ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳ ತಯಾರಿ ಜೋರಾಗಿ ನಡೆಯುತ್ತಿದೆ. ಈ ನಡುವೆ ಹಲವು ಕಾರಣಗಳಿಂದ ಬಿಜೆಪಿಯಿಂದ ದೂರವಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿದ್ದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಸೋಮವಾರ (ಮಾ. 25) ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ಹೇಳಿವೆ. ಇನ್ನೂ ಈ ಸಂಬಂಧ ಕೆಆರ್ಪಿಪಿ ಪಕ್ಷದ ಪದಾಧಿಕಾರಿಗಳ ಸಭೆ ಕರೆದಿದ್ದರು. ಬೆಂಗಳೂರಿನ ತಮ್ಮ ಪಾರಿಜಾತ ನಿವಾಸದಲ್ಲಿ ಕೆಆರ್ಪಿಪಿ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ರಾಜಕೀಯವಾಗಿ ನನಗೆ ಗಂಗಾವತಿ ಪುನರ್ಜನ್ಮ ಕೊಟ್ಟಿದೆ ಆದ್ದರಿಂದ ನನ್ನ ಕೊನೆ ಉಸಿರಿರೊವರೆಗೂ ಗಂಗಾವತಿ ಕ್ಷೇತ್ರವನ್ನ ಬಿಡಲ್ಲ. ಕಷ್ಟಕಾಲದಲ್ಲಿ ನಗಗೆ ಕ್ಷೇತ್ರದ ಜನರು ಕೈಹಿಡಿದಿದ್ದಾರೆ ಎಂದು ಗಂಗಾವತಿ ಕ್ಷೇತ್ರದ ಕುರಿತಂತೆ ರೆಡ್ಡಿ ಬಾವುಕರಾದರು. ಇನ್ನೂ ಪಕ್ಷ ವಿಲೀನ ಮಾಡಿ ಬಿಜೆಪಿಗೆ ಸೇರಿ ಎಂದು ಹೇಳಿದ್ದಾರೆ. ಹೀಗಾಗಿ ತಮ್ಮ ಅಭಿಪ್ರಾಯ ಕೇಳಲು ಸಭೆ ಕರೆದಿದ್ದೇನೆ. ಮೋದಿಗಾಗಿ ನಾನು ಬಿಜೆಪಿ ಪಾರ್ಟಿಗೆ ನಮ್ಮ ಕೆಆರ್ಪಿಪಿ ಪಕ್ಷ ಬೆಂಬಲಿಸುತ್ತೆ ಎಂದಿದ್ದೆ ಆದರೆ ಅಮಿತ್ ಶಾ…
Author: AIN Author
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯ ಮಾಡಿದ ಸಕ್ಕರೆನಾಡಿನ ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು; ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು. ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಜಮಾಯಿಸಿದ ಮಂಡ್ಯ ಜಿಲ್ಲೆಯ ಕಾರ್ಯಕರ್ತರು, ಮುಖಂಡರು ಕುಮಾರಸ್ವಾಮಿ ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಬೇಕು ಎಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ತಂದೆಯವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಈಗಷ್ಟೇ ಮನೆಗೆ ಬಂದಿದ್ದಾರೆ. ಅವರಿಗೆ ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿಕೊಂಡರು. ನಿಖಿಲ್ ಅವರ ಮಾತಿನ ನಡುವೆಯೇ ಕುಮಾರಸ್ವಾಮಿ ಅವರೇ…
