ನಿಮ್ಮ ಮೊಬೈನ್ನ ನಿಧಾನವಾಗಿ ಬ್ಯಾಟರಿ ಕ್ಷೀಣಿಸಲು ಪ್ರಾರಂಭವಾಗುತ್ತದೆ. ಅಂತಿಮವಾಗಿ ಅದು ಉಬ್ಬಿ ಸ್ಫೋಟಗೊಳ್ಳುತ್ತದೆ. ಇದಕ್ಕೆಲ್ಲ ಮುಂಚಿತವಾಗಿ ಬ್ಯಾಟರಿ ಉಬ್ಬುವಿಕೆಯನ್ನು ತಡೆಗಟ್ಟಬೇಕು. ಹಾಗಾದರೆ, ಸ್ಮಾರ್ಟ್ಫೋನ್ ಬ್ಯಾಟರಿ ಉಬ್ಬದಿರಲು ಏನು ಮಾಡಬೇಕು?. ಸ್ಮಾರ್ಟ್ಫೋನ್ ಬ್ಯಾಟರಿಯು ಊದಿಕೊಳ್ಳಲು ಪ್ರಮುಖ ಕಾರಣ ಇದನ್ನು ಅತಿಯಾಗಿ ಅಥವಾ ತಪ್ಪಾಗಿ ಉಪಯೋಗಿಸುವುದು. ಉದಾಹರಣೆಗೆ, ದೀರ್ಘಕಾಲದವರೆಗೆ ವಿಡಿಯೋವನ್ನು ವೀಕ್ಷಿಸುವುದರಿಂದ ಬ್ಯಾಟರಿ ಬರಿದಾಗುತ್ತದೆ. ಹೀಗಾಗಿ ನಿಮ್ಮ ಸ್ಮಾರ್ಟ್ಫೋನ್ ಅನ್ನು ಸರಿಯಾದ ರೀತಿಯಲ್ಲಿ ಬಳಸಲು ಪ್ರಯತ್ನಿಸಿ. ಕೆಲವರ ಸ್ಮಾರ್ಟ್ಫೋನ್ನಲ್ಲಿ ಲೆಕ್ಕವಿಲ್ಲದಷ್ಟು ಆ್ಯಪ್ಗಳಿರುತ್ತದೆ. ಅದು ಅಗತ್ಯ ಕೂಡ ಇರುವುದಿಲ್ಲ. ಇವು ಹೆಚ್ಚು ಬ್ಯಾಟರಿಯನ್ನು ಬಳಸುತ್ತವೆ. ಅಷ್ಟೇ ಅಲ್ಲ, ಬ್ಯಾಟರಿಯನ್ನು ಬೇಗನೆ ಖಾಲಿ ಮಾಡುತ್ತದೆ. ಈಗಿರುವ ಹೆಚ್ಚಿನ ಆ್ಯಪ್ಗಳು ಜಿಪಿಎಸ್, ಕ್ಯಾಮೆರಾ ಅಥವಾ ವಿಡಿಯೋ ಕರೆಗಳ ಆ್ಯಕ್ಸಸ್ ಕೇಳುತ್ತದೆ. ಇದು ಬ್ಯಾಟರಿ ಮೇಲೆ ಹೊಡೆತ ಬಿಳುತ್ತದೆ. ಹೀಗಾಗಿ ಅನಗತ್ಯ ಅಪ್ಲಿಕೇಶನ್ಗಳನ್ನು ಅನ್ಇನ್ಸ್ಟಾಲ್ ಮಾಡುವುದು ಒಳ್ಳೆಯದು. ಬ್ಯಾಟರಿ ಬೇಗೆನ ಖಾಲಿ ಆಗಲು ಅಥವಾ ಇದಕ್ಕೆ ಒತ್ತಡ ಬೀಳಲು ಮತ್ತೊಂದು ಪ್ರಮುಖ ಕಾರಣ ಬ್ಯಾಕ್ಗ್ರೌಂಡ್ ಆ್ಯಪ್. ಒಂದು ಆ್ಯಪ್ ಅನ್ನು…
Author: AIN Author
ಸ್ಮಾರ್ಟ್ಫೋನ್ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇವುಗಳನ್ನು ಬಳಸಲು ನಾವು ಪ್ರತಿದಿನ ಚಾರ್ಜ್ ಮಾಡಬೇಕಾಗುತ್ತದೆ. ಹೀಗೆ ಫೋನ್ ಅನ್ನು ಚಾರ್ಜ್ ಮಾಡುವಾಗ ಕೆಲ ತಪ್ಪುಗಳನ್ನು ಮಾಡಿದರೆ ಅನೇಕ ತೊಂದರೆಗಳು ಉಂಟಾಗಬಹುದು. ಮೊಬೈಲ್ ಸ್ಫೋಟಗೊಳ್ಳುವ ಅಪಾಯವೂ ಇದೆ. ಗಂಭೀರವಾದ ಗಾಯ ಅಥವಾ ಸಾವುಕೂಡ ಸಂಭವಿಸಬಹುದು. ತಪ್ಪಾಗಿ ಚಾರ್ಜ್ ಮಾಡಿದರೆ ಸ್ಮಾರ್ಟ್ಫೋನ್ ಹಾನಿಗೊಳಗಾಗಬಹುದು. ಇದಲ್ಲದೆ, ಬ್ಯಾಟರಿಯ ಕಾರ್ಯಕ್ಷಮತೆಯ ಮೇಲೂ ಪರಿಣಾಮ ಬೀರುತ್ತದೆ. ನಮ್ಮ ಕೆಲವು ತಪ್ಪುಗಳಿಂದಾಗಿ ಫೋನ್ ಬಿಸಿಯಾಗುವ ಸಮಸ್ಯೆಯೂ ಉದ್ಭವಿಸುತ್ತದೆ. ಹಾಗಾದರೆ ನಾವು ಯಾವ ತಪ್ಪುಗಳನ್ನು ಮಾಡಬಾರದು ಎಂಬುದನ್ನು ನೋಡೋಣ. ಚಾರ್ಜರ್ ಸ್ವಿಚ್ ಆಫ್ ಮಾಡಿ ಫೋನ್ ಚಾರ್ಜ್ ಆದಾಗ ಜನರು ಫೋನ್ ಅನ್ನು ಮಾತ್ರ ತೆಗೆಯುತ್ತಾರೆ. ಆದರೆ ಚಾರ್ಜರ್ ಅನ್ನು ಅನ್ನು ಅಲ್ಲೇ ಬಿಟ್ಟು ಪ್ಲಗ್ ಕೂಡ ಆಫ್ ಮಾಡುವುದಿಲ್ಲ. ಇದು ಚಾರ್ಜರ್ನ ಕಾರ್ಯಕ್ಷಮತೆಯನ್ನು ಕುಗ್ಗಿಸಬಹುದು. ಆದ್ದರಿಂದ, ಫೋನ್ ಅನ್ನು ಚಾರ್ಜ್ ಮಾಡಿದ ನಂತರ, ಸ್ವಿಚ್ ಆಫ್ ಮಾಡಿ. ಹಾಗೆಯೆ ಸ್ವಿಚ್ ಆನ್ ಮಾಡಿ ಚಾರ್ಜಿಂಗ್ನಲ್ಲಿ ಫೋನ್ ಬಿಡುವ ಅಭ್ಯಾಸ ಜನರಲ್ಲಿದೆ.…
ಬೆಂಗಳೂರು:- ಮೋದಿ, ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದ ತಂಗಡಗಿ ವಿರುದ್ಧ ದೂರು ದಾಖಲಾಗಿದೆ. ನಾವು ಮೋದಿ ಮೋದಿ ಎನ್ನುತ್ತೇವೆ ನಮಗೆ ಹೊಡೆಯಿರಿ ಬನ್ನಿ ಎಂದು ಅಭಿಯಾನ ಮಾದರಿಯಲ್ಲಿ ಪೋಸ್ಟರ್ ಅನ್ನು ಸಾಮಾಜಿ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಇದೀಗ ರಾಜ್ಯ ಬಿಜೆಪಿ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾ ಕೈಗೊಳ್ಳುನಎಚ ನಾವು ಮೋದಿ ಮೋದಿ ಎನ್ನುತ್ತೇವೆ ನಮಗೆ ಹೊಡೆಯಿರಿ ಬನ್ನಿ ಎಂದು ಅಭಿಯಾನ ಮಾದರಿಯಲ್ಲಿ ಪೋಸ್ಟರ್ ಅನ್ನು ಸಾಮಾಜಿ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಇದೀಗ ರಾಜ್ಯ ಬಿಜೆಪಿ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾಆಯೋಗಕ್ಕೆ ದೂರು ನೀಡಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಒಳಗೊಂಡ ಬಿಜೆಪಿ ನಿಯೋಗ ಮಾರ್ಚ್ 25 ಚುನಾವಣೆ ಆಯೋಗಕ್ಕೆ ದೂರು ನೀಡಿದರು.
ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿತ್ತು. ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು & ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡುತ್ತದೆ. Ration Card News Update: ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಈ ಹಣವು ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲಾಗುತ್ತದೆ. ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು. ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಿ
ರಾಮನಗರ:- ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರ ಗೆಲುವಿಗೆ ಸಹಾಯ ಮಾಡಿದ್ದೆ ಎಂದು ಯೋಗೇಶ್ವರ್ ಅವರೇ ಬಾಯಿಬಿಟ್ಟಿದ್ದಾರೆ. ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಹೆಚ್ಚು ಆರೋಪ ಮಾಡಿದವರ ಪೈಕಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂಚೂಣಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಮಾತನಾಡಿದ್ದ ಯತ್ನಾಳ್, ಯಾವುದೇ ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಕಾಂಗ್ರೆಸ್ ಸೋಲು ಖಚಿತ ಎಂದು ಹೇಳಿದ್ದರು. ಆ ಮೂಲಕ ಪರೋಕ್ಷವಾಗಿ ಬಿಜೆಪಿಯಲ್ಲಿನ ಕೆಲವು ನಾಯಕರಿಗೆ ಟಾಂಗ್ ಕೊಟ್ಟಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಸೋಲಿಸಲು ವಿಜಯೇಂದ್ರ ಅವರು ಹಣ ಕಳುಹಿಸಿದ್ದರು. ಯಡಿಯೂರಪ್ಪ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಅಡ್ಜೆಸ್ಟ್ಮೆಂಟ್ ಮಾಡಿಕೊಂಡಿದ್ದಾರೆ ಎಂದು ಯತ್ನಾಳ್ ಅವರು ಪಂಚಮಸಾಲಿ ಸಮುದಾಯದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮುಂದೆ ಹೇಳಿಕೊಂಡಿದ್ದರು. ನಿನ್ನೆಯಷ್ಟೇ ಮಾತನಾಡಿದ್ದ ಶಿವಮೊಗ್ಗ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಅವರು ಶಿಕಾರಿಪುರದಲ್ಲಿ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡು ವಿಜಯೇಂದ್ರ ಅವರು ಗೆದ್ದಿದ್ದಾರೆ ಆರೋಪಿಸಿದ್ದರು. ಈ ಎಲ್ಲಾ ಬೆಳವಣಿಗಳ ನಡುವೆ ತಾನು…
ಹೋಳಿ ಹಬ್ಬದಲ್ಲಿ ನಿಮ್ಮ ತ್ವಚೆ ಮತ್ತು ಕೂದಲನ್ನು ಕಾಪಾಡಿಕೊಳ್ಳಲು ನೀವು ಬಯಸಿದರೆ ಈ ವಸ್ತುಗಳಿಂದ ದೂರವಿರುವುದು ಉತ್ತಮ. ಹೋಳಿ ಆಚರಣೆಯ ಸಮಯದಲ್ಲಿ ನಿಮ್ಮ ಚರ್ಮ ಮತ್ತು ಕೂದಲನ್ನು ಸುರಕ್ಷಿತವಾಗಿರಿಸಲು ನೀವು ಅವಾಯ್ಡ್ ಮಾಡಬೇಕಾದ 8 ವಿಷಯಗಳು ತಲೆಯಿಂದ ಕಾಲಿನವರೆಗೂ ಬಣ್ಣ ಸುರಿದುಕೊಳ್ಳುವ ಈ ಸಮಯದಲ್ಲಿ ನಮ್ಮ ಕಣ್ಣುಗಳ ರಕ್ಷಣೆಯನ್ನು ಯಾವ ರೀತಿ ಮಾಡಿಕೊಳ್ಳಬಹುದು ಕೆಲವೊಂದು ಮಾಹಿತಿಗಳು ಇಲ್ಲಿದೆ. ನಿಮ್ಮ ಚರ್ಮ ಮತ್ತು ಕೂದಲಿನಿಂದ ಹೋಳಿ ಬಣ್ಣಗಳನ್ನು ತೆಗೆದುಹಾಕಲು ಕಠಿಣವಾದ ಸೋಪ್ ಅಥವಾ ಡಿಟರ್ಜೆಂಟ್ಗಳನ್ನು ಬಳಸುವುದನ್ನು ತಪ್ಪಿಸಿ. ಅದರ ಬದಲಾಗಿ, ನಿಮ್ಮ ಚರ್ಮ ಮತ್ತು ಕೂದಲನ್ನು ನಿಧಾನವಾಗಿ ಶುದ್ಧೀಕರಿಸಲು ಮೊಸರು ಅಥವಾ ರೋಸ್ ವಾಟರ್ನೊಂದಿಗೆ ಬೆರೆಸಿದ ಕಡಲೆ ಹಿಟ್ಟಿನಂತಹ ಸೌಮ್ಯವಾದ ಕ್ಲೆನ್ಸರ್ಗಳು ಅಥವಾ ನೈಸರ್ಗಿಕ ಪರಿಹಾರಗಳನ್ನು ಆರಿಸಿಕೊಳ್ಳಿ. Ration Card News Update: ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಹೋಳಿ ಬಣ್ಣಗಳನ್ನು ಬಿಸಿ ನೀರಿನಿಂದ ತೊಳೆಯಬೇಡಿ. ಏಕೆಂದರೆ ಅದು ನಿಮ್ಮ ಚರ್ಮ ಮತ್ತು ಕೂದಲಿನಿಂದ…
ಪಂಜಾಬ್ ಕಿಂಗ್ಸ್ ತಂಡವನ್ನು 4 ವಿಕೆಟ್ಗಳಿಂದ ಮಣಿಸಿದ ಆರ್ಸಿಬಿ ಲೀಗ್ನಲ್ಲಿ ತನ್ನ ಮೊದಲ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಆರ್ಸಿಬಿ ಪರ 74 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ಕೊಹ್ಲಿ ತಂಡದ ಗೆಲುವಿನ ಹೀರೋ ಎನಿಸಿಕೊಂಡರು. ಪಂದ್ಯದಲ್ಲಿ ಸ್ಫೋಟಕ ಇನ್ನಿಂಗ್ಸ್ ಕಟ್ಟಿದ ಕೊಹ್ಲಿ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದ ಇನ್ನಿಂಗ್ಸ್ನೊಂದಿಗೆ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ 100ನೇ ಬಾರಿ 50 ಕ್ಕೂ ಅಧಿಕ ರನ್ ಬಾರಿಸಿದ ದಾಖಲೆ ಬರೆದರು. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಆಟಗಾರ ಎನಿಸಿಕೊಂಡಿರುವ ಕಿಂಗ್ ಕೊಹ್ಲಿ, 100ನೇ ಬಾರಿಗೆ 50+ ಇನ್ನಿಂಗ್ಸ್ಗಳನ್ನು ಆಡಿದ ವಿಶ್ವದ ಮೂರನೇ ಬ್ಯಾಟ್ಸ್ಮನ್ ಕೂಡ ಆಗಿದ್ದಾರೆ. ವಿರಾಟ್ಗೂ ಮೊದಲು ಕ್ರಿಸ್ ಗೇಲ್ ಮತ್ತು ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ್ದರು. ಅಷ್ಟೆ ಅಲ್ಲದೆ ಪಂಜಾಬ್ ಕಿಂಗ್ಸ್ ವಿರುದ್ಧ 7 ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಐಪಿಎಲ್ನಲ್ಲಿ ಅತಿ ಹೆಚ್ಚು ಬೌಂಡರಿ…
ಪಂಜಾಬ್ ವಿರುದ್ಧ ಆರ್ಸಿಬಿಗೆ ರೋಚಕ ಗೆಲುವು ಸಿಕ್ಕಿದ್ದು, ಕಿಂಗ್ ಕೊಹ್ಲಿ ಅಬ್ಬರಕ್ಕೆ ಧವನ್ ಪಡೆ ತತ್ತರಿಸಿ ಹೋಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಚಿನ್ನಸ್ವಾಮಿಯ ಬ್ಯಾಟಿಂಗ್ ಪಿಚ್ ನಲ್ಲಿ ಪಂಜಾಬ್ ಬ್ಯಾಟರ್ ಗಳು ಉತ್ತಮ ಪ್ರದರ್ಶನ ನೀಡಿದರು. ಈ ಮೂಲಕ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು ನಿಗದಿತ 20 ಓವರ್ಗೆ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕರ್ನಾಟಕದ ಮನೆಮಗನಾಗಿರುವ ವಿರಾಟ್ ಕೊಹ್ಲಿ ಅವರ ಅದ್ಭುತ ಬ್ಯಾಟಿಂಗ್ ಮೂಲಕ ನಿಗದಿತ 19.2 ಓವರ್ ಗೆ 6 ವಿಕೆಟ್ ನಷ್ಟಕ್ಕೆ 178 ರನ್ ಗಳಿಸುವ ಮೂಲಕ 4 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದರು. ಈ ಮೂಲಕ ಆರ್ಸಿಬಿ ತಂಡ ಸೀಸನ್ ನ ಮೊದಲ ಗೆಲುವು ದಾಖಲಿಸಿದೆ. ಟಾಸ್ ಗೆದ್ದು ಬೌಲಿಂಗ್ ಮಾಡಿದ ಆರ್ಸಿಬಿ ತಂಡಕ್ಕೆ ಪಂಜಾಬ್…
ಬೆಂಗಳೂರು:- ಬಿಬಿಎಂಪಿ ಆಸ್ತಿ ತೆರಿಗೆ ದರ ಹೆಚ್ಚಳ ಸುಳ್ಳು ಸುದ್ದಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಏಪ್ರಿಲ್ 1, 2024 ರಿಂದ ಬಿಬಿಎಂಪಿ ಆಸ್ತಿ ತೆರಿಗೆ ದರವನ್ನು ಹೆಚ್ಚಿಸುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿ ಪೆಡ್ಲರ್ಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ನನ್ನ ಗಮನಕ್ಕೆ ಬಂದಿದೆ. ಬಿಬಿಎಂಪಿ ಯಾವುದೇ ಆಸ್ತಿ ತೆರಿಗೆಯನ್ನು ಹೆಚ್ಚಿಸಿಲ್ಲ, 2016 ರಲ್ಲಿ ನಿಗದಿಪಡಿಸಿದ ದರದಲ್ಲಿಯೇ ವಿಧಿಸಲಾಗುವುದು. ದಯವಿಟ್ಟು ಈ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ” ಎಂದು ಮನವಿ ಮಾಡಿದ್ದಾರೆ. ಕರ್ನಾಟಕದಲ್ಲಿ ಭಾರಿ ತೆರಿಗೆ ಹೆಚ್ಚಳವಾಗಲಿದೆ ಎಂದು ಇಂಡೆಕ್ಸ್.ಡೈಲಿ ಎಂಬ ಇನ್ಸ್ಟಾಗ್ರಾಂ ಪೇಜ್ನಲ್ಲಿ ಅನುರಾಗ್ ಸಿಂಗ್ ಎಂಬುವವರು ವಿಡಿಯೊ ಹರಿಯಬಿಟ್ಟಿದ್ದರು. ಬಾಡಿಗೆ ಮನೆಗಳ ಮೇಲಿನ ಆಸ್ತಿ ತೆರಿಗೆ ಎರಡು ಪಟ್ಟು, ವಾಣಿಜ್ಯ ಸಂಸ್ಥೆಗಳ ಮೇಲಿನ ತೆರಿಗೆ 3 ರಿಂದ 5 ಪಟ್ಟು ಹೆಚ್ಚಳವಾಗಲಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್…
ಹಣಕಾಸು ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಗೆ ಮಾ.31 ಅಂತಿಮ ಗಡುವು ಆಗಿದ್ದು, ಆದಾಯ ತೆರಿಗೆ ಕಾಯ್ದೆ ನಿಬಂಧನೆಗಳಿಗೆ ಅನುಗುಣವಾಗಿ ಫೈಲ್ ಮಾಡಲಾಗುತ್ತದೆ.ಇದರಲ್ಲಿ ಆ ವ್ಯಕ್ತಿಯ ಆದಾಯ,ಲಾಭ ಹಾಗೂ ನಷ್ಟಗಳ ಜೊತೆಗೆ ಇತರ ತೆರಿಗೆ ಕಡಿತಗಳ ಮಾಹಿತಿಗಳೂ ಇರುತ್ತವೆ. ನಿಗದಿತ ದಿನಾಂಕದೊಳಗೆ ಐಟಿಆರ್ ಸಲ್ಲಿಕೆ ಮಾಡದಿದ್ರೂ ವಿಳಂಬ ಐಟಿಆರ್ ಸಲ್ಲಿಕೆಗೆ ಅವಕಾಶವಿದ್ದರೂ ತೆರಿಗೆದಾರರು ಕೆಲವೊಂದು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ವರ್ಷ ತೆರಿಗೆದಾರರು ಅನುಭವಿಸಿದ ನಷ್ಟವನ್ನು ಮುಂದಿನ ಆರ್ಥಿಕ ಸಾಲಿನಲ್ಲಿ ಅವರು ಗಳಿಸೋ ಲಾಭಕ್ಕೆ ಸರಿಹೊಂದಿಸೋ (Setoff) ಅವಕಾಶವನ್ನು ಕಳೆದುಕೊಳ್ಳುತ್ತಾರೆ. ರಿಟರ್ನ್ಸ್ ಸಲ್ಲಿಸುವುದು ಹೇಗೆ?: ಇದಕ್ಕಾಗಿ ತೆರಿಗೆ ಇಲಾಖೆ 7 ಬಗೆಯ ITR-1, ITR-2, ITR-3, ITR-4, ITR-5, ITR-6 & ITR-7 ಫಾರ್ಮ್ಗಳನ್ನು ಸೂಚಿಸಿದೆ. ತೆರಿಗೆದಾರರ ಆದಾಯದ ಮೂಲಗಳು, ಗಳಿಸಿದ ಮೊತ್ತ ಮತ್ತು ತೆರಿಗೆದಾರರು ಯಾವ ವರ್ಗಕ್ಕೆ ಸೇರಿದ್ದಾರೆ ಎಂಬುದರ ಆಧಾರದ ಮೇಲೆ ಸೂಕ್ತವಾದ ITR ಫಾರ್ಮ್ ಅನ್ನು ಆಯ್ಕೆ ಮಾಡಿಕೊಂಡು ರಿಟರ್ನ್ಸ್ ಸಲ್ಲಿಸಬೇಕಾಗುತ್ತದೆ. ಸರಿಯಾದ ITR ಫಾರ್ಮ್ ಅನ್ನು ಹೇಗೆ ಆಯ್ಕೆ…