Author: AIN Author

ಬೆಂಗಳೂರು:- ವಿದ್ಯುತ್ ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದಿನಿಂದ ಮೂರು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. https://ainlivenews.com/bjp-failed-as-opposition-in-the-session-arvind-limbavali/ ನಗರದ ಗಂಗಾನಗರ, ಲಕ್ಷ್ಮಯ್ಯ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾರ್ಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್, ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವಥ್‌ ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಫುಡ್‌ವರ್ಲ್ಡ್ ಆರ್‌ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್, ಸಿಬಿಐ ಮುಖ್ಯರಸ್ತೆ, ಎಂಎಲ್‌ಎ ಲೇಔಟ್‌ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್‌ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80′ ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ ಲೇಔಟ್, ಯೋಗೇಶ್ವರ ನಗರ, ರಿಂಗ್ ರೋಡ್, ಕುವೆಂಪು…

Read More

ಈಗಿನ ಕಾಲದಲ್ಲಂತೂ ಹೆಚ್ಚಿನವರ ಮನೆಯಲ್ಲಿ ಗೀಸರ್ ಇದೆ. ಸ್ವಿಚ್ ಹಾಕಿದ್ರೆ ಸಾಕು ಸ್ನಾನ ಮಾಡಲು ಬಿಸಿ ಬಿಸಿ ನೀರು ಬಂದು ಬಿಡುತ್ತದೆ. ಚಳಿಗಾಲದಲ್ಲಂತೂ ಹೆಚ್ಚಿನವರು ಗೀಸರ್ನ್ನು ಬಳಸುತ್ತಾರೆ. ಗೀಸರ್ ಬಳಕೆ ಸುರಕ್ಷಿತವೆಂದು ಹೇಳಲಾಗುವುದರಿಂದ ಹೆಚ್ಚಿನವರು ಗೀಸರ್ ಬಳಸುವಾಗ ಸ್ವಲ್ಪ ಅಜಾಗರೂಕತೆಯಿಂದಿರುತ್ತಾರೆ. ಆದರೆ ನಿಮಗೆ ಗೊತ್ತಾ ಗೀಸರ್ ಬಳಕೆಯಲ್ಲಿ ಅಜಾಗರೂಕತೆ ತೋರಿಸಿದರೆ ಗೀಸರ್ ಸ್ಫೋಟವಾಗುವ ಸಾಧ್ಯತೆಯೂ ಇದೆ. ಗೀಸರ್‌ ಸ್ಫೋಟ ಏಕೆ ಸಂಭವಿಸುತ್ತದೆ ಗೀಸರ್ಗಳನ್ನು ದೀರ್ಘಕಾಲದವರೆಗೆ ಇರಿಸಿದರೆ, ಗೀಸರ್ ಬಿಸಿಯಾಗುತ್ತದೆ ಮತ್ತು ಇದರಿಂದಾಗಿ ಅದು ಸ್ಫೋಟಗೊಳ್ಳಬಹುದು. ನಮ್ಮಲ್ಲಿ ಹೆಚ್ಚಿನವರು ಗೀಸರ್ ಸ್ವಿಚ್ ಹಾಕಿ ಮರೆತುಬಿಟ್ಟಿರುತ್ತಾರೆ. ಇದರಿಂದ ಗೀಸರ್ ತುಂಬಾ ಬಿಸಿಯಾಗಿ ಅದರ ಬಾಯ್ಲರ್ ಒತ್ತಡಕ್ಕೆ ಒಳಗಾಗುತ್ತದೆ ಮತ್ತು ಸೋರಿಕೆಯ ಸಮಸ್ಯೆ ಇರುತ್ತದೆ. ಒತ್ತಡದ ಹೆಚ್ಚಳದಿಂದಾಗಿ ಗೀಸರ್ ಸ್ಫೋಟಗೊಳ್ಳಬಹುದು. ಬಾಯ್ಲರ್ ಸೋರಿಕೆ ಅಥವಾ ಸ್ಫೋಟಗೊಂಡರೆ, ವಿದ್ಯುತ್ ಆಘಾತದಿಂದ ಅವಘಡ ಸಂಭವಿಸಬಹುದು. ಉಪ್ಪು ನೀರು ಸರಬರಾಜು ಮಾಡುವ ಗೀಸರ್ಗಳನ್ನು ಪ್ರತಿ ಎರಡು ವರ್ಷಗಳಿಗೊಮ್ಮೆ ಮರುಗಾತ್ರಗೊಳಿಸಬೇಕು, ಇಲ್ಲದಿದ್ದರೆ ಶಾರ್ಟ್ ಸರ್ಕ್ಯೂಟ್ನ ಹೆಚ್ಚಿನ ಅಪಾಯವಿದೆ. ಹೆಚ್ಚಿನ ಗೀಸರ್ಗಳಲ್ಲಿ ಸ್ವಯಂಚಾಲಿತ…

