ಬೆಂಗಳೂರು:- ಭಕ್ತಿ ಗೀತೆ ಹಾಕಿದ್ದಕ್ಕೆ ಯುವಕನ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಮಾಡಿದ ಪ್ರಕರಣದ ನಂತರ ಇದೀಗ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೇ ಕಾರಣ ಎಂದು ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಘೋಷಣೆಗಳ ಘೋಷಣೆ ಮತ್ತು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟದಂತಹ ಘಟನೆಗಳ ನಂತರ ಈಗ ಬೆಂಗಳೂರಿನ ಹಿಂದೂ ಅಂಗಡಿಯವನೊಬ್ಬ ಹನುಮಾನ್ ಚಾಲೀಸಾ ನುಡಿಸಿದ್ದಕ್ಕಾಗಿ ಅಮಾನುಷವಾಗಿ ಹಲ್ಲೆ ನಡೆಸಲಾಯಿತು. ಕಾಂಗ್ರೆಸ್ ಆಡಳಿತದ ತುಷ್ಟೀಕರಣ ನೀತಿಗಳು ಕರ್ನಾಟಕವನ್ನು ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ಹದಗೆಡುವ ಮೂಲಕ ಆಮೂಲಾಗ್ರ ಸ್ಥಿತಿಗೆ ತಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಹಿಂದೂಗಳು ಮತ್ತು ಹಿಂದೂ ಸಂಸ್ಥೆಗಳ ಮೇಲಿನ ಈ ದಾಳಿಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡುತ್ತೇನೆ. ಅವರ ತುಷ್ಟೀಕರಣ ರಾಜಕಾರಣವು ಅನಾಗರಿಕರನ್ನು ರಾಜ್ಯದಲ್ಲಿ…
Author: AIN Author
ಬಳ್ಳಾರಿ:- ಇಂದು ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಅಪ್ರಜಾತಾಂತ್ರಿಕವಾಗಿ ಹೇರಿರುವ ಎನ್.ಈ.ಪಿಯನ್ನು ಹಿಂಪಡೆಯಬೇಕು, ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು, ನಾಲ್ಕು ವರ್ಷದ ಪದವಿಯನ್ನು ಹಿಂಪಡೆಯಬೇಕು, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸ್ಥಾಪಿಸಬೇಕು ಹಾಗೂ ಇನ್ನಿತರ ಆಗ್ರಹಗಳನ್ನೊಳಗೊಂಡ ವಿದ್ಯಾರ್ಥಿ ಪ್ರಣಾಳಿಕೆಯನ್ನು ಎಐಡಿಎಸ್ಓ ಜಿಲ್ಲಾ ಅಧ್ಯಕ್ಷರು ಕೆ.ಈರಣ್ಣ ಬಿಡುಗಡೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಎಐಡಿಎಸ್ಓ ರಾಜ್ಯ ಸೆಕ್ರೆಟರಿಯೇಟ್ ಸದಸ್ಯರಾದ ರವಿಕಿರಣ್ ಜಿ.ಪಿ ಮಾತನಾಡಿ, ಎಲ್ಲಾ ಸರ್ಕಾರಗಳು ದೇಶದ ನೈಜ ಸಮಸ್ಯೆಗಳನ್ನು ಮರೆಮಾಚುತ್ತಿವೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ-ಧರ್ಮದ ವಿಷಯಗಳನ್ನು ಮುನ್ನಲೆಗೆ ತರಲು ಯತ್ನಿಸುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪ್ರಜ್ಞೆವಂತಿಕೆ ಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂಸತ್ ನಲ್ಲಿ ಚರ್ಚೆಮಾಡುವ ರೀತಿ ಧ್ವನಿಯೆತ್ತಬೇಕಿದೆ ಎಂದರು. ದೇಶದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್ ಹಾಗೂ ನೇತಾಜಿಯವರ ಉತ್ತರಾಧಿಕಾರಿಗಳಾಗಿ ಅನ್ಯಾಯ ಮತ್ತು ಅಸತ್ಯದ ವಿರುದ್ಧ ಹೋರಾಡುವ ಉದಾತ್ತ ರಾಜಕೀಯವನ್ನು ನಡೆಸಬೇಕಿದೆ. ಪ್ರತಿಯೊಬ್ಬರಿಗೂ ಪ್ರಜಾತಾಂತ್ರಿಕ, ವೈಜ್ಞಾನಿಕ ಧರ್ಮನಿರಪೇಕ್ಷ ಶಿಕ್ಷಣವು ಖಾತ್ರಿಪಡಿಸುವಂತೆ ನಮ್ಮನ್ನಾಳುವ ಸರ್ಕಾರಗಳನ್ನು…
ಹುಬ್ಬಳ್ಳಿ:- ತಾಲೂಕಿನ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ , ಎಸ್ ಎಸ್ ಟಿ ಹಾಗೂ ಎಫ್ ಎಸ್ ಟಿ 3 ರ, ನಾಗಾ ನಾಯ್ಕ ,ಪೋಲೀಸ್ ಸಿಬ್ಬಂದಿಗಳು ತಡೆದು ತಪಾಸಣೆ ಮಾಡಿದಾಗ ಕಾರಿನಲ್ಲಿ ಓಂಪ್ರಕಾಶ್ ಎನ್ನುವವರಿಗೆ ಸೇರಿದ್ದ ದಾಖಲೆ ಇರದ 3,82,000 ರೂಪಾಯಿ ನಗದು ಇರುವುದು ಕಂಡುಬಂದಿದ್ದು, ನಿಯಮಾನುಸಾರ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಆಗಿರುವ ಹು-ಧಾ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಂಸಿಸಿ ನೋಡೆಲ್ ಅಧಿಕಾರಿ ರವೀಂದ್ರ ಕುಮಾರ್, ಪೋಲೀಸ್ ಇನ್ಸ್ಪೆಕ್ಟರ್ ಕಿರಣ್ ಕುಮಾರ,ಎ.ಎಸ್.ಐ ಆರ್ ಜಿ ನಾಯ್ಕ, ಎಎಸ್ ಐ ಜಿ.ಸಿ.ಕಡೇಮನಿ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ವಶಪಡಿಸಿಕೊಂಡಿರುವ ದಾಖಲೆ ಇಲ್ಲದ ಹಣವನ್ನು ತಕ್ಷಣೆ ಖಜಾನೆಯಲ್ಲಿ ಡಿಪಾಜಿಟ್ ಮಾಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ಜಿಲ್ಲಾ ಸೀಜರ್ ಕಮಿಟಿಗೆ ವರದಿ ಸಲ್ಲಿಸಲಾಗಿದೆ ಎಂದು…
ಎಲೆಕ್ಷನ್ ಕ್ಯಾಂಪೇನ್ಗೆ ನನ್ನ ಯಾರು ಕರೆಯೋದಿಲ್ಲ ಎಂದು ರವಿಚಂದ್ರನ್ ಹೇಳಿದ್ದಾರೆ. ಸಾಮಾನ್ಯವಾಗಿ ಕ್ಯಾಂಪೇನ್ಗೆ ನನ್ನನ್ನು ಯಾರೂ ಕರೆಯುವುದಿಲ್ಲ. ಅವರಿಗೆ ನನ್ನ ಜಾತಿ ಅಡ್ಡ ಬರುತ್ತದೆ ಎನಿಸುತ್ತದೆ. ಅದು ನನಗೆ ಗೊತ್ತಿಲ್ಲ. ಒಂದು ವೇಳೆ ಪ್ರಚಾರಕ್ಕೆ ಕರೆದರೆ ನಾನು ಸ್ನೇಹಿತರಿಗೆ ಇಲ್ಲ ಅಂತ ಹೇಳಲ್ಲ. ನನಗೆ ಯಾವುದೇ ಅಭ್ಯಂತರ ಇಲ್ಲ. ಆದರೆ ಯಾವುದೇ ಪಕ್ಷಕ್ಕೆ ನಾನು ಅಂಟಿಕೊಳ್ಳಲ್ಲ. ನನ್ನದು ಕಾಮನ್ ಪಾರ್ಟಿ. ಪ್ರಚಾರಕ್ಕೆ ಹೋಗುವ ಐಡಿಯಾ ಇರಲ್ಲ. ಬೇರೆ ವಿಚಾರಗಳ ಮೇಲೂ ಅದು ಅವಲಂಬಿತ ಆಗಿರುತ್ತೆ’ ಎಂದು ರವಿಚಂದ್ರನ್ ಹೇಳಿದ್ದಾರೆ.
