ಬೆಂಗಳೂರು: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಬಾಕಿ ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 22 ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದರು. https://ainlivenews.com/bwssb-khadak-notice-not-to-use-cauvery-borewell-water-for-holi-celebrations/ ನಗರದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಮಿತ್ ಶಾ, ಜೆ.ಪಿ ನಡ್ಡಾ ಅವರೊಂದಿಗೆ 5 ಕ್ಷೇತ್ರಗಳ ಕುರಿತು ಚರ್ಚೆ ನಡೆಸಲಾಗಿದೆ. ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸಲಾಗುತ್ತದೆ ಎಂದು ಹೇಳಿದರು.
Author: AIN Author
ಬೆಂಗಳೂರು: ಅಂತರ್ಜಲ ವೃದ್ದಿಗೆ ಬೆಂಗಳೂರಿನ (Bengaluru) 14 ಕೆರೆಗಳಿಗೆ ಜಲಮಂಡಳಿ ತ್ಯಾಜ್ಯ ನೀರನ್ನು ತುಂಬಿಸಿದೆ. ಬೆಂಗಳೂರು ಜಲ ಮಂಡಳಿಯ (BWSSB) ತ್ಯಾಜ್ಯ ನೀರು ಸಂಸ್ಕರಣ ಘಟಕದಲ್ಲಿ (STP) ಸಂಸ್ಕರಿಸಿದ ನೀರನ್ನು 14 ಕೆರೆಗಳಿಗೆ (Lake) ತುಂಬಿಸುವ ಕೆಲಸ ಈಗ ನಡೆಯುತ್ತಿದೆ ನಗರದ 200 ಕೆರೆಗಳಿಗೆ ತ್ಯಾಜ್ಯ ತುಂಬಿಸುವ ಯೋಜನೆ ಹಾಕಿಕೊಂಡಿದ್ದು, ಆರಂಭದಲ್ಲಿ 14 ಕೆರೆಗಳಿಗೆ ತ್ಯಾಜ್ಯ ನೀರು ತುಂಬಿಸಲಾಗುತ್ತಿದೆ. ಯಾವ ಕೆರೆಗಳಿಗೆ ನೀರು? ಹಲಸೂರು, ಸಾರಕ್ಕಿ, ಅಗರ, ಹುಳಿ ಮಾವು, ಚಿಕ್ಕ ಬೇಗೂರು, ಮಡಿವಾಳ, ಜಕ್ಕೂರು, ಅಳಾಲಸಂದ್ರ, ಕಲ್ಕೆರೆ, ಚಿಕ್ಕಬಾಣಾವರ, ನಾಯಂಡನಹಳ್ಳಿ, ಮಾದವರ ಕೆರೆಗೆ ನೀರು ತುಂಬಿಸಲಾಗುತ್ತಿದೆ.
ಬೆಂಗಳೂರು: ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮೃಣಾಲ್ ಹೆಬ್ಬಾಳ್ಕರ್ ಇಂದು ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಆದರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಗುರುವಾರ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಮೃಣಾಲ್ ತಾಯಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಉಪಸ್ಥಿತರಿದ್ದರು.
ಪ್ರತಿಭಾನ್ವಿತ ನಿರ್ದೇಶಕರಿಗೆ ವೇದಿಕೆಯಾಗಿರುವ ಡಾಲಿ ಪಿಕ್ಚರ್ಸ್ ಮತ್ತೊಂದು ಹೊಸ ಕಥೆ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗುತ್ತಿದೆ. ಡಾಲಿ ಪಿಚ್ಚರ್ಸ್ ನ ನಾಲ್ಕನೇ ಕೊಡುಗೆ ವಿದ್ಯಾಪತಿ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ಸಿಕ್ಕಿದೆ. ಅದ್ಧೂರಿ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗ್ತಿದೆ. ವಿದ್ಯಾಪತಿಯಾಗಿ ನಾಗಭೂಷಣ್ ಬಣ್ಣ ಹಚ್ಚಿದ್ದು, ಅವರು ಕರಾಟೆ ಕಿಂಗ್ ಅವತಾರ ತಾಳಿದ್ದಾರೆ. ರಂಗಾಯಣ ರಘು ಕೂಡ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವಿದ್ಯಾಪತಿ ಶೂಟಿಂಗ್ ಮೇಕಿಂಗ್ ವಿಡಿಯೋ ತುಣುಕನ್ನು ಚಿತ್ರತಂಡ ರಿವೀಲ್ ಮಾಡಿದೆ. 1 ನಿಮಿಷ ಮೇಕಿಂಗ್ ಝಲಕ್ ಚಿತ್ರದ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಇಕ್ಕಟ್ ಕಥೆ ಹೇಳಿದ್ದ ಇಶಾಂ ಮತ್ತು ಹಸೀಂ ಖಾನ್ ‘ವಿದ್ಯಾಪತಿ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಜೊತೆಗೆ ಸಿನಿಮಾವನ್ನು ಇವರೆ ಬರೆದು, ಸಂಕಲನದ ಜವಾಬ್ದಾರಿಯನ್ನು ತಾವೇ ಹೊತ್ತುಕೊಂಡಿದ್ದಾರೆ. ಆಕ್ಷನ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾಗಭೂಷಣ್ ಗೆ ನಾಯಕಿಯಾಗಿ ಉಪಾಧ್ಯಕ್ಷ ಬ್ಯೂಟಿ ಮಲೈಕಾ ವಸೂಪಾಲ್ ಕಾಣಿಸಿಕೊಳ್ಳಲಿದ್ದಾರೆ. ಲವಿತ್ ಛಾಯಾಗ್ರಹಣ, ಡಾಸ್ಮೋಡ್ ಸಂಗೀತ ನಿರ್ದೇಶನ,…
ಬೆಂಗಳೂರು: ಇನ್ನೇನು ಹೋಳಿ ಹಬ್ಬ ಹತ್ತಿರ ಬರುತ್ತಿದ್ದಂತೆ ಬಣ್ಣದೋಕುಳಿ ಆಟವಾಡುವವರಿಗೆ ಭಾರೀ ನಿರಾಸೆ ಉಟಾಗಿದೆ ಕಾರಣವೆನೇಂದರೆ ಈಗಾಗಲೇ ಹೋಳಿ ಹಬ್ಬದಂದು ಕಾವೇರಿ ನೀರು ಬಳಸದಂತೆ ಜಲಮಂಡಳಿ ಖಡಕ್ ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿತ ಬತ್ತಿ ಹೋದ ಸಾಕಷ್ಟು ಕೊಳವೆ ಬಾವಿಗಳು . ಈ ಸಂಬಂಧ, ಹೋಳಿ ಹಬ್ಬದಲ್ಲಿ ರೈನ್ ಡ್ಯಾನ್ಸ್ಗೆ ಕಾವೇರಿ ನೀರು ಹಾಗೂ ಬೋರ್ ವೆಲ್ ನೀರು ಬಳಸದಂತೆ ಬೆಂಗಳೂರು ಜಲಮಂಡಳಿ ಖಡಕ್ ಸೂಚನೆ . BIGG BREAKING: ಮೆಟ್ರೋ ಟ್ರ್ಯಾಕ್ʼನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ: ವೈಟ್ ಫೀಲ್ಡ್- ಚಲ್ಲಘಟ್ಟ ಸಂಚಾರ ಸ್ಥಗಿತ! ಇದೇ ಮಾರ್ಚ್ 25 ರಂದು ನಡೆಯುವ ಹೋಳಿ ಹಬ್ಬಕ್ಕೆ ಸಜ್ಜಾಗಿದ್ದ ಹೋಟೆಲ್ ಹಾಗೂ ರೆಸಾರ್ಟ್ಗಳಿಗೆ ಜಲಮಂಡಳಿ ಶಾಕ್ ಹೋಳಿ ಹಬ್ಬದಲ್ಲಿ ರೈನ್ ಡ್ಯಾನ್ಸ್ಗೆ ಕಾವೇರಿ ನೀರು ಹಾಗೂ ಬೋರ್ ವೆಲ್ ನೀರು ಬಳಸದಂತೆ ಖಡಕ್ ಸೂಚನೆ ಈಗಾಗಲೇ ಬೆಂಗಳೂರಿನಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ ಈ ಹಿನ್ನಲೆ…
ಬೆಂಗಳೂರು: ಟ್ರಾಫಿಕ್ ಕಾನ್ಸ್ ಟೇಬಲ್ ಗೆ ಬೈಕ್ ಸವಾರನಿಂದ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಘಟನೆ ಸದಾಶಿನಗರ ಠಾಣಾ ವ್ಯಾಪ್ತಿಯ ಪಿ.ಎಸ್.ಜಂಕ್ಷನ್ ನಲ್ಲಿ ನಡೆದಿದೆ. BIGG BREAKING: ಮೆಟ್ರೋ ಟ್ರ್ಯಾಕ್ʼನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ: ವೈಟ್ ಫೀಲ್ಡ್- ಚಲ್ಲಘಟ್ಟ ಸಂಚಾರ ಸ್ಥಗಿತ! ರಾತ್ರಿ 8.30ರ ಸುಮಾರಿಗೆ ಸಿಗ್ನಲ್ ಜಂಪ್ ಮಾಡಿ ಕಾನ್ಸ್ ಟೇಬಲ್ ನಿಂತಿದ್ದ ಐಲ್ಯಾಂಡ್ ಬಳಿ ಬಂದ ಆಕ್ಟಿವ್ ಬೈಕ್ ಸವಾರ ಪ್ರತೀಕ್ ಸಿಗ್ನಲ್ ಸರಿಯಾಗಿ ಕೊಡುವುದಕ್ಕೆ ಆಗೋದಿಲ್ಲ ಎಂದು ಜಗಳ ತೆಗೆದ ಬೈಕ್ ಸವಾರ ಈ ವೇಳೆ ಜಗಳ ಬೇಡ ಎಂದು ಪ್ರತಿಕ್ ನನ್ನ ಸಮಾಧಾನ ಮಾಡುತ್ತಿದ್ದ ಜೊತೆಗಿದ್ದ ಯುವತಿ ಆದರೂ ಕಾನ್ಸ್ಟೇಬಲ್ ಶಿವರಾಜ್ ಗೆ ಅವಾಚ್ಯವಾಗಿ ನಿಂದಿಸಿ ಸ್ಥಳದಿಂದ ಎಸ್ಕೇಪ್ ಆಗುತ್ತಿದ್ದ ಪ್ರತೀಕ್ ಆತನನ್ನು ಹಿಡಿಯಲು ಪ್ರಯತ್ನಿಸಿದ ಕಾನ್ಸ್ಟೇಬಲ್ ಗೆ ಕೈಯಿಂದ ಹೊಡೆದು ಹಲ್ಲೆ ಬಳಿಕ ಎಸ್ಕೇಪ್ ಆಗ್ತಿದ್ದ ಪ್ರತೀಕ್ ನನ್ನ ಹಿಡಿದ ಕೋಬ್ರಾ ಸಿಬ್ಬಂದಿ ಮತ್ತು ಸಾರ್ವಜನಿಕರು ಈ ಬಗ್ಗೆ FIR ದಾಖಲಿಸಿ ಆರೋಪಿ…
ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಸಮಾರಂಭ ಇಂದು ಹೈದ್ರಾಬಾದ್ ನಲ್ಲಿ ನೆರವೇರಿದೆ. ನಿರ್ಮಾಪಕ ಅಲ್ಲು ಅರವಿಂದ್ ಅವರು ಬೌಂಡ್ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಹಸ್ತಾಂತರಿಸಿದರು. ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಟಾರ್ ನಿರ್ದೇಶಕ ಶಂಕರ್ ಅವರು ಬೋನಿ ಕಪೂರ್ ಮತ್ತು ಅನ್ಮೋಲ್ ಶರ್ಮಾ ಕ್ಯಾಮೆರಾ ಚಾಲನೆ ನೀಡಿದರು. ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಬೋರ್ಡ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಇದು ರಾಮ್ಚರಣ್ ನಟನೆಯ 16ನೇ ಸಿನಿಮಾ. ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಬುಚ್ಚಿಬಾಬು ನಿರ್ದೇಶನದ ಇನ್ನು…
ನವದೆಹಲಿ: ಫ್ರೀಜ್ ಆಗಿರುವುದು ಕಾಂಗ್ರೆಸ್ (Congress) ಖಾತೆ ಅಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯೇ ಫ್ರೀಜ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಗೃಹ ಸಚಿವರು ಉದ್ದೇಶ ಪೂರ್ವಕವಾಗಿ ಇದನ್ನು ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ಮಾತನಾಡಿ, ಒಂದು ಮನೆ ಅಥವಾ ವ್ಯವಹಾರದ ಆರ್ಥಿಕ ಮೂಲಗಳನ್ನು ನಿರ್ಬಂಧಿಸಿದರೆ ಏನಾಗಬಹುದು ಎಂದು ನೀವು ಯೋಚಿಸಿ. ಒಂದು ತಿಂಗಳಿಂದ ನಮ್ಮ ಖಾತೆಗಳನ್ನು ನಿರ್ಬಂಧಿಸಿದ್ದು ನಮ್ಮ ಪರಿಸ್ಥಿತಿಯೂ ಹೀಗೆ ಆಗಿದೆ. ನಮಗೆ ಚುನಾವಣಾ ಪ್ರಚಾರ (Election Campaign) ಮಾಡಲು ಸಾಧ್ಯವಾಗುತ್ತಿಲ್ಲ, ಜಾಹೀರಾತು ನೀಡಲು ಸಾಧ್ಯವಾಗುತ್ತಿಲ್ಲ, ವಿಮಾನ ಇರಲಿ ರೈಲ್ವೇ ಮೂಲಕ ಪ್ರಯಾಣ ಮಾಡಲು ಸಾಧ್ಯವಾಗುತ್ತಿಲ್ಲ. ಆದರೆ ಬಿಜೆಪಿ ನಾಯಕರು ವಿಶೇಷ ವಿಮಾನದಲ್ಲಿ ಓಡಾಡುತ್ತಿದ್ದಾರೆ ಎಂದು ದೂರಿದರು. ಸಾಂವಿಧಾನಿಕ ಸಂಸ್ಥೆಗಳು ಪ್ರಜಾಪ್ರಭುತ್ವ ರಕ್ಷಣೆಗೆ ಇದೆ. ಆದರೆ ಚುನಾವಣಾ ಆಯೋಗ ಈ ಬಗ್ಗೆ ಒಂದು ಮಾತು ಆಡುತ್ತಿಲ್ಲ. ಯಾವ ಸಂಸ್ಥೆಗಳು ಮಾತನಾಡುತ್ತಿಲ್ಲ, https://ainlivenews.com/those-with-these-health-problems-should-not-eat-eggplant/ ಇದು ಯಾವ ಪ್ರಜಾಪ್ರಭುತ್ವ? ಇಂದು…
ಬೆಂಗಳೂರು: ಅತ್ತಿಗುಪ್ಪೆ ಮೆಟ್ರೊ ಸ್ಟೇಷನ್ ನಲ್ಲಿ ಟ್ರ್ಯಾಕ್ ಮೇಲೆ ಜಿಗಿದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಆದರೆ ಆ ವ್ಯಕ್ತಿ ಯಾರೆಂದು ಈವರೆಗೂ ತಿಳಿದುಬಂದಿಲ್ಲ. ಸ್ಥಳಕ್ಕೆ ಚಂದ್ರಾಲೇಔಟ್ ಪೊಲೀಸರು ಭೇಟಿ ನೀಡಿದ್ದು ಸಿಸಿಟಿವಿ ಮೂಲಕ ಪರಿಶೀಲನೆ ನಡೆಸುತಿದ್ದಾರೆ. ಸುಮಾರು 2 ಗಂಟೆ ಸುಮಾರಿಗೆ ನಡೆದಿರುವ ಘಟನೆಯಾಗಿದ್ದು ಅತ್ತಿಗುಪ್ಪೆ ಮೆಟ್ರೊ ಸ್ಟೇಷನ್ ನಲ್ಲಿ ಈ ಅಚಾತುರ್ಯ ನಡೆದಿದೆ. ಹಾಗೆ ಬಿ ಎಂ ಆರ್ ಸಿ ಎಲ್ ಯಿಂದ ವ್ಯಕ್ತಿಯ ಸಾಹಸದ ಬಗ್ಗೆ ಟ್ವೀಟ್ ಅತ್ತಿಗುಪ್ಪೆ ನಿಲ್ದಾಣದಲ್ಲಿ ಮಧ್ಯಾಹ್ನ 2.10ಕ್ಕೆ ರೈಲಿನ ಮುಂದೆ ಒಬ್ಬರು ಜಿಗಿದಿದ್ದಾರೆ ಎಂದು ತಿಳಿಸಲಾಗಿದೆ. ಪ್ರಸ್ತುತ ಮಾಗಡಿ ರಸ್ತೆಯಿಂದ ವೈಟ್ಫೀಲ್ಡ್ ಫೀಲ್ಡ್ ನಡುವೆ ಮಾತ್ರ ರೈಲುಗಳು ಓಡುತ್ತಿವೆ ಮಾಗಡಿ ರಸ್ತೆಯಿಂದ ಚಲ್ಲಘಟ್ಟಕ್ಕೆ ಯಾವುದೇ ಸೇವೆಗಳಿಲ್ಲ ಎಂದು BMRCL ನಿಂದ ಸ್ಪಷ್ಟನೆ ನೀಡಲಾಗಿದೆ.
ನವದೆಹಲಿ: ಉತ್ತರಾಖಂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ (Uniform Civil Code Bil) ಬೆಂಬಲ ವ್ಯಕ್ತಪಡಿಸಿರುವ ಖ್ಯಾತ ಚಿತ್ರ ಸಾಹಿತಿ ಜಾವೇದ್ ಅಖ್ತರ್ (Javed Akhtar), ಇದೇ ವೇಳೆ ಮುಸ್ಲಿಮರ ಬಹುಪತ್ನಿತ್ವ ನೋಡಿ ಬೇರೆಯವರಿಗೆ ಹೊಟ್ಟೆಕಿಚ್ಚು ಎಂದು ಹಾಸ್ಯ ಮಾಡಿದ್ದಾರೆ. ಹಿಂದೂಗಳು (Hindu) ಅನಧಿಕೃತವಾಗಿ ಇಬ್ಬರು ಪತ್ನಿಯರನ್ನು ಹೊಂದಿರುತ್ತಾರೆ. ಮಾಹಿತಿ ಪ್ರಕಾರ ಇಂತಹವರ ಸಂಖ್ಯೆ ಹೆಚ್ಚಾಗಿಯೇ ಇದೆ. https://ainlivenews.com/father-says-not-to-eat-junk-food-daughter-lost-her-life/ ಹೀಗಾಗಿ ಸಂಹಿತೆಯಲ್ಲಿ ಮುಸ್ಲಿಮರಿಗೆ ಮಾತ್ರ ಬಹುಪತ್ನಿತ್ವ ನಿಷೇಧ ಮಾಡುವುದು ಸರಿಯಲ್ಲ. ನಾನು ಸಮಾನ ಹಕ್ಕು ಮತ್ತು ಕಾನೂನಿನ (Law) ಪರವಾಗಿದ್ದೇನೆ. ನನ್ನ ಮಗ ಮತ್ತು ಮಗಳಿಗೂ ಆಸ್ತಿಯಲ್ಲಿ ಸಮಪಾಲು ನೀಡಿದ್ದೇನೆ. ಹಾಗೆಯೇ ಇದು ಎಲ್ಲರಿಗೂ ಅನ್ವಯವಾಗುವಂತೆ ಇರಬೇಕು. ಮುಸ್ಲಿಮರನ್ನು ಟೀಕಿಸುವುದಕ್ಕೆ ಮಾತ್ರವೇ ಜಾರಿಗೆ ತಂದಂತೆ ಆಗಬಾರದು ಎಂದು ಮನವಿ ಮಾಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಉತ್ತರಾಖಂಡ ಸರ್ಕಾರ (Uttarakhand Government) ಏಕರೂಪ ನಾಗರಿಕ ಸಂಹಿತೆಯನ್ನು ಘೋಷಣೆ ಮಾಡಿತು