಂದ ಖ್ಯಾತಿ ಗಳಿಸಿದ ನಟಿ ಜೆಂಡೆಯಾ ಇದೀಗ ವಿಚಿತ್ರ ಉಡುಗೆ ಧರಿಸಿಕೊಂಡು ಸದ್ದು ಮಾಡುತ್ತಿದ್ದಾರೆ. ‘ಜೆಂಡೆಯಾ’ ಡ್ಯೂನ್ ಹೆಸರಿನ ಹಾಲಿವುಡ್ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದ ಎರಡನೇ ಭಾಗ ಇದೀಗ ಬಿಡುಗಡೆಗೆ ರೆಡಿಯಾಗಿದೆ. ಡ್ಯೂನ್ 2 ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಇದರ ಪ್ರೀಮಿಯರ್ ಶೋ ಲಂಡನ್ ನಲ್ಲಿ ಆಯೋಜಿಸಲಾಗಿದ್ದು ಈ ವೇಳೆ ಜೆಂಡೆಯಾ ವಿಚಿತ್ರ ಉಡುಪು ಧರಿಸಿ ಆಗಮಿಸಿದ್ದಾರೆ. ಭವಿಷ್ಯ, ಭೂತಕಾಲಗಳ ವಿಚಿತ್ರ ಕತೆಯನ್ನು ‘ಡ್ಯೂನ್’ ಸಿನಿಮಾ ಒಳಗೊಂಡಿದ್ದು, ಸಿನಿಮಾದ ನಾಯಕಿಯ ಪಾತ್ರದಲ್ಲಿ ಜೆಂಡೆಯಾ ಕಾಣಿಸಿಕೊಂಡಿದ್ದಾರೆ. ಜೆಂಡೆಯಾರ ವಿಚಿತ್ರ ಉಡುಪಿನ ಚಿತ್ರ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಜೊತೆಗೆ ಜೆಂಡೆಯಾ ಧರಿಸಿದ್ದ ಉಡುಪನ್ನು ಟ್ರೋಲ್ ಮಾಡಲಾಗುತ್ತಿದೆ. ‘ಡ್ಯೂನ್ 2’ ಸಿನಿಮಾ ಪ್ರೀಮಿಯರ್ ಶೋ ಲಂಡನ್ನಲ್ಲಿ ನಡೆದಿದ್ದು ಕೆಲವೇ ದಿನಗಳಲ್ಲಿ ಭಾರತ ಸೇರಿದಂತೆ ವಿಶ್ವದಾದ್ಯಂತ ತೆರೆಗೆ ಬರಲಿದೆ.
ಭಾರತದ ವಿರುದ್ಧ ತಿರುಗಿಬಿದ್ದ ಮಾಲ್ಡೀವ್ಸ್ಗೆ ಮರ್ಮಾಘಾತವಾಗಿದೆ. ತೀರಾ ಅರ್ಥಿಕ ದುಸ್ಥಿತಿಗೆಮಾಲ್ಡೀವ್ಸ್ ತಲುಪಿದ್ದು, ದಿವಾಳಿ ಎಂದು ಘೋಷಣೆ ಮಾಡಲಾಗಿದೆ. ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರ ‘ಇಂಡಿಯಾ ಔಟ್’ ಅಭಿಯಾನದಿಂದ ಉಲ್ಬಣಗೊಂಡ ವಿವಾದವು ಅನಿರೀಕ್ಷಿತ ತಿರುವು ಪಡೆದುಕೊಂಡಿದೆ. ಬೇಲ್ಔಟ್ ಸಾಲಕ್ಕಾಗಿ ಮಾಲ್ಡೀವ್ಸ್ ಸರ್ಕಾರ IMF ಮೊರೆ ಹೋಗಿದೆ. ಭಾರತ- ಮಾಲ್ಡೀವ್ಸ್ ನಡುವಿನ ತಿಕ್ಕಾಟಕ್ಕೆ ಅಧ್ಯಕ್ಷ ಮುಯಿಝು ಕಾರಣವಾಗಿದ್ದರು. ಇಂಡಿಯಾ ಔಟ್ ಅಭಿಯಾನವನ್ನು ಅಧ್ಯಕ್ಷ ಮುಯಿಝು ಪ್ರಾರಂಭಿಸಿದ್ದರು. ಭಾರತ ವಿರೋಧಿ ಹೇಳಿಕೆ ನೀಡಿ ಭಾರತೀಯರ ಕೆಂಗಣ್ಣಿಗೆ ಮಾಲ್ಡೀವ್ಸ್ ಗುರಿಯಾಗಿತ್ತು. ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಪ್ರಾರಂಭಿಸಿದ್ದ ಭಾರತೀಯರು. ಮಾಲ್ಡೀವ್ಸ್ಗೆ ಹೋಗುವ ಭಾರತೀಯ ಪ್ರವಾಸಿಗರ ಸಂಖ್ಯೆಯಲ್ಲೂ ಭಾರೀ ಕುಸಿತವಾಗಿದೆ. ಆರ್ಥಿಕ, ರಾಜತಾಂತ್ರಿಕ ಕ್ಷೇತ್ರಗಳೆರಡರಲ್ಲೂ ಮಾಲ್ಡೀವ್ಸ್ಗೆ ಭಾರೀ ಸವಾಲು ಎದುರಾಗಿದೆ. ಇದು ದ್ವೀಪ ರಾಷ್ಟ್ರವು ಎದುರಿಸುತ್ತಿರುವ ಆರ್ಥಿಕ ಸವಾಲುಗಳನ್ನು ಇನ್ನಷ್ಟು ಉಲ್ಬಣಗೊಳಿಸಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಲಕ್ಷದ್ವೀಪ ಭೇಟಿಯ ಸಂದರ್ಭದಲ್ಲಿ ಮಾಲ್ಡೀವ್ಸ್ನ ಮೂವರು ಸಚಿವರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು. ನಂತರದ ಮೂವರು ಮಂತ್ರಿಗಳ ಉಚ್ಚಾಟನೆಯ ಹೊರತಾಗಿಯೂ,…