ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ನಡೆಸಿದ ರೋಡ್ ಶೋ ನಲ್ಲಿ ಮಾತನಾಡಿದರು. ನಮ್ಮ ಅಭ್ಯರ್ಥಿ ಗೌತಮ್ ಸಜ್ಜನರು. ಸಾಮಾನ್ಯ ಕಾರ್ಯಕರ್ತರಾಗಿ ಬುಡಮಟ್ಟದಿಂದ ಬೆಳೆದು ಈಗ ಅಭ್ಯರ್ಥಿ ಆಗಿದ್ದಾರೆ. ಇವರು ಅತ್ಯಂತ ಬಹುಮತದಿಂದ ಗೆಲ್ಲುತ್ತಾರೆ. ನಿಮ್ಮೆಲ್ಲರ ಸಹಕಾರ, ಆಶೀರ್ವಾದ ಗೌತಮ್ ಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರಲಿ ಎಂದರು. ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್,ಅಡುಗೆ ಗ್ಯಾಸ್ ಸಿಲಿಂಡರ್, ರಸಗೊಬ್ಬರ, ಅಡುಗೆ ಎಣ್ಣೆ, ಬೇಳೆ-ಕಾಳು, ತರಕಾರಿ ಸೇರಿ ಪ್ರತಿಯೊಂದರ ಬೆಲೆಯನ್ನು ವಿಪರೀತ ಏರಿಸಿತ್ತು. ಇದರಿಂದ ನಾಡಿನ ಪ್ರತೀ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದವು. ಈ ಸಂಕಷ್ಟಕ್ಕೆ ಸ್ಪಂದಿಸಿ ಕಷ್ಟ ಕಡಿಮೆ ಮಾಡುವ ಉದ್ದೇಶದಿಂದ ಐದು ಗ್ಯಾರಂಟಿ ಭರವಸೆಗಳನ್ನು ಘೋಷಿಸಿದೆವು. ಅಧಿಕಾರಕ್ಕೆ ಬಂದು ಐದಕ್ಕೆ ಐದನ್ನೂ ಜಾರಿ ಮಾಡಿದೆವು. https://ainlivenews.com/job-opportunity-for-puc-passers-direct-recruitment-without-exam-salary-%e2%82%b963000-per-month/ ಮೊದಲಿಗೆ ಗ್ಯಾರಂಟಿಗಳ ಜಾರಿ ಸಾಧ್ಯವೇ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹುಟ್ಟಿಸಿತು. ಗ್ಯಾರಂಟಿಗಳು ಜಾರಿಯಾದ ಬಳಿಕ ಹೊಸ ಸುಳ್ಳು…
Author: AIN Author
ಹಿಂದೂ ಹೊಸ ವರ್ಷ ಎಂದು ಕರೆಯಲ್ಪಡುವ ಯುಗಾದಿ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಯುಗಾದಿಯನ್ನು ಇದೇ ಏಪ್ರಿಲ್ 9 ರಂದು ಆಚರಿಸಲಾಗುವುದು. ಈ ಹಬ್ಬಕ್ಕೆ ಸಂಬಂಧಿಸಿದ ಅನೇಕ ನಂಬಿಕೆಗಳು ಮತ್ತು ಸಂಪ್ರದಾಯಗಳಿವೆ. ಈ ಕೆಲವು ಸಂಪ್ರದಾಯಗಳ ಹಿಂದೆ ವೈಜ್ಞಾನಿಕ ಕಾರಣಗಳೂ ಇವೆ. ಈ ದಿನ ಕೆಲವು ವಿಶೇಷ ಕ್ರಮಗಳನ್ನು ತೆಗೆದುಕೊಂಡರೆ, ಮನೆಯಲ್ಲಿ ವರ್ಷವಿಡೀ ಸಂತೋಷ, ಸಮೃದ್ಧಿ ಮತ್ತು ಸಕಲೈಶ್ವರ್ಯ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಯುಗಾದಿ ಹಬ್ಬದೊಂದಿಗೆ ಆರಂಭವಾಗುವ ಈ ಹಿಂದೂ ಹೊಸ ವರ್ಷದಂದು ಮನೆಗೆ ಈ ವಸ್ತುಗಳನ್ನು ಅತ್ಯಂತ ಶುಭ ಮತ್ತು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಮತ್ತು ಇವುಗಳು ಹೊಸ ವರ್ಷದಲ್ಲಿ ನಿಮ್ಮ ಅದೃಷ್ಟವನ್ನು ಬೆಳಗಿಸುತ್ತದೆ ಎನ್ನುವ ನಂಬಿಕೆಯಿದೆ. ಹಿಂದೂ ಹೊಸ ವರ್ಷದಂದು ಅಥವಾ ಯುಗಾದಿಯಂದು ಈ ವಸ್ತುಗಳನ್ನು ತಪ್ಪದೇ ಮನೆಗೆ ತನ್ನಿ.. ಚಿಕ್ಕ ತೆಂಗಿನಕಾಯಿ ಹಿಂದೂ ಹೊಸ ವರ್ಷದ ದಿನದಂದು ಅಥವಾ ಯುಗಾದಿ ಹಬ್ಬದ ದಿನದಂದು ನೀವು ಮನೆಗೆ ಚಿಕ್ಕದೊಂದು ತೆಂಗಿನಕಾಯಿಯನ್ನು ತಂದು ಆ ತೆಂಗಿನಕಾಯಿಯನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ…
