Author: AIN Author

ಬೆಂಗಳೂರು:   ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಯುವಕರು ಮೃತಪಟ್ಟ ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. https://twitter.com/CMofKarnataka/status/1744295378697252982?t=2I2WfgfwH9Ftz599XVk5Zw&s=19 ಹುಟ್ಟು ಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯಶ್ ಅಭಿಮಾನಿಗಳ (Yash Fans) ಕುಟುಂಬಕ್ಕೆ ರಾಜ್ಯ ಸರ್ಕಾರ (Government Of Karnataka) ಪರಿಹಾರ ಘೋಷಣೆ ಮಾಡಿದೆ. ಬದುಕಿ ಬಾಳಬೇಕಿದ್ದ ಹುಡುಗರು ಹೀಗೆ ಅಚಾತುರ್ಯದಿಂದ ಸಾವಿಗೀಡಾಗಿದ್ದಾರೆ, ಅವರನ್ನು ನಂಬಿದ್ದ ಕುಟುಂಬವೀಗ ಸಂಕಷ್ಟಕ್ಕೆ ಸಿಲುಕಿದ್ದು ಆ ಕುಟುಂಬಗಳಿಗೆ ನೆರವಾಗುವ ದೃಷ್ಟಿಯಿಂದ ಮೃತ ದುರ್ದೈವಿಗಳಿಗೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶಿಸಿದ್ದೇನೆ.

Read More

ಕೋಲಾರ: ಮಾಲೂರಿನ ಕಾಂಗ್ರೆಸ್​ ಶಾಸಕ ಕೆವೈ ನಂಜೇಗೌಡರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನಂಜೇಗೌಡರು ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಯಲ್ಲಿರುವ ಮನೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಕೋಲಾರ ತಾಲೂಕಿನ ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್, ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್​ ಕಚೇರಿ ಮೇಲೆಯೂ ದಾಳಿ ನಡೆದಿದ್ದು, https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ. ಕೋಚಿಮುಲ್ ಹಾಲು ಒಕ್ಕೂಟದ ಎಂ.ಡಿ ಗೋಪಾಲಮೂರ್ತಿ, ಆಡಳಿತ ವಿಭಾಗದ ವ್ಯವಸ್ತಾಪಕ ನಾಗೇಶ್ ಸೇರಿ ವಿವಿಧ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ. ಶಾಸಕ ನಂಜೇಗೌಡ ಆಪ್ತ ಸಹಾಯಕ ಹರೀಶ್ ಅವರ ದೊಡ್ಡಮಲ್ಲೆ ಗ್ರಾಮದಲ್ಲಿರುವ ನಿವಾಸದ ಮನೆ ಮೇಲೂ ಇಡಿ ದಾಳಿ ನಡೆದಿದೆ. ಒಟ್ಟು 15ಕ್ಕೂ ಅಧಿಕ ಕಡೆ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಕೋಚಿಮುಲ್ ನೇಮಕಾತಿ ವಿಚಾರದಲ್ಲಿ ಸಾಕಷ್ಟು ಅವ್ಯವಹಾರದ ಸದ್ದು ಮಾಡಿತ್ತು. ನೇಮಕಾತಿ ವೇಳೆ ಲಕ್ಷಾಂತರ ರೂಪಾಯಿ…

