ದ್ರಾಕ್ಷಿ ಹಣ್ಣುಗಳಲ್ಲಿ ಉತ್ಕರ್ಷಣ ನಿರೋಧಕಗಳು ಹೇರಳವಾಗಿದೆ. ಈ ಉತ್ಕರ್ಷಣ ನಿರೋಧಕಗಳು ಸ್ವತಂತ್ರ ರಾಡಿಕಲ್ ಎಂದು ಕರೆಯಲ್ಪಡುವ ಅಪಾಯಕಾರಿ ರಾಸಾಯನಿಕಗಳಿಂದ ದೇಹವನ್ನು ರಕ್ಷಿಸುವ ಮೂಲಕ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. https://ainlivenews.com/lsg-has-a-smile-of-victory-against-punjab/ ಪ್ರತಿದಿನ ದ್ರಾಕ್ಷಿ ಹಣ್ಣುಗಳನ್ನು ತಿನ್ನುವುದು ತೂಕ ಹೆಚ್ಚಾಗುವುದನ್ನು ತಡೆಯಲು ಸಹಾಯ ಮಾಡುತ್ತದೆ. ದ್ರಾಕ್ಷಿಯಲ್ಲಿನ ಹೆಚ್ಚಿನ ನೀರಿನ ಅಂಶವು ಬೇಗ ಹೊಟ್ಟೆ ತುಂಬಿದ ಭಾವನೆಯನ್ನು ಉಂಟುಮಾಡುತ್ತದೆ. ಇದು ತೂಕವನ್ನು ಕಡಿಮೆ ಮಾಡಲು ಮುಖ್ಯ ಕಾರಣವಾಗಿದೆ ದ್ರಾಕ್ಷಿಯಲ್ಲಿರುವ ಫೈಬರ್ ಜನರಿಗೆ ಪೂರ್ಣತೆಯನ್ನು ಅನುಭವಿಸಲು ಸಹಾಯ ಮಾಡುತ್ತದೆ. ಇತರ ಹಣ್ಣುಗಳಿಗೆ ಹೋಲಿಸಿದರೆ ದ್ರಾಕ್ಷಿಯಲ್ಲಿ ಕಡಿಮೆ ಕ್ಯಾಲೋರಿ ಇದೆ. ಹಾರ್ವರ್ಡ್ ಹೆಲ್ತ್ ಲೆಟರ್ ಪ್ರಕಾರ, ಹಸಿರು ದ್ರಾಕ್ಷಿಗಿಂತ ಕಪ್ಪು ದ್ರಾಕ್ಷಿಯನ್ನು ತಿನ್ನುವುದು ಉತ್ತಮ. ಏಕೆಂದರೆ ಅವುಗಳ ಚರ್ಮವು ರೆಸ್ವೆರಾಟ್ರೊಲ್ ಅನ್ನು ಹೊಂದಿರುತ್ತದೆ. ಇದು ಪ್ರಬಲವಾದ ಉತ್ಕರ್ಷಣ ನಿರೋಧಕವಾಗಿದ್ದು ಅದು ತೂಕ ಇಳಿಸಲು ಸಹಾಯ ಮಾಡುತ್ತದೆ. ದ್ರಾಕ್ಷಿಹಣ್ಣನ್ನು ತಿನ್ನುವುದರಿಂದ ಆಗುವ 5 ಪ್ರಯೋಜನಗಳ ಪಟ್ಟಿ ಇಲ್ಲಿದೆ. ದ್ರಾಕ್ಷಿಯಲ್ಲಿನ ಹೆಚ್ಚಿನ ವಿಟಮಿನ್ ಸಿ ಸಾಂದ್ರತೆಯು…
Author: AIN Author
ಶನಿವಾರ ನಡೆದ IPL ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಖನೌ ಸೂಪರ್ ಜಯಂಟ್ಸ್ ತಂಡ 21 ರನ್ಗಳ ಗೆಲುವು ಪಡೆದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಮಾಡಿದ್ದ ಲಖನೌ ಸೂಪರ್ ಜಯಂಟ್ಸ್ ತಂಡ ತನ್ನ ಪಾಲಿನ 20 ಓವರ್ಗಳಿಗೆ 8 ವಿಕೆಟ್ಗಳ ನಷ್ಟಕ್ಕೆ 199 ರನ್ ಗಳಿಸಿತ್ತು. ಬಳಿಕ 200 ರನ್ಗಳ ಬೃಹತ್ ಗುರಿ ಹಿಂಬಾಲಿಸಿದ್ದ ಪಂಜಾಬ್ ಕಿಂಗ್ಸ್, ಶಿಖರ್ ಧವನ್ ಅವರ ಅರ್ಧಶತಕದ ಹೊರತಾಗಿಯೂ 5 ವಿಕೆಟ್ಗಳ ನಷ್ಟಕ್ಕೆ 178 ರನ್ಗಳಿಗೆ ಸೀಮಿತವಾಯಿತು. ಆ ಮೂಲಕ 21 ರನ್ಗಳ ಸೋಲು ಅನುಭವಿಸಿತು. https://ainlivenews.com/strict-action-for-fans-who-abuse-hardik-on-the-field/ 200 ರನ್ ಗಳ ಗುರಿಯೊಂದಿಗೆ ಕಣಕ್ಕೆ ಇಳಿದ ಪಂಜಾಬ್ ಕಿಂಗ್ಸ್ ತಂಡಕ್ಕೆ ಆರಂಭಿಕರಾದ ಶಿಖರ್ ಧವನ್ (50 ಎಸೆತಗಳಲ್ಲಿ 70 ರನ್) ಮತ್ತು ಜಾನಿ ಬೈರ್ಸ್ಟೋವ್ (29 ಎಸೆತಗಳಲ್ಲಿ 42 ರನ್) ಉತ್ತಮ ಆರಂಭ ನೀಡಿದ್ದರು. 11.3 ಓವರ್ಗಳಲ್ಲಿ 102 ರನ್ಗಳ ಜೊತೆಯಾಟ ದಾಖಲಾಗಿತ್ತು. ಇದರೊಂದಿಗೆ ಪಂಜಾಬ್ ಸುಲಭವಾಗಿ ಗೆಲುವು ಸಾಧಿಸುವಂತಿತ್ತು. ಆದರೆ ಈ…
ಕ್ರೀಡಾಂಗಣದಲ್ಲಿ ಹಾರ್ದಿಕ್ರನ್ನು ನಿಂದಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಂಸಿಎ ಖಡಕ್ ಎಚ್ಚರಿಕೆ ನೀಡಿದೆ. ರೋಹಿತ್ರಿಂದ ನಾಯಕತ್ವ ಕಿತ್ತುಕೊಂಡರು ಎಂಬ ವಿಚಾರದಲ್ಲಿ ನಿಂದನೆಗೆ ಒಳಗಾಗಿದ್ದ ಪಾಂಡ್ಯ ಆ ಬಳಿಕ ತಂಡದ ಸತತ ಸೋಲಿನೊಂದಿಗೆ ಟ್ರೋಲಿಗರಿಗೆ ಆಹಾರವಾಗಿದ್ದರು. https://ainlivenews.com/suralkar-vikas-kishore-appointed-as-the-new-commissioner-of-information-department/ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಆಡಿದ ಎರಡೂ ಪಂದ್ಯಗಳನ್ನು ಸೋತಿದೆ. ಈ ವೇಳೆ ಹಾರ್ದಿಕ್ ಪಾಂಡ್ಯರ ನಾಯಕತ್ವದ ಮೇಲೆ ಸಾಕಷ್ಟು ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಅಲ್ಲದೆ ಪಂದ್ಯ ನೋಡಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳು ಹಾರ್ದಿಕ್ರನ್ನು ಮನಬಂದಂತೆ ನಿಂದಿಸುತ್ತಿದ್ದಾರೆ. ಅದರ ವಿಡಿಯೋಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದವು. ಇದೀಗ ಕ್ರೀಡಾಂಗಣದಲ್ಲಿ ಹಾರ್ದಿಕ್ರನ್ನು ನಿಂದಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ. ವಾಸ್ತವವಾಗಿ ಮುಂಬೈ ಇಂಡಿಯನ್ಸ್ ತನ್ನ ತವರು ನೆಲವಾದ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ಉಪಸ್ಥಿತರಿರುವ ಅಭಿಮಾನಿಗಳು ಹಾರ್ದಿಕ್ರನ್ನು ನಿಂದಿಸುವ ಕೆಲಸವನ್ನು ಮಾಡಿದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು…
ಬೆಂಗಳೂರು:- ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸುರಳ್ಕರ್ ವಿಕಾಸ್ ಕಿಶೋರ್ ನೇಮಕ ಮಾಡಲಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅವರ ಸ್ಥಾನಕ್ಕೆ ಇದೀಗ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ತರಲಾಗಿದೆ. https://ainlivenews.com/shock-for-gold-lovers-the-price-of-gold-does-not-decrease/ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಶನಿವಾರ ಸಂಜೆ ಅಧಿಕಾರ ಹಸ್ತಾಂತರಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ಸರ್ಕಾರ ಶನಿವಾರ ಸಂಜೆ ನೇಮಿಸಿದ್ದು, ನೂತನ ಆಯುಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುದ್ದೆಗೆ ಜೊತೆಗ ಬಿಬಿಎಂಪಿ ವಿಶೇಷ ಆಯುಕ್ತರ ಸಮವರ್ತಿತ ಹುದ್ದೆಯಲ್ಲಿಯೂ ಮುಂದುವರಿಯಲಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುವುದರ ಮೂಲಕ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರು…
ಚಿನ್ನ ಈ ವಾರದ ಕೊನೆಯಲ್ಲಿ ಅದ್ಭುತ ಬೇಡಿಕೆ ಪಡೆದಿದೆ. ಪರಿಣಾಮವಾಗಿ ಬೆಲೆ ಗಣನೀಯವಾಗಿ ಹೆಚ್ಚಾಗಿದೆ. ಈ ವಾರ ಒಂದು ಗ್ರಾಮ್ ಚಿನ್ನದ ಬೆಲೆ 200 ರುಪಾಯಿಗೂ ಹೆಚ್ಚು ಏರಿರುವುದು ಗಮನಾರ್ಹ. ಅದರಲ್ಲೂ ವಾರಾಂತ್ಯದಲ್ಲಿ ಬರೋಬ್ಬರಿ 130 ರೂಗಳಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಕಳೆದ ಹತ್ತು ದಿನದಲ್ಲಿ ಒಟ್ಟಾರೆ ಒಂದು ಗ್ರಾಮ್ಗೆ 30 ಪೈಸೆ ಮಾತ್ರವೇ ಏರಿರುವುದು. ಆ ಮಟ್ಟಿಗೆ ಬೆಳ್ಳಿ ಹೆಚ್ಚು ಬೇಡಿಕೆ ಪಡೆದಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 68,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,780 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,580 ರುಪಾಯಿಯಲ್ಲಿ ಇದೆ. https://ainlivenews.com/information-and-communication-department-commissioner-hemant-nimbalkar-transferred/ ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 31ಕ್ಕೆ) 22 ಕ್ಯಾರಟ್ನ 10 ಗ್ರಾಂ…
ನವೋದಯ ವಿದ್ಯಾಲಯ ಸಮಿತಿಯಲ್ಲಿ ಬೋದಕೇತರ ಹುದ್ದೆಗಳ ಭರ್ಜರಿ ನೇಮಕಾತಿಗೆ 1377 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನವೋದಯ ವಿದ್ಯಾಲಯ ಸಮಿತಿಯು , ಭಾರತದಾದ್ಯಂತ ನವೋದಯ ಶಾಲೆಗಳಲ್ಲಿ ಖಾಲಿ ಇರುವ ಬೋದಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಅರ್ಜಿ ಹೇಗೆ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ವಿವರಿಸಲಾಗಿದೆ. ನೇಮಕಾತಿವಿವರ ಹುದ್ದೆಗಳ ಹೆಸರು: ಬೋದಕೇತರ ಒಟ್ಟು ಖಾಲಿ ಹುದ್ದೆಗಳು: 1377 ಹುದ್ದೆಗಳು ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ ಮೂಲವೇತನವನ್ನು ನೀಡಲಾಗುತ್ತದೆ. ಇದರ ಜೊತೆಗೆ ಡಿಎ/ HRA ಮುಂತಾದ ಸೌಲಭ್ಯಗಳು ದೊರೆಯುತ್ತವೆ. ಶೈಕ್ಷಣಿಕಅರ್ಹತೆಗಳು/ Educational Qualification: ಹುದ್ದೆಗಳಹೆಸರು ವಿದ್ಯಾರ್ಹತೆ ಸ್ಟಾಫ್ ನರ್ಸ್ BSc (Relevant field) ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ Any Degree ಆಡಿಯೋ ಅಸಿಸ್ಟೆಂಟ್ BCom ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ PG (Relevant Subject) ಲೀಗಲ್ ಅಸಿಸ್ಟೆಂಟ್ Degree (Law) ಸ್ಟೆನೋಗ್ರಾಫರ್ PUC and Steno course ಕಂಪ್ಯೂಟರ್ ಆಪರೇಟರ್ BE/ BTECH/ BCA/ BSc…
ಸೂರ್ಯೋದಯ: 06:14, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ , ಕೃಷ್ಣ ಪಕ್ಷ, ಉತ್ತರಾಯಣಂ, ಶಿಶಿರ ಋತು, ತಿಥಿ: ಷಷ್ಟಿ ನಕ್ಷತ್ರ: ಜೇಷ್ಠ ರಾಹು ಕಾಲ: 04:30 ನಿಂದ 06:00 ತನಕ ಯಮಗಂಡ: 12:00 ನಿಂದ 01:30 ತನಕ ಗುಳಿಕ ಕಾಲ: 03:00 ನಿಂದ 04:30 ತನಕ ಅಮೃತಕಾಲ: ಮ.1:49 ನಿಂದ ಮ.3:28 ತನಕ ಅಭಿಜಿತ್ ಮುಹುರ್ತ: ಬೆ.11:55 ನಿಂದ ಮ.12:44 ತನಕ ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. ಸೋಮಶೇಖರ್ ಗುರೂಜಿB.Sc…
ಬೆಂಗಳೂರು:- ಏ.2ರಂದು ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು, ರಾಜ್ಯ ಬಿಜೆಪಿಯಲ್ಲಿನ ಬಂಡಾಯ ಶಮನಗೊಳಿಸಲು ಚಾಣಕ್ಯ ಎಂಟ್ರಿ ಕೊಟ್ಟಿದ್ದಾರೆ. ಏಪ್ರಿಲ್ 2ರಂದು ಬೆಳಗ್ಗೆ 9 ಗಂಟೆಗೆ ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಯಲಿದೆ. ಬಳಿಕ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಬೆಂಗಳೂರು ಉತ್ತರ, ದಕ್ಷಿಣ, ಕೇಂದ್ರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ಸಾಧ್ಯತೆಯಿದೆ ಎಂದು ಬಿಜೆಪಿ ಹೇಳಿಕೊಂಡಿದೆ. https://ainlivenews.com/information-and-communication-department-commissioner-hemant-nimbalkar-transferred/ ಸಮಾವೇಶದ ಬಳಿಕ ಮಧ್ಯಾಹ್ನ 2 ಗಂಟೆಯಿಂದ 4 ಲೋಕಸಭಾ ಕ್ಷೇತ್ರಗಳ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಚನ್ನಪಟ್ಟಣಕ್ಕೆ ತೆರಳಲಿರೋ ಅಮಿತ್ ಶಾ, ಸಂಜೆ 6 ಗಂಟೆಗೆ ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ ಪರವಾಗಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಅಲ್ಲಿಯೇ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇನ್ನೂ ರಾಜ್ಯಕ್ಕೆ…
ಬೆಂಗಳೂರು:- ಬಿಜೆಪಿ ದೂರಿನ ಬೆನ್ನಲ್ಲೇ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಮಾಡಲಾಗಿದೆ. ಅದರಂತೆ, ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ವಾರ್ತಾ ಇಲಾಖೆ ಆಯುಕ್ತರನ್ನಾಗಿ ನೇಮಿಸಲಾಗಿದೆ. https://ainlivenews.com/janata-party-workers-convention/#google_vignette ತಮ್ಮ ಕಚೇರಿಯಲ್ಲಿ ಪತ್ನಿ ಅಂಜಲಿ ನಿಂಬಾಳ್ಕರ್ ಪರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೇಮಂತ್ ನಿಂಬಾಳ್ಕರ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದರ ಬೆನ್ನಲ್ಲೇ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಚೇರಿ ಉಪಯೋಗಿಸಿಕೊಂಡು ಕಾಂಗ್ರೆಸ್ಗೆ ಮತ ನೀಡುವಂತೆ ಹೇಳುತ್ತಿದ್ದಾರಂತೆ. ಹೀಗಾಗಿ ಹೇಮಂತ್ ನಿಂಬಾಳ್ಕರ್ ಕರ್ನಾಟಕದಲ್ಲಿ ಇದ್ದರೆ ಮತ್ತೆ ಪ್ರಭಾವ ಬೀರಬಹುದು ಎಂದು ಇದೀಗ ವರ್ಗಾವಣೆ ಮಾಡಲಾಗಿದೆ.
ಹುಬ್ಬಳ್ಳಿ; ಕಲಘಟಗಿ ತಾಲೂಕಿನ ಹಿರೇ ಹೊನ್ನಳ್ಳಿ ಹಾಗೂ ದೇವಿ ಕೊಪ್ಪ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಇಂದು ಕಾರ್ಯಕರ್ತರ ಸಮಾವೇಶ ನಡೆಯಿತು. ಪ್ರಥಮವಾಗಿ ಈ ಎರಡು ಕ್ಷೇತ್ರ ಅತ್ಯಂತ ಹೆಚ್ಚು ಮತಗಳ ಅಂತರದಿಂದ ಗೆಲುವು ತಂದು ಕೊಟ್ಟಿದೆ. ಅದಕ್ಕೋಸ್ಕರ ಈ ಎರಡು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ಕೈಗೊಂಡು ಮಾನ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಮಾತನಾಡಿದರು. https://ainlivenews.com/confusion-during-elections-is-natural-among-the-winning-parties/ ಮತ್ತೊಮ್ಮೆ ಮೋದಿ ಸರ್ಕಾರ ಹತ್ತು ವರ್ಷ ಅವಧಿಯಲ್ಲಿ ಒಂದೇ ಒಂದು ನಯಾ ಪೈಸ ಬ್ರಷ್ಟಾಚಾರ ಇಲ್ಲದ ಸರ್ಕಾರ ಭ್ರಷ್ಟಾಚಾರದಿಂದ ಇಡಿ ದೇಶವನೆ ಮುಕ್ತವನ್ನಾಗಿ ಮಾಡುತ್ತೇವೆ. ಹಾಗೂ 10 ವರ್ಷ ಹಿಂದೆ ನಮ್ಮ ದೇಶ ಆರ್ಥಿಕ ವ್ಯವಸ್ಥೆಯಲ್ಲಿ ಅತ್ಯಂತ ಗಂಭೀರವಾಗಿತ್ತು. ಇಂದು ಭಾರತ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಹಾಗೂ ಮೊದಲಿನ 5 ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದಂತ ಅವ್ಯವಸ್ಥೆಯನ್ನು ಸರಿ ಮಾಡಲು ಹೋಯಿತು. ಆಯುಷ್ಮಾನ್ ಭಾರತ್ ಕಾರ್ಡ್ ಬಡವರಿಗೆ ಆರೋಗ್ಯ ಸೇವೆ ಒದಗಿಸಲು 5 ಲಕ್ಷ ಸಂಪೂರ್ಣ ವೆಚ್ಚ…