ಗ್ರ್ಯಾಂಡ್ ವಿಟಾರಾ, ಬಲೆನೊ ಮತ್ತು ಫ್ರಾಂಟೆಕ್ಸ್ನಂತಹ ಜನಪ್ರಿಯ ಮಾದರಿಗಳನ್ನು ಒಳಗೊಂಡಿರುವ ಬಹುತೇಕ ಸಂಪೂರ್ಣ ನೆಕ್ಸಾ ಲೈನ್-ಅಪ್ನಲ್ಲಿ ಮಾರುತಿ ಸುಜುಕಿ ಏಪ್ರಿಲ್ ತಿಂಗಳಿನಲ್ಲಿ ಆಕರ್ಷಕ ಪ್ರಯೋಜನಗಳನ್ನು ನೀಡುತ್ತಿದೆ. ಈ ಪ್ರಯೋಜನಗಳನ್ನು ನಗದು ರಿಯಾಯಿತಿಗಳು, ವಿನಿಮಯ ಕೊಡುಗೆಗಳು ಮತ್ತು ಕಾರ್ಪೊರೇಟ್ ಪ್ರಯೋಜನಗಳ ರೂಪದಲ್ಲಿ ಪಡೆಯಬಹುದು. ಆಟೋಕಾರ್ ಇಂಡಿಯಾದಿಂದ ಈ ಮಾಹಿತಿ ಬಂದಿದೆ. ಈ ರಿಯಾಯಿತಿಗಳು ನಗರದಿಂದ ನಗರಕ್ಕೆ ಬದಲಾಗಬಹುದು. ಅಲ್ಲದೆ, ಸ್ಟಾಕ್ ಲಭ್ಯತೆಯು ಸಹ ಪರಿಣಾಮ ಬೀರಬಹುದು. ಅಂತಹ ಪರಿಸ್ಥಿತಿಯಲ್ಲಿ, ಖಚಿತವಾದ ಮಾಹಿತಿಗಾಗಿ ದಯವಿಟ್ಟು ನಿಮ್ಮ ಸ್ಥಳೀಯ ವಿತರಕರನ್ನು ಭೇಟಿ ಮಾಡಿ. ಮಾರುತಿ ಸುಜುಕಿ ಫ್ರಾಂಕ್ಸ್ ಕಂಪನಿಯು ಮುಂಭಾಗದ ಟರ್ಬೊ-ಪೆಟ್ರೋಲ್ ಕಾರು ಮಾದರಿಗಳ ಮೇಲೆ ರೂ.68,000 ವರೆಗಿನ ಪ್ರಯೋಜನಗಳನ್ನು ನೀಡುತ್ತಿದೆ. ಇದರಲ್ಲಿ ರೂ.15,000 ನಗದು ರಿಯಾಯಿತಿ, ರೂ.30,000 ಮೌಲ್ಯದ ವೆಲಾಸಿಟಿ ಎಡಿಷನ್ ಆಕ್ಸೆಸರಿ ಕಿಟ್, ರೂ.10,000 ವಿನಿಮಯ ಬೋನಸ್ ಮತ್ತು ರೂ.13,000 ಕಾರ್ಪೊರೇಟ್ ಪ್ರಯೋಜನಗಳು ಸೇರಿವೆ. ಸಾಮಾನ್ಯ ಪೆಟ್ರೋಲ್ ಮತ್ತು ಸಿಎನ್ಜಿ ಮಾದರಿಗಳಲ್ಲಿ ಕ್ರಮವಾಗಿ ರೂ 20,000 ಮತ್ತು ರೂ…
Author: AIN Author
ದಕ್ಷಿಣ ಭಾರತದಾದ್ಯಂತ ಆಚರಿಸಲಾಗುವ ಪ್ರಮುಖ ಹಬ್ಬಗಳಲ್ಲಿ ಯುಗಾದಿ ಕೂಡ ಒಂದು. ಕರ್ನಾಟಕ, ಆಂದ್ರಪ್ರದೇಶ, ತೆಲಂಗಾಣ ಸೇರಿದಂತೆ ಇನ್ನಿತರ ದಕ್ಷಿಣ ಭಾರತದ ರಾಜ್ಯಗಳಲ್ಲಿ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಯುಗಾದಿ ಹಬ್ಬವನ್ನು ಹಲವೆಡೆ ಉಗಾದಿ ಎಂತಲೂ ಕರೆಯುತ್ತಾರೆ. ಈ ಹಬ್ಬವನ್ನು ಹಿಂದೂಗಳು ಚೈತ್ರ ಮಾಸದ ಮೊದಲ ದಿನದಂದು ಆಚರಿಸುತ್ತಾರೆ. ಈ ಹಬ್ಬವು ವಸಂತ ಕಾಲದ ಆಗಮನವನ್ನು ಸೂಚಿಸುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಹಳ ವಿಜೃಂಭಣೆಯಿಂದ ಯುಗಾದಿಯನ್ನು ಆಚರಿಸುತ್ತಾರೆ. ಯುಗ ಮತ್ತು ಆದಿ ಎನ್ನುವ ಎರಡು ಸಂಸ್ಕೃತ ಪದಗಳಿಂದ ರೂಪುಗೊಂಡ ಈ ಯುಗಾದಿಯು ಹೊಸ ಯುಗದ ಆರಂಭವನ್ನು ಸೂಚಿಸುತ್ತದೆ. ಈ ವರ್ಷ ಯುಗಾದಿಯನ್ನು ಏಪ್ರಿಲ್ 09 ರಂದು ಮಂಗಳವಾರ ಆಚರಿಸಲಾಗುವುದು. ಈ ದಿನದ ಶುಭ ಮುಹೂರ್ತ, ಮಹತ್ವ ಮತ್ತು ಪೂಜೆ ವಿಧಿ – ವಿಧಾನಗಳು ಹೀಗಿವೆ.. ಹಿಂದೂ ಪುರಾಣಗಳ ಪ್ರಕಾರ, ಈ ದಿನ, ಬ್ರಹ್ಮ ದೇವನು ಬ್ರಹ್ಮಾಂಡದ ಸೃಷ್ಟಿಯನ್ನು ಪ್ರಾರಂಭಿಸಿದನು. ಇಂದಿಗೂ ಆಂಧ್ರಪ್ರದೇಶದಂತಹ ರಾಜ್ಯದಲ್ಲಿ ಯುಗಾದಿಯಂದು ಬ್ರಹ್ಮ ದೇವನನ್ನು ಪೂಜಿಸುತ್ತಾರೆ ಮತ್ತು ಈ ದಿನದಂದು…
