ಬಹುಭಾಷಾ ಗಾಯಕಿ ಉಷಾ ಉತ್ತುಪ್ ಅವರ ಪತಿ ಜಾನಿ ಚಾಕೋ ಉತ್ತುಪ್ ನಿನ್ನೆ (ಜು.8) ಹೃದಯಾಘಾತದಿಂದ ನಿಧನರಾಗಿದ್ದಾರೆ. 78ನೇ ವಯಸ್ಸಿಗೆ ಇಹಲೋಕ ತ್ಯಜಿಸಿರುವ ಜಾನಿ ಚಾಕೋಗೆ ಕುಟುಂಬಸ್ಥರು ಆಪ್ತರು ಕಂಬನಿ ಮಿಡಿದಿದ್ದಾರೆ. ಜಾನಿ ಚಾಕೋ ಅವರಿಗೆ ಜು.8ರಂದು ತಮ್ಮ ಕೋಲ್ಕತ್ತಾದ ನಿವಾಸದಲ್ಲಿ ಟಿವಿ ನೋಡ್ತಿದ್ದ ವೇಳೆ ಹೃದಯಾಘಾತವಾಗಿದೆ. ಆ ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಇಂದು (ಜು.9) ಜಾನಿ ಚಾಕೋ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಬಹುಭಾಷಾ ಗಾಯಕಿಯಾಗಿ ಹೆಸರು ಮಾಡಿರುವ ಉಷಾ ಉತ್ತುಪ್ ಅವರು ಕನ್ನಡದ ‘ಸ್ವಾಮಿ’ ಚಿತ್ರದ ರಂಬೆ ನಿನಗೆ, ಇತ್ತೀಚೆಗೆ ತೆರೆಕಂಡ ಅಭಿಷೇಕ್ ಅಂಬರೀಶ್, ರಚಿತಾರಾಮ್ ನಟನೆಯ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಟೈಟಲ್ ಟ್ರ್ಯಾಕ್ ಹಾಡಿದ್ದರು.
Author: Author AIN
ಖ್ಯಾತ ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸಿರಿ ಅವರು ಇತ್ತೀಚೆಗೆ ಉದ್ಯಮಿ ಪ್ರಭಾಕರ್ ಬೋರೇಗೌಡ ಅವರನ್ನು ಮದುವೆಯಾಗಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಮದುವೆಯಾಗದೆ ಹಾಗೆ ಉಳಿದಿದ್ದ ಸಿರಿ ಅವರು ಮಂಡ್ಯ ಮೂಲದ, ಪ್ರಸ್ತುತ ಬೆಂಗಳೂರಿನಲ್ಲಿ ಸೆಟಲ್ ಆಗಿರುವ ಪ್ರಭಾಕರ್ ಅವರನ್ನು ವರಿಸಿದ್ದಾರೆ. ಪ್ರಭಕರ್ ಅವರಿಗೆ ಉದ್ಯಮದ ಜೊತೆಗೆ ಚಿತ್ರರಂಗದಲ್ಲೂ ನಂಟು ಹೊಂದಿದ್ದಾರೆ. ಇತ್ತೀಚೆಗೆ ಅತ್ಯಪ್ತರ ಸಮ್ಮುಖದಲ್ಲಿ ಸಿಂಪಲ್ ಆಗಿ ವಿವಾಹವಾಗಿದ್ದ ಸಿರಿ ಇದೀಗ ಪತಿ ಜೊತೆಗಿನ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಮುದ್ದಾದ ಜೋಡಿಗೆ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸಿರಿ ಅವರು ಸ್ಪರ್ಧಿಸಿದ್ದರು. ಈ ವೇಳೆ ಅವರು ವಿವಾಹದ ಬಗ್ಗೆ, ವಿವಾಹ ಆದರೆ ಆಗಬಹುದಾದ ತೊಂದರೆಗಳ ಬಗ್ಗೆ ಮಾತನಾಡಿದ್ದರು. ಇತ್ತೀಚೆಗೆ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿತ್ತು. ಮದುವೆ ಬಳಿಕ ಸಿರಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈಗ ಪತಿ ಜೊತೆ ಇರೋ ಫೋಟೋಗಳನ್ನು ಸಿರಿ ಅವರು…
ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಗೌರಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಡ್ತಿದ್ದಾರೆ. ಇದೇ ವೇಳೆ ಸಮರ್ಜಿತ್ ಲಂಕೇಶ್ ಅವರು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಸಂದರ್ಶನ ಮಾಡಿದ್ದರು. ಸುದೀಪ್ ಅವರು ಈಗ ಪತ್ನಿ ಬಗ್ಗೆ ಮಾತನಾಡಿದ್ದಾರೆ. ಕಿಚ್ಚ ಸುದೀಪ್ ಹಾಗೂ ಪ್ರಿಯಾ 2001ರಲ್ಲಿ ಮುವೆಯಾದರು. ಇವರ ಮದುವೆ ಆಗಿ 23 ವರ್ಷಗಳು ಕಳೆದಿವೆ. ಸಾನ್ವಿ ಹೆಸರಿನ ಮಗಳು ಇದ್ದಾರೆ. ಸುದೀಪ್ ಅವರ ವೃತ್ತಿ ಬದುಕಿಗೆ ಪ್ರಿಯಾ ಬೆಂಬಲವಾಗಿ ನಿಂತಿದ್ದಾರೆ. ಇದೀಗ ಸಂದರ್ಶನದಲ್ಲಿ ಸುದೀಪ್ ಹಲವಾರು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಈ ವೇಳೆ ಹೆಂಡತಿ ಕುರಿತಾಗಿ ಹಾಡಿ ಹೊಗಳಿದ್ದಾರೆ. ಪ್ರಿಯಾ ಬಗ್ಗೆ ಮಾತನಾಡಿ ಎಂದು ಸಮರ್ಜಿತ್ ಅವರು ಸುದೀಪ್ಗೆ ಕೇಳಿದರು. ‘ಸದಾ ತಾಳ್ಮೆ, ಶಾಂತವಾಗಿರೋ ವ್ಯಕ್ತಿ ಅವರು. ಅವರು ಇಷ್ಟು ವರ್ಷ ನನ್ನನ್ನು ಹ್ಯಾಂಡಲ್ ಮಾಡಿದ್ದಾರೆ. ಇದಕ್ಕಾಗಿ ಅವರಿಗೆ ಪ್ರಶಸ್ತಿ, ಪುರಸ್ಕಾರ ನೀಡಿದರೂ ತಪ್ಪಿಲ್ಲ. ಪ್ರಿಯಾ ಅವರಲ್ಲಿ ಪ್ರಬುದ್ಧತೆ ಇದೆ. ನನ್ನ ಕರಿಯರ್ ಆರಂಭದಲ್ಲಿ ತುಂಬಾ ಏರಿಳಿತ ಕಂಡೆ. ಹುಚ್ಚ…
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಸೇರಿದಂತೆ ಆರು ಬಂಧಿತ ಆರೋಪಿಗಳ ವಿರುದ್ಧ ಮುಂಬೈ ಪೊಲೀಸರು ಸೋಮವಾರ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹುಡುಕಾಟ ನಡೆಸುತ್ತಿರುವ ಮೂವರು ಆರೋಪಿಗಳ ವಿರುದ್ಧವೂ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ‘ಅಪರಾಧ ವಿಭಾಗದ ವಿಶೇಷ ನ್ಯಾಯಾಲಯದಲ್ಲಿ 1,735 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ತನಿಖೆಯ ಭಾಗವಾಗಿ ಸಂಗ್ರಹಿಸಿದ ಪ್ರಮುಖ ದಾಖಲೆಗಳನ್ನು ಒಳಗೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಈ ಪ್ರಕರಣ ಸಂಬಂಧ 46 ಸಾಕ್ಷಿಗಳ ಹೇಳಿಕೆಗಳು ಮತ್ತು ಸಿಆರ್ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ಸಾಕ್ಷಿಗಳ ಹೇಳಿಕೆಗಳನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಏಪ್ರಿಲ್ 14ರ ಮುಂಜಾನೆ 5 ಗಂಟೆ ವೇಳೆಗೆ ಎರಡು ಬೈಕ್ಗಳಲ್ಲಿ ಬಂದ ಇಬ್ಬರು ಆರೋಪಿಗಳು ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಸಲ್ಮಾನ್ ಖಾನ್ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಎದುರು ನಾಲ್ಕು ಸುತ್ತು…
ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ‘ಹಲಗಲಿ’ ಚಿತ್ರದಲ್ಲಿ ಈ ಹಿಂದೆ ಡಾರ್ಲಿಂಗ್ ಕೃಷ್ಣ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಇದೀಗ ಆ ಜಾಗಕ್ಕೆ ನಟ ಡಾಲಿ ಧನಂಜಯ್ ಎಂಟ್ರಿಕೊಟ್ಟಿದ್ದು ಇತ್ತೀಚೆಗೆ ಅದ್ದೂರಿಯಾಗಿ ಚಿತ್ರದ ಮುಹೂರ್ತ ಸೆಟ್ಟೇರಿದೆ. ‘ಹಲಗಲಿ’ ಸಿನಿಮಾದ ಮೂಲಕ ಡಾಲಿ ಮತ್ತೊಂದು ಐತಿಹಾಸಿಕ ಚಿತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಸುಕೇಶ್ ಡಿ ಕೆ ನಿರ್ದೇಶನದ ಈ ಚಿತ್ರವು 80 ಕೋಟಿ ವೆಚ್ಚದಲ್ಲಿ ಎರಡು ಭಾಗಗಳಲ್ಲಿ ಮೂಡಿ ಬರುತ್ತಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬರಲಿರುವ ಈ ಚಿತ್ರಕ್ಕೆ ಮೈಸೂರಿನ ಲಲಿತ್ ಮಹಲ್ ನಲ್ಲಿ ಪೂಜೆ ಮಾಡುವ ಮೂಲಕ ಅದ್ಧೂರಿ ಚಾಲನೆ ನೀಡಲಾಗಿದೆ. ಕನ್ನಡ ನಾಡಿನ ಸ್ವಾತಂತ್ರ್ಯ ಪೂರ್ವದ ವೀರರ ಕಥೆಯನ್ನು ಒಳಗೊಂಡ ಈ ಚಿತ್ರದಲ್ಲಿ ಡಾಲಿ ಧನಂಜಯ್ ಅವರು ವಾರಿಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ಕನ್ನಡ ನೆಲದ ಹಲಗಲಿಯ ಊರಿನ ಬೇಡರ ಕುರಿತ ಸಿನಿಮಾ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾದ ಮೂಲಕ ಸಿನಿ ಇಂಡಸ್ಟ್ರಿಗೆ ಕಾಲಿಟ್ಟ ನಭಾ ನಟೇಶ್ ಬಳಿಕ ಟಾಲಿವುಡ್ ನಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದಾರೆ. ಅದರಲ್ಲೂ ಇಸ್ಮಾರ್ಟ್ ಶಂಕರ್ ಸಿನಿಮಾ ಈಕೆಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ಸದ್ಯ ನಟಿ ಡಾರ್ಲಿಂಗ್ ಸಿನಿಮಾದ ಮೂಲಕ ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಈ ಚಿತ್ರ ಪ್ರಮೋಷನ್ ನಲ್ಲಿ ಭಾಗಿಯಾಗಿದ್ದ ನಭಾ 2 ವರ್ಷಗಳ ಹಿಂದೆ ತನಗೆ ಆದ ಆಕ್ಸಿಡೆಂಡ್ ಕುರಿತು ನಟಿ ಮಾತನಾಡಿದ್ದಾರೆ. 2 ವರ್ಷಗಳ ಹಿಂದೆ ನಟಿಗೆ ಅಪಘಾತದಲ್ಲಿ ಎಡಗೈ ಮತ್ತು ಎಡಭುಜಕ್ಕೆ ಪೆಟ್ಟು ಮಾಡಿಕೊಂಡರು. ಶಸ್ತ್ರಚಿಕಿತ್ಸೆಗೆ ಒಳಗಾದ ನಭಾ ಇದರಿಂದ ಚೇತರಿಸಿಕೊಳ್ಳಲು ಒಂದೂವರೆ ವರ್ಷ ಕಳೆಯಿತು. ಅಂದಿನ ಆ ದಿನ ಹೇಗಿತ್ತು? ಎಂದು ನಟಿ ವಿವರಿಸಿದರು. ಕೈ ತುಂಬಾ ಅವಕಾಶ ಇರುವ ಸಮಯದಲ್ಲಿಯೇ ನನಗೆ ಆಕ್ಸಿಡೆಂಟ್ ಆಯಿತು. ಆ ನಂತರ ಸಿನಿಮಾ ಮಾಡಲು ಸಾಧ್ಯವಾಗಲಿಲ್ಲ. ಆಗ ನನ್ನ ಮನಸ್ಥಿತಿಯೇ ಸಂಪೂರ್ಣ ಬದಲಾಗಿ ಹೋಗಿತ್ತು. ಆಪರೇಷನ್ ಆದ ಹತ್ತು ದಿನಗಳ ನಂತರ ಶೂಟಿಂಗ್ ನಲ್ಲಿ…
ಬಾಲಿವುಡ್ ಫೇಮಸ್ ನಿರ್ಮಾಪಕ ಕಮ್ ನಿರ್ದೇಶಕ ಕರಣ್ ಜೋಹರ್ ಎಲ್ಲದರಲ್ಲೂ ಎತ್ತಿದ ಕೈ. ನಟನೆ, ನಿರ್ಮಾಣ, ನಿರ್ದೇಶನ, ನಿರೂಪಣೆ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಕರಣ್ ಗುರುತಿಸಿಕೊಂಡಿದ್ದಾರೆ. ಅದರಲ್ಲೂ ಬಿಟೌನ್ ಗೆ ಸಾಕಷ್ಟು ಸ್ಟಾರ್ ಕಿಡ್ ಗಳನ್ನು ನೀಡಿದ ಕೀರ್ತಿ ಕರಣ್ ಜೋಹರ್ ಅವರದ್ದು. ಜೊತೆಗೆ ಅನೇಕರ ಪಾಲಿನ ಗಾಡ್ ಫಾದರ್ ಕೂಡ ಇವರೇ. ಇಂಥಾ ಕರಣ್ ಜೋಹರ್ ಇದೀಗ ತಮ್ಮ ಮುದ್ದು ಅವಳಿ ಮಕ್ಕಳು ಕೇಳಿದ ಪ್ರಶ್ನೆಗೆ ಶಾಕ್ ಆಗಿದ್ದಾರೆ . ಜೊತೆಗೆ ಉತ್ತರಿಸಲಾಗದೇ ಕೌನ್ಸೆಲಿಂಗ್ ಗೆ ಕೂಡ ಹೋಗುತ್ತಿದ್ದಾರಂತೆ. ಹೌದು, ಅಸಲಿಗೆ.. ಇನ್ನೂ ಮದ್ವೆಯಾಗದ ಕರಣ್ ಜೋಹರ್, 2017ರಲ್ಲಿ ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳಿಗೆ ತಂದೆಯಾಗಿದ್ದರು. ಅಲ್ಲಿಂದ ಇಲ್ಲಿವರೆಗೆ ತನ್ನೆರಡು ಮಕ್ಕಳನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಪಾಡುತ್ತಿರುವ ಕರಣ್ ಜೋಹರ್ಗೆ ಈಗ ಅವರ ಮಕ್ಕಳಾದ ಯಶ್ ಮತ್ತು ರೂಹಿ ತಮ್ಮ ತಾಯಿಯ ಬಗ್ಗೆ ಪ್ರಶ್ನೆಯನ್ನು ಕೇಳಲು ಶುರುಮಾಡಿದ್ದಾರೆ. ತಮ್ಮ ಜನ್ಮ ರಹಸ್ಯವನ್ನು ಕೇಳಲು ಪ್ರಾರಂಭಿಸಿದ್ದಾರೆ. ಈ ವಿಚಾರವನ್ನು ಸಂದರ್ಶನವೊಂದರಲ್ಲಿ ಖುದ್ದು…
ಹಂಗೇರಿಯ ಪ್ರಧಾನಿ ವಿಕ್ಟರ್ ಓರ್ಬನ್ ಅವರೊಂದಿಗೆ ಸೋಮವಾರ ನಡೆದ ಸಭೆಯಲ್ಲಿ, ರಷ್ಯಾ ಮತ್ತು ಉಕ್ರೇನ್ ಮುಖಾಮುಖಿ ಮಾತುಕತೆಗೆ ಬರುವಂತೆ ಸಹಾಯ ಮಾಡಬೇಕೆಂದು ಚೀನಾದ ಅಧ್ಯಕ್ಷ ಕ್ಸಿ ಜಿಂಗ್ಪಿಂಗ್ ವಿಶ್ವ ಶಕ್ತಿಗಳಿಗೆ ಕರೆ ನೀಡಿದ್ದಾರೆ. ಉಕ್ರೇನ್ನಲ್ಲಿ ಶಾಂತಿ ಸ್ಥಾಪಿಸುವ ಸಲುವಾಗಿ ಕಳೆದ ವಾರ ರಷ್ಯಾ ಮತ್ತು ಉಕ್ರೇನ್ಗೆ ವಿಕ್ಟರ್ ಭೇಟಿ ನೀಡಿದ್ದರು. ಅದೇ ವಿಷಯವಾಗಿ ಚರ್ಚಿಸಲು ಚೀನಾಕ್ಕೆ ಅನಿರೀಕ್ಷಿತ ಭೇಟಿ ನೀಡಿದರು. ಉಕ್ರೇನ್ ಮತ್ತು ರಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಚೀನಾದ ರಚನಾತ್ಮಕವಾದ ಉಪಕ್ರಮಗಳನ್ನು ಹೊಗಳಿದ ಅವರು, ಜಾಗತಿಕ ಪ್ರಕ್ಷುಬ್ಧ ಪರಿಸ್ಥಿತಿಯನ್ನು ಸ್ಥಿರಗೊಳಿಸುವ ಶಕ್ತಿ ಬೀಜಿಂಗ್ಗೆ ಇದೆ ಎಂದು ಹೊಗಳಿದರು ಎಂದು ಚೀನಾದ ವಾಹಿನಿ ಸಿಸಿಟಿವಿ ತಿಳಿಸಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಅಂತ್ಯವು ‘ಮೂರು ವಿಶ್ವ ಶಕ್ತಿಗಳಾದ ಅಮೆರಿಕ, ಯುರೋಪಿಯನ್ ಒಕ್ಕೂಟ ಮತ್ತು ಚೀನಾದ ನಿರ್ಧಾರವನ್ನು ಅವಲಂಬಿಸಿದೆ’ ಎಂದು ವಿಕ್ಟರ್ ಓರ್ಬನ್ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ, ಕ್ಸಿ ಅವರ ಜೊತೆ ಕೈಕುಲುಕುವ ಚಿತ್ರವನ್ನೂ ಹಂಚಿಕೊಂಡಿದ್ದರು.
ಬಾಲಿವುಡ್ನ ಖ್ಯಾತ ಸೆಲೆಬ್ರಿಟಿ ಜೋಡಿಗಳಲ್ಲಿ ಜೆನಿಲಿಯಾ ಡಿಸೋಜಾ ಹಾಗು ರಿತೇಷ್ ದೇಶ್ಮುಖ್ ಕೂಡ ಒಬ್ಬರು. ಪ್ರೀತಿಸಿ ಮದುವೆಯಾದ ಜೆನಿಲಿಯಾ ಹಾಗೂ ರಿತೇಷ್ ಮುದ್ದಾದ ಮಕ್ಕಳ ಜೊತೆ ಹಾಯಾಗಿ ಸಂಸಾರ ಮಾಡುತ್ತಿದ್ದಾರೆ.