ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿದೆ. ಇತ್ತೀಚಿಗೆ ಮೈಸೂರಿನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಇದೀಗ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಹೆಚ್.ನಿಂಗಪ್ಪ, ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ https://ainlivenews.com/star-chandru-was-blessed-by-meeting-former-cm-sm-krishna/ ತುಮಕೂರು ಗ್ರಾಮಾಂತರ ಮಾಜಿ ಶಾಸಕ ಹೆಚ್.ನಿಂಗಪ್ಪ ಜೆಡಿಎಸ್ ಸೇರ್ಪಡೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ಹೆಚ್.ನಿಂಗಪ್ಪ ಇದೀಗ ಕಾಂಗ್ರೆಸ್ ತೊರೆದು ಮರಳಿ ಜೆಡಿಎಸ್ ಗೆ ಸೇರ್ಪಡೆ ಪಕ್ಷಕ್ಕೆ ಬರಮಾಡಿಕೊಂಡ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆ ಪಿ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ, ಎಂಎಲ್ಸಿ ತಿಪ್ಪೇಸ್ವಾಮಿ , ರಮೇಶ್ಗೌಡ ಸೇರಿದಂತೆ ಹಲವರು ಭಾಗಿ
Author: AIN Author
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್ ಬಿದ್ದಿದೆ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್ (Petrol rate), ಡೀಸೆಲ್ ಬೆಲೆಯಲ್ಲಿ (diesel rate)ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ. ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ನ ಇತ್ತೀಚಿನ ಬೆಲೆ ರಾಜಧಾನಿ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 96.72 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 87.66 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 106.31 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.13 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 103.93 ರೂ…
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ, ಶಾಸಕರಾದ ಗಣಿಗ ರವಿ, ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಾಜಿ ಶಾಸಕರುಗಳಾದ ಕೆ.ಬಿ.ಚಂದ್ರಶೇಖರ್, ಹೊನ್ನಲಗೆರೆ ರಾಮಕೃಷ್ಣ, ಮಾಜಿ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಚಿದಂಬರಂ ಅವರು ಸದಾಶಿವ ನಗರದಲ್ಲಿನ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಎಸ್.ಎಂ.ಕೃಷ್ಣ ಅವರಿಗೆ ಹೂಮಾಲೆ ಹಾಕಿ, ಶಾಲು ಹೊದಿಸಿ ಸನ್ಮಾನಿಸಿದರು. ಉಭಯ ಕುಶಲೋಪರಿ ವಿಚಾರಿಸಿದ ನಾಯಕರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.
ಬೆಂಗಳೂರು: ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ತವರು ಮೈಸೂರು ಹಾಗೂ ಚಾಮರಾಜನಗರ ಗೆಲ್ಲಲು ಸಿದ್ದು ರಣತಂತ್ರ – ಪ್ರಚಾರದ ಅಖಾಡಕ್ಕಿಳಿದ CM! ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಇನ್ನು ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಏಪ್ರಿಲ್ 3 ರಿಂದ 5ರ ವರೆಗೆ ಉಷ್ಣ ಹವೆ ಬೀಸಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿದಿನ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುತ್ತಿದೆ. ಮಾರ್ಚ್ 31 ರಂದು ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕ 41.4 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ 17.08 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮುಂದಿನ 24 ಗಂಟೆ…
ಬೆಂಗಳೂರು: ಏಪ್ರಿಲ್ನಿಂದ ಜೂನ್ ಅವಧಿಯಲ್ಲಿ ಭಾರತವು ತೀವ್ರವಾದ ಬೇಸಿಗೆ ಅನುಭವಿಸಲಿದೆ. ಮಧ್ಯ ಭಾರತ ಮತ್ತು ದಕ್ಷಿಣ ಭಾರತ ಕೆಟ್ಟ ಪರಿಣಾಮ ಎದುರಿಸುವ ನಿರೀಕ್ಷೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. https://ainlivenews.com/break-fast-meeting-of-bjp-jds-leaders-with-amit-shah-who-is-there/ ಕರ್ನಾಟಕವು ಏಪ್ರಿಲ್ನಲ್ಲಿ ಸಾಮಾನ್ಯದ 1 ರಿಂದ 3 ದಿನಗಳ ಬದಲು 2 ರಿಂದ 8 ದಿನ ಉಷ್ಣ ಅಲೆಯನ್ನು ಅನುಭವಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ದೇಶದ ಹೆಚ್ಚಿನ ಭಾಗಗಳಲ್ಲಿ ಹೆಚ್ಚು ಗರಿಷ್ಠ ತಾಪಮಾನವಿದ್ದು, ಪಶ್ಚಿಮ ಹಿಮಾಲಯ ಪ್ರದೇಶ, ಈಶಾನ್ಯ ರಾಜ್ಯಗಳು ಉತ್ತರ ಒಡಿಶಾದ ಕೆಲವು ಭಾಗಗಳಲ್ಲಿ ಗರಿಷ್ಠ ಉಷ್ಣಾಂಶವಿದೆ.ಬಯಲು ಸೀಮಿಯ ಬಹುತೇ ಭಾಗಗಳಲ್ಲೂ ಬಿಸಿಲ ಕಾಟವಿದ್ದು,ಈ ಬಾರಿ 20 ದಿನಗಳ ಕಾಲ ತಾಪಮಾನ ಏರಿಕೆ ಸಾಧ್ಯತೆ, ಯಾವ್ಯಾವ ರಾಜ್ಯಗಳಿಗೆ ಆತಂಕ? ಗುಜರಾತ್, ಮಧ್ಯ ಮಹಾರಾಷ್ಟ್ರ, ರಾಜಸ್ಥಾನ ಉ.ಕರ್ನಾಟಕ, ಮಧ್ಯಪ್ರವೇಶ, ಒಡಿಶಾ ಉತ್ತರ ಛತ್ತೀಸ್ಗಢ, ಆಂಧ್ರಪ್ರದೇಶ ಪ.ಹಿಮಾಲಯ ಪ್ರದೇಶ, ಈಶಾನ್ಯ ರಾಜ್ಯಗಳು ದೇಶದ ಹೆಚ್ಚಿನ ಭಾಗಗಳಲ್ಲಿ ಗರಿಷ್ಠ ತಾಪಮಾನ ಕರ್ನಾಟಕದಲ್ಲಿ 2ರಿಂದ 8…
ದಾವಣಗೆರೆ: ಕೆಲವು ಬಾರಿ ನಾವು ದೇವರು ಇದ್ದಂತೆ ಇರಬೇಕು. ಕೆಲವು ಬಾರಿ ದೇವರು ಪ್ರತ್ಯಕ್ಷರಾಗ್ತಾರೆ, ಮಾಯವಾಗ್ತಾರೆ ಎಂದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಶಾಸಕರು, ಇದೆಲ್ಲಾ ಭಗವಂತನ ಇಚ್ಚೆ. ನಾವು ದೇವರು ಇದ್ದಂತೆ ಇದ್ದರೇ ಬಹಳ ಒಳ್ಳೆಯದು. ನಾಲ್ಕು ಗೋಡೆಗಳ ಮಧ್ಯೆ ಏನು ಹೇಳಬೇಕೋ ಎಲ್ಲವನ್ನೂ ಹೇಳಿದ್ದೇವೆ. ಎಲ್ಲವೂ ಚರ್ಚೆಯಾಗಿದೆ. ನಾನು ಮೌನಕ್ಕೆ ಜಾರುತ್ತೇನೆ ಎಂದರು. https://ainlivenews.com/big-update-for-credit-card-holders-change-in-rule-from-april-1/ ಇನ್ನು, ಬೇಡಿಕೆ ಈಡೇರಿಸುವ ಸಂಬಂಧ ಹೈಕಮಾಂಡ್ನಿಂದ ಭರವಸೆ ನೀಡಲಾಗಿದೆಯಾ? ಸಭೆ ತೃಪ್ತಿ ತಂದಿದೆಯಾ ಎಂಬ ಪ್ರಶ್ನೆಗೆ ಧನ್ಯವಾದ, ಧನ್ಯವಾದ ಎಂದಷ್ಟೇ ಹೇಳಿ ತೆರಳಿದರು. ಕೆಲವೊಮ್ಮೆ ರೆಬೆಲ್ ಆಗ್ತೀರಿ, ಕೆಲವೊಮ್ಮೆ ಸೈಲೈಂಟ್ ಆಗ್ತೀರಿ ಜನ ನೀವು ರಾಜಕೀಯ ಆಟವಾಡುತ್ತೀದ್ದೀರಿ ಎಂದು ಹೇಳುತ್ತಾರೆ ಎಂದು ಕೇಳಿದ ಪ್ರಶ್ನೆಗೆ, ನಾನು ಆಟ ಆಡುವುದಿಲ್ಲ. ಈಗಲೂ ನಾವೆಲ್ಲರೂ ಒಂದೇ. ನಾವೆಲ್ಲರೂ ಬೇರೆ ಏನೂ ಇಲ್ಲ. ಈಗಲೂ ಕುಳಿತು ಚರ್ಚೆ ಮಾಡುತ್ತೇವೆ. ಸಮಸ್ಯೆ ಪರಿಹರಿಸಿಕೊಳ್ಳುತ್ತೇವೆ ಎಂದು ಹೇಳಿದರು.
ರಾಹುಲ್ ಗಾಂಧಿಯವರು ತಮ್ಮ ಕ್ಷೇತ್ರದಲ್ಲಿ ನಿಲ್ಲೋಕೆ ತಯಾರಿಲ್ಲ. ಅವರು ಕೇರಳದಲ್ಲಿ ಚುನಾವಣೆಗೆ ನಿಲ್ಲೋಕೆ ಹೋಗ್ತಿದ್ದಾರೆ. ಇಂತಹ ಪರಿಸ್ಥಿತಿ ಕಾಂಗ್ರೆಸ್ ಗೆ ಬಂದಿದೆ ಎಂದು ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ನಾವು ಎನ್.ಡಿ.ಎ ಜೊತೆಗೆ ಸೇರಿದ ಬಳಿಕ ನಮ್ಮಲ್ಲಿರುವ ಒಬ್ಬರೇ ಒಬ್ಬರು ಅಲ್ಪಸಂಖ್ಯಾತರು ನಮ್ಮ ಪಕ್ಷ ಬಿಟ್ಟು ಹೋಗಿಲ್ಲ. ನಮ್ಮಲ್ಲಿನ ಸಣ್ಣಪುಟ್ಟ ಸಮಸ್ಯೆಗಳು ಏನೇ ಇದ್ರು ಕೂಡ ಅದನ್ನು ಮರೆತು ನಾವು ಮೈತ್ರಿ ಧರ್ಮವನ್ನು ಪಾಲಿಸುವ ಕೆಲಸ ಮಾಡಬೇಕು ಎಂದು ದೇವೇಗೌಡರು ರಾಜ್ಯದ ಎಲ್ಲಾ 28 ಲೋಕಸಭಾ ಕ್ಷೇತ್ರದ ಮುಖಂಡರಿಗೆ ಕರೆ ಕೊಟ್ಟಿದ್ದಾರೆ. ನಾನು ಕೂಡ ನಮ್ಮ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೆಲ್ದಾಳೆರವರಿಗೆ ಎಲ್ಲರೂ ಸೇರಿ ಜಂಟಿಯಾಗಿ ಕಾರ್ಯಕ್ರಮ ಮಾಡೋಣ ಅಂತ ಹೇಳಿದ್ದಿನಿ. ಕಾರ್ಯಕರ್ತರ ಸಮಾವೇಶ ಮಾಡೋಣ ಎಂದು ಕೂಡ ಹೇಳಿದ್ದೇನೆ. ಯಾರ್ ಏನೇ ಅಂದ್ರು ಕೂಡ ನಾವು ಎನ್.ಡಿ.ಎ ಅಭ್ಯರ್ಥಿ ಭಗವಂತ ಖೂಬಾರವರ ಪರವಾಗಿ ನಿಷ್ಠೆಯಿಂದ ಕೆಲಸ ಮಾಡೋಣ. ನಮ್ಮ ಅಭ್ಯರ್ಥಿಯಾಗಿರುವ ಖೂಬಾರವರನ್ನು ಮೊದಲಿಗಿಂತಲೂ ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸಿ ಕಳಿಸುವ…
ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಸ್ವಾಗತ ಕೋರಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ಬರಮಾಡಿಕೊಂಡರು. ಆ ನಂತರ ಅಮಿತ್ ಶಾ ಜೊತೆ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದು ಬಿಜೆಪಿಯ 15 ಹಾಗೂ ಜೆಡಿಎಸ್ ನ 8 ಪ್ರಮುಖ ನಾಯಕರು ಭಾಗಿಯಾಗಲಿದ್ದು ಆಹ್ವಾನಿತ ನಾಯಕರ ಲಿಸ್ಟ್ ಮಾಡಲಾಗಿದ್ದು ಬೆಳಗಿನ ಉಪಹಾರ ಸಭೆಯಲ್ಲಿ ಭಾಗಿಯಾಗಲಿರೋ ಕಮಲ-ದಳ ನಾಯಕರ ಪಟ್ಟಿ ಇಲ್ಲಿದೆ ನೋಡೋಣ ಬನ್ನಿ.. https://ainlivenews.com/good-news-for-bpl-card-holders-lpg-cylinder-is-free-if-this-is-done/ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗಿಯಾಗೊ ಬಿಜೆಪಿ ನಾಯಕರು ಬಿಎಸ್ ಯಡಿಯೂರಪ್ಪ ವಿಜಯೇಂದ್ರ ರಾಧಾಮೋಹನ್ ದಾಸ್ ಆರ್ ಅಶೋಕ್ ಪ್ರಹ್ಲಾದ್ ಜೋಶಿ ಸದಾನಂದಗೌಡ ಬಸವರಾಜ್ ಬೊಮ್ಮಾಯಿ ನಳೀನ್ ಕುಮಾರ್ ಕಟೀಲ್ ಗೋವಿಂದ್ ಕಾರಜೋಳ ಸಿ.ಟಿ ರವಿ ಶ್ರೀರಾಮುಲು ಸಿ.ಎನ್ ಅಶ್ವಥ್ ನಾರಾಯಣ್ ನಿರ್ಮಲ್ ಕುಮಾರ್ ಸುರಾನಾ ಜಿ.ವಿ ರಾಜೇಶ್ ಜೆಡಿಎಸ್ ನಾಯಕರು ಹೆಚ್.ಡಿ ಕುಮಾರಸ್ವಾಮಿ ಜಿ.ಟಿ ದೇವೇಗೌಡ ಬಂಡೆಪ್ಪ ಖಾಶೆಂಪುರ್ ವೆಂಕಟರಾವ್…
ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Election) ಹಿನ್ನೆಲೆಯಲ್ಲಿ ತಡರಾತ್ರಿ ಬೆಂಗಳೂರಿಗೆ (Bengaluru) ಗೃಹ ಸಚಿವ ಅಮಿತ್ ಶಾ (Amit Shah) ಆಗಮಿಸಿದ್ದಾರೆ. ವಿಶೇಷ ವಿಮಾನದ ಮೂಲಕ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ (HAL Airport) ಆಗಮಿಸಿದ ಅಮಿತ್ ಶಾರನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಸ್ವಾಗತಿಸಿದರು. ತಾಜ್ ವೆಸ್ಟ್ ಎಂಡ್ ಹೋಟೆಲಿನಲ್ಲಿ ವಾಸ್ತವ್ಯ ಹೂಡಿರುವ ಅಮಿತ್ ಶಾ ಇಂದು ಚುನಾವಣಾ ಪ್ರಚಾರ ಕಾರ್ಯಗಳ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ https://ainlivenews.com/bet-to-win-bawa-why-did-hdk-take-prestige/ ಸಂಜೆ ರೋಡ್ ಶೋ: ಇಂದು ಸಂಜೆ 5:50ಕ್ಕೆ ಚನ್ನಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಬಳಿಯ ಹೆಲಿಪ್ಯಾಡ್ಗೆ ಬಂದಿಳಿಯಲಿರುವ ಅಮಿತ್ ಶಾ ರಸ್ತೆಯ ಮೂಲಕ ಚಿಕ್ಕಮಳೂರು ಗ್ರಾಮಕ್ಕೆ ಆಗಮಿಸಲಿದ್ದಾರೆ. ಚಿಕ್ಕಮಗಳೂರು ಗ್ರಾಮದಿಂದ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ಆರಂಭಿಸಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಪರ ಸುಮಾರು ಒಂದೂವರೆ ಕಿ.ಮೀ ದೂರ ಮೆರವಣಿಗೆ ನಡೆಸಿ ಮತಯಾಚನೆ ಮಾಡಲಿದ್ದಾರೆ. ಅಮಿತ್ ಶಾ ಕಾರ್ಯಕ್ರಮದಲ್ಲಿ ವಿಜಯೇಂದ್ರ, ಅಶೋಕ್, ಕುಮಾರಸ್ವಾಮಿ, ನಿಖಿಲ್ ಸೇರಿ ಸ್ಥಳೀಯ…
ನಮ್ಮ ಆರೋಗ್ಯದಲ್ಲಿ ಸಣ್ಣದಾಗಿ ಸಮಸ್ಯೆಗಳು ಕಂಡುಬಂದರೂ ಕೂಡ, ನಿಧಾನವಾಗಿ ನಮಗೆ ಒಂದೊಂದೇ ಸೂಚ ನೆಗಳು, ರೋಗ ಲಕ್ಷಣಗಳ ಮೂಲಕ ಕಂಡು ಬರಲು ಶುರುವಾಗುತ್ತದೆ. ಉದಾಹರಣೆಗೆ ರಕ್ತದಲ್ಲಿ ಹಿಮೋ ಗ್ಲೋಬಿನ್ ಅಂಶ ಕಡಿಮೆ ಅದರೆ, ಸುಸ್ತು, ನಡೆಯಲು ಆಗದಿ ರುವುದು ಇಂತಹ ಸಮಸ್ಯೆಗಳು ಕಂಡು ಬರುತ್ತದೆ. ಅದೇ ರೀತಿ ರಕ್ತದೊತ್ತಡದಲ್ಲಿ ಏರು ಪೇರಾದರೆ, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಂಡು ಬರಲು ಶುರುವಾ ಗುತ್ತದೆ. ಹೀಗೆ ಒಂದಲ್ಲ ಒಂದು ರೀತಿಯಲ್ಲಿ, ನಮ್ಮ ದೇಹದ ಒಳಭಾಗದಲ್ಲಿ ಕಂಡುಬರುವ ಬದಲಾವಣೆಗಳು ನಮಗೆ ತಿಳಿಯುತ್ತಾ ಹೋಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ, ದೇಹದಲ್ಲಿ ಕ್ಯಾನ್ಸರ್ ಸಂಬಂಧಿತ ರೋಗ ಲಕ್ಷಣಗಳು ಕಂಡು ಬಂದರೆ, ಏನೆಲ್ಲಾ ಸೂಚನೆ ಗಳು ಕಂಡು ಬರುತ್ತದೆ ಎನ್ನುವುದರ ಬಗ್ಗೆ ಮಾಹಿತಿ ನೋಡೋಣ.. ಗಂಟುಗಳು ಕಂಡು ಬರುವುದು ಎಲ್ಲಿಯಾದರೂ ಗಂಟುಗಳು ಕಂಡು ಬರುವುದು, ಚೆನ್ನಾ ಗಿಯೇ ಇದ್ದ ನಮಗೆ ಇದಕ್ಕಿದ್ದಂತೆ ದೇಹದ ಯಾವುದೇ ಭಾಗದಲ್ಲಿ ಹೊಸದಾಗಿ ಗಂಟುಗಳ ತರಹ ಚರ್ಮ ಕಂಡು ಬಂದರೆ ಮತ್ತು ಮೂರರಿಂದ ನಾಲ್ಕು…