ಹುಬ್ಬಳ್ಳಿ ಜ.8: ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಕಾಲಮಿತಿಯೊಳಗೆ ಜಾರಿಗೆ ತಂದಿದ್ದೇವೆ. ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಬಹಳ ಅನುಕೂಲವಾಗಿದೆ. ರೂ. 58 ಸಾವಿರ ಕೋಟಿ ಹಣವನ್ನು ಈ ಎಲ್ಲಾ ಯೋಜನೆಗಳಿಗೆ ವ್ಯಯಿಸಲಾಗುತ್ತಿದೆ. ನುಡಿದಂತೆ ನಡೆಯುತ್ತಿರುವ ಸರ್ಕಾರ ನಮ್ಮದು ಎಂದು ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಹೇಳಿದರು. ಇಂದು ನೇಕಾರ ನಗರದ ಹನ್ಫಿ ಟೌನ್ ನಲ್ಲಿ 2021-22ನೇ ಸಾಲಿನ 15ನೇ ಹಣಕಾಸಿನ ಯೋಜನೆಯಡಿ ರೂ.4.15 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ವೆಟ್ ವೆಲ್ ಹಾಗೂ ಒಳಚರಂಡಿ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಅನ್ನಭಾಗ್ಯ, ಗೃಹ ಲಕ್ಷಿö್ಮÃ, ಗೃಹ ಜ್ಯೋತಿ, ಶಕ್ತಿ ಹಾಗೂ ಯುವ ನಿಧಿ ಯೋಜನೆಗಳು ಜನರಿಗೆ ತಲುಪಿವೆ. ಈ ಎಲ್ಲಾ ಯೋಜನೆಗಳಿಂದ ರಾಜ್ಯದ ಜನರಿಗೆ ಅನುಕೂಲಕರವಾದ ವಾತಾವರಣವನ್ನು ನಿರ್ಮಾಣ ಮಾಡಿಕೊಟ್ಟಿವೆ. ಬರಗಾಲವಿದ್ದರೂ ಸಹ ರಾಜ್ಯ ಸುಭದ್ರವಾಗಿದೆ ಎಂದರು. ಶಾಸಕರಾದ ಪ್ರಸಾದ್ ಅಬ್ಬಯ್ಯ ಮಾತನಾಡಿ, ನನ್ನ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಕಂಕಣ ಬದ್ಧನಾಗಿದ್ದೇನೆ. ಕಳೆದ 10 ವರ್ಷಗಳಿಗೂ ಅಧಿಕ ಈ…
Author: AIN Author
ವಿಜಯನಗರ: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದರು. ಈ ಪೈಕಿ ವೃದ್ಧೆಯೊಬ್ಬರು ಮೃತಪಟ್ಟಿರುವುದು ಕಂಡುಬಂದಿದೆ. ಕಾರಿಗನೂರಿನ RBSSN ಕ್ಯಾಂಪ್ ನಿವಾಸಿ ಸೀತಮ್ಮ (66) ಮೃತ ವೃದ್ಧೆ. ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದರಿಂದ ಗ್ರಾಮದ 30ಕ್ಕೂ ಹೆಚ್ಚು ಮಂದಿಯನ್ನು ಶನಿವಾರ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಸೀತಮ್ಮ ಅವರನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ನಂತರ ಅವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಭಾನುವಾರ ಸಂಜೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಹುಬ್ಬಳ್ಳಿ: ಬಿಜೆಪಿಯವರು ಚುನಾವಣೆಗಾಗಿ ರಾಮನನ್ನು ಬಳಸಿಕೊಳ್ಳುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ನಾವು ಶ್ರದ್ಧೆ, ಭಕ್ತಿಯಿಂದ ರಾಮನನ್ನ ಪೂಜೆ ಮಾಡ್ತೇವಿಕಾಂಗ್ರೆಸ್ನವರು ನಿಜವಾದ ಹಿಂದುಗಳು. ನಾವು ಯಾವತ್ತೂ ಕೂಡ ರಾಜಕಾರಣಕ್ಕೆ ಹಿಂದುತ್ವ ಮತ್ತು ಶ್ರೀರಾಮನನ್ನ ತೆಗೆದುಕೊಂಡು ಬಂದಿಲ್ಲದೇಶದಲ್ಲಿ ಲಕ್ಷಾಂತರ ರಾಮನ ದೇವಸ್ಥಾನಗಳಿವೆ.ಬಿಜೆಪಿಯವರು ವೋಟ್ಗೋಷ್ಟರ್ ಶ್ರೀರಾಮನನ್ನ ನೆನಪು ಮಾಡಿಕೊಳ್ಳುತ್ತಿದ್ದಾರೆ.ಕಾಂಗ್ರೆಸ್ನವರು ಯಾವತ್ತಿಗೂ ದೇವರನ್ನ ಹಿಂದುತ್ವವನ್ನ ರಾಜಕಾರಣದಲ್ಲಿ ತರೋಲ್ಲ ಎಂದ ಅವರು, ಇವರಿಗೆ ಏನೂ ಬಂಡವಾಳ ಇಲ್ಲ, ಈಗಾಗಿ ಧರ್ಮವನ್ನ ತರುತ್ತಾರೆ, ರಾಮನನ್ನು ತರ್ತಾರೆ. ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವಪ್ರಹ್ಲಾದ ಜೋಶಿ ಗಿಮ್ಮಿಕ್ಕ ಮಾಡ್ತಾ ಇದ್ದಾರೆ,ಅವರು ಅಂಕಿ ಅಂಶ ಇಟ್ಟುಕೊಂಡು ಮಾತನಾಡಬೇಕುಬಿಜೆಪಿಯವರು ರಾಜಕಾರಣಕ್ಕೆ ಏನ್ ಏನೋ ಮಾತನಾಡುತ್ತಾರೆ, ಅದಕ್ಕೆ ತಲೆ ಕೆಡಿಸಿಕೊಳ್ಳುವುದು ಅವಶ್ಯಕತೆ ಇಲ್ಲ.ಬಿಜೆಪಿಯವರು ಪುಕ್ಸಟ್ಟೆಯಾಗಿ ಅಧಿಕಾರಕ್ಕೆ ಬಂದವರು, ಪುಕ್ಸಟ್ಟೆಯಾಗಿ ಏನೂ ಕೊಡಲಿಲ್ಲ. ಬಿಜೆಪಿಯವರು ಕೆಲಸ ಮಾಡಲ್ಲ, ಕೆಲಸ ಮಾಡುವವರಿಗೂ ಬಿಡಲ್ಲ ಎಂದ ಅವರು ಆಗೋದಕ್ಕೆ ಹರಕತ್ತು, ಆಗದಿದ್ದಕ್ಕೆ ಕುಮ್ಮಕ್ಕು ಎನ್ನುವುದು ಬಿಜೆಪಿಯವರ ಕಥೆ…
ಹುಬ್ಬಳ್ಳಿ: ರಾಜ್ಯ ಸರ್ಕಾರ ಐಸಿಸ್ ಹಾಗೆ ಆಡಳಿತ ಮಾಡ್ತಿದೆ ಅನ್ನೋ ಆರೋಪಕ್ಕೆ ಆಕ್ರೋಶ ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಕೊವಿಡ್ ಕಾಲದಲ್ಲಿ ಹಿಂದೂಗಳ ಶವ ಸಂಸ್ಕಾರ ಮಾಡಿದ್ದು ಮುಸ್ಲೀಮರು ಆಗ ಹಿಂದೂವಾದಿಗಳು ಎಲ್ಲಿದ್ದರು? ಅರ್ಧಕ್ಕೂ ಹೆಚ್ಚು ಶವ ಸಂಸ್ಕಾರ ಮಾಡಿದ್ದು ಮುಸ್ಲೀಮರು, ಬೇಕಿದ್ದರೆ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯರಂತ ಶ್ರೇಷ್ಠ ಸಿಎಮ್ ಬಗ್ಗೆ ಅವಹೇಳನ ಮಾಡ್ತಾರೆ, ಅದಕ್ಕೇ ಕೇಸ್ ಮಾಡಿದ್ದೀವಿಐಸಿಸ್ ಸ್ಟೇಟ್ ಅಂತಾರೆ, ಇವರಿಗೆ ನಾಚಿಕೆ ಆಗಬೇಕುಹಿಂದೂ ಮುಸ್ಲೀಂ ಜಗಳ ಹಚ್ಚೋದು ಬಿಜೆಪಿ ಕೆಲಸ ಆಗಿ ಲೋಕಸಭೆ ಚುನಾವಣೆ ಬಂದಿದೆ ಹಿಂದೂ ಮುಸ್ಲೀಂ ಅಂತಾ ಇಶ್ಯೂ ಮಾಡ್ತಾರೆಪಾಕಿಸ್ತಾನಕ್ಕೆ ಬಿರ್ಯಾನಿ ತಿನ್ನಲು ಹೋದವರು ಮೋದಿ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಮನೆಗೆ ಬಿರ್ಯಾನಿ ತಿನ್ನಲು ಮೋದಿ ಹೋಗಿದ್ರು, ಅದಕ್ಕೇನು ಹೇಳ್ತಾರೆ ಎಂದ ಅವರು ಶ್ರೀಕಾಂತ ಪೂಜಾರಿ ಮಹಾನ್ ವ್ಯಕ್ತೀನಾ? ಆತನ ಪರ…
ರೈತನೇ ರಾಷ್ಟ್ರದ ಬೆನ್ನೆಲುಬು ಎಂದು ಕರೆಯುತ್ತಾರೆ ಉತ್ತರ ಕರ್ನಾಟಕದ ಒಬ್ಬ ರೈತ ಭಾರತ ದೇಶದ ರೈತರಿಗೆ ಮಾದರಿಯಾಗಿದ್ದಾನೆ. ಕೃಷಿಯಲ್ಲಿ ಅದೇನು ಲಾಭವಿಲ್ಲ ಎಂದು ಮೂಗು ಮುರಿಯುವ ರೈತರಗಿ ಸ್ಥಳೀಯ ಸೂಳಂಕಿ ಪರಿವಾರದ ನಿವೃತ್ತ ಸೈನಿಕ ನಾರಾಯಣ ಹಾಗೂ ಸಹೋದರು ಇಸ್ರೇಲ್ ಮಾದರಿಯಲ್ಲಿ ಭಾರಿ ತೂಕದ ಕಬ್ಬು ಬೆಳೆದು ಇತರರಿಗೆ ಮಾದರಿಯಾಗಿದ್ದಾರೆ. ಬಿಜಾಪುರ ಜಿಲ್ಲೆಯ ಗೋಳಸಂಗಿ ಗ್ರಾಮದ ನಾರಾಯಣ ಮತ್ತು ಸಹೋದರರು ಸೇರಿ 4 ಎಕರೆ 10 ಗುಂಟೆ ಗದ್ದೆಯಲ್ಲಿ ಸುಮಾರು 500 ಟನ್ ಕಬ್ಬು ಬೆಳೆಯುವ ಮೂಲಕ ಇತರ ರೈತರಿಗೆ ಉಬ್ಬಿರುವಂತೆ ಮಾಡಿದ್ದಾರೆ. ಸಾಮಾನ್ಯವಾಗಿ ಒಂದು ಕಬ್ಬು ಎರಡು ಕೆಜಿ ತೂಕ ಇರುವುದು ಸಹಜ ಆದರೆ ಇವರು ಇಸ್ರೇಲ್ ಕೃಷಿ ಪದ್ಧತಿ ಬಳಸಿ 3 ರಿಂದ 4 ಕೆಜಿ ತೂಕದ 28 ರಿಂದ 32 ಗಣಿಕೆ ಇರುವ 20 ಮತ್ತು 25 ಅಡಿ ಎತ್ತರದ ಕಬ್ಬು ಬೆಳೆದು ರೈತರಲ್ಲಿ ಆಶ್ಚರ್ಯ ಮೂಡಿಸಿದ್ದಾರೆ. ಉತ್ತರ ಪ್ರದೇಶ ಮಹಾರಾಷ್ಟ್ರ ಕರ್ನಾಟಕದ ರಾಜ್ಯಗಳಿಂದ ಹಿಗೆ ಹಲವಾರು…
ಹುಬ್ಬಳ್ಳಿ: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಮೂವರು ಅಭಿಮಾನಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮೃತ ಕುಟುಂಬಕ್ಕೆ ಸಾಂತ್ವನ ಹೇಳು ಆಗಮಿಸಿರುವ ರಾಕಿಂಗ್ ಸ್ಟಾರ್ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಲಕ್ಷ್ಮೇಶ್ವರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಹೌದು.. ಬ್ಯಾನರ್ ಕಟ್ಟಲು ಹೋಗಿ ಸಾವನ್ನಪ್ಪಿದ ಅಭಿಮಾನಿಗಳ ಕುಟುಂಬಕ್ಕೆ ಸಾಂತ್ವನ ಹೇಳಲು ಹೊರಟಿದ್ದು, ಹುಬ್ಬಳ್ಳಿಗೆ ಎಂಟ್ರಿ ಕೊಟ್ಟು ಅಲ್ಲಿಂದ ಲಕ್ಷ್ಮೇಶ್ವರದ ಸೂರಣಗಿ ಗ್ರಾಮಕ್ಕೆ ಪ್ರಯಾಣ ಬೆಳೆಸಿದರು. ಇನ್ನೂ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯಶ್ ಗೆ ಅಭಿಮಾನಿಗಳು ಸ್ವಾಗತಿಸಿದ್ದು, ರಸ್ತೆ ಮಾರ್ಗವಾಗಿ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ತೆರಳಿದರು.
ಬೆಂಗಳೂರು: ಉಡುಪಿಯ ಅಷ್ಟ ಮಠಗಳ ಪರ್ಯಾಯ ಮಹೋತ್ಸವಕ್ಕೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ. ಈ ಬಾರಿಯ ಪರ್ಯಾಯ ಪೀಠವನ್ನು ಪುತ್ತಿಗೆ ಶ್ರೀಗಳು ನಿರ್ವಹಿಸಲಿದ್ದಾರೆ. ಅವರು ಸಮುದ್ರೋಲ್ಲಂಘನೆ ಮಾಡಿ ವಿದೇಶಕ್ಕೆ ಪ್ರಯಾಣಿಸಿ ಸಂಪ್ರದಾಯ ಉಲ್ಲಂಘಿಸಿದ ಕಾರಣ ಅವರಿಗೆ ಪರ್ಯಾಯ ನೀಡದಂತೆ ಕೋರಿ ಗುರುರಾಜ ಜೀವನರಾವ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ರಿದ್ದ ಪೀಠ, ವಿದೇಶದಲ್ಲಿ ಜ್ಞಾನ ಪ್ರಸಾರ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದೆ. ರಾಷ್ಟ್ರಕವಿ ಕುವೆಂಪು ಅವರ ಕವಿತೆ ‘ಓ ನನ್ನ ಚೇತನ, ಆಗು ನೀ ಅನಿಕೇತನ’ ಕವಿತೆ ಉಲ್ಲೇಖಿಸಿದ ನ್ಯಾಯಪೀಠ, ಮನೆ ಕಟ್ಟಿ ಕೂರುವುದಕ್ಕಿಂತ ಹೊರಗೆ ಓಡಾಡುವುದು ಲೇಸು. ಧಾರ್ಮಿಕ ಆಚರಣೆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿ, ಅರ್ಜಿಯನ್ನು ವಜಾಗೊಳಿಸಿದೆ. 2008ರಲ್ಲಿ ಕೂಡ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.…
ವಿಜಯಪುರ: ತನಗೆ ತಾನೇ ಪೂಜಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಇಂಡಿ ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯನ್ನು ಅಡಿವೆಪ್ಪ ಘಾಯಿ (43) ಎಂದು ಗುರುತಿಸಲಾಗಿದೆ. ಮಾನಸಿಕವಾಗಿ ಮನನೊಂದು ವ್ಯಕ್ತಿ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ಈ ವ್ಯಕ್ತಿ ಕಂಬಳಿಯಲ್ಲಿ ಕುಳಿತು ಪೂಜೆ ಮಾಡಿ, ಕುತ್ತಿಗೆಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಮಾಲೆ ಹಾಕಿಕೊಂಡು ಸೂಸೈಡ್ ಮಾಡಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಹಿರಿಯರ ಆಸ್ತಿಯಲ್ಲಿ 39 ಎಕರೆ ಜಮೀನು ಮಾರಿ ಮದ್ಯಸೇವನೆ ಮಾಡಿ ಹಾಳು ಮಾಡಿದ್ದೇನೆ ಎಂದು ಮಾನಸಿಕವಾಗಿ ಮನನೊಂದಿದ್ದನು ಎನ್ನಲಾಗಿದೆ. ಈ ಸಂಬಂಧ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ದೇಣಿಗೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು ಎಂದರು. https://ainlivenews.com/aadhaar-link-is-mandatory-to-get-rs-2000-for-farmers-cm-siddaramaiah/ ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ. ವಿಶೇಷ ಪೂಜೆ ಸಲ್ಲಿಸುತ್ತೇವೆ. ನಾವು ಹಿಂದುಗಳಲ್ವ? ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಅದರಲ್ಲೇನು ತಪ್ಪಿದೆ ಎಂದಿದ್ದಾರೆ.
ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದ್ದು,ಮೂರನೇ ಬಾರಿಯೂ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ಯೋಜನಾ ಸಭೆಯಲ್ಲಿ ಮಾತನಾಡಿದ ಅವರು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಇಡೀ ವಾತಾವರಣ ಬಿಜೆಪಿ ಪರವಾಗಿದೆ. ಪಂಚ ರಾಜ್ಯಗಳ ಚುನಾವಣೆಗಳ ಫಲಿತಾಂಶ ನೋಡಿದರೆ ನಮ್ಮ ಪಕ್ಷಕ್ಕೆ ಅನುಕೂಲಕರವಾಗಿದೆ. ದೇಶದಲ್ಲಿ ಕಾಂಗ್ರೆಸ್ ಮತ್ತೆ ಮೇಲೇಳುತ್ತದೆ ಎಂಬ ಚರ್ಚೆ ಇತ್ತು. ಆದರೆ, ಈ ಫಲಿತಾಂಶವು ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳಿಗೆ ಮರ್ಮಾಘಾತವನ್ನುಂಟು ಮಾಡಿದೆ. https://ainlivenews.com/kai-kamala-nayaks-dharma-dangal-in-ram-mandir-issue/ ಯಾರೂ ಕೂಡ ಊಹಿಸದ ರೀತಿಯಲ್ಲಿ ಬಿಜೆಪಿಗೆ ಗೆಲುವು ಸಿಕ್ಕಿದೆ. ಈ ಮೂಲಕ ರಾಜ್ಯ ಹಾಗೂ ದೇಶದ ಜನತೆಗೆ ಸ್ಪಷ್ಟ ಸಂದೇಶ ಸಿಕ್ಕಿದೆ. ದೇಶದ ಜನತೆ ಕಾಂಗ್ರೆಸ್ ಗಿಮಿಕ್ ಗ್ಯಾರಂಟಿಯನ್ನು ನಂಬಲ್ಲ ಎಂಬ ಸಂದೇಶವನ್ನು ಈ ಮೂಲಕ ರವಾನೆ ಮಾಡಿದ್ದಾರೆ. ದೇಶ ಅಭಿವೃದ್ಧಿ ಮಾಡುವ ಪ್ರಧಾನಿ ನರೇಂದ್ರ ಮೋದಿ ಗ್ಯಾರಂಟಿಯೇ ಪಕ್ಕಾ ಎಂಬುದು ಈ ಮೂಲಕ ಸಾಬೀತಾಗಿದೆ ಎಂದು ಹೇಳಿದರು.