Read More

ಗರ್ಭಾವಸ್ಥೆಯಲ್ಲಿ ಎದೆಯುರಿ ಒಂದು ಸಾಮಾನ್ಯ ಸಮಸ್ಯೆ. ಹೆಚ್ಚಾಗಿ ನೀರು ಕುಡಿದ ನಂತರ ಇದು ಸಂಭವಿಸುತ್ತೆ. ಇದಲ್ಲದೆ, ಹಾರ್ಮೋನುಗಳ ಬದಲಾವಣೆಗಳಿಂದಾಗಿ, ಎದೆಯಲ್ಲಿ ಉರಿ ಸಮಸ್ಯೆ ಕಂಡು ಬರಬಹುದು. ತಜ್ಞರ ಪ್ರಕಾರ, ಒಂದು ವೇಳೆ ನೀವು ಗರ್ಭವತಿಯಾಗಿದ್ದು ಧೂಮಪಾನಿಯೂ ಆಗಿದ್ದರೆ ಕೆಲವು ಸುರಕ್ಷತಾ ವಿಧಾನಗಳನ್ನು ನೀವು ಅನಿವಾರ್ಯವಾಗಿ ಅನುಸರಿಸಲೇಬೇಕಾಗುತ್ತದೆ. ಏಕೆಂದರೆ ಈ ಸಮಯದಲ್ಲಿ ನಿಮ್ಮ ಧೂಮಪಾನ ನಿಮ್ಮ ಗರ್ಭದಲ್ಲಿರುವ ಕಂದನ ಆರೋಗ್ಯಕ್ಕೆ ಅತಿ ಹೆಚ್ಚು ಹಾನಿಯುಂಟುಮಾಡಬಹುದು. ಗರ್ಭವತಿ ಸೇವಿಸುವ ಅಹಾರ, ಪಾನೀಯಗಳು, ಔಷಧಿಗಳು ಮೊದಲಾದವು ಗರ್ಭದಲ್ಲಿರುವ ಕಂದನ ಆರೋಗ್ಯದ ಮೇಲೆ ಧನಾತ್ಮಕ ಅಥವಾ ಋಣಾತ್ಮಕ ಪರಿಣಾಮಗಳನ್ನುಂಟು ಮಾಡಬಹುದು. ಉದಾಹರಣೆಗೆ ಒಂದು ವೇಳೆ ಗರ್ಭವತಿ ವೈದ್ಯರು ಸೂಚಿಸಿದ ಆಹಾರವನ್ನು ಸಂತುಲಿತ ಪ್ರಮಾಣದಲ್ಲಿ ಸೇವಿಸಿದಾಗ ಮತ್ತು ವೈದ್ಯರು ಬೇಡವೆಂದ ಯಾವುದೇ ಆಹಾರ, ಔಷಧ ಅಥವಾ ವ್ಯಸನಗಳನ್ನು ಸ್ವೀಕರಿಸದೇ ಇದ್ದಾಗ ಕಂದನ ಆರೋಗ್ಯವೂ ಉತ್ತಮವಾಗಿರುತ್ತದೆ. https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ಆದರೆ ಗರ್ಭವತಿ ತನ್ನ ಆಲಸಿ ಮತ್ತು ಅನಾರೋಗ್ಯಕರ ಜೀವನಕ್ರಮವನ್ನು ಗರ್ಭವತಿಯಾದ ಬಳಿಕವೂ ಬದಲಿಸಿಕೊಳ್ಳದೇ ಧೂಮಪಾನದಂತಹ ಕೆಟ್ಟ ಚಟಗಳನ್ನು ಮುಂದುವರೆಸಿದರೆ ಮಾತ್ರ ಮಗುವಿನ ಆರೋಗ್ಯ…

Read More

ಬೆಂಗಳೂರು: ಕೃಷ್ಣರಾಜ ಸಾಗರ (KRS) ಸುತ್ತಮುತ್ತ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಹೈಕೋರ್ಟ್‌ (High Court) ಮಹತ್ವದ ಆದೇಶ ಪ್ರಕಟಿಸಿದೆ. ಭೂಪರಿವರ್ತನೆಗೂ ಮುನ್ನ ಪರೀಕ್ಷಾರ್ಥ ಸ್ಫೋಟ ನಡೆಸಿ ಹಾನಿ ಸಾಧ್ಯತೆ ಪರಿಗಣಿಸಿ ಅನುಮತಿಯ ಷರತ್ತು ಹಾಕಿದ್ದ ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಈ ಆದೇಶ ಪ್ರಕಟಿಸಿದೆ. https://ainlivenews.com/is-there-a-man-who-stands-for-strength-and-truth-to-whom-did-hdk-say-this/ ಕೆಆರ್‌ಎಸ್ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ (Mining) ನಡೆಸಬಾರದು. ಕೆಆರ್‌ಎಸ್ ಜಲಾಶಯಕ್ಕೆ ಹಾನಿ ಮಾಡುವುದನ್ನು ತಡೆಗಟ್ಟಬೇಕಿದೆ. ಕೆಆರ್‌ಎಸ್ ಸುರಕ್ಷತೆ ನಮಗೆ ಮುಖ್ಯ ಎಂದು ಹೈಕೋರ್ಟ್‌ ಮುಖ್ಯ ನಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರ ವಿಭಾಗಿಯ ಪೀಠ ಹೇಳಿದೆ. ಕೆಆರ್‌ಎಸ್ ಸುರಕ್ಷತೆಯೇ ನಮಗೆ ಮುಖ್ಯವಾಗಿದೆ. ಈ ಕಾರಣಕ್ಕೆ ಕೆಆರ್‌ಎಸ್ ಸುತ್ತಮುತ್ತಲಿನ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಬಾರದು ಎಂದು ವಿಭಾಗೀಯ ಪೀಠ  ಆದೇಶ ಪ್ರಕಟಿಸಿದೆ.

Read More

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಪ್ರಕರಣಕ್ಕೆ ಸಂಬಂಧಿಸಿ ತಾವು ನೀಡಿದ್ದ ಹೇಳಿಕೆಯ ಬಗ್ಗೆ, ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದ ಸಚಿವರಿಬ್ಬರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಪ್ರತ್ಯುತ್ತರ ನೀಡಿರುವ ಅವರು; ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ‘ನೀರೋ’ ಎಂದು ಜರೆದಿದ್ದಾರೆ. https://ainlivenews.com/ex-minister-ramesh-jarakiholi-accused-of-fraud/ ಅಲ್ಲದೆ, ದಾಖಲೆ ಇಟ್ಟುಕೊಂಡೇ ವಿಕ್ರಮ ಸಿಂಹ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಬೇಕಿದ್ದರೆ ದಾಖಲೆಗಳನ್ನು ನಾನೇ ತಂದುಕೊಡುತ್ತೇನೆ. ಆಮೇಲೆ ಕ್ರಮ ಜರುಗಿಸುವ ದಮ್ಮು, ತಾಕತ್ತು ಹಾಗೂ ಸತ್ಯದ ಪರ ನಿಲ್ಲುವ ಗಂಡಸ್ತನ ಇದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ. ಕರ್ನಾಟಕದ ‘ನೀರೋ’ಗೆ ರಾಜಕೀಯ ಊಳಿಗ ಮಾಡುತ್ತಿರುವ ಗೃಹಮಂತ್ರಿ ಪರಮೇಶ್ವರ್ ಮತ್ತು ಸಿದ್ದಹಸ್ತರು ಹೇಳಿದ್ದಕ್ಕೆಲ್ಲ ‘ಪರಿಪೂರ್ಣ ಸಹಕಾರ’ ಕೊಡುವ ಹಾಸನ ಜಿಲ್ಲಾ ಉಸ್ತುವಾರಿ ಕೆ ಎನ್ ರಾಜಣ್ಣ ಅವರು ಸಂಸದ ಪ್ರತಾಪ್ ಸಿಂಹ ಅವರ ಸಹೋದರನ…

Read More

ಹುಬ್ಬಳ್ಳಿ: ಯಶ್ ಬರ್ತ್ ಡೇ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟಲು ಹೋಗಿ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದ ಮೂವರು ಸಾವನ್ನಪ್ಪಿದ್ದು, ಅಂತಿಮ ಸಂಸ್ಕಾರಕ್ಕೆ ಹಾಗೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ರಾಕಿಂಗ್ ಸ್ಟಾರ್ ಯಶ್ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ.ಹೌದು.. ಅಭಿಮಾನಿಗಳ ಹಾಗೂ ವಾಹನ ಈಗಾಗಲೇ ಯಶ್ ಬರುವಿಕೆಗಾಗಿ ಕಾಯುತ್ತಿದ್ದು, ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿ ಲಕ್ಷ್ಮೇಶ್ವರ ಮಾರ್ಗವಾಗಿ ಸೂರಣಗಿ ಗ್ರಾಮಕ್ಕೆ ತೆರಳಲಿದ್ದಾರೆ.

Read More

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬ್ಯಾಂಕ್‍ಗಳಿಂದ ಸಾಲ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ನಗರದ ವಿವಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನಿಂದ ಬೆಳಗಾವಿಯ ಗೋಕಾಕ್‍ನ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಸಾಲ ಪಡೆಯಲಾಗಿದೆ. 2013 ರಿಂದ 2017 ರವರೆಗೆ 232 ಕೋಟಿ 88 ಲಕ್ಷ ರೂ. ಸಾಲ ಪಡೆದಿದ್ದಾರೆ. ಅಲ್ಲದೇ ಬೇರೆ ಬೇರೆ ಜಿಲ್ಲೆಗಳ ಅಪೆಕ್ಸ್ ಬ್ಯಾಂಕ್‍ನ ಸಮೂಹ ಬ್ಯಾಂಕ್‍ಗಳಲ್ಲೂ ಸಾಲ ಪಡೆದು, 439 ಕೋಟಿ 7 ಲಕ್ಷ ರೂ. ಸಾಲ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. https://ainlivenews.com/sexual-harassment-of-a-young-woman-in-our-metro/ ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ ಕಂಪನಿ ಅಧ್ಯಕ್ಷರು ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಆಗಿದ್ದ ರಮೇಶ್ ಜಾರಕಿಹೊಳಿಯವರು ಕಂಪನಿ ಸ್ಥಾಪನೆ, ವಿಸ್ತರಣೆ ಹಾಗೂ ನಿರ್ವಹಣೆಗಾಗಿ ಸಾಲ ಪಡೆದಿದ್ದರು. ಇದೀಗ ಬ್ಯಾಂಕ್‍ಗೆ ಯಾವುದೇ ಮಾಹಿತಿ ನೀಡದೆ ಆಡಳಿತ ಮಂಡಳಿ ಹುದ್ದೆಗಳಿಂದ ಹೊರಬಂದಿದ್ದಾರೆ. ಈ ಮೂಲಕ ಬ್ಯಾಂಕ್‍ಗೆ ನಂಬಿಕೆ ದ್ರೋಹ…