ಹುಬ್ಬಳ್ಳಿ: ಸತತ ಪರಿಶ್ರಮ ಹಾಗೂ ಶ್ರದ್ಧೆ ಇದ್ದರೆ ಏನ್ನನ್ನಾದರು ಸಾಧನೆ ಮಾಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಕೆ.ಜಿ. ಶಾಂತಿ ಸಲಹೆ ನೀಡಿದರು. ಜೆಸಿ ನಗರದಕರ್ನಾಟಕ ವಾಣಿಜ್ಯದ್ಯೋದಮ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ತನ್ನ ನಂಬಿದ ಕುಟುಂಬಕ್ಕಾಗಿ ಜೀವನವನ್ನೇ ಮಹಿಳೆಯರು ತ್ಯಾಗ ಮಾಡುತ್ತಾರೆ. ಇದರ ಜೊತೆಗೆ ಯಾವುದೇ ಸವಾಲು ಕೊಟ್ಟರೂ ಸರಿಯಾಗಿ ನಿಭಾಯಿಸುತ್ತಾರೆ. ಇದರ ಜತೆಗೆ ಆರೋಗ್ಯದ ಕಡೆಗೂ ಮಹಿಳೆಯರು ಗಮನ ಹರಿಸಬೇಕು. ಅಡೆತಡೆ ಬಂದರೂ ಹೆದರದೇ ಹಿಮ್ಮೆಟ್ಟಿಸಬೇಕು ಎಂದು ಸಲಹೆ ನೀಡಿದರು. ಉದ್ಯಮಿ ಕಬಿತಾ ಸಿಂಗ್ ಮಾತನಾಡಿ, ಜೀವನ ಸಾಗಿಸಲು ಕೇವಲ ಉದ್ಯಮ ಆಯ್ಕೆ ಮಾಡಿಕೊಂಡರೆ ಸಾಲದು ಬದ್ಧತೆ ಮುಖ್ಯ ಎಂದರು. ಹೆಸ್ಕಾಂ ಎಸ್ಇ ಶರಣಮ್ಮ ಜಂಗಿನ್ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಮಹಿಳೆಯರದೇ ಆಡಳಿತ ಇದರಿಂದ ಗೊತ್ತಾಗುತ್ತದೆಮಹಿಳೆಯರೂ ಯಾವುದರಲ್ಲಿಯೂ ಕಡಿಮೆ ಇಲ್ಲವೆಂಬುದನ್ನು ಸಾಬೀತುಪಡಿಸಬೇಕು ಎಂದ ಅವರು ಮಹಿಳೆಯರ ಸಾಧನೆಗೆ ಮನೆಯವರು ಸಹಕಾರ ಕೊಡಬೇಕು ಎಂದರು. ಕೆಸಿಸಿಐ ಮಹಿಳಾ…
ಬೆಂಗಳೂರು:- 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಸರ್ಕಾರದ ಮೇಲ್ಮನವಿಯ ತೀರ್ಪು ಕಾಯ್ದಿರಿಸಿದೆ. ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು. ಹೀಗಾಗಿ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು. ಇದೀಗ ವಿಚಾರಣೆ ಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟಿಸುವ ಸಾಧ್ಯತೆಗಳಿವೆ. ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಇತ್ತೀಚೆಗೆ ರದ್ದುಪಡಿಸಿ ಆದೇಶ ನೀಡಿತ್ತು.
