IPL ಸೀಸನ್ 17 ರ ಈ ಬಾರಿಯ ಪಾಯಿಂಟ್ಸ್ ಟೇಬಲ್ನ ಅಗ್ರಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ ಕಾಣಿಸಿಕೊಂಡಿದೆ. ಅದರಂತೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ… ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ https://ainlivenews.com/file-a-complaint-against-congress-mla-belur-gopalakrishna/ ಈ ಬಾರಿಯ ಐಪಿಎಲ್ನ ಮೊದಲ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಒಟ್ಟು 6 ಅಂಕಗಳನ್ನು ಸಂಪಾದಿಸಿದೆ ಇನ್ನು ನಾಲ್ಕು ಪಂದ್ಯಗಳಲ್ಲಿ 2 ಜಯ ಹಾಗೂ 2 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರನೇ ಸ್ಥಾನದಲ್ಲಿದೆ ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ. ಸನ್ರೈಸರ್ಸ್ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ 2 ಜಯ ಸಾಧಿಸಿದ್ದು, ಇದೀಗ 4 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪಂಜಾಬ್ ಕಿಂಗ್ಸ್ ತಂಡವು 6ನೇ ಸ್ಥಾನದಲ್ಲಿದ್ದು, ಆಡಿರುವ 4 ಪಂದ್ಯಗಳಲ್ಲಿ…
Author: AIN Author
ಬೆಂಗಳೂರು:-ಸುಳ್ಳು ಹೇಳಿಕೆ ನೀಡಿ ಬಿಜೆಪಿ ಕಾರ್ಯಕರ್ತರನ್ನು ಎನ್ಐಎ ಬಂಧಿಸಿದೆ ಎಂಬ ವದಂತಿಗಳನ್ನು ಹರಡಿದ್ದಕ್ಕಾಗಿ ಸಾಗರದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ವಕ್ತಾರ ಪ್ರಕಾಶ್.ಎಸ್ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. https://ainlivenews.com/bus-overturns-in-chitradurga-two-killed/ ಶಾಸಕ ಬೇಳೂರು ಗೋಪಾಲಕೃಷ್ಣ ಅವರೇ ‘ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದ್ದು, ಆ ದಾಳಿಗಳಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ಸದಸ್ಯರನ್ನು ಬಂಧಿಸಲಾಗಿದೆ ಎಂಬ ನಿಮ್ಮ ಹೇಳಿಕೆ ಮಾಡಲಾಗಿದೆ. ಈ ಕುರಿತು ನೀಡಿರುವ ಹೇಳಿಕೆಯನ್ನು ದೂರಿನಲ್ಲಿ ಲಗತ್ತಿಸಲಾಗಿದೆ.
ಚಿತ್ರದುರ್ಗ:-ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಬಳಿಯ ಕಣಿವೆ ಪ್ರದೇಶದಲ್ಲಿ ಜರುಗಿದೆ. https://ainlivenews.com/insulting-girls-in-public-is-condemnable/ ಬಸ್ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೂಡಲೇ ಗಾಯಾಳುಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಬೆಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಬಸ್ ಇದಾಗಿದ್ದು, 50 ಜನ ಪ್ರಯಾಣಿಸುತ್ತಿದ್ದ ಮಾಹಿತಿ ದೊರೆತಿದೆ. ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ ಐ ಸುರೇಶ್ ಭೇಟಿ ನೀಡಿ ಪರಿಶೀಲನೆ
ಬೆಂಗಳೂರು:- ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸುತ್ತಿರುವುದು ಖಂಡನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ. ಆದರೆ ಇತ್ತೀಚೆಗೆ ರಾಜ್ಯದಲ್ಲಿ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸುತ್ತಿರುವುದು ಖಂಡನೀಯ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣುಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ’. ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ. ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ,
RR ವಿರುದ್ಧದ ಪಂದ್ಯದಲ್ಲಿ ಬಟ್ಲರ್ ಫಾರ್ಮ್ ಕಂಡುಕೊಳ್ಳಲು ಆರ್ಸಿಬಿ ವೇಗಿಗಳು ನೆರವಾಗಿದ್ದಾರೆ. ರಾಜಸ್ಥಾನ ತನ್ನ ತವರು ನೆಲದಲ್ಲಿ ಅಜೇಯ ಓಟವನ್ನು ಮುಂದುವರೆಸಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 183 ರನ್ ಕಲೆಹಾಕಿತು. ತಂಡದ ಪರ ಶತಕ ಸಿಡಿಸಿ ಮಿಂಚಿದ ಕೊಹ್ಲಿ ಅಜೇಯ 113 ರನ್ ಬಾರಿಸಿದರು. https://ainlivenews.com/kohlis-century-was-wasted-rcb-lost-badly-against-rajasthan/ ಇನ್ನು ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ಮೊದಲ ಓವರ್ನ ಮೂರನೇ ಎಸೆತದಲ್ಲಿ ಶೂನ್ಯಕ್ಕೆ ಯಶಸ್ವಿ ಜೈಸ್ವಾಲ್ ವಿಕೆಟ್ ಕಳೆದುಕೊಂಡಿತು. ಆರಂಭದಲ್ಲೇ ಆರ್ಸಿಬಿ ವಿಕೆಟ್ ಪಡೆದುಕೊಂಡಿದ್ದರಿಂದ ಈ ಪಂದ್ಯ ಆರ್ಸಿಬಿ ಪರ ವಾಲುತ್ತೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಅದಕ್ಕೆ ಪೂರಕವಾಗಿ ಪವರ್ ಪ್ಲೇಯ ಮೊದಲ ಐದು ಓವರ್ಗಳಲ್ಲಿ ಆರ್ಸಿಬಿ ವೇಗಿಗಳು ರಾಜಸ್ಥಾನ್ ಬ್ಯಾಟರ್ಗಳನ್ನು ಕಟ್ಟಿಹಾಕಿದ್ದರು. ಆದರೆ 6ನೇ ಓವರ್ಲ್ಲಿ ಮಯಾಂಕ್ ದಾಗರ್ ಬೌಲ್ ಮಾಡಿದ ಓವರ್ ಪಂದ್ಯದ ಗತಿಯನ್ನೇ ಬದಲಿಸಿತು. ಈ ಓವರ್ನಲ್ಲಿ ಬರೋಬ್ಬರಿ…
ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಭರ್ಜರಿ ಗೆಲುವು ದಾಖಲಿಸಿತು. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿತು. https://ainlivenews.com/the-price-of-gold-that-has-not-seen-a-decrease-throughout-the-week/ ತವರು ನೆಲದಲ್ಲಿ ಅಬ್ಬರಿಸಿದ ರಾಜಸ್ಥಾನ್ ಹುಡುಗರು ಸತತ 4ನೇ ಗೆಲುವು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಶೂನ್ಯಕ್ಕೆ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರೆ, ಬಳಿಕ ಸಂಜು ಸ್ಯಾಮ್ಸನ್ ಮತ್ತು ಜೋಶ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ಮಾಡಿದರು. ಈ ವೇಳೆ ನಾಯಕ ಸಂಜು ಸ್ಯಾಮ್ಸನ್ 42 ಎಸೆತದಲ್ಲಿ 2 ಸಿಕ್ಸ್ ಮತ್ತು 8 ಬೌಂಡರಿ ಸಹಿತ 69 ರನ್ ಸಿಡಿದರು. ಕೊನೆಯಲ್ಲಿ ಅಂತೂ ಇಂತೂ ಭರ್ಜರಿ ಶತಕ ಸಿಡಿಸಿ ಜೋಶ್ ಬಟ್ಲರ್ ಮಿಂಚಿದರು. ಬಟ್ಲರ್ 58 ಎಸೆತದಲ್ಲಿ 9 ಬೌಂಡರಿ ಮತ್ತು 4 ಸಿಕ್ಸ್ ಮೂಲಕ ಭರ್ಜರಿ ಶತಕ…
