ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾಗಿ 9 ತಿಂಗಳು ಭರ್ತಿಯಾಗಿದೆ. ಅಂದಿನಿಂದ ಇವತ್ತಿನ ತನಕವೂ ಸಾರಿಗೆ ಬಸ್ ಗಳು ತುಂಬಿತುಳುಕ್ತಿವೆ. ಶಕ್ತಿ ಯೋಜನೆಗಾಗಿ ಹಗಲು ರಾತ್ರಿ ಶ್ರಮಿಸುವ ಮಹಿಳಾ ಕಂಡೆಕ್ಟರ್ ಗೆ ಟಾರ್ಚರ್ ಆಗ್ತಿದ್ಯಾ?..ಈ ಹಿಂಸೆಯಲ್ಲಿ ಕೆಲಸ ಮಾಡಲು ಆಗ್ತಿಲ್ಲ ksrtc ನಿರ್ವಾಹಕಿಯೊಬ್ಬರು ಹಾಕಿರುವ ಕಣ್ಣಿರು, ಇಂತಹದೊಂದು ಪ್ರಶ್ನೆ ಮೂಡಲು ಕಾರಣವಾಗಿದೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಶಕ್ತಿ ಯೋಜನೆ ಆರಂಭವಾದ ದಿನದಿಂದ ತುಂಬಿ ತುಳುಕಿದ ಬಸ್ಗಳು ಈಗಲೂ ರಶ್ ಆಗಿಯೇ ಓಡಾಡ್ತಿವೆ. ನಿತ್ಯ ಪ್ರಯಾಣಿಕರ ಗೋಳಾಟ.. ಪರದಾಟ…ಗದ್ದಲ, ಗೊಂದಲ ಗಲಾಟೆಗಳ ನಡುವೆ 9 ತಿಂಗಳು ಭರ್ತಿಯಾಗಿ.. 10ನೇ ತಿಂಗಳು ಸಾರಿಗೆ ಬಸ್ ನಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸ್ತಿದ್ದಾರೆ. ಆದರೆ ಶಕ್ತಿ ಯೋಜನೆ ಬಸ್ ಕಂಡೆಕ್ಟರ್ ಹಾಗೂ ಡ್ರೈವರ್ ಗಳಿಗೆ ಟಾರ್ಚರ್ ಗೆ ಕಾರಣವಾಗ್ತಿಯಾ? ಇಂತಹದೊಂದು ಪ್ರಶ್ನೆಗೆ ಕಾರಣವಾಗಿದ್ದು ಈ ವಿಡಿಯೋ ಇವರು ಕೆ.ಎಸ್.ಆರ್.ಟಿ.ಸಿ ಕಂಡೆಕ್ಟರ್…ದೀಪಾಂಜಲಿ ನಗರದ ksrtc ಡಿಪೋ 5ದಲ್ಲಿ ಕೆಲಸ ಮಾಡ್ತಿದ್ದಾರೆ. ಅಧಿಕಾರಿಗಳು ಕೊಡ್ತಿರುವ ಟಾರ್ಚರ್ ಗೆ ಕೆಲಸ ಮಾಡಲ್ತಿಲ್ಲ…
Author: AIN Author
ರಾಮನಗರ: ನಾನು ಪಾರ್ಲಿಮೆಂಟ್ಗೆ (Parliament) ಹೋಗಬಾರದೆಂದು ನಿರ್ಧಾರ ಮಾಡಿದ್ದೇನೆ. ರಾಜ್ಯ ರಾಜಕೀಯದಲ್ಲಿ ಇರಬೇಕೆಂಬುದು ನನ್ನ ನಿಲುವು ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್ (CP Yogeshwar) ಹೇಳಿದ್ದಾರೆ. ಚನ್ನಪಟ್ಟಣದಲ್ಲಿ (Channapatna) ಎ.ಮಂಜುನಾಥ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಯೋಗೇಶ್ವರ್ ಮಾತನಾಡಿದರು. ಸಿಪಿವೈ ಸ್ಪರ್ಧೆ ಮಾಡದೇ ಈಗಲೂ ನನಗೆ ಬೆಂಬಲ ನೀಡಿದ್ದಾರೆಂಬ ಡಿ.ಕೆ.