ಧಾರವಾಡ:- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧದ ದಿಂಗಾಲೇಶ್ವರ ಶ್ರೀ ಹೇಳಿಕೆ ವೈಯಕ್ತಿಕ, ತಮಗೂ ಅದಕ್ಕೂ ಸಂಬಂಧವಿಲ್ಲ ಎಂದು ಮುರುಘಾಮಠ ಶ್ರೀ ಹೇಳಿದ್ದಾರೆ. https://ainlivenews.com/when-to-eat-kiwi-fruit-do-you-know-what-time-is-good-to-eat/ ಈ ಸಂಬಂಧ ಮಾತನಾಡಿದ ಅವರು,ಪ್ರಲ್ಹಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿ ಹೇಳಿಕೆಗೂ, ಧಾರವಾಡ ಮುರುಘಾಮಠಕ್ಕೂ ಸಂಬಂಧವಿಲ್ಲ. ನಮ್ಮ ಮಠ ಎಂದಿಗೂ ರಾಜಕೀಯ ವಿಚಾರದಲ್ಲಿ ಭಾಗವಹಿಸುವುದಿಲ್ಲ. ಸದ್ಯ ಎದ್ದಿರುವ ವಿವಾದಕ್ಕೂ, ತಮಗೂ ಸಂಬಂಧವಿಲ್ಲವೆಂದು ಹೇಳಿದ್ದಾರೆ. ನಿನ್ನೆ ದಿಂಗಾಲೇಶ್ವರ ಸ್ವಾಮೀಜಿ ಪ್ರಲ್ಹಾದ್ ಜೋಶಿ ವಿರುದ್ಧ ಹೇಳಿಕೆ ನೀಡುವಾಗ ಮಲ್ಲಿಕಾರ್ಜುನ ಸ್ವಾಮೀಜಿ ಜೊತೆಗಿದ್ದರು. ಇದೀಗ ಅವರೊಂದಿಗಿದ್ದ ಸ್ವಾಮೀಜಿಗಳು ಉಲ್ಟಾ ಹೊಡೆದಿದ್ದಾರೆ. ಆ ಮೂಲಕ ದಿಂಗಾಲೇಶ್ವರ ಪರವಿದ್ದ ಸ್ವಾಮೀಜಿಗಳಲ್ಲಿಯೇ ಬಿರುಕು ಉಂಟಾಯ್ತಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.
Author: AIN Author
ಕಿವಿ ಹಣ್ಣು ತಿನ್ನುವುದರಿಂದ ದೃಷ್ಟಿ ಸುಧಾರಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ದುರ್ಬಲಗೊಂಡ ರೋಗನಿರೋಧಕ ಶಕ್ತಿ ಹೊಂದಿರುವ ಜನರಲ್ಲಿ ಋತುಮಾನದ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತವೆ. ನಂತರ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕಿವಿ ಹಣ್ಣು ತಿನ್ನಿರಿ. ಇದರಲ್ಲಿರುವ ವಿಟಮಿನ್ ಸಿ ನಿಮ್ಮ ದುರ್ಬಲಗೊಂಡ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕಿವಿಯ ನಿಯಮಿತ ಸೇವನೆಯು ಮುಖದ ಸುಕ್ಕುಗಳನ್ನು ಕಡಿಮೆ ಮಾಡಲು ಮತ್ತು ಚರ್ಮವನ್ನು ಪುನರ್ಯೌವನಗೊಳಿಸಲು ಸಹಾಯ ಮಾಡುತ್ತದೆ. ಜ್ವರದಿಂದ ಬಳಲುತ್ತಿರುವವರಿಗೆ ಕಿವಿ ಹಣ್ಣು ತುಂಬಾ ಉಪಯುಕ್ತವಾಗಿದೆ. ನೀವು ಡೆಂಗ್ಯೂನಿಂದ ಬಳಲುತ್ತಿದ್ದರೆ ಕಿವಿ ತಿನ್ನಿರಿ. ವಾಸ್ತವವಾಗಿ, ಡೆಂಗ್ಯೂನಲ್ಲಿ ಪ್ಲೇಟ್ಲೆಟ್ಗಳು ಬೇಗನೆ ಕಡಿಮೆಯಾಗುತ್ತವೆ. ಕಿವಿ ಈ ಪ್ಲೇಟ್ಲೆಟ್ಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮೇಲಾಗಿ ಕೀವಿಹಣ್ಣನ್ನು ಸೇವಿಸುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ಇದರಲ್ಲಿರುವ ಫೈಬರ್ ಮತ್ತು ಪೊಟ್ಯಾಸಿಯಮ್ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ. ಅಪಧಮನಿಗಳನ್ನು ಬಲಪಡಿಸಲು ಕೆಲಸ ಮಾಡುತ್ತದೆ. ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವವರು ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಕಿವಿಯನ್ನು ತಿನ್ನಬೇಕು. ನೀವು ಮಲಬದ್ಧತೆಯಿಂದ ಬಳಲುತ್ತಿದ್ದರೆ, ಪ್ರತಿದಿನ 2-3…
ನವದೆಹಲಿ:-ರಾಷ್ಟ್ರದ ಬಗೆಗಿನ ಯಾವುದೇ ಬದ್ಧತೆ ಕಾಂಗ್ರೆಸ್ ಗೆ ಇಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇತರರನ್ನು ಬಲವಂತ ಮಾಡುವುದು ಮತ್ತು ಬೆದರಿಸುವುದು ಹಳೆಯ ಕಾಂಗ್ರೆಸ್ ಸಂಸ್ಕೃತಿ. ಐದು ದಶಕಗಳ ಹಿಂದೆ ಅವರೇ ‘ಬದ್ಧ ನ್ಯಾಯಾಂಗ’ಕ್ಕೆ ಕರೆ ನೀಡಿದ್ದರು. ಅವರು ನಾಚಿಕೆಯಿಲ್ಲದೆ ತಮ್ಮ ಸ್ವಾರ್ಥಕ್ಕಾಗಿ ಇತರರಿಂದ ಬದ್ಧತೆಯನ್ನು ಬಯಸುತ್ತಾರೆ. ಆದರೆ ರಾಷ್ಟ್ರದ ಬಗೆಗಿನ ಯಾವುದೇ ಬದ್ಧತೆಯನ್ನು ಅವರು ತೋರಿಸುವುದಿಲ್ಲ .ಅಚ್ಚರಿಯೇನಿಲ್ಲ, 140 ಕೋಟಿ ಭಾರತೀಯರು ಅವರನ್ನು ತಿರಸ್ಕರಿಸುತ್ತಿದ್ದಾರೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಮೋದಿ ಬರೆದಿದ್ದಾರೆ. https://ainlivenews.com/ipl-match-tomorrow-in-bengaluru-parking-is-prohibited-on-these-roads/ ಹರೀಶ್ ಸಾಳ್ವೆ ಮತ್ತು ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಸೇರಿದಂತೆ 600 ಕ್ಕೂ ಹೆಚ್ಚು ವಕೀಲರು, ಪಟ್ಟಭದ್ರ ಹಿತಾಸಕ್ತಿ ಗುಂಪು” ವಿಶೇಷವಾಗಿ ರಾಜಕಾರಣಿಗಳು ಒಳಗೊಂಡಿರುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ನ್ಯಾಯಾಂಗದ ಮೇಲೆ ಒತ್ತಡ ಹೇರಲು ಮತ್ತು ನ್ಯಾಯಾಲಯಗಳ ಮಾನಹಾನಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದ ನಂತರ ಮೋದಿ…
ಬೆಂಗಳೂರು:- ನಗರದಲ್ಲಿ ನಾಳೆ IPL ಪಂದ್ಯ ನಡೆಯಲಿದ್ದು, ಕೆಲವೆಡೆ ವಾಹನ ನಿಲುಗಡೆ ನಿಷೇಧ ಮಾಡಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಾಳೆ ಪಂದ್ಯ ನಡೆಯಲಿದ್ದು, ಸಾಕಷ್ಟು ಜನರು ಸೇರುವ ಹಿನ್ನಲೆ ಮಧ್ಯಾಹ್ನ 3 ಘಂಟೆ ಯಿಂದ ರಾತ್ರಿ 11 ವರೆಗೆ ಸುಗಮ ಸಂಚಾರಕ್ಕಾಗಿ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಕೆಲ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧವಿದ್ದರೆ, ಬೇರೆಡೆ ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳನ್ನು ನಿಗದಿ ಮಾಡಲಾಗಿದೆ. https://ainlivenews.com/compli-police-succeeded-in-capturing-the-house-thieves/ ಈ ರಸ್ತೆಗಳಲ್ಲಿ ವಾಹನಗಳ ನಿಲುಗಡೆ ನಿಷೇಧ ಕ್ವೀನ್ಸ್ ರಸ್ತೆ, ಎಂಜಿ ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ ವಿಶ್ವಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು ಹೀಗಿವೆ ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್…
ಕಂಪ್ಲಿ.ಮಾ.28:ಕಂಪ್ಲಿ ಪಟ್ಟಣದ ವಿನಾಯಕ ನಗರ ಹಾಗೂ ತಾಲೂಕಿನ ಸಣಾಪುರ ಗ್ರಾಮದಲ್ಲಿ ರಾತ್ರಿ ವೇಳೆ ಮನೆಗಳ್ಳತನ ಮಾಡಿದಂತಹ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಕಂಪ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಟ್ಟಣದ ವಿನಾಯಕ ನಗರದಲ್ಲಿ ಹಾಗೂ ಸಣಾಪುರ ಗ್ರಾಮದಲ್ಲಿ ರಾತ್ರಿ ವೇಳೆ ಬೀಗ ಮುರಿದು ಮನೆಗಳ್ಳತನ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ 5 ತೊಲೆ ಬಂಗಾರದ ಅಭರಣಗಳು, 18 ತೊಲೆ ಬೆಳ್ಳಿ ಅಭರಣಗಳು ಹಾಗೂ ನಗದು ಹಣ ರೂ.30ಸಾವಿರ ಮತ್ತು ಮನೆಗಳ್ಳತನ ಮಾಡಲು ಬಳಸುತ್ತಿದ್ದ ಒಂದು ಬಜಾಜ್ ಕಂಪನಿಯ ಡಿಸ್ಕವರಿ ಮೊಟರ್ ಸೈಕಲ್ ದ್ವಿಚಕ್ರ ವಾಹನ ಈ ಎಲ್ಲಾ ಸೇರಿ ಒಟ್ಟು 4,50,000ಬೆಲೆ ಬಾಳುವ ಬಂಗಾರ, ಬೆಳ್ಳಿ, ಮತ್ತು ಮೋಟಾರ್ ಸೈಕಲ್ ಅನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು ರವರು ಮತ್ತು ಎಎಸ್ ಪಿ ಗಳಾದ ರವಿಕುಮಾರ,ನವೀನ್ ಕುಮಾರ ಹಾಗೂ ತೋರಣಗಲ್ ಉಪವಿಭಾಗದ ಡಿವೈಎಸ್ಪಿ ಪ್ರಸಾದ ಗೋಖಲೆ ಮಾರ್ಗದರ್ಶನದಲ್ಲಿ ಪತ್ತೆ ಕಾರ್ಯಕ್ಕಾಗಿ ಕಂಪ್ಲಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಪ್ರಕಾಶ್ ಮಾಳಿ ರವರ…
ಬೆಂಗಳೂರು:- ರಾಮೇಶ್ವರಂ ಕೆಫೆ ಸ್ಪೋಟ ಕೇಸ್ ಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಬ NIA ಅರೆಸ್ಟ್ ಮಾಡಿದೆ. ಮುಜಾಮುಲ್ ಶರೀಫ್ ಎನ್ನುವಾತನನ್ನು ಇಂದು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಈ ಬಗ್ಗೆ ಎನ್ಐಎ ಟ್ವೀಟ್ ಮಾಡಿದ್ದು, ಪ್ರಮುಖ ಆರೋಪಿಯ ಬಂಧನದ ಬಗ್ಗೆ ಖಚಿತಪಡಿಸಿದೆ. https://ainlivenews.com/it-is-certain-that-modi-will-become-the-prime-minister-again-for-pc-gaddigowda/#google_vignette ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್ಐಎ ತಂಡಗಳು ದಾಳಿ ಮಾಡಿದ ನಂತರ ಮುಜಾಮಿಲ್ ಶರೀಫ್ ನನ್ನು ಬಂಧಿಸಲಾಗಿದೆ ಎಂದು ಎನ್ಐ ಟ್ವೀಟ್ನಲ್ಲಿ ತಿಳಿಸಿದೆ. ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್ ಶರೀಫ್ ಕೀ ಕಾಂನ್ಸಪರೇಟರ್ ಆಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಇನ್ನು ಬಂಧನದ ವೇಳೆ ಈತನ ಬಳಿ ಇದ್ದ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್ಐಎ ಮಾಹಿತಿ ನೀಡಿದೆ. ಎನ್ಐಎ ಅಧಿಕಾರಿಗಳು ಕರ್ನಾಟಕ ಸೇರಿದಂತೆ ವಿವಿದೆಡೆ ಬಳಿಕ ಕೀ…
ಬಾಗಲಕೋಟೆ:- ೨೦೨೪ ರ ಲೋಕಸಭೆ ಚುನಾವಣೆಯಲ್ಲಿ ಮತ್ತೋಮ್ಮೆ ಮೋದಿಯವರು ಪ್ರಧಾನಿಯಾಗುವ ಮೂಲಕ ಈ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ, ಬಾಗಲಕೋಟೆ ಲೋಕಸಭೆ ಚುನಾವಣೆ ಸೇರಿದಂತೆ ದೇಶದಲ್ಲಿ ಕಮಲ ಅರಳುವ ಮೂಲಕ ಜಯದ ನಗೆ ಬಿರಲಿದೆ ಎಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಹೇಳಿದರು. https://ainlivenews.com/quarrel-of-brothers-and-relatives-over-installation-of-water-pipe/ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಶ್ರೀ ಮಾರುತೇಶ್ವರನ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ಬಳಿಕ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತು ದ್ದಾರೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಭಿವೃದ್ಧಿಯನ್ನು ಮಾಡುವುದೆ ಮರೆತಿದ್ದರೆ. ಇದರಿಂದ ರಾಜ್ಯವು ಅಭಿವೃದ್ಧಿ ಕಾಣದೆ ಮರಿಚಿಕೆಯಾಗಿದೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನರು ತಕ್ಕ ಪಾಠವನ್ನು ಕಲಿಸುವ ಮೂಲಕ ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಜನರು ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ಹೇಳಿದರು, ಬಿಜೆಪಿಯ ಎಲ್ಲ ಕಾರ್ಯಕರ್ತರು ಒಗ್ಗಟ್ಟಾಗಿ ಪಕ್ಕದ ಗೆಲುವಿಗಾಗಿ ಹಗಲಿರುಳು ದುಡಿಯುವ ಮೂಲಕ ಮೊತ್ತೋಮ್ಮೆ ಮೋದಿಜೀಯವರನ್ನು ಈ ದೇಶದ ಪ್ರಧಾನಿಯನ್ನಾಗಿ…
ಯಾದಗಿರಿ:- ಸಣ್ಣ ವಿಚಾರಕ್ಕೆ ಸಹೋದರ ಸಂಬಂಧಿಗಳ ಮಧ್ಯ ಜಗಳವಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ಜರುಗಿದೆ ನಂದಕುಮಾರ್(21) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಕಾಲೇಜು ಮುಗಿಸಿಕೊಂಡು ಮನೆ ಬಂದಿದ್ದ ಯುವಕ ನಂದಕುಮಾರ್, ಸಹೋದರ ಸಂಬಂಧಿಯಾದ ದೊಡ್ಡಪ್ಪನ ಮಗ ಹಾಗೂ ದೊಡ್ಡಮ್ಮ ಹನುಮಂತಿ ಜೊತೆ ಸಣ್ಣ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದಾನೆ. ಇದರಿಂದ ರೊಚ್ಚಿಗೆದ್ದು ನಂದಕುಮಾರ್ನನ್ನು ಹತ್ಯೆ ಮಾಡಿದ್ದಾರೆ. https://ainlivenews.com/this-is-the-good-news-given-by-pm-modi-huge-increase-in-daily-wages-in-karnataka/ ನಿನ್ನೆ ಬೆಳಗ್ಗೆ ಕೊಲೆ ಮಾಡಿದ ಬಾಲಕ ಮತ್ತು ಆತನ ತಾಯಿ, ಬಾಲಕನ ಅಜ್ಜಿ ರುದ್ರಮ್ಮನ ಜೊತೆ ಕುಡಿಯುವ ನೀರಿನ ಪೈಪ್ ಅಳವಡಿಸುವ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದಾರೆ. ಕಾಲೇಜಿಗೆ ಹೋಗಿದ್ದ ಕೊಲೆ ಆರೋಪಿ ಬಾಲಕನ ಚಿಕ್ಕಪ್ಪನ ಮಗ ನಂದಕುಮಾರ್ ಮನೆಗೆ ಬಂದಿದ್ದಾನೆ. ಮನೆಗೆ ಬಂದ ಕೂಡಲೇ ಅಜ್ಜಿ ರುದ್ರಮ್ಮನ ಜೊತೆ ಜಗಳ ಮಾಡೊಕೊಂಡಿರುವ ಮಾಹಿತಿ ತಿಳಿದಿದೆ. ತಕ್ಷಣ ದೊಡ್ಡಪ್ಪನ ಮನೆಗೆ ಹೋದ ನಂದಕುಮಾರ್, ದೊಡಮ್ಮ ಹಾಗೂ ಮಗನಿಗೆ ಅಜ್ಜಿ ಜೊತೆ ಯಾಕೆ ಜಗಳ ಮಾಡಿಕೊಂಡಿದಿರಾ, ಯಾಕೆ ಹಲ್ಲೆ ಮಾಡಿದಿರಾ ಎಂದು ಕೇಳಿದ್ದಾನೆ. ಇದೇ ವಿಚಾರಕ್ಕೆ…
ಬೆಳಗ್ಗೆ ಎದ್ದ ಕೂಡಲೇ ಪ್ರತಿಯೊಬ್ಬರೂ ಮಾಡುವ ಕೆಲಸವೆಂದರೆ ಮುಖ ತೊಳೆದು ತಿಂಡಿ ತಿನ್ನುವುದು. ಆದರೆ ಕೆಲವರು ಮುಖವನ್ನು ತೊಳೆದು ಸ್ವಚ್ಛವಾಗಿ ಯೋಗ ಮಾಡಲು ಹೋಗ್ತಾರೆ. ಆದರೆ ಬಾಯಿಯನ್ನು ಸ್ವಚ್ಛ ಪಡಿಸದೆ ಬಿಸಿನೀರನ್ನು ಒಂದು ಲೋಟ ಪೂರ್ತಿಯಾಗಿ ಕುಡಿಯುವುದರಿಂದ ಅನಾರೋಗ್ಯ ಸಮಸ್ಯೆಗಳಿಗೆ ಗುಡ್ ಬೈ ಹೇಳಬಹುದಾಗಿದೆ. ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರು ಕುಡಿಯುವುದರಿಂದ ದೇಹದಲ್ಲಿರುವಂತಹ ವಿಷ ಜೀವಾಣುಗಳು ದೇಹದಿಂದ ಹೊರ ಹೋಗುತ್ತವೆ https://ainlivenews.com/delhi-bowling-selection-won-the-toss-dc-in-search-of-first-win/ ಬಿಸಿ ನೀರಿನ ಸೇವನೆಯಿಂದ ಆಹಾರವು ಜೀರ್ಣವಾಗಲು ಸಹಾಯ ಮಾಡುತ್ತದೆ. ಬಿಸಿ ನೀರನ್ನು ಕುಡಿಯುತ್ತಾ ಬಂದರೆ ಇದು ರಕ್ತವನ್ನು ಶುದ್ಧಿಕರಿಸಿದ್ಧಿಕರಿಸಿ ಆರೋಗ್ಯವನ್ನು ಕಾಪಾಡುತ್ತದೆ. ಬಿಸಿ ನೀರು ಕುಡಿಯುವ ಅಭ್ಯಾಸವನ್ನು ಬೆಳೆಸಿಕೊಂಡರೆ ಮಲಬದ್ಧತೆ ಸಮಸ್ಯೆಯು ನಿವಾರಣೆಯಾಗುತ್ತದೆ. ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರು ಕುಡಿಯುವ ಅಭ್ಯಾಸವು ದೇಹದಲ್ಲಿರುವ ಬೇಡದ ಕೊಬ್ಬನ್ನು ಕರಗಿಸುತ್ತದೆ. ಅದಲ್ಲದೇ ತೂಕ ನಷ್ಟಕ್ಕೂ ಸಹಕಾರಿಯಾಗಿದೆ. ಬಿಸಿ ನೀರು ದೇಹದ ಉಷ್ಣತೆಯನ್ನು ಹೆಚ್ಚಿಸಿ ಚಯಾಪಚಯ ಕ್ರಿಯೆಗಳನ್ನು ಸುಧಾರಿಸುತ್ತದೆ. ಅಷ್ಟೇ ಅಲ್ಲದೇ, ಮೂತ್ರಪಿಂಡಗಳು ಚೆನ್ನಾಗಿ ಕೆಲಸ ಮಾಡಲು ಸಹಾಯಕವಾಗಿದೆ.…
ರಾಜಸ್ಥಾನ ರಾಯಲ್ಸ್ನ ತವರು ಮೈದಾನವಾದ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಇಂದು ಡಿಸಿ v/s ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ. https://ainlivenews.com/jagdish-shettar-should-be-ashamed-minister-hebbalkar/ ರಾಜಸ್ಥಾನ್ ರಾಯಲ್ಸ್ ತನ್ನ ಮೊದಲ ಪಂದ್ಯವನ್ನು ಗೆದ್ದುಕೊಂಡಿತು. ಹೀಗಾಗಿ ಡೆಲ್ಲಿ ತಂಡ ತನ್ನ ಮೊದಲ ಗೆಲುವಿನ ಹುಡುಕಾಟದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ ತನ್ನ ಗೆಲುವಿನ ಲಯ ಮುಂದುವರೆಸಲು ಎದುರು ನೋಡುತ್ತಿದೆ. ಟಾಸ್ ಗೆದ್ದ ಡೆಲ್ಲಿ ನಾಯಕ ರಿಷಬ್ ಪಂತ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಐಪಿಎಲ್ನಲ್ಲಿ ಇದುವರೆಗೆ ರಾಜಸ್ಥಾನ ಮತ್ತು ದೆಹಲಿ ನಡುವೆ ಒಟ್ಟು 27 ಪಂದ್ಯಗಳು ನಡೆದಿದ್ದು, ಇದರಲ್ಲಿ ರಾಜಸ್ಥಾನ್ ರಾಯಲ್ಸ್ 14 ಪಂದ್ಯಗಳನ್ನು ಗೆದ್ದಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 13 ಪಂದ್ಯಗಳನ್ನು ಗೆದ್ದಿದೆ.