ಬೆಂಗಳೂರು : ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಾ ಇದೆ. ಇದರ ನಡುವೆ ಈಗ ಸಸ್ಯಕಾಶಿ ಲಾಲ್ಬಾಗ್ಗೂ ಕೂಡ ಜಲಕ್ಷಾಮ ಬಿಸಿ ತಟ್ಟಿದೆ. BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ! ಲಾಲ್ಬಾಗ್ ಒಟ್ಟು 240 ಎಕರೆ ವಿಸ್ತೀರ್ಣವಿದ್ದು, ಇಲ್ಲಿ ಒಟ್ಟು 18,000 ಸಸ್ಯಗಳು ಹಾಗೂ 3,000ಕ್ಕೂ ಹೆಚ್ಚು ಜಾತಿಯ ಮರಗಳಿವೆ. ಈಗ ನೀರಿಲ್ಲದೆ ಇವುಗಳ ನಿರ್ವಹಣೆ ಕಷ್ಟಕರವಾಗುತ್ತಿದೆ. ಅದರಲ್ಲೂ ವಿಶೇಷವಾಗಿ ವಿದ್ಯುತ್ ಪೂರೈಕೆಯಲ್ಲಿ ಏರಿಳಿತವಾಗುತ್ತಿರುವುದರಿಂದ ಒಳಚರಂಡಿ ಸಂಸ್ಕರಣಾ ಘಟಕದಿಂದ ಬರುವ 1.5 ಎಂಎಲ್ಡಿ ನೀರು ಪಡೆಯುವುದು ಕಷ್ಟಕರವಾಗುತ್ತಿದೆ. ಅಲ್ಲದೇ, ಉದ್ಯಾನವನದ ಐದು ಬೋರ್ ವೆಲ್ಗಳ ನೀರು ಕೂಡ ಕಡಿಮೆಯಾಗಿದೆ. ಲಾಲ್ಬಾಗ್ನ ಬೋರ್ವೆಲ್ಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, STPಯಿಂದ ಸಂಸ್ಕರಿಸಿದ ನೀರಿನಿಂದ ನಿರ್ವಹಿಸುತ್ತಿದ್ದೇವೆ ಎಂದು ಲಾಲ್ಬಾಗ್ ಜಂಟಿ ನಿರ್ದೇಶಕ ಎಂ. ಜಗದೀಶ್ ತಿಳಿಸಿದ್ದಾರೆ. ಇನ್ನು ಮಾರ್ಚ್ನಿಂದ ಏಪ್ರಿಲ್ ಅಂತ್ಯದವರೆಗಿನ ತೋಟಗಾರಿಕೆ ಇಲಾಖೆಗೆ ನಿರ್ಣಾಯಕವೆಂದು ಪರಿಗಣಿಸಲಾಗುತ್ತದೆ. ಈ ಋತುವಿನಲ್ಲಿ…
Author: AIN Author
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಾಯಿ ಸಾಕುವವರಿರ ಸಂಖ್ಯೆ ಹೆಚ್ಚಾಗಿದ್ದು ಅದೇ ರೀತಿ ಹಾಗೆ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುವವರಿಗೆ ಈಗ ಮತ್ತೊಂದು ಶಾಕ್ ಕೊಟ್ಟಿದೆ. BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ! ಹೌದು… ಏನಾಪ್ಪ ಅಂದ್ರೆ ನಿಮ್ಮ ಶ್ವಾನಗಳ ತ್ಯಾಜ್ಯ ಇನ್ಮುಂದೆ ನಿಮ್ಮದೇ ಹೊಣೆ ಎಂದ ಪಾಲಿಕೆ ಇಷ್ಟು ದಿನ ಕಬ್ಬನ್ ಪಾರ್ಕ್ ಗೆ ಇದ್ದ ರೂಲ್ಸ್ ಬೆಂಗಳೂರಿನಾದ್ಯಂತ ಜಾರಿಯಾಗುವುದು ಫುಟ್ ಪಾತ್, ರಸ್ತೆಗಳಲ್ಲಿ ವಾಕಿಂಗ್ ಮಾಡೋ ವೇಳೆ ನಿಮ್ಮ ಶ್ವಾನ ಪಾಟಿ ಮಾಡಿದ್ದಲ್ಲಿ ತ್ಯಾಜ್ಯದ ಕ್ಲಿನಿಂಗ್ ನಿಮ್ಮ ಹೊಣೆ ಎಂದು ಆದೇಶ ಹೊರಡಿಸಿದೆ. ಶ್ವಾನದ ಮಾಲೀಕರು ತ್ಯಾಜ್ಯವನ್ನ ತಾವೇ ಕ್ಲೀನ್ ಮಾಡಬೇಕು ಶ್ವಾನಗಳನ್ನ ವಾಕಿಂಗ್ ಕರೆತರುವಾಗ ಕ್ಲೀನಿಂಗ್ ಬ್ಯಾಗ್ ತರಬೇಕು ನಗರದಲ್ಲಿ ಫುಟ್ ಪಾತ್ ಹಾಗೂ ರಸ್ತೆಯಲ್ಲಿ ಶ್ವಾನಗಳ ತ್ಯಾಜ್ಯ ಹೆಚ್ಚಿದ ಹಿನ್ನೆಲೆ ಪಾದಾಚಾರಿಗಳಿಗೆ ಸಮಸ್ಯೆ ಯಾಗ್ತಿತ್ತು ಈ ಹಿನ್ನೆಲೆ ಪಶುಸಂಗೋಪನಾ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ಗದಗ: 2024ರ ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದಾರೆ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಚೆಕ್ ಪೋಸ್ಟ್ ನಲ್ಲಿ ಸಾರಿಗೆ ಬಸ್ ಮೂಲಕ ಹಣ ತಗೆದುಕೊಂಡು ಹೊರಟ್ಟಿದ್ದ ವ್ಯಕ್ತಿಯನ್ನು ತಡೆದು 3 ಲಕ್ಷ ಸೀಜ್ ಮಾಡಿದ್ದಾರೆ. ಸೂಕ್ತ ದಾಖಲೆ ಇಲ್ಲದ ಕಾರಣ ಹಣ ಸೀಜ್ ಮಅಡಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.ಅ
ಹಾಸನ: , ದಲಿತ ಸಮುದಾಯ ಮನಸ್ಸು ಮಾಡಿದರೇ ರಾಜಕೀಯದಲ್ಲಿ ಬದಲಾವಣೆ ತರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ಹಾಸನದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಲಿತ ಸಮುದಾಯ ಮನಸ್ಸು ಮಾಡಿದರೇ ರಾಜಕೀಯದಲ್ಲಿ ಬದಲಾವಣೆ ತರಬಹುದು. ಶಿವಲಿಂಗೇಗೌಡರ ಕ್ಷೇತ್ರದಲ್ಲಿ 20 ಸಾವಿರ ಒಕ್ಕಲಿಗರು ಇರಬಹುದು. ದಲಿತರು ಮನಸ್ಸು ಮಾಡಿದರೇ ಏನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ನಾನು ಮತ್ತು ಶಿವಲಿಂಗೇಗೌಡರೇ ಉದಾಹರಣೆ. ಪುಟ್ಟಸ್ವಾಮಿ ಎಂದರೆ ದೇವರಂತಹ ಮನುಷ್ಯ. ಅಂತಹ ಕುಟುಂಬದಿಂದ ಅವರ ಮೊಮ್ಮಗ ಚುನಾವಣೆಗೆ ಬಂದಿರುವುದು ನಮ್ಮ ಸೌಭಾಗ್ಯ. ಕಾಂಗ್ರೆಸ್ ನಿಂದ ಐದು ಗ್ಯಾರಂಟಿ ನೀಡಲಾಗಿದ್ದು, ಬಡ ಕುಟುಂಬಗಳಿಗೆ ಅನುಕೂಲವಾಗಿದೆ ಎಂದರು. https://ainlivenews.com/good-news-for-women-you-will-get-3-lakh-rupees-to-start-your-own-business-apply-today/ ಅನ್ನ ಭಾಗ್ಯ ಯೋಜನೆ, ಗೃಹ ಲಕ್ಷ್ಮಿ, ಸೇರಿದಂತೆ ಹತ್ತು ಹಲವಾರು ಯೋಜನೆಗಳನ್ನು ಜಾರಿ ಮಾಡಿ ಜನರ ಆಶೀರ್ವಾದ ಸಿಕ್ಕಿದೆ. ನಾನು ದೇವೇಗೌಡರ ಬಗ್ಗೆ ಟೀಕೆ ಮಾಡುವುದಿಲ್ಲ. ದಲಿತ ಸಮಾಜವಾಗಲಿ, ಯಾರೆ ಆಗಲಿ. ಕೆಳವರ್ಗ ಮತ್ತು ಮೇಲ್ವರ್ಗ ಎಂದು ಯಾರು ಮಾತನಾಡಬೇಡಿ. ಮಾತನಾಡಿದರೆ ನನಗೆ ಕೋಪ ಬರುತ್ತದೆ…
ಬೆಂಗಳೂರು: SSLC ಎಕ್ಸಾಂ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಹೌದು, 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ, ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟದ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು,2023-24ನೇ ಸಾಲಿನ 29 ಮೇ 2023 ರಿಂದ 10 ಏಪ್ರಿಲ್ 2024 ರವರೆಗಿನ ಶೈಕ್ಷಣಿಕ ವರ್ಷದ ಅವಧಿಯಲ್ಲಿ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಎಂ ಪೋಷಣ್(ಮಧ್ಯಾಹ್ನ ಉಪಾಹಾರ ಯೋಜನೆ) ಅನುಷ್ಠಾನಗೊಂಡಿರುತ್ತದೆ ಎಂದಿದ್ದಾರೆ. BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ! ಸದರಿ ವಾರ್ಷಿಕ ಕಾರ್ಯಕ್ರಮದಡಿ ಅಡುಗೆ ಕೇಂದ್ರಗಳಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಉಲ್ಲೇಖ – 1 ರ ಆದೇಶದಲ್ಲಿರುವಂತೆ SSLC ಪಬ್ಲಿಕ್ ಪರೀಕ್ಷೆಗಳು ದಿನಾಂಕ F 25.03.2024 ರಿಂದ ಪ್ರಾರಂಭಗೊಂಡು ದಿನಾಂಕ: 06.04.2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು SSLC ಪರೀಕ್ಷಾ ಕೇಂದ್ರಗಳಲ್ಲಿ…
ಬಾಗಲಕೋಟೆ: ಪಕ್ಷಕ್ಕೆ ಬೆಲೆ ಕೊಡ್ತೀನಿ, ರುಂಡ ಬೇಕಾದ್ರೂ ಕೊಡುತ್ತೇನೆ. ವೈಯಕ್ತಿಕವಾಗಿ ಬಂದರೆ ಯಾವ ಮಗನಿಗೂ ನಾನು ಬಗ್ಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ವಿಜಯಾನಂದ ಹೇಳಿದ್ದಾರೆ. ನಗರದಲ್ಲಿ ನಡೆದ ವೀಣಾ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಂಗ ಬಂದರೆ ರಾಜಕೀಯದಲ್ಲಿ ಯಾರು ಏನಾಗುತ್ತಾರೆ, ಯಾರಿಗೆ ಗೊತ್ತಿದೆ. 50 ವರ್ಷ ಕಾಂಗ್ರೆಸ್ ಪಕ್ಷದಲ್ಲಿ ಇದ್ದವರಿಗೆ ತಾಕತ್ ಪ್ರಶ್ನೆ ಮಾಡ್ತೀರಿ. ನಮ್ಮ ಕಾರ್ಯಕರ್ತರಿಗೆ ಸಭೆಗೆ ಹೋಗಬೇಡಿ ಎಂದು ಧಮ್ಕಿ ಹಾಕಿದ್ದಾರೆ ಎಂದು ಸಚಿವರ ವಿರುದ್ಧ ಪರೋಕ್ಷವಾಗಿ ಆಕ್ರೋಶ ವ್ಯಕ್ತ ಪಡಿಸಿದರು. ತುಮ್ಹಾರೇ ಧಮ್ಕಿ ನಹೀ ಚಲೇಗಾ ಬಚ್ಚಾ ಎಂದ ಶಿವಾನಂದ ಪಾಟೀಲ್ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. https://ainlivenews.com/good-news-for-women-you-will-get-3-lakh-rupees-to-start-your-own-business-apply-today/ ಪಕ್ಷಕ್ಕಾಗಿ ತನು, ಮನ, ಧನದಿಂದ ದುಡಿದವರಿಗೆ ಅವಕಾಶ ಕೊಡಬೇಕು. ನನ್ನ ಪತ್ನಿ ವೀಣಾ ಕಾಶಪ್ಪನವರ್ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. ಆಕೆ ಜಿ.ಪಂ. ಅಧ್ಯಕ್ಷೆಯಾಗುವಾಗಲೂ ನಾನೊಬ್ಬನೇ ಗಂಡು ನಿಂತವನು. 2019ರಲ್ಲಿ ಯಾರೂ ಎಂಪಿ ಎಲೆಕ್ಷನ್ಗೆ ನಿಲ್ಲೋಕೆ ಮುಂದೆ ಬರಲಿಲ್ಲ. ಮೋದಿ ಅಲೆ ಅಂದರು, ನಮ್ಮ ಮುಂದೆ ಯಾವ ಅಲೆ ಕೂಡ…
ಬೆಂಗಳೂರು: ಜೆಡಿಎಸ್ (JDS) ಪಕ್ಷದ ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಕ್ರಮ ಹಾಗೂ ನೂತನ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಿಎಂ ಇಬ್ರಾಹಿಂ ಅರ್ಜಿಯನ್ನು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ. BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ! ನ್ಯಾಯಾಲಯವು ಶುಕ್ರವಾರ ಇಬ್ರಾಹಿಂ (C.M.Ibrahim) ಅವರ ಅರ್ಜಿಯನ್ನು ವಜಾ ಮಾಡಿದ್ದು, ಅವರ ಅರ್ಜಿಯನ್ನು ಪುರಸ್ಕಾರ ಮಾಡಿಲ್ಲ. ಹೆಚ್ಡಿಕೆ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದನ್ನು ಪುರಸ್ಕಾರ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ (H.D.Deve Gowda) ಅವರು ನಿಯಮಗಳಿಗೆ ವಿರುದ್ಧವಾಗಿ ತಮ್ಮನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ವಜಾ ಮಾಡಿದ್ದರು ಎಂದು ಇಬ್ರಾಹಿಂ ಅವರು ದೂರಿದ್ದರು. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದಿಂದ ಇಬ್ರಾಹಿಂ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡ ಅವರು ಉಚ್ಚಾಟನೆ ಮಾಡಿದ್ದರು. ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾ…
ನವದೆಹಲಿ: ರಷ್ಯಾ ರಾಜಧಾನಿ ಮಾಸ್ಕೋದ ಕ್ರೋಕಸ್ ಕನ್ಸರ್ಟ್ ಹಾಲ್ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಖಂಡಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ, ಮಾಸ್ಕೋದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ. ಸಂತ್ರಸ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಈ ದುಃಖದ ಸಮಯದಲ್ಲಿ ಭಾರತವು ರಷ್ಯಾದ ಒಕ್ಕೂಟದ ಸರ್ಕಾರ ಮತ್ತು ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ಹೇಳಿದ್ದಾರೆ. https://ainlivenews.com/good-news-for-women-you-will-get-3-lakh-rupees-to-start-your-own-business-apply-today/ ಇತ್ತ ದಾಳಿಗೆ ಸಂಬಂಧಪಟ್ಟಂತೆ ರಷ್ಯಾ ಅಧ್ಯಕ್ಷ ಪುಟಿನ್, ದಾಳಿಕೋರರು ತಕ್ಕ ಬೆಲೆ ತೆರಬೇಕಾಗುತ್ತದೆ. ಭಯೋತ್ಪಾದಕರನ್ನು ನಾವು ಸುಮ್ಮನೆ ಬಿಡಲ್ಲ ಎಂದು ದಾಳಿಯ ಹೊಣೆ ಹೊತ್ತ ಐಸಿಸ್ಗೆ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ನಡೆದ ಈ ಭೀಕರ ಭಯೋತ್ಪಾದಕ ದಾಳಿಯಲ್ಲಿ ಈವರೆಗೆ ಕನಿಷ್ಠ 70 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಮತ್ತು 140 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೃತ್ಯದ ಬಳಿಕ ಮಾಸ್ಕೋದ ಹೊರವಲಯದಲ್ಲಿರುವ…
ಬೆಂಗಳೂರು: 2047 ಕ್ಕೆ ಹೆದ್ದಾರಿಗಳು (Highway) ಮತ್ತು ಎಕ್ಸ್ಪ್ರೆಸ್ವೇಗಳ (Expressway) ಅಭಿವೃದ್ಧಿಗಾಗಿ ಸರ್ಕಾರವು ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಇದು ಟ್ರಕ್ಗಳು ಒಂದು ದಿನದಲ್ಲಿ 800 ಕಿ.ಮೀ ಕ್ರಮಿಸಲು ಸಾಧ್ಯವಾಗಿಸುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಭಾರತದಲ್ಲಿ ಟ್ರಕ್ಗಳು ಒಂದು ದಿನದಲ್ಲಿ 300 ರಿಂದ 350 ಕಿಮೀಗಳನ್ನು ಕ್ರಮಿಸುತ್ತವೆ. ಇದು ಯುಎಸ್ ಮತ್ತು ಯುರೋಪ್ನ ಅಂಕಿ-ಅಂಶಗಳಿಗಿಂತ ಕಡಿಮೆಯಾಗಿದೆ. ಯುರೋಪ್ನಲ್ಲಿ ದಿನಕ್ಕೆ 750 ಕಿಮೀ ಆಗಿದ್ದರೆ, ಯುಎಸ್ನಲ್ಲಿ ಚಾಲಕರು ಗಂಟೆಗೆ 100 ಕಿ.ಮೀ ವೇಗದಲ್ಲಿ ದಿನಕ್ಕೆ 1100-1200 ಕಿ.ಮೀ ವರೆಗೆ ಕಾನೂನುಬದ್ಧವಾಗಿ ಚಾಲನೆ ಮಾಡಬಹುದು. ಎಕ್ಸ್ಪ್ರೆಸ್ವೇಗಳು ಮತ್ತು ಹೊಸ ಹೆದ್ದಾರಿಗಳೊಂದಿಗೆ ವೇಗದ ಹೆಚ್ಚಳವು ಲಾಜಿಸ್ಟಿಕ್ಸ್ ವೆಚ್ಚವನ್ನು 3-4% ರಷ್ಟು ಕಡಿಮೆ ಮಾಡಲು ಸಹಾಯ ಮಾಡುತ್ತದೆ. BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ! ಇತ್ತೀಚಿನ ಅಧ್ಯಯನದ ಪ್ರಕಾರ, ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್ (NCAER), ಏಷ್ಯನ್ ಡೆವಲಪ್ಮೆಂಟ್…
ಬೆಂಗಳೂರು: ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾ ಲೇಔಟ್ ಠಾಣೆಯಲ್ಲಿ UDR ದಾಖಲಾಗಿದೆ. ನ್ಯಾಷನಲ್ ಲಾ ಕಾಲೇಜ್ ಆಫ್ ಇಂಡಿಯಾ ಯುನಿವರ್ಸಿಟಿ ಹಾಸ್ಟೆಲ್ ಉಸ್ತುವಾರಿಯಿಂದ ದೂರು ದಾಖಲಾಗಿದೆ. ಹಾಸ್ಟೆಲ್ ನಿಂದ ಕ್ಲಾಸ್ ಮೇಟ್ ಗೆ ಹೇಳಿ ಧ್ರುವ ಹೊರಗೆ ಬಂದಿದ್ದಾರೆ. ಹಾಸ್ಟೆಲ್ ನಿಂದ ಹೊರಟ ಬಳಿಕ ಮುಕ್ಕಾಲು ಘಂಟೆಗೆ ಘಟನೆ ಜರುಗಿದೆ. ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಮೊದಲ ವರ್ಷದ ಬಿಎ ಎಲ್ಎಲ್ಬಿ ವಿದ್ಯಾರ್ಥಿಯಾಗಿರುವ ಧ್ರುವ್, ಮಾನಸಿಕ ಖಿನ್ನತೆಗೆ ಔಷಧಿಗಳನ್ನು ಪಡೆಯುತ್ತಿದ್ದ. ಈ ಬಗ್ಗ ಆತನ ಕುಟುಂಬಸ್ಥರಿಗೂ ತಿಳಿದಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. BIGG News: 5, 8, 9ನೇ ತರಗತಿಗೆ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟ: ಗೊಂದಲಕ್ಕೆ ತೆರೆ ಎಳೆದ ಶಿಕ್ಷಣ ಇಲಾಖೆ! ನಾಗರಭಾವಿಯ ಕಾಲೇಜು ಹಾಸ್ಟೆಲ್ನಲ್ಲಿ ವಾಸವಾಗಿದ್ದ ಧ್ರುವ್, ಆತ್ಮಹತ್ಯೆ ಬಗ್ಗೆ ಕಾಲೇಜು ಸ್ನೇಹಿತರೊಂದಿಗೆ ಆಗಾಗ್ಗೆ ಹೇಳಿಕೊಳ್ಳುತ್ತಿದ್ದ. ನಿನ್ನೆ ಮೆಟ್ರೋ ಹಳಿಗೆ ಹಾರುವುದಕ್ಕೂ ಮುನ್ನ ಪೋಷಕರೊಂದಿಗೆ ದೂರವಾಣಿ ಕರೆ…