ಬೆಂಗಳೂರು: ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂದು ಒತ್ತಡ ಇದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಮಂಡ್ಯ ಕಾರ್ಯಕರ್ತರಾದ ತಾವೆಲ್ಲರೂ ಬಂದು ಒತ್ತಾಯ ಮಾಡುತ್ತಿದ್ದೀರಿ. ನಾಳೆ ಚನ್ನಪಟ್ಟಣ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂದು ಒತ್ತಡ ಇದೆ. ನಮ್ಮ ಕುಟುಂಬದಿಂದ ಚುನಾವಣೆ ಸ್ಪರ್ಧೆ ಬೇಡ ಅಂದುಕೊಂಡಿದ್ದೆವು. ಆದರೆ ಮಂಡ್ಯದ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಕುಮಾರಣ್ಣ ಅವರ ಮೇಲೆ ನೀವೆಲ್ಲಾ ಒತ್ತಡ ಹಾಕುತ್ತಿದ್ದೀರಿ. ತಂದೆಯವರು ಒಂದು ದಿನದ ಸಮಯಾವಕಾಶ ಕೇಳಿದ್ದಾರೆ. ನಾಳೆ (ಸೋಮವಾರ) ಸಂಜೆಯೊಳಗೆ ಅಭ್ಯರ್ಥಿ ಯಾರೆಂದು ಅಂತಿಮ ಆಗಬಹುದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. 2019ರ ಲೊಕಸಭೆ ಚುನಾವಣೆಯಲ್ಲಿ ನನಗೆ ಕೆಲವರ ಕುತಂತ್ರದಿಂದ ಸೋಲಾಯಿತು. ಚಿತಾವಣೆಯಿಂದಲೇ ನಾನು ಸೋತೆ. ಹಾಗಾಗಿ ಜಿಲ್ಲೆಯ ಜನರು, ಕಾರ್ಯಕರ್ತರು ನಾನು ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. https://ainlivenews.com/good-news-for-cancer-patients-72-lakhs-rs-cancer-medicine-will-now-be-available-for-3-lakhs/ ಕಳೆದ ಬಾರಿ ಸೊತಿದ್ದೀರಿ, ಈ ಬಾರಿ ಗೆಲ್ಲಿಸುತ್ತೇವೆ ಎಂದು…
ಶಿವಮೊಗ್ಗ: ಈಶ್ವರಪ್ಪ ಬಿಜೆಪಿಯ ಡಮ್ಮಿ ಅಭ್ಯರ್ಥಿ. ಇದೆಲ್ಲ ಬಿಜೆಪಿಯ ತಂತ್ರಗಾರಿಕೆಯಾಗಿದೆ ಎಂದು ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗೆಲ್ಲುವ ಎಲ್ಲ ವಾತಾವರಣವಿದೆ ಎಂದರು. ಬಂಗಾರಪ್ಪ ಪತ್ನಿ ಕಣಕ್ಕೆ ಇಳಿಯುತ್ತಿದ್ದಂತೆ, ಈಶ್ವರಪ್ಪ ಟ್ರಂಪ್ ಕಾರ್ಡ್ ಬಳಕೆ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಈಶ್ವರಪ್ಪ ನಡುವೆ ಇದೊಂದು ಅಂತರಿಕ ಒಪ್ಪಂದವಾಗಿದೆ. https://ainlivenews.com/good-news-for-cancer-patients-72-lakhs-rs-cancer-medicine-will-now-be-available-for-3-lakhs/ ಷಡ್ಯಂತ್ರದ ಒಂದು ಭಾಗವಾಗಿ ಈಶ್ವರಪ್ಪ ಅವರನ್ನು ಬಿಜೆಪಿಯು ಕಣಕ್ಕೆ ಇಳಿಸಿದೆ. ಕೆಎಸ್ ಈಶ್ವರಪ್ಪ ಅವರು ಹಿರಿಯ ನಾಯಕರು, ಈಗ ಇಂತಹ ಕೆಳಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಈಶ್ವರಪ್ಪ ಅವರಿಗೆ ರಾಜ್ಯಪಾಲ ಮತ್ತು ಅವರ ಮಗನಿಗೆ ಎಂಎಲ್ಸಿ ಸ್ಥಾನದ ಆಫರ್ ನೀಡಿದ್ದಾರೆ. ಈಶ್ವರಪ್ಪ ಅವರ ವಿರುದ್ಧ 40 ಪರ್ಸೆಂಟ್ ಅಸ್ತ್ರ ಬಳಕೆ ಮಾಡಲಾಗುತ್ತಿದೆ. ಬಿಜಪಿ ಈಶ್ವರಪ್ಪ ಮೇಲೆ ಒತ್ತಡ ಹಾಕಿ ಚುನಾವಣೆಗೆ ನಿಲ್ಲಿಸಿದೆ ಎಂದರು.
ಮೈಸೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಾಕಷ್ಟು ಅಳೆದೂ ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡ್ತಿದೆ. ಸದ್ಯ ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನರ ಮತ್ತು ಬಳ್ಳಾರಿ ಕ್ಷೇತ್ರಗಳಿಗೆ ಯಾವುದೇ ಅಭ್ಯರ್ಥಿಗಳನ್ನು ಘೋಷಿಸದೆ ಪೆಂಡಿಂಗ್ ಉಳಿಸಿಕೊಂಡಿದೆ. ಇನ್ನು ಟಿಕೆಟ್ ಹಂಚಿಕೆ ಸಂಬಂಧ ಮಾತನಾಡಿದ ಸಿಎಂ, ಕಾಂಗ್ರೆಸ್ ಟಿಕೆಟ್ ಹಂಚಿಕೆಯಲ್ಲಿ ಯಾವ ಕಗ್ಗಂಟು ಆಗಿಲ್ಲ. ಎಳೆದಾಟವೂ ಆಗಿಲ್ಲ. ನಾಳೆ ಅಥವಾ ನಾಳಿದ್ದು ಉಳಿದ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುತ್ತೆ. ಇಪ್ಪತ್ತು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬಿಜೆಪಿಯವರ ರೀತಿ ನಾವು ಸುಳ್ಳು ಹೇಳಲ್ಲ. ಅವ್ರು 28 ಕ್ಷೇತ್ರ ಗೆಲ್ಲುತ್ತೇವೆ ಅಂತಾರೆ ಅದು ಸಾಧ್ಯನಾ? ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರು ಬಿಜೆಪಿಗೆ ಪ್ರಶ್ನೆ ಮಾಡಿದರು. ಬಿಜೆಪಿ ಜೆಡಿಎಸ್ ಮೈತ್ರಿಯಿಂದ ನಮಗೆ ಅನುಕೂಲ ಆಗುತ್ತೆ. ಈ ಹಿಂದೆ ಜೆಡಿಎಸ್ ಜೊತೆ ಮೈತ್ರಿ ಆಗಿದ್ದಾಗ ಅನಾನುಕೂಲ ಆಗಿದೆ. https://ainlivenews.com/good-news-for-cancer-patients-72-lakhs-rs-cancer-medicine-will-now-be-available-for-3-lakhs/ ಅದರಂತೆ ಇವರ ಮೈತ್ರಿಯೂ ಅನುಕೂಲ ಆಗಲ್ಲ. ಅವರ ಮೈತ್ರಿ ನಮಗೆ ಅನುಕೂಲ. ನಾವು ನುಡಿದಂತೆ ನಡೆದಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ಬಿಜೆಪಿಯವರು 600 ಭರವಸೆಗಳಲ್ಲಿ ಶೇಕಡಾ…
ಬೆಂಗಳೂರು: ದಿ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಬೆಂಗಳೂರಿಗರು ಬೆಚ್ಚಿ ಬೀಳುವಂತೆ ಮಾಡಿತ್ತು. ಬಾಂಬರ್ ನನ್ನು ಹಿಡಿಯೋಕ್ಕೆ ಬೆಂಗಳೂರು ಪೊಲೀಸರು ಹಾಘು ಎನ್ ಐ ಎ ಅಧಿಕಾರಿಗಳು ಸಾಕಷ್ಟು ಪ್ರಯತ್ನ ಪಡ್ತಿದ್ದಾರೆ.. ಶಂಕಿತ ಉಗ್ರನ ಸಿಸಿಟಿವಿ ಫುಟೇಜ್ ಇದ್ರೂ ಬಾಂಬರ್ ನನ್ನು ಹಿಡಿಯುವುದು ಪೊಲೀಸ್ ಹಾಗು ಎನ್ ಐ ಎ ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ. ಸತತ ಪ್ರಯತ್ನದ ನಂತರ ಎನ್ ಐ ಎ ತಂಡ ಇದೀಗ ಶಂಕಿತ ಗುರುತು ಪತ್ತೆ ಹಚ್ಚಿದೆ. ಈ ಕುರಿತ ಡಿಟೇಲ್ಸ್ ಇಲ್ಲಿದೆ ನೋಡಿ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಇದೀಗ ಎನ್ ಐ ಎ ಅಧಿಕಾರಿಗಳು ಮೇಜರ್ ಟ್ವಿಸ್ಟ್ ನೀಡಿದ್ದಾರೆ..ಶಂಕಿತನ ಜಾಡು ಹಿಡಿದು ಹೊರಡ ಎನ್ಐಎಗೆ ಶಂಕಿತರುಗೆ ಚೆನೈ ಲಿಂಕ್ ಇರೋದು ಗೊತ್ತಾಗಿತ್ತು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವರು ತಮಿಳುನಾಡಿನಿಂದ ಬೆಂಗಳೂರಿಗೆ ಬಂದು ಬಾಂಬ್ ಇಟ್ಟು ಟೈಂ ಸೆಟ್ ಮಾಡಿ ಪರಾರಿಯಾಗಿರೋದು ಎನ್ನಲಾಗುತ್ತಿದೆ. ಇನ್ನು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವನು ಒಬ್ಬ ವ್ಯೆಕ್ತಿಯಲ್ಲಿ .ಇಬ್ಬರು…
