ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ ಬರುವುದು ವಿಶ್ವಾಸ ಇದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಹೇಳಿದರು. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೆ ಸಹಜ, ಸ್ಪರ್ಧೆ ಆರೋಗ್ಯಕರವಾಗಿರಬೇಕು ಎಂದು ಹೇಳಿದರು. Loksabha Election: ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಭರ್ಜರಿ ತಯಾರಿ: ಕರ್ನಾಟಕಕ್ಕೆ ರಾಹುಲ್ ಗಾಂಧಿ ಕರೆಸಲು ಪ್ಲ್ಯಾನ್!? ಕುಕ್ಕರ್ ಹಂಚಿಕೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಬಗ್ಗೆ ಸುದ್ದಿಗೋಷ್ಟಿ ಮಾಡಿದ್ದಾರೆ. ಈಗಾಗಲೇ ಏನಾಗ್ತಿದೆ ಅಂತ ಗೊತ್ತಿದೆ. ಪ್ರತೀ ಬಾರಿ ಚುನಾವಣೆ ಸಹಜ, ಆದ್ರೆ, ಆರೋಗ್ಯಕರ ಸ್ಪರ್ಧೆ ಆಗಬೇಕು. ಪ್ರಜಾತಂತ್ರ ವ್ಯವಸ್ಥೆಗೆ ಅರ್ಥ ಇರಬೇಕು. ಸ್ಪರ್ಧೆ ಆರೋಗ್ಯಕರ ಆಗಿರಬೇಕು ಅನ್ನೋದು ನನ್ನ ಆಶಯ ಎಂದು ಅಭಿಪ್ರಾಯಪಟ್ಟರು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ನೋಡಿ ಬಿಜೆಪಿ, ಎನ್ಡಿಎ ಪರ ಅಲೆ ಇದೆ. ಇದು ಹ್ಯಾಟ್ರಿಕ್ ಅಂತ ಹೇಳಬಹುದು. ಮೂರನೇ ಬಾರಿ ಮೋದಿಯವರು ವಿಜಯ ಸಾಧಿಸಲಿದ್ದಾರೆ. 400ಕ್ಕೂ ಹೆಚ್ಚು…
Author: AIN Author
ಕೋಲಾರ: ಶ್ರೀರಾಮನ ಫ್ಲೆಕ್ಸ್, ಹಿಂದೂ ಧ್ವಜ ತೆರವುಗೊಳಿಸಿ ತಿಪ್ಪೆಗೆಸೆದು ಅಪಮಾನ ಮಾಡಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಎರಡು ದಿನಗಳಲ್ಲಿ ಅಮಾನತುಗೊಳಿಸದಿದ್ದರೆ ಪ್ರತಿಭಟನೆಗೆ ಮುಂದಾಗ ಬೇಕಾಗುತ್ತದೆ ಎಂದು ಸಂಸದ ಎಸ್. ಮುನಿಸ್ವಾಮಿ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನ ಫ್ಲೆಕ್ಸ್, ಧ್ವಜದಲ್ಲಿ ಯಾವುದೇ ರಾಜಕೀಯ ವ್ಯಕ್ತಿಯ ಭಾವ ಚಿತ್ರ ಇರಲಿಲ್ಲ. ರಾಮನ ಧ್ವಜ ತೆರವುಗೊಳಿಸಿದ ಮಾದರಿಯಲ್ಲಿಯೇ ಮಸೀದಿಗಳ ಮೇಲೆ ಹಾರಾಡುತ್ತಿರುವ ಅನ್ಯ ದೇಶದ ಧ್ವಜಗಳನ್ನೂ ತೆರವುಗೊಳಿಸಲು ಜಿಲ್ಲಾಡಳಿತ ಮುಂದಾಗಲಿ ಎಂದು ಸವಾಲು ಹಾಕಿದರು. https://ainlivenews.com/good-news-for-tourists-direct-flight-from-bangalore-to-lakshadweep/ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗನಿಂದ ಹಿಂದೂ ವಿರೋಧಿ ಚಟುವಟಿಕೆಗಳು ಮಿತಿ ಮೀರಿವೆ. ಬಕ್ರಿದ್ ದಿನ ಕ್ಲಾಕ್ ಟವರ್ನಲ್ಲಿ ತಲ್ವಾರ್ ಬಾಗಿಲು ನಿರ್ಮಿಸಲು, ಟಿಪ್ಪು ಸುಲ್ತಾನ್, ಬಾಬರ್ ಫ್ಲೆಕ್ಸ್ ಅಳವಡಿಸಲು ಅನುಮತಿ ಬೇಕಾಗಿಲ್ಲ. ರಾಮನ ಫ್ಲೆಕ್ಸ್ ಅಳವಡಿಸಲು ಕಡ್ಡಾಯವಾಗಿ ಅನುಮತಿ ಬೇಕು. ಟವರ್ನಲ್ಲಿ ತಲ್ವಾರ್ ಅಳವಡಿಸಿರುವ ಬಗ್ಗೆ ಡಿಸಿ, ಎಸ್ಪಿ ಅವರನ್ನು ಕೇಳಿದಾಗ ಗಮನಕ್ಕೆ ಬಂದಿಲ್ಲ ಎಂದಿದ್ದರು. ಇವರೆಲ್ಲಒಂದು ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಮನಗರ: ಕಾಂಗ್ರೆಸ್ ಶಾಸಕರಿಂದ ಮತದಾರರಿಗೆ ಸೀರೆ ಹಂಚಿರುವ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ (JDS) ಯುವನಾಯಕ ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಸಂಬಂಧ ರಾಮನಗರದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಿಖಿಲ್, 3,700 ಡ್ರೆಸ್ ಮೆಟೀರಿಯಲ್, ಸೀರೆಗಳ ಅಕ್ರಮ ಸಂಗ್ರಹ ಮಾಡಲಾಗಿದೆ. 14 ಲಕ್ಷ ಮೌಲ್ಯದ ವಸ್ತಗಳನ್ನ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದು ಶಾಸಕ ಇಕ್ಬಾಲ್ ಹುಸೇನ್ಗೆ ಸಂಬಂಧಿಸಿದ ವಸ್ತುಗಳು ಎಂದು ದಾಖಲೆ ಸಮೇತ ನಿಖಿಲ್ ಫೋಟೋ ಬಿಡುಗಡೆ ಮಾಡಿದ್ದಾರೆ. ಕಳೆದ 15-20ದಿನದಿಂದ ಕುಕ್ಕರ್, ಸೀರೆ ಹಂಚಲಾಗ್ತಿದೆ ಅಂತ ಆರೋಪಿಸಿರುವ ನಿಖಿಲ್, ಈ ಬಗ್ಗೆ ನಿನ್ನೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರೂ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಆದರೂ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕುರಿತು ಚುನಾವಣಾ ಆಯೋಗ ಪಾರದರ್ಶಕವಾಗಿ ಕೆಲಸ ಮಾಡ್ತಿದ್ಯಾ ಎಂದು ಜಿಲ್ಲಾಡಳಿತವನ್ನು ನಿಖಿಲ್ (Nikhil Kumaraswamy) ಪ್ರಶ್ನೆ ಮಾಡಿದ್ದಾರೆ. https://ainlivenews.com/good-news-for-tourists-direct-flight-from-bangalore-to-lakshadweep/ ರಾಜ್ಯ ಚುನಾವಣಾ ಆಯೋಗದವರೇ ನೀವು ಪಾರದರ್ಶಕವಾಗಿ ಚುನಾವಣೆ ಮಾಡಿ. ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರನ್ನು ಬಂಡುಕೋರ ನಾಯಕ ಎಂದು ವ್ಯಂಗ್ಯವಾಡಿದ್ದಾರೆ. Loksabha Election: ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಭರ್ಜರಿ ತಯಾರಿ: ಕರ್ನಾಟಕಕ್ಕೆ ರಾಹುಲ್ ಗಾಂಧಿ ಕರೆಸಲು ಪ್ಲ್ಯಾನ್!? ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರುವ ಅವರು, ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘ವೀಕ್ ಪಿಎಂ’ ಎಂದು ಜರಿದಿದ್ದಾರೆ. ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲೇ ಇದ್ದರು. ಆದ್ರೂ ನಿಮಗೆ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಯಾಕೆ ಕ್ರಮಕೈಗೊಂಡಿಲ್ಲ ಎಂದು ಕುಟುಕಿದ್ದಾರೆ.
ಹೈದರಾಬಾದ್: ವ್ಯಾಪಾರಿಯೊಬ್ಬ ಐಸ್ಕ್ರೀಂ ಮಾರುತ್ತಲೇ ಹಸ್ತಮೈಥುನ ಮಾಡಿಕೊಂಡು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ನಡೆದಿದ್ದು, ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ವಾರಂಗಲ್ ಜಿಲ್ಲೆಯ ನೆಕ್ಕೊಂಡದಲ್ಲಿ ರಾಜಸ್ಥಾನ ಮೂಲದ ಕಲುರಾಮ್ ಕುರ್ಬಿಯಾ, ತಳ್ಳುವ ಗಾಡಿಯಲ್ಲಿ ಐಸ್ಕ್ರೀಂ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದನು. ಒಂದು ದಿನ ಕುರ್ಬಿಯಾ ಐಸ್ಕ್ರೀಂ ಮಾರಾಟ ಮಾಡಲು ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದಾಗ ಹಸ್ತಮೈಥುನ ಮಾಡಿದ್ದಾನೆ. ಇದನ್ನು ಗಮನಿಸಿದ ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಈ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ಕೂಡಲೇ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇತ್ತ ವೈರಲ್ ಆದ ವೀಡಿಯೋ ನೋಡಿ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. https://twitter.com/HateDetectors/status/1770165901259932112?ref_src=twsrc%5Etfw%7Ctwcamp%5Etweetembed%7Ctwterm%5E1770165901259932112%7Ctwgr%5E4d4e26ab488c427eb6b06be18fb580a25924271b%7Ctwcon%5Es1_&ref_url=https%3A%2F%2Fin.mashable.com%2Fculture%2F71765%2Fsemen-in-falooda-telangana-ice-cream-seller-caught-masturbating-and-contaminating-ice-cream-in-viral ಇನ್ನೂ ತೆಲಂಗಾಣ ರಾಜ್ಯದ ವಾರಂಗಲ್ ಜಿಲ್ಲೆಯ ನೆಕ್ಕೊಂದಾ ಮಂಡಲದಲ್ಲಿ ಐಸ್ ಕ್ರೀಂ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ. ಆತ ಮಾರಾಟ ಮಾಡುವ ಐಸ್ ಕ್ರಿಂ…
ಬೆಂಗಳೂರು: ಟಿ-20 ವಿಶ್ವಕಪ್ ತಂಡದ ಪ್ರಯೋಜಕತ್ವ ಪಡೆಯಲು ಮುಂದಾದ ಕೆಎಂಎಫ್ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಟೆಂಡರ್ ಗೆ ಆಹ್ವಾನ ಜೂನ್ನಲ್ಲಿ ನಡೆಯಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ಒಂದು ಅಥವಾ ಹೆಚ್ಚಿನ ತಂಡಗಳನ್ನ ಪ್ರಾಯೋಜಕತ್ವ ಪಡೆಯಲು ಚಿಂತನೆ Summer Health Food: ಬೇಸಿಗೆಯಲ್ಲಿ ದೇಹವನ್ನು ಕೂಲ್ ಆಗಿಟ್ಟುಕೊಳ್ಳಲು ಇಂತಹ ಆಹಾರ ಸೇವಿಸಿ! ಐಸಿಸಿ ಟಿ20 ವಿಶ್ವಕಪ್ 2024ರಲ್ಲಿ ಭಾಗವಹಿಸುವ ಒಂದು ಅಥವಾ ಹೆಚ್ಚಿನ ತಂಡಗಳ ಲೀಡ್ ಆರ್ಮ್ ಜೆರ್ಸಿಯಲ್ಲಿ ಲೋಗೋ ಎಡಗೈ ಬ್ಯಾಟ್ಸ್ಮನ್ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್ಮನ್ಗಳ ಎಡಗೈ ಮೇಲೆ ನಂದಿನಿ ಲೋಗೋ ಹಾಕಲು ಮುಂದಾದ ಕೆಎಂಫ್ ಲೋಗೋವನ್ನು ಪ್ರಚಾರ ಮಾಡಲು ಕೆಎಂಎಫ್ ನಿಂದ ಟೆಂಡರ್ ಗೆ ಆಹ್ವಾನ ಈ ವರ್ಷ ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ಜೂನ್ 1 ರಿಂದ 29ರ ವರೆಗೆ ನಡೆಯಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ನೀತಿ ಸಂಹಿತೆ ಜಾರಿಗೆಯಾಗಿರೋ ಹಿನ್ನೆಲೆ ಚುನಾವಣಾ ಆಯೋಗದ ಅನುಮತಿ ಪಡೆದು ಟೆಂಡರ್ನ್ನು ಅಂತಿಮಗೊಳಿಸಲಿದ್ದೇವೆ ಅಂತಾ ಕೆಎಂಎಫ್ ಅಧಿಕಾರಿಗಳ ಮಾಹಿತಿ…
ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ (KS Eshwarappa) ಪಕ್ಷದ ಹಿರಿಯ ನಾಯಕರು. ಬಂಡಾಯದಂತಹ ಯಾವುದೇ ನಿರ್ಧಾರ ಅವರು ಮಾಡಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ತಿಳಿಸಿದ್ದಾರೆ. ಈಶ್ವರಪ್ಪ ಬಂಡಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಶ್ವರಪ್ಪ ಅಂತಹ ಯಾವುದೇ ನಿರ್ಧಾರ ಮಾಡಲ್ಲ. ಒಂದು ವಾರ ಕಾದು ನೋಡಿ ಎಲ್ಲವೂ ಸರಿ ಆಗುತ್ತದೆ. ಈಶ್ವರಪ್ಪ ಪಕ್ಷ ಬಿಡಲ್ಲ. ಯಡಿಯೂರಪ್ಪ-ಈಶ್ವರಪ್ಪ ನಡುವೆ ಏನು ಮಾತುಕತೆ ಆಗಿದೆ ನಮಗೆ ಗೊತ್ತಿಲ್ಲ. ಯಡಿಯೂರಪ್ಪ (BS Yediyurappa) ಏನು ಮಾತು ಕೊಟ್ಟಿದ್ದಾರೋ ಗೊತ್ತಿಲ್ಲ. ಇದನ್ನು ಯಡಿಯೂರಪ್ಪ-ಈಶ್ವರಪ್ಪ ಕೂತು ಮಾತನಾಡಬೇಕು. ಹೈಕಮಾಂಡ್ ನಾಯಕರು ಇದನ್ನು ನೋಡಿಕೊಳ್ಳುತ್ತಾರೆ. ಆಕಾಂಕ್ಷಿಗಳಿಗೆ ಟಿಕೆಟ್ ಸಿಗದೇ ಇದ್ದಾಗ ಅಸಮಾಧಾನ ಸಹಜ. ಹೀಗಾಗಿ ಈಶ್ವರಪ್ಪ ಹೀಗೆ ರಿಯಾಕ್ಟ್ ಮಾಡುತ್ತಾರೆ. ಹೈಕಮಾಂಡ್ ನಾಯಕರು ಅವರ ಜೊತೆ ಮಾತನಾಡುತ್ತಾರೆ. ಅವರು ಪಕ್ಷ ಬಿಡುವುದಿಲ್ಲ, ಎಲ್ಲವೂ ಸರಿ ಆಗುತ್ತದೆ ಎಂದರು. Loksabha Election: ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಭರ್ಜರಿ ತಯಾರಿ: ಕರ್ನಾಟಕಕ್ಕೆ ರಾಹುಲ್ ಗಾಂಧಿ ಕರೆಸಲು…
ಬೆಂಗಳೂರು : SSLC ಪರೀಕ್ಷೆ ಪ್ರಾರಂಭಕ್ಕೂ ಮುನ್ನವೇ ಶಿಕ್ಷಣ ಇಲಾಖೆಗೆ ಹೊಸ ತಲೆನೋವು ಶುರುವಾಗಿದ್ದು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಖಾಸಗಿ ಶಾಲಾ ಶಿಕ್ಷಕರು ಖಾಸಗಿ ಶಾಲಾ ಶಿಕ್ಷಕರನ್ನ ಪರೀಕ್ಷಾ ಮೇಲ್ವಿಚಾರಕರಾಗಿ ನೇಮಕ ಮಾಡದ ಹಿನ್ನೆಲೆ ಕೇವಲ ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರನ್ನ ಪರೀಕ್ಷಾ ಮೇಲ್ವಿಚಾರಕರಾಗಿ ನೇಮಕ ಮಾಡಲಾಗಿದೆ. ಹೀಗಾಗಿ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಖಾಸಗಿ ಶಾಲಾ ಶಿಕ್ಷಕರು ಪರೀಕ್ಷಾ ಮೇಲ್ವಿಚಾರಕರಾಗಿ ನಮ್ಮನ್ನ ಪರಿಗಣಿಸುವಂತೆ ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಮನವಿ ಮಾಡಿದ್ರೂ ಪರೀಕ್ಷಾ ಕೆಲಸದಿಂದ ದೂರ ಉಳಿಯುವುದಾಗಿ ಎಚ್ಚರಿಕೆ ನೀಡಿದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ವಿರೋಧ ವ್ಯಕ್ತಪಡಿಸಿದ್ದಾರೆ ಸರ್ಕಾರಿ ಖಾಸಗಿ ಅಂತ ಬೇಧ ಭಾವ ಮಾಡ್ತಿದೆ ಶಿಕ್ಷಣ ಇಲಾಖೆ ಈ ಕೂಡಲೇ ಪರೀಕ್ಷಾ ಮೇಲ್ವಿಚಾರಕರಾಗಿ ಖಾಸಗಿ ಶಾಲಾ ಶಿಕ್ಷಕರನ್ನ ನೇಮಕ ಮಾಡುವಂತೆ ಒತ್ತಾಯ ಶಿಕ್ಷಣ ಇಲಾಖೆಗೆ ಒತ್ತಾಯ ಮಾಡಿದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ
ಬೆಂಗಳೂರು: ಹನಿ ನೀರಿಗೂ ಕಷ್ಟ ಪಡುವ ಸಮಯದಲ್ಲಿ ನಗರದಲ್ಲಿ ಭರ್ಜರಿ ಹೋಲಿ ಪಾರ್ಟಿ ನೀರಿನ ಅನವಶ್ಯಕ ದುರ್ಬಳಕೆ ಆದರೆ ದಂಡ ಎಂದಿರುವ ಜಲಮಂಡಳಿ ಫುಲ್ ಸೈಲೆಂಟ್ ದೊಡ್ಡವರ ಮಸ್ತಿಗೆ ಇಲ್ಲ ಯಾವುದೇ ಬ್ರೇಕ್ ಬಿಗೆಸ್ಟ್ ಪೂಲ್ ರೂಫ್ ಟಾಪ್ ಓಪನ್ ಏರ್ ಹೋಲಿ ಪಾರ್ಟಿಗೆ ಸಿದ್ಧತೆ ನೀರಿನ ಸಮಸ್ಯೆ ಇರುವ ಕಾರಣ ಅನೇಕ ಕಡೆಗಳಲ್ಲಿ ಸ್ವಿಮಿಂಗ್ ಪೂಲ್ ಬಂದ್ ಈ ನಡುವೆ ಹೋಳಿ ಹಬ್ಬಕ್ಕಾಗಿ ಸ್ವಿಮಿಂಗ್ ಪೂಲ್, ರೈನ್ ಡ್ಯಾನ್ಸ್ ಆಯೋಜನೆ ಎಲ್ಲೆಲ್ಲಿ ಪೂಲ್ ಪಾರ್ಟಿ? * ಲಿರಾಯ್ ಗ್ರಾಂಡ್, ಯಶವಂತಪುರ * ದಿ ಪಾರ್ಕ್ ಬೆಂಗಳೂರು * * ಸ್ಕೈಡೆಕ್ ಬೈ ಶೆರಲಾಕ್ * * ಹೋಟೆಲ್ ರಾಯಲ್ ಆರ್ಕಿಡ್ * * ಸೈಡ್ ವಾಕ್ ಬಾರ್ ರೆಸಾರ್ಟ್ ಗಳಲ್ಲೂ ರೈನ್ ಡ್ಯಾನ್ಸ್ ಕ್ರೇಝ್ ಕಾರ್ಯಕ್ರಮ ಹೊರವಲಯದ ರೆಸಾರ್ಟ್ ಗಳಲ್ಲೂ ಭರ್ಜರಿ ಪೂಲ್ ಪಾರ್ಟಿ ಆಯೋಜನೆ ಪೂಲ್ ಪಾರ್ಟಿ ಬಗ್ಗೆ ಜಲಮಂಡಳಿ, ಬಿಬಿಎಂಪಿ ಫುಲ್ ಸೈಲೆಂಟ್ ಫ್ರೀ ಕಲರ್ ಅಂಡ್…
ಶಿವಮೊಗ್ಗ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವಪ್ಪ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗ (Shivamogga) ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಬಿ.ವೈ ರಾಘವೇಂದ್ರನನ್ನ ಸೋಲಿಸಿ, https://ainlivenews.com/good-news-for-tourists-direct-flight-from-bangalore-to-lakshadweep/ ಬಿಜೆಪಿ ಕಟ್ಟಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿದ್ದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.