Read More

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಯುವತಿಗೆ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು (Bengaluru) ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಜನವರಿ 1 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವಕನೋರ್ವ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ಮೆಟ್ರೋದಿಂದ ಇಳಿಯುತ್ತಿದ್ದಂತೆ ಯುವತಿ (Bengaluru Woman), ಯುವಕನಿಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾಳೆ. https://ainlivenews.com/tragedy-while-making-the-birthday-cutout-actor-yash-is-going-to-visit-the-deceaseds-house/ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾಳೆ. ಬಳಿಕ ನೀನು ಇಲ್ಲಿಂದ ಹೋಗೋಹಾಗಿಲ್ಲ, ನಿನಗೆ ಶಿಕ್ಷೆ ಆಗಲೇಬೇಕು, ಮಾತನಾಡದಿದ್ರೆ ನಮಗೆ ನ್ಯಾಯ ಸಿಗಲ್ಲ ಎಂದು ಪಟ್ಟು ಹಿಡಿದು ಕ್ರಮಕ್ಕೆ ಒತ್ತಾಯಿಸಿದ್ದಾಳೆ. ಬಳಿಕ ವಿಚಾರಣೆ ನಡೆಸಿ ಮೆಟ್ರೊ ಅಧಿಕಾರಿಗಳು ಯುವಕನನ್ನ ಉಪ್ಪಾರ ಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಯುವಕ ತಪ್ಪೊಪ್ಪಿಕೊಂಡ ಬಳಿಕ ಇನ್ನೊಮ್ಮೆ ಹೀಗೆ ಮಾಡದಂತೆ ಕ್ಷಮೆ ಕೇಳಿಸಿ ಕಳುಹಿಸಿದ್ದಾರೆ. ಘಟನೆ ನಡೆದ ಒಂದು ವಾರದ ಬಳಿಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೃತ್ಯ ಎಸಗಿದ್ದ ಯುವಕ…

Read More

ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಇಂಡಸ್ಟ್ರೀಗೆ ಕಾಲಿಟ್ಟಿರುವ ಪ್ರಣಂ, ಈಗ ‘S/O ಮುತ್ತಣ್ಣ’ನಾಗಲು ಸಜ್ಜಾಗಿದ್ದಾರೆ. ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ. ದೇವರಾಜ್ ದಂಪತಿ ಆಗಮಿಸಿ ಮಗನ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ. ಅಂದಹಾಗೇ S/O ಮುತ್ತಣ್ಣನಿಗೆ ಶ್ರೀಕಾಂತ್ ಹುಣ್ಸೂರ್ ಸಾರಥಿ. ಆರ್.ಚಂದ್ರು ಹಾಗೂ ಪ್ರೇಮ್ಸ್ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶ್ರೀಕಾಂತ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಣಂ ದೇವರಾಜ್ ನಾಯಕನಾಗಿ ನಟಿಸುತ್ತಿರುವ S/O ಮುತ್ತಣ್ಣ ಸಿನಿಮಾದಲ್ಲಿ ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ತಾರಾಬಳಗದಲ್ಲಿದ್ದಾರೆ. ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲ್ಮಂಸ್ ಬ್ಯಾನರ್ ನಡಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. S/O…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ಶಿರಡಿಯ ಶ್ರೀ ಸಾಯಿಬಾಬಾ ಮಂದಿರಕ್ಕೆ (Shri Sai Baba Mandir) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. https://ainlivenews.com/expired-party-in-jet-log-notice-issued-to-8-people-including-actor-darshan/ ಮಹಾರಾಷ್ಟ್ರ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಸಚಿವರಾದ ಎಚ್.ಕೆ ಪಾಟೀಲ್, ಮಹಾರಾಷ್ಟ್ರ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಚನ್ನಿತಾಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರೊಂದಿಗೆ ತೆರಳಿದ್ದ ಸಿಎಂ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಭಾವದಿಂದ ಪ್ರಾರ್ಥಿಸಿದ್ದಾರೆ. ನಂತರ ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವುಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ‍್ಯ ಹೋರಾಟಗಾರ ಡಾ.ಅಣ್ಣಾಸಾಹೇಬ್ ಶಿಂಧೆ ಅವರ ಜನ್ಮ ಶತಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Read More