ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಯುವಕರು ಕೂಡ ಹೃದಯಾಘಾತದಿಂದ ಬಳಲುತ್ತಿರುವುದು ಆತಂಕಕಾರಿಯಾಗಿದೆ. ಆದರೆ ಹೃದ್ರೋಗವನ್ನು ಆರಂಭಿಕ ಪತ್ತೆ ಮತ್ತು ಚಿಕಿತ್ಸೆಯ ಮೂಲಕ ತಡೆಗಟ್ಟಬಹುದು. ವಿವಿಧ ರೋಗಲಕ್ಷಣಗಳ ಆಧಾರದ ಮೇಲೆ ಹೃದಯಾಘಾತವನ್ನು ಮೊದಲೇ ಕಂಡುಹಿಡಿಯಬಹುದು ಎಂದು ತಜ್ಞರು ಹೇಳುತ್ತಾರೆ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತವೆ . ಹೆಚ್ಚಿದ ಕೊಲೆಸ್ಟ್ರಾಲ್ ಮತ್ತು ಕಾಲುಗಳ ಊತವು ಹೃದ್ರೋಗದ ಪ್ರಾಥಮಿಕ ಲಕ್ಷಣಗಳಾಗಿವೆ. ಕಾಲುಗಳಲ್ಲಿ ಊತವು ಹೃದಯ ವೈಫಲ್ಯದ ಸಂಕೇತವಾಗಿದೆ ಎಂದು ತಜ್ಞರು ಹೇಳುತ್ತಾರೆ. ರಕ್ತಪರಿಚಲನೆಯ ತೊಂದರೆಗಳು ಹೃದಯ ವೈಫಲ್ಯಕ್ಕೆ ಕಾರಣವಾಗುತ್ತವೆ. ರಕ್ತ ಸಂಚಾರದಲ್ಲಿ ತೊಂದರೆಯಾದರೆ ಪಾದಗಳಲ್ಲಿ ನೀರು ತುಂಬಿಕೊಂಡು, ಪಾದಗಳ ಊತಕ್ಕೆ ಕಾರಣವಾಗುತ್ತದೆ. ಅದಕ್ಕಾಗಿಯೇ ಕಾಲುಗಳಲ್ಲಿ ಊತವು ಹೃದ್ರೋಗದ ಪ್ರಾಥಮಿಕ ಚಿಹ್ನೆ ಎಂದು ಹೇಳಲಾಗುತ್ತದೆ. ಪಾದಗಳು, ಕಣಕಾಲುಗಳು ಮತ್ತು ಹೊಟ್ಟೆಯ ಊತವು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕಾಲುಗಳು ಮತ್ತು ಪಾದಗಳಲ್ಲಿ ಊತವನ್ನು ಪೆರಿಫೆರಲ್ ಎಡಿಮಾ ಎಂದು ಕರೆಯಲಾಗುತ್ತದೆ. ಇದರಿಂದ ಕಾಲುಗಳು ಭಾರವಾಗಿರುತ್ತದೆ. ಇದರಿಂದ…
Author: AIN Author
ಬೆಂಗಳೂರು: ಬಿಗ್ ಬಾಸ್ ಓಟಿಟಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅರೆಸ್ಟ್ ಆಗಿದ್ದಾರೆ. ಹೌದು ಸೋನು ಶ್ರೀನಿವಾಸ್ ಗೌಡ ಮಗು ದತ್ತು ಪಡೆದ ವಿಚಾರಕ್ಕೆ ಎಫ್ ಐ ಆರ್ ದಾಖಲಾಗಿದೆ. ಚೈಲ್ಡ್ ವೇಲ್ ಫೇರ್ ಕಮಿಟಿ ಅಧಿಕಾರಿಗಳು ಬ್ಯಾಡರಹಳ್ಳಿ ದೂರು ನೀಡಿದ್ರು. ದೂರಿನ ಹಿನ್ನೆಲೆ ಅಂದ್ರಹಳ್ಳಿ ನಿವಾಸದಿಂದ ಇಂದು ಮುಂಜಾನೆ ಸೋನುಳನ್ನ ಪೊಲೀಸ್ರು ವಶಕ್ಕೆ ಪಡೆದಿದ್ದಾರೆ. ಸೋನು ಶ್ರೀನಿವಾಸ್ ಗೌಡ ವಯಸ್ಸಿಗೆ ಮಕ್ಕಳನ್ನ ದತ್ತುಪಡೆಯೋ ಅರ್ಹತೆ ಇಲ್ಲ. ಜೊತೆಗೆ ಹೆಣ್ಣು ಮಗು ಆಗಿದ್ರು ತನ್ನ ಸೋಶಿಯಲ್ ಮೀಡಿದಾಯಲ್ಲಿ ಮಗುವನ್ನ ದತ್ತು ಪಡೆದಿರೋದಾಗಿ ಪ್ರಚಾರ ಮಾಡಿಕೊಂಡಿದ್ಳು. https://ainlivenews.com/you-will-be-shocked-to-know-the-benefits-of-its-consumption/ 6ರಿಂದ 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ಮಗು ದತ್ತು ಪಡೆದಿದ್ದರು. ಈ ಆರೋಪದಡಿ ಸೋನು ಮೇಲೆ ಎಫ್ ಐ ಆರ್ ದಾಖಲಾಗಿದ್ದು, ಪೊಲೀಸ್ರು ವಶಕ್ಕೆ ಪಡೆದಿದ್ದಾರೆ. ಈ ಕೇಸ್ ನಲ್ಲಿ ಸೋನು ಜೈಲು ಸೇರೋ ಸಾಧ್ಯತೆ ಕೂಡ ಇದೆ.
ಬೆಂಗಳೂರು: ಹದಿನೇಳನೇ ಸೀಸನ್ ನ ಐಪಿಎಲ್ ಟೂರ್ನಿಯಲ್ಲಿ ಆರ್ ಸಿಬಿಯ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸ್ಫೋಟಕ ಪ್ರದರ್ಶನ ತೋರಿ ಲೀಡಿಂಗ್ ರನ್ ಸ್ಕೋರರ್ ಆಗುತ್ತಾರೆ ಎಂದು ಮಿಸ್ಟರ್ 360 ಬ್ಯಾಟರ್ ಎಬಿಡಿ ವಿಲಿಯರ್ಸ್ ಭವಿಷ್ಯ ನುಡಿದಿದ್ದಾರೆ. ವಿಶ್ವದ ಐಷಾರಾಮಿ ಟಿ20 ಕ್ರಿಕೆಟ್ ಲೀಗ್ ನಲ್ಲಿ ಕೊಹ್ಲಿ 130.02 ಸ್ಟ್ರೆಕ್ ರೇಟ್ ನಲ್ಲಿ 7263 ರನ್ ಬಾರಿಸಿ ಸರ್ವಶ್ರೇಷ್ಠ ಲೀಡಿಂಗ್ ಸ್ಕೋರರ್ ಆಗಿದ್ದಾರೆ. ಐಪಿಎಲ್ ಟೂರ್ನಿ ಇತಿಹಾಸದಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿ, ಏಳು ಶತಕ ಹಾಗೂ 50 ಅರ್ಧಶತಕ ಸಿಡಿಸಿದ್ದಾರೆ. 2023ರ ಐಪಿಎಲ್ ಟೂರ್ನಿಯಲ್ಲಿ 35ರ ಹರಯದ ಬ್ಯಾಟರ್ 139.82 ಸ್ಟ್ರೆಕ್ ರೇಟ್ ನಲ್ಲಿ ಎರಡು ಶತಕ ಹಾಗೂ ಆರು ಅರ್ಧಶತಕ ನೆರವಿನಿಂದ 639 ರನ್ ಗಳಿಸಿ ನಾಲ್ಕನೇ ಗರಿಷ್ಠ ಸ್ಕೋರರ್ ಆಗಿದ್ದರು. ಆದರೂ ಆರ್ ಸಿಬಿ ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಪಡೆದು ಪ್ಲೇಆಫ್ ಗೇರುವ ಅವಕಾಶ ತಪ್ಪಿಸಿಕೊಂಡಿತ್ತು. https://ainlivenews.com/you-will-be-shocked-to-know-the-benefits-of-its-consumption/ ಹದಿನೇಳನೇ ಆವೃತ್ತಿಯ ಐಪಿಎಲ್ ಟೂರ್ನಿಯ ನಿಮಿತ್ತ ತಮ್ಮದೇ ಆದ…
ಚಿಕ್ಕಮಗಳೂರು: ಸರ್ಕಾರಿ ಬಸ್ಸಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆ.ಜಿ ಚಿನ್ನ ಸೀಜ್ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಾಗಡಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ರಾಜ್ಯಾದ್ಯಂತ ನೀತಿ ಸಂಹಿತೆಯೂ ಜಾರಿಯಾಗಿ ಮುಖ್ಯರಸ್ತೆಗಳಲ್ಲಿ ಬ್ಯಾರಿಕೇಡ್ ಕಟ್ಟೆಚ್ಚರ ವಹಿಸಿರುವ ಪೊಲೀಸರು ಸರ್ಕಾರಿ ವಾಹನಗಳು ಸೇರಿದಂತೆ ಎಲ್ಲ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. https://ainlivenews.com/you-will-be-shocked-to-know-the-benefits-of-its-consumption/ ಬೆಂಗಳೂರಿನಿಂದ ಚಿಕ್ಕಮಗಳೂರಿನತ್ತ ಬರುತ್ತಿದ್ದ ಸರ್ಕಾರಿ ಬಸ್ ಚಿಕ್ಕಮಗಳೂರಿನ ಮಾಗಡಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ದಾಖಲೆ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಚಿನ್ನ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಂಡಕ್ಟರ್, ಡ್ರೈವರ್ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ನಗರದಲ್ಲಿ ನೀರಿನ ಅಭಾವ ಮಿತಿಮೀರುತ್ತಿರುವ ಹಿನ್ನೆಲೆ ಜಲಮಂಡಳಿ ಮತ್ತಷ್ಟು ಟಫ್ ರೂಲ್ಸ್ ತರಲು ಮುಂದಾಗಿದೆ. ನೀರನ್ನ ಪೋಲು ಮಾಡೋದನ್ನ ತಡೆದು ಅವಶ್ಯವಿರೋರಿಗೆ ಪೂರೈಸಲು ಸಜ್ಜಾಗಿದೆ. ಈ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ ನೋಡಿ. ನೀರಿನ ಅಭಾವ ತಡೆಯಲು ಜಲಮಂಡಳಿ ಹರಸಾಹಸ ಮಾಡ್ತಿದೆ. ನೀರಿನ ಪೋಲು, ದುಂದುವೆಚ್ಚ, ತಡೆಯಲು ಪ್ಲಾನ್ ರೂಪಿಸುತ್ತಲೇ ಇದೆ. ಇದಕ್ಕಾಗಿ ಬೆಂಗಳೂರಿನಲ್ಲಿ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಏರಿಯೇಟರ್ ಅಳವಡಿಕೆಗೆ ಜಲ ಮಂಡಳಿ ಮಾರ್ಚ್ ೩೧ರ ಗಡವನ್ನ ಸಹ ನೀಡಿದೆ. ಇದರಿಂದ ನೀರು ಪೋಲಾಗುವುದು ತಡೆಯಬಹುದು ಅನ್ನೋದು ಜಲಮಂಡಲೀ ಪ್ಲಾನ್. ಇನ್ನು ಹೋಟೆಲ್,ರೆಸ್ಟೋರೆಂಟ್ ಮಾಲೀಕರ ಜೊತೆಗೂ ಇಂದು ಜಲಮಂಡಳಿ ಅಧ್ಯಕ್ಷರು ಸಭೆ ನಡೆಸಿ ಸೂಚನೆ ಜೊತೆಗೆ ಎಚ್ಚರಿಕೆ ಸಹ ನೀಡಿದ್ದಾರೆ. ಹೋಟೆಲ್ ಗಳಿಗೆ ನೀರಿನ ಬಳಕೆ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗುತ್ತೆ. ಮಾರ್ಗಸೂಚಿಯಂತೆ ಹೋಟೆಲ್ ಗಳು ನೀರಿನ ಬಳಕೆ ಮಾಡಬೇಕು. ನೀರಿನ ಬಳಕೆಯನ್ನ ಆದಷ್ಟು ಮಾಡಬೇಕು..೩೧ ರೊಳಗೆ ನೀರಿನ ಬಳಕೆ ಕಡಿಮೆ ಮಾಡಲು ಡೆಡ್ ಲೈನ್ ನೀಡಲಾಗಿದೆ.…
ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡ ನಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು (SBI) ಚುನಾವಣಾ ಬಾಂಡ್ಗಳ ಎಲ್ಲಾ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ಇದು ಬಾಂಡ್ (Electoral Bonds) ಖರೀದಿಸಿದವರ ಹೆಸರು, ವಿವಿಧ ಬಗೆಯ ಬಾಂಡ್ಗಳ ನಿರ್ದಿಷ್ಟ ಸಂಖ್ಯೆ, ಬಾಂಡ್ ನಗದೀಕರಿಸಿದ ಪಕ್ಷ, ರಾಜಕೀಯ ಪಕ್ಷಗಳ ಬ್ಯಾಂಕ್ ಖಾತೆಗಳ ಕೊನೆಯ ನಾಲ್ಕು ಸಂಖ್ಯೆಯನ್ನು ತೋರಿಸುವ ಮಾಹಿತಿಗಳನ್ನು ಒಳಗೊಂಡಿದೆ. ಎಸ್ಬಿಐ ಈಗ ಎಲ್ಲಾ ವಿವರಗಳನ್ನು ಬಹಿರಂಗಪಡಿಸಿದೆ. ಸಂಪೂರ್ಣ ಖಾತೆ ಸಂಖ್ಯೆಗಳು, ಕೆವೈಸಿ ವಿವರ ಸೇರಿದಂತೆ ಯಾವುದೇ ಮಾಹಿತಿಯನ್ನು ರಹಸ್ಯವಾಗಿ ಇರಿಸಿಲ್ಲ ಎಂದು ಎಸ್ಬಿಐ ಅಫಿಡವಿಟ್ನಲ್ಲಿ ಸ್ಪಷ್ಟಪಡಿಸಿದೆ. ಬ್ಯಾಂಕ್ ನೀಡಿರುವ ವಿವರಗಳನ್ನು ಚುನಾವಣಾ ಆಯೋಗವು ಶೀಘ್ರದಲ್ಲೇ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡುವ ನಿರೀಕ್ಷೆಯಿದೆ. https://ainlivenews.com/you-will-be-shocked-to-know-the-benefits-of-its-consumption/ SBI ಈ ಹಿಂದೆ ಚುನಾವಣಾ ಆಯೋಗಕ್ಕೆ ಎರಡು ಪಟ್ಟಿಗಳನ್ನು ನೀಡಿತ್ತು. ಅದನ್ನು ಚುನಾವಣಾ ಸಮಿತಿಯು ಮಾರ್ಚ್ 14 ರಂದು ತನ್ನ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ. ಗುರುವಾರ ಸಂಜೆ 5 ಗಂಟೆಯೊಳಗೆ ಸೀರಿಯಲ್ ನಂಬರ್ ಸೇರಿದಂತೆ…
ಬೆಂಗಳೂರು: ಬೆಂಗಳೂರಿನ ಬೈಕ್ ಸವಾರರು ನೋಡಲೇಬೇಕಾದ ಸ್ಟೋರಿ ಇದು. ಬೆಂಗಳೂರು ಬಿಬಿಎಂಪಿ ದಿವ್ಯ ನಿರ್ಲಕ್ಷ್ಯದಿಂದ ಅಪಾಯ ಯಾವಾಗ ಬೇಕಾದ್ರು ನಿಮ್ಮ ಕಣ್ಮುಂದೆ ಬರಬಹುದು. ಯಾಕಂದ್ರೆ ಬೆಂಗಳೂರಿನಲ್ಲಿ ಘೋರ ದುರಂತ ನಡೆದಿದೆ. ಹೌದು ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರನ ಬೆನ್ನು ಮೂಳೆ ಮುರಿದ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ. ಮರದ ಕೊಂಬೆ ರಸ್ತೆಗೆ ಬೀಳುವಂತಿದ್ದರು ತೆರವು ಮಾಡದ ಆರೋಪ ಪ್ರಕರಣ ಸಂಬಂಧ ಖಾಸಗಿ ಶಾಲೆ ಮತ್ತು ಬಿಬಿಎಂಪಿ ವಿರುದ್ಧ ಆಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಗರಬಾವಿ ನಿವಾಸಿ ಚಂದನ್ ಬೆನ್ನು ಮೂಳೆ ಮುರಿತಕ್ಕೊಳಗಾದ ಬೈಕ್ ಸವಾರ. ರಿಚ್ಮಂಡ್ ರಸ್ತೆಯ ಫೈನಾನ್ಸ್ ಕಂಪನಿವೊಂದರಲ್ಲಿ ಕೆಲಸ ಮಾಡುತ್ತಿದ್ದ ಚಂದನ್ ಮಾರ್ಚ್ 7 ರಂದು ಬೆಳಗ್ಗೆ ಕಚೇರಿಗೆ ಹೋಗುತ್ತಿದ್ದರು. https://ainlivenews.com/you-will-be-shocked-to-know-the-benefits-of-its-consumption/ ಈ ವೇಳೆ ರಸ್ತೆಗೆ ಚಾಚುಕೊಂಡಿದ್ದ ಮರದ ಕೊಂಬೆ ಚಂದನ್ ಮೇಲೆ ಮುರಿದು ಬಿದ್ದಿದೆ.ಕೊಂಬೆ ಮೈ ಮೇಲೆ ಬೀಳುತ್ತಿದ್ದಂತೆ ರಸ್ತೆ ಮೇಲೆ ಬಿದ್ದ ಚಂದನ್ನ ಕುತ್ತಿಗೆ ಗಾಯವಾಗಿದೆ. ಅಲ್ಲದೆ, ಬೆನ್ನು ಮೂಳೆ ಮುರಿದಿದೆ. ಏಳೆಂಟು ನಿಮಿಷಗಳ…
ಬೆಂಗಳೂರು: ಇಂದಿನಿಂದ ಐಪಿಎಲ್ ಆರಂಭ ಹಿನ್ನೆಲೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಬೆಟ್ಟಿಂಗ್ ನಡೆಯೋ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೌದು ಇಂದಿನಿಂದ IPL ಆರಂಭವಾಗುತ್ತಿದ್ದು ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಡಿಸಿಪಿಗಳಿಗೆ ಅಲರ್ಟ್ ಆಗಿ ಇರಲು ಬೆಂಗಳೂರು ಕಮಿಷನರ್ ದಯಾನಂದ್ ಸೂಚನೆ ನೀಡಿದ್ದಾರೆ. ನಗರದ ಹೋಟೆಲ್ ಹಾಗೂ ಲಾಡ್ಜ್ಗಳ ಮೇಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ದೆಹಲಿ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಮಹಿಳಾ ಆರ್ಸಿಬಿ ತಂಡ ಕಪ್ ಗೆದ್ದಿದೆ. ಹೀಗಾಗಿ ಐಪಿಎಲ್ ಪದ್ಯಗಳ ಮೇಲಿನ ಗಮನ ಹೆಚ್ಚಾಗಿದೆ. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಬೆಟ್ಟಿಂಗ್ ನಡೆಯೋ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಮಾಹಿತಿ ಬೆನ್ನಲ್ಲೇ ಎಲ್ಲಾ ಡಿಸಿಪಿಗಳಿಗೆ ಅಲರ್ಟ್ ಆಗಿ ಇರಲು ಕಮಿಷನರ್ ಸೂಚನೆ ನೀಡಿದ್ದಾರೆ. ನಗರದಾದ್ಯಂತ ಬುಕ್ಕಿಗಳ ಮೇಲೆ ತೀವ್ರ ನಿಗಾ ವಹಿಸಬೇಕು. https://ainlivenews.com/you-will-be-shocked-to-know-the-benefits-of-its-consumption/ ಆಯಾ ಠಾಣಾ ವ್ಯಾಪ್ತಿಯಲ್ಲಿನ ಬುಕ್ಕಿಗಳ ಮೇಲೆ ನಿಗಾ ಇಡಿ. ಈ ಹಿಂದೆ ಬೆಟ್ಟಿಂಗ್ ಕೇಸ್ ಅಲ್ಲಿ…
ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್ (Petrol rate), ಡೀಸೆಲ್ ಬೆಲೆಯಲ್ಲಿ (diesel rate)ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ. ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೆಷ್ಟಿದೆ? ರಾಜಧಾನಿ ದೆಹಲಿಯಲ್ಲಿ, ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ. ಮತ್ತು ಡೀಸೆಲ್ ಲೀಟರ್ಗೆ 87.62 ರೂ. ಕೋಲ್ಕತ್ತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಪ್ರತಿ ಲೀಟರ್ಗೆ 90.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 100.75 ರೂ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.44 ರೂ. https://ainlivenews.com/you-will-be-shocked-to-know-the-benefits-of-its-consumption/ ಇತರ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ನ ಹೊಸ ದರಗಳು ನೋಯ್ಡಾ: ಲೀಟರ್ಗೆ ಪೆಟ್ರೋಲ್ 94.66 ರೂ. ಮತ್ತು ಡೀಸೆಲ್ ಲೀಟರ್ಗೆ 87.76…
ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ನಡುವೆಯೇ ನೈರುತ್ಯ ಪದವೀಧರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಅವರನ್ನು ಆಯ್ಕೆ ಮಾಡಿಕ ಆದೇಶ ಹೊರಡಿಸಲಾಗಿದೆ. ಲೋಕಸಭಾ ಚುನಾವಣೆ ನಡುವೆಯೇ ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಉಮೇದುವಾರಿಕೆಯ ಪ್ರಸ್ತಾವನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದಿಸಿದ್ದಾರೆ. ಲೋಕಸಭಾ ಚುನಾವಣೆಗೆ ಮೊದಲೇ ವಿಧಾನ ಪರಿಷತ್ ನೈಯತ್ಯ ಪದವೀಧರ ಕ್ಷೇತ್ರಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ನಲ್ಲಿ ತೀವ್ರ ಕಸರತ್ತು ನಡೆಸಿದ್ದ ಆಯನೂರು ಮಂಜುನಾಥ್ https://ainlivenews.com/you-will-be-shocked-to-know-the-benefits-of-its-consumption/ ಮತ್ತು ಎಸ್ಪಿ ದಿನೇಶ್ ಇಬ್ಬರಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆಂದು ಭಾರೀ ಕುತೂಹಲ ಹುಟ್ಟಿಸಿತ್ತು. ಇಬ್ಬರೂ ಸಹ ಮಾಧ್ಯಮಗಳ ಮುಂದೆ ನನಗೆ ಟಿಕೆಟ್ ಸಿಗುತ್ತದೆ ಎಂದೇ ಹೇಳುತ್ತಿದ್ದರು. ಇಬ್ಬರು ರಾಜ್ಯ ಮತ್ತು ರಾಷ್ಟ್ರಪಟ್ಟದಲ್ಲಿ ಓಡಾಟ ನಡೆಸಿ ಟಿಕೆಟ್ ಪಡೆಯುವ ಕಸರತ್ತು ನಡೆಸಿದ್ದರು. ಇದೀಗ ಕೊನೆಗೂ ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಪ್ರಕಟಣೆ ಹೊರಡಿಸಿದೆ.