Read More

ಸೂರ್ಯೋದಯ: 05:58, ಸೂರ್ಯಾಸ್ತ : 06:47 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2080,ಗ್ರಿಷ್ಮ ಋತು, ದಕ್ಷಿಣಾಯಣ , ಆಷಾಢ ಮಾಸ , ಕೃಷ್ಣ ಪಕ್ಷ, ತಿಥಿ: ಸಪ್ತಮಿ ನಕ್ಷತ್ರ: ರೇವತಿ ರಾಹು ಕಾಲ: 09:00 ನಿಂದ 10:30 ತನಕ ಯಮಗಂಡ: 01:30 ನಿಂದ 03:00 ತನಕ ಗುಳಿಕ ಕಾಲ: 06:00 ನಿಂದ 07:30 ತನಕ ಅಮೃತಕಾಲ: ಬೆ.10:44 ನಿಂದ ಮ.12:14 ತನಕ ಅಭಿಜಿತ್ ಮುಹುರ್ತ: ಬೆ.11:57 ನಿಂದ ಮ.12:48 ತನಕ ಮೇಷ ರಾಶಿ: ನಂಬಿದ ಪಾಲುದಾರಿಕೆ ವ್ಯವಹಾರದಲ್ಲಿ ಮೋಸ ಸಂಭವ, ತಂದೆ ಅಥವಾ ಹಿರಿಯರಿಗೆ ಆರೋಗ್ಯದಲ್ಲಿ ಏರುಪೇರು ಸಂಭವ, ನಿಮ್ಮ ಪ್ರಾಮಾಣಿಕ ಪ್ರೇಮದಲ್ಲಿ ಮೋಸ ಸಂಭವ,ಪರಸ್ತ್ರೀ ಗಾಗಿ ಹಣವ್ಯಯ, ಪತ್ನಿಯೊಂದಿಗೆ ವಿರಸ, ಉದ್ಯೋಗ ಸ್ಥಳದಲ್ಲಿ ರಾಜಮನ್ನಣೆ, ನಂಬಿದವರಿಂದ ಕಲಹ, ಪುಸ್ತಕ, ಕಂಪ್ಯೂಟರ್, ದಿನಬಳಕೆ-ವಸ್ತು, ತಂತ್ರಜ್ಞಾನ ಉದ್ಯಮ ಆರ್ಥಿಕ ಚೇತರಿಕೆ ಕಾಣಲಿದೆ, ಪಿತ್ರಾರ್ಜಿತ ಆಸ್ತಿ ಲಭ್ಯ, ಭೂ ವ್ಯಾಪಾರದಲ್ಲಿ ಲಾಭ ,ಇಟ್ಟಿಗೆ ಕಟ್ಟಡ ಸಾಮಗ್ರಿಗಳ ವ್ಯಾಪಾರಿಗಳಿಗೆ ಶುಭಕಾಲ, ಮದುವೆ…