ಚಿತ್ರದುರ್ಗ: ಖಾಸಗಿ ಬಸ್ಸೊಂದು ಪಲ್ಟಿಯಾಗಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ದುರ್ಮರಣ ಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ಕೋಚ್ ಬಸ್ ಬೆಳಗ್ಗಿನ ಜಾವ 4:30ರ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಬಸ್ನಲ್ಲಿ 50 ಜನ ಪ್ರಯಾಣ ಬೆಳೆಸಿದ್ದು, ಬಸ್ ಪಲ್ಟಿಯಿಂದಾಗಿ 38 ಜನರು ಗಾಯಗೊಂಡಿದ್ದಾರೆ. ಇಬ್ಬರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಉಳಿದ ಗಾಯಾಳುಗಳಿಗೆ ಹೊಳಲ್ಕೆರೆ ತಾಲೂಕು ಆಸ್ಪತ್ರೆಯಲ್ಲಿ ನೆಲದ ಮೇಲೆ ಬೆಡ್ ಹಾಕಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮೂವರ ದೇಹಗಳನ್ನು ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ಐ ಸುರೇಶ್ ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದಾರೆ. ಈ ಘಟನೆ ಹೊಳಲ್ಕೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು: ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ದೇವನಹಳ್ಳಿ ಪಟ್ಟಣದ ಬಿಜೆಪಿ ಕಾರ್ಯಕರ್ತ ನಾಗೇಶ್ ನಿವಾಸಕ್ಕೆ ಆಗಮಿಸಿ ಭಾರತಾಂಬೆ, ಪಂಡಿತ್ ದೀನ್ ದಯಾಳ್ ಭಾವಚಿತ್ರಕೆ ಪುಷ್ಪನಮನ ಸಲ್ಲಿಸಿ ಬಿಜೆಪಿ ಬಾವುಟ ಹಾರಿಸಿದರು. ತದನಂತರ ಮಾತನಾಡಿದ ಅರುಣ್ ಸಿಂಗ್, ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಬಿಜೆಪಿ ಪಕ್ಷದ ಸಂಸ್ಥಾಪನಾ ದಿನದ ಶುಭಾಶಯಗಳನ್ನ ತಿಳಿಸುತ್ತೇನೆ. ಭಾರತದ ಮೂಲಮಂತ್ರದ ಆಶಯ ಹಾಗೂ ಪ್ರಧಾನಮಂತ್ರಿ ನರೇಂದ್ರಮೋದಿ ಮೂರನೇ ಬಾರಿ ಪ್ರಧಾನಿ ಮಾಡಲು ಬಿಜೆಪಿ ಕಾರ್ಯಕರ್ತರು ಸದಾ ಕೆಲಸ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಈ ಬಾರಿ ಭಾರೀ ಮತಗಳ ಅಂತರದಿAದ ಗೆಲವು ಸಾಧಿಸಲಿದ್ದಾರೆ. ದೆಹಲಿಯ ಸಂಸತ್ ನಲ್ಲಿ ಸುಧಾಕರ್ ಭಾಗಿಯಾಗಲಿದ್ದಾರೆ ಎಂದು ನನಗೆ ಅತೀವ ಆತ್ಮವಿಶ್ವಾಸವಿದೆ ಎಂದರು.. https://ainlivenews.com/mysterious-death-of-husband-wife-friend-in-the-same-room-victim-of-witchcraft/ ಇನ್ನೂ ಬಿಜೆಪಿ ಸುಳ್ಳಿನ ಪಕ್ಷ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅರುಣ್ ಸಿಂಗ್, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಸೇರಿದಂತೆ ಡಿಕೆಶಿ ಮನೆಯಲ್ಲೂ ಕೇಳಿದ್ರೂ ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತೆ ಆಗಲಿದ್ದಾರೆ ಅಂತ ಹೇಳ್ತಾರೆ.…
ಇಸ್ಲಾಮಾಬಾದ್: ಜೂನ್ ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್ (T20 World Cup 2024) ಟೂರ್ನಿಗಾಗಿ ಪಾಕ್ ಕ್ರಿಕೆಟ್ ತಂಡ (Pakistan Cricket Team) ಈಗಿನಿಂದಲೇ ಭರ್ಜರಿ ತಯಾರಿ ಶುರು ಮಾಡಿದೆ. ಈ ಬಾರಿ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಪಾಕ್ ತಂಡಕ್ಕೆ ಸೇನೆಯಿಂದ ಕಠಿಣ ತರಬೇತಿ ಕೊಡಿಸಲಾಗುತ್ತಿದೆ. ಕ್ರಿಕೆಟ್ ಆಟಗಾರರಿಗೆ ಗನ್ ತರಬೇತಿ (Gun Training) ನೀಡಲಾಗುತ್ತಿದೆ. ಪಾಕಿಸ್ತಾನ ಕ್ರಿಕೆಟಿಗರು ವಿಶ್ವಕಪ್ ಟೂರ್ನಿಗಾಗಿ ಸ್ನೈಪರ್ ಶೂಟಿಂಗ್, ಭಾರವಾದ ಕಲ್ಲು ಹೊತ್ತು ನಡೆಯುವುದು, ಸೈನಿಕರನ್ನ ಬೆನ್ನ ಮೇಲೆ ಹೊತ್ತುಕೊಂಡು ಮುಂದೆ ಸಾಗುವ ಅಭ್ಯಾಸಗಳನ್ನ ಮಾಡುತ್ತಿದ್ದಾರೆ. ಈ ಕುರಿತ ವೀಡಿಯೋ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಟೀಂ ಇಂಡಿಯಾ ಕ್ರಿಕೆಟ್ ಫ್ಯಾನ್ಸ್ (Team India Cricket Fans) ಪಾಕ್ ಕ್ರಿಕೆಟಿಗರನ್ನ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಅಲ್ಲದೇ ನೆಟ್ಟಿಗರು ಇದೆಲ್ಲಾ ಬೇಕಿತ್ತಾ? ಅನಗತ್ಯ ತರಬೇತಿ ನೀಡಿ ಆಟಗಾರರ ಸಮಯವನ್ನೂ ವ್ಯರ್ಥಮಾಡಿಕೊಳ್ಳುತ್ತಿದೆ ಎಂದು ಕಿಡಿ ಕಾರಿದ್ದಾರೆ. https://twitter.com/SajSadiqCricket/status/1775937943766503799?ref_src=twsrc%5Etfw%7Ctwcamp%5Etweetembed%7Ctwterm%5E1775937943766503799%7Ctwgr%5E9c841c0a207c66bc2487018cf2d4bb2ac78f9420%7Ctwcon%5Es1_&ref_url=https%3A%2F%2Fpublictv.in%2Ffrom-sniper-shooting-to-carrying-men-on-back-pakistan-cricketers-army-training-has-fans-stunned%2F ಟಿ20 ವಿಶ್ವಕಪ್ಗೆ ಮುಂಚಿತವಾಗಿ ರಾಷ್ಟ್ರೀಯ ಕ್ರಿಕೆಟಿಗರು ಗಾಯಗೊಳ್ಳಬಾರದು ಎಂಬ ಉದ್ದೇಶದಿಂದ…
ಭಾರತದಲ್ಲಿ ಸಾಂಪ್ರದಾಯಿಕ ಉಡುಗೆಯಾಗಿ ಸೀರೆ ಮೊದಲ ಸ್ಥಾನದಲ್ಲಿದೆ. ಭಾರತೀಯ ನಾರಿಯರಿಗೆ ಸೀರೆ ಬಹಳ ವಿಶೇಷ ಉಡುಗೆಯಾಗಿದೆ. ಭಾರತೀಯ ಪ್ರತಿ ನಾರಿಯು ಕೂಡ ಸೀರೆ ಧರಿಸುತ್ತಾರೆ. ಸೀರೆ ಭಾರತೀಯ ಸಂಪ್ರಾಯವನ್ನು ಎತ್ತಿಹಿಡಿಯುತ್ತದೆ. ಇನ್ನು ಭಾರತೀಯ ಮಹಿಳೆಯರ ಗುರುತಾಗಿರುವ ಸೀರೆ ಧರಿಸುವುದರಿಂದ ಕ್ಯಾನ್ಸರ್ ಬರುತ್ತದೆ ಎನ್ನುವ ವಿಚಾರ ನಿಮಗೆ ತಿಳಿದಿದೆಯೇ…? ಹೌದು, ನಂಬಲು ಕಷ್ಟವಾದರೂ ಇದು ನಿಜವಾದ ವಿಷಯವಾಗಿದೆ. ಸೀರೆ ಧರಿಸುವುದರಿಂದ ಕ್ಯಾನ್ಸರ್ ಸಂಭವಿಸುವ ಸಾಧ್ಯತೆ ಇದೆ. ಏನಿದು ಸೀರೆ ಕ್ಯಾನ್ಸರ್? ಸೀರೆ ಕ್ಯಾನ್ಸರ್ ಎನ್ನುವುದು ಸೀರೆಯನ್ನು ಉಡುವ ಮಹಿಳೆಯರಲ್ಲಿ ಸೊಂಟದ ರೇಖೆಯ ಉದ್ದಕ್ಕೂ ಸಂಭವಿಸುವ ಅತ್ಯಂತ ಅಪರೂಪದ ಚರ್ಮದ ಕ್ಯಾನ್ಸರ್ ಆಗಿದೆ. ಈ ಕ್ಯಾನ್ಸರ್ ಕೇವಲ ಸೀರೆ ಉಡುವವರಲ್ಲಿ ಮಾತ್ರವಲ್ಲದೇ ಬಿಗಿಯಾಗಿ ಬಟ್ಟೆ ಧರಿಸುವವರಲ್ಲಿ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಸೀರೆ ಉಡುವಾಗ ಒಳಗೆ ಲಂಗವನ್ನು ಧರಿಸುತ್ತಾರೆ. ಈವೇಳೆ ದೀರ್ಘಕಾಲದ ವರೆಗೆ ಸೊಂಟದ ಸುತ್ತಲೂ ಲಂಗವನ್ನು ಬಿಗಿಯಾಗಿ ಕಟ್ಟಿಕೊಳ್ಳುವುದರಿಂದ ಅಪರೂಪದ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಡಿಎನ್ಎಗೆ ನೀಡಿದ ಸಂದರ್ಶನವೊಂದರಲ್ಲಿ…
ಗದಗ:- 2024 ರ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಉಭಯ ಪಕ್ಷಗಳು ಸಕಲ ತಯಾರಿ ನಡೆಸಿದೆ. ಅದರಂತೆ ಬಾಗಲಕೋಟೆ ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು, ಬಾಗಲಕೋಟೆ ಲೋಕಸಭಾ ಬಿಜೆಪಿ ಅಬ್ಯರ್ಥಿ ಪಿ ಸಿ ಗದ್ದಿಗೌಡ್ರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಸತತ ನಾಲ್ಕು ಬಾರಿ ಜಯ ಸಾಧಿಸಿ ಮತ್ತೆ ಐದನೇ ಬಾರಿಗೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿರುವ ಗದ್ದಿಗೌಡ್ರು, ನರಗುಂದ ವಿಧಾನಸಭೆ ವ್ಯಾಪ್ತಿಯ ಗ್ರಾಮಗಳಲ್ಲಿ ಭರ್ಜರಿ ಪ್ರಚಾರ ಮಾಡಿದ್ದಾರೆ. https://ainlivenews.com/this-was-the-reason-given-by-the-rcb-captain-for-his-teams-defeat/ ಪಿ ಸಿ ಗದ್ದಿಗೌಡ್ರಗೆ ಸಾಥ್ ನೀಡಿರೋ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸಿ ಸಿ ಪಾಟೀಲ್, ಡ ಸ ಹಡಗಲಿ, ಗುಜಮಾಗಡಿ, ಕುರಡಗಿ, ಎರೆಬೇಲೇರಿ, ಕಿರಟಗೇರಿ, ಹುಯಿಲಗೋಳ, ಗಾವರವಾಡ, ದುಂದೂರ, ಶಾಗೋಟಿ, ಚಿಕ್ಕಹಂದಿಗೋಳ, ಬೆಳಹೋಡ, ಮದಗಾನೂರ, ಹೊಂಬಳ ಗ್ರಾಮಗಳಲ್ಲಿ ಭರ್ಜರಿ ಪ್ರಚಾರ ಮಾಡಿದ್ದಾರೆ. ದೇಶದ ರಕ್ಷಣೆ ಗಾಗಿ ಗದ್ದಿಗೌಡ್ರಗೆ ಮತ ನೀಡಿ ಮೋದಿಯವರನ್ನು ಪ್ರಧಾನಿ ಮಾಡಿ. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಕಾಂಗ್ರೆಸ್ ಸರ್ಕಾರ ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸಿದೆ,…
IPl ಸೀಸನ್ 17 ರ ಈ ಲೀಗ್ ನಲ್ಲಿ ಆಡಿರುವ 5 ಪಂದ್ಯಗಳಲ್ಲಿ ಆರ್ಸಿಬಿ ನಾಲ್ಕನೇ ಬಾರಿ ಸೋಲನುಭವಿಸಿದೆ. ಅದರಲ್ಲೂ ಕೊನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 183 ರನ್ ಬಾರಿಸಿದರೂ ಆರ್ಸಿಬಿ ತಂಡಕ್ಕೆ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ ಎಂಬುದೇ ಅಚ್ಚರಿ https://ainlivenews.com/bengaluru-heavy-rain-is-likely-in-many-parts-of-the-state/#google_vignette ಸವಾಯ್ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ (113) ಅಜೇಯ ಶತಕ ಬಾರಿಸಿದ್ದರು. ಈ ಶತಕದ ನೆರವಿನಿಂದ ಆರ್ಸಿಬಿ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 183 ರನ್ ಪೇರಿಸಿತು. 184 ರನ್ಗಳ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ (100) ಅಜೇಯ ಶತಕ ಸಿಡಿಸಿದರು. ಈ ಸೆಂಚುರಿಯೊಂದಿಗೆ 19.1 ಓವರ್ಗಳಲ್ಲಿ ಗುರಿ ಮುಟ್ಟುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ಗಳಿಂದ ಜಯ ಸಾಧಿಸಿತು. ಈ ಸೋಲಿನ ಬಳಿಕ ಮಾತನಾಡಿದ ಆರ್ಸಿಬಿ ತಂಡದ…
ಬೆಂಗಳೂರು:- ಇಂದಿನಿಂದ ಕರ್ನಾಟಕದ 14 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಮದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. https://ainlivenews.com/sorry-for-the-hurt-please-help-the-party/ ಏಪ್ರಿಲ್ 9 ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಹಗುರ ಮಳೆಯಾಗಲಿದೆ. ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ. ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್ಎಎಲ್ನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ…
ಶಿವಮೊಗ್ಗ:- ಮನಸ್ಸಿಗೆ ನೋವಾಗಿದ್ರೆ ಕ್ಷಮಿಸಿ, ದಯವಿಟ್ಟು ಪಕ್ಷಕ್ಕೆ ಸಹಕರಿಸಿ ಎಂದು ಕೆ ಎಸ್ ಈಶ್ವರಪ್ಪಗೆ ಬಿವೈವಿ ವಿಜಯೇಂದ್ರ ಮನವಿ ಮಾಡಿದ್ದಾರೆ. https://ainlivenews.com/undocumented-4-lakh-80-thousand-money-seized/ ಈ ಸಂಬಂಧ ಮಾತನಾಡಿದ ಅವರು,ನಿಮ್ಮನ್ನು ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಿ, ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ ಎಂದು ಹೇಳಿದ್ದಾರೆ. ನರೇಂದ್ರ ಮೋದಿಯರು ಮತ್ತೆ ಪ್ರಧಾನಿಯಾಗಬೇಕು ಎಂಬುದು ನಮ್ಮ ಆಶಯ, ಈಶ್ವರಪ್ಪ ಅವರು ಬೆಂಬಲ ನೀಡಿ ರಾಘವೇಂದ್ರನನ್ನು ಗೆಲ್ಲಿಸಬೇಕು ಎಂದು ಕೇಳಿಕೊಂಡಿದ್ದಾರೆ. ಈ ಮೊದಲು ಒಂದೆರಡು ದಿನಗಳ ಹಿಂದೆ ಮಾತನಾಡುವಾಗ ಕೇಂದ್ರ ವರಿಷ್ಠರು ಕೆಎಸ್ ಈಶ್ವರಪ್ಪ ಅವರಿಗೆ ಪರಿಸ್ಥಿತಿಯ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಹೇಳಿದ್ದರು.