Author: AIN Author

ಬೆಂಗಳೂರು: ನಗರದ ಹೆರಿಟೇಜ್ ಹಾಲು ಉತ್ಪನ್ನಗಳ ಕಂಪನಿಯ ಆಡಿಟರ್ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆ ದಿನದ ಕೆಲಸಗಳನ್ನು ಅಂದೇ ಮುಗಿಸಿ, ಬಾಕಿ ಇಡಬೇಡಿ ಎಂದು ಸದಾ ಒತ್ತಡ ಹಾಕುತ್ತಿದ್ದ ಆಡಿಟರ್ ಮೇಲೆ ಹಲ್ಲೆ ನಡೆಸಲು ಸಹೋದ್ಯೋಗಿಗಳೇ ಸುಪಾರಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮಾಶಂಕರ್ ಹಾಗೂ ವಿನೀಶ್ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಕಂಪನಿಯ ಕೆಲಸಗಾರ ಉಮಾಶಂಕರ್ ಸುಪಾರಿ ಕೊಟ್ಟು ಹಲ್ಲೆ ನಡೆಸಿರುವುದು ಬೆಳಕಿಗೆ ಬಂದಿದೆ. ಕಂಪನಿಯ ಅಡಿಟರ್ ಸುರೇಶ್ ಎಂಬವರು ಹೆಚ್ಚು ಒತ್ತಡ ಹಾಕುತ್ತಿದ್ದರು. ಇದೇ ಕಾರಣಕ್ಕೆ ಕೃತ್ಯ ಎಸಗಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ https://ainlivenews.com/i-am-happy-to-join-bjp-because-of-modis-leadership-sumalata-ambarish/ ಕಳೆದ ಒಂದು ವರ್ಷದ ಹಿಂದೆ ಕಂಪನಿಗೆ ಆಡಿಟಿಂಗ್‍ಗಾಗಿ ಸುರೇಶ್ ಸೇರಿದ್ದರು. ಕೆಲಸಕ್ಕೆ ಸೇರಿದ್ದ ಸುರೇಶ್ ಆರೋಪಿಗಳಿಗೆ ಆ ದಿನದ ಕೆಲಸ ಅಂದೇ ಮುಗಿಸುವಂತೆ ಒತ್ತಡ ಹೇರುತ್ತಿದ್ದರು. ಈ ಹಿಂದೆ ಹಲವು ದಿನ ಸಮಯ ಪಡೆದು ಕೆಲಸ ಮಾಡುತಿದ್ದ ಆರೋಪಿಗಳ ವಿರುದ್ಧ, ಹಿರಿಯ…

Read More

ಮಂಡ್ಯ : ಇದು ದೇವರ ಸಭೆ, ನಾನು ವೈಯಕ್ತಿಕ ಸ್ಥಾನಮಾನಕ್ಕೆ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿಲ್ಲ. ನೀನೇ ನಿಲ್ಲಬೇಕು ಎಂದು ಹಿರಿಯರ ಒತ್ತಡ ಹಾಕಿದ್ದರು. ನೀವು ಬರಲಿಲ್ಲ ಅಂದ್ರೆ ಸಂಜಯ್ ಸರ್ಕಲ್‌ನಲ್ಲಿ ನೇಣು ಹಾಕಿಕೊಳ್ಳುತ್ತೇವೆ ಎಂದು ಕಾರ್ಯಕರ್ತರು ಹೇಳಿದ್ದರು. ಅದಕ್ಕಾಗಿ ನಾನು ಮಂಡ್ಯ ಜಿಲ್ಲೆಗೆ ಬಂದಿದ್ದೇನೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದರು. ಸಭೆಯಲ್ಲಿ ಮಾತನಾಡಿದ ಅವರು, 2019ರಲ್ಲಿ ಕಾಂಗ್ರೆಸ್ ನಾಯಕರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು. ಮಲ್ಲಿಕಾರ್ಜುನ ಖರ್ಗೆ ಸೇರಿ ಯಾರನ್ನಾದರೂ ಸಿಎಂ ಮಾಡಿ ಅಂತ ಎಚ್‌ಡಿ ದೇವೇಗೌಡ ಅವರು ಹೇಳಿದ್ದರು. ದಿಲ್ಲಿ ನಾಯಕರು ನೀವೇ ಸಿಎಂ ಆಗಿ ಎಂದು ನನ್ನ ಮೇಲೆ ಒತ್ತಡ ಹಾಕಿದ್ರು, ಆದ್ರೆ ಅಧಿಕಾರ ಮಾಡೋಕೆ ಬಿಡಲಿಲ್ಲ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಕಿಡಿಕಾರಿದರು. https://ainlivenews.com/mysterious-death-of-husband-wife-friend-in-the-same-room-victim-of-witchcraft/ ನಮ್ಮ ತೆರಿಗೆ ನಮ್ಮ ಹಕ್ಕು ಅಂತ ಸಿಎಂ ಸಿದ್ದರಾಮಯ್ಯ ಕೇಳುತ್ತಾರೆ. ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರದ ಮುಂದೆ ಕೈಚಾಚಲಿಲ್ಲ. ಸಾಲ ಮನ್ನಾ ಮಾಡಿ ತೋರಿಸಿದ್ದೇನೆ. ನಮ್ಮ ನೀರು…

Read More

ಮತ್ತೆ ‘ಸ್ಯಾಂಡಲ್ ವುಡ್’ನಲ್ಲಿ ಫ್ಯಾನ್ಸ್ ವಾರ್ ಬೆಂಕಿ..! ಕೀಳುಮಟ್ಟಕ್ಕೆ ಹೋಗಿದ್ಯಾಕೆ ಅಭಿಮಾನದ ಪರಕಾಷ್ಟೆ..? ಅಭಿಮಾನವಲ್ಲ, ಇದು ‘ಅಂಧಭಿಮಾನ’ RCB ಸೋಲಿಗೆ ದೊಡ್ಮನೆ ಸೊಸೆ ಟಾರ್ಗೆಟ್..? ಅಶ್ವಿನಿ ಪುನೀತ್ ರಾಜಕುಮಾರ್ ರನ್ನ ನಿಂದಿಸಿದ ಕಿಡಿಗೇಡಿಗಳು ನಕಲಿ ID ಸೃಷ್ಟಿಸಿ ಅಶ್ವಿನಿ ಪುನೀತ್ ಗೆ ಅವಮಾನ ಗಜಪಡೆ ಹೆಸರಿನ ಫೇಕ್ ಪೇಜ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಕೆಟ್ಟದಾಗಿ ನಿಂದನೆನಟನೊಬ್ಬನ ಅಭಿಮಾನಿ ಎಂದು ಹೇಳಿಕೊಂಡಿರೋ ‘ಗಜಪಡೆ’ ಅಭಿಮಾನದ ನೆಪದಲ್ಲಿ ಹೆಣ್ಣಿನ ಬಗ್ಗೆ ಕೀಳಾಗಿ ಕಾಮೆಂಟ್ ನಿಲ್ಲೋದೇ ಇಲ್ವಾ ಬೇಡದ ಫ್ಯಾನ್ ವಾರ್..? ಪೋಸ್ಟ್ ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ರೊಚ್ಚಿಗೆದ್ದ ನಟ ಪುನೀತ್ ರಾಜಕುಮಾರ್ ಫ್ಯಾನ್ಸ್ ಕಾನೂನು ಕ್ರಮಕ್ಕೆ ಮುಂದಾಗಿರೋ ಅಪ್ಪು ಅಭಿಮಾನಿಗಳು ಕಮಿಷನರ್ ಭೇಟಿಯಾಗಲು ಪುನೀತ್ ಫ್ಯಾನ್ಸ್ ಸಿದ್ಧತೆ ಫೇಕ್ ಫ್ಯಾನ್ಸ್ ವಿರುದ್ಧ ದೂರು ಕೊಡಲು ಮುಂದಾದ ಅಪ್ಪು ಫ್ಯಾನ್ಸ್ ಇಂದು ಕಮೀಷನರ್ ಗೆ ದೂರು ಕೋಡೋ ಸಾಧ್ಯತೆ

