ಬೆಂಗಳೂರು: ಲೋಕಸಭೆ ಚುನಾವಣೆಗೆ (Lok Sabha Election 2024) ಅಖಾಡ ಸಿದ್ಧವಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ (Congress) ಲೋಕಸಭೆಗೆ ಸಿದ್ಧತೆ ಮಾಡಿಕೊಳ್ತಿದೆ. ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಸಾರ್ವತ್ರಿಕ ಚುನಾವಣೆ ಅಖಾಡಕ್ಕಿಳಿದಿರುವುದು ಕುತೂಹಲ ಮೂಡಿಸಿದೆ. BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ! 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿತ್ತು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ‘ಕೈ’ ಹಿಡಿದಿದ್ದು ಬೆಂಗಳೂರು ಗ್ರಾಮಾಂತರ ಏಕೈಕ ಕ್ಷೇತ್ರ ಮಾತ್ರ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಡಿ.ಕೆ.ಸುರೇಶ್ (D.K.Suresh) ಗೆಲುವು ಸಾಧಿಸಿ ಪಾರ್ಲಿಮೆಂಟ್ ಪ್ರವೇಶಿಸಿದ್ದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ 3 ಬಾರಿ ಡಿ.ಕೆ.ಸುರೇಶ್ ಆಯ್ಕೆಯಾಗಿದ್ದಾರೆ. ಡಿಕೆ ಬ್ರದರ್ಸ್ ಭದ್ರಕೋಟೆಯನ್ನು ಹೇಗಾದರು ಮಾಡಿ ಭೇದಿಸಬೇಕು ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಪಣ ತೊಟ್ಟಂತಿದೆ. ಹೀಗಾಗಿ ವೈದ್ಯಕೀಯ ಕ್ಷೇತ್ರದಲ್ಲಿ ಖ್ಯಾತಿ…
Author: AIN Author
ಬೆಂಗಳೂರು: ರಾಜ್ಯದಲ್ಲಿ (Karnataka) ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗುವ (Rain) ಸಾಧ್ಯತೆಯಿದೆ. ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ BIGG News: ದಳಪತಿಗಳಿಗೆ ಮಣಿದ ಬಿಜೆಪಿ ಹೈಕಮಾಂಡ್: ಕೋಲಾರ, ಹಾಸನ, ಮಂಡ್ಯ ಜೆಡಿಎಸ್ ಪಾಲು! ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ!
ಕೊಡಗು: ಇಂದು ಕಾಡಾನೆ ದಾಳಿಗೆ ಮೃತಪಟ್ಟ ಕಕ್ಕಬ್ಬೆ ನಾಲಡಿ ಗ್ರಾಮದ ನಿವಾಸಿ ಕಂಬೆಯಂಡ ರಾಜ ದೇವಯ್ಯ ಅವರ ಮನೆಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಭೇಟಿ ನೀಡಿ ಘಟನೆಯ ಬಗ್ಗೆ ವಿವರ ಪಡೆದುಕೊಂಡು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. https://ainlivenews.com/good-news-for-women-you-will-get-3-lakh-rupees-to-start-your-own-business-apply-today/ ವನ್ಯಜೀವಿಗಳ ದಾಳಿ ತಡೆಗೆ ಶಾಶ್ವತ ಪರಿಹಾರದ ಅಗತ್ಯವಿದೆ ಎಂದರು. ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಡಿಕೇರಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್,ಕಿರಣ್ ಹಾಗೂ ನಾಪೋಕ್ಲು, ಕಕ್ಕಬ್ಬೆ ಭಾಗದ ಬಿಜೆಪಿ ಮುಖಂಡರು ಹಾಜರಿದ್ದರು.
ಬೆಂಗಳೂರು : ನಮ್ಮ ಗ್ಯಾರಂಟಿಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಅಂತ ಹೆಸರಿಟ್ಟಿದ್ದಾರೆ ಎಂದು ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಮಾವೇಶದಲ್ಲಿ ಮಾತನಾಡಿ, ಭಾರತದ ಪ್ರಧಾನಿಗಳಲ್ಲಿ ಅತ್ಯಂತ ಹೆಚ್ಚು ಸುಳ್ಳು ಹೇಳಿದವರು ನರೇಂದ್ರ ಮೋದಿ ಅವರು ಎಂದು ಕುಟುಕಿದರು. BIGG News: ದಳಪತಿಗಳಿಗೆ ಮಣಿದ ಬಿಜೆಪಿ ಹೈಕಮಾಂಡ್: ಕೋಲಾರ, ಹಾಸನ, ಮಂಡ್ಯ ಜೆಡಿಎಸ್ ಪಾಲು! ಅಚ್ಛೆ ದಿನ್ ಬಂತಾ? ರೈತರ ಆದಾಯ ದುಪ್ಪಟ್ಟು ಮಾಡಿದ್ರಾ? ಡೀಸೆಲ್, ಪೆಟ್ರೋಲ್ ಹಾಗೂ ಗ್ಯಾಸ್ ಬೆಲೆ ಕಡಿಮೆ ಮಾಡ್ತೀವಿ ಅಂದ್ರು ಮಾಡಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸ್ತೀವಿ ಅಂದ್ರು ಸೃಷ್ಟಿಸಿದ್ರಾ? ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ್ರು ಹಾಕಿದ್ರಾ? ಎಂದು ಪ್ರಶ್ನಿಸಿದರು. BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ! ನಾವು ಬಿಜೆಪಿ ಅವರಂತೆ ಕೇವಲ ಭಾವನಾತ್ಮಕವಾಗಿ…
ದೊಡ್ಡಬಳ್ಳಾಪುರ : ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು ಹೋರಟಿರುವ ಭೂಮಿಗೆ ಸೂಕ್ತ ಪರಿಹಾರ ನೀಡದ ಹೊರತು ಭೂಮಿಯನ್ನು ಬಿಡುವ ಪ್ರಶ್ನೆಯೇ ಇಲ್ಲ, ಏಳು ದಿನಗಳ ಗಡುವು ಪಡೆದಿರುವ ಅಧಿಕಾರಿಗಳು ನಮ್ಮ ಭೂಮಿಗೆ ಸೂಕ್ತ ದರ ನಿಗದಿ ಮಾಡದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲಾಗುವುದು ಎಂದು ಮಾಜಿ ಟಿಎಪಿಎಂಸಿಎಸ್ ಅಧ್ಯಕ್ಷರಾದ ಎಂ.ಆನಂದ್ ತಿಳಿಸಿದರು. ತಾಲ್ಲೂಕಿನ ಕೊನಘಟ್ಟ ಗ್ರಾಮದ ಕಾಮನಬಂಡೆಯ ಸಮೀಪ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅವೈಜ್ಞಾನಿಕ ದರ ನಿಗದಿ ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವದಿ ಧರಣಿ 68 ದಿನಗಳು ಮುಟ್ಟಿದ್ದು, ಇಂದು ಧರಣಿ ಸ್ಥಳದಲ್ಲಿ ನೆಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಅಧಿಕಾರಿಗಳ ಜೊತೆಗೆ ಈಗಾಗಲೇ 4-5 ಬಾರಿ ಸಮಾಲೋಚನಾ ಸಭೆ ನಡೆಸಿದ್ದೇವೆ. ಪ್ರತಿಭಾರಿ ಸಭೆ ಕರೆದಾಗಲೂ ಅಧಿಕಾರಿಗಳು ಕೇಳಿದ ಪ್ರಶ್ನೆಗಳನ್ನೇ ಕೇಳುತ್ತಾರೆ. ಸಭೆಯ ಕೊನೆಗೆ ನಾವು ಬೆಲೆ ನಿಗದಿ ಮಾಡಲು ಸಾಧ್ಯವಿಲ್ಲ, ಭೋರ್ಡ್ ಸಭೆ ಕರೆದು ತೀರ್ಮಾನ ಮಾಡತ್ತೇವೆ ಎಂದು ಹೇಳಿ ಕಳುಹಿಸುತ್ತಾರೆ ಎಂದು ಆರೋಪಿಸಿದರು. ನಮ್ಮ ಗ್ರಾಮಗಳಲ್ಲಿ ಈಗಾಗಲೇ ಎತ್ತಿನಹೊಳೆ ಕಾಮಗಾರಿ ನೆಡೆಯುತ್ತಿದ್ದು. ಕಾಮಗಾರಿಗೆ…
ಬೆಂಗಳೂರು: ಲೋಕಸಭಾ ಟಿಕೆಟ್ ಘೋಷಣೆಯಾದ್ಮೇಲೆ ರಾಜ್ಯ ಬಿಜೆಪಿಯಲ್ಲಿ ಬುಗಿಲೆದ್ದಿರುವ ಬಂಡಾಯದ ಬಾವುಟ ಸದ್ಯಕ್ಕೆ ತಣ್ಣಗಾಗುವಂತೆ ಕಾಣ್ತಿಲ್ಲ. ಅಸಮಾಧಾನ ಶಮನಕ್ಕೆ ಮಾಜಿ ಸಿಎಂ ಯಡಿಯೂರಪ್ಪರೇ ಅಖಾಡಕ್ಕಿಳಿದ್ರು ನೋ ರೆಸ್ಪಾನ್ಸ್. ಮಾಧುಸ್ವಾಮಿ, ಈಶ್ವರಪ್ಪ, ಕರಡಿ ಸಂಗಣ್ಣ, ಸದಾನಂದಗೌಡರ ಅಸಮಾಧಾನ ಕಡಿಮೆಯಾಗೋ ಸಾಧ್ಯತೆಗಳೇ ಕಾಣ್ತಿಲ್ಲ. ಯಡಿಯೂರಪ್ಪ ಪ್ಯಾಮಿಲಿ ವಿರುದ್ಧ ಹೆಚ್ಚಾಗ್ತಿರುವ ಆಕ್ರೋಶದ ಕಿಚ್ಚು ಪಕ್ಷಕ್ಕೆ ಡ್ಯಾಮೇಜ್ ಮಾಡ್ತಿದ್ದು, ಮೈತ್ರಿಯ ಕಗ್ಗಂಟು, 5 ಕ್ಷೇತ್ರಗಳ ಟಿಕೆಟ್ ಗೊಂದಲ ಕೇಸರಿ ಟೀಂಗೆ ಕಗ್ಗಂಟಾಗಿದೆ…. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶುರುವಾದ ಬಿಜೆಪಿಯ ಬಂಡಾಯ ಇದೀಗ ಲೋಕಸಭಾ ಚುನಾವಣೆಯಲ್ಲೂ ಜೋರಾಗಿದೆ. ಲೋಕಸಭಾ ಟಿಕೆಟ್ ಘೋಷಣೆಯಾದ್ಮೇಲೆ ಬಿಜೆಪಿಯ ಹಲವು ನಾಯಕರು ಪಕ್ಷದ ವಿರುದ್ಧವೇ ಅಸಮಾಧಾನ ಸ್ಪೋಟಿಸಿದ್ದಾರೆ, ಮಾಜಿ ಸಚಿವರಾದ ಈಶ್ವರಪ್ಪ, ಮಾಧುಸ್ವಾಮಿ, ಸಂಸದ ಕರಡಿ ಸಂಗಣ್ಣ, ಮಾಜಿ ಸಿಎಂ ಸದಾನಂದಗೌಡ ಬಂಡಾಯದ ಭಾವುಟ ಹಾರಿಸಿದ್ದು ಎಲ್ಲರಿಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬವೇ ಟಾರ್ಗೆಟ್ ಆಗಿದೆ. ಮಾಜಿ ಸಚಿವ ಮಾಧುಸ್ವಾಮಿ ಬಂಡಾಯ ಶಮನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅಖಾಡಕ್ಕಿಳಿದಿದ್ದಾರೆ ತುರುವೇಕೆರೆ ಶಾಸಕ ಮಸಾಲ ಜಯರಾಂ…
ಬೆಂಗಳೂರು: ಕಮಲ ಕೆರೆಯಲ್ಲಿದ್ದರೆ ಚೆಂದ ತೆನೆ ಹೊಲದಲ್ಲಿದ್ದರೆ ಚೆಂದ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಬಿಜೆಪಿ,ಜೆಡಿಸ್ನ್ನು ಲೇವಡಿ ಮಾಡಿದ್ದಾರೆ. ಗ್ಯಾರಂಟಿ ಯಶಸ್ವಿ ಸಮಾವೇಶದಲ್ಲಿ ಮಾತನಾಡಿದ ಅವರು,ನಾವು ನಿಮಗೆ ಶಕ್ತಿ ಕೊಟ್ಟಿದ್ದೇವೆ ನೀವು ನಮಗೆ ಯಾವ ಶಕ್ತಿ ಕೊಡ್ತೀರಾ..? 15 ಜನ ಮನೆ ಮನೆಗೆ ಹೋಗಬೇಕು ಎಲ್ಲ ಸದಸ್ಯರನ್ನ ಸೇರಿಸಿಕೊಂಡು ಹೋಗಬೇಕು.ಕಮಲ ಕೆರೆಯಲ್ಲಿದ್ದರೆ ಚೆಂದ ತೆನೆ ಹೊಲದಲ್ಲಿದ್ದರೆ ಚೆಂದ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು ಪರೋಕ್ಷವಾಗಿ ಬಿಜೆಪಿ,ಜೆಡಿಎಸ್ ವಿರುದ್ಧ ಲೇವಡಿ ಮಾಡಿ ಅವರನ್ನ ಸೋಲಿಸಿ ಮನೆಗೆ ಕಳಿಸಿ ಎಂದರು. BIGG News: ದಳಪತಿಗಳಿಗೆ ಮಣಿದ ಬಿಜೆಪಿ ಹೈಕಮಾಂಡ್: ಕೋಲಾರ, ಹಾಸನ, ಮಂಡ್ಯ ಜೆಡಿಎಸ್ ಪಾಲು! ನಮ್ಮದು ಗೃಹ ಲಕ್ಷ್ಮಿ, ಅವರದ್ದು ಮಹಾಲಕ್ಷ್ಮಿ ಶ್ರಮಿಕ ನ್ಯಾಯ ನಮ್ಮದು ಬೆಳೆ ವಿಮೆ,ಸಾಲಮನ್ನಾ ಎಲ್ಲವೂ ನಮ್ಮ ಮುಂದಿದೆ ರಾಮಮಂದಿರ ದೇವಸ್ಥಾನ ಗಾಳಿ ಯಾವುದೂ ಇಲ್ಲ ನಾವು ಅರ್ಚಕರಿಗೆ ನೆರವು ಕೊಟ್ಟೆವು ಅದನ್ನ ಬಿಜೆಪಿ,ಜೆಡಿಎಸ್ ವಿರೋಧ ಮಾಡಿದ್ರು ಅದನ್ನ ಗೌರ್ನರ್ ವಾಪಸ್ ಕಳಿಸಿದ್ರು…
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ ಇಲ್ಲ.ಡಿ.ಕೆ.ಶಿವಕುಮಾರ ಹಾಗೂ ಸಿದ್ಧರಾಮಯ್ಯ ಕಚ್ಚಾಡುತ್ತಿದ್ದಾರೆ. ಹೆಚ್ಚಿನ ಡಿಸಿಎಂಗಳನ್ನು ಮಾಡಿ ಡಿ.ಕೆ.ಶಿವಕುಮಾರನನ್ನು ಮೂಲೆಗುಂಪು ಮಾಡುವ ತಂತ್ರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾನುನಾತ್ಮಕವಾಗಿಯೂ ಡಿ.ಕೆ. ಶಿವಕುಮಾರ್ ಗೆ ತೊಂದರೆ ಕೊಡುವ ಪ್ಲಾನ್ ಮಾಡಲಾಗಿದೆ. ಅದರಲ್ಲಿ ಸಫಲವಾಗದಿದ್ದರೂ ಪ್ಲಾನ್ ಮಾಡುತ್ತಲೇ ಇದ್ದಾರೆ. ಗ್ಯಾರಂಟಿ ಎಂದು ಹೇಳುವ ರಾಜ್ಯ ಸರ್ಕಾರಕ್ಕೇ ಗ್ಯಾರಂಟಿ ಇಲ್ಲ ಎಂದರು. ಮಂಡ್ಯ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸುಮಲತಾ ಅವರ ಜೊತೆ ನಮ್ಮ ರಾಷ್ಟ್ರೀಯ ನಾಯಕರು ಮಾತನಾಡಿದ್ದಾರೆ. ಒಂದೆರಡು ದಿನಗಳಲ್ಲಿ ಎಲ್ಲ ಸಮಸ್ಯೆ ಬಗೆಹರಿಯುತ್ತೆ ಎಂದ ಅವರು, ಕನಿಷ್ಠ 20 ಸ್ಥಾನ ಗೆಲ್ಲದಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತೆ ಎಂಬ ಶಾಸಕ ಎಸ್.ಆರ್ ಶ್ರೀನಿವಾಸ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಅವರು 20 ಕ್ಷೇತ್ರ ಅಂತಾ ಯಾಕೆ ಹೇಳುತ್ತಿದ್ದಾರೋ ಗೊತ್ತಿಲ್ಲ. ಐದಕ್ಕಿಂತ ಹೆಚ್ಚು…
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮುಲ್ಲನ್ಪುರದ ಮಹಾರಾಜ ಯದ್ವೇಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಇಂದು ಐಪಿಎಲ್ 17ನೇ ಆವೃತ್ತಿಯ ಮೊದಲ ಡಬಲ್ ಹೆಡರ್. ಮೊದಲ ಪಂದ್ಯದಲ್ಲಿ ಪಂಜಾಬ್ ಮತ್ತು ಡೆಲ್ಲಿ ಕಾದಾಡಲಿವೆ. ಭಾರತದ ಸ್ಟಾರ್ ಬ್ಯಾಟರ್ ರಿಷಭ್ ಪಂತ್ 1 ವರ್ಷ 2 ತಿಂಗಳ ರಿಹಾಬ್ ಹಾಗೂ ರಿಕವರಿ ಪ್ರಕ್ರಿಯೆಯ ನಂತರ ಕ್ರಿಕೆಟ್ ಮೈದಾನಕ್ಕೆ ಇಳಿಯುತ್ತಿದ್ದಾರೆ. 2022ರ ಡಿಸೆಂಬರ್ 30ರಂದು ಉತ್ತರಖಂಡದ ರೂರ್ಕಿ ಬಳಿ ಭೀಕರ ಕಾರು ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ರಿಷಬ್ ಪಂತ್(ನಾಯಕ / ವಿಕೆಟ್ ಕೀಪರ್), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಶಾಯ್ ಹೋಪ್, ರಿಕಿ ಭುಯಿ, ಟ್ರಿಸ್ಟಾನ್ ಸ್ಟಬ್ಸ್, ಅಕ್ಷರ್ ಪಟೇಲ್, ಸುಮಿತ್, ಕುಲ್ದೀಪ್ ಯಾದವ್, ಖಲೀಲ್, ಇಶಾಂತ್ ಶರ್ಮಾ. ಪಂಜಾಬ್ ಕಿಂಗ್ಸ್ ಶಿಖರ್ ಧವನ್ (ನಾಯಕ),…
ಬೆಂಗಳೂರು: ಬಿಜೆಪಿ ಬಾಗಿಲು ತೆಗೆಯೋದಕ್ಕೆ ಡಿಕೆ ಶಿವಕುಮಾರ್ ಕಾಯ್ತಿದ್ದಾರೆ. ಬಾಗಿಲು ತೆಗೆದ್ರೆ 40 ಜನರ ಜತೆ ಬಿಜೆಪಿಗೆ ಬರಲಿದ್ದಾರೆ ಆದ್ರೆ ನಾವು ಮಾತ್ರ ಬಾಗಿಲು ತೆಗೀತಿಲ್ಲ ಎಂದು ಮುನಿರತ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತಿಗೆ ಮುನಿರತ್ನ ತಿರುಗೇಟು ನೀಡಿದ್ದಾರೆ. BIGG News: ದಳಪತಿಗಳಿಗೆ ಮಣಿದ ಬಿಜೆಪಿ ಹೈಕಮಾಂಡ್: ಕೋಲಾರ, ಹಾಸನ, ಮಂಡ್ಯ ಜೆಡಿಎಸ್ ಪಾಲು! ಕಾಂಗ್ರೆಸ್ಗೆ ನಾನು ಕೆಲವರನ್ನ ಕಳಿಸ್ತಿದ್ದೇನೆ ಎಂದು ಆರೋಪ ಮಾಡುತ್ತಿದ್ಧಾರೆ.ಅದು ನಾನಲ್ಲ ಅವರೇ ಬಿಜೆಪಿಗೆ ಬರೋದಕ್ಕೆ ರೆಡಿ ಇದ್ದಾರೆಂದು ಕಿಡಿಕಾರಿದ್ದಾರೆ. ನಮ್ಮ ಕ್ಷೇತ್ರದ ಕಾಂಗ್ರೆಸ್ ಮಹಿಳಾ ಮುಖಂಡೆ ಮೇಲೆ ಹಲ್ಲೆಯಾಗಿದೆ.ನನ್ನ ಗಮನಕ್ಕೆ ಈ ವಿಚಾರ ಬಂದಿದೆ.ಆಡಿಯೋ ಕ್ಲಿಪಿಂಗ್ ಬಿಡುಗಡೆ ಆಗಿದೆ.ಆರ್.ಆರ್ ನಗರದಲ್ಲಿ ಗಲಭೆ ವಿಕೋಪಕ್ಕೆ ಹೋಗಿದೆ.ಬೆಂಗಳೂರು ಗ್ರಾಮಾಂತರ ಲೋಕಸಭೆಗೆ ಪ್ಯಾರಾ ಮಿಲಿಟರಿ ಕೊಡಬೇಕು. ಕಾಂಗ್ರೆಸ್ ನಾಯಕರು ಭೂಗತ ಪಾತಕಿಗಳನ್ನ ಜಾಮೀನು ನೀಡಿ ಕರೆತರ್ತಿದ್ದಾರೆ.ರಾಜ್ಯಾಧ್ಯಕ್ಷರ ಮೂಲಕ ಪತ್ರ ನೀಡಿ ಕೊಡ್ತೀವಿ ಅಂತ ಹೇಳಿದ್ದಾರೆ.ನಾನು ಮಾತನಾಡಿದ್ದೇನೆ, ನಮ್ಮ ಅಧ್ಯಕ್ಷ ವಿಜಯೇಂದ್ರ ಶೀಘ್ರವೇ ಪತ್ರ ಬರೆಯಲಿದ್ದಾರೆ ಎಂದಿದ್ದರು.