ಜೈಪುರ: ಐಪಿಎಲ್ 2024ರ ನಾಲ್ಕನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯ ರಾಜಸ್ಥಾನದ ತವರು ಮೈದಾನ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. https://ainlivenews.com/harshit-rana-was-fined-for-hitting-mayank-agarwal/ ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ಆರಂಭಿಸಿದೆ. ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಕ್ರೀಸ್ನಲ್ಲಿದ್ದಾರೆ. ರಾಜಸ್ಥಾನ್ ರಾಯಲ್ಸ್ ಎರಡನೇ ಓವರ್ನಲ್ಲಿ ಮೊದಲ ವಿಕೆಟ್ ಕಳೆದುಕೊಂಡಿದೆ. ನವೀನ್ ಉಲ್ ಹಕ್ ಅವರು ಜೋಸ್ ಬಟ್ಲರ್ ಅವರನ್ನು ಔಟ್ ಮಾಡಿದ್ದಾರೆ. ಸದ್ಯ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಸಂಜು ಸ್ಯಾಮ್ಸನ್ ಕ್ರೀಸ್ನಲ್ಲಿದ್ದಾರೆ. ರಾಜಸ್ಥಾನ ಸಂಭಾವ್ಯ ತಂಡ ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿಕೆಟ್ ಕೀಪರ್), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ಧ್ರುವ್ ಜುರೆಲ್, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್, ಟ್ರೆಂಟ್ ಬೌಲ್ಟ್. ಲಕ್ನೋದ ಸಂಭಾವ್ಯ ತಂಡ…
ಜೈಪುರ: ಸ್ಪೋಟಕ ಬ್ಯಾಟರ್ಗಳು, ತಜ್ಞ ಸ್ಪಿನ್ನರ್ಗಳನ್ನೊಳಗೊಂಡ ರಾಜಸ್ಥಾನ ರಾಯಲ್ಸ್ ಈ ಬಾರಿ ಐಪಿಎಲ್ನಲ್ಲಿ ಶುಭಾರಂಭದ ನಿರೀಕ್ಷೆಯಲ್ಲಿದ್ದು, ಆರಂಭಿಕ ಪಂದ್ಯದಲ್ಲಿ ಭಾನುವಾರ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಆಡಲಿದೆ. ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಗಾಯಗೊಂಡ ಬಳಿಕ ಕ್ರಿಕೆಟ್ನಿಂದ ದೂರ ಉಳಿದಿರುವ ಲಖನೌ ನಾಯಕ ಕೆ.ಎಲ್. ರಾಹುಲ್ ಆಡಲು ಫಿಟ್ ಆಗಿದ್ದಾರೆ. ಆದರೆ ವಿಕೆಟ್ ಕೀಪರ್ ಕಾರ್ಯ ನಿರ್ವಹಿಸುವ ಸಾಧ್ಯತೆ ಕಡಿಮೆ. ಹೀಗಾಗಿ ಡಿ ಕಾಕ್ ಅಥವಾ ಪೂರನ್ ಜವಾಬ್ದಾರಿ ಹೊರಬೇಕಿದೆ. ದೇವದತ್ ಪಡಿಕ್ಕಲ್, ಆಯುಶ್ ಬದೋನಿ ಪ್ರಮುಖ ಆಕರ್ಷಣೆ. ಮತ್ತೊಂದೆಡೆ ಅಭೂತಪೂರ್ವ ಲಯದಲ್ಲಿರುವ ಯಶಸ್ವಿ ಜೈಸ್ವಾಲ್, ಸ್ಫೋಟಕ ಆಟಕ್ಕೆ ಹೆಸರುವಾಸಿಯಾದ ಜೋಸ್ ಬಟ್ಲರ್, ಶಿಮ್ರೊನ್ ಹೆಟ್ಮೇಯರ್, ರೋವ್ಮನ್ ಪೋವೆಲ್ ರಾಜಸ್ಥಾನದ ಆಧಾರಸ್ತಂಭ. ನಾಯಕ ಸಂಜು ಸ್ಯಾಮ್ಸನ್, ಧ್ರುವ್ ಜುರೆಲ್ ಕೂಡಾ ಅಬ್ಬರಿಸಬಲ್ಲರು. ಇನ್ನು ಅನುಭವಿ ಸ್ಪಿನ್ನರ್ ಗಳಾದ ರವಿಚಂದ್ರನ್ ಅಶ್ವಿನ್, ಯುಜುವೇಂದ್ರ ಚಹಲ್ ತಂಡದ ಟ್ರಂಪ್ಕಾರ್ಡ್. ವೇಗಿಗಳಾದ ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಆವೇಶ್ ಖಾನ್ ಮೇಲೂ ಭಾರೀ ನಿರೀಕ್ಷೆಯಿದೆ. ಆಟಗಾರರ ಪಟ್ಟಿ…
ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ಹೈದರಾಬಾದ್ ವಿರುದ್ಧ ನಡೆದ ಪಂದ್ಯ ದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಹರ್ಷಿತ್ ರಾಣಾಗೆ (Harshit Rana) ಭಾರೀ ದಂಡ ವಿಧಿಸಲಾಗಿದೆ. ಸನ್ ರೈಸರ್ಸ್ ಹೈದರಾಬಾದ್ನ ಆಟಗಾರರಾದ ಮಯಾಂಕ್ ಅಗರ್ವಾಲ್ (Mayank Agarwal) ಹಾಗೂ ಹೆನ್ರಿಕ್ ಕ್ಲಾಸೆನ್ (Heinrich Klaasen) ಅವರು ಮೈದಾನ ತೊರೆಯುವಾಗ ಹರ್ಷಿತ್ ರಾಣಾ ಫ್ಲೈಯಿಂಗ್ ಕಿಸ್ ಸನ್ನೆ ಮಾಡುವ ಮೂಲಕ ದಂಡಕ್ಕೆ ಗುರಿಯಾಗಿದ್ದಾರೆ. ಕೆಕೆಆರ್ ಹೀರೋ ವಿಲನ್ ಆಯ್ತು ಕೈಸನ್ನೆ: ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಯುವ ಆಟಗಾರ ಹರ್ಷಿತ್ ರಾಣಾ ತಮ್ಮ ಅಂತಿಮ ಓವರ್ನಲ್ಲಿ ನೀಡಿದ ಪ್ರದರ್ಶನದಿಂದ ಕೆಕೆಆರ್ ತಂಡದ ಪಾಲಿನ ಹೀರೋ ಆಗಿ ಅಭಿಮಾನಿಗಳ ಮನ ಗೆದ್ದಿದ್ದರು. ಆದ್ರೆ ಪಂದ್ಯದ ಮಧ್ಯೆ ಅವರ ನಡವಳಿಕೆ ಹಲವರ ಅಸಮಾಧಾನಕ್ಕೂ ಕಾರಣವಾಯಿತು. ಮೈದಾನದಲ್ಲಿ ಅಶಿಸ್ತು ವರ್ತನೆ ತೋರಿಸಿದ ಕಾರಣ, https://ainlivenews.com/good-news-for-cancer-patients-72-lakhs-rs-cancer-medicine-will-now-be-available-for-3-lakhs/ ಹರ್ಷಿತ್ ರಾಣಾಗೆ ಪಂದ್ಯದ ಒಟ್ಟು ಶುಲ್ಕದ ಶೇ.60 ರಷ್ಟು…
ಬೆಂಗಳೂರು: ರಾಜ್ಯ ಚುನಾವಣಾ ಆಯೋಗಕ್ಕೆ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ದೂರು ನೀಡಿದೆ. ಶಾಸಕರನ್ನ ಸೆಳೆಯೋದಕ್ಕೆ ಬಿಜೆಪಿ 50 ಕೋಟಿ ಆಫರ್ ಕೊಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಹಿಂದಿ, ಇಂಗ್ಲಿಷ್ ಬರಲ್ಲ ಅನ್ನೋ ಜಯಪ್ರಕಾಶ್ ಹೆಗ್ಡೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ಮೀನಾ ಅವರಿಗೆ ದೂರು ನೀಡಲಾಗಿದೆ. https://ainlivenews.com/good-news-for-cancer-patients-72-lakhs-rs-cancer-medicine-will-now-be-available-for-3-lakhs/ ಬಿಜೆಪಿಯವರು ಒಬ್ಬ ಶಾಸಕನಿಗೆ ₹50 ಕೋಟಿ ಆಫರ್ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು. ಚುನಾವಣಾ ಖರ್ಚು ನಾವೇ ನೋಡಿಕೊಳ್ತೀವಿ ಅಂತಿದ್ದಾರೆ. ಸೋಲಿನ ಭಯದಿಂದ ಕಾಂಗ್ರೆಸ್ ಖಾತೆ ಫ್ರೀಜ್ ಮಾಡಿದ್ದಾರೆ. ಕಾಂಗ್ರೆಸ್ನವರು 1 ರೂಪಾಯಿ ಬಳಸದಂತೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಆರೋಪಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ…