ಬೇರೆ ಬೇರೆ ರಾಜ್ಯಗಳಲ್ಲೂ ಲೋಕಸಭಾ ಅಖಾಡದಲ್ಲಿ ಸಿನಿಮಾ ತಾರೆಯರು ಇದ್ದಾರೆ. ಅದರಲ್ಲೂ ಪಕ್ಕದ ರಾಜ್ಯ ತಮಿಳು ನಾಡಿನಲ್ಲಿ ನಟಿ ರಾಧಿಕಾ ಶರತ್ ಕುಮಾರ್ (Radhika Sarath Kumar) ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ನಟಿ ಹಾಗೂ ರಾಜಕಾರಣಿಯೂ ಆಗಿರುವ ರಾಧಿಕಾ ಅವರು, ವಿರುಧನಗರ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ರಾಧಿಕಾ ಪತ್ನಿ ಶರತ್ ಕುಮಾರ್ ಅವರು ತಮ್ಮ ಅಖಿಲ ಭಾರತೀಯ ಸಮತುಮ ಮಕ್ಕಳ ಕಚ್ಚಿ ಪಕ್ಷವನ್ನು ಬಿಜೆಪಿ ಜೊತೆ ವಿಲಿನ ಮಾಡಿಕೊಂಡಿದ್ದರು. ಆಂಧ್ರದಲ್ಲೂ ಲೋಕಸಭಾ ಚುನಾವಣೆಯ ಚಟುವಟಿಕೆ ಕಾವೇರಿದ್ದು, https://ainlivenews.com/you-will-be-shocked-to-know-the-benefits-of-its-consumption/ ಹೆಸರಾಂತ ನಟ ಪವನ್ ಕಲ್ಯಾಣ್ ಕೂಡ ಅಖಾಡದಲ್ಲಿ ಇದ್ದಾರೆ. ಈಗಾಗಲೇ ಅವರು ಪ್ರಚಾರವನ್ನೂ ಶುರು ಮಾಡಿದ್ದಾರೆ. ಇವರ ವಿರುದ್ಧ ರಾಮ್ ಗೋಪಾಲ್ ವರ್ಮಾ ಸ್ಪರ್ಧಿಸುವುದಾಗಿ ಹೇಳಿಕೊಂಡಿದ್ದಾರೆ. ಇನ್ನೂ ಯಾರೆಲ್ಲ ಚುನಾವಣೆ ಕಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕು.
Author: AIN Author
ಬೆಂಗಳೂರು: ಚುನಾವಣಾ ಸಮಯದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಒಬ್ಬೊಬ್ಬ ಶಾಸಕನಿಗೂ ಬಿಜೆಪಿಯವರು 50 ಕೋಟಿ ಆಫರ್ ಮಾಡುತ್ತಿದ್ದಾರೆ ಎಂದು ಸಿಎಂ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರು (BJP) ಭ್ರಷ್ಟಾಚಾರದ ಪಿತಾಮಹರು. ಆಪರೇಷನ್ ಕಮಲ ಶುರುಮಾಡಿದವರು. ಒಬ್ಬೊಬ್ಬ ಎಂಎಲ್ಎಗೆ 50 ಕೋಟಿ ಆಫರ್ ಮಾಡ್ತಾರೆ. ನಾವೇ ಎಲೆಕ್ಷನ್ ಮಾಡಿಕೊಳ್ಳುತ್ತೇವೆ ಬನ್ನಿ ಅಂತಾರೆ. ಯಾವ ಹಣ ಇದು, ಬ್ಲಾಕ್ ಮನಿ ಅಲ್ವ ಇದು ಎಂದು ಸಿಎಂ ಪ್ರಶ್ನಿಸಿದರು. ರಾಜಕೀಯ ಪಕ್ಷಗಳ ಕತ್ತು ಹಿಸುಕುವ ಕೆಲಸ ಮಾಡುತ್ತಿದ್ದಾರೆ. ಇದು ಅತ್ಯಂತ ಖಂಡನೀಯ, https://ainlivenews.com/you-will-be-shocked-to-know-the-benefits-of-its-consumption/ ಜನಾಭಿಪ್ರಾಯ, ಸಂವಿಧಾನಕ್ಕೆ ವಿರುದ್ಧವಾದ ನಡೆ. ಚುನಾವಣಾ ಸಂದರ್ಭದಲ್ಲಿ ಈ ರೀತಿ ಮಾಡಿದರೆ ಹೇಗೆ…?, ಬಿಜೆಪಿಯವ್ರಿಗೆ ಸೋಲಿನ ಭೀತಿ ಶುರುವಾಗಿದೆ, ಭೀತಿಯಿಂದ ರಾಜಕೀಯ ಪಕ್ಷಗಳ ನಿಷ್ಕ್ರೀಯಗೊಳಿಸುವ ಕೆಲಸ. ಬಿಜೆಪಿ ಖಾತೆಗೆ ಎಷ್ಟು ಹಣ ಬಂದಿದೆ, ಅವರ ಖಾತೆಯನ್ನೂ ಸೀಜ್ ಮಾಡಬೇಕಲ್ವ. ಶ್ರೀಮಂತರೆಲ್ಲಾ ವಿಪಕ್ಷಗಳಲ್ಲೇ ಇದ್ದಾರಾ, ಬಿಜೆಪಿಯಲ್ಲಿ ಯಾರೂ ಇಲ್ವ ಎಂದು ಮರುಪ್ರಶ್ನೆ ಹಾಕಿದರು.
ಚೆನ್ನೈ: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2024) ಇಂದಿನಿಂದ ಆರಂಭಗೊಳ್ಳುತ್ತಿದೆ. ಆರ್ಸಿಬಿ – ಸಿಎಸ್ಕೆ (RCB vs CSK) ನಡುವಿನ ಹೈವೋಲ್ಟೇಜ್ ಕದನಕ್ಕೆ ಚೆನ್ನೈನ ಚಿದಂಬರಂ (ಚೆಪಾಕ್) ಕ್ರೀಡಾಂಗಣದಲ್ಲಿ ಸಜ್ಜಾಗಿದೆ. ಇನ್ನೆರಡು ತಿಂಗಳ ಕಾಲ ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ನೀಡಲಿದೆ. ಐಪಿಎಲ್ ಕ್ರಿಕೆಟ್ ಇತಿಹಾಸದಲ್ಲಿ ಚೆನ್ನೈ ಮತ್ತು ಆರ್ಸಿಬಿ ತಂಡಗಳು ತಮ್ಮದೇ ಆದ ಫ್ಯಾನ್ಸ್ ಬೇಸ್ ಹೊಂದಿವೆ. ಭಾರತ-ಪಾಕಿಸ್ತಾನ ಪಂದ್ಯದಷ್ಟೇ ಇತ್ತಂಡಗಳ ಕಾದಾಟ ರೋಚಕವಾಗಿರುತ್ತದೆ. ಕ್ರಿಕೆಟ್ ಪ್ರೇಮಿಗಳು ಬಹುದಿನಗಳಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಐಪಿಎಲ್ 17ನೇ ಸೀಸನ್ ಇಂದಿನಿಂದ ಆರಂಭವಾಗಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಲಿದೆ. https://ainlivenews.com/you-will-be-shocked-to-know-the-benefits-of-its-consumption/ ಈ ಪಂದ್ಯವನ್ನು ಚೆಪಾಕ್ ಅಂದರೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಈ ಪಂದ್ಯಕ್ಕೂ ಮುನ್ನ ವರ್ಣರಂಜಿತ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಕಲಾವಿದರು, ಸಂಗೀತಗಾರರು ಮತ್ತು ಗಾಯಕರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ…
ಕನ್ನಡ ಸಿನಿಮಾಗಳನ್ನು ಕಣ್ತುಂಬಿಕೊಳ್ಳೋದಿಕ್ಕೆ ಜನ ಥಿಯೇಟರ್ ನತ್ತ ಹೆಜ್ಜೆ ಇಡ್ತಿಲ್ಲ. ಅದರ ನಡುವೆಯೇ ಒಂದಷ್ಟು ವಿಭಿನ್ನ ಪ್ರಯತ್ನಗಳ ಸಿನಿಮಾಗಳು ಎಲ್ಲರ ಗಮನಸೆಳೆಯುತ್ತಿವೆ. ಆ ಪ್ರಯತ್ನಗಳಲ್ಲಿ ಒಂದು ಬ್ಲಿಂಕ್. ಸದ್ಯ ಕನ್ನಡ ‘ಬ್ಲಿಂಕ್’ ಸಿನಿಮಾ ಹೊಸ ಸಾಧನೆ ಮಾಡಿದೆ. ಆ ಸಾಧನೆಗೆ ಕನ್ನಡ ಸಿನಿಮಾಪ್ರೇಮಿಗಳೇ ಕಾರಣ.. ಶಿವರಾತ್ರಿ ಹಬ್ಬದಂದು ಸೂಪರ್ ಸ್ಟಾರ್ಸ್ ಸಿನಿಮಾಗಳ ಮಧ್ಯೆ ತೆರೆಗೆ ಬಂದ ಬ್ಲಿಂಕ್ ಸಿನಿಮಾಗೆ ಪ್ರಾರಂಭದಲ್ಲಿ ಅಷ್ಟಾಗಿ ರೆಸ್ಪಾನ್ಸ್ ಸಿಕ್ಕಿರಲಿಲ್ಲ. ಆ ನಂತರ ಮೌತ್ ಪಬ್ಲಿಸಿಟಿಯಿಂದ ಬ್ಲಿಂಕ್ ಶೋಗಳು ಏರಿಕೆಯಾಗುತ್ತಾ ಹೋದ್ವು. ಕನ್ನಡ ಸಿನಿಮಾಗಳಿಗೆ ಶೋ ಸಿಕ್ತಿಲ್ಲ ಎಂಬ ಆಪವಾದದ ನಡುವೆ 8 ಶೋಗಳಿಂದ 82 ಶೋ ಬ್ಲಿಂಕ್ ಪಾಲಾಗಿದೆ. ಇದಕ್ಕೆ ಕನ್ನಡ ಪ್ರೇಕ್ಷಕನ ಬೆಂಬಲ ಕಾರಣ.. ಶಿವಣ್ಣ ಬ್ಲಿಂಕ್ ಸಿನಿಮಾಗೆ ಸಿಗುತ್ತಿರುವ ರೆಸ್ಪಾನ್ಸ್ ನೋಡಿ ಸೋಷಿಯಲ್ ಮೀಡಿಯಾದಲ್ಲಿ ಚಿತ್ರ ನೋಡುವ ಇಂಗಿತ ವ್ಯಕ್ತಪಡಿಸಿದ್ದರು. ಸಿಂಪಲ್ ಸುನಿ, ನವೀನ್ ಶಂಕರ್ ಹಾಗೂ ನಟಿ ಬೃಂದಾ ಆಚಾರ್ ಸೇರಿದಂತೆ ಹಲವಾರು ಕನ್ನಡ ತಾರೆಯರು ಬ್ಲಿಂಕ್ ಗೆ ಬಹುಪರಾಕ್ ಎಂದಿದ್ದರು.…
ತುಮಕೂರು:- 2024 ರ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಮಾಧುಸ್ವಾಮಿ ಅವರಿಗೆ ಭಾರೀ ನಿರಾಸೆ ಆಗಿದ್ದು, ಟಿಕೆಟ್ ಮಿಸ್ ಬೆನ್ನಲ್ಲೇ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಹೇಳಲಾಗಿತ್ತು. ಜಿಲ್ಲೆ ತುರುವೇಕೆರೆ ಹೊರವಲಯದಲ್ಲಿರುವ ಮಾಜಿ ಶಾಸಕ ಮಸಾಲ ಜಯರಾಂ ತೋಟದ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಮಾಧುಸ್ವಾಮಿ ಅವರನ್ನು ಬಿಎಸ್ವೈ ಸಮಾಧಾನಪಡಿಸಿದ್ದಾರೆ. ಇದರೊಂದಿಗೆ ಮಾಧುಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವುದನ್ನು ತಡೆದಿದ್ದಾರೆ. ಆದ್ರೆ, ಮಾಧುಸ್ವಾಮಿ ಮುನಿಸು ಮಾತ್ರ ತಣ್ಣಗಾಗಿಲ್ಲ. ಹೌದು…ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಬೆಂಬಲ ಇಲ್ಲ ಎಂದಿದ್ದಾರೆ. ಸಂಧಾನ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಧುಸ್ವಾಮಿ, ಯಡಿಯೂರಪ್ಪ ಹೇಳಿದ್ದಕ್ಕೆ ನಾನು ಚುನಾವಣೆಗೆ ರೆಡಿಯಾಗಿದ್ದೆ.ಬಿಎಸ್ವೈರನ್ನು ಬೆಂಬಲಿಸಿ ಜೆಡಿಯು ಬಿಟ್ಟು ಬಿಜೆಪಿಗೆ ಹೋಗಿದ್ದು. ಈಗ ಬಿ.