ರಾತ್ರಿಯಲ್ಲಿ ಪದೇ ಪದೇ ಮೂತ್ರ ವಿಸರ್ಜನೆ, ಪಾದಗಳು ಉರಿ, ತಲೆನೋವು, ನಿದ್ರಾಹೀನತೆ, ಕೈಕಾಲು ನೋವು ಇವೆಲ್ಲವೂ ರಕ್ತದಲ್ಲಿನ ಸಕ್ಕರೆ ಅಂಶದ ಲಕ್ಷಣಗಳಾಗಿವೆ. ಹೀಗಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅದೇನೆಂಬುದನ್ನು ಇಲ್ಲಿ ತಿಳಿಯೋಣ.. ರಾತ್ರಿ ಊಟದ ನಂತರ ಕೆಲವು ದೈಹಿಕ ಚಟುವಟಿಕೆಯನ್ನು ಮಾಡುವುದರಿಂದ ನಿಮ್ಮ ದೇಹದಲ್ಲಿ ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸುತ್ತದೆ. ಇದು ಬೆಳಗಿನ ಸಮಯದಲ್ಲಿ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಬಹಳ ಸುಲಭವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ. https://ainlivenews.com/ladies-take-note-if-this-document-is-filed-you-will-get-paid/ ಯೋಗಾಭ್ಯಾಸದಿಂದ ಮುಂಜಾನೆ ಮಧುಮೇಹವನ್ನು ಸುಲಭವಾಗಿ ನಿಯಂತ್ರಿಸಬಹುದು. ರಾತ್ರಿ ಊಟದ ನಂತರ ವಜ್ರಾಸನದಂತಹ ಯೋಗ ವ್ಯಾಯಾಮಗಳನ್ನು ಅಭ್ಯಾಸ ಮಾಡುವುದರಿಂದ ಮೇದೋಜೀರಕ ಗ್ರಂಥಿಯು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಸಿಹಿತಿಂಡಿಗಳನ್ನು ನಿಷೇಧಿಸಬೇಕು: ಬೇಕರಿ ಸಿಹಿತಿಂಡಿಗಳನ್ನು ತಿನ್ನಬೇಡಿ, ಊಟದ ನಂತರ ಮನೆಯಲ್ಲಿ ತಯಾರಿಸಿದ ಸಿಹಿತಿಂಡಿಗಳನ್ನು ಸಹ ತಿನ್ನಬೇಡಿ. ಏಕೆಂದರೆ ನೀವು ಸೇವಿಸುವ ಆಹಾರದಲ್ಲಿ ಕಾರ್ಬೋಹೈಡ್ರೇಟ್ ಇರುತ್ತದೆ. ಇದಕ್ಕೆ ಹೆಚ್ಚಿನ ಸಿಹಿತಿಂಡಿಗಳನ್ನು ಸೇರಿಸುವುದರಿಂದ ಬೆಳಿಗ್ಗೆ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆ. ಊಟದ ಸಮಯದಲ್ಲಿ ನೀರು…
Author: AIN Author
ಬರದ ನಾಡು ವಿಜಯಪುರ ಜಿಲ್ಲೆಯ ರೈತ ದ್ರಾಕ್ಷಿ ಬೆಳೆಗೆ ಗುಡ್ ಬೈ ಹೇಳಿ, ಕಾಶ್ಮೀರಿ ಸೇಬು ಬೆಳೆದು ಉಳಿದೆಲ್ಲ ರೈತರಿಗೆ ಮಾದರಿಯಾಗಿದ್ದಾರೆ. ತಿಕೋಟಾ ತಾಲ್ಲೂಕಿನ ಸೋಮದೇವರಹಟ್ಟಿ ಗ್ರಾಮದ ರೈತ ಅಮಗೊಂಡ ಗೊಳಸಂಗಿ ಹಾಗೂ ಸೋಮನಿಂಗ ಗೊಳಸಂಗಿ ಅವರು ಕಾಶ್ಮೀರದಲ್ಲಿ ಬೆಳೆಯುವ ಸೇಬು ಹಣ್ಣನ್ನು ಬೆಳೆದು ಗಮನ ಸೆಳೆದಿದ್ದಾರೆ. ತಮ್ಮ 15 ಎಕರೆ ಜಮೀನಿನಲ್ಲಿ ಆರು ಎಕರೆ ಜಮೀನಿನಲ್ಲಿ ದ್ರಾಕ್ಷಿ ಬೆಳೆದಿದ್ದರು. ಅದರಿಂದ ನಿರೀಕ್ಷಿತ ಆದಾಯ ಸಿಕ್ಕಿರಲಿಲ್ಲ. ಹೀಗಾಗಿ, ಕಡಿಮೆ ಖರ್ಚು ಮಾಡಿ ಹೆಚ್ಚು ಆದಾಯ ಬರುವಂತ ಸೇಬು ಬೆಳೆಯುವ ಕೃಷಿಯತ್ತ ಮುಖ ಮಾಡಿ ಯಶಸ್ವಿ ಆಗಿದ್ದಾರೆ. ಎರಡು ವರ್ಷದ ಸೇಬು ಬೇಳೆ ಐದರಿಂದ ಆರು ಅಡಿ ಎತ್ತರ ಬೆಳೆದಿದೆ. ಪ್ರತಿ ಗಿಡದಲ್ಲಿ ಎಂಟರಿಂದ ಹತ್ತು ಕಿಲೋ ಸೇಬು ಹಣ್ಣಿನ ಗೊಂಚಲುಗಳಿವೆ. ಇನ್ನು ಒಂದು ತಿಂಗಳಲ್ಲಿ ಸೇಬು ಮಾರುಕಟ್ಟೆ ಸೇರಲಿವೆ. ಇದರಿಂದ ಲಕ್ಷಾಂತರ ರೂಪಾಯಿ ಆದಾಯ ಬರುವ ನಿರೀಕ್ಷೆ ಇದೆ ಎಂದು ರೈತ ಅಮಗೊಂಡ ಹೇಳಿದ್ದಾರೆ. ದ್ರಾಕ್ಷಿ ಬಿಟ್ಟು ಸೇಬು ಕೃಷಿಯತ್ತ ಒಲವು…
ಈ ಬೇಸಿಗೆಯ ಸಮಯದಲ್ಲಿ ತಾಜಾ ಹಣ್ಣು ಮತ್ತು ಜ್ಯೂಸ್ಗಳನ್ನು ಸೇವನೆ ಮಾಡುವುದರಿಂದ ಗಮನಾರ್ಹವಾದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗೆಯೇ ಖರ್ಬೂಜ ಹಣ್ಣು ಅಥವಾ ಪಾನಕವನ್ನು ಸೇವನೆ ಮಾಡುವುದರಿಂದ ಹಲವು ಪ್ರಯೋಜನಗಳಿವೆ https://ainlivenews.com/what-are-the-benefits-of-eating-cucumber-in-summer-here-are-the-full-details/ ಇತ್ತೀಚೆಗೆ ಚಿಕ್ಕ ವಯಸ್ಸಿನಲ್ಲಿಯೇ ಬಹುತೇಕರು ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಂತವರು ಔಷಧಿಗಳ ಬದಲಾಗಿ ಆಹಾರದ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿರ್ವಹಿಸಿಕೊಳ್ಳಿ. ಔಷಧಿಗಳ ಮೊರೆ ಹೋಗಬೇಡಿ. ಖರ್ಬೂಜ ಹಣ್ಣು ಹೆಚ್ಚಿನ ಪ್ರಮಾಣದಲ್ಲಿ ಫೈಬರ್ ಮತ್ತು ಪೊಟ್ಯಾಶಿಯಮ್ ಹೊಂದಿದೆ. ಇದು ನಿಮ್ಮ ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ. ಮುಖ್ಯವಾಗಿ ಇದರಲ್ಲಿರುವ ಫೈಬರ್ ನೀರಿನ ಅಂಶವು ನಿಯಂತ್ರಿತ ರಕ್ತದೊತ್ತಡ ಸಂಖ್ಯೆಗಳಿಗೆ ಕೊಡುಗೆ ನೀಡುತ್ತದೆ. ಖರ್ಬೂಜ ಹಣ್ಣು ಅಥವಾ ಪಾನಕವನ್ನು ಸೇವನೆ ಮಾಡುವುದರಿಂದ ನಿಮ್ಮ ಜೀರ್ಣಕ್ರಿಯೆಯ ಸಮಸ್ಯೆಯನ್ನು ಪರಿಹಾರ ಮಾಡಿಕೊಳ್ಳಬಹುದಾಗಿದೆ. ಏಕೆಂದರೆ ಇದರಲ್ಲಿ ಫೈಬರ್ ಶ್ರೀಮಂತವಾಗಿದೆ. ಇದು ಮಲಬದ್ಧತೆಯನ್ನು ತಡೆಯಲು ಸಾಕಷ್ಟು ಸಹಾಯ ಮಾಡುತ್ತದೆ. ಖರ್ಬೂಜ ಹಣ್ಣು ಅಥವಾ ಜ್ಯೂಸ್ ಸೇವನೆಯಿಂದ ಕರುಳಿನ ಚಲನೆಯನ್ನು ನಿಯಂತ್ರಿಸಲು ಉತ್ತೇಜಿಸುತ್ತದೆ. ಈ ಬೇಸಿಗೆಯ ಕಾಲದಲ್ಲಿ ನಿಮ್ಮ ಹೊಟ್ಟೆಯನ್ನು ತಂಪಾಗಿಸುತ್ತದೆ.…
ಬೆಂಗಳೂರು:- ಗೃಹಲಕ್ಷ್ಮೀ ಯೋಜನೆಯ ಹಣವನ್ನು ಇದುವರೆಗೂ ಪಡೆದುಕೊಳ್ಳದೇ ಇರುವವರಿಗೆ ಗುಡ್ನ್ಯೂಸ್ ಸಿಕ್ಕಿದೆ. ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಈಗಾಗಲೇ 6 ಮತ್ತು 7ನೇ ಕಂತಿನ ಹಣ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಿದೆ. ಆದರೆ ನಿಮ್ಮ ಖಾತೆಗೆ ಈ ಹಣ ವರ್ಗಾವಣೆ ಆಗಿದೆಯಾ ಅನ್ನೋದ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಇದೀಗ 8ನೇ ಕಂತಿನ ಹಣ ವರ್ಗಾವಣೆಗೆ ರಾಜ್ಯ ಸರಕಾರ ಸಿದ್ದತೆ ಮಾಡಿಕೊಳ್ಳುತ್ತಿದೆ. ಕರ್ನಾಟಕದ ಪ್ರತೀ ಕುಟುಂಬದ ಯಜಮಾನಿಗೂ ಕೂಡ ಗೃಹಲಕ್ಷ್ಮೀ ಯೋಜನೆಯನ್ನು ತಲುಪಿಸುವುದು ಸರಕಾರ ಉದ್ದೇಶವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಹಿಂದೆಯೇ ತಿಳಿಸಿದ್ದಾರೆ. https://ainlivenews.com/2nd-consecutive-defeat-for-mumbai-srh-won-by-31-runs/ ಇದೇ ಕಾರಣದಿಂದಲೇ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಎದುರಾಗಿರುವ ಎಲ್ಲಾ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರ ನಾನಾ ಕಸರತ್ತುಗಳು ನಡೆಸಿದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಇದುವರೆಗೂ ಹಣ ವರ್ಗಾವಣೆ ಆಗದೇ ಇರುವ ಖಾತೆದಾರರು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಡೆಯಲು ಮತ್ತೊಂದು ಅವಕಾಶವನ್ನು ಕಲ್ಪಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದವರು ಈ ಸರಕಾರ…
ಆಧಾರ್ ಕಾರ್ಡ್ ಯೋಜನೆಯ ಹೊಣೆ ಹೊತ್ತಿರುವ ಯುಐಡಿಎಐ (UIDAI) ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ನೀವು ಆಧಾರ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನ ಎರಡು ಬಾರಿ ಮಾತ್ರ ತಿದ್ದುಪಡಿ ಮಾಡಬಹುದು. ಹಾಗಾಗಿ, ಪದೇ ಪದೇ ಆಧಾರ್ ಕಾರ್ಡ್ನಲ್ಲಿ ಹೆಸರು ತಿದ್ದುಪಡಿ ಮಾಡಲು ಹೋಗದಿರಿ. ಹಾಗೆ ಆದಾರ್ ಕಾರ್ಡ್ ಅಪ್ ಡೇಟ್ ಮಾಡುವವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಮಾರ್ಚ್ 14ರ ವರೆಗೆ ಗಡುವುನೀಡಿದ್ದು ಈಗ ಜೂನ್ ವರೆಗೆ ಮುಂದುವರೆಸಿದ್ದಾರೆ. ಮಾರ್ಚ್ 14ರವರೆಗೂ ಉಚಿತವಾಗಿ ಆಧಾರ್ ಅಪ್ಡೇಟ್ ಮಾಡಬಹುದಾಗಿತ್ತು. ಈ ಅವಕಾಶವನ್ನು ಜೂನ್ 14ರವರೆಗೂ ವಿಸ್ತರಿಸಲಾಗಿದೆ. ಯಾವುದಾದರೂ ಆಧಾರ್ ಸೆಂಟರ್ಗೆ ಹೋಗಿಯೂ ಆಧಾರ್ ವಿವರ ಅಪ್ಡೇಟ್ ಮಾಡಬಹುದು. ಅದಕ್ಕೆ ನಿರ್ದಿಷ್ಟ ಶುಲ್ಕ ಇರುತ್ತದೆ. ಜೂನ್ 14 ರ ಬಳಿಕ ಆನ್ಲೈನ್ನಲ್ಲೂ ಕೂಡ ಶುಲ್ಕ ಪಾವತಿಸಿ ಆಧಾರ್ ಡೀಟೇಲ್ಸ್ ಅಪ್ಡೇಟ್ ಮಾಡಬಹುದು. ಆಧಾರ್ ವಿವರ ಮಾರ್ಪಡಿಸಲು ಯಾವ ದಾಖಲೆಗಳು ಬೇಕು ಐಡಿ ಮತ್ತು ಅಡ್ರೆಸ್ ಪ್ರೂಫ್ ಎರಡಕ್ಕೂ ಸಲ್ಲುವ ದಾಖಲೆಗಳು: ವೋಟರ್ ಐಡಿ, ಪಾಸ್ಪೋರ್ಟ್, ಸರ್ಕಾರದಿಂದ ನೀಡಲಾದ ಮತ್ತು ವಿಳಾಸ…
ಹೈದರಾಬಾದ್ ವಿರುದ್ಧ ಗೆಲುವಿಗಾಗಿ ಹೋರಾಡಿ ವಿರೋಚಿತ ಸೋಲು ಕಂಡ ಮುಂಬೈ ಇಂಡಿಯನ್ಸ್ ಲೀಗ್ನಲ್ಲಿ ಸತತ ಎರಡನೇ ಸೋಲು ದಾಖಲಿಸಿದೆ. ಮೊದಲಿಗೆ ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ 3 ವಿಕೆಟ್ ಕಳೆದುಕೊಂಡು 277 ರನ್ ಗಳಿಸಿ ಐಪಿಎಲ್ ಇತಿಹಾಸದಲ್ಲಿ ಗರಿಷ್ಠ ಸ್ಕೋರ್ ದಾಖಲಿಸಿತು. ಇತ್ತ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 5 ವಿಕೆಟ್ ಕಳೆದುಕೊಂಡು 246 ರನ್ ಗಳಿಸಿ ಸೋಲನುಭವಿಸಿತು. https://ainlivenews.com/gold-price-increase-silver-slightly-decrease-here-is-todays-price-list/ ಹೈದರಾಬಾದ್ ನೀಡಿದ 277 ರನ್ಗಳ ಬೃಹತ್ ಗುರಿ ಬೆನ್ನಟ್ಟಿದ ಮುಂಬೈಗೆ ಬಿರುಸಿನ ಆರಂಭ ಸಿಕ್ಕಿತು. ರೋಹಿತ್ ಹಾಗೂ ಕಿಶನ್ ಬೌಂಡರಿಗಳ ಮಳೆಗರೆದು ತಂಡಕ್ಕೆ ನಿರೀಕ್ಷಿತ ಆರಂಭ ಒದಗಿಸಿದರು. ಈ ಇಬ್ಬರು ಮೊದಲ ವಿಕೆಟ್ಗೆ ಕೇವಲ 3.2 ಓವರ್ಗಳಲ್ಲಿ 56 ರನ್ಗಳ ಜೊತೆಯಾಟ ನೀಡಿದರು. ಆದರೆ ನಾಲ್ಕನೇ ಓವರ್ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿದ ಇಶಾನ್ ಮುಂದಿನ ಎಸೆತದಲ್ಲಿ ಔಟಾದರು. ಕಿಶನ್ ತಮ್ಮ ಇನ್ನಿಂಗ್ಸ್ನಲ್ಲಿ 13 ಎಸೆತಗಳನ್ನು ಎದುರಿಸಿ 4 ಸಿಕ್ಸರ್ ಮತ್ತು 2 ಬೌಂಡರಿಗಳ ಸಹಾಯದಿಂದ 34 ರನ್ ಗಳಿಸಿದರು.…
ಚಿನ್ನದ ಬೆಲೆ ನಿನ್ನೆ ಕಡಿಮೆ ಆಗಿದ್ದು ಇವತ್ತು ಏರಿಕೆ ಆಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆಯಲ್ಲಿ ಮಿಶ್ರ ಪರಿಣಾಮ ಇದೆ. ಕೆಲವೆಡೆ ಚಿನ್ನದ ಬೆಲೆ ಕಡಿಮೆ ಆದರೆ, ಇನ್ನೂ ಕೆಲವೆಡೆ ದುಬಾರಿ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 61,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,720 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 