ಭಾರತೀಯ ಸ್ಮಾರ್ಟ್ಫೋನ್ ಬ್ರಾಂಡ್ ಲಾವಾ 128 ಜಿಬಿ ಸ್ಟೋರೇಜ್ ಮತ್ತು 6.5 ಇಂಚಿನ ಎಚ್ಡಿ+ ಪಂಚ್ ಹೋಲ್ ಡಿಸ್ ಪ್ಲೇ ಹೊಂದಿರುವ ಹೊಸ ಸ್ಮಾರ್ಟ್ ಫೋನ್ – ಒ 2 (O2) ಅನ್ನು ಬಿಡುಗಡೆ ಮಾಡಿದೆ. ಲಾವಾ ಒ2 ಅಮೆಜಾನ್ ಮತ್ತು ಲಾವಾ ಇ-ಸ್ಟೋರ್ನಲ್ಲಿ ಮೆಜೆಸ್ಟಿಕ್ ಪರ್ಪಲ್, ಇಂಪೀರಿಯಲ್ ಗ್ರೀನ್ ಮತ್ತು ರಾಯಲ್ ಗೋಲ್ಡ್ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿದೆ. ಈ ಸ್ಮಾರ್ಟ್ಫೋನ್ 7,999 ರೂ.ಗಳ ಆರಂಭಿಕ ಬೆಲೆಯಲ್ಲಿ ಸಿಗಲಿದೆ. “ಗ್ರಾಹಕರ ಬೇಡಿಕೆಗಳು ನಿರಂತರವಾಗಿ ಬದಲಾಗುತ್ತಿವೆ. ವಿಶೇಷವಾಗಿ ಯುವ ಪೀಳಿಗೆಯು ತಮ್ಮ ಸ್ಮಾರ್ಟ್ ಫೋನ್ಗಳ ಶೈಲಿ ಮತ್ತು ಕಾರ್ಯಕ್ಷಮತೆ ಎರಡರಲ್ಲಿಯೂ ಅತ್ಯುತ್ತಮವಾಗಿರಬೇಕು ಎಂದು ಬಯಸುತ್ತಾರೆ” ಎಂದು ಲಾವಾ ಇಂಟರ್ ನ್ಯಾಷನಲ್ ಲಿಮಿಟೆಡ್ನ ಉತ್ಪನ್ನ ಮುಖ್ಯಸ್ಥ ಸುಮಿತ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಇತ್ತೀಚಿನ ಗ್ಲಾಸ್ ಬ್ಯಾಕ್ ವಿನ್ಯಾಸದಂತಹ ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿರುವ ಮತ್ತು ಸ್ಟಾಕ್ ಆಂಡ್ರಾಯ್ಡ್ 13 ನೊಂದಿಗೆ ಆರಾಮದಾಯಕ ಬಳಕೆಯ ಅನುಭವ ನೀಡುವ ಮೂಲಕ ಲಾವಾ ಒ2 ಈ ನಿರೀಕ್ಷೆಗಳನ್ನು ಪೂರೈಸುತ್ತದೆ. ಈ…
Author: AIN Author
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಕುರಿತು ಸಂಸದ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಡಿ.ಕೆ ಸುರೇಶ್ (D.K Suresh) ವ್ಯಂಗ್ಯವಡಿದ್ದಾರೆ. ರಾಮನಗರ ಜೊತೆಗೆ ತಾಯಿ-ಮಗುವಿನ ಸಂಬಂಧವಿದೆ ಎಂದು ಹೆಚ್ಡಿಕೆ ಈ ಹಿಂದೆ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಸು, ಅತ್ತಿದ್ದು ಆಯಿತಲ್ವಾ, ಯುಗಾದಿ ಹಬ್ಬ ಮುಗಿಯಲಿ ಮಾತಾಡುತ್ತೇನೆ ಎಂದಿದ್ದಾರೆ. ಅಶೋಕ್ ಬದಲು ಅಶ್ವಥ್ ನಾರಾಯಣ್ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಬದಲಾವಣೆ ಬಗ್ಗೆ ಮಾತನಾಡಿ, ಉಸ್ತುವಾರಿ ಬದಲಾವಣೆಯಾದ್ರೆ ಯಾವುದೇ ಬದಲಾವಣೆ ಆಗಲ್ಲ. ಬಿಜೆಪಿ ಮೋದಿ ಹೆಸರಲ್ಲಿ ಮತ ಕೇಳುತ್ತಿದ್ದಾರೆ. ನಾವು ಮೋದಿ ಆಡಳಿತ ಸೋಲಿಸಬೇಕು ಎಂದು ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಅಭ್ಯರ್ಥಿಗಳು ನಮಗೆ ವೋಟ್ ಹಾಕಿ ಅನ್ನುತ್ತಿಲ್ಲ, ಬದಲಾಗಿ ಮೋದಿಗೆ ವೋಟ್ ಹಾಕಿ ಎನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಇದೇ ವೇಳೆ ಬರ ಪರಿಹಾರ ಸಂಬಂಧ ಕೋರ್ಟ್ ಸೂಚನೆಗೆ ಪ್ರತಿಕ್ರಿಯಿಸಿ, ಪರಿಹಾರ ಬಿಡುಗಡೆ ಮಾಡದೇ ನಿರ್ಮಲಾ ಸೀತಾರಾಮನ್ ಕುಂಟು ನೆಪ ಹೇಳುತ್ತಿದ್ದಾರೆ.…