ಗುಜರಾತ್ ತಂಡವು ಗೆಲ್ಲುವ ಪಂದ್ಯ ಕೈಚೆಲ್ಲಿದ್ದು, ಪಂಜಾಬ್ ಗೆ 3 ವಿಕೆಟ್ ರೋಚಕ ಗೆಲುವು ಸಿಕ್ಕಿದೆ. ಇದರೊಂದಿಗೆ ಗುಜರಾತ್ ತಂಡದ ನಾಯಕ ಶುಭ್ಮನ್ ಗಿಲ್ ಅವರ ಅರ್ಧ ಶತಕ ವ್ಯರ್ಥಗೊಂಡಿತು. ಅದೇ ರೀತಿ ಸ್ಥಳೀಯ ಗುಜರಾತ್ ತಂಡದ ಅಭಿಮಾನಿಗಳಿಗೆ ನಿರಾಸೆ ಮೂಡಿತು. ಗುಜರಾತ್ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಆಡಿರುವ ನಾಲ್ಕರಲ್ಲಿ ಇದು ಎರಡನೇ ಸೋಲು. ಟೈಟಾನ್ಸ್ ಬಳಗ ಎಸ್ಆರ್ಎಚ್ ಮತ್ತು ಮುಂಬಯಿ ವಿರುದ್ಧ ಗೆದ್ದಿದ್ದರೆ, ಸಿಎಸ್ಕೆ ಹಾಗೂ ಪಂಜಾಬ್ ವಿರುದ್ಧ ಸೋತಿತು. https://ainlivenews.com/gold-price-the-price-of-gold-that-does-not-decrease/ ನರೇಂದ್ರ ಮೋದಿ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ ನಿಗದಿತ 20 ಓವರ್ಗಳು ಪೂರ್ಣಗೊಂಡಾಗ 4 ವಿಕೆಟ್ಗೆ 199 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್ 19.5 ಓವರ್ಗಳಲ್ಲಿ 200 ರನ್ ಬಾರಿಸಿ ಗೆಲುವು ಸಾಧಿಸಿತು. ಇದರೊಂದಿಗೆ ಕಳೆದ ಎರಡು ಪಂದ್ಯಗಳಲ್ಲಿ ಸತತವಾಗಿ ಸೋಲು ಕಂಡಿದ್ದ ಪಂಜಾಬ್ ತಂಡಕ್ಕೆ ಚೈತನ್ಯ ದೊರಕಿತು. ಪಂಜಾಬ್ ಮೊದಲ ಪಂದ್ಯದಲ್ಲಿ ಡೆಲ್ಲಿ ವಿರುದ್ದ…
ಎಡಬಿಡದೆ ಚಿನ್ನ, ಬೆಳ್ಳಿ ಬೆಲೆ ಏರಿಕೆ ಆಗುತ್ತಿದ್ದು, ಚಿನ್ನ ಕೊಂಡು ಕೊಳ್ಳಬೇಕೆನ್ನುವವರಿಗೆ ಕಷ್ಟವಾಗುತ್ತಿದೆ. 24 ಕ್ಯಾರಟ್ ಚಿನ್ನದ ಬೆಲೆ 10 ಗ್ರಾಮ್ಗೆ 71,000 ರೂ ಗಡಿ ಮುಟ್ಟುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 64,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 70,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 64,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,975 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 5ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 64,600 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 70,470 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 820 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ:…
ಸೂರ್ಯೋದಯ: 06:11 ಸೂರ್ಯಾಸ್ತ : 06:26 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ,ಕೃಷ್ಣ ಪಕ್ಷ, ಉತ್ತರಾಯಣಂ, ಶಿಶಿರ ಋತು, ತಿಥಿ: ಏಕಾದಶಿ, ನಕ್ಷತ್ರ: ಧನಿಷ್ಠ, ರಾಹು ಕಾಲ: 10:30 ನಿಂದ 12:00 ತನಕ ಯಮಗಂಡ: 03:00 ನಿಂದ 04:30 ತನಕ ಗುಳಿಕ ಕಾಲ: 07:30 ನಿಂದ 09:00 ತನಕ ಅಮೃತಕಾಲ: ಬೆ.8:37 ನಿಂದ ಬೆ.10:04 ತನಕ ಅಭಿಜಿತ್ ಮುಹುರ್ತ: ಬೆ.11:54 ನಿಂದ ಮ.12:43 ತನಕ ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ…
ಬೆಂಗಳೂರು:- ಲೋಕಸಭಾ ಚುನಾವಣೆಯ ಮತದಾನದ ದಿನ ಸಮೀಪಿಸುತ್ತಿದ್ದಂತೆ ಎಲ್ಲಾ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ. ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಎನ್ಡಿಎ ಒಕ್ಕೂಟ ಅಧಿಕಾರ ಉಳಿಸಿಕೊಳ್ಳುವ ಹರಸಾಹಸದಲ್ಲಿದ್ದರೆ, ಇಂಡಿಯಾ ಒಕ್ಕೂಟ ಈ ಬಾರಿ ಶತಾಯಗತಾಯ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. https://ainlivenews.com/the-people-of-hirana-are-exposed-to-the-scorching-sun-fluctuations-in-health/ ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ಡಿಎ ಒಕ್ಕೂಟ ಈ ಬಾರಿ 400 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದರೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸೋಲಿಸಲು ದೇಶದಾದ್ಯಂತ ಶಕ್ತಿ ಪ್ರದರ್ಶನ ನಡೆಸುತ್ತಿವೆ. ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ – ಜೆಡಿಎಸ್ ಮೈತ್ರಿದ್ದು, ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದರೆ, ಇತ್ತ ಆಡಳಿತ ರೂಢ ಕಾಂಗ್ರೆಸ್ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುವ ಕನಸು ಕಾಣುತ್ತಿದೆ. ಈ ಬೆಳವಣೆಗೆಯ ನಡುವೆ ಇಂಟಿಯಾ ಟಿವಿ – ಸಿಎನ್ಎಕ್ಸ್ ಸಮೀಕ್ಷೆ ಪ್ರಕಟವಾಗಿದ್ದು, ರಾಜಕೀಯ…
ಬೆಂಗಳೂರು:- ಬಿಸಿಲ ಝಳಕ್ಕೆ ರಾಜ್ಯದ ಜನತೆ, ಕೂಲಿ ಕಾರ್ಮಿಕರು ಹೈರಾಣಾಗಿದ್ದಾರೆ. ಪ್ರಸ್ತುತ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2 ರಿಂದ 3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಎಪ್ರಿಲ್ ತಿಂಗಳಿನಿಂದ ಮೇ ತಿಂಗಳ ಅವಧಿಯಲ್ಲಿ ಬರುವ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಭಾರತ ಹವಾಮಾನ ಇಲಾಖೆಯು ಸೂಚಿಸಿದೆ. https://ainlivenews.com/cm-siddaramaiah-who-met-and-blessed-nirmalanandanath-sri/#google_vignette ಬೆಂಗಳೂರು ನಗರದಲ್ಲಿ ಮೂರು ದಿನಗಳಿಂದ ತಾಪಮಾನದಲ್ಲಿ ವಿಪರೀತ ಏರಿಕೆಯಾಗಿದ್ದು, ಬಿಸಿಲು ನಗರದ ಜನರನ್ನು ಕಂಗೆಡಿಸಿದೆ. ಮಳೆಯ ಛಾಯೆಯೂ ಇಲ್ಲದೆ, ತಾಪಮಾನದಲ್ಲೂ ಏರಿಕೆಯಾಗಿ ಮನೆಯಿಂದ ಹೊರ ಬರಲು ಆತಂಕಪಡುವ ಸ್ಥಿತಿ ಇದೆ. ಕಳೆದ ಐದು ವರ್ಷಗಳಲ್ಲೇ ಈ ವರ್ಷ ಅತೀ ಹೆಚ್ಚು ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ವಾರ ನಗರದಲ್ಲ್ಲಿ 34 ರಿಂದ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬುಧವಾರ(ಎ.3) ನಗರದಲ್ಲಿ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಗುರುವಾರ(ಎ.4) 36…
ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಆಗಿದ್ದಾರೆ. https://ainlivenews.com/kolar-jds-bjp-candidate-nomination/ ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಆದಿಚುಂಚನಗಿರಿ ಮಹಾಸಂಸ್ಥಾನದ ಧರ್ಮಗುರು ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಮಠದಲ್ಲೇ ರಾತ್ರಿಯ ಪ್ರಸಾದ ಸ್ವೀಕರಿಸಿದರು. ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ಎಂ.ಕೃಷ್ಣಪ್ಪ, ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಸೇರಿ ಹಲವು ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೋಲಾರ:- ಇಲ್ಲಿನ ಜೆಡಿಎಸ್-ಬಿಜೆಪಿ ಎನ್.ಡಿ.ಎ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಶಕ್ತಿ ಪ್ರದರ್ಶನ ಮಾಡುವ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ರು. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಮಲ್ಲೇಶ್ ಬಾಬು ಸಾವಿರಾರು ಸಂಖ್ಯೆಯ ಬಿಜೆಪಿ ಜೆಡಿಎಸ್ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ರು. ಕೋಲಾರ ನಗರದ ಬಂಗಾರಪೇಟೆ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಂತರ ನಂತರ ತೆರೆದ ವಾಹನದಲ್ಲಿ ಬೃಹತ್ ಪ್ರಚಾರ ಮೆರವಣಿಗೆ ಮಾಡಿದ್ರು. ಜೆಡಿಎಸ್ ಬಿಜೆಪಿ ಎರಡು ಪಕ್ಷದ ಸಾವಿರಾರು ಕಾರ್ಯಕರ್ತರು ಬಂಗಾರಪೇಟೆ ವೃತ್ತದಿಂದ ಮೆಕ್ಕೆ ವೃತ್ತದವರೆಗೂ ಮೆರವಣಿಗೆ ಮಾಡಿದ್ರು. https://ainlivenews.com/modi-and-sri-rama-are-in-my-heart-ks-eshwarappa/#google_vignette ಈಗಾಗಲೆ ಒಂದು ಸೆಟ್ ನಾಮಪತ್ರ ಸಲ್ಲಿಕೆ ಮಾಡಿದ್ದ ಎನ್ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು ಇಂದು ಹಲವು ಮುಖಂಡರು, ನಾಯಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಬಿಜೆಪಿ-ಜೆಡಿಎಸ್ ನಾಯಕರು ಕೋಲಾರ ನಗರದಲ್ಲಿ ಬೃಹತ್ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ಮೈತ್ರಿ ಅಭ್ಯರ್ಥಿಯಾಗಿ ಎಂ.ಮಲ್ಲೇಶ್ ಬಾಬು ನಾಮಪತ್ರ ಸಲ್ಲಿಸಿದರು. ಇದೆ ವೇಳೆ ಮಾತನಾಡಿದ ಜೆಡಿಎಸ್ನ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ…
ದೇವನಹಳ್ಳಿ:- ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸುಮಲತಾ ಬಿಜೆಪಿಗೆ ಬಂದಿರುವುದು ಸ್ವಾಗತ. ಬಿಜೆಪಿಗೆ ಯಾರೆಲ್ಲ ಬರುತ್ತಾರೋ ಅವರಿಗೆಲ್ಲಾ ಸ್ವಾಗತ. ನರೇಂದ್ರ ಮೋದಿ ಮತ್ತೆ ದೇಶದ ಪ್ರಧಾನಿಯಾಗಬೇಕು. ನನ್ನ ಹೃದಯದಲ್ಲಿ ಮೋದಿ ಹಾಗೂ ಶ್ರೀರಾಮ ಇದ್ದಾರೆ. ಮೋದಿಗೆ ಬೆಂಬಲ ಕೊಡದಿದ್ರೆ ನನ್ನ ಕೈಕಟ್ ಆಗಿಬಿಡುತ್ತೆ. ಚುನಾವಣೆಯಲ್ಲಿ ಗೆದ್ದ ಮೇಲೆ ಮೋದಿ ಬಳಿ ಹೋಗುತ್ತೇನೆ ಎಂದಿದ್ದಾರೆ. https://ainlivenews.com/prakash-raj-joining-bjp-the-actor-who-gave-clarification-to-vananti/ ಇನ್ನೂ ಚುನಾವಣೆಗೆ ಸ್ಪರ್ಧಿಸಲು ದೆಹಲಿ ಯಾತ್ರೆ ಭಗವಂತ ಕೊಟ್ಟ ವರ. ಏ.12ರಂದು ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ನಿಂದಲೂ ನನಗೆ ಬೆಂಬಲ ಸಿಗುತ್ತಿದೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಭೇಟಿಗೆ ಅವಕಾಶ ಕೊಟ್ಟಿಲ್ಲ. ಬೇಡಿಕೆಯಿಟ್ಟಿದ್ದ ಪ್ರಶ್ನೆಗೆ ಉತ್ತರಿಸಲಾಗದೆ ಭೇಟಿಗೆ ಅವಕಾಶ ನೀಡಿಲ್ಲ. ದೇಶದಲ್ಲಿ ಕಾಂಗ್ರೆಸ್ನಿಂದ ಕುಟುಂಬ ರಾಜಕಾರಣ ನಡೆಯುತ್ತಿದೆ. ಕರ್ನಾಟಕದಲ್ಲಿ ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣ ನಡೆಯುತ್ತಿದೆ. ಹೀಗಾಗಿ ಅವರ…