ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಂಥೆಂತ ಜನರಿರುತ್ತಾರೆ ಅಮದರೆ ಮಾನವೀಯತೆ ಇಲ್ಲದೆ ಇರುವ ಜನಗಳೇ ಹೆಚ್ಚು ಅನ್ನಬಹುದು ಯಾಕಂದರೆ ಮನುಷ್ಯನ ಮೇಲೆ ದರ್ಪ ತೋರಿಸಿದಂತೆ ಪಾಪ ಮೂಕ ಪ್ರಾಣಿಗಳ ಮೆಲೆಯೂ ತಮ್ಮ ಕ್ರೌರ್ಯತೆ ಮೆರೆದಿದ್ದಾರೆ ಹೌದು.. ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಮೂಕ ಪ್ರಾಣಿಯ ಮೇಲೆ ಇದೆಂಥಾ ದರ್ಪ ತೋರಿದ್ದು ಕರುವಿನ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದಿದ್ದಾರೆ. ಈ ಪಾಪಿಯ ಕ್ರೌರ್ಯ ಸಿಸಿ ಟಿವಿ ದೃಶ್ಯ ಲಭ್ಯವಾಗಿದೆ. ಮಾನವೀಯತೆಯೇ ನಾಚುವಂತಹ ಘಟನೆಕರುವಿನ ಮೇಲೆ ಕಾರು ಹತ್ತಿಸಿ ಕ್ರೌರ್ಯಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಘಟನೆ ಕರು ಚಕ್ರದಡಿ ಸಿಲುಕಿದ್ರೂ ಕರುಣೆ ತೋರದ ಪಾಪಿಕಾರು ಹತ್ತಿಸಿ ಎಸ್ಕೇಪ್ ಆದ ಆಸಾಮಿಮರಣ ವೇದನೆಯಿಂದ ನರಳಾಡಿದ ಕರುಹೊಟ್ಟೆ-ಕಾಲಿಗೆ ಗಂಭೀರ ಸ್ವರೂಪದ ಗಾಯವಾರದ ಹಿಂದೆ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಪಾಪಿಯ ಕ್ರೌರ್ಯದ ಸಿಸಿ ಟಿವಿ ದೃಶ್ಯ ಲಭ್ಯ
Author: AIN Author
ಆನೇಕಲ್: ಡಿಕೆ ಬ್ರದರ್ಸ್ ವರ್ಸಸ್ ದೋಸ್ತಿ ನಾಯಕರ ಜಿದ್ದಾಜಿದ್ದಿಯಿಂದ ಬೆಂಗಳೂರು ಗ್ರಾಮಾಂತರ ಕಣ ಈ ಬಾರಿ ರಣರಣ ಅಂತಿದೆ. ಆನೇಕಲ್ನ ಚಂದಾಪುರದಲ್ಲಿ ದೋಸ್ತಿನಾಯಕರು ಬೃಹತ್ ಸಮಾವೇಶ ನಡೆಸಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ರು. ಸಮಾವೇಶದ ಬಳಿಕ ಶಾಸಕ ಮುನಿರತ್ನ (Muniratna) ಮಾತಾಡಿ, ಬಡವರ ರಕ್ತ ಹೀರಿದ ರೆಡ್ ಕಲರ್ ನಮಗೆ ಬೇಡ. ಲಕ್ಷಾಂತರ ಜನರ ಜೀವ ಉಳಿಸಿದ ವೈಟ್ ಕಲರ್ ಡಾ.ಮಂಜುನಾಥ್ ಬೇಕು ಅಂದ್ರು. ಮಾಗಡಿ ಬಾಲಕೃಷ್ಣ, ರಾಮನಗರದ ಇಕ್ಬಾಲ್ ಹುಸೇನ್ ವಿರುದ್ಧ ಕೆಂಡ ಕಾರಿದರು. https://ainlivenews.com/good-news-for-job-seekers-application-invitation-for-247-pdo-posts/ ಡಾಕ್ಟರ್ ಮಂಜುನಾಥ್ (Dr. C.N Manjunath) ಬಲಿಕಾ ಬಕ್ರಾ ಎಂಬ ಶಾಸಕ ಇಕ್ಬಾಲ್ ಹುಸೈನ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಲೀಕಾ ಬಕ್ರಾ ಅಂದ್ರೆ ಏನು ಅಂತ ಅರ್ಥ ಗೊತ್ತಿದ್ಯಾ?. ಬಲಿ ಕೊಡೋದು ಅಂದ್ರೆ ಕುರಿಯನ್ನು ಸಾಯಿಸಿದ ಹಾಗೆ. ಡಾಕ್ಟರ್ ಮಂಜುನಾಥ್ ಅವರ ಸಾಧನೆ ಬಗ್ಗೆ ನಿಮಗೆ ಅರಿವಿದೆಯಾ?. ಅವರ ಬಗ್ಗೆ ಮಾತನಾಡುವ ಮುಂಚೆ ಆಲೋಚಿಸಬೇಕು ಎಂದು ವಾಗ್ದಾಳಿ ನಡೆಸಿದರು.
ಬೆಂಗಳೂರು: ಇಂದು ಜೆಡಿಎಸ್ ನಮಹತ್ವದ ಕೋರ್ ಕಮಿಟಿ ಸಭೆ ನಡೆಯಲಿದ್ದು ಇಂದೇ ಘೋಷಣೆಯಾಗಲಿದೆ ಜೆಡಿಎಸ್ ಸ್ಫರ್ಧಿಸೋ ಕ್ಷೇತ್ರಗಳ ಪಟ್ಟಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಜಿಟಿ ದೇವೇಗೌಡರ ನೇತೃತ್ವದಲ್ಲಿ ನಡೆಯಲಿರುವ ಸಭೆ… ನಗರದ ಜೆಪಿ ಭವನದಲ್ಲಿ ನಡೆಯಲಿರುವ ಸಭೆಯಾಗಿದ್ದು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿರುವ ಕೋರ್ ಕಮಿಟಿ ಸದಸ್ಯರು ಜೆಡಿಎಸ್ ಸ್ಪರ್ದೆ ಮಾಡುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಬೇಕಾದ ರಣತಂತ್ರ ಹಾಗೆ ಬಿಜೆಪಿ ಮೈತ್ರಿ ಅಭ್ಯರ್ಥಿಗಳನ್ನ ಗೆಲ್ಲಿಸಲು ಯಾವ ರೀತಿ ಕೆಲಸ ಮಾಡಬೇಕೆಂದು ಚರ್ಚೆ RCB ಕಪ್ ಗೆದ್ದಿದ್ದಕ್ಕೆ ಶುಭಕೋರಿದ ಸಿಎಂ ಸಿದ್ದರಾಮಯ್ಯ: ಕ್ರಿಕೆಟ್ ಪ್ರೇಮಿಯಾದ ನನಗೆ ಖುಷಿಕೊಟ್ಟಿದೆ ಇದು ಜೆಡಿಎಸ್ ಗೆ ಅಳಿವು ಉಳಿವಿನ ಪ್ರಶ್ನೆ ಈ ನಡುವೆ ಎಲ್ಲರು ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಕುಮಾರಸ್ವಾಮಿ ಸೂಚನೆ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲಿಸೋದು ನಮ್ಮ ಗುರಿ ಎಂದು ಕೆಲಸ ಮಾಡಿ ಯಾವ ಕ್ಷೇತ್ರದಲ್ಲೂ ಗೊಂದಲ ಮಾಡಿಕೊಳ್ಳದಂತೆ ಸಮನ್ವಯತೆಯೊಂದಿಗೆ ಕೆಲಸ ಮಾಡುವಂತೆ ಸೂಚನೆ ಇಂದಿನಿಂದಲೇ ಜೆಡಿಎಸ್ ಸ್ಪರ್ದೆ ಮಾಡುವ…
ಬೆಂಗಳೂರು: ಈ ಸಲ ಕಪ್ ನಮ್ದೆ ಎಂದು ಆರ್ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಹಾರೈಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರಿರುವ ಅವರು ಇಂದಿನ WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ ಎಂದರು. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ ಎಂದು ಬರೆದುಕೊಂಡಿದ್ದಾರೆ.