ಇದೀಗ ಈ ಸೆಲೆಬ್ರಿಟಿ ಜೋಡಿ ಅಂಗಾಗ ದಾನ ಮಾಡುವ ಘೋಷಣೆ ಮಾಡುವ ಮೂಲಕ ಮಾದರಿ ಆಗಿದ್ದಾರೆ. ಈ ಬಗ್ಗೆ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ದಂಪತಿಗೆ ಧನ್ಯವಾದ ಹೇಳಿದ್ದು, ಈ ವಿಡಿಯೋವನ್ನು ರಿತೇಷ್ ಶೇರ್ ಮಾಡಿದ್ದಾರೆ. ಜುಲೈಯಲ್ಲಿ ನಡೆಯುತ್ತಿರುವ ಅಂಗಾಂಗ ದಾನದ ತಿಂಗಳಲ್ಲಿ ತಮ್ಮ ಅಂಗಾಂಗ ದಾನ ಮಾಡಿದ ಬಾಲಿವುಡ್ ದಂಪತಿ ರಿತೇಶ್, ಜೆನಿಲಿಯಾಗೆ ಧನ್ಯವಾದಗಳು. ಇದು ಇತರರನ್ನು ಸಹ ಪ್ರೇರಣೆ ನೀಡುತ್ತದೆ ಎಂದು ಈ ಜೋಡಿಯ ವಿಡಿಯೋ ಶೇರ್ ಮಾಡಿ ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ ಎಕ್ಸ್ ಖಾತೆಯಲ್ಲಿ ತಿಳಿಸಿದೆ. ಈ ಮೊದಲು ರಿತೇಷ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ‘ನಾನು ಹಾಗೂ ಜೆನಿಲಿಯಾ ನಮ್ಮ ಅಂಗಾಗ ದಾನ ಮಾಡುವ ಪ್ರತಿಜ್ಞೆ ಮಾಡಿದ್ದೇವೆ’…
ಕನ್ನಡದ ಹುಡುಗಿ, ಬಾಲಿವುಡ್ ಬೆಡಗಿ ಅಮ್ಮನಾಗುವ ಸಂಭ್ರಮದಲ್ಲಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಈ ಮಧ್ಯೆ ಅಂಬಾನಿ ಮನೆ ಮಗನ ಸಂಗೀತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ತುಂಬು ಗರ್ಭಿಣಿಯಾಗಿರುವ ದೀಪಿಕಾ ಕಾರ್ಯಕ್ರಮದಲ್ಲಿ ದುಬಾರಿ ಸೀರೆಯುಟ್ಟು ನೋಡುಗರನ್ನು ಮನ ಸೂರೆಗೊಳಿಸಿದ್ದಾರೆ. ದೀಪಿಕಾ ಪಡುಕೋಣೆ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ಕಾರ್ಯಕ್ರಮದಲ್ಲಿ ಪರ್ಪಲ್ ಕಲರ್ ಸೀರೆ ಧರಿಸಿ ಮಿರಮಿರ ಮಿಂಚಿದ್ದಾರೆ. ಇದೇ ಸೀರೆಯಲ್ಲಿ ದೀಪಿಕಾ ಪಡುಕೋಣೆ ಬೇಬಿ ಬಂಪ್ ಫೋಟೋಶೂಟ್ ಕೂಡ ಮಾಡಿಸಿದ್ದಾರೆ. ಅಂದ ಹಾಗೆ ದೀಪಿಕಾ ಧರಿಸಿದ್ದ ಈ ಸೀರೆಯ ಬೆಲೆ 1 ಲಕ್ಷದ 92 ಸಾವಿರ ರೂ. ಮೌಲ್ಯದಾಗಿದ್ದು, ಈ ಸೀರೆಯ ರೇಟ್ ಕೇಳಿ ಫ್ಯಾನ್ಸ್ ದಂಗಾಗಿದ್ದಾರೆ. ದೀಪಿಕಾ ಧರಿಸಿದ್ದ ಈ ದುಬಾರಿ ಸೀರೆಯನ್ನು ತಯಾರಿಸಲು 3,400 ಗಂಟೆಗಳು ತೆಗೆದುಕೊಳ್ಳಲಾಗದೆ. ಕೈಗಳಿಂದಲೇ ಹೆಚ್ಚಾಗಿ ಕಸೂತಿ ಮಾಡಿ ಸೀರೆಯನ್ನು ಹೆಣೆಯಾಗಿದ್ದು ಈ ಸೀರೆಯಲ್ಲಿ ನಟಿ ಅಪ್ಸರೆಯಂತೆ ಕಂಗೊಳಿಸಿದ್ದಾರೆ. ಇದರಲ್ಲಿ 16ನೇ ಶತಮಾನದ ವಾಸ್ತುಶಿಲ್ಪಗಳನ್ನು ಬಿಡಿಸಲಾಗಿದೆಯಂತೆ. ಜಾಕೆಟ್ ಅನ್ನು ರಜಪೂತರ ಕಾಲದ ಚನಿಯಾ…