Read More

ಬೆಂಗಳೂರು:- ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧ ಅರವಿಂದ್ ಲಿಂಬಾವಳಿ ಆಕ್ರೋಶ ಹೊರ ಹಾಕಿದ್ದಾರೆ. https://ainlivenews.com/meat-lovers-must-see-this-news-dog-meat-trade-at-majestic/ ಟ್ವೀಟ್ ಮಾಡಿರುವ ಅವರು, ಈ ಬಾರಿಯ ಅಧಿವೇಶನದಲ್ಲಿ ಪ್ರತಿಪಕ್ಷವಾಗಿ ಬಿಜೆಪಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದ್ದಾರೆ. ಅಧಿವೇಶನದಲ್ಲಿ ನಾಯಕರ ನಡೆ ಗಮನಿಸಿದರೆ, ಮುಂದಿನ ದಿನಗಳಲ್ಲಿ ಬಿಜೆಪಿ ಜನಪರ ಹೋರಾಟಗಳಲ್ಲಿ ಹೇಗೆ ತನ್ನನ್ನು ತೊಡಗಿಸಿಕೊಳ್ಳಬಹುದು ಎಂಬುದು ನಿಷ್ಠಾವಂತ, ದೇವದುರ್ಲಭ ಕಾರ್ಯಕರ್ತರಿಗೆ ಆತಂಕದ ವಿಷಯವಾಗಿದೆ ಎಂದಿದ್ದಾರೆ. ಬೆರಳೆಣಿಕೆಯಷ್ಟು ಶಾಸಕರನ್ನು ಹೊಂದಿದ್ದ ದಿನಗಳಲ್ಲೂ ಕಲಾಪಗಳಲ್ಲಿ ಆರ್ಭಟಿಸುತ್ತಿದ್ದ, ಜನರ ಆಶೋತ್ತರಗಳಿಗೆ ದನಿಯಾಗುತ್ತಿದ್ದ ಬಿಜೆಪಿಯನ್ನು ನೋಡಿದ್ದ ನನಗೆ, ಸದ್ಯದ ಪಕ್ಷದ ಈ ಪರಿಸ್ಥಿತಿ ನೋಡಿ ತೀವ್ರ ಬೇಸರವಾಗುತ್ತಿದೆ ಎಂದು ಹೇಳಿದ್ದಾರೆ. ಐಟಿ-ಬಿಟಿ ರಾಜಧಾನಿ ಎನಿಸಿರುವ, ವಿಜ್ಞಾನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಬೆಂಗಳೂರು ಸೇರಿದಂತೆ, ಅನೇಕ ಜಿಲ್ಲೆಗಳಲ್ಲಿ ಡೆಂಗ್ಯೂ ತಾಂಡವವಾಡುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಲಕ್ಷಾಂತರ ಜನ ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಈ ಬಗ್ಗೆ ಬೆಳಕು ಚೆಲ್ಲಬೇಕು, ಜನರ ಸಂಕಷ್ಟಕ್ಕೆ ಕನ್ನಡಿಯಾಗಬೇಕು ಎಂದು…

Read More

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ ಎಂಬುವವರಿಂದ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. https://ainlivenews.com/fire-accident-in-cargo-ship-indian-coast-guard-extinguished-the-fire/ ನಗರದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ಕೆಜಿ ಶಂಕಿತ ನಾಯಿ ಮಾಂಸವನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ಸರಬರಾಜು ಆಗುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಹಲವು ಹಿಂದು ಕಾರ್ಯಕರ್ತರು ದಾಳಿ ನಡೆಸಿದ ವೇಳೆ ಮಾಂಸದ ಪಾರ್ಸೆಲ್‌ಗಳಲ್ಲಿ ನಾಯಿ ಮಾಂಸ ಕಂಡುಬಂದಿದೆ. ಆದರೆ, ಈ ಆರೋಪಗಳನ್ನು ಅಬ್ದುಲ್‌ ರಜಾಕ್‌ ಅಲ್ಲಗಳೆದಿದ್ದಾರೆ. ನಾಯಿ ಮಾಂಸದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದು ಸಂಘಟನೆಗಳು ದಾಳಿ ಮಾಡಿದ್ದು, ಈ ವೇಳೆ ಸಾವಿರಾರು ಕೆ.ಜಿ ಮಾಂಸ ಪತ್ತೆಯಾಗಿದೆ. ಆದರೆ, ಎರಡು ದಿನಕ್ಕೊಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತದೆ. ಇವತ್ತು ಎರಡು ಸಾವಿರ ಕೆಜಿ ಮಾಂಸ ಬಂದಿದೆ. ಹನ್ನೆರಡು ವರ್ಷದಿಂದ ಈ ವ್ಯವಹಾರ ನಡೆಯುತ್ತಿದೆ. ಆಹಾರ ಇಲಾಖೆ…

Read More

ಮಂಗಳೂರು:- ಗೋವಾ ಕಡಲ ಕಿನಾರೆಯ ಅರಬ್ಬಿ ಸಮುದ್ರದಲ್ಲಿ ಸರಕು ಸಾಗಾಟದ ಹಡಗಿನಲ್ಲಿ ಅಗ್ನಿ ಅವಘಡ ಉಂಟಾಗಿರುವಂತಹ ಘಟನೆ ಜರುಗಿದೆ. https://ainlivenews.com/warning-be-careful-before-trusting-apps-and-investing-money/ ಈ ಘಟನೆ ಜುಲೈ 20ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹೆಲಿಕಾಪ್ಟರ್ ಮತ್ತು ರಕ್ಷಣಾ ಹಡಗಿನ ಮೂಲಕ ಇಂಡಿಯನ್ ಕೋಸ್ಟ್​ ಗಾರ್ಡ್​ನಿಂದ ಬೆಂಕಿ ನಂದಿಸಲಾಗಿದೆ. ಸದ್ಯ ಹಡಗನ್ನು ಮಂಗಳೂರು ಕಡಲ ಕಿನಾರೆಗೆ ತಂದು ನಿಲ್ಲಿಸಲಾಗಿದೆ. ಗುಜರಾತ್​ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೋಗೆ ಹಡಗು ಹೊರಟಿದ್ದ ವೇಳೆ ಅವಘಡ ಸಂಭವಿಸಿತ್ತು. ಸದ್ಯ ಲಂಗರು ಹಾಕಿರುವ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವದ ಜೊತೆ ಹಡಗು‌ ಮುಳುಗುವ ಆತಂಕ ಉಂಟಾಗಿದೆ. ಆದರೆ ಇದರಿಂದ ಮಂಗಳೂರು ಕಡಲ ಕಿನಾರೆಗೆ ಯಾವುದೇ ರೀತಿಯ ಅಪಾಯವಿರುವುದಿಲ್ಲ ಮತ್ತು ಸಂಭಾವ್ಯ ಅವಘಡ ಎದುರಿಸಲು ಸಿದ್ದ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

Read More

ತುಮಕೂರು:- ಆ್ಯಪ್​ಗಳನ್ನ ನಂಬಿ ಹಣ ಹಾಕೋ ಮುನ್ನ ಹುಷಾರ್, ಹೆಚ್ಚು ಹಣ ಬರಲಿ ಅಂತ ಹೀಗೆ ಮಾಡಿದ್ರೆ ಕೋಟಿ-ಕೋಟಿ ದೋಖಾ ಮಾಡ್ತಾರೆ ಹುಷಾರ್. ಇದರ ಕಂಪ್ಲೀಟ್ ಡೀಟೈಲ್ಸ್ ತಿಳಿಯಲು ಈ ಸ್ಟೋರಿ ಪೂರ್ತಿ ಓದಿ. https://ainlivenews.com/silver-jubilee-of-kargil-victory-in-gadag-district/ ತುಮಕೂರು ಜಿಲ್ಲೆಯಲ್ಲಿ ಆನ್​ಲೈನ್ ಟ್ರೇಡಿಂಗ್ ಮೂಲಕ ಕೋಟ್ಯಾಂತರ ರೂಪಾಯಿಯ ಮಹಾದೋಖಾ ಪ್ರಕರಣವೊಂದು ಬೆಳಕಿಗೆ ಬಂದಿದೆ.. DAAI’ ಎಂಬ ಆನ್​ಲೈನ್ ಆ್ಯಪ್ ಹೆಸರಿನಲ್ಲಿ ಸುಮಾರು 5 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆಯಾಗಿರುವ ಬಗ್ಗೆ ಸಿಎಸ್​ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಯಾವುದೇ ಅಧಿಕೃತ ಮಾಹಿತಿ ಇಲ್ಲದ DAAI ಆನ್ ಲೈನ್ ಆ್ಯಪ್​ನ ಮೋಡಿಗೆ ಮರುಳಾದ ಯುವಕರು, ಮಹಿಳೆಯರು, ಪುರುಷರು, 7000 ದಿಂದ 5 ಲಕ್ಷದವರೆಗೂ ಹಣ ಹೂಡಿ ಇದೀಗ ಕಂಗಲಾಗಿದ್ದಾರೆ. ಆರಂಭದಲ್ಲಿ ಒಂದೆರೆಡು ತಿಂಗಳು ಅಸಲಿ ಹಣಕ್ಕೆ ಬಡ್ಡಿ ಹಾಕಿ ಬಳಿಕ ಗ್ರಾಮದಲ್ಲಿ ಕಾರ್ಯಕ್ರಮ ನಡೆಸಿ ಮತ್ತಷ್ಟು ಹಣ ಹಾಕುವಂತೆ ಆಸೆ ತೋರಿಸಿ ಇದೀಗ ಏಕಾಏಕಿ ಆ್ಯಪ್ ಬಂದ್ ಮಾಡುವ ಮೂಲಕ ಜನರಿಗೆ…