ಎಸ್.ಯಡಿಯೂರಪ್ಪ ಪಕ್ಷ ಬಿಡೋದು ಬೇಡ ಎಂದಿದ್ದಾರೆ. ಒಂದು ಬರುತ್ತೆ ಹೋಗುತ್ತೆ ಎಂದಿದ್ದಾರೆ, ಅದಕ್ಕೆ ಸುಮ್ಮನಾಗುತ್ತೇನೆ. ಪಕ್ಷ ಬಿಡಲು ಪ್ಲಾನ್ ಮಾಡಿದ್ದೆ, ಈ ಬಗ್ಗೆ ಬಿಎಸ್ವೈಗೂ ಹೇಳಿದ್ದೆ. ಯಡಿಯೂರಪ್ಪ ಜತೆ ಪಕ್ಷದ ವಿಚಾರವಷ್ಟೇ ಚರ್ಚೆ ಆಗಿದೆ. ಸೋಮಣ್ಣಗೆ ಬೆಂಬಲ…
ಬಾಗಲಕೋಟೆ :- ಕ್ಷೇತ್ರದ ಸಂಸದರು ಹಾಗೂ 2024 ರ ಲೋಕಸಭಾ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಮಹಾಲಿಂಗಪುರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜ್ಯರಿಂದ ಆಶೀರ್ವಾದ ಪಡೆದರು ಮತ್ತು ಕಾರ್ಯಕರ್ತರನ್ನು ಭೇಟಿ ನೀಡಿ ಚುನಾವಣಾ ಪ್ರಚಾರ ಪ್ರಾರಂಭಿಸಿದರು. ಪ್ರಕಾಶ ಕುಂಬಾರ ಬಾಗಲಕೋಟೆ
ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ 72-ಹುಬ್ಬಳ್ಳಿ (ಪೂರ್ವ) ವಿಧಾನಸಭಾ ವ್ಯಾಪ್ತಿಯಲ್ಲಿನ ಹುಬ್ಬಳ್ಳಿ ರೈಲ್ವೇ ನಿಲ್ದಾಣದ ರೈಲ್ವೇ ಪಾರ್ಸಲ್ ಆಫೀಸಿನಲ್ಲಿ ಅನಧಿಕೃತವಾಗಿ ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಎಲೆಕ್ಟ್ರಾನಿಕ್ ವಸ್ತುಗಳು ಸ್ವೀಕೃತವಾಗಿರುತ್ತದೆ ಎಂದು ಚುನಾವಣಾ ಕರ್ತವ್ಯದಲ್ಲಿದ್ದ ವಾಣಿಜ್ಯ ತೆರಿಗೆ ಅಧಿಕಾರಿಗಳು ಮತ್ತು ಫೈಯಿಂಗ್ ಸ್ಕ್ಯಾಡ್ ಅಧಿಕಾರಿಗಳಿಗೆ ಮಾಹಿತಿ ಬಂದ ತಕ್ಷಣ ನಿನ್ನೆ ಸಂಜೆ ಫೈಯಿಂಗ್ ಸ್ಕ್ಯಾಡ್ ಅಧಿಕಾರಿಯಾದ ಬಸವರಾಜ ಚಿತ್ತರಗಿ ರವರು ಸ್ಥಳಕ್ಕೆ ದಾವಿಸಿ, ಪರಿಶೀಲಿಸಿದ್ದಾರೆ. ವಸ್ತುಗಳನ್ನು ಪರಿಶೀಲಿಸಲಾಗಿ ಒಟ್ಟು 24 ರಟ್ಟಿನ ಬಾಕ್ಸ್ಗಳಲ್ಲಿ ಸುಮಾರು ರೂ.8 ಲಕ್ಷ ಮೌಲ್ಯದ 480 ಮಿಕ್ಸರ್ಗಳು ಸ್ವೀಕೃತವಾಗಿದ್ದು, ಅವುಗಳಿಗೆ ಯಾವುದೇ ಸೂಕ್ತ ದಾಖಲೆಗಳು ಇಲ್ಲದಿರುವುದು ಕಂಡುಬಂದಿರುತ್ತದೆ. ವಸ್ತುಗಳನ್ನು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ ಮತದಾರರಿಗೆ ಉಚಿತವಾಗಿ ಹಂಚುವ ಸಲುವಾಗಿ ತರಸಿರಬಹುದು ಎಂದು ಕಂಡುಬಂದಿದ್ದರಿಂದ ಸದರಿ ವಸ್ತುಗಳನ್ನು ಸೀಜ್ ಮಾಡಿ ಹುಬ್ಬಳ್ಳಿಯ ರೈಲ್ವೇ ಪೊಲೀಸರು ಠಾಣೆಯಲ್ಲಿ ಈIಖ ದಾಖಲು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಧಾರವಾಡ – ಸರಿಯಾದ ದಾಖಲೆ ಇಲ್ಲದೆ ತೆಗೆದುಕೊಂಡು ಹೋಗಲಾಗುತ್ತಿದ್ದ ಸುಮಾರು 38ವರೇ ಲಕ್ಷದ ಬಂಗಾರದ ಆಭರಣವನ್ನು ವಶಕ್ಕೆ ಪಡೆಯುವಲ್ಲಿ ಕಳೆದ ದಿನ ರಾತ್ರಿ ಧಾರವಾಡ ತೇಗೂರ ಚೆಕ್ ಪೋಸ್ಟ್ನ ಚುನಾವಣಾ ತಪಸಾಣಾ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ವೈ- ಕೆ.ಎಸ್.ಆರ್.ಟಿ.ಸಿಯ ನಿಪ್ಪಾಣಿ –ಗಂಗಾವತಿ ಬಸ್ನಲ್ಲಿ ಸರಿಯಾದ ದಾಖಲೆ ಇಲ್ಲದ ರೂ. 38,50,000 ಮೊತ್ತದ ಬಂಗಾರದ ಆಭರಣಗಳು ಪತ್ತೆಯಾಗಿದ್ದು, ವಸ್ತು ವಶ ಪಡಿಸಿಕೊಂಡು ಎಫ್ಐಆರ್ ದಾಖಲಿಸಲಾಗಿದೆ. ತೆಗೂರ ಚೆಕ್ ಪೋಸ್ಟ್ದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ನಂ. ಕೆಎ-37-ಎಫ್-0748 ಆರೋಪಿ ಮಹಾರಾಷ್ಟ್ರ ಕೊಲ್ಲಾಪುರದ ಪ್ರಕಾಶಕುಮಾರ (47) ಹುಕುಮಜಿ ಮಾಲಿ ಇವರು ಒಟ್ಟು 778 ಗ್ರಾಂ ತೂಕದ ಬೋರಮಾಳ ಸರ, ಗುಂಡುಗಳು, ಲಾಕೇಟ ಇರುವ ಬಂಗಾರದ ಆಭರಣಗಳು ತೆಗೆದುಕೊಂಡು ಕೊಲ್ಲಾಪುರದಿಂದ ಸಿಂದನೂರ ಕಡೆಗೆ ಹೋಗುತ್ತಿದ್ದರು. ಸದರಿಯವರು ತೋರಿಸಿದ ಬಿಲ್ಗಳಲ್ಲಿ ಇರುವ ಬಂಗಾರದ ಆಭರಣಗಳ ತೂಕಕ್ಕೂ ಹಾಗೂ ತಪಾಸಣೆಯಲ್ಲಿ ಸಿಕ್ಕ ಬಂಗಾರದ ಆಭರಣಗಳ ತೂಕಕ್ಕೂ ವ್ಯತ್ಯಾಸ ಇದ್ದು, ಸರಿಯಾದ ಮಾಹಿತಿಯನ್ನು ಬಿಲ್ಲುಗಳಲ್ಲಿ ನಮೂದಿಸದೇ ಮರೆಮಾಚಿ ಯಾವುದೋ ಅಪರಾಧ ಕೃತ್ಯ ಎಸಗುವ ಸಲುವಾಗಿ…