61,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,600 ರುಪಾಯಿಯಲ್ಲಿ ಇದೆ. https://ainlivenews.com/srh-made-a-world-record-in-t20/ ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 28ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,350 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,930 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 772 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ…
ಬೇಳೆ ಕಾಳುಗಳನ್ನು ಪ್ರತಿಯೊಬ್ಬರ ಮನೆಯಲ್ಲಿ ಅಡುಗೆಯಲ್ಲಿ ಬಳಸಲಾಗುತ್ತದೆ. ಮಸೂರದಲ್ಲಿ ಹಲವು ವಿಧಗಳಿವೆ ಮತ್ತು ಪ್ರತಿಯೊಂದೂ ತನ್ನದೇ ಆದ ವಿಶಿಷ್ಟ ರುಚಿಯನ್ನು ಹೊಂದಿರುತ್ತದೆ. ಒಳ್ಳೆಯ ವಿಷಯವೆಂದರೆ ರುಚಿಯ ಹೊರತಾಗಿ, ಮಸೂರವು ಆರೋಗ್ಯಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ನೀಡುತ್ತದೆ. ಇದನ್ನು ನೀವು ದಾಲ್ ತಯಾರಿಸಿ, ಖಿಚಡಿ ಅಥವಾ ಮೊಳಕೆ ಬರಿಸಿ ಸಲಾಡ್ಗಳ ರೂಪದಲ್ಲಿಯೂ ಸೇವಿಸಬಹುದು. ಅಂತಹ ಬೇಳೆ ಕಾಳುಗಳಲ್ಲಿ ಒಂದು ಹೆಸರುಕಾಳು. ಹೆಸರು ಕಾಳು ಪ್ರೋಟೀನ್ನಿಂದ ಸಮೃದ್ಧವಾಗಿದೆ ಹೆಸರು ಕಾಳು ಸಸ್ಯ ಆಧಾರಿತ ಪ್ರೋಟೀನ್ನ ಅತ್ಯುತ್ತಮ ಮೂಲವಾಗಿದೆ. ಅಷ್ಟೇ ಅಲ್ಲ, ಎಲ್ಲಾ ಅಗತ್ಯ ಅಮೈನೋ ಆಮ್ಲಗಳು ಇದರಲ್ಲಿ ಕಂಡುಬರುತ್ತವೆ. ಇದನ್ನು ಮೊಳಕೆ ಬರಿಸಿ ತಿನ್ನುವುದರಿಂದ ಅದರ ಉತ್ಕರ್ಷಣ ನಿರೋಧಕ ಗುಣಗಳನ್ನು ಹೆಚ್ಚಿಸುತ್ತದೆ ಮತ್ತು ಪ್ರೋಟೀನ್ ಪ್ರಮಾಣವನ್ನು ಹೆಚ್ಚಿಸುತ್ತದೆ. ಹೆಸರು ಕಾಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಹೆಸರು ಕಾಳುಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯವನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವು ಫ್ರೀ ರಾಡಿಕಲ್ ಹಾನಿ, ಉರಿಯೂತ ಮತ್ತು ಹೃದಯ ಕಾಯಿಲೆಗೆ…