Read More

ಗದಗ: ಜಿಲ್ಲೆಯಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವದ ರಜತ ಮಹೋತ್ಸವ ಆಚರಿಸಲಾಯಿತು. ಗದಗ ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ವತಿಯಿಂದ ಕಾರ್ಯಕ್ರಮ ನಡೆಯಿತು. ಗದಗ ಶಿವಾನಂದ ಬೃಹನ್ಮಠದ ಅಭಿನವ ಶಿವಾನಂದ ಸ್ವಾಮೀಜಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. 1962ರ ಚೈನಾ ಯುದ್ಧ, 1965, 1971ರ ಇಂಡೋ-ಪಾಕ್ ಯುದ್ಧ ಹಾಗೂ 1999ರ ಕಾರ್ಗಿಲ್ ಯುದ್ಧದಲ್ಲಿ ತಮ್ಮ ಪ್ರಾಣ ಅರ್ಪಣೆ ಮಾಡಿದ ಹುತಾತ್ಮ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು. https://ainlivenews.com/heavy-rain-flood-threat-in-nippani-taluk-villagers-are-worried/ ನಂತರ ಒಂದು ನಿಮಿಷ ಮೌನಾಚರಿಸುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಸತತ 85 ದಿನಗಳ ಹೋರಾಟದ ಫಲವಾಗಿ ಜಯ ಸಾಧಿಸುವ ಮೂಲಕ ಸಂತಸ ಹಾಗೂ ದುಃಖ ಎರಡನ್ನು ಸಮ್ಮಿಳಿತ ಮಾಡಿಕೊಂಡು ಕಾರ್ಗಿಲ್ ವಿಜಯೋತ್ಸವ ಆಚರಿಸಕೊಂಡು ಬರಲಾಗುತ್ತಿದೆ. ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸುವಂತಾಗಬೇಕು. ಸರ್ಕಾರದ ಕಾರ್ಯಕ್ರಮವನ್ನಾಗಿ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ ನಗರದ ಕಿತ್ತೂರು ಚೆನ್ನಮ್ಮ ವೃತ್ತದಿಂದ ಮುಳಗುಂದ…

Read More

ಚಿಕ್ಕೋಡಿ :- ನಿಪ್ಪಾಣಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಹುನ್ನರಗಿ ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. https://ainlivenews.com/heavy-rains-in-karnataka-school-and-college-holidays-in-these-districts-tomorrow-too/ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, 40ಕ್ಕೂ ಅಧಿಕ ಕುಟುಂಬಗಳು ಸ್ಥಳಾಂತರಗೊಂಡಿವೆ. ಭಾರೀ ಮಳೆಯಿಂದ ವೇದಗಂಗಾ ನದಿ ಉಕ್ಕಿ ಹರಿಯುತ್ತಿದೆ. ಹುನ್ನರಗಿ ಗ್ರಾಮದಲ್ಲಿ ಗಂಜಿ ಕೇಂದ್ರ ಸ್ಥಾಪನೆ ಮಾಡಲಾಗಿದ್ದು, ಗಂಜಿ ಕೇಂದ್ರಕ್ಕೆ ಪ್ರವಾಹ ಸಂತ್ರಸ್ತರು ಸ್ಥಳಾಂತರಗೊಳ್ಳುತ್ತಿದ್ದಾರೆ. ಗ್ರಾಮಸ್ಥರು ಜಾನುವಾರುಗಳ ಜೊತೆಗೆ ಕರೆದೊಯ್ಯುತ್ತಿದ್ದಾರೆ. ಒಟ್ಟು ೫೦ಕ್ಕೂ ಅಧಿಕ ಕುಟುಂಬಗಳು ಸ್ಥಳಾಂತರ ಸಾಧ್ಯತೆ ಇದೆ.

Read More

ಬೆಂಗಳೂರು:- ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮುಂಜಾಗ್ರತ ಕ್ರಮವಾಗಿ ಕೆಲವು ಜಿಲ್ಲೆಗಳಿಗೆ ನಾಳೆ ಕೂಡ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಧಾರವಾಡ, ಕೊಡಗು ಜಿಲ್ಲೆಗಳಿಗೆ ರಜೆ ಘೊಷಿಸಲಾಗಿದೆ. https://ainlivenews.com/use-aloe-vera-for-radiant-skin/ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದ್ರೂ ಬಿರುಗಾಳಿ ಹಿನ್ನೆಲೆ ಜಿಲ್ಲೆಯ 6 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಎನ್‌.ಆರ್‌.ಪುರ ಹಾಗೂ ಕೊಪ್ಪ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಜಿಲ್ಲೆಯ ಶಾಲಾ‌ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಮಳೆ ಹಾಗೂ ಶೀತ ಗಾಳಿ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ನಿನ್ನೆ ಮತ್ತು ಇಂದು ರಜೆ ನೀಡಲಾಗಿತ್ತು. ಆದರೆ ಮಳೆ…

Read More