ಬಳ್ಳಾರಿ:- ಲೋಕಸಭೆ ಚುನಾವಣೆಗೆ ಮಾದರಿ ನೀತಿ ಸಂಹಿತೆ ಘೋಷಣೆಯಾದ ಬೆನ್ನಲ್ಲೇ ರಾಜ್ಯದಾದ್ಯಂತ ಅಕ್ರಮವಾಗಿ ನಗದು ಸಾಗಾಟ ಮಾಡುವ ಪ್ರಕರಣಗಳು ಪತ್ತೆಯಾಗುತ್ತಿವೆ. ಜೊತೆಗೆ ಮತದಾರರಿಗೆ ಆಮಿಷವನ್ನು ಸಲುವಾಗಿ ಕುಕ್ಕರ್, ಸೀರೆ, ಆಭರಣ ಹಂಚಲು ರಾಜಕಾರಣಿಗಳು ಮುಂದಾಗಿದ್ದಾರೆ. ಅದರಂತೆ ಇಲ್ಲಿನ ಬ್ರೂಸ್ ಪೇಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಆಕ್ರಮವಾಗಿ ಗೋದಾಮಿನಲ್ಲಿ ಸಂಗ್ರಹಿಸಿದ್ದ ಕುಕ್ಕರ್ ಹಾಗೂ ಗೃಹ ಬಳಕೆ ವಸ್ತುಗಳನ್ನು ಸೀಜ್ ಮಾಡಿದ್ದಾರೆ. 5.50 ಲಕ್ಷ ಮೌಲ್ಯದ ಕುಕ್ಕರ್, ಪ್ಯಾನ್, ಗ್ಯಾಸ್ ಸ್ಟೋಗಳು ಸೀಜ್ ಮಾಡಿದ್ದಾರೆ. ಬಳ್ಳಾರಿ ನಗರದ ವಡ್ಡರ ಬಂಡೆಯಲ್ಲಿ ಘಟನೆ ಜರುಗಿದೆ. 300 ಕುಕ್ಕರ್, 150 ಗ್ಯಾಸ್ ಒಲೆ , 66 ಸಿಲಿಂಗ್ ಪ್ಯಾನ್ ಹಾಗೂ ಒಂದು ಟಾಟಾ ಏಸ್ ವಾಹನ ಜಪ್ತಿ ಮಾಡಲಾಗಿದೆ. ಬ್ರೂಸ್ ಪೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಬೆಂಗಳೂರು: ಮಗುವನ್ನು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ, ಟಿಕ್ ಟಾಕ್ ಸ್ಟಾರ್ ಎಂದೇ ಖ್ಯಾತರಾಗಿದ್ದ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ (Police Custody) ಒಪ್ಪಿಸಿ ಆದೇಶ ನೀಡಿದೆ ಬೆಂಗಳೂರಿನ ಸಿಜೆಎಂ ಕೋರ್ಟ್. BIGG BREAKING: 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ಅಸ್ತು: ಹೈಕೋರ್ಟ್’ನಿಂದ ಮಹತ್ವದ ತೀರ್ಪು ಮಗು ಪೋಷಕರನ್ನು ರಾಯಚೂರಿಗೆ ಕರ್ಕೊಂಡು ಹೋಗಿ ಮಹಜರು ಮತ್ತು ಹೇಳಿಕೆ ಪಡೆಯಬೇಕಿದೆ. ಅಪಾರ್ಟ್ ಮೆಂಟ್ ನ ಅಕ್ಕಪಕ್ಕದ ಸ್ಥಳೀಯರ ಹೇಳಿಕೆ ಪಡೆಯಬೇಕಿದೆ. ಈ ಉದ್ದೇಶ ದಿಂದ ನಾಲ್ಕು ದಿನಗಳ ಕಾಲ ಕಸ್ಟಡಿ ಗೆ ಕೇಳಿದ್ದರು ಬ್ಯಾಡರಹಳ್ಳಿ ಪೊಲೀಸರು. ಸದ್ಯ ಡೈರಿ ಸರ್ಕಲ್ ಬಳಿಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಸೋನುವನ್ನು ಪೊಲೀಸರು ಕಳುಹಿಸಲಿದ್ದಾರೆ. ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಅನ್ನು ಇಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು.…