ಸುರೇಶ್ (DK Suresh) ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ದರೆ ಸುರೇಶ್ ಗೆಲ್ಲುತ್ತಿರಲಿಲ್ಲ. ಹಾಗಾಗಿ ಈ ಬಾರಿ ಬುಡಸಮೇತ ತೆಗೆಯಬೇಕು ಎಂದು ಮಂಜುನಾಥ್ (Dr Manjunath) ಅವರನ್ನು ತಂದಿದ್ದೇವೆ. ಡಿ.ಕೆ.ಸುರೇಶ್ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಮಂಜುನಾಥ್ ಅವರ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ. ಡಾ.ಮಂಜುನಾಥ್ ವಿರುದ್ಧ ಗೆಲುವು ಸುಲಭವಿದ್ದರೆ ಕುಕ್ಕರ್, ಹಣ ಯಾಕೆ ಕೊಡುತ್ತಿದ್ದರು ಎಂದು ಪ್ರಶ್ನಿಸಿದರು. https://ainlivenews.com/good-news-for-job-seekers-application-invitation-for-247-pdo-posts/ ಕಳೆದ ಬಾರಿ ಮುನಿರತ್ನ ಕಾಂಗ್ರೆಸ್ (Congress) ಪರವಾಗಿದ್ದರು. ಆದರೂ ಬಿಜೆಪಿಗೆ ಅಲ್ಲಿ 30,000 ಲೀಡ್ ಇತ್ತು. ಇವತ್ತು ಮುನಿರತ್ನ ಬಿಜೆಪಿಯಲ್ಲಿದ್ದಾರೆ. ನಮ್ಮ ದೌರ್ಭಾಗ್ಯ…
ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಂದ ಸುದೀರ್ಘವಾಗಿ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಬಳಿಕ ಮಾಧ್ಯಮಗೋಷ್ಠಿಯಲ್ಲಿ ಹಂಚಿಕೊಂಡ ಮಾಹಿತಿಗಳ ಹೈಲೈಟ್ಸ್…. ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. KRS ನಲ್ಲಿ 11.02, ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ 14000 ಸರ್ಕಾರಿ ಬೋರ್ ವೆಲ್ ಗಳಲ್ಲಿ 6900 ಬತ್ತಿವೆ. ಹೀಗಾಗಿ ಸಮಸ್ಯೆ ಆಗಿದೆ. 110 ಹಳ್ಳಿಗಳಲ್ಲಿ 55 ಹಳ್ಳಿಗಳಿಗೆ ಸಮಸ್ಯೆ ಆಗಿದೆ. ಜೂನ್ ಅಂತ್ಯಕ್ಕೆ ಕಾವೇರಿ 5 ನೇ ಹಂತದ ಕಾಮಗಾರಿ ಮುಕ್ತಾಯವಾಗಿ 775 MLD ಹೆಚ್ಚುವರಿ ನೀರು ಸಿಗತ್ತೆ. ಇದು 110 ಹಳ್ಳಿಗಳಿಗೆ ಸರಬರಾಜು ಆಗ್ತದೆ 313 ಸ್ಥಳಗಳಲ್ಲಿ ಹೊಸದಾಗಿ ಬೋರ್ ವೆಲ್ ಕೊರೆಸುತ್ತಿದ್ದೇವೆ. 1200 ನಿಷ್ಕ್ರಿಯ ಬೋರ್ ಗಳಿಗೆ ಮರುಜೀವ ನೀಡಲಾಗುವುದು. ಕೊಳೆಗೇರಿ, ಎತ್ತರದ ಪ್ರದೇಶದಲ್ಲಿ ಹಾಗೂ ಬೋರ್ ವೆಲ್ ಮೇಲೆ ಅಬಲಂಬಿತ ಪ್ರದೇಶಗಳಲ್ಲಿ KMF ಸೇರಿ ಎಲ್ಲಾ ಖಾಸಗಿ ಟ್ಯಾಂಕರ್ ಗಳನ್ನು ಬಳಸಲು ಹೇಳಿದ್ದೇನೆ…
ಬೆಂಗಳೂರು: ಸಮಾಜ ಕಾರ್ಯಕ್ಕೆ ಬಳಕೆಯಾಗ್ತಿದ್ದ ಟ್ರಸ್ಟ್ ವೊಂದರ ಒಳಗೆ ಅತಿಕ್ರಮಣ ಪ್ರವೇಶ ಆರೋಪ ಕೇಳಿ ಬಂದಿದೆ.. ಹೌದು ಡಾ. ಮೋದಿ ಪಬ್ಲಿಕ್ ಟ್ರಸ್ಟ್ ಗೇಟ್ ಮುರಿದು ಒಳ ನುಗ್ಗಿದ್ದ ಯತಿರಾಜ್ ನಾಯ್ಡು ಎಂಬಾತ ಅತಿಕ್ರಮಣ ಪ್ರವೇಶ ಮಾಡಿದ್ದಾನೆ ಅನ್ನೋ ಗಂಭೀರ ಆರೋಪ ಕೇಳಿಬಂದಿದೆ… ಸದ್ಯ ಟ್ರಸ್ಟ್ ನ ಮ್ಯಾನೇಜರ್ ಆಗಿ ಸುಭಾಷ್ ಮೋದಿ ಎಂಬುವರು ಡಾ.ಮೋದಿ ಪಬ್ಲಿಕ್ ಟ್ರಸ್ಟ್ ನ ಅಧಿಕಾರ ವಹಿಸಿಕೊಂಡಿದ್ದಾರಂತೆ.. ಇನ್ನು ಟ್ರಸ್ಟ್ ನ ಕೆಲ ಜಾಗವನ್ನ ಸಾಮಾಜಿಕ ಕಾರ್ಯಕ್ಕೆ ಬಳಕೆಯಾಗಲಿ ಅಂತಾ ಬೇರೆಯವರುಗೂ ನೀಡ್ತಿದ್ದಾರೆ. https://youtu.be/194w1n9_wFU ಅಲ್ಲದೆ ಅದೇ ರೀತಿ ಮಹಿಳಾ ಸಾಮಾಜಿಕ ಕಾರ್ಯಕರ್ತರಿಗೆ ಅದ್ರಲ್ಲಿ ಒಂದಷ್ಟು ಜಾಗ ಬಿಟ್ಕೊಟ್ಟಿದ್ರು.. ಆದ್ರೆ ಈದೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಆಗಾಗ ಈ ರೀತಿ ಅತಿಕ್ರಮಣ ಆಗ್ತಿದೆ ಅಂತಾ ಸುಭಾಷ್ ಮೋದಿ ಆರೋಪಿಸಿದ್ದಾರೆ.. ಯತಿರಾಜ್ ನಾಯ್ಡು ಎಂಬುವರು ಸಂಘಟನೆ ಮತ್ತು ಹೋರಾಟ ಹೆಸ್ರಲ್ಲಿ(ಶಾಲಿ) ತನ್ನ ಬೆಂಬಲಿಗರನ್ನ ಕರೆತಂದು ಟ್ರಸ್ಟ್ ಒಳಗೆ ನುಗ್ಗಿ ಅತಿಕ್ರಮಣ ಮಾಡಿದ್ದಲ್ಲದೇ ಆ ಜಾಗ ಖಾಲಿ ಮಾಡುವಂತೆ…
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕುಡಿಯೋ ನೀರಿಗೂ ಹಾಹಾಕಾರ ಶುರುವಾಗಿದೆ.ಯಾವ ಏರಿಯಾಗೆ ಹೋದರೂ, ಯಾವ ವಾರ್ಡ್ಗೆ ಹೋದರೂ ನೀರಿನ ಸಮಸ್ಯೆ ಎದ್ದು ಕಾಣುತ್ತಿದೆ . ಹಲವೆಡೆ ವಾರಕ್ಕೆ 2 ದಿನ ಮಾತ್ರ ಕಾವೇರಿ ನೀರು ಬರುತ್ತಿದೆ. ಬೋರ್ವೆಲ್ಗಳ ನೀರು ಕೂಡ ಸರಿಯಾಗಿ ಸಿಗುತ್ತಿಲ್ಲ. ಇದರಿಂದ ಬೆಂಗಳೂರು ನಿವಾಸಿಗರು ಕಂಗಾಲಾಗಿದ್ದಾರೆ. ನಗರದ ಗೊರಗುಂಟೆಪಾಳ್ಯದಲ್ಲಿರೋ ಜ್ಯೋತಿಬಾಫುಲೆನಗರದಲ್ಲಿ ನೀರಿಲ್ಲದೇ ಹೈರಾಣಾಗಿದ್ದಾರೆ. ಹೆಚ್ಚಾಗಿ ಕೂಲಿ ಕಾರ್ಮಿಕರು ವಾಸಿಸೋ ಜಾಗದಲ್ಲಿ ನೀರಿಗೆ ಹಾಹಾಕಾರ ಪ್ರತಿನಿತ್ಯ ನೀರಿಗಾಗಿ ಪರದಾಡ್ತಿರೋ ನಿವಾಸಿಗಳು (ಶಾಲಿನಿ )ನೀರಿಲ್ಲದೇ ಪರದಾಡ್ತಿರೋ 150 ಕುಟುಂಬಗಳು ಬೇರೆ ಬೇರೆ ಭಾಗಗಳಿಂದ ಕೆಲಸಕ್ಕಾಗಿ ಬಂದಿರೋ ಕಾರ್ಮಿಕರ ಕುಟುಂಬಗಳು ನಲ್ಲಿ ನೀರು ಬಂದ್ರೂ ಸಾಕಾಗದೇ ನಿವಾಸಿಗಳು ಹೈರಾಣು ಅಕ್ಕಪಕ್ಕದ ಏರಿಯಾಗಳಿಂದ ನೀರು ಹೊತ್ತು ತಂದು ಬದುಕು ನಡೆಸ್ತಿರೋ ಜನರು ನೀರಿಲ್ಲದೇ ಪ್ರತಿನಿತ್ಯ ಪರದಾಟ ನಡೆಸ್ತಿರೋ ಜನರು ನೀರು ಬರುತ್ತೆ ಅಂತಾ ರಾತ್ರಿಯಿಡಿ ಕಾಯುವ ಸ್ಥಿತಿ ನಿರ್ಮಾಣ ಕೆಲಸ ಕಾರ್ಯಗಳಿಗೆ ಹೋಗೋದಕ್ಕೂ ನೀರಿಲ್ಲದೇ ಇರೋದರಿಂದ ಸಮಸ್ಯೆ ನಮ್ಮ ಏರಿಯಾ ನೀರಿನ ಸಮಸ್ಯೆ(ಶಾಲಿನಿ)…
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಮಲೆನಾಡಿಗೆ ಆಗಮಿಸಿದರು. ವಿಶೇಷ ವಿಮಾನದ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಬಂದಿಳಿದರು. ಇನ್ನೂ ಕೆಲವೇ ಕ್ಷಣದಲ್ಲಿ ಸುಮಾರು 14 ಕಿ.ಮೀ ಎಸ್ಪಿಜಿ ಭದ್ರತೆಯಲ್ಲಿ ಕಾರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ. ವಿಮಾನ ನಿಲ್ದಾಣದ ಎನ್.ಆರ್.ಪುರ ರಸ್ತೆಯಿಂದ ಶಿವಮೊಗ್ಗದ( shivamogga) ಬಿ.ಹೆಚ್.ರಸ್ತೆ, ನೆಹರು ರಸ್ತೆ, ಬೈಪಾಸ್ ರಸ್ತೆ ಸರ್.ಎಂ. ವಿಶ್ವೇಶ್ವರಯ್ಯ ರಸ್ತೆ(L), ಸಂಗೊಳ್ಳಿ ರಾಯಣ್ಣ ಮೂಲಕ ಸಮಾವೇಶ ಸ್ಥಳಕ್ಕೆ ತೆರಳಲಿದ್ದಾರೆ. ಮೂರನೇ ಬಾರಿ ಶಿವಮೊಗ್ಗ ಜಿಲ್ಲೆಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವರು. ಕಳೆದ ಲೋಕಸಭಾ ಚುನಾವಣೆ ವೇಳೆ ರಾಷ್ಟ್ರೀಯ ಶಿಕ್ಷಣ ಸಮಿತಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. https://ainlivenews.com/is-your-name-missing-in-the-voter-list-how-to-add-see-details-here/ ಬಳಿಕ ಎರಡನೇ ಬಾರಿ, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಇಂದಿನ ಸಮಾವೇಶದಲ್ಲಿ ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ದಾವಣಗೆರೆ ಹಾಗೂ…
ನವದೆಹಲಿ: ಲೋಕಸಭಾ ಚುನಾವಣೆ ಹಾಗೂ ಮತ ಎಣಿಕೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನಾಂಕದಲ್ಲಿ ಬದಲಾವಣೆ ಮಾಡಿದೆ. ಏಪ್ರಿಲ್ 19ರಿಂದ ಮತದಾನ ಆರಂಭವಾಗಲಿದ್ದು, ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಸುವುದಾಗಿ ಕೇಂದ್ರ ಚುನಾವಣಾ ಲಾವಣ್ಯ ಆಯೋಗ ತಿಳಿಸಿದೆ. ಆದರೆ ಇದೀಗ ಅರುಣಾಚಲ ಹಾಗೂ ಸಿಕ್ಕಿಂ ವಿಧಾನಸಭೆ ಚುನಾವಣೆಯ ಮತ ಎಣಿಕೆಯನ್ನು ಜೂ.4ರ ಬದಲು ಜೂ.2ರಂದು ನಡೆಸುವಂತೆ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. https://ainlivenews.com/good-news-for-job-seekers-application-invitation-for-247-pdo-posts/ ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಯ ಅವಧಿ ಜೂನ್ 2ರಂದು ಮುಕ್ತಾಯಗೊಳ್ಳುವ ಹಿನ್ನೆಲೆ ಈ ಮಹತ್ತರ ಬದಲಾವಣೆ ತರಲಾಗಿದೆ. ಅರುಣಾಚಲ ಪ್ರದೇಶ ಹಾಗೂ ಸಿಕ್ಕಿಂ ವಿಧಾನಸಭೆಗೆ ಏಪ್ರಿಲ್ 19ರಂದು ಒಂದೇ ಹಂತದ ಮತದಾನ ನಡೆಯಲಿದೆ. ಇನ್ನು ಅರುಣಾಚಲ ಮತ್ತು ಸಿಕ್ಕಿಂ ಲೋಕಸಭಾ ಕ್ಷೇತ್ರಗಳ ಫಲಿತಾಂಶ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಶಿವಮೊಗ್ಗ: ಬಿಎಸ್ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಎಲ್ಲವೂ ಸರಿಯಾಗುತ್ತದೆ, ಎಲ್ಲವನ್ನು ಸರಿಪಡಿಸುವ ಕೆಲಸ ವರಿಷ್ಠರು ಮಾಡುತ್ತಾರೆ. ಬಿಎಸ್ ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ. ಸೈಕಲ್ನಲ್ಲಿ ರಾಜ್ಯಾದ್ಯಂತ ಸುತ್ತಾಡಿ ಪಕ್ಷ ಕಟ್ಟಿದ ಫಲವಾಗಿ ರಾಜ್ಯದಲ್ಲಿ ಇಂದು ಪಕ್ಷ ಬಲಿಷ್ಠವಾಗಿದೆ. ಯಡಿಯೂರಪ್ಪ ಅವರಿಂದಲೇ ಕೆಲವರು ಮಂತ್ರಿ ಆಗಿದ್ದಾರೆ ಎಂದು ಪರೋಕ್ಷವಾಗಿ ಕೆಎಸ್ ಈಶ್ವರಪ್ಪಗೆ ಟಾಂಗ್ ಕೊಟ್ಟರು. https://ainlivenews.com/is-your-name-missing-in-the-voter-list-how-to-add-see-details-here/ ಬಿಎಸ್ ಯಡಿಯೂರಪ್ಪನವರು ಕುತ್ತಿಗೆ ಹಿಸುಕಿದ್ದಾರೋ ಇಲ್ಲ ಎತ್ತರಕ್ಕೆ ಬೆಳೆಸಿದ್ದಾರೋ ಎಂದು ಲೋಕಸಭೆ ಚುನಾವಣೆ ಮುಗಿದ ಮೇಲೆ ಗೊತ್ತಾಗಲಿದೆ. ಎಲ್ಲವನ್ನೂ ಎದುರಿಸುವ ಧಮ್ ಮತ್ತು ತಾಕತ್ತು ನಮ್ಮ ಕಾರ್ಯಕರ್ತರಿಗೆ ಇದೆ. ಸಾಮೂಹಿಕವಾಗಿ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ಗೆಲ್ಲುವ ಪಕ್ಷಕ್ಕೆ ಸಮಸ್ಯೆ ಬಹಳ. ಕಾಂಗ್ರೆಸ್ಗೆ ಸಮಸ್ಯೆ ಯಾಕೆ ಇಲ್ಲ ಅಂದರೇ ಅಲ್ಲಿ ಹೋದರೆ ಠೇವಣಿ ಸಿಗುವುದಿಲ್ಲ ಎನ್ನುವುದು ಗೊತ್ತಿದೆ ಅದಕ್ಕೆ ಸಮಸ್ಯೆ ಇಲ್ಲ ಎಂದು ವ್ಯಂಗ್ಯವಾಡಿದರು.
ಬೆಂಗಳೂರು: ನಾನು ಯಶವಂತಪುರ ಎಂಎಲ್ಎ ಆಗಿದ್ದೆ.ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ವಲಸಿಗರು ಅನ್ನೋ ಪ್ರಶ್ನೆ ಬರೋದಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕುಟುಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವರು ಯಾರನ್ನ ಸಂಪರ್ಕ ಮಾಡ್ತಿದ್ದಾರೆ ಗೊತ್ತಿಲ್ಲ. ಸದಾನಂದಗೌಡರು ಸಿಎಂ ಆದವರು.ಅವರು ಪಕ್ಷದಲ್ಲಿ ಅನೇಕ ಜವಾಬ್ದಾರಿ ವಹಿಸಿದವರು.ಮೋದಿ ಅವರನ್ನ ಪ್ರಧಾನಿ ಮಾಡಬೇಕು ಅನ್ನೋದು ಎಲ್ಲರ ಗುರಿ.ಹಾಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡ್ತಾರೆ ಎಂದರು. Sadananda Gowda: ಕಾಂಗ್ರೆಸ್ ನಾಯಕರು ಸಂಪರ್ಕಿಸಿದ್ದು ನಿಜ: ಸತ್ಯ ಒಪ್ಪಿಕೊಂಡ ಡಿವಿಎಸ್ ಸೋಮಶೇಖರ್ ಅವರ ವಿರುದ್ಧ ಕ್ರಮ ಆಗದ ವಿಚಾರವಾಗಿ ಮಾತನಾಡಿದ ಅವರು,ಕ್ರಮವನ್ನ ನಾವು ಮಾತ್ರವಲ್ಲ, ಸ್ಪೀಕರ್ ಅವರು ತೆಗೆದುಕೊಳ್ಳಬೇಕು. ಸೋಮಶೇಖರ್ ರಾಜ್ಯಸಭೆಗೆ ಕಾಂಗ್ರೆಸ್ಗೆ ಮತ ಹಾಕಿದ ಮೇಲೆ ಅವರೇ ಹೊರಗೆ ಹೋಗಬೇಕಿತ್ತು.ಈಗ ಚುನಾವಣೆ ಮಾಡ್ತೀವಿ, ಮುಂದೆ ಏನು ಮಾಡಬೇಕು ಮಾಡ್ತೀವಿ ಎಂದು ಹೇಳಿದ್ದರು. ನಾನು ಯಶವಂತಪುರ ಎಂಎಲ್ಎ ಆಗಿದ್ದೆ.ಕ್ಷೇತ್ರದಲ್ಲಿ ಕೆಲಸ ಮಾಡಿದ್ದೇನೆ. ವಲಸಿಗರು ಅನ್ನೋ ಪ್ರಶ್ನೆ ಬರೋದಿಲ್ಲ ಎಂದರು.
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಭಾಗದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರ್ತಾರೆ ಎನ್ನುವ ವದಂತಿ ಹರಿದಾಡುತ್ತಿದ್ದು ಈ ಹಿನ್ನೆಲೆಯಲ್ಲಿ ಇಂದು ಸದಾನಂದ ಗೌಡರ ಮನವೊಲಿಕೆಗೆ ಮುಂದಾದ ಬಿಜೆಪಿ ನಾಯಕರು ಇಂದು ಸದಾನಂದಗೌಡರ ಹುಟ್ಟು ಹಬ್ಬ ಹಿನ್ನೆಲೆ ಆ ನೆಪದಲ್ಲಿ ಶುಭಕೋರಲು ಆಗಮಿಸಿದ ವಿಪಕ್ಷ ನಾಯಕ ಆರ್ ಅಶೋಕ್ ಅಶ್ವಥ್ ನಾರಾಯಣ್ ಈ ವೇಳೆ ಗೌಡರ ನಿವಾಸದೊಳಗೆ ಕರೆದುಕೊಂಡು ಹೋಗಿ ಮೂವರು ಪ್ರತ್ಯೇಕ ಚರ್ಚೆ ನಡೆಸಿದ್ದಾರೆ Sadananda Gowda: ಕಾಂಗ್ರೆಸ್ ನಾಯಕರು ಸಂಪರ್ಕಿಸಿದ್ದು ನಿಜ: ಸತ್ಯ ಒಪ್ಪಿಕೊಂಡ ಡಿವಿಎಸ್ ಸದ್ಯ ನಾಳೆ ಸುದ್ದಿಗೋಷ್ಟಿ ನಡೆಸುವೆ ಎಂದಿರೋ ಸದಾನಂದ ಗೌಡ ಟಿಕೆಟ್ ಮಿಸ್ ಹಾಗೂ ಕಾಂಗ್ರೆಸ್ ನಾಯಕರ ಸಂಪರ್ಕದ ಬಗ್ಗೆ ಹೇಳುವ ಸಾಧ್ಯತೆ ಈ ನಿಟ್ಟಿನಲ್ಲಿ ಸದನಂದ ಗೌಡರ ಜೊತೆ ಚರ್ಚಿಸಿ ಅವರನ್ನ ಸಮಾಧಾನ ಮಾಡುವ ಕೆಲಸಕ್ಕೆ ಮುಂದಾಗಿರೋ ನಾಯಕರು ಪರೋಕ್ಷವಾಗಿ ಬಿಎಸ್ ವೈ ವಿರುದ್ದ ಅಕ್ರೋಶ ಹೊರ ಹಾಕಿರೋ ಡಿವಿ ಸದಾನಂದಗೌಡ ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡಿಸಲು ನನ್ನ ಬಲಿಪಶು…