ಚಿನ್ನದ ಬೆಲೆ ವಾರಾಂತ್ಯದಲ್ಲಿ ತುಸು ಮಂದವಾಗಿದೆ. ಈ ಪರಿ ಬೆಲೆ ಹೆಚ್ಚಳಕ್ಕೆ ನಿರ್ದಿಷ್ಟ ಕಾರಣವಿಲ್ಲ. ಬೇರೆ ಬೇರೆ ಮಿಶ್ರ ಕಾರಣಗಳಿಗೆ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 69,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,170 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 64,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,150 ರುಪಾಯಿಯಲ್ಲಿ ಇದೆ. https://ainlivenews.com/kai-candidate-anandaswamy-gaddadevaramath-campaigned-heavily-in-gadag/ ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 7ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,150 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 69,980 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 817 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,150 ರೂ…
ಬೆಂಗಳೂರು:ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಗಾಗಿ ರಾಜ್ಯ ಸರ್ಕಾರವು ಆದಿಶೋಧನೆಯನ್ನು ಪ್ರಕಟಿಸಿದ್ದು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹು ದಾಗಿದೆ. ಅದರಂತೆ ಈ ಹುದ್ದೆಗಳಿಗೆ ನಿಗದಿಪಡಿಸಿರುವ ದಿನಾಂಕ ಹಾಗೂ ಏನೆಲ್ಲಾ ಅರ್ಹತೆಗಳು ಇರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಇದೀವ ನೀವು ತಿಳಿದುಕೊಳ್ಳಬಹುದು. ವಿಜಯನಗರ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಹುದ್ದೆಯ ಹೆಸರು ಗ್ರಂಥಾಲಯ ಮೇಲ್ವಿಚಾರಕ ಹುದ್ದೆಯಾಗಿದ್ದು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದೆ. ಶೈಕ್ಷಣಿಕವಿದ್ಯಾರ್ಹತೆ : ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯಗಳಿಂದ ಹನ್ನೆರಡನೇ ತರಗತಿ ಹಾಗೂ ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಅನ್ನು ವಿಜಯನಗರ ಗ್ರಾಮ ಪಂಚಾಯಿತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಪೂರ್ಣಗೊಳಿಸಿರಬೇಕಾಗುತ್ತದೆ. ವೇತನ ಈ ಹುದ್ದೆಗಳಿಗೆ ಆಯ್ಕೆ ಆದರೆ ನಿಮಗೆ ₹19,000 ದಿಂದ ₹63,000 ದವರೆಗೆ ವೇತನವನ್ನು ನೀಡುತ್ತಾರೆ ಎಂದು ತಿಳಿಸಲಾಗಿದೆ. ವಯಸ್ಸಿನಮಿತಿ : ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ…
ಸೂರ್ಯೋದಯ: 06:09, ಸೂರ್ಯಾಸ್ತ : 06:26 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ , ಕೃಷ್ಣ ಪಕ್ಷ, ಉತ್ತರಾಯಣಂ, ಶಿಶಿರ ಋತು, ತಿಥಿ: ತ್ರಯೋದಶಿ, ನಕ್ಷತ್ರ: ಉತ್ತರ ಭಾದ್ರಪದ, ರಾಹು ಕಾಲ: 04:30 ನಿಂದ 06:00 ತನಕ ಯಮಗಂಡ: 12:00 ನಿಂದ 01:30 ತನಕ ಗುಳಿಕ ಕಾಲ: 03:00ನಿಂದ 04:30 ತನಕ ಅಮೃತಕಾಲ: ಇಲ್ಲ, ಅಭಿಜಿತ್ ಮುಹುರ್ತ: ಬೆ.11:53 ನಿಂದ ಮ.12:42 ತನಕ ಮೇಷ ರಾಶಿ : ಹೊಸ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಒಪ್ಪಂದಕ್ಕೆ ಸಹಿ ಮಾಡುವಿರಿ, ಪತ್ನಿಯ ಜೊತೆ ಹಣಕಾಸಿನ ವಿಷಯದಲ್ಲಿ ಚರ್ಚಿಸುವುದು ಉತ್ತಮ, ಎಲ್ಲ ಸಾಮರ್ಥ್ಯ ಇದ್ದರು ವಿದೇಶ ಪ್ರವಾಸ ಏಕೆ ಅಡತಡೆ? ಕೆಲವರಿಗೆ ಮದುವೆ ವಿಳಂಬ ಏಕೆ?ಕೆಲವರಿಗೆ ಹಣಕಾಸಿನಲ್ಲಿ ಸಮಸ್ಯೆ ಏಕೆ? ಸಂಗಾತಿ ಮಧ್ಯೆ ಕೆಲವು ವಿಚಾರಗಳಿಂದ ಅಪಾರ್ಥ ಮೂಡಬಹುದು ಇದರಿಂದ ಮನಸ್ತಾಪ ಉಂಟಾಗಲಿದೆ. ಯಾವುದೇ ವಿಷಯಗಳನ್ನು ಪರಿಗಣಿಸುವ ಮೊದಲು ಸಂಪೂರ್ಣ ವಿಷಯದ ಧ್ಯಾನ ಪಡೆಯಿರಿ. ಚಿನ್ನಾಭರಣದ ಹೂಡಿಕೆಗಳಿಂದ ಲಾಭ ಹೆಚ್ಚಾಗಲಿದೆ. ಮನೆಗೆ…
ಗದಗ:- 2024 ರ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಬ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. https://ainlivenews.com/vijayanagar-corruption-in-girls-hostel/ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ, ಹಮ್ಮಿಗಿ, ಶಿಂಗಟಾಲೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದು, ಇವರ ಪ್ರಚಾರಕ್ಕೆ ಕಾಂಗ್ರೆಸ್ ಮುಖಂಡರು ಸಾಥ್ ಕೊಟ್ಟಿದ್ದಾರೆ. ನಾನು ನಿಮ್ಮ ಮನೆಯ ಮಗ, ನಿಮ್ಮ ಸಹೋದರ, ನಿಮ್ಮ ತಮ್ಮ. ಕಾಂಗ್ರೆಸ್ ಪಕ್ಷ ಗ್ಯಾರಂಟಿ ಜಾರಿ ಮೂಲಕ ಬಡವರ ದೀನ ದಲಿತರ ಹಿತ ಕಾಪಾಡಿದೆ. ಈ ಚುನಾವಣೆಯಲ್ಲಿ ನನಗೆ ಆಶೀರ್ವದಿಸೋ ಮೂಲಕ ಪಾರ್ಲಿಮೆಂಟ್ ಗೆ ಕಳಿಸಿಕೊಡಿ. ಸದಾ ನಿಮ್ಮ ಸೇವೆಯಲ್ಲಿ ನಾನು ಇರ್ತೆನೆ, ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭಿಸ್ತೇನೆ. ನನ್ನನ್ನು ಗೆಲ್ಲಿಸಿ ಎಂದು ಮತದಾರರಲ್ಲಿ ಆನಂದಸ್ವಾಮಿ ಗಡ್ಡದೇವರಮಠ ಮನವಿ ಮಾಡಿದ್ದಾರೆ. ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಜಿ ಎಸ್ ಗಡ್ಡದೇವರಮಠ, ಕಾಂಗ್ರೆಸ್ ಮುಖಂಡರಾದ ಶಾಕೀರ್ ಸನದಿ, ಸುಜಾತಾ ಡೊಡ್ಡಮನಿ, ಟಿ ಈಶ್ವರ, ಸೇರಿದಂತೆ ಮುಖಂಡರು ಕಾರ್ಯಕರ್ತರು ಭಾಗಿಯಾಗಿದರು.