ಬೆಳಗಾವಿ:- ಬಿಜೆಪಿ ನಾಯಕರು ಯಾರು ಕಾಂಗ್ರೆಸ್ ಸೇರುವ ಬಗ್ಗೆ ಮಾತಾಡಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನುಭವಿಸಿದ ಸೋಲಿನಿಂದ ಬಿಜೆಪಿ ಪಾಠ ಕಲಿತಿಲ್ಲ, ಯಾಕೆಂದರೆ ಆಗ ಆಗ ನಿರ್ಮಾಣವಾಗಿದ್ದ ಸ್ಥಿತಿಯೇ ಈಗಲೂ ನಿರ್ಮಾಣವಾಗಿದೆ, ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ, ಅದನ್ನ ಬಿಜೆಪಿ ನಾಯಕರು ಗಣನೆಗೆ ತೆಗೆದುಕೊಳ್ಳುತ್ತಿಲ್ಲ, ಆಗ ಮಾಡಿದ ತಪ್ಪನ್ನೇ ಈಗಲೂ ಮಾಡುತ್ತಿದ್ದಾರೆ, ಇದು ನಿಶ್ಚಿತವಾಗಿಯೂ ಕಾಂಗ್ರೆಸ್ ಪಕ್ಷಕ್ಕೆ ನೆರವಾಗಲಿದೆ ಎಂದು ಹೇಳಿದರು. ಟಿಕೆಟ್ ಆಕಾಂಕ್ಷಿಗಳಾಗಿದ್ದವರು ಅದು ಸಿಗದ ಕಾರಣ ತೀವ್ರವಾಗಿ ಬೇಸರಗೊಂಡು ಬಂಡಾಯ ಪ್ರವೃತ್ತಿ ಪ್ರದರ್ಶಿಸುತ್ತಿರುವುದು ನಿಜವಾದರೂ, ಇದುವರೆಗೆ ಯಾರೂ ಕಾಂಗ್ರೆಸ್ ಸೇರುವ ಪ್ರಯತ್ನಕ್ಕೆ ಮುಂದಾಗಿಲ್ಲ, ಆದರೆ ಬರುವವರಿಗೆ ಪಕ್ಷದ ಬಾಗಿಲು ತೆರೆದಿದೆ ಎಂದು ಹೇಳಿದರು.
ಕೋಲಾರ:- ಲೋಕಸಭಾ ಚುನಾವಣೆ ಹಿನ್ನೆಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾ ಅಧಿಕಾರಿಗಳು, ಕೋಲಾರ ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ವಾಹನ, ಸೀರೆಗಳನ್ನು ಜಪ್ತಿ ಮಾಡಲಾಗಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಚೆಕ್ಪೋಸ್ಟ್ ಬಳಿ ಚಿಂತಾಮಣಿಯಿಂದ ಆಂಧ್ರಕ್ಕೆ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 1.90 ಲಕ್ಷ ರೂಪಾಯಿ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ. ಚಿಂತಾಮಣಿ ಮೂಲದ ಕೃಷ್ಣಪ್ಪಗೆ ಸೇರಿದ ಹಣ, ಕಾರು ಜಪ್ತಿ ಮಾಡಲಾಗಿದೆ. ಆಂಧ್ರಪ್ರದೇಶದಲ್ಲಿ ಲೋಕಸಭಾ, ವಿಧಾನಸಭಾ ಚುನಾವಣೆ ಹಿನ್ನೆಲೆ ಅಂತಾರಾಜ್ಯ ಗಡಿ ಭಾಗದ ಚೆಕ್ಪೋಸ್ಟ್ನಲ್ಲಿ ಇನ್ಸ್ಪೆಕ್ಟರ್ ಗೊರವಿನಕೊಳ್ಳ ನೇತೃತ್ವದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.
ಕೋಲಾರ:- ಜೆಡಿಎಸ್ ಕೋಲಾರದಿಂದಲೂ ಕಣಕ್ಕಿಳಿಯಲಿದೆ ಎಂದು ಎಚ್ಡಿಕೆ ಘೋಷಿಸಿದ್ದಾರೆ. ಇದಕ್ಕೆ ಕೋಲಾರ ಹಾಲಿ ಸಂಸದ ಮುನಿಸ್ವಾಮಿ ಮುನಿಸಿಕೊಳ್ಳದೇ ಅವರನ್ನು ಗೌರವಿಸುತ್ತೇನೆ ಎಂದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇತ್ತೀಚಿನ ದಿನಗಳಲ್ಲಿ ನನಗೆ ಟಿಕೆಟ್ ಆಗಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಬಟ್ಟೆ ಹೋಲಿಸಿದ್ದೇನೆ, ಫೋಟೋ ಶೂಟ್ ಮಾಡಿಸಿದ್ದಾರೆ ಅಂತ ಹೇಳ್ತಿದ್ದಾರೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದ್ರು ನಾನು ಕೆಲಸ ಮಾಡುತ್ತೇನೆ. NDA ಮೈತ್ರಿ ಕೂಟ ಗೆಲ್ಲಬೇಕು. ಮೋದಿ ಮತ್ತೆ ಪ್ರಧಾನಿ ಆಗಬೇಕು ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕೋಲಾರ ಜೆಡಿಎಸ್ ಪಾಲಾದರೂ ಸಹ ಯಾವುದೇ ಬೇಸರ ಇಲ್ಲ ಎನ್ನುವ ಮಾತುಗಳನ್ನಾಡಿದ್ದಾರೆ 6 ತಿಂಗಳಿಂದ ಬಿಜೆಪಿ ಹೈಕಮಾಂಡ್ ನಿಂದ ಮೂರ್ನಾಲ್ಕು ಸರ್ವೇ ಮಾಡಲಾಗಿದೆ. ಯಾರಿಗೆ ಟಿಕೇಟ್ ನೀಡಿದ್ರೆ ಗೆಲ್ಲುತ್ತಾರೆ ಅಂತ ನಮ್ಮ ಹೈಕಮಾಂಡ್ ಗೂ ತಿಳಿದಿದೆ. 2019 ರ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಮತಗಳಿಂದ ಗೆದ್ದಿದ್ದೇನೆ ಅಂತ ಜೆಡಿಎಸ್ ನ ಕೆಲವರು ಹೇಳಿದ್ದಾರೆ. ದೇಶ ಭಕ್ತರು ನನಗೆ ಮತ…
ಬೆಂಗಳೂರು:- ಭಕ್ತಿ ಗೀತೆ ಹಾಕಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಕೇಸ್ ಗೆ ಸಂಬಂಧಿಸಿದಂತೆ FIR ದಾಖಲಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಗೆ ಮುಖೇಶ್ ದೂರು ನೀಡಿದ್ದು, ದೂರಿನನ್ವಯ ಪೊಲೀಸರು FIR ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರಡಿ ಐವರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಮುಕೇಶ್ ಮೇಲೆ ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್ ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಕೇಸ್ ದಾಖಲಿಸಿದ್ದು, ಐವರ ಪೈಕಿ ಮೂವರನ್ನು ಬಂಧಿಸಿದ್ದಾರೆ. ಘಟನೆ ಸ್ಥಳಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದಾರೆ. ಬಳಿಕ ಕುಟುಂಬಸ್ಥರ ಜೊತೆ ಮಾತುಕತೆ ಮಾಡಿದ್ದಾರೆ. ನಂತರ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದು, ‘ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗಿ ಜೋರಾಗಿ ಹಾಡು ಹಾಕಲು ಅವಕಾಶವಿಲ್ಲ ಎಂದು ತನ್ನ ಅಂಗಡಿಯಲ್ಲಿ ಭಜನೆ ನುಡಿಸುತ್ತಿದ್ದ ಹಿಂದೂ ಅಂಗಡಿಯವನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ಇಂತಹ ಕೃತ್ಯಗಳಿಗೆ ಧೈರ್ಯ ತುಂಬಿರುವುದು ಕಾಂಗ್ರೆಸ್ ತುಷ್ಟೀಕರಣ…