ಸೂರ್ಯೋದಯ: 06:17, ಸೂರ್ಯಾಸ್ತ : 06:24 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಪಾಲ್ಗುಣ ಮಾಸ, ಕೃಷ್ಣ ಪಕ್ಷ, ಉತ್ತರಾಯಣಂ, ಶಿಶಿರ ಋತು, ತಿಥಿ:ತೃತೀಯ ನಕ್ಷತ್ರ:ಸ್ವಾತಿ, ರಾಹು ಕಾಲ: 01:30 ನಿಂದ 03:00 ತನಕ ಯಮಗಂಡ: 06:00 ನಿಂದ 07:30 ತನಕ ಗುಳಿಕ ಕಾಲ: 09:00 ನಿಂದ 10:30 ತನಕ ಅಮೃತಕಾಲ: ಬೆ.8:58 ನಿಂದ ಬೆ.10:43 ತನಕ ಅಭಿಜಿತ್ ಮುಹುರ್ತ: ಬೆ.11:56 ನಿಂದ ಮ.12:45 ತನಕ ಮೇಷ ರಾಶಿ: ಕಂಕಣ ಬಲದ ಸಿಹಿ ಸುದ್ದಿ ಹಂಚಿಕೊಳ್ಳುವಿರಿ, ಅಮಾನತು ಗೊಂಡಿರುವ ಉದ್ಯೋಗಿಗಳು ಮರು ನೇಮಕ, ತಡೆಹಿಡಿದ ಎಲ್ಲಾ ಕೆಲಸ ಕಾರ್ಯಗಳು ಸುಗಮ ರೀತಿಯಲ್ಲಿ ಯಶಸ್ವಿ ಕಾಣುವ ಸೌಭಾಗ್ಯ ಕೂಡಿಬಂದಿದೆ,ಎಲ್ಲಾ ಕೆಲಸ ಕಾರ್ಯಗಳಲ್ಲಿ ಶುಭಫಲವನ್ನು ಖಚಿತವಾಗಿ ಪಡೆದುಕೊಳ್ಳುವಿರಿ. ವ್ಯಾಪಾರ ವಹಿವಾಟದಲ್ಲಿ ಗಣನೀಯ ಏರಿಕೆ. ಭೂಮಿ ಖರೀದಿ ಅಥವಾ ಭೂಮಿ ಮಾರಾಟ ಬಯಸುವರಿಗೆ ಯಶಸ್ಸು. ಮನೆ ಕಟ್ಟಡ ಸುಗಮವಾಗಲಿದೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ. ಶುಭ ಮಂಗಳ ಕಾರ್ಯ ಜರುಗುವುದು. ಹೊಸ ಉದ್ಯಮ ಪ್ರಾರಂಭ…
IPL ನಲ್ಲಿ 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರ್ಮಿಸಿದ್ದ ದಾಖಲೆಯನ್ನುಹೈದರಾಬಾದ್ ದೂಳಿಪಟ ಮಾಡಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸರ್ರೈಸರ್ಸ್ ಹೈದರಾಬಾದ್ ಬ್ಯಾಟರ್ಗಳು ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಎಲ್ಲಾ ಮುಂಬೈ ಬೌಲರ್ಗಳನ್ನು ಮನಬಂದಂತೆ ದಂಡಿಸಿದರು. ಬೌಂಡರಿ-ಸಿಕ್ಸರ್ಗಳ ಸುರಿ ಮಳೆಯನ್ನೇ ಸುರಿಸಿದ್ದಾರೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಸ್ಆರ್ಎಚ್ ನಿಗದಿತ 20 ಓವರ್ಗೆ 3 ವಿಕೆಟ್ ನಷ್ಟಕ್ಕೆ 3 ನಷ್ಟಕ್ಕೆ 277 ರನ್ ಸಿಡಿಸಿದರು https://ainlivenews.com/file-a-case-against-former-minister-ks-eshwarappa/ ಈ ಬೃಹತ್ ಸ್ಕೋರ್ ಮೂಲಕ ಸನ್ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ತಂಡ ಎಂಬ ದಾಖಲೆಯನ್ನು ನಿರ್ಮಿಸಿದೆ. ಈ ಮೂಲಕ 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿರ್ಮಿಸಿದ್ದ ದಾಖಲೆಯನ್ನುಹೈದರಾಬಾದ್ ದೂಳಿಪಟ ಮಾಡಿದೆ. ಆರ್ಸಿಬಿ ತಂಡವು ಪುಣೆ ವಾರಿಯರ್ಸ್ ವಿರುದ್ಧ 2013ರಲ್ಲಿ 263 ರನ್ ಸಿಡಿಸಿದ್ದು ಐಪಿಎಲ್ ಇತಿಹಾಸದಲ್ಲಿಯೇ ಅತಿ ದೊಡ್ಡ ಸ್ಕೋರ್ ಆಗಿತ್ತು. ಅಂದು ಆರ್ಸಿಬಿ ಪರ ಕ್ರಿಸ್ ಗೇಲ್ ಬರೋಬ್ಬರಿ 175 ರನ್ ಸಿಡಿಸಿದ್ದರು.…