ಅಹಮದಾಬಾದ್: ಕಳೆದ ರಾತ್ರಿ ಗುಜರಾತ್ ವಿಶ್ವವಿದ್ಯಾಲಯದ (Gujarat University) ಹಾಸ್ಟೆಲ್ಗೆ ನುಗ್ಗಿದ ಗುಂಪೊಂದು, ನಮಾಜ್ ಮಾಡಿದ ಆರೋಪದ ಮೇಲೆ ಆಫ್ರಿಕಾ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಐವರು ವಿದೇಶಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಅವರು ಗುಜರಾತ್ನ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಮತ್ತು ನ್ಯಾಯಯುತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಅವರಿಗೆ ನಿರ್ದೇಶನ ನೀಡಿದ್ದಾರೆ. ಅಹಮದಾಬಾದ್ ಮೂಲದ ಕ್ಯಾಂಪಸ್ನಲ್ಲಿ ಯಾವುದೇ ಮಸೀದಿ ಇಲ್ಲ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಆದ್ದರಿಂದ ಅವರು ರಂಜಾನ್ ಸಮಯದಲ್ಲಿ ರಾತ್ರಿ ನೀಡಲಾಗುವ ತರಾವೀಹ್ – ನಮಾಜ್ ಮಾಡಲು ಹಾಸ್ಟೆಲ್ನೊಳಗೆ ಜಮಾಯಿಸಿದ್ದರು. ಸ್ವಲ್ಪ ಸಮಯದ ನಂತರ ದೊಣ್ಣೆಗಳು ಮತ್ತು ಚಾಕುಗಳೊಂದಿಗೆ ಮಾರಕಾಸ್ತ್ರಗಳೊಂದಿಗೆ ಗುಂಪೊಂದು ಹಾಸ್ಟೆಲ್ಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದೆ. ಅವರ ಕೊಠಡಿಗಳನ್ನು ಧ್ವಂಸಗೊಳಿಸಿದೆ. ಹಾಸ್ಟೆಲ್ನ ಸೆಕ್ಯುರಿಟಿ ಗಾರ್ಡ್ ಗುಂಪನ್ನು ತಡೆಯಲು ಪ್ರಯತ್ನಿಸಿ ವಿಫಲರಾದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. https://ainlivenews.com/good-news-for-job-seekers-application-invitation-for-247-pdo-posts/ ಅಫ್ಘಾನಿಸ್ತಾನ,…
ಕರ್ನಾಟಕ ಸಾಹಿತ್ಯಅಕಾಡೆಮಿ ಬೇಡ ಎಂದು ರಾಜ್ಯ ಸಭೆಗೆ ಪರಿಗಣಿಸಿ ಅಕ್ಕೈ ಪದ್ಮಶಾಲಿ ಸಿಎಂ ಸಿದದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯತ್ವದಿಂದ ಹೆಸರನ್ನ ಕೈಬಿಡಬೇಕು ಹಾಗೆ ಸದ್ಯವಿಧಾನ ಪರಿಷತ್ ಅಥವಾ ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಪರಿಗಣಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇತ್ತಿಚ್ಚೆಗೆ ಅಕ್ಕೈ ಪದ್ಮಾಶಾಲಿ ಹೆಸರನ್ನ ಅಕಾಡೆಮಿ ಸದಸ್ಯತ್ವಕ್ಕೆ ಪರಿಗಣಿಸಲಾಗಿತ್ತು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗೆ ಲೈಂಗಿಕ ಅಲ್ಪಸಂಖ್ಯಾತ ಪರ ಹಕ್ಕು ಹೋರಾಟಗಾರ್ತಿ ಅಕ್ಕೈ ಪತ್ರ ಮೂಲಕ ಮನವಿ ಸಮೂದಾಯದ ಶ್ರೆಯೀಭಿವೃದ್ದಿ, ಸಾಮಾಜಿಕ ಬಹಿಷ್ಕಾರ ವಿರುದ್ದ ನನ್ನ ಹೋರಾಟ ಈ ಕಾರಣಕ್ಕೆ ನನ್ನ ಮನವಿಯನ್ನ ಪುರಷ್ಕರಿಸುವಂತೆ ಮನವಿ
ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಆರ್ಸಿಬಿ ವನಿತೆಯರ (RCB Womens) ಗೆಲುವು ಎಲ್ಲೆಡೆ ಹರ್ಷೋದ್ಘಾರ ತರಿಸಿದೆ. ದೇಶಾದ್ಯಂತ ಇರುವ ಆರ್ಸಿಬಿ ಅಭಿಮಾನಿಗಳು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಸಂತಸದ ಸಂದೇಶಗಳನ್ನ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲೂ ನಾಯಕಿ ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ (Ellyse Perry), ಕನ್ನಡತಿ ಶ್ರೇಯಾಂಕ ಪಾಟೀಲ್ ಅವರನ್ನ ಹಾಡಿ ಹೊಗಳುತ್ತಿದ್ದಾರೆ. ಈ ವೇಳೆ ಗೆಲುವಿನ ಖುಷಿ ತಡೆಯಲಾರೆ ಕ್ರಿಕೆಟ್ ಲೋಕದ ಕಿಂಗ್ ವಿರಾಟ್ ಕೊಹ್ಲಿ (Virat Kohli) ತಕ್ಷಣವೇ ವೀಡಿಯೋ ಕಾಲ್ ಮಾಡಿ ವನಿತೆಯರ ತಂಡದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ. ನಾಯಕಿ ಸ್ಮೃತಿ ಮಂಧಾನ ಹಾಗೂ ಇತರ ಮಹಿಳಾ ಮಣಿಗಳಿಗೆ ಅಭಿನಂದನೆ ಸಲ್ಲಿದ್ದಾರೆ. ಅಷ್ಟೇ ಅಲ್ಲ ತಮ್ಮ ಇನ್ಸ್ಟಾಗ್ರಾಮ್ನಲ್ಲೂ ʻಸೂಪರ್ವುಮನ್ʼ ಎಂಬ ಬರಹದೊಂದಿಗೆ ಆರ್ಸಿಬಿ ಚಾಂಪಿಯನ್ಸ್ ಫೋಟೋವನ್ನ ಹಂಚಿಕೊಂಡಿದ್ದಾರೆ ಕೊನೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ 16 ಪ್ರಶಸ್ತಿಯ ಬರ ನೀಗಿಸಿದೆ. ಮಹಿಳಾ ಪ್ರೀಮಿಯರ್ ಲೀಗ್ನ ಮೊದಲ ಆವೃತ್ತಿಯಲ್ಲಿ ಹೀನಾಯವಾಗಿ ಸೋತಿದ್ದ ಆರ್ಸಿಬಿ 2ನೇ ಆವೃತ್ತಿಯಲ್ಲಿ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದ್ದು, ಹೆಣ್ಮಕ್ಕಳೇ ಸ್ಟ್ರಾಂಗು…
ನವದೆಹಲಿ: 2ನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಚೊಚ್ಚಲ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ನಾಯಕಿ ಸ್ಮೃತಿ ಮಂಧಾನ, ಲೆಜೆಂಡ್ ಎಂ.ಎಸ್ ಧೋನಿ ಅವರ ಟ್ರೆಂಡ್ ಅನ್ನೇ ಮುಂದುವರಿಸಿದ್ದಾರೆ. ಹೌದು. ಡಬ್ಲ್ಯೂಪಿಎಲ್ ಫೈನಲ್ ಪಂದ್ಯದಲ್ಲಿ ಅಮೋಘ ಜಯ ಸಾಧಿಸಿದ ನಂತರ ವೇದಿಕೆ ಮೇಲೆ ಟ್ರೋಫಿ ಸ್ವೀಕರಿಸಿದ ಸ್ಮೃತಿ ಮಂಧಾನ, ಶ್ರೇಯಾಂಕಾ ಪಾಟೀಲ್ ಅವರಿಗೆ ಟ್ರೋಫಿ ನೀಡಿ ಬಳಿಕ ಹಿಂದೆ ನಿಂತು ಫೋಟೋಗೆ ಫೋಸ್ ನೀಡಿದರು. ಇದು ಪ್ರೇಕ್ಷಕರ ಗಮನ ಸೆಳೆಯಿತು. ಸಿಎಸ್ಕೆ ತಂಡ 5 ಬಾರಿ ಐಪಿಎಲ್ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದಾಗಲೂ ಧೋನಿ ಟ್ರೋಫಿ ಪಡೆಯುತ್ತಿದ್ದಂತೆ ಅದನ್ನು ಸಹ ಆಟಗಾರರಿಗೆ ನೀಡಿ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. 2023ರಲ್ಲಿ ಟ್ರೋಫಿ ಗೆದ್ದಾಗಲೂ ಧೋನಿ ಟ್ರೋಫಿಯನ್ನ ಸಹ ಆಟಗಾರರಿಗೆ ನೀಡಿ ತಾನು ಹಿಂದೆ ನಿಂತು ಸಂಭ್ರಮಿಸಿದ್ದರು. ಈಗ ಸ್ಮೃತಿ ಮಂಧಾನ ಅವರೂ ಧೋನಿಯ ಟ್ರೆಂಡ್ ಅನ್ನೇ ಮುಂದುವರಿಸಿದ್ದಾರೆ. ಇದರಿಂದ ಸ್ಮೃತಿ ನಾಯಕತ್ವಕ್ಕೆ ಅಭಿಮಾನಿಗಳು ಭೇಷ್ ಎಂದಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ…
ಶಿವಮೊಗ್ಗ: ಕಲ್ಯಾಣ ಕರ್ನಾಟಕ ಕಲಬುರಗಿಗೆ ಶುಕ್ರವಾರ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಸೋಮವಾರ ಮಲೆನಾಡಿನ ಜಿಲ್ಲೆ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಮೋದಿ ಭೇಟಿ ಬೆನ್ನಲ್ಲೇ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಬಂಡಾಯ ಎದ್ದಿರುವುದು ಬಿಜೆಪಿಗೆ ತಲೆ ನೋವಾಗಿದೆ. ಹೌದು. ನರೇಂದ್ರ ಮೋದಿ ಅವರು ಇಂದು ವಿಶೇಷ ವಿಮಾನದ ಮೂಲಕ ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 1.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿ ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ (Shivamogga) ಅಲ್ಲಮ ಪ್ರಭು ಫ್ರೀಡಂ ಪಾರ್ಕ್ ಮೈದಾನಕ್ಕೆ ಆಗಮಿಸಲಿದ್ದಾರೆ. ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಿರುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. https://ainlivenews.com/good-news-for-job-seekers-application-invitation-for-247-pdo-posts/ ಸಮಾವೇಶದಲ್ಲಿ ಓಪನ್ ಜೀಪ್ನಲ್ಲಿ ವೇದಿಕೆಯತ್ತ ಬರಲು ವ್ಯವಸ್ಥೆ ಮಾಡಲಾಗಿದೆ. ಓಪನ್ ಸ್ಪೇಸ್ ಎಡ-ಬಲದಲ್ಲಿ ಕುಳಿತ ಕಾರ್ಯಕರ್ತರಿಗೆ ಮೋದಿ ಅವರು ಕೈಬೀಸಲು ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆ ಮೋದಿ ಕಾರ್ಯಕ್ರಮಕ್ಕೆ ಶಿವಮೊಗ್ಗದ ಜೆಡಿಎಸ್ದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರಿಗೆ ಆಹ್ವಾನ ಸಹ…
16 ಆವೃತ್ತಿ ಕಳೆದರೂ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಒಮ್ಮೆಯೂ ಟ್ರೋಫಿ ಎತ್ತಿಹಿಡಿಯದ ಆರ್ಸಿಬಿ ಪುರುಷರ ತಂಡಕ್ಕೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ (RCB Womens) ಮಾದರಿಯಾಗಿದೆ. ಮಹಿಳಾ ಪ್ರೀಮಿಯರ್ ಲೀಗ್ನ (WPL 2024) 2ನೇ ಆವೃತ್ತಿಯಲ್ಲೇ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದ್ದು, ಹೆಣ್ಮಕ್ಕಳೇ ಸ್ಟ್ರಾಂಗು ಗುರು ಎಂಬ ಮಾತನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಕಳೆದ 16 ಆವೃತ್ತಿಗಳಿಂದ ಪುರುಷರ ತಂಡವನ್ನು ಪ್ರೋತ್ಸಾಹಿಸುತ್ತಾ ಬರುತ್ತಿದ್ದ ಅಭಿಮಾನಿಗಳಂತೂ ಮಹಿಳಾ ತಂಡದ ಗೆಲುವನ್ನು ಹೆಮ್ಮೆಯಿಂದ ಕೊಂಡಾಡಿದರು. ಕೊನೆಯ ರನ್ ಸಿಡಿಸುತ್ತಿದ್ದಂತೆ ಅಭಿಮಾನಿಗಳು ಮಹಿಳಾಮಣಿಗಳು ಮೈದಾನದಲ್ಲೇ ಕುಣಿದು ಕುಪ್ಪಳಿಸಿದರು. ಆರ್ಸಿಬಿ ಪರ ಹರ್ಷೋದ್ಘಾರ ಕೂಗುತ್ತಾ ಗೆಲುವಿನ ಕೇಕೆ ಹಾಕಿದರು. ಆದ್ರೆ ಚೊಚ್ಚಲ ಆವೃತ್ತಿಯ ಫೈನಲ್ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಸತತ 2ನೇ ಬಾರಿಯೂ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. https://ainlivenews.com/wpl-2024-mumbai-skipper-explains-the-reason-for-defeat-against-rcb/ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್…