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿ ತಮ್ಮ ಪದವಿ ಹೋಗುತ್ತದೆ ಎಂಬ ಭಯದಲ್ಲಿ ರಾಹುಲ್ ಗಾಂಧಿ ಮುಂದೆ ಮಾತನಾಡುವುದಿಲ್ಲ, ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಹೇಳೋಕ್ಕೆ ಸಿದ್ದರಾಮಯ್ಯ ಭಯ ಪಡುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಪಹಾಸ್ಯ ಮಾಡಿದ್ದಾರೆ. ನಗರದಲ್ಲಿಂದು ರಾಜ್ಯದ ಬಿಜೆಪಿ ಸಂಸದರು ಪುಕ್ಕಲರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಹುಲ್ ಗಾಂಧಿ ಅವರ ಬಳಿಯೇ ಕಾಂಗ್ರೆಸ್’ನವರು ಮಾತನಾಡುವುದಿಲ್ಲ, ಅಭಿವೃದ್ದಿ ಹಾಗೂ ಬರ ಪರಿಹಾರದ ವಿಚಾರದಲ್ಲಿ ಈವರೆಗೂ ಯಾವುದೇ ವರದಿಯನ್ನು ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ, ಈ ಬಗ್ಗೆ ಬಹಿರಂಗ ಚರ್ಚೆಯ ಮೂಲಕ ಕಾಂಗ್ರೆಸ್’ನವರಿಗೆ ಉತ್ತರ ನೀಡಲಾಗಿದೆ ಎಂದರು. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಸಿದ್ಧರಾಮಯ್ಯ ಅವರು ವಿಧಾನಸಭೆಯ ಮೂಡ್ ನಿಂದ ಇನ್ನೂ ಹೊರ ಬಂದಿಲ್ಲ. ಇನ್ನೂ ಅವರು ವಿಧಾನಸಭೆ ಚುನಾವಣೆ ಅಂತಾ ತಿಳಿದುಕೊಂಡಿದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಿಲ್ಲ ಪ್ರಧಾನಿಗಳು ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಆದ್ರೆ ಕೇವಲ ಯಾವುದೋ ಒಂದು ರಾಜಕಾರಣದ ವಿಷಯದ…
ಬೆಂಗಳೂರು: ಕೋಲಾರದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಚೆನ್ನಾಗಿದೆ. ಅಭ್ಯರ್ಥಿ ಗೌತಮ್ ಪರವಾಗಿ ನಾನು ಪ್ರಚಾರಕ್ಕೆ ಹೋಗಲು ಸಿದ್ಧ ಎಂದು ಸಚಿವ ಕೆಎಚ್ ಮುನಿಯಪ್ಪ ಹೇಳಿದರು. ಬೆಂಗಳೂರಿನಲ್ಲಿ ಕೋಲಾರ ಕಾಂಗ್ರೆಸ್ ಅಭ್ಯರ್ಥಿಯನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಕೋಲಾರದಲ್ಲಿ ಕಾಂಗ್ರೆಸ್ಸಿಗೆ ಇತಿಹಾಸವಿದೆ. ಸ್ವತಂತ್ರ ಬಂದಾಗಿನಿಂದ ಕಾಂಗ್ರೆಸ್ ಸತತವಾಗಿ ಕೋಲಾರದಲ್ಲಿ ಗೆದ್ದಿದೆ ಎಂದರು. ಗೌತಮ್ ಜೊತೆಗೂಡಿ ನಾನು ಕೆಲಸ ಮಾಡಿದ್ದೇನೆ. ಗೌತಮ್ ನನಗೆ ಹತ್ತಿರದ ಪರಿಚಯ. ಅಷ್ಟೇ ಅಲ್ಲದೆ, ಅವರ ತಂದೆ ಜೊತೆ ಕೆಲಸ ಮಾಡಿದ್ದೇನೆ. ಪಕ್ಷ ಅವರನ್ನು ಗುರುತಿಸಿ ಟಿಕೆಟ್ ನೀಡಿದೆ . ನಾನು ಅವತ್ತು ಹೇಳಿದ್ದೆ, ಇವತ್ತು ಹೇಳ್ತಾ ಇದ್ದೇನೆ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇನೆ ಎಂದರು. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಗೌತಮ್ ಜೊತೆಗೂಡಿ ನಾನು ಕೆಲಸ ಮಾಡಿದ್ದೇನೆ. ಗೌತಮ್ ನನಗೆ ಹತ್ತಿರದ ಪರಿಚಯ. ಅಷ್ಟೇ ಅಲ್ಲದೆ, ಅವರ ತಂದೆ ಜೊತೆ ಕೆಲಸ ಮಾಡಿದ್ದೇನೆ. ಪಕ್ಷ ಅವರನ್ನು ಗುರುತಿಸಿ ಟಿಕೆಟ್ ನೀಡಿದೆ . ನಾನು ಅವತ್ತು ಹೇಳಿದ್ದೆ, ಇವತ್ತು ಹೇಳ್ತಾ ಇದ್ದೇನೆ ಅಭ್ಯರ್ಥಿ ಪರವಾಗಿ ಕೆಲಸ…
ಕೊಪ್ಪಳ: ಪುಲ್ವಾಮಾ ದಾಳಿ ಆದಾಗ ಕಾರಣರಾದವರನ್ನು ಹಿಡಿದು ಶಿಕ್ಷಿಸುವುದಾಗಿ ಹೇಳಿ ಐದು ವರ್ಷ ಆಯ್ತು. ಏನಾಗಿದೆ ಎಂದು ದೇಶದ ಜನರಿಗೆ ಉತ್ತರ ಕೊಡಬೇಕಲ್ಲವೆ ? ಯಾರು ದಾಳಿ ಮಾಡಿದರು? ಯಾರಿಗೆ ಶಿಕ್ಷೆ ಆಗಿದೆ? ಇದಕ್ಕೆ ಅಮಿತ್ ಶಾ ಉತ್ತರಿಸಬೇಕು ಎಂದು ಸಚಿವ ಶಿವರಾಜ ತಂಗಡಗಿ ಪ್ರಶ್ನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದೆ. 168 ಲಕ್ಷ ಕೋಟಿ ರೂ. ಸಾಲ ಆಗಿದೆ. ಶೇ.83ರಷ್ಟು ನಿರುದ್ಯೋಗ ಇದೆ. ಈ ಬಗ್ಗೆ ಮಾತನಾಡಿದರೆ ಬಿಜೆಪಿಯವರಿಗೆ ನೋವಾಗುತ್ತದೆ. ಯಾವೊಂದು ಅಭಿವೃದ್ಧಿ ಕೆಲಸ ಮಾಡದೆ ಮತ ಕೇಳಲು ರಾಜ್ಯಕ್ಕೆ ಬರಲು ನಾಚಿಕೆ ಆಗಲ್ವಾ? ಎಂದು ವ್ಯಂಗ್ಯವಾಡಿದರು. ಅಮಿತ್ ಷಾ ಅವರು ಬರ ಪರಿಹಾರ ನೀಡಲು ಮನವಿ ಸಲ್ಲಿಕೆ ತಡವಾಗಿದೆ ಎಂದು ಸುಳ್ಳು ಹೇಳಿದರು. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಸಿಎಂ ಸವಾಲು ಹಾಕಿದ್ದಾರೆ. ಈ ಬಗ್ಗೆ ಬಿಜೆಪಿಯವರು ಮಾತನಾಡಲಿ. ಅವರಿಗೆ ಧರ್ಮ, ಜಾತಿ, ಮಂದಿರ ಬಗ್ಗೆ ಮಾತನಾಡುತ್ತಾರೆ. ಕೊನೆಗೆ ಅಂಜನಾದ್ರಿ ಬೆಟ್ಟಕ್ಕೆ ಬರುತ್ತಾರೆ. ಮೋದಿ ನೋಡಿ ಮತ…
ಬೆಂಗಳೂರು: ಯಾರು ಕುಕ್ಕರ್, ತವಾ ಏನೇ ಹಂಚಿದ್ರೂ, ವಿಸಿಲ್ ಕೂಗೋದು ಮಾತ್ರ ಮೋದಿ. ಡಿಕೆ ಸುರೇಶ್ ಗೆ ಯಾಕೆ ಮತ ಹಾಕ್ತಾರೆ ಜನ?. ಅವರು ಏನು ಕೆಲಸ ಮಾಡಿದ್ದಾರೆ ಎಂದು ಶಾಸಕ ಅಶ್ವಥ್ ನಾರಾಯಣ್ (Ashwath Narayan) ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಪ್ಯಾರಾ ಮಿಲಿಟರಿ (Para Military) ನಿಯೋಜನೆ ಆಗಬೇಕು. ಭಯದ ವಾತಾವರಣ ಇರಬಾರದು, ಭಯ ಇಲ್ಲದೇ ಜನ ಮತ ಹಾಗಬೇಕು. ಶಾಂತಿಯುತ ಮತದಾನ ಆಗಬೇಕು. ಈ ಕಾರಣಕ್ಕೆ ನಾವು ಪ್ಯಾರಾ ಮಿಲಿಟರಿ ದಳ ನಿಯೋಜನೆಗೆ ಕೇಳಿದ್ದೇವೆ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ (Congress) ಭಯದ ವಾತಾವರಣ ಸೃಷ್ಟಿಸ್ತಿದೆ. ಭಯದ ವಾತಾವರಣ ಇದ್ರೇನೇ ಅವರಿಗೆ ಶಕ್ತಿ. ಜನರನ್ನ ಹತ್ತಿಕ್ಕುವುದು, ಗಲಾಟೆ ಸೃಷ್ಟಿಸೋದು ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ದೇಶದಲ್ಲಿ ಈಗ ಲೋಕಸಭೆ ರೂಪದಲ್ಲಿ ಧರ್ಮ ಅಧರ್ಮದ ಯುದ್ಧ ನಡೀತಿದೆ. ದೇಶದ ಜನರ ವಿಶ್ವಾಸ ಗಳಿಸಿರುವ ಮೋದಿಯವರು (Narendra Modi) ಮತ್ತೊಮ್ಮೆ ಪ್ರಧಾನಿ ಆಗಲೆಂದು ಜನ ಬಯಸಿದ್ದಾರೆ. ಮೋದಿಯವರ…
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 23ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಚಂಡೀಗಢದ ಮಹಾರಾಜ ಯದವೀಂದ್ರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಉಭಯ ತಂಡಗಳು ಈ ಪಂದ್ಯಕ್ಕಾಗಿ ಪ್ಲೇಯಿಂಗ್ ಇಲೆವೆನ್ನಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಉಭಯ ತಂಡಗಳು ಹೀಗಿವೆ: ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್ (ನಾಯಕ), ಜಾನಿ ಬೈರ್ಸ್ಟೋ, ಪ್ರಭ್ಸಿಮ್ರಾನ್ ಸಿಂಗ್, ಸ್ಯಾಮ್ ಕರನ್, ಸಿಕಂದರ್ ರಾಝ, ಶಶಾಂಕ್ ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಪ್ರೀತ್ ಬ್ರಾರ್, ಅಶುತೋಷ್ ಶರ್ಮಾ, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಷದೀಪ್ ಸಿಂಗ್, ತನಯ್ ತ್ಯಾಗರಾಜನ್, ನಾಥನ್ ಎಲ್ಲಿಸ್, ರಾಹುಲ್ ಚಹರ್, ವಿಧ್ವತ್ ಕಾವೇರಪ್ಪ, ಲಿಯಾಮ್ ಲಿವಿಂಗ್ಸ್ಟೋನ್, ರಿಲೀ ರೊಸ್ಸೊ, ಹರ್ಪ್ರೀತ್ ಸಿಂಗ್ ಭಾಟಿಯಾ, ಕ್ರಿಸ್ ವೋಕ್ಸ್, ರಿಷಿ ಧವನ್, ಅಥರ್ವ ಟೈಡೆ, ಶಿವಂ ಸಿಂಗ್, ಪ್ರಿನ್ಸ್ ಚೌಧರಿ,…
ಬೆಂಗಳೂರು: PSI ಜಗದೀಶ್ ಹತ್ಯೆ ಪ್ರಕರಣದ ಆರೋಪಿಗಳಾದ ಎ1 ಮಧು, ಎ2 ಹರೀಶ್ ಬಾಬು@ ಹರೀಶ್ಗೆ ಬೆಂಗಳೂರು ಗ್ರಾಮಾಂತರ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ರಘುನಾಥ್ ತೀರ್ಪು ಪ್ರಕಟಿಸಿದ್ದಾರೆ. 2015 ಅಕ್ಟೋಬರ್ 16ರಂದು ಜಗದೀಶ್ ಹತ್ಯೆ ನಡೆದಿತ್ತು. ಆಗ ಅವರು ದೊಡ್ಡಬಳ್ಳಾಪುರ ಠಾಣೆ ಪಿಎಸ್ಐ ಆಗಿದ್ದರು. ಬೈಕ್ ಕಳ್ಳರನ್ನು ಹಿಡಿಯಲು ಬಂದಾಗ ನೆಲಮಂಗಲದಲ್ಲಿ ಚೂರಿಯಿಂದ ಇರಿದು ಕೊಲೆಗೈಯಲಾಗಿತ್ತು. ಡಿವೈಎಸ್ಪಿ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.ಕೋರ್ಟ್ಗೆ ನೆಲಮಂಗಲ ಟೌನ್ ಪೊಲೀಸರು 780 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಎ3 ಕೃಷ್ಣಪ್ಪ, ಎ4 ತಿಮ್ಮಕ್ಕ, ಎ5 ಹನುಮಂತ ರಾವ್ ಖುಲಾಸೆಗೊಳಿಸಲಾಗಿದೆ. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಡಾನ್ ಆಗುವ ಆಸೆಯಿಂದ ಪಿಎಸ್ಐಯನ್ನೇ ಕೊಂದುಬಿಟ್ಟರುವುದಾಗಿ ತನಿಖೆ ವೇಳೆ ಪೊಲೀಸರಿಗೆ ಎ1 ಅರೋಪಿ ಮಧು@ಗೋಣ್ಣೆ ಹೇಳಿಕೆ ನೀಡಿದ್ದ. ಹೀಗಾಗಿ ನೆಲಮಂಗಲ ಟೌನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 333, 307, 302, 397, 201, 212 , 75ರ ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು. ತನಿಖಾಧಿಕಾರಿಯಾಗಿ…
ಬೆಂಗಳೂರು: ಮಾಜಿ ಸಿಎಂ ಎಸ್. ಎಮ್ ಕೃಷ್ಣ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಭೇಟಿ ಮಾಡಿದ್ದಾರೆ. ಸದಾಶಿವನಗರದಲ್ಲಿರುವ ನಿವಾಸದಲ್ಲಿ ಮಾಜಿ ಸಿಎಂ ಎಸ್. ಎಮ್ ಕೃಷ್ಣ ಭೇಟಿ ಮಾಡಿದ ಸುಧಾಕರ್ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಬೆಳಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಭೇಟಿ ಮಾಡಿದ್ದರು.
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆ ನಡೆಯುವ ದಿನಗಳಂದು ಕರ್ನಾಟಕದ ಆಯಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವೇತನ ಸಹಿತ ಸಾವ್ರರ್ತಿಕ ರಜೆ ಘೋಷಣೆ ಮಾಡಲಾಗಿದೆ. ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2024 ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ಶುಕ್ರವಾರದಂದು ಹಾಗೂ, https://ainlivenews.com/navodaya-vidyalaya-has-huge-job-opportunities-for-puc-and-sslc-passers/ ಎರಡನೇ ಹಂತದಲ್ಲಿ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮೇ 7 ಮಂಗಳವಾರ ನಡೆಸಲಾಗುತ್ತಿದೆ. ಮತದಾನ ನಡೆಯುವ ದಿನದಂದು ವೇತನ ಸಹಿತ ಸಾವ್ರರ್ತಿಕ ರಜೆ ನೀಡಲಾಗಿದೆ ಎಂದು ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಠಾಚಾರ) ಮಾಹಿತಿ ನೀಡಿದೆ. ಮೊದಲ ಹಂತದಲ್ಲಿ ಎಲ್ಲೆಲ್ಲಿ ಚುನಾವಣೆ? ಮೊದಲ ಹಂತದಲ್ಲಿ ಲೋಕಸಭಾ ಚುನಾವಣಾ ಕ್ಷೇತ್ರಗಳಾದ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ…