Author: AIN Author

ಬೆಂಗಳೂರು:- ಬೆಂಗಳೂರಿನ ಪ್ರಮುಖ ಫ್ಲೈ ಓವರ್ ಆದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ವಾಹನಗಳ ಸಂಚಾರಕ್ಕೆ ಬಂದ್ ಆಗಲಿದೆ. ಈ ಫ್ಲೈ ಓವರ್ ಕಾರಣಕ್ಕೆ ನಗರದಲ್ಲಿ ಸಂಚಾರ ದಟ್ಟಣೆ ಸ್ವಲ್ಪ ಕಡಿಮೆಯಾಗಿದೆ. ಆದರೆ ಈಗ ಪ್ರತಿದಿನ ಮುಂದಿನ ಆದೇಶದ ತನಕ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ಹಿನ್ನೆಲೆಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. https://ainlivenews.com/courtesy-murder-case-this-is-the-situation-of-the-youtuber-who-took-the-name-of-dharmasthala/ ಈ ಬಗ್ಗೆ X ಮಾಡಿರುವ ಬೆಂಗಳೂರು ನಗರ ಸಂಚಾರಿ ಪೊಲೀಸರು, ಹೊಸೂರು ರಸ್ತೆ ಎಲಿವೇಟೆಡ್‌ ಫ್ಲೈಓವರ್‌ನಲ್ಲಿ ನಿರ್ವಹಣೆ ಕಾಮಗಾರಿ ನಡೆಯಲಿರುವುದರಿಂದ ರಾತ್ರಿಯಿಂದಲೇ ಅನ್ವಯವಾಗುವಂತೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ಎಲ್ಲಾ ರೀತಿಯ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯವರೆಗೆ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

Read More

ಪ್ರಸ್ತುತ ಜನರು ಆನ್‌ಲೈನ್ ಸೇವೆಗಳತ್ತ ಹೆಚ್ಚಾಗಿ ವಾಲುತ್ತಿದ್ದು, ಆ ಪೈಕಿ ಬಳಕೆದಾರರ ಸ್ಮಾರ್ಟ್‌ಫೋನಿನಲ್ಲಿ ಗೂಗಲ್ ಪೇ, ಫೋನ್‌ ಪೇ ಹಾಗೂ ಪೇಟಿಎಮ್‌ ಆ್ಯಪ್ಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಟೀ ಸ್ಟಾಲ್‌, ತರಕಾರಿ ಅಂಗಡಿ, ಕಿರಾಣಿ ಸ್ಟೋರ್, ಸೂಪರ್ ಮಾರ್ಕೆಟ್‌ ಸೇರಿದಂತೆ ಶೋ ರೂಮ್‌/ಮಾಲ್‌ಗಳಲ್ಲಿಯೂ ಗೂಗಲ್ ಪೇ, ಫೋನ್ ಪೇ UPI ಆ್ಯಪ್‌ಗಳನ್ನು ಬಳಕೆ ಮಾಡಿ ಬಿಲ್ ಪಾವತಿಸುವುದು ಸಾಮಾನ್ಯವಾಗಿದೆ. ಈ ಆ್ಯಪ್‌ಗಳ ಬಳಕೆ ಸರಳ ಮತ್ತು ಸುರಕ್ಷಿತವು ಆಗಿವೆ. ನೀವು ಫೋನ್ ಪೇ ಬಳಕೆದಾರರಾಗಿದ್ದರೆ ಈ ಸುದ್ದಿ ನೋಡಿ. https://ainlivenews.com/mangaluru-food-poisoning-in-jail-15-prisoners-fall-ill/ ಹೌದು, ನೀವು ದಿನನಿತ್ಯ ಗ್ಯಾಸ್ ಸಿಲಿಂಡರ್ ಬಳಸುತ್ತೀರ ಅಲ್ವಾ? ಒಂದು ಸಂತೋಷದ ಸುದ್ದಿ ಇಲ್ಲಿದೆ. ನಿಮ್ಮೆಲ್ಲರಿಗೂ ಫೋನ್‌ಪೇ ಒಂದು ಸೂಪರ್ ಆಫರ್ ತಂದಿದೆ. ಹೌದು, ಫೋನ್‌ಪೇ ಮೂಲಕ ಗ್ಯಾಸ್ ಬುಕ್ ಮಾಡಿದ್ರೆ ನಿಮಗೆ ಉಚಿತವಾಗಿ ಸಿಲಿಂಡರ್ ಸಿಗುವ ಚಾನ್ಸ್ ಇದೆ. ಇದನ್ನೆಲ್ಲ ಹೇಗೆ ಅಂತ ತಿಳ್ಕೊಳ್ಳೋಣ ಬನ್ನಿ. ನಮ್ಮ ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಖಾಲಿ ಆದಾಗಲೆಲ್ಲಾ ನಾವು ಅದನ್ನ ಮತ್ತೆ ಬುಕ್…

Read More

ಕೂದಲು ಉದ್ದವಾಗಿ, ಹೊಳೆಯುತ್ತಿರಬೇಕು ಎಂದು ಎಲ್ಲಾ ಹೆಣ್ಣು ಮಕ್ಕಳು ಬಯಸುತ್ತಾರೆ. ಯಾಕೆಂದರೆ ತಲೆಯ ಕೂದಲು ಹೆಣ್ಣಿನ ಅಂದವನ್ನು ಹೆಚ್ಚಿಸುತ್ತದೆ. ಮಹಿಳೆಯೊಬ್ಬಳು ಉದ್ದವಾದ ಕೂದಲನ್ನು ಬಿಟ್ಟುಕೊಂಡು ಬೀದಿಯಲ್ಲಿ ನಡೆದುಕೊಂಡು ಹೋದರೆ ಎಲ್ಲರೂ ಒಮ್ಮೆಲೆ ಅವಳನ್ನೇ ಕಣ್ಣು ಬಿಟ್ಟುಕೊಂಡು ನೋಡುತ್ತಿರುತ್ತಾರೆ. ಆದರೆ ಇಂದಿನ ದಿನಗಳಲ್ಲಿ ವಾತಾವರಣದ ಕೊಳೆ, ಧೂಳು, ಹಾಗೂ ಹಾರ್ಮೋನ್ಗಳ ಸಮಸ್ಯೆ ಮತ್ತು ರಾಸಾಯನಿಕಯುಕ್ತ ಹೇರ್ ಪ್ರೊಡಕ್ಟ್ಗಳನ್ನು ಬಳಸುವುದರಿಂದ ಕೂದಲುದುರುವ ಸಮಸ್ಯೆ ಕಾಡುತ್ತಿದೆ. ಹಾಗಾಗಿ ಕೂದಲು ಬಾಚುವಾಗ ನೆಲದ ಮೇಲೆ ಕೂದಲಿನ ರಾಶಿ ಬಿದ್ದಿರುವುದು ನೋಡಿದರೆ ಮನಸ್ಸಿಗೆ ಬೇಸರವಾಗುತ್ತದೆ. https://ainlivenews.com/skip-the-pizza-burgers-noodles-and-eat-ragi-balls-a-model-program-in-bengaluru/ ಕೂದಲಿಗೆ ಈರುಳ್ಳಿ ರಸ ಹಚ್ಚಿದರೆ ಏನಾಗುತ್ತದೆ? ಕೂದಲಿನ ಎಲ್ಲಾ ರೀತಿಯ ಸಮಸ್ಯೆಗಳಿಗೆ ಈರುಳ್ಳಿ ರಸವು ತುಂಬಾ ಪರಿಣಾಮಕಾರಿ ಮನೆಮದ್ದಾಗಿದೆ. ಪ್ರತಿದಿನವೂ ಈರುಳ್ಳಿ ರಸವನ್ನ ಬಳಸುವುದರಿಂದ ಕೂದಲಿನ ಎಲ್ಲಾ ಸಮಸ್ಯೆಗಳಿಂದಲೂ ಮುಕ್ತಿ ಸಿಗುತ್ತದೆ. ಈರುಳ್ಳಿ ರಸದಲ್ಲಿರುವ ಅಂಶಗಳು ನಿಮ್ಮ ಕೂದಲಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ? ಕೂದಲು ಉದುರುವಿಕೆಯ ಸಮಸ್ಯೆಯನ್ನು ತೊಡೆದುಹಾಕಲು ನೀವು ಈರುಳ್ಳಿ ರಸವನ್ನು ಬಳಸಬಹುದು. ಹೌದು, ಈರುಳ್ಳಿ…

Read More

ಬೆಂಗಳೂರು:- ಕರ್ನಾಟಕದಲ್ಲಿ ಹಕ್ಕಿ ಜ್ವರದ ಭೀತಿ ಎದುರಾಗಿದ್ದು, ಬಳ್ಳಾರಿಯಲ್ಲಿ 17 ಸಾವಿರ ಕೋಳಿಗಳ ಮಾರಣಹೋಮ ಮಾಡಲಾಗಿದೆ. https://ainlivenews.com/want-to-normalize-blood-sugar-then-eat-this-vegetable-for-dinner/ ಆಂಧ್ರ, ತೆಲಂಗಾಣದಲ್ಲಿ ಅಬ್ಬರಿಸುತ್ತಿದ್ದ ಹಕ್ಕಿಜ್ವರ ಕರ್ನಾಟಕಕ್ಕೂ ಕಾಲಿಟ್ಟಿದೆ. ಅದರಲ್ಲೂ ಬಳ್ಳಾರಿಯಲ್ಲಿ ಕೋಳಿಗಳ ಮಾರಣಹೋಮವೇ ನಡೆದಿದೆ. ಹಕ್ಕಿಜ್ವರ ಕಾಣಿಸಿಕೊಂಡ ಕಾರಣಕ್ಕೆ ಜಿಲ್ಲಾಡಳಿತವೇ 7 ಸಾವಿರ ಜೀವಂತ ಕೋಳಿಗಳನ್ನು ವಧೆ ಮಾಡಿದೆ. ಹಕ್ಕಿಜ್ವರದಿಂದ ಕುರೇಕುಪ್ಪದಲ್ಲಿ 2400 ಕೋಳಿಗಳು ಸಾವಿನ ಮನೆ ಸೇರಿವೆ. ಜಿಲ್ಲೆಯಲ್ಲಿ ಈ ವರೆಗೆ 17400 ಕೋಳಿಗಳು ಸತ್ತಿವೆ. ಅಸಿಲ್ ಹಾಗೂ ಕಾವೇರಿ ತಳಿ ಕೋಳಿಗಳೇ ಹಕ್ಕಿಜ್ವರಕ್ಕೆ ಟಾರ್ಗೆಟ್ ಆಗಿವೆ. ಬಳ್ಳಾರಿಯ ದರೋಜಿ ಕೆರೆಗೆ ಸಾವಿರಾರು ವಲಸೆ ಪಕ್ಷಿಗಲು ಬರುತ್ತವೆ. ಇದೇ ಪಕ್ಷಿಗಳಿಂದ ಹಕ್ಕಿಜ್ವರ ಜಿಲ್ಲೆಗೆ ಕಾಲಿಟ್ಟಿರುವ ಶಂಕೆ ವ್ಯಕ್ತಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್‌ ಮಿಶ್ರಾ ಅನುಮಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಮೊದಲು ಹಕ್ಕಿಜ್ವರ ಕಾಣಿಸಿಕೊಂಡಿದ್ದೇ ಚಿಕ್ಕಬಳ್ಳಾಪುರ ಜಿಲ್ಲೆಯ ವರದಹಳ್ಳಿಯಲ್ಲಿ. ಅದೇ ಗ್ರಾಮಕ್ಕೆ ಸೋಮವಾರ ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆ ಆಯುಕ್ತರು ಹಾಗೂ ಜೈವಿಕ ವಿಜ್ಞಾನ ಸಂಸ್ಥೆಯ ಹಿರಿಯ ವಿಜ್ಞಾನಿಗಳು ಕೂಡಾ ಭೇಟಿ…

Read More

ಧರ್ಮಸ್ಥಳದ ಸೌಜನ್ಯ ರೇಪ್ & ಮರ್ಡರ್ ಕೇಸ್ ಕುರಿತು ಮತ್ತೆ ಕಿಚ್ಚು ಹೊತ್ತಿಕೊಂಡಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬಿರುಗಾಳಿಯೇ ಎದ್ದಿದ್ದು, ಸೌಜನ್ಯ ರೇಪ್ & ಮರ್ಡರ್ ಕೇಸ್ ಕುರಿತು ಮಾತನಾಡಿದ್ದ ಕನ್ನಡದ ಖ್ಯಾತ ಯುಟ್ಯೂಬರ್‌ಗೆ ಜೀವ ಭಯ ಕಾಡುತ್ತಿದೆ. ಈ ಬಗ್ಗೆ ಖುದ್ದು ಯುಟ್ಯೂಬರ್ ಗಂಭೀರ ಆರೋಪ ಮಾಡಿದ್ದು, ಕರ್ನಾಟಕದಲ್ಲಿ ಹೊಸ ತಲ್ಲಣ ಸೃಷ್ಟಿಯಾಗಿದೆ. https://ainlivenews.com/big-shock-for-commuters-time-fixed-for-auto-meter-fare-hike-in-bengaluru/ ಕನ್ನಡ ಯೂಟ್ಯೂಬ್ ಜಗತ್ತಿನಲ್ಲೊಂದು ಸಂಚಲನ ಸೃಷ್ಟಿಯಾಗಿದೆ. ಈವರೆಗೆ ಇಂಗ್ಲೀಷ್ , ಹಿಂದಿ ಯೂಟ್ಯೂಬ್ ಚಾನಲ್ ಗಳಲ್ಲಿ ಮಾತ್ರ ಕಾಣಲು ಸಿಗುತ್ತಿದ್ದ ಕೋಟಿಗಟ್ಟಲೆ ವೀಕ್ಷಣೆ, ಲಕ್ಷಗಟ್ಟಲೆ ಲೈಕ್ಸ್, ಸಾವಿರ ಸಾವಿರ ಕಮೆಂಟುಗಳು ಕನ್ನಡ ಯೂಟ್ಯೂಬ್ ಚಾನಲ್ ಒಂದರ ವಿಡಿಯೋಗೆ ಸಿಕ್ಕಿವೆ. ಆದರೆ ಈ ಭಾರೀ ಸಾಧನೆ ಮಾಡಿರುವ ಯೂಟ್ಯೂಬರ್ ಗೆ ಈಗ ದಾಖಲೆಗಳ ಜೊತೆ ಸಂಕಷ್ಟ, ಸವಾಲುಗಳೂ ಎದುರಾಗಿವೆ. ಬೆದರಿಕೆ, ಅವಹೇಳನ, ಆರೋಪಗಳ ಸುರಿಮಳೆಯಾಗಿದೆ. ಹೌದು, ದಶಕದ ಹಿಂದೆ ನಡೆದಿದ್ದ ಸೌಜನ್ಯಾ ರೇಪ್ ಅಂಡ್ ಮರ್ಡರ್ ಕೇಸ್ ಕುರಿತು ಸಮೀರ್ ವಿಡಿಯೊ ಮಾಡಿದ್ದಾರೆ. ಈ…

Read More

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಮೀಟರ್ ದರ ಏರಿಕೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಈ ಮೂಲಕ ಪ್ರಯಾಣಿಕರಿಗೆ ಶಾಕ್ ಎದುರಾಗಿದೆ. ಆಟೋ ಮೀಟರ್ ದರ ಹೆಚ್ವಳ ಮಾಡಿ ನಾಲ್ಕು ವರ್ಷ ಆಗಿದೆ. ಈಗ ಸಿಎನ್​ಜಿ ಹಾಗೂ ಎಲ್​ಪಿಜಿ ದರ ಹೆಚ್ಚಳವಾಗಿದೆ. ಹಾಗಾಗಿ ಬೆಂಗಳೂರು ಆಟೋ ಮೀಟರ್ ದರ ಹೆಚ್ಚಳಕ್ಕೆ ಚರ್ಚೆಗಳು ನಡೆದಿವೆ. https://ainlivenews.com/actress-ranya-raos-arrest-case-what-did-the-home-minister-say/ ಇದೀಗ ಮಾರ್ಚ್ ನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಆಟೋ ಮೀಟರ್ ದರ ಹೆಚ್ಚಳವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ದರ ಏರಿಕೆ ಬಗ್ಗೆ ತೀರ್ಮಾನಿಸಲು ಮಾರ್ಚ್ 12 ರಂದು ಮುಹೂರ್ತ ಫಿಕ್ಸ್ ಆಗಿದೆ. ಕಳೆದ ವರ್ಷವೇ ಆಟೋ ಚಾಲಕ ಸಂಘಟನೆಗಳು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ದರ ಏರಿಕೆ ಮಾಡುವಂತೆ ಮನವಿ ಮಾಡಿದ್ದವು. ಈ ದರ ಏರಿಕೆ ಮಾಡುವ ಬಗ್ಗೆ ಚರ್ಚಿಸಲು ಮಾರ್ಚ್12 ರಂದು 11 ಗಂಟೆಗೆ ಇನ್ ಫೆಂಟ್ರಿ ರಸ್ತೆಯಲ್ಲಿರುವ.ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಟ್ರಾಫಿಕ್ ಈಸ್ಟ್…

Read More

ಬೆಂಗಳೂರು:- ಅಕ್ರಮವಾಗಿ ಚಿನ್ನ ಕಳ್ಳ ಸಾಗಾಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರನ್ನು ಅರೆಸ್ಟ್ ಮಾಡಲಾಗಿದೆ. https://ainlivenews.com/put-a-1-rupee-coin-under-your-pillow-and-see-what-happens/ ಇದೇ ವಿಚಾರವಾಗಿ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಂದಾಯ ಗುಪ್ತಚರ ನಿರ್ದೇಶನಾಲಯ ಅವರು ಚಿನ್ನದ ಕಳ್ಳ ಸಾಗಾಣಿಕೆ ತನಿಖೆ ಮಾಡುತ್ತಿರುವ ಬಗ್ಗೆ ವರದಿ ಬರುತ್ತಿದೆ. ನಮ್ಮ ಡಿಜಿಪಿ ಅವರ ಮಗಳು ಭಾಗಿಯಾಗಿದ್ದಾರೆ ಎಂದು ವರದಿ ಬಂದಿದೆ. ಅದರ ಬಗ್ಗೆ ಡಿಆರ್‌ಐ ಅವರು ಪೂರ್ಣ ಪ್ರಮಾಣದಲ್ಲಿ ತನಿಖೆ ಮಾಡುವ ತನಕ ನಮಗೆ ಯಾವುದೇ ಮಾಹಿತಿ ನೀಡಲ್ಲ. ಹಾಗಾಗಿ ಡಿಆರ್‌ಐ ಅವರು ಯಾವುದೇ ಮಾಹಿತಿ ನಮಗೆ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮ ಪೊಲೀಸ್‌ ಅವರು ತೆಗೆದುಕೊಂಡ ಮಾಹಿತಿ ಆಧಾರದ ಮೇಲೆ‌ ಮಾತನಾಡುತ್ತಿದ್ದೇನೆ. ಪ್ರಕರಣದ ತನಿಖೆ ಆದ ಬಳಿಕ ನಾವು ಪ್ರತಿಕ್ರಿಯೆ ಕೊಡಬಹುದು ಎಂದು ಹೇಳಿದರು.

Read More

ಒಂದು ವೇಳೆ ಮನೆಯಲ್ಲಿ ನಕಾರಾತ್ಮಕ ಶಕ್ತಿ, ದುಷ್ಟಶಕ್ತಿಗಳ ಪ್ರಭಾವ ಹೆಚ್ಚಿ ಮನೆಯ ಮೇಲೆ ಪ್ರಭಾವ ಬೀರುತ್ತಿದ್ದರೆ, ಅದರಲ್ಲೂ ಹೆಚ್ಚಾಗಿ ಮಕ್ಕಳ ಮೇಲೆ ಪ್ರಭಾವ ಬೀರುತ್ತಿದ್ದರೆ ಕೇವಲ ಒಂದೇ 1 ರೂ. ನಾಣ್ಯದಿಂದ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. https://ainlivenews.com/pooja-hegde-visits-udupis-kaup-marigudi/ ಅನೇಕರು ವಾಸ್ತು ಶಾಸ್ತ್ರದ ಪ್ರಕಾರವೇ ಮನೆ ನಿರ್ಮಿಸಿಕೊಳ್ಳುತ್ತಾರೆ. ಆದ್ದರಿಂದ, ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ಇಡಲಾದ ಪ್ರತಿಯೊಂದು ವಸ್ತುವು ಮನೆಯಲ್ಲಿರುವ ಕುಟುಂಬ ಸದಸ್ಯರ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪರಿಣಾಮಗಳನ್ನು ಬೀರುತ್ತದೆ. ವಾಸ್ತು ಶಾಸ್ತ್ರವು ಅನೇಕ ಸಮಸ್ಯೆಗಳಿಗೆ ತಕ್ಷಣ ಪರಿಹಾರಗಳನ್ನು ನೀಡುತ್ತದೆ. ಅದರಂತೆ, ದಿಂಬಿನ ಕೆಳಗೆ ಕೆಲವು ವಸ್ತುಗಳನ್ನು ಇಡುವುದರಿಂದ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮ ಸುಧಾರಿಸುತ್ತದೆ ಎಂಬ ನಂಬಿಕೆ. ಹಾಗಿದ್ರೆ ಆ ವಸ್ತುಗಳು ಯಾವುವು ಎಂದು ಇಲ್ಲಿದೆ ಓದಿ. ಹೂವುಗಳು: ಹೂವುಗಳನ್ನು ಸಾಮಾನ್ಯವಾಗಿ ಯಾವುದೇ ಕಾರ್ಯಕ್ರಮ, ಪೂಜೆ, ತಲೆಗೆ ಮುಡಿಯಲೆಂದು ಹೆಚ್ಚಿನವರು ಖರೀದಿಸುತ್ತಾರೆ. ಇನ್ನೂ ಸೀಸನ್‌ ಟೈಮಲ್ಲಿ ಈ ಹೂಗಳಿಗೆ ಮಾರ್ಕೆಟ್‌ನಲ್ಲಿ ಭಾರೀ ಡಿಮ್ಯಾಂಡ್. ಇನ್ನು ತಜ್ಞರು ಹೇಳುವಂತೆ ವಾಸ್ತು ಪ್ರಕಾರ, ಮಲಗುವ…

Read More

ಉಡುಪಿಯ ಕಾಪು ಮಾರಿಗುಡಿಗೆ ನಟಿ ಪೂಜಾ ಹೆಗ್ಡೆ ಭೇಟಿ ಕೊಟ್ಟಿದ್ದಾರೆ. ಬಾಲಿವುಡ್ ಬೆಡಗಿ ಪೂಜಾ ಹೆಗ್ಡೆ ಅವರು ಉಡುಪಿಯ ಕಾಪು ಮಾರಿಗುಡಿಯ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕುಟುಂಬದ ಜೊತೆ ಭಾಗಿಯಾಗಿ ಕಾಪು ಮಾರಿಯಮ್ಮನ ದರ್ಶನ ಪಡೆದಿದ್ದಾರೆ. https://ainlivenews.com/hubballi-tribute-to-the-president-of-the-veerashaiva-lingayat-dharwad-mahasabha-district-chapter/ ಮಂಗಳೂರಿನವರಾದ ಪೂಜಾ ಹೆಗ್ಡೆ ಅವರು, ಕರಾವಳಿ ಭಾಗದ ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಇದೀಗ ಫ್ಯಾಮಿಲಿ ಜೊತೆ ಕಾಪು ಮಾರಿಗುಡಿಗೆ ನಟಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೂ ಕಾಪು ಮಾರಿಗುಡಿಗೆ ಶಿಲ್ಪಾ ಶೆಟ್ಟಿ, ಕಂಗನಾ ರಣಾವತ್‌, ಸೂರ್ಯಕುಮಾರ್‌ ಯಾದವ್‌ ಸೇರಿದಂತೆ ಅನೇಕರು ಭೇಟಿ ನೀಡಿದ್ದರು. ಈಗ ಪೂಜಾ ಹೆಗ್ಡೆ ಭೇಟಿ ಕೊಟ್ಟಿದ್ದಾರೆ. ಅಂದಹಾಗೆ, ಸದ್ಯ ಪೂಜಾ ಅವರು ತೆಲುಗು, ತಮಿಳು, ಬಾಲಿವುಡ್‌ನಲ್ಲಿ ಸಕ್ರಿಯರಾಗಿದ್ದಾರೆ

Read More

ಹುಬ್ಬಳ್ಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಧಾರವಾಡ ಮಹಾಸಭಾ ಜಿಲ್ಲಾ ಘಟಕ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಧಾರವಾಡ ಇದರ ನೂತನ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.ನೂತನ ಅಧ್ಯಕ್ಷರಾಗಿ ಪ್ರದೀಪ್ ಗೌಡ ಪಾಟೀಲ ಅವರ ಅಧಿಕಾರ ವಹಿಸಿ ನಂತರ ಹಲವಾರು ಸಮಾಜ ಬಾಂಧವರು ಸನ್ಮಾನ ಮಾಡಿದರು. https://ainlivenews.com/big-relief-to-former-speaker-ramesh-kumar-forest-land-encroachment-case-petition-dismissed/ ಸಮಾಜದ ಹಿರಿಯರಾದ ನಾಗಾರಾಜ ಪಟ್ಟಣಶೆಟ್ಟಿ ಮಾತನಾಡಿ ನೂತನ ಸದಸ್ಯರಿಗೆ ಅಭಿನಂದನಿಸಿದರು.ರಾಜ್ಯ ಘಟಕಗದ ಪದಾಧಿಕಾರಿಗಳಾದ ನಾಗರಾಜ ,ಮೋಹನ್ ಅಸೂಟಿ ಅವರು ಉಪಸ್ಥಿತರಿದ್ದರು. ನೂತನ ಚುನಾಯಿತ ಪ್ರತಿನಿಧಿಗಳಾದ ವಿರೇಶ ಕೆಲಗೇರಿ ಅವರು ವಂದನಾರ್ಪಣೆ ಮಾಡಿದರು. ನಂತರ ಶ್ರೀಮತಿ ಶಿವಲೀಲಾ ವಿನಯ ಕುಲಕರ್ಣಿ ಅವರು ತಮ್ಮ ನಿವಾಸದಲ್ಲಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಪ್ರದೀಪ್ ಗೌಡ ಪಾಟೀಲ ಅವರನ್ನು ಅಭಿನಂದಿಸಿದರು.ಈ ಸಂಧರ್ಭದಲ್ಲಿ ವಿರೇಶ ಕೆಲಗೇರಿ, ಶ್ರೀ ನಾಗರಾಜ ಮನೋಜ, ಭಾವಿಕಟ್ಟಿ ಆನಂದ ಮತ್ತು ‌ಮುಂತಾದವರು ಉಪಸ್ಥಿತರಿದ್ದರು.

Read More