Read More

ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದಿದೆ.ಬಿಜೆಪಿ ‌ಕಾರ್ಯಕರ್ತ ಸಾಯಿಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದಾರೆ. https://ainlivenews.com/mysterious-death-of-husband-wife-friend-in-the-same-room-victim-of-witchcraft/ ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವ ಹಾಗೂ ಅವರ ಪರಿಕಲ್ಪನೆ ಮತ್ತು ಕನಸುಗಳ ಕಾರಣದಿಂದಾಗಿ ನಾನು ಭಾರತೀಯ ಜನತಾ ಪಕ್ಷವನ್ನು (BJP)  ಸೇರುತ್ತಿದ್ದೇನೆ ಎಂದಿದ್ದಾರೆ ನಟಿ, ಸಂಸದೆ ಸುಮಲತಾ ಅಂಬರೀಶ್ (Sumalta Ambarish). ಇಂದು ಅವರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಸೇರಿದ್ದಾರೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಪತ್ರ ನೀಡಿ ಸುಮಲತಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. https://ainlivenews.com/mandya-rebel-lady-sumalata-ambarish-joins-bjp/ ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಡಿ.ವಿ ಸದಾನಂದಗೌಡ , ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕರಾದ ಮುನಿರತ್ನ, ಮಾಜಿ ಮಂತ್ರಿ ಕೆ.ಸಿ.ನಾರಾಯಣ ಗೌಡ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಸುಮಲತಾ ಅಂಬರೀಶ್ ಅವರ ಜೊತೆಗೆ ಕ್ರಿಕೆಟಿಗ ದೊಡ್ಡಗಣೇಶ್ ಸೇರಿದಂತೆ ಸಾಕಷ್ಟು ಮುಖಂಡರುಗಳು ಇಂದು ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ಸೇರಿದ ನಂತರ ಮಾತನಾಡಿದ ಸುಮಲತಾ…

Read More

ತಿರುವನಂತಪುರಂ: ಕೇಂದ್ರ ಸರ್ಕಾರದ ಸ್ವಾಮ್ಯದ ದೂರದರ್ಶನ ವಾಹಿನಿಯಲ್ಲಿ ವಿವಾದಿತ `ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ಪ್ರಸಾರ ಮಾಡುವ ಪ್ರಸಾರ ಭಾರತಿ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಪ್ರಸಾರದಿಂದ ಈ ಲೋಕಸಭಾ ಚುನಾವಣೆಯಲ್ಲಿ ಕೋಮು ಉದ್ವಿಗ್ನತೆ ಉಲ್ಪಣಗೊಳ್ಳುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ರಾಷ್ಟ್ರೀಯ ವಾಹಿನಿಯು ಬಿಜೆಪಿ ಮತ್ತು ಆರ್ ಎಸ್ಎಸ್ ನ ಪ್ರಚಾರ ಯಂತ್ರ ಆಗಬಾರದು ಎಂದು ಮನವಿ ಮಾಡಿದ್ದಾರೆ. ದೂರದರ್ಶನವು ಕೇರಳ ಸ್ಟೋರಿ ಚಲನಚಿತ್ರವನ್ನು ಏಪ್ರಿಲ್ 5ರಂದು ಪ್ರಸಾರ ಮಾಡುವುದಾಗಿ ತಿಳಿಸಿತ್ತು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, https://ainlivenews.com/mysterious-death-of-husband-wife-friend-in-the-same-room-victim-of-witchcraft/ “ಡಿಡಿ ರಾಷ್ಟ್ರೀಯ ವಾಹಿನಿಯಲ್ಲಿ ಸಮಾಜದ ಧ್ರುವೀಕರಣವನ್ನು ಪ್ರಚೋದಿಸುವ ಕೇರಳ ಸ್ಟೋರಿಯನ್ನು ಪ್ರಸಾರ ಮಾಡಲು ಹೊರಟಿರುವುದು ತೀವ್ರ ಖಂಡನೀಯ ವಿಚಾರವಾಗಿದೆ. ರಾಷ್ಟ್ರೀಯ ವಾಹಿನಿ ಬಿಜೆಪಿ ಮತ್ತು ಆರೆಸ್ಸೆಸ್ಸಿನ ಪ್ರಚಾರದ ಯಂತ್ರದಂತೆ ಕಾರ್ಯನಿರ್ವಹಿಸುವುದು ಸರಿಯಲ್ಲ. ಹೀಗಾಗಿ ಈ ಚಲನಚಿತ್ರವನ್ನು ಪ್ರಸಾರ ಮಾಡುವ ತನ್ನ ನಿರ್ಧಾರವನ್ನು ತಕ್ಷಣವೇ…

Read More

ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಫ್ಯಾನ್ಸ್ ವಾರ್ ಶುರುವಾಗಿದೆ. ಪ್ರತಿ ಬಾರಿಯಂತೆ ಈ ಬಾರಿಯೂ ಅತ್ಯಂತ ಕೀಳುಮಟ್ಟಕ್ಕೆ ಹೋಗಿ ಅಭಿಮಾನದ ಪರಕಾಷ್ಟೇ ಮೆರೆಯುವಂತೆ ಕೆಲಸ ಆಗಿದೆ. ಆರ್.ಸಿ.ಬಿ ಸೋಲಿಗೆ ದೊಡ್ಮನೆ ಸೊಸೆಯನ್ನು ಟಾರ್ಗೆಟ್ ಮಾಡಿರುವ ಕೆಲವರು, ಪುನೀತ್ ಪತ್ನಿ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneet Rajkumar) ಅವರನ್ನ ನಿಂದಿಸಿದ್ದಾರೆ ಕೆಲ ಕಿಡಿಗೇಡಿಗಳು. https://ainlivenews.com/mandya-rebel-lady-sumalata-ambarish-joins-bjp/ ಗಜಪಡೆ (Gajapade) ಹೆಸರಿನ ಪೇಜ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಕೆಟ್ಟದಾಗಿ ನಿಂದನೆ ಮಾಡಲಾಗಿದ್ದು, ನಟ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿದೆ ಈ ‘ಗಜಪಡೆ’ ಖಾತೆ. ಅಭಿಮಾನದ ನೆಪದಲ್ಲಿ ಹೆಣ್ಣಿನ ಬಗ್ಗೆ ಕೀಳಾಗಿ ಕಾಮೆಂಟ್ ಮಾಡಿದ್ದರಂತೆ ಅನೇಕರು ಈ ಗಜಪಡೆ ಖಾತೆಯನ್ನು ನಿರ್ವಹಿಸುತ್ತಿರುವವರ ಬಗ್ಗೆ ಗರಂ ಆಗಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್ ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದು,…

Read More

ಹಾವೇರಿ: ಪಾಕಿಸ್ತಾನ ದಿಂದ ಬೆಂಬಲ ಪಡೆದ PFI & SDPI ಜೊತೆ ಕಾಂಗ್ರೇಸ್ ಸೇರಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. ಹಾವೇರಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಬೊಮ್ಮಾಯಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಸಮಾಜಗಳ ಮಧ್ಯ ಅಂತರ ಬಿತ್ತುವರು ಕಾಂಗ್ರೆಸ್ ನವರು, ಜಾತಿ ಜನಾಂಗದ ಮಧ್ಯ ಕಾಂಗ್ರೇಸ್ ನವರು ಸಂಘರ್ಷ ಉಂಟು ಮಾಡ್ತಿದ್ದಾರೆ. ಪಾಕ್ ಜಿಂದಾಬಾದ್ & ಹಿಂದೂಸ್ಥಾನ್ ಮೂರ್ದಾಬಾದ್ ಅಂತಾ ಕರೆಯೋರ ಜೊತೆ ಕಾಂಗ್ರೆಸ್  ಸೇರಿಕೊಂಡಿದೆ. ಅಂತವರನ್ನ ತುಕ್ಡೆ ತುಕ್ಡೆ ಗ್ಯಾಂಗ್ ಅಂತಾ ಕರಿಯುತ್ತಾರೆ ಎಂದು ವಾಗ್ದಾಳಿ ನಡೆಸಿದರು. ದೇಶವನ್ನ ಕಟ್ಟುವವರಿಗೆ ಅಧಿಕಾರ ಜನರು ನೀಡ್ಬೇಕು. ಕಾಂಗ್ರೆಸ್ 10 ತಿಂಗಳ ಆಡಳಿತ ಕಂಡು ಜನ ತಿರ್ಮಾನ ಮಾಡಿದ್ದಾರೆ. ಸರ್ಕಾರದ ಯಾವುದೆ ಇಲಾಖೆಯಲ್ಲಿ ಒಂದು ಸಣ್ಣ ಅಭಿವೃದ್ಧಿಯಾಗಿಲ್ಲ, ಯಾವ್ದೆ ಹಣಕಾಸಿನ ವ್ಯವಸ್ಥೆ ಇಲ್ದೆ ಗ್ಯಾರಂಟಿ ಯೋಜನೆ ನೀಡಿದರು. ನಮ್ಮ ಸರ್ಕಾರ ಇದ್ದಾಗ ರೈತಪರ ಯೋಜನೆಯನ್ನ ನಾವು ನೀಡಿದ್ವಿ, 10 ಕೆಜಿ ಅಕ್ಕಿ…

Read More

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿ, ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್, ದಿನಕ್ಕೊಂದು ಹೇಳಿಕೆ ನೀಡಿ ಸುದ್ದಿ ಆಗುತ್ತಿದ್ದಾರೆ. ಈ ಬಾರಿ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಹಾಡಿಹೊಗಳಿದ್ದಾರೆ. ಮೋದಿ ಅವರನ್ನು ವಿಷ್ಣುವಿನ ಅವತಾರ (Vishnu Avatar) ಎಂದಿದ್ದಾರೆ. ಈ ಮಾತು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. https://ainlivenews.com/dk-suresh-opponent-dr-c-n-do-you-know-how-much-manjunaths-property-is-worth/ ಬಿಜೆಪಿ ತನ್ನ ಲೋಕಸಭಾ (Lok Sabha) ಚುನಾವಣೆಯ 5ನೇ ಪಟ್ಟಿ ಘೋಷಣೆ ಮಾಡಿ, ಈ ಪಟ್ಟಿಯಲ್ಲಿ ಬಾಲಿವುಡ್‌ ನಟಿ ಕಂಗನಾ ರಣಾವತ್‌ (Kangana Ranaut)ಗೆ ತವರು ರಾಜ್ಯ ಹಿಮಾಚಲ ಪ್ರದೇಶದ (Himachal Pradesh) ಮಂಡಿ (Mandi) ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಕಂಗನಾ ಮಂಡಿ ಕ್ಷೇತ್ರದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿನ  ಸ್ಥಳೀಯ ಮುಖಂಡರೊಂದಿಗೆ ಮಾತುಕತೆ ಕೂಡ ಆಡುತ್ತಿದ್ದಾರೆ. ಈವರೆಗೂ ಬಾಲಿವುಡ್ ನಲ್ಲಿನ ನೆಪೋಟಿಸಂ (Nepotism) ಬಗ್ಗೆ ಮಾತನಾಡುತ್ತಿದ್ದರು ನಟಿ ಕಂಗನಾ ರಣಾವತ್. ಹಿಂದಿ ಸಿನಿಮಾ ರಂಗದಲ್ಲಿನ ನೆಪೋಟಿಸಂ…

Read More

ಬಿಟೌನ್ ಬೆಡಗಿ ಆಲಿಯಾ ಭಟ್ (Alia Bhatt) ಇದೀಗ ಮತ್ತೊಂದು ಬಂಪರ್ ಆಫರ್ ಅನ್ನು ಗಿಟ್ಟಿಸಿಕೊಂಡಿದ್ದಾರೆ. ‘ಗಂಗೂಬಾಯಿ ಕಾಠಿಯಾವಾಡಿ’ ಸಿನಿಮಾ ಸಕ್ಸಸ್ ನಂತರ ‘ಲವ್‌ & ವಾರ್‌’ ಕಥೆ ಹೇಳೋದಕ್ಕೆ ರೆಡಿಯಾಗಿದ್ದಾರೆ. 3 ವರ್ಷಗಳ ನಂತರ ಮತ್ತೆ ಸಂಜಯ್ ಲೀಲಾ ಬನ್ಸಾಲಿ ಜೊತೆ ಸಿನಿಮಾ ಮಾಡಲು ಆಲಿಯಾ ಭಟ್ ಸಾಥ್ ನೀಡುತ್ತಿದ್ದಾರೆ. https://ainlivenews.com/love-sex-aur-dokha-2-is-the-wife-of-cricketer-chahal-who-bent-her-hips/ ಮದುವೆಯಾದ್ಮೇಲೆ ನಟಿಯರಿಗೆ ಡಿಮ್ಯಾಂಡ್ ಕಮ್ಮಿ ಎಂಬ ಮಾತಿದೆ. ಆದರೆ ಆಲಿಯಾ ಭಟ್ ಆ ಮಾತನ್ನು ಸುಳ್ಳು ಮಾಡಿದ್ದಾರೆ. ಮಗು ಆದ್ಮೇಲೆಯೂ ಫಿಟ್‌ನೆಸ್ ಕಡೆ ಹೆಚ್ಚು ಗಮನ ಕೊಡುತ್ತಿರುವ ಆಲಿಯಾ ಈಗ ಮತ್ತೊಂದು ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ (Sajay Leela Bansali) ಅಡ್ಡಾಗೆ ಆಲಿಯಾ ಭಟ್ ಎಂಟ್ರಿ ಕೊಟ್ಟಿದ್ದಾರೆ. ‘ಲವ್ & ವಾರ್’ (Love & War) ಎಂಬ ಚಿತ್ರದಲ್ಲಿ ಆಲಿಯಾ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಮತ್ತೊಮ್ಮೆ ರಣ್‌ಬೀರ್ ಕಪೂರ್ (Ranbir Kapoor) ಜೊತೆ ತೆರೆಯ ಮೇಲೆ ಆಲಿಯಾ ರೊಮ್ಯಾನ್ಸ್ ಮಾಡಲಿದ್